ಲೇಖಕ: admin

ನಾಪೋಕ್ಲು ಸೆ.24 NEWS DESK : ಮೈಸೂರು ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ 11ನೇ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಪೊನ್ನಚ್ಚನ ಅಪ್ಪಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಡಗು ಜಿಲ್ಲೆಯ ಬಹುತೇಕ ಗೌಡ ಜನಾಂಗದ ಕುಟುಂಬದವರು ಈ ಭಾಗದಲ್ಲಿ ನೆಲೆಸಿದ್ದಾರೆ. ಅವರು ಗೌಡ ಕ್ಷೇಮಾಭಿವೃದ್ಧಿ ಸಂಘ ಎರಡು ವರ್ಷಗಳಿಗೊಮ್ಮೆ ಆಡಳಿತ ಮಂಡಳಿಯ ಚುನಾವಣೆ ನಡೆಸಿ ನೂತನ ಮಂಡಳಿಯನ್ನು ರಚಿಸಲಾಗುತ್ತಿದೆ ಎಂದರು. ಸಂಘದಲ್ಲಿ ಕೊಡಗಿನ ಸಂಪ್ರದಾಯದ ಹಬ್ಬ ಆಚರಣೆ, ಕ್ರೀಡಾಕೂಟಗಳನ್ನು ಆಯೋಜಿಸಿಕೊಂಡು ಪರಸ್ಪರ ಸಹಬಾಳ್ವೆ ಹಾಗೂ ಸಮಾನತೆ, ಆರೋಗ್ಯಕರ ಚಟುವಟಿಕೆಯಿಂದ ಕೊಡಗು ಕ್ಷೇಮಾಭಿವೃದ್ಧಿ ಸಂಘ ಹೂಟಗಳ್ಳಿ ಕೊಡಗು ಮೈಸೂರು ಭಾಗದಲ್ಲಿ ಗುರುತಿಸಿಕೊಂಡಿದೆ ಎಂದು ಹೇಳಿದರು. ಮಹಾಸಭೆಯಲ್ಲಿ ನಡೆದ ನೂತನ ಆಡಳಿತ ಮಂಡಳಿಗೆ ಹಾಲಿ ಅಧ್ಯಕ್ಷರಾಗಿದ್ದ ಪೊನ್ನಚ್ಚನ ಅಪ್ಪಯ್ಯ ಹಾಗೂ ತಂಡದವರು ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪೊನ್ನಚ್ಚನ ಅಪ್ಪಯ್ಯ, ಉಪಾಧ್ಯಕ್ಷ ಚೆರುಕನ ಲವ, ಗೌರವ ಕಾರ್ಯದರ್ಶಿ ಮುಕ್ಕಾಟಿ ಅರುಣ ಕುಮಾರ್, ಸಹಕಾರ್ಯದರ್ಶಿ ಹೊಸೋಕ್ಲು ಅಪ್ಪಯ್ಯ, ಖಚಾಂಚಿ…

Read More

ವಿರಾಜಪೇಟೆ ಸೆ.24 NEWS DESK : ಕೆದಮುಳ್ಳುರು ಗ್ರಾಮದ ತೆರ್ಮೆಮೊಟ್ಟೆಯ ಶ್ರೀ ಆದಿಶಕ್ತಿ ಮತ್ತು ಧರ್ಮದೈವ ಹಾಗೂ ಪಾಷಾಣ ಮೂರ್ತಿ ಪರಿವಾರ ದೈವಗಳ ಧರ್ಮ ಚಾವಡಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ನವರಾತ್ರಿಯ ಮೊದಲ ದಿನ ನವದುರ್ಗೆಯರ ಬಿಂಬವನ್ನು ಕುಳ್ಳಿರಿಸಲಾಯಿತು. ಉತ್ಸವದ ಅಂಗವಾಗಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜೆ ಪುನಸ್ಕಾರಗಳು, ನವದುರ್ಗೆಯರ ಆರಾಧನೆ ನಡೆಯಲಿದ್ದು, ಅ.1ರಂದು ನವ ದುರ್ಗೆಯರ ಬಿಂಬವನ್ನು ವಿಸರ್ಜನೆ ಮಾಡಲಾಗುತ್ತದೆ. ಪೂಜಾ ಕೈಂಕರ್ಯದಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ಸೆ.24 : ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ವತಿಯಿಂದ ನಡೆಯುವ ಜಾತಿ ಜನಗಣತಿಯ ಸಂದರ್ಭ ಕೊಡಗು ಜಿಲ್ಲೆಯ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಗುಡ್ಡೆಹೊಸೂರು ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಗುಡ್ಡೆಹೊಸೂರು ಗೌಡ ಸಮಾಜದ ಅಧ್ಯಕ್ಷ ಗುಡ್ಡೆಮನೆ ವಿಶ್ವ ಅವರು ಬಹಳ ಹಿಂದಿನಿಂದಲೂ ಕೊಡಗಿನ ಅರೆಭಾಷೆ ಗೌಡರ ಕಂದಾಯ, ಶೈಕ್ಷಣಿಕ ಸೇರಿದಂತೆ ಎಲ್ಲಾ ದಾಖಲೆಗಳಲ್ಲಿ ಗೌಡ ಎಂದೇ ನಮೂದಿಸಿರುವುದರಿಂದ ಈಗ ಬದಲಾವಣೆ ಮಾಡಿದರೆ ತೊಂದರೆಯಾಗುವ ಸಾಧ್ಯತೆಗಳಿದೆ. ಆದ್ದರಿಂದ ಗಣತಿದಾರರು ಬಂದಾಗ ಅರೆಭಾಷೆ ಗೌಡ ಸಮುದಾಯ ಬಾಂಧವರು ಜಾತಿ ಕಾಲಂ ನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಭಾಷೆಯ ಕಾಲಂ ನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದರೆ, ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ…

Read More

ಕೂಡುಮಂಗಳೂರು ಸೆ.24 NEWS DESK :  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ-2025 ಕ್ಕೆ ಕೂಡಿಗೆ ಹಾಗೂ ಕೂಡುಮಂಗಳೂರು ಗ್ರಾಮ ಪಂಚಾಯತಿ ವತಿಯಿಂದ  ಚಾಲನೆ ನೀಡಲಾಯಿತು. ಗ್ರಾಮ ಪಂಚಾಯತಿಕಚೇರಿಯಲ್ಲಿ  ಸಮೀಕ್ಷಾ ಕಾರ್ಯದ ಪೂರ್ವ ಸಿದ್ದತಾ ಸಮಾಲೋಚನಾ ಸಭೆ ನಡೆಸುವ ಮೂಲಕ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಡೆಸುವ ಕುರಿತು ಸಮಾಲೋಚನೆ ನಡೆಸಲಾಯಿತು. ಕೂಡುಮಂಗಳೂರು ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಂಚಾಯತಿ  ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಲು ನಿಯೋಜನೆಗೊಂಡಿರುವ 30 ಕ್ಕೂ ಹೆಚ್ಚು ಶಿಕ್ಷಕರಿಗೆ ಸಮೀಕ್ಷೆ ನಡೆಸಲು ಬೇಕಾದ ಕೈಪಿಡಿ ಸೇರಿದಂತೆ ಪೂರಕ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಗಳನ್ನು ಕೂಡುಮಂಗಳೂರು ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಎಂ.ಆರ್.ಸಂತೋಷ್ ಗಣತಿದಾರ ಶಿಕ್ಷಕರಿಗೆ ವಿತರಿಸಿದರು. ಈ ಸಂದರ್ಭ ಮಾತನಾಡಿದ ಪಿಡಿಓ ಸಂತೋಷ್, ಮಹತ್ವಾಕಾಂಕ್ಷೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಶಿಕ್ಷಕರಿಗೆ ಮನವಿ ಮಾಡಿದರು. ಸಮೀಕ್ಷೆ ಸಂದರ್ಭದಲ್ಲಿ ಯಾವುದೇ ಮಾಹಿತಿ ಬೇಕಾದಲ್ಲಿ ಮತ್ತು ಏನಾದರೂ ಸಮಸ್ಯೆಗಳು ಎದುರಾದಲ್ಲಿ ಗ್ರಾಮ ಪಂಚಾಯತಿ ಗಮನಕ್ಕೆ…

Read More

ಕುಶಾಲನಗರ ಸೆ.24 NEWS DESK : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್‌.ಟಿ.) ಸುಧಾರಣಾ ನೀತಿಯು ಸೋಮವಾರ ಜಾರಿಗೆ ಬಂದು ಭಾರತೀಯ ಜೀವವಿಮಾ ನಿಗಮದ ಪಾಲಿಸಿದಾರರು ಪಾವತಿಸುವ ವಿಮಾ ಮೊತ್ತಕ್ಕೆ *ಜಿ.ಎಸ್.ಟಿ.ಸಂಪೂರ್ಣವಾಗಿ ಇಳಿಕೆಯಾದ ಹಿನ್ನೆಲೆಯಲ್ಲಿ ಕುಶಾಲನಗರ ಎಲ್.ಐ.ಸಿ. ಉಪಗ್ರಹ ಕಚೇರಿಯಲ್ಲಿ ಜಿ.ಎಸ್.ಟಿ.ಇಳಿಕೆಯ ಸಂಭ್ರಮಾಚರಣೆ ಯನ್ನು ಆಚರಿಸಲಾಯಿತು. ಜಿ.ಎಸ್.ಟಿ.ಇಳಿಕೆಯ ಸಂಭ್ರಮಾಚರಣೆಯಲ್ಲಿ ಜಿ.ಎಸ್.ಟಿ. ತೆರಿಗೆಯು ಶೂನ್ಯ(0%) ಕ್ಕೆ ಕಡಿತಗೊಂಡ ಹಿನ್ನೆಲೆಯಲ್ಲಿ ಎಲ್.ಐ.ಸಿ. ಉಪಗ್ರಹ ಶಾಖಾ ಮೆನೇಜರ್ ಎಸ್.ಬಿ.ಶಿವಪ್ರಸಾದ್ ಸಿಹಿ ಹಂಚಿದರು. ಎಲ್.ಐ.ಸಿ. ಕಛೇರಿಯಲ್ಲಿ ಸಂಸ್ಥೆಯ ಅಭಿವೃದ್ಧಿ ಅಧಿಕಾರಿಗಳು, ಪ್ರತಿನಿಧಿಗಳು, ಕಛೇರಿಯ ಸಿಬ್ಬಂದಿ ಹಾಗೂ ಪಾಲಿಸಿದಾರರು ಜತೆಗೂಡಿ ಜಿ.ಎಸ್.ಟಿ. ಇಳಿಕೆಯ ಕುರಿತು ಘೋಷಣೆ ಕೂಗುವ ಮೂಲಕ ಸಂಭ್ರಮಿಸಿದರು. ಜಿ.ಎಸ್.ಟಿ.ಇಳಿಕೆಯ ಮಾಹಿತಿ ನೀಡಿದ ಶಾಖಾ ಮೆನೇಜರ್ ಎಸ್.ಬಿ.ಶಿವಪ್ರಸಾದ್ , ಭಾರತೀಯ ಜೀವ ವಿಮಾ ಪಾಲಿಸಿಗಳಿಗೆ ಪಾಲಿಸಿದಾರರು ಪಾವತಿಸುವ ವಿಮಾ ಮೊತ್ತಕ್ಕೆ ಕೇಂದ್ರ ಸರ್ಕಾರವು ಜಿ.ಎಸ್.ಟಿ.ಯನ್ನು ಶೇಕಡಾ ಶೂನ್ಯ( 0%) ಕ್ಕೆ ಇಳಿಸಿರುವುದರಿಂದ ಪಾಲಿಸಿದಾರರಾದ ಗ್ರಾಹಕರು ತಮ್ಮ ಉಳಿತಾಯವನ್ನು ಹೆಚ್ಚಿನ ಪ್ರಮಾಣದಲ್ಲಿ ಎಲ್.ಐ.ಸಿ.ಯಲ್ಲಿ ಮಾಡಲು…

Read More

ಮಡಿಕೇರಿ NEWS DESK ಸೆ.24 : ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದಿನ ವರ್ಷ ಕೇಂದ್ರ ಸರಕಾರ ನಡೆಸುವ ಜಾತಿ ಜನಗಣತಿ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಆಲೂರು ಸಿದ್ದಾಪುರ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಲೂರು ಸಿದ್ದಾಪುರ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಅವರು ರಾಜ್ಯ ಸರಕಾರದ ವತಿಯಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜನಗಣತಿಯ ಸಮೀಕ್ಷೆ ಆರಂಭಗೊಂಡಿದೆ. ಗಣತಿದಾರರು ಬಂದಾಗ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃಭಾಷೆಯ ಕಾಲಂನಲ್ಲಿ ಅರೆಭಾಷೆ ಗೌಡ ಎಂದು ನಮೂದಿಸುವಂತೆ ಕೋರಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ…

Read More

ವಿರಾಜಪೇಟೆ ಸೆ.24 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬೆಳೆಗಾರರು ಆತಂಕ ಪಡುವಂತಾಗಿದೆ. ಕೆದಮುಳ್ಳುರು, ಪಾಲಂಗಾಲ, ಕರಡ, ನರಿಯಂದಡ, ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕಾಡಾನೆಗಳ ಹಿಂಡು ಗ್ರಾಮದ ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟು ದಾಂಧಲೆ ನಡೆಸಿ ಬೆಳೆಗಳನ್ನು ಹಾನಿಪಡಿಸಿದೆ. ಪಾಲಂಗಾಲ ಗ್ರಾಮದ ಬೆಳೆಗಾರರಾದ ಕರಿನೆರವಂಡ ಶಂಕರಿ ಹಾಗೂ ಇನ್ನಿತರರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ, ಅಡಿಕೆ, ತೆಂಗು, ಕಾಫಿ, ಕಾಳುಮೆಣಸು ಮತ್ತಿತರ ಕೃಷಿ ಗಿಡಗಳನ್ನು ತುಳಿದು ನಾಶ ಪಡಿಸಿ ಅಪಾರ ನಷ್ಟ ಉಂಟು ಮಾಡಿವೆ. ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದಲ್ಲಿ ಅಳವಡಿಸಲಾಗಿದ್ದ ಸ್ವಿಚ್ಚನ್ನು ಹಾನಿಗೊಳಿಸಿದೆ. ನಿರಂತರ ಕಾಡಾನೆಗಳ ಹಾವಳಿಯಿಂದ ಗ್ರಾಮದಲ್ಲಿ ಗ್ರಾಮಸ್ಥರು ನಡೆದಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಎಂ. ಪರಮೇಶ್ವರ ಮಾತನಾಡಿ, ತಕ್ಷಣವೇ ಸಂಬಂಧಪಟ್ಟ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಕಾಡಾನೆ ಗ್ರಾಮಕ್ಕೆ ನುಸುಳದ ರೀತಿಯಲ್ಲಿ ಶಾಶ್ವತ…

Read More

ನಾಪೋಕ್ಲು ಸೆ.24 NEWS DESK : ನಾಪೋಕ್ಲು ರೇಂಜ್ ಜಮಾಯತ್ ಮೌಲಮೀನ್ ಹಾಗೂ ಎಮ್ಮೆಮಾಡು ರೇಂಜ್ ಜಮಾಯತ್ ಮೌಲಮೀನ್ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲು ಪಟ್ಟಣದಲ್ಲಿ ಈದ್ ಮಿಲಾದ್ ಸಂದೇಶ ಜಾಥಾ ಕಾರ್ಯಕ್ರಮ ನಡೆಯಿತು. ಮಹಮ್ಮದ್ ಹಾಜಿ ಕುಂಜಿಲ ಮಾತನಾಡಿ, ಪ್ರವಾದಿ ಮೊಹಮ್ಮದ್ ಅವರ 1500 ಜನ್ಮ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಎಲ್ಲರನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದತೆಯುತವಾಗಿ ಕಾಣುವಂತಹ ಸಂದೇಶವನ್ನು ಸಾರುವಂತಹ ಉದ್ದೇಶ, ದೃಷ್ಟಿಯಿಂದ ಪಟ್ಟಣದಲ್ಲಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಮದರಸದ ವಿದ್ಯಾರ್ಥಿಗಳು ದಫ್ ಪ್ರದರ್ಶನ ಬಾವುಟಗಳೊಂದಿಗೆ ಹಳೆ ತಾಲ್ಲೂಕು ನಿಂದ ಪಟ್ಟಣವನ್ನು ಸಾಗಿ ಸಂತೆ ಮೈದಾನದಲ್ಲಿ ಮುಕ್ತಾಯಗೊಳಿಸಲಾಯಿತು. ಈ ಸಂದರ್ಭ ನಾಪೋಕ್ಲು ಜುಮ್ಮ ಮಸೀದಿ ಜಮಾಯತ್ ಅಧ್ಯಕ್ಷ ಹೆಚ್.ಹೆಚ್.ಅಬ್ದುಲ್ ರೆಹಮಾನ್, ಅಬುಬಕರ್ ಸಖಾಫಿ ಎಮ್ಮೆಮಾಡು, ಯಾಕುಬ್ ಮಾಸ್ಟರ್ ಕೊಳಕೇರಿ, ಅಬ್ದುಲ್ ಸಖಾಫಿ ಕೊಳಕೇರಿ, ಆರ್.ಎಂ.ಅಸೈನರ್ ಕೊಳಕೇರಿ, ಕೆ.ಕೆ.ಉಸ್ಮಾನ್ ಹಾಜಿ ಹಾಗೂ ವಿವಿಧ ಜಮಾಯತ್ ನ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ಜನಾಂಗಬಾಂಧವರು ಪಾಲ್ಗೊಂಡಿದ್ದರು. ವರದಿ :…

Read More

ನಾಪೋಕ್ಲು ಸೆ.24 NEWS DESK : ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನರಿಯಂದಡ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿರುವ ಪೂಕ್ಕುಳಂಡ್ರ ಧನೋಜ್ ಆಯ್ಕೆಯಾಗಿದ್ದಾರೆ. ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಅವರು ಧನೋಜ್ ಅವರನ್ನು ಆಯ್ಕೆ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಸೆ.24 NEWS DESK :  ನಾಪೋಕ್ಲು ನಾಡು ಗ್ರಾಹಕರ ಸಂಘವು 2024-25 ರ ಸಾಲಿನಲ್ಲಿ 93.600 ಸಾವಿರ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪಟ್ರಪಂಡ ಮೋಹನ್ ಮುದ್ದಪ್ಪ ಹೇಳಿದರು. ಮಹಿಳಾ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ  ಸಹಕಾರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿ,  ಸಂಘದಲ್ಲಿ 639 ಮಂದಿ ಸದಸ್ಯರಿದ್ದು ದುಡಿಯುವ ಬಂಡವಾಳ  65 ಲಕ್ಷ ರೂ.ಗಳಾಗಿವೆ  ಎಂದರು. ಸಂಘವು ಸುಸಜ್ಜಿತವಾದ ಕಟ್ಟಡ ಹೊಂದಿದ್ದು ಸಂಘದ ಮಳಿಗೆಯಲ್ಲಿ ಗ್ರಾಹಕರಿಗೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರದು. ಸರ್ಕಾರದ ನ್ಯಾಯಬೆಲೆ ಅಂಗಡಿಯನ್ನು ಹೊಂದಿದೆ. ಕಾಡುದಾರರಿಗೆ ಪಡಿತರವನ್ನು ವಿತರಿಸಲಾಗುತ್ತಿದೆ. ಸಂಘದ ಸಮಗ್ರ ಮಾಹಿತಿಯನ್ನು ನೀಡಿ ಸಂಘದ ಅಭಿವೃದ್ಧಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭ ಸಭೆಯಲ್ಲಿ ಸಂಘದ ಶ್ರೇಯೋಭಿವೃದ್ಧಿಯ ಬಗ್ಗೆ ಚರ್ಚಿಸಿ ಬಳಿಕ ಎಲ್ಲರ ಒಪ್ಪಿಗೆ ಪಡೆದು  ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ…

Read More