ಸುಂಟಿಕೊಪ್ಪ ಜೂ.11 NEWS DESK : ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಮಲೇರಿಯ ವಿರೋಧಿ ಮಾಸಾಚರಣೆ ನಡೆಯಿತು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು, ಮಲೇರಿಯಾ ಕಾಯಿಲೆ ಹರಡುವ ಬಗ್ಗೆ ಅದರ ರೋಗ ಲಕ್ಷಣಗಳ ಬಗ್ಗೆ ಮತ್ತು ನೀಡುವ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಸಾರ್ವಜನಿಕರು ಮುಂಜಾಗೃತ ಕ್ರಮವಹಿಸುವ ಬಗ್ಗೆ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಆರೋಗ್ಯ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮೇರಾಜ್ ರೋಗ ಲಕ್ಷಣದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಗಾರದಲ್ಲಿ ಸು.ಪ್ರಾ.ಆ.ಕೇಂದ್ರದ ಸುರಕ್ಷಾಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಜೂ.11 NEWS DESK : ದೇಶಭಕ್ತಿ, ಸಮಗ್ರತೆಯ ಪರಿಕಲ್ಪನೆ, ನಾಯಕತ್ವದ ಗುಣಗಳೊಂದಿಗೆ, ರಾಷ್ಟ್ರೀಯ ಸೇವೆಯ ಮೌಲ್ಯಗಳನ್ನು ಯುವ ಸಮೂಹದಲ್ಲಿ ಮೂಡಿಸುವ ಮೂಲಕ, ಅವರನ್ನು ಭವಿಷ್ಯಕ್ಕೆ ಸಜ್ಜುಗೊಳಿಸುವ ಕಾರ್ಯದಲ್ಲಿ ಸೈನಿಕ ಶಾಲೆಗಳು ಮಹತ್ವದ ಪಾತ್ರ ವಹಿಸಿರುವುದಾಗಿ ಕೇರಳ ಮತ್ತು ತಮಿಳುನಾಡಿನ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ತಿಳಿಸಿದರು. ಕೂಡಿಗೆಯ ಕೊಡಗು ಸೈನಿಕ ಶಾಲೆಯಲ್ಲಿ ಆಯೋಜಿತ ಪ್ರತಿಷ್ಠಿತ “ಪ್ರಿ ಸುಬ್ರೋಟೋ ಕಪ್-2026” ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ರಾಜ್ಯಪಾಲರು ಮಾತನಾಡಿದರು. ರಾಷ್ಟ್ರದ ವಿವಿಧೆsಡೆಗಳ ಸೈನಿಕ ಶಾಲೆಗಳ ಯುವ ಫುಟ್ಬಾಲ್ ಆಟಗಾರರು ಪಂದ್ಯಾವಳಿಯಲ್ಲಿ ಶಿಸ್ತಿನಿಂದ ಪಾಲ್ಗೊಂಡು ಪ್ರದರ್ಶಿಸಿರುವ ಕ್ರೀಡಾ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಕೊಡಗು ಸೈನಿಕ ಶಾಲೆಯನ್ನು ಶ್ಲಾಘಿಸಿದರು. ಸೈನಿಕ ಶಾಲೆಗಳ ಮೂಲಕ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸಮಗ್ರ ಶಿಕ್ಷಣ, ಆಯೋಜಿಸುತ್ತಿರುವ ಕ್ರೀಡಾ ಚಟುವಟಿಕೆಗಳು ಹಾಗೂ ರಾಷ್ಟ್ರ ನಿರ್ಮಾಣದ ಗುರಿಯನ್ನು ಯುವ ಸಮೂಹದಲ್ಲಿ…
ವಿರಾಜಪೇಟೆ ಜೂ.12 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಅಮ್ಮತ್ತಿ ವಲಯದ ಚೆಂಬೆಬೆಳ್ಳೂರು ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ದೇವಣಗೇರಿ ಗ್ರಾಮದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಬೀದಿ ನಾಟಕ ಕಾರ್ಯಕ್ರಮ ನಡೆಯಿತು. ಜನಜಾಗೃತಿ ಸಮಿತಿ ಸದಸ್ಯರಾದ ಮೂಕೊಂಡ ಶಶಿ ಸುಬ್ರಮಣಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬೀದಿ ನಾಟಕದ ಮುಖಾಂತರ ಜನರಿಗೆ ಮನಮುಟ್ಟುವಂತೆ ಜಾಗೃತಿಯನ್ನು ಮೂಡಿಸಬಹುದು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನೇಕ ಸಾಮಾಜಿಕ ಕಳಕಳಿ ಇರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತಿದ್ದು, ಇದರ ಪ್ರಯೋಜನಗಳನ್ನು ಜನರು ಪಡೆದುಕೊಳ್ಳಿ, ಬೀದಿ ನಾಟಕಗಳಿಂದ ಜನರಿಗೆ ಜಾಗೃತಿಯು ಹೆಚ್ಚಾಗಿ ಮೂಡುತ್ತದೆ ಎಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠಲ್ ಸಾಲಿಯಾನ್ ಮಾತನಾಡಿ, ನಿಸರ್ಗ ಕಲಾಭಿವೃದ್ಧಿ ಬೀದಿ ನಾಟಕ ಕಲಾತಂಡದವರು ತುಂಬಾ ಚೆನ್ನಾಗಿ ಸ್ವಚ್ಛತೆಯ ಬಗ್ಗೆ ಹಾಗೂ ನೀರಿನ ಸದ್ಬಳಕೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದ್ದಾರೆ. ಔಷಧೀಯ ಸಸ್ಯ ಸಂಕುಲವಿರುವ…
ಕುಶಾಲನಗರ, ಜೂ.11 NEWS DESK : ಸೋಮವಾರಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್, ಎನ್ನೆಸ್ಸೆಸ್ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಾಲಾ ಘಟಕಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ಪರಿಸರ ದಿನಾಚರಣೆ” ಅಂಗವಾಗಿ ಪರಿಸರ ಜಾಗೃತಿ ಅಭಿಯಾನ ವನ್ನು ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಅಂಗವಾಗಿ ಏರ್ಪಡಿಸಿದ್ದ ಪರಿಸರ ಕಾರ್ಯಕ್ರಮದಲ್ಲಿ ಗಿಡನೆಟ್ಟು ಪರಿಸರ ಕಾರ್ಯಕ್ರಮಕ್ಕೆ ಚಾಲನೆ ನೀಡಿ “ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ ಎಸ್. ಸಾಲಿಯಾನ, ನಮ್ಮ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡನೆಟ್ಟು ಬೆಳೆಸಿ ಅದನ್ನು ಪೋಷಿಸುವ ಮೂಲಕ ಪರಿಸರ ಕಾಪಾಡಬೇಕಿದೆ ಎಂದರು. ಪರಿಸರ ಸಂರಕ್ಷ ಣೆ ಎಂದರೆ ಕೇವಲ ಗಿಡ, ಮರಗಳನ್ನು ಬೆಳೆಸುವುದಷ್ಟೇ ಅಲ್ಲ. ನಿತ್ಯ ಜೀವನದಲ್ಲಿ ಅನುಸರಿಸಬೇಕಾದ ಹಲವಾರು ನಡವಳಿಕೆಗಳನ್ನು ಚಾಚೂ ತಪ್ಪದೆ ಪಾಲಿಸುವುದರಿಂದ ಪರಿಸರವನ್ನು ಉಳಿಸಬಹುದು…
ಮಡಿಕೇರಿ ಜೂ.11 NEWS DESK : ಸಾರ್ವಜನಿಕರ ಹಾಗೂ ಪರಿಸರದ ಹಿತದೃಷ್ಟಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಈ ಪ್ರಕಟಣೆ ದಿನಾಂಕದಿಂದ ಮಾರಾಟ, ಖರೀದಿ ಹಾಗೂ ಶೇಖರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈಗಾಗಲೇ ಸರ್ಕಾರದಿಂದ ನಿಷೇಧಿಸಿರುವ ಏಕ ಬಳಕೆ ಪ್ಲಾಸ್ಟಿಕ್ (ಕವರ್, ಇಯರ್ ಬಡ್ಸ್, ಸ್ಟ್ರಾ ಪೈಪ್, ಕ್ಯಾಂಡಿ ಮತ್ತು ಐಸ್ ಕ್ರೀಮ್ ಕಡ್ಡಿಗಳು, ಅಲಂಕಾರ ವಸ್ತುಗಳು, ಪ್ಯಾಕಿಂಗ್ ಸಾಮಾಗ್ರಿಗಳು, ಆಮಂತ್ರಣ ಪತ್ರಿಕೆಗಳು ಹಾಗೂ ಇತ್ಯಾದಿ) ಸಹ ನಿಷೇಧಿಸಿರುವುದರಿಂದ ಸಾರ್ವಜನಿಕರು, ಉದ್ದಿಮೆದಾರರು ಹಾಗೂ ಪ್ರವಾಸಿಗರು ಬಳಸದಂತೆ ಕೋರಲಾಗಿದೆ. ಆದರಿಂದ ಉದ್ದಿಮೆದಾರರು ತಕ್ಷಣದಿಂದ ಜಾರಿಗೆ ಬರುವಂತೆ 2 ಲೀಟರ್ ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಮಾರಾಟ ಹಾಗೂ ಸಂಗ್ರಹಿಸದಂತೆ ಹಾಗೆಯೇ ಸರ್ಕಾರದಿಂದ ನಿಷೇಧಿಸಿರುವ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡದಂತೆ, ಸಂಗ್ರಹಿಸುವುದನ್ನು ಕೂಡಲೇ ಸ್ಥಗಿತಗೊಳಿಸುವುದು ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು…
ಮಡಿಕೇರಿ ಜೂ.11 NEWS DESK : ಆಯುಷ್ ಇಲಾಖೆಯ ವತಿಯಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21 ರಂದು ನಗರದ ಕಾವೇರಿ ಹಾಲ್ ನಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಆಯುಷ್ ಇಲಾಖಾ ಅಧಿಕಾರಿ ಡಾ. ಶೈಲಜಾ ಅವರು ಯೋಗ ದಿನಾಚರಣೆಯಂದು ಬೆಳಗ್ಗೆ 6.45 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ನಂತರ 7 ಗಂಟೆಯಿಂದ 8 ಗಂಟೆಯವರೆಗೆ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನಗೊಳ್ಳಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಕೂಡ ಪಾಲ್ಗೊಳ್ಳಲಿದ್ದು, ಯೋಗ ದಿನಾಚರಣೆಯ ಯಶಸ್ಸಿಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಹಕರಿಸುವಂತೆ ಮನವಿ ಮಾಡಿದರು. ಯೋಗ ದಿನಾಚರಣೆÉಗೆ ಪೂರ್ವಭಾವಿಯಾಗಿ ಜೂ.19 ರಂದು ಸಂಜೆ 5 ಗಂಟೆಗೆ ಯೋಗ ಪ್ರೊಟೋಕಾಲ್ನ ಪ್ರಕಾರ ಯೋಗಾಸನಗಳ ಪೂರ್ವಾಭ್ಯಾಸ ನಗರದ ಸರಕಾರಿ ಬಸ್ ಡಿಪೋ ಬಳಿಯ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆಯಲಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ಜೂ.16 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ…
ಮಡಿಕೇರಿ NEWS DESK ಜೂ.11 : ನನ್ನ ಮನವಿಗೆ ಸ್ಪಂದಿಸಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ 22 ಕೋಟಿ ರೂಪಾಯಿ ಅನುದಾನ ಒದಗಿಸಿದ ಕೇಂದ್ರ ಸರ್ಕಾರದ ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರಿಗೆ ವೈಯಕ್ತಿಕವಾಗಿ ಹಾಗೂ ಕೊಡಗು ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳು. (ಡಾ.ಮಂತರ್ ಗೌಡ, ಶಾಸಕರು, ಮಡಿಕೇರಿ ವಿಧಾನಸಭಾ ಕ್ಷೇತ್ರ)
ಮಡಿಕೇರಿ NEWS DESK ಜೂ.11 : ಮಡಿಕೇರಿ ಲಯನ್ಸ್ ಸಂಸ್ಥೆಯ 2026-27ನೇ ಸಾಲಿನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಎಲ್., ಕಾರ್ಯದರ್ಶಿಯಾಗಿ ಕೆ.ಮಧುಕರ್ ಹಾಗೂ ಕೋಶಾಧಿಕಾರಿಯಾಗಿ ಅಂಬೆಕಲ್ ನವೀನ್ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.27ರಂದು ಸಂಜೆ 7 ಗಂಟೆಗೆ ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ನಡೆಯಲಿದೆ. ಲಯನ್ಸ್ ಜಿಲ್ಲೆ 317ಸಿ ಯ ಪ್ರಥಮ ಉಪ ಜಿಲ್ಲಾ ಗವರ್ನರ್ ಲಯನ್ ಹರಿಪ್ರಸಾದ್ ರೈ ಅವರು ಪದಗ್ರಹಣಾಧಿಕಾರಿಯಾಗಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ದೀಕ್ಷೆಯನ್ನು ಬೋಧಿಸಲಿದ್ದಾರೆ.
ಮಡಿಕೇರಿ NEWS DESK ಜೂ.11 : ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಹಾಗೂ ಬಂಟರ ಸಮಾಜವನ್ನು ಅವಹೇಳನ ಮಾಡಿರುವ ಮಹಿಳೆಯನ್ನು ತಕ್ಷಣ ಬಂಧಿಸಿ ಆಕೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಲ್ಲವ ಸಮಾಜ ಮತ್ತು ಬಂಟರ ಸಮಾಜ ಜಂಟಿಯಾಗಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ. ಜಾತಿ ಜನಾಂಗಗಳ ಮಧ್ಯೆ ವಿಷಬೀಜವನ್ನು ಬಿತ್ತುವ ಮತ್ತು ದ್ವೇಷವನ್ನು ಬೆಳೆಸುವ ಉದ್ದೇಶದಿಂದ ಮಹಿಳೆ ತನಗೆ ತೋಚಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಈಕೆ ತನ್ನ ಫೇಸ್ಬುಕ್ ಖಾತೆಯಲ್ಲಿ ಬಹಿರಂಗವಾಗಿ ಬಿಲ್ಲವ ಮತ್ತು ಬಂಟರ ಜನಾಂಗವನ್ನು ಕೀಳಾಗಿ ಹೀಯಾಳಿಸಿ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಇದು ಜಾತಿಗಳ ನಡುವೆ ವೈಷಮ್ಯ ಮೂಡಿಸುವ ಮತ್ತು ಗಲಭೆಗೆ ಪ್ರಚೋದನೆ ನೀಡಲು ಹೂಡಿರುವ ಸಂಚೆoದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಲಕ್ಷಾಂತರ ಬಿಲ್ಲವ ಹಾಗೂ ಬಂಟರ ಸಮುದಾಯದ ಜನರ ಧಾರ್ಮಿಕ ಮತ್ತು ಸಾಮಾಜಿಕ…
ಮಡಿಕೇರಿ ಜೂ.10 NEWS DESK : ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿದೆ. ಜೊತೆಗೆ ನೋಡಲ್ ಹಾಗೂ ಸಹಾಯಕ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ. :: ಸಹಾಯವಾಣಿ ಕೇಂದ್ರ ವಿವರ : ಜಿಲ್ಲಾಡಳಿತ ಭವನದಲ್ಲಿರುವ ಸಹಾಯವಾಣಿ ಸಂಖ್ಯೆ 8550001077 ಸಂಪರ್ಕಿಸಬಹುದಾಗಿದೆ. ಹಾಗೆಯೇ ತಾಲ್ಲೂಕು ಮಟ್ಟದಲ್ಲಿ ಮಡಿಕೇರಿ ತಾಲ್ಲೂಕು 08272-228396, ಸೋಮವಾರಪೇಟೆ ತಾಲ್ಲೂಕು 08276-282045, ಕುಶಾಲನಗರ ತಾಲ್ಲೂಕು 08276-200198, ವಿರಾಜಪೇಟೆ ತಾಲ್ಲೂಕು 08274-257328 ಹಾಗೂ ಪೊನ್ನಂಪೇಟೆ ತಾಲ್ಲೂಕು 08274-249700 ನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲೆಯ ವಿವಿಧ ಪ್ರದೇಶಗಳಿಗೆ ನಿಯೋಜಿಸಿರುವ ನೋಡಲ್ ಅಧಿಕಾರಿ ಹಾಗೂ ಸಹಾಯಕ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆ ವಿವರ :: ಮಡಿಕೇರಿ ನಗರವ್ಯಾಪ್ತಿ ಹಾಗೂ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ನೋಡಲ್ ಅಧಿಕಾರಿ ಮಡಿಕೇರಿ ನಗರಸಭೆ ಪೌರಾಯುಕ್ತರು ದೂ.ಸಂ. 9845723666, ಸಹಾಯಕ ನೋಡಲ್ ಅಧಿಕಾರಿ ಕಂದಾಯ ಅಧಿಕಾರಿ, ನಗರಸಭೆ, ಮಡಿಕೇರಿ ದೂ.ಸಂ.…






