ಲೇಖಕ: admin

ಮಡಿಕೇರಿ ಜು.12 NEWS DESK : ಕಾಯಕ ಮಹತ್ವ, ತ್ರಿವಿಧ ದಾಸೋಹ ಪರಿಕಲ್ಪನೆ, ಸಾಮಾಜಿಕ ಸಮಾನತೆ, ಸ್ತ್ರೀ ಸಮಾನತೆ, ದಯೆ ಮತ್ತು ಧರ್ಮದ ಪರಿಕಲ್ಪನೆ, ಅನುಭಾವ, ಸಮ ಸಮಾಜದ ನಿರ್ಮಾಣ ಮೊದಲಾದ ವಿಶ್ವ ಮೌಲಿಕ ಆಶಯಗಳನ್ನು ಶರಣರ ವಚನಗಳಲ್ಲಿ ಕಾಣಬಹುದಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು. ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಪುಣ್ಣಿಮೆ ಪೂಜಾ ಕಾರ್ಯಕ್ರಮ, ಶಿವಾನುಭವ ಗೋಷ್ಠಿ ಮತ್ತು ಫ.ಗು‌.ಹಳಕಟ್ಟಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಸವಾದಿ ಶರಣರು ನಡೆ-ನುಡಿ ಒಂದಾಗಿಸಿಕೊಂಡು ಬದುಕಿದವರು. ಕ್ರಿ.ಶ. ಹನ್ನೆರಡನೇ ಶತಮಾನದಲ್ಲಿಯೇ ಕರ್ಮಠತನದ ಸಾಮಾಜಿಕ ವ್ಯವಸ್ಥೆಯ ವರ್ಗ-ಜಾತಿ-ಲಿಂಗ ತಾರತಮ್ಯವನ್ನು ನೇರವಾಗಿ ವಿರೋಧಿಸಿ ಸಮ ಸಮಾಜದ ಮಾನವೀಯ ಮೌಲ್ಯಗಳನ್ನು ಇಡೀ ಜಗತ್ತಿಗೆ ಸಾರಿದರು. ಜನಪರವಾದ ಮತ್ತು ಲೋಕಕಲ್ಯಾಣಕರವಾದ ಚಿಂತನೆಗಳು ಬಸವಾದಿ ಶರಣರ ವಚನಗಳಲ್ಲಿ ಕಂಡುಬರುತ್ತದೆ. ವಚನ ಪಿತಾಮಹ, ವಚನ ಕಮ್ಮಟ, ರಾವ್ ಬಹದ್ದೂರ್, ರಾವ್ ಸಾಹೇಬ್ ಎಂದೇ ಪ್ರಸಿದ್ಧರಾಗಿದ್ದ  ಫ.ಗು. ಹಳಕಟ್ಟಿಯವರು ತಮ್ಮ ವಕೀಲ ವೃತ್ತಿಯನ್ನು ತ್ಯಜಿಸಿ…

Read More

ಮಡಿಕೇರಿ ಜು.12 NEWS DESK : ಸ್ಕೌಟ್ ಮತ್ತು ಗೈಡ್ ಮಡಿಕೇರಿ ತಾಲ್ಲೂಕು ಸ್ಥಳೀಯ ಸಂಸ್ಥೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಪದಗ್ರಹಣ ಕಾರ್ಯಕ್ರಮ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ನಡೆಯಿತು. ತಾಲೂಕಿನ ನೂತನ ಅಧ್ಯಕ್ಷರಾಗಿ ಈರಮಂಡ ಹರಿಣಿ ವಿಜಯ್, ಉಪಾಧ್ಯಕ್ಷರಾಗಿ ಬಿ.ಎನ್.ರಮೇಶ್, ಪಿ.ಎಂ.ರವಿ, ಅರುಣ್, ನೀಲಮ್ಮ, ಕಡ್ಲೇರ ತುಳಸಿ ಮೋಹನ್, ಕುಡೆಕಲ್ ಸಂತೋಷ್, ಪ್ರಧಾನ ಕಾರ್ಯದರ್ಶಿಯಾಗಿ ಆರ್.ಪಿ.ಚಂದ್ರಶೇಖರ್, ಖಜಾಂಚಿಯಾಗಿ ಸಿ.ಎಸ್.ಕಾವೇರಮ್ಮ, ಸಹ ಕಾರ್ಯದರ್ಶಿಯಾಗಿ ಚಂದನ್ ನಂದರಬೆಟ್ಟು ಹಾಗೂ ನಳಿನಿ ಅವರುಗಳನ್ನು ಆಯ್ಕೆ ಮಾಡಲಾಗಿದೆ. ಸ್ಕೌಟ್ ಮತ್ತು ಗೈಡ್‌ನ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

Read More

ಬೆಂಗಳೂರು ಜು.12 NEWS DESK : ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.  ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ…

Read More

ವಿರಾಜಪೇಟೆ ಜು.12 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೃಷಿ ಕಾರ್ಯಕ್ರಮದಡಿಯಲ್ಲಿ ಪೊನ್ನಂಪೇಟೆ ವಲಯದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಶಾಲೆಯ ಉಪ ಪ್ರಾಂಶುಪಾಲರಾದ ಚಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪರಿಸರ ಸಂರಕ್ಷಣೆ ಹಾಗೂ ಕಾರ್ಯಕ್ರಮದ ಬಗ್ಗೆ ವಲಯ ಮೇಲ್ವಿಚಾರಕ ನಾಗರಾಜ್ ಪ್ರಾಸ್ತವಿಕವಾಗಿ ಮಾತನಾಡಿದರು. ಪೊನ್ನಂಪೇಟೆ ಪಟ್ಟಣ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪ ಮಾತನಾಡಿ ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ ನೀರು ಸಿಗುತ್ತದೆ. ಹಾಗೂ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಉಪ ಅರಣ್ಯಅಧಿಕಾರಿ ಜೆ.ಕೆ.ಬಿರಾದರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ತಮ್ಮಯ್ಯ, ಕೃಷಿ ಮೇಲ್ವಿಚಾರಕ ವಸಂತ್, ಒಕ್ಕೂಟದ…

Read More

ವಿರಾಜಪೇಟೆ ಜು.14 NEWS DESK : ವಿರಾಜಪೇಟೆಯಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ, ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಕಾಲೇಜು ಹಂತ ಮಹತ್ತರ ಪಾತ್ರವನ್ನು ವಹಿಸುತ್ತದೆ. ಜೀವನದಲ್ಲಿ ಶಿಸ್ತು, ಸಂಯಮ, ಸಮಯ ಪರಿಪಾಲನೆಯನ್ನು ರೂಢಿಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಬೇಕೆಂದು ಕಿವಿ ಮಾತನ್ನು ಹೇಳಿದರು. ವಿದ್ಯಾರ್ಥಿನಿ ಭೂಮಿಕಾ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಕೃತಿ ಸ್ವಾಗತಿಸಿದರು. ಡೋನಾ ನಿರೂಪಿಸಿದರು. ಪ್ರತೀಕ್ಷಾ ವಂದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.

Read More

ಕುಶಾಲನಗರ ಜು.14 NEWS DESK : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಿಂದೂಗಳ ಬಲಿಷ್ಠ ಸಂಘಟನೆಯ ಅವಶ್ಯಕತೆ ಇಂದು ತುರ್ತು ಅಗತ್ಯವಿದೆ ಎಂದು ಸನಾತನ ಸಂಸ್ಥೆಯ ಪ್ರಮುಖರಾದ ಸೌ.ಲಕ್ಷ್ಮಿ ಪೈ ಅಭಿಪ್ರಾಯಿಸಿದರು. ಕುಶಾಲನಗರದ ಗೌಡ ಸಮಾಜದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಧನೆ ಮತ್ತು ಧರ್ಮ ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ. ಸಾಧನೆಯಿಂದಲೇ ಯಾವುದೇ ಪರಿಸ್ಥಿತಿಯನ್ನು ಎದುರಿಸುವ, ಯಾವುದೇ ಪರಿಸ್ಥಿತಿಯಲ್ಲಿ ಸ್ಥಿರವಾಗಿರುವ, ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಕ್ಷಮತೆ ನಿರ್ಮಾಣವಾಗುತ್ತದೆ. ಎಲ್ಲರೂ ಆಧ್ಯಾತ್ಮಿಕ ಸಾಧನೆಯೊಂದಿಗೆ ರಾಷ್ಟ್ರ-ಧರ್ಮದ ಕಾರ್ಯ ಮಾಡುವ ಸಂಕಲ್ಪ ತೊಡಬೇಕಿದೆ ಎಂದರು. ಗುರುಪೂರ್ಣಿಮೆ ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮತ್ತು ಗುರುಸೇವೆಗಾಗಿ ಸಂಕಲ್ಪ ಮಾಡುವ ಪವಿತ್ರ ದಿನ. ಭಾರತದ ಒಂದು ಪ್ರಮುಖ ವೈಶಿಷ್ಟ್ಯವೆಂದರೆ ಗುರು-ಶಿಷ್ಯ ಪರಂಪರೆ. ಈ ದೈವೀ ಪರಂಪರೆಯು ಕೇವಲ ಗುರು ಮತ್ತು ಶಿಷ್ಯ, ಅಧ್ಯಾತ್ಮ ಮತ್ತು ಮೋಕ್ಷಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಅದು ವಿಶ್ವ ಕಲ್ಯಾಣದ…

Read More

ಮಡಿಕೇರಿ ಜು.14 NEWS DESK : ಪ್ರಸಕ್ತ (2025-25) ಸಾಲಿಗೆ ಪ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ (Pre matric & Post matric) ತರಗತಿಗಳಲ್ಲಿ ವ್ಯಾಂಸಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್‍ಎಸ್‍ಪಿ ತಂತ್ರಾಂಶದಲ್ಲಿ https://ssp.postmatric.karnataka.gov.in/homepage.aspx ವೆಬ್‍ಸೈಟ್ ಚಾಲನೆಯಲ್ಲಿದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ. 08272-295829 ನ್ನು ಹಾಗೂ ತಾಲ್ಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕು ರಾಜೇಶ್ ಬಿ.ಆರ್ ಮೊ.ಸಂ-8073192914, ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕು ಹರೀಶ್ ಟಿ.ಆರ್-8861428931 ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಪ್ರಥನ್ ಕುಮಾರ್ ಸಿ.ಬಿ-9900883654 ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜು.12 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕೊಡವ ಭಾಷೆ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ’ ಏರ್ಪಡಿಸುವ ಸಂಬಂಧ ಸ್ವರಚಿತ ಕವನ ಆಹ್ವಾನಿಸಲಾಗಿದೆ. ಯಾವುದೇ ಜಾತಿ ಧರ್ಮ ಆಧಾರಿತ ಕವನಗಳನ್ನು ಹೊರತುಪಡಿಸಿ, ಕೊಡವ ಸಾಹಿತ್ಯ-ಸಂಸ್ಕೃತಿ ಇಲ್ಲಿನ ಪರಿಸರ, ಪ್ರಕೃತಿ ಒಳಗೊಂಡಂತೆ ತಾತ್ವಿಕ ವಿಚಾರಗಳಿಗೆ ಒತ್ತುಕೊಡುವಂತೆ ಕವನಗಳಿಗೆ ಅವಕಾಶ ನೀಡಲಾಗುವುದು. 25 ಸಾಲುಗಳಿಗೆ ಮೀರಿದ ಕವನಗಳನ್ನು ವಾಚಿಸಲು ಅವಕಾಶ ಇರುವುದಿಲ್ಲ. ಯಾವುದೇ ಕವನಗಳ ಸಾಲುಗಳನ್ನು ಗೋಷ್ಠಿಯಲ್ಲಿ ಪುನರುಚ್ಚರಿಸುವಂತಿಲ್ಲ. ಕವನಗಳನ್ನು ಕಳುಹಿಸುವ ಹಾಗೂ ಭಾಗವಹಿಸುವ ಕವಿಗಳಿಗೆ ಜಾತಿ-ಧರ್ಮಗಳ ನಿರ್ಬಂಧ ಇರುವುದಿಲ್ಲ. ಕೊಡವ ಭಾಷೆಯು ಕಡ್ಡಾಯವಾಗಿದ್ದು, ತಮಗಳ ಕವನಗಳನ್ನು ಅಕಾಡೆಮಿ ಮೊಬೈಲ್ ಸಂಖ್ಯೆ 8762942976 ಕ್ಕೆ ಕಳುಹಿಸಲು ಜುಲೈ, 19 ಕೊನೆಯ ದಿನವಾಗಿದೆ. ಕವಿಗೋಷ್ಠಿಯು ನಾಯಕಂಡ ಬೇಬಿ ಚಿಣ್ಣಪ್ಪ ಅವರ ಮಾರ್ಗದರ್ಶನದಲ್ಲಿ ನಡೆಯಲಿದ್ದು, ಪುತ್ತರಿರ ಪಪ್ಪು ತಿಮ್ಮಯ್ಯ ಹಾಗೂ ಕಂಬೆಯಂಡ ಡೀನಾ ಬೋಜಣ್ಣ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಕಾಡೆಮಿ ನಿಯಮದಂತೆ ಕವಿಗೋಷ್ಠಿಗೆ ಆಯ್ಕೆಯಾಗುವ ಹಾಗೂ ಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳಿಗೆ ಸಂಭಾವನೆ ನೀಡಲಾಗುವುದು…

Read More

ಕಾರ್ಕಳ ಜು.12 NEWS DESK : ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 6/8 ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು. 6 ಕರ್ನಾಟಕ ಎನ್.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಅವರು ಘಟಕವನ್ನು ಉದ್ಘಾಟಿಸಿ ಮಾತನಾಡಿ, ಎನ್.ಸಿ.ಸಿಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹ ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ಎನ್.ಸಿ.ಸಿ ಯ ಶಿಸ್ತು, ಸಮಯ ಪಾಲನೆ, ನಾಯಕತ್ವ ಹಾಗೂ ದೇಶಪ್ರೇಮದ ಕುರಿತು ಉಲ್ಲೇಖಿಸಿ, “ಯುವಜನತೆ ರಾಷ್ಟ್ರದ ಭವಿಷ್ಯ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗುತ್ತದೆ” ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಎಂ.ಎ.ಮುಲ್ತಾನಿ, ಪಿ.ಐ.ಸ್ಟಾಫ್ ವರ್ಗದವರು, ಕಾಲೇಜು ಎನ್.ಸಿ.ಸಿ ನೌಕಾ ಘಟಕದ ಸಿ.ಟಿ.ಒ ಆಗಿರುವ ಆಂಗ್ಲ ಭಾಷಾ ಉಪನ್ಯಾಸಕ ಮಹೇಶ್ ಆರ್. ಶೆಣೈ…

Read More

ನಾಪೋಕ್ಲು ಜು.12 NEWS DESK  : ಶಿಸ್ತು, ಶ್ರದ್ಧೆ ಮತ್ತು ಜ್ಞಾನದ ಪ್ರತಿಬಿಂಬ ಗುರುಗಳು ಎಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಹೇಳಿದರು. ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಚೇರಂಬಾಣೆ ಗೌಡ ಸಮಾಜದ ಸಭಾಂಗಣದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಿದ ಗುರುವಂದನಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಬದುಕಿನಲ್ಲಿ ತಂದೆ ತಾಯಿಗೆ ಇರುವ ಶ್ರೇಷ್ಠ ಸ್ಥಾನದಲ್ಲಿ ನಿಲ್ಲುವವರು ಗುರುಗಳು ಎಂದ ಅವರು ಗುರುಪೂರ್ಣಿಮೆ ದಿನವನ್ನು ಆಚರಿಸುವುದು ನಮ್ಮ ಸಂಸ್ಕೃತಿಯ ಜ್ಞಾನ ಪರಂಪರೆಗಾಗಿ ನಮಿಸುವ ಸನ್ನಿವೇಶ. ಇದು ಕೇವಲ ಧಾರ್ಮಿಕ ಆಚರಣೆ ಅಲ್ಲ ಜೀವನದ ಸತ್ಯವನ್ನು ಅರಿತವರಿಗೆ ಕೃತಜ್ಞತೆಯ ಪ್ರಾಮಾಣಿಕ ಸೂಚನೆ. ಹಿಂದೂ ಧರ್ಮದ ಪ್ರಕಾರ ವೇದವ್ಯಾಸರ ಜನ್ಮದಿನ, ಗುರು ದ್ರೋಣಾಚಾರ್ಯರಿಗೆ ಏಕಲವ್ಯ ತನ್ನ ಬಲಗೈಯ ಹೆಬ್ಬೆರಳನ್ನು ಗುರು ಕಾಣಿಕೆಯಾಗಿ ನೀಡಿದ ದಿನ ಎಂದು ದಿನದ ಮಹತ್ವದ ಬಗ್ಗೆ ವಿವರಿಸಿದರು. ಬೈಮನ ಜ್ಯೋತಿ ತಿಮ್ಮಯ್ಯ ಅವರು ಗುರುಪೂರ್ಣಿಮೆಯ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಈ…

Read More