ಕೊಡ್ಲಿಪೇಟೆ ಜ.27 NEWS DESK : ಕೊಡ್ಲಿಪೇಟೆ ಕಲ್ಲುಮಠದ ಎಸ್.ಕೆ.ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಡಾ. ಧನಿಕಾ ಸಿ.ಎಸ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೊಡ್ಲಿಪೇಟೆ ಕಂದಾಯಾಧಿಕಾರಿ ಎನ್.ಜೆ.ಮನಕುಮಾರ್ ಮಾತನಾಡಿ ದಿನದ ಮಹತ್ವದ ಬಗ್ಗೆ ವಿವರಿಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಹಾಂತ ಸ್ವಾಮೀಜಿಗಳು ಆರ್ಶೀವಚನ ನೀಡಿ ವಿದ್ಯಾರ್ಥಿಗಳು ಶಿಸ್ತು, ಮೌಲ್ಯಗಳು ಹಾಗೂ ಉತ್ತಮ ಚಟುವಟಿಕೆಗಳನ್ನು ಅಳವಡಿಸಿಕೊಂಡರೆ ಉತ್ತಮ ನಾಗರಿಕರಾಗಿ ರಾಷ್ಟ್ರವನ್ನು ಬಲಪಡಿಸಲು ಸಾಧ್ಯವೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಡಿ.ಎಸ್.ವಿಶ್ವನಾಥ್, ಕಾರ್ಯದರ್ಶಿ ಎಚ್.ಎಂ.ದಿವಾಕರ್, ನಿರ್ದೇಶಕರಾದ ಎಸ್.ಎಸ್.ಶಿವಶೇಖರ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರಾದ ಅಭಿಲಾಷ ಹೆಚ್.ಎಂ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೂರೆಗೊಂಡರು.
ಲೇಖಕ: admin
ಮಡಿಕೇರಿ ಜ.27 NEWS DESK : ಕಡಗದಳು ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷರಾದ ನಂದಿನಿರವಂಡ ನಿರ್ಮಲ ವಹಿಸಿದ್ದರು, ವೇದಿಕೆಯಲ್ಲಿ ಉಪಾಧ್ಯಕ್ಷರಾದ ಯೋಗೇಶ್, ಶಕ್ತಿ ದಿನಪತ್ರಿಕೆ ಸಂಪಾದಕರಾದ ಅನಂತಶಯನ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಂಡೀರ ಮೋಹನ್ದಾಸ್, ಮಡಿಕೇರಿ ತಾಲೂಕು ಕಾರ್ಯ ನಿರ್ವಹಣಾ ಅಧಿಕಾರಿ ಶೇಖರ್, ಹೊದ್ದೂರು ಗ್ರಾಮ ಪಂಚಾಯಿತಿ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಟ್ಟಡ ಗುತ್ತಿಗೆದಾರ ಎಂ.ಎನ್.ರವೂಫ್, ಗ್ರಾ.ಪಂ ಮಾಜಿ ಅಧ್ಯಕ್ಷ ಶಂಭಯ್ಯ, ಜಯಣ್ಣ ಹಾಗೂ ಭಾರತಿ, ಪಂಚಾಯಿತಿ ಸದಸ್ಯರಾದ ಪುಷ್ಪವತಿ ರೈ, ರೋಹಿಣಿ, ಗೀತಾ, ಆನಂದ, ಪ್ರಭಾ, ರಜಿನಾ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಮತ್ತು ಕಿರಿಯ ಅಭಿಯಂತರರುಗಳಾದ ರಘುಕುಮಾರ್, ಯಶಸ್ವಿನಿ ಉಪಸ್ಥಿತರಿದ್ದರು. ಆಡಳಿತ ಅಧಿಕಾರಿ ಅನಿತಾ ಸ್ವಾಗತಿಸಿದರು.
ಮಡಿಕೇರಿ ಜ.27 NEWS DESK : ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸೋಮವಾರಪೇಟೆಯ ತಾನ್ಯ ಮುರಳೀಧರ್ ಪ್ರತಿನಿಧಿಸಿದ್ದ ರಾಜ್ಯ ರಾಷ್ಟ್ರೀಯ ಸೇವಾದಳ (ಎನ್ಎಸ್ಎಸ್) ತಂಡ ಪ್ರಥಮ ಬಹುಮಾನ ಪಡೆದುಕೊಂಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಗೌರವ ರಕ್ಷೆ ನೀಡುವ ಸಂದರ್ಭ ರಾಜ್ಯ ರಾಷ್ಟ್ರಿಯ ಸೇವಾದಳ ತಂಡ ಆಕರ್ಷಕ ಪಥಸಂಚಲನದ ಮೂಲಕ ಗಮನ ಸೆಳೆಯಿತು. ಅಲ್ಲದೆ, ಪ್ರಥಮ ಬಹುಮಾನಕ್ಕೂ ಭಾಜನವಾಯಿತು. ತಂಡಕ್ಕೆ ರಾಜ್ಯ ಮಟ್ಟದಿಂದ ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ ತಾನ್ಯ ಕೂಡ ಒಬ್ಬರಾಗಿದ್ದು, ಪ್ರಶಂಸನಾ ಪತ್ರ ಪಡೆದುಕೊಂಡಿದ್ದಾರೆ. ಸೋಮವಾರಪೇಟೆಯ ಹಿರಿಯ ಪತ್ರಕರ್ತ ಎಸ್.ಎ.ಮುರಳೀಧರ ಹಾಗೂ ಸರಿತಾ ದಂಪತಿಯ ಪುತ್ರಿ ತಾನ್ಯ ಈ ಹಿಂದೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದ ದಕ್ಷಿಣ ವಲಯ ಆರ್ಡಿ ಕ್ಯಾಂಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಈಕೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಅರಣ್ಯ ಶಾಸ್ತ್ರ ಪದವಿ ವ್ಯಾಸಂಗ…
ಮಡಿಕೇರಿ ಜ.27 NEWS DESK : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ನೀಡಲಾಗುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ, ಬಿಳಿಗೇರಿ ಗ್ರಾಮದ ಅರ್ವತೋಕ್ಲುವಿನ ಬಾಳಾಡಿ ದಿಲೀಪ್ ಕುಮಾರ್ ಆಯ್ಕೆಯಾಗಿದ್ದಾರೆ. ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿರಂತರವಾಗಿ ವಿವಿಧ ಯುವ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ದಿಲೀಪ್ ಕುಮಾರ್ ಅವರು ಸಾಮಾಜಿಕ ಕಳಕಳಿಯನ್ನು ಹೊಂದಿದ್ದರು. ಇವರ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಜ.31ರಂದು ವಿಜಯಪುರದ ಮುದ್ದೆಬಿಹಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿಲೀಪ್ ಕುಮಾರ್ ಅವರು ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷರಾಗಿ, ಪೇರತ ಯುವಕ ಸಂಘದ ಮೂಲಕ ಸದಸ್ಯರಾಗಿ, ಮೈ ಭಾರತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟದ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಮಟ್ಟದ…
ಕೂಡಿಗೆ ಜ.27 NEWS DESK : ಕೊಡಗು ಸೈನಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಜನರಲ್ ತಿಮ್ಮಯ್ಯ ಪೆರೇಡ್ ಮೈದಾನದಲ್ಲಿ ಪ್ರಭಾರೆ ಪ್ರಾಂಶುಪಾರಾದ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್ ಹಾಗೂ ಉಪಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಮೊಹಮ್ಮದ್ ಧ್ವಜಾರೋಹಣ ನೆರವೇರಿಸಿ, ಶಾಲೆಯಲ್ಲಿನ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಮುಖ್ಯ ಅತಿಥಿಗಳು ಭಾರತದ ಸಂವಿಧಾನ ರೂಪಿಸುವಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಅಮೂಲ್ಯ ಕೊಡುಗೆಯನ್ನು ಸ್ಮರಿಸಿದರು. ರಕ್ಷಣಾ ಸಿಬ್ಬಂದಿ ದೇಶದ ರಕ್ಷಣೆ ಹಾಗೂ ಸಮಗ್ರತೆಯಲ್ಲಿ ತೋರಿಸುವ ನಿಸ್ವಾರ್ಥ ಸೇವಾಭಾವನೆಯನ್ನು ಉದಾಹರಿಸಿ, ವೈಯಕ್ತಿಕ ವಿಶ್ರಾಂತಿಗಿಂತ ದೇಶಸೇವೆಯನ್ನು ತಮ್ಮ ಜೀವನದ ಪರಮೋಚ್ಛಗುರಿಯನ್ನಾಗಿ ಹೊಂದಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹಾಗೆಯೇ ಪ್ರಶಸ್ತಿ ಸ್ವೀರಿಸಿದ ಸಿಬ್ಬಂದಿವರ್ಗದವರಿಗೆ ಅಭಿನಂದನೆ ಸಲ್ಲಿಸಿ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಸಮಾರಂಭದಲ್ಲಿ ಶಾಲೆಯ ಪ್ರಥಮ ಮಹಿಳೆ ಶ್ರೀಮತಿ ದಿವ್ಯಾ ಸಿಂಗ್, ಶ್ರೀಮತಿ ಶಾಲಿನಿ ರಾವ್, ಶಾಲಾ ವೈದ್ಯಾಧಿಕಾರಿ, ಹಿರಿಯ ಶಿಕ್ಷಕರು, ಬೋಧಕ-ಬೋಧಕೇತರ ಸಿಬ್ಬಂದಿವರ್ಗ, ಎನ್ಸಿಸಿ ಸಿಬ್ಬಂದಿವರ್ಗ, ದೈಹಿಕ ಶಿಕ್ಷಕರು ಹಾಗೂ…
ನಾಪೋಕ್ಲು ಜ.27 NEWS DESK : ಸ್ಥಳೀಯ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಾಲಾ ಸಂಘಗಳ ಸಮಾರೋಪ ಕಾರ್ಯಕ್ರಮ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಡಾಕ್ಟರ್ ಬಾದ್ ಷಾ ಮಾತನಾಡಿ, ಮಕ್ಕಳ ತಜ್ಞರು ಆಗಮಿಸಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳುತ್ತಾ ಭವಿಷ್ಯದ ಗುರಿಯತ್ತ ಸಾಗುವ ದೃಢ ನಿರ್ಧಾರ ತೆಗೆದುಕೊಂಡು ಸತತ ಪ್ರಯತ್ನದಿಂದ ಯಶಸ್ಸಿನ ಕಡೆಗೆ ಸಾಗಿರಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಕೆ.ಡಿ.ನೀತಾ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಪ್ರಯತ್ನ ಅವರನ್ನು ರೂಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆದ 17 ವರ್ಷದೊಳಗಿನ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಅಮೃತ ಎಂ.ಹೆಚ್ ಮತ್ತು 9ನೇ ತರಗತಿಯ ವಿದ್ಯಾರ್ಥಿ ಮನ್ವಿತ್ ಪಿ.ಜೆ ಈ ಇಬ್ಬರು ವಿದ್ಯಾರ್ಥಿಗಳು…
ಕುಶಾಲನಗರ, ಜ.27 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 77 ನೇ ಗಣರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದಿನದ ಅಂಗವಾಗಿ ವಿವಿಧ ಬಣ್ಣದ ಉಡುಪು ತೊಟ್ಟು ವೇಷಧಾರಿಗಳಾಗಿದ್ದ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಮಕ್ಕಳು ಪ್ರದರ್ಶಿಸಿದ ವೈವಿಧ್ಯಮಯ ಕಲಾ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು. ವಿದ್ಯಾರ್ಥಿಗಳು ವಿವಿಧ ಬಣ್ಣದ ಸೀರೆಗಳನ್ನು ಬಳಸಿಕೊಂಡು ಆಕರ್ಷಕವಾಗಿ ಪ್ರದರ್ಶಿಸಿದ ಸೀರೆ ನೃತ್ಯ ಗಮನ ಸೆಳೆಯಿತು. ಇದೇ ವೇಳೆ ಮಕ್ಕಳು ಪ್ರದರ್ಶಿಸಿದ ಯೋಗಾಭ್ಯಾಸ ಪ್ರದರ್ಶನ ಹಾಗೂ ಕೋಲಾಟ ಮತ್ತು ನೃತ್ಯ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು. ಸಂವಿಧಾನ ರಚನೆ ಮತ್ತು ಗಣತಂತ್ರ ವ್ಯವಸ್ಥೆ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ, ಸ್ವಾತಂತ್ರ್ಯದ ನಂತರ ಸಂವಿಧಾನ ರಚನಾ ಸಭೆಯ ಕರಡು ಸಮಿತಿ ಅಧ್ಯಕ್ಷರಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಶ್ರಮ ಅಪಾರವಾದುದು. ಪ್ರಜಾಸತ್ತಾತ್ಮಕ ಹಾಗೂ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದ ಸಂವಿಧಾನವು ಪ್ರಜಾತಂತ್ರ ವ್ಯವಸ್ಥೆಯ ಜೀವಾಳ ಎಂದು…
ಗೋಣಿಕೊಪ್ಪ ಜ.27 NEWS DESK : ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲೂಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಪ್ರಮೋದ್ ಗಣಪತಿ, ಭಾರತ ನಿರ್ಮಾಣಕ್ಕೆ ಹೋರಾಡಿದ ಮಾನ್ಯರನ್ನು ನೆನೆಸಿಕೊಳ್ಳುವುದು ಅಗತ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೇಶಕಟ್ಟಿದ ನಾಯಕರನ್ನು ನಿರ್ಧಾಕ್ಷೀಣ್ಯವಾಗಿ ಬಿಂಬಿಸುತ್ತಿರುವುದು ವೇದನೆಯ ವಿಚಾರ. ಇಂತಹ ಘಟನೆಗಳಿಗೆ ಮಕ್ಕಳ ಮನಸ್ಸುಗೊಂದಲಕ್ಕೆ ಒಳಗಾಗಬಾರದು ನೈಜ ವಿಚಾರವನ್ನು ಅರಿತು ಭಾರತೀಯ ಎಂಬ ಹೆಮ್ಮೆಯನ್ನು ಎತ್ತಿ ಹಿಡಿಯಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಅಭಿವೃದ್ಧಿ ಮತ್ತು ಮೇಲುಉಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ಜೋಡುಬೀಟಿ, ಗಣತಂತ್ರದೇಶವನ್ನು ಪ್ರಪಂಚದಲ್ಲಿ ಎತ್ತಿ ಹಿಡಿಯುವ ಮೂಲಕ ಈ ದೇಶದ ಪ್ರಗತಿ ಮತ್ತು ಆರ್ಥಿಕತೆಯಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಭಾರತ ಸ್ವ್ವಾತಂತ್ಯ್ರಗೊಂಡ ನಂತರ ತನ್ನ ಅಸ್ತಿತ್ವಕ್ಕಾಗಿ ಸಂವಿಧಾನವನ್ನು ರಚಿಸಲಾಯಿತು. ಈ ಮೂಲಕ ಸಮಾನತೆಯನ್ನು…
ಸುಂಟಿಕೊಪ್ಪ ಜ.27 NEWS DESK : ಆಟೋಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಕಂಬಿಬಾಣೆಯ ಕಾಫಿ ಬೆಳೆಗಾರ ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಅವರು ನಿರ್ಮಿಸಿಕೊಟ್ಟ ಆಟೋ ನಿಲ್ಧಾಣದ ಸ್ವಾಗತ ಕಮಾನ್ ಅನ್ನು ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಉದ್ಘಾಟಿಸಿ ಮಾತನಾಡಿ, ಗಣರಾಜ್ಯೋತ್ಸವ ಅಂಗವಾಗಿ ಆಟೋಚಾಲಕ ಮತ್ತು ಮಾಲೀಕರ ಸಂಘದವರು ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು, ಒಂದು ಮಾದರಿ ಕಾರ್ಯಕ್ರಮ ಆಟೋ ನಿಲ್ಧಾಣದ ಜಾಗವನ್ನು ಎದ್ದು ಕಾಣುವ ರೀತಿಯಲ್ಲಿ ನಾಮಫಲಕ ಅಳವಡಿಸಿದ್ದು, ಶ್ಲಾಘನೀಯ. ಹಗಲು ರಾತ್ರಿ ಎನ್ನದೇ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿರುವ ಆಟೋಚಾಲಕರು ಸಮಾಜಮುಖಿಯಾದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸುನಿಲ್ಕುಮಾರ್ ಅಭಿಮಾನದಿಂದ ನುಡಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಸಹಸ್ರಹಾರು ಜನರ ತ್ಯಾಗ ಬಲಿದಾನದಿಂದ ನಾವು ಸ್ವಾತಂತ್ರ್ಯವನ್ನು ಗಳಿಸಿದ್ದೇವೆ. ನಮ್ಮದೆಯಾದ ಸಂವಿಧಾನವನ್ನು ಹೊಂದಿ ಬಲಿಷ್ಠ ಮತ್ತು ಸಧೃಡ ಭಾರತವನ್ನು ಕಟ್ಟುವ ನಿಟ್ಟಿನಲ್ಲಿ ನಾವೆಲ್ಲಾರೂ ಕೈಜೋಡಿಸಿಬೇಕು, ಸಂವಿಧಾನವನ್ನು ಸಮಾನತೆ ಸಾಮರಸ್ಯ ಮತ್ತು ಬಾತೃತ್ವ ನೆಲೆಗಟ್ಟಿನಲ್ಲಿ ರಚಿಸಲಾಗಿದೆ.…
ನಾಪೋಕ್ಲು ಜ.27 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ಸಂಸ್ಥೆಯ ನಿರ್ದೇಶಕ ಪ್ರೊ.ಕಲ್ಯಾಟಂಡ ಪೂಣಚ್ಚ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಂದ ಧ್ವಜವಂದನೆಯನ್ನು ಸ್ವೀಕರಿಸಿದರು. ನಂತರ ಎನ್ಸಿಸಿ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ನಿರ್ದೇಶಕ ಪ್ರೊ.ಕಲ್ಯಾಟಂಡ ಪೂಣಚ್ಚ ಸಂವಿಧಾನದ ಆಶಯ ಭದ್ರತೆಯ ಕುರಿತು ಮಾತನಾಡಿದರು. ಪ್ರಾಂಶುಪಾಲರಾದ ಬಿ.ಎಂ.ಶಾರದಾ, ಶಿಕ್ಷಕಿ ಎಂ.ಎ.ಲೀಲಾವತಿ ದಿನದ ಮಹತ್ವದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ಅಪ್ಪ ಚೆಟ್ಟೋಳಂಡ ನವೀನ್ ಅಪ್ಪಯ್ಯ, ಚೌರಿರ ಮಂದಣ್ಣ, ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಮನೋರಂಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು. ವಿದ್ಯಾರ್ಥಿ ಎಂ.ಹೆಚ್.ಜೀವನ್ ಸ್ವಾಗತಿಸಿದರು. ಕೆ.ಪಿ.ಸೋನಾಲ್ ವಂದಿಸಿದರು. ವರದಿ : ದುಗ್ಗಳ ಸದಾನಂದ.






