ಮಡಿಕೇರಿ ಆ.21 NEWS DESK : ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಭೇಟಿಯಾಗಿ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದರು. ದೇವಾಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಸಚಿವರಲ್ಲಿ ಮನವಿ ಸಲ್ಲಿಸಿದರು. ನಂತರ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ ಯೋಜನಾ ವರದಿ ತಯಾರಿ ಮಾಡಿ ವರದಿ ಸಲ್ಲಿಸುವಂತೆ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಸಮಿತಿಯ ಸದಸ್ಯರುಗಳಾದ ರಾಜೇಂದ್ರ, ಎಂ.ಎ.ನಿರಂಜನ್, ಪ್ರಕಾಶ ಆಚಾರ್ಯ, ಅಂಬೇಕಲ್ ಕುಶಾಲಪ್ಪ, ಅರ್ಚಕರಾದ ಸಂತೋಷ್ ಭಟ್, ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಆ.20 NEWS DESK : ಸೋಮವಾರಪೇಟೆ, ಮಹದೇಶ್ವರ ಬ್ಲಾಕ್ ನಿವಾಸಿ ಕಾಫಿ ಬೆಳೆಗಾರ ಹಾಗೂ ಪಟ್ಟಣದ ರಾಘವೇಂದ್ರ ಪ್ರಾವಿಷನ್ ಸ್ಟೋರ್ ಮಾಲೀಕ ಬಿ.ಎಸ್.ನಿರ್ವಾಣಿ (83) ಇಂದು(ಬುಧವಾರ) ಮುಂಜಾನೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 3ಗಂಟೆಗೆ ಕರ್ಕಳ್ಳಿಯಲ್ಲಿರುವ ಕುರುಹಿನಶೆಟ್ಟಿ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರು ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷೆ ಲೀಲಾ ನಿರ್ವಾಣಿ ಸೇರಿದಂತೆ ಮೂವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸೋಮವಾರಪೇಟೆ NEWS DESK ಆ.19 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕೃಷ್ಣಪ್ರಸಾದ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ ಸತೀಶರವರ ವರ್ಗಾವಣೆಯಿಂದ ಒಂದು ತಿಂಗಳು ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಪ್ರಸಾದ್ ರವರನ್ನ ನೇಮಿಸಲಾಗಿದೆ.ಈ ಹಿಂದೆ ಇವರು ವಿರಾಜಪೇಟೆ ಹಾಗೂ ಕುಶಾಲನರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಮಡಿಕೇರಿ NEWS DESK ಆ.19 : ಸೋಮವಾರಪೇಟೆ ತಾಲ್ಲೂಕಿನ ಪುಷ್ಪಗಿರಿ ಹೈಡೆಲ್ ವಿದ್ಯುತ್ ಉತ್ಪಾದನಾ ಘಟಕದ ನೀರಿಗೆ ಬಿದ್ದಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಹಣಕೋಡು ಗ್ರಾಮದ ಚಿದಾನಂದ (27) ಎಂಬುವವರೇ ಮೃತ ವ್ಯಕ್ತಿ. ಭಾನುವಾರ ರಾತ್ರಿ ಚಿದಾನಂದ ತಾನು ಕೆಲಸ ಮಾಡುತ್ತಿದ್ದ ವಿದ್ಯುತ್ ಉತ್ಪಾದನಾ ಘಟಕದಲ್ಲಿಯೇ ನೀರಿಗೆ ಬಿದ್ದಿದ್ದರು ಎಂದು ಹೇಳಲಾಗಿದೆ. ಸೋಮವಾರ ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಜಲಾಶಯದಲ್ಲಿ ಹುಡುಕಾಟ ನಡೆಸಿದರೂ ಸುಳಿವು ದೊರೆತ್ತಿರಲಿಲ್ಲ. ಮಂಗಳವಾರ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ಮರದ ಬುಡಕ್ಕೆ ಮೃತದೇಹ ಸಿಲುಕಿಕೊಂಡಿರುವುದು ಗೋಚರಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
*ಪೊಲೀಸರ ಮನೆಯಲ್ಲೇ ಕಳ್ಳತನ : ದೇಶದ ವಿವಿಧೆಡೆ ಅಪರಾಧ ಕೃತ್ಯವೆಸಗಿದ್ದ ಆರೋಪಿಗಳ ಬಂಧನ : 500 ಸಿಸಿ ಕ್ಯಾಮರಾ ಪರಿಶೀಲನೆ* ಮಡಿಕೇರಿ NEWS DESK ಆ.19 : ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಅಪರಾಧ ಕೃತ್ಯಗಳನ್ನು ನಡೆಸಿ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಕೇಂದ್ರ್ರ ಸ್ಥಾನ ಮಡಿಕೇರಿಯಲ್ಲಿ ಪೊಲೀಸ್ ವಸತಿ ಗೃಹದಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣದ ತನಿಖೆೆ ಕೈಗೊಂಡ ಪೊಲೀಸರಿಗೆ ಇಬ್ಬರು ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಕಳೆದ ಎರಡು ತಿಂಗಳಿನಿಂದ ನೂರಕ್ಕೂ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಮ್ಮ ಕಛೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶದ ಧಾರ್ ಜಿಲ್ಲೆಯ ನಾರ್ವಲ್ಲಿ ಗ್ರಾಮದ ಸುರೇಶ್ ಸೆಂಗಾರ್(23) ಹಾಗೂ ಮಾಲ್ಪುರ ಗ್ರಾಮದ ಮನೀಶ್ ಭಗೇಲ್ (27) ಎಂದು ಗುರುತಿಸಲಾಗಿದೆ. ಸುರೇಶ್ ವಿರುದ್ಧ…
ಮಡಿಕೇರಿ ಆ.19 NEWS DESK : ಕಾಡಾನೆ ದಾಳಿಯಿಂದ ಮಹಿಳೆ ಪಾರಾದ ಘಟನೆ ಬಾಣವಾರ ಸಮೀಪದ ಭುವಂಗಾಲ ಗ್ರಾಮದಲ್ಲಿ ನಡೆದಿದೆ. ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಲು ಮುಂದಾಗಿದ್ದು, ಮಹಿಳೆ ಕಿರುಚುತ ಸಮೀಪದ ಮನೆಗೆ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭುವಂಗಾಲ ಗ್ರಾಮದಲ್ಲಿ ಕಳೆದ 15ದಿನಗಳಿಂದ ಬಾಣವಾರ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಬರುವ ಕಾಡಾನೆಗಳು ಸಿದ್ದಲಿಂಗಪುರ, ಬಾಣವಾರ, ಭುವಂಗಾಲ ವ್ಯಾಪ್ತಿಯ ಪೋಲಿಸ್ ಪೆದೆ ವಿವೇಕ್ ಸೇರಿದಂತೆ ರೈತರ ಜಮೀನಿಗೆ ದಾಳಿ ಮಾಡಿ ತೆಂಗು, ಸಿಹಿ ಗೆಣಸು, ಮರ ಗೆಣಸು ಸೇರಿದಂತೆ ಇತರೆ ಬೆಳೆಗಳನ್ನು ತಿಂದು ತುಳಿದು ಅಪಾರ ಪ್ರಮಾಣದಲ್ಲಿ ಬೆಳೆಗಳನ್ನು ನಷ್ಟ ಪಡಿಸಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಕಾಡಾನೆ ಹಗಲು ವೇಳೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಸಾರ್ವಜನಿಕರು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಕಾಡಾನೆಯನ್ನು ತಕ್ಷಣವೆ ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.
ಮಡಿಕೇರಿ ಆ.19 NEWS DESK : ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುಂಚಿತವಾಗಿ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮೊದಲು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸುವಂತೆ ನಗರಸಭೆ ಪೌರಾಯುಕ್ತರಾದ ಹೆಚ್.ಆರ್.ರಮೇಶ್ ಅವರು ಕೋರಿದ್ದಾರೆ. ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ಹಾಗೂ ಬಣ್ಣ ಲೇಪಿತವಲ್ಲದ ವಿಗ್ರಹಗಳನ್ನು ಬಳಸುವುದು. ಗಣಪತಿ ವಿಗ್ರಹಗಳ ವಿಸರ್ಜನೆಗೆ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಗೌರಿ ಕೆರೆಯನ್ನು ಗುರುತಿಸಿ, ಅವಶ್ಯ ವ್ಯವಸ್ಥೆಗಳನ್ನು ಮಾಡಿದ್ದು, ಈ ಸ್ಥಳದಲ್ಲೆ ವಿಗ್ರಹಗಳನ್ನು ಹೂವು ಹಣ್ಣುಗಳನ್ನು ಪ್ರತ್ಯೇಕಿಸಿ ವಿಸರ್ಜಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ವಿಗ್ರಹ ಪ್ರ್ರತಿಷ್ಠಾಪಿಸಿ ಪೂಜೆ ನಡೆಸಲು ಇಚ್ಚಿಸುವವರು…
ಮಡಿಕೇರಿ ಆ.19 NEWS DESK : ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಅರಿವು ಕಾರ್ಯಕ್ರಮವು ನೆರವೇರಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಮಾತನಾಡಿ, ಇಲಾಖೆಯ ಯೋಜನೆಗಳ ಬಗ್ಗೆ, ಬಾಲ್ಯ ವಿವಾಹದ ಕುರಿತು, ಸ್ತನ್ಯಪಾನ ಸಪ್ತಾಹ, ಪೋಷಣ್ ಟ್ರ್ಯಾಕರ್, ಪೋಷಣ್ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯವರೊಂದಿಗೆ ಸೇರಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಲಹೆ ಮಾರ್ಗದರ್ಶನ ನೀಡುವುದಲ್ಲದೆ, ಕಾಲಕಾಲಕ್ಕೆ ನೀಡಿದ ಸಲಹೆಗಳನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದರು. ಭಾಗ್ಯಲಕ್ಷ್ಮಿ ಮತ್ತು ಮಾತೃವಂದನ ಫಲಾನುಭವಿಗಳನ್ನು ಭೇಟಿ ಮಾಡಿ ಹಣ ಪಾವತಿ ಯಾಗಿರುವ ಬಗ್ಗೆ ಮಾಹಿತಿ ಪಡೆದರು. ಸಮುದಾಯ ಆರೋಗ್ಯ ಅಧಿಕಾರಿ ಕಲ್ಮೇಶ್ ಅವರು ಮಾತನಾಡಿ, ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. “ಹೊಸ ಹೆಜ್ಜೆ “ಕಾರ್ಯಕ್ರಮದಡಿ ವಿವಾಹಿತರು ತಾವು ಯಾವಾಗ ಪೋಷಕರಾಗಬೇಕು ಎಂಬುದನ್ನು ಅರಿತು ಮಾನಸಿಕವಾಗಿ ಸದೃಢರಾದಾಗ…
ಮೈಸೂರು ಆ.19 NEWS DESK : ದಶಕಗಳ ಕಾಲದಿಂದಲೂ ಕಾರ್ಯ ನಿರ್ವಹಿಸುತ್ತಿರುವ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ನಿಯಮಿತದ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಕಲ್ಪ ತೊಟ್ಟಿದ್ದಾರೆ. ಕೊಡಗು ಕಾಫಿ ಸಹಕಾರ ಸಂಘ ಈಗ ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಮಧ್ಯ ಪ್ರವೇಶಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಯದುವೀರ್ ಒಡೆಯರ್ ಮನವಿ ಮಾಡಿದ್ದಾರೆ. ಈ ಸಂಬಂಧ ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ ಸಂಸದ ಯದುವೀರ್, ಮನವಿ ಸಲ್ಲಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ. ಈ ಕುರಿತು ಸಂಸದರು ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ದಶಕಗಳ ಹಿಂದೆ ಸ್ಥಾಪನೆಯಾದ ಸಂಸ್ಥೆ 1956 ರಲ್ಲಿ ಸ್ಥಾಪನೆಯಾದ ಕಾಫಿ ಸಹಕಾರ ಸಂಘವು, ಕೊಡಗು, ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 10,000–12,000 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕಾಫಿ…
ಮಡಿಕೇರಿ ಆ.19 NEWS DESK : ಅಂಗನವಾಡಿ, ಶಾಲೆ ಹಾಗೂ ಕಾಲೇಜು ವ್ಯಾಪ್ತಿಯಲ್ಲಿ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ವಿಡಿಯೊ ಸಂವಾದ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ಇನ್ನೂ 10-12 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬಿರುಗಾಳಿ ಸಹ ಇರಲಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ನಿರ್ದೇಶನ ನೀಡಿದರು. ಹಳೆ ಮರಗಳನ್ನು ತೆರವುಗೊಳಿಸಲು ಜಿ.ಪಂ.ಸಿಇಒ ಅವರ ಮೂಲಕ ಅರಣ್ಯ ಇಲಾಖೆಗೆ ಪತ್ರ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಗುಂಡಿಮಯವಾಗಿದ್ದು, ಮಳೆ ಮುಗಿದ ನಂತರ ರಾಜ್ಯ, ಜಿಲ್ಲಾ ಹಾಗೂ ಗ್ರಾಮೀಣ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯವಾಗಬೇಕಿದೆ. ಆ ನಿಟ್ಟಿನಲ್ಲಿ ಎಂಜಿನಿಯರ್ಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ನಗರ, ಪಟ್ಟಣ ಪ್ರದೇಶದಲ್ಲಿಯೂ ರಸ್ತೆಗಳು…






