ಸೋಮವಾರಪೇಟೆ ಮಾ.16 NEWS DESK : ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತು ಪರಿಶ್ರಮಪಟ್ಟು ವಿದ್ಯಾಭ್ಯಾಸ ಮಾಡಬೇಕು ಎಂದು ಸೋಮವಾರಪೇಟೆಯ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸೋಮವಾರಪೇಟೆ ಎಸ್.ಜೆ.ಎಂ ಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ಸಿದ್ದತೆಯ ಬಗ್ಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಕರು ಮಾಡುವ ಪಾಠವನ್ನು ಗಮನದಿಂದ ಕೇಳಿ ಕಲಿಕೆಯಲ್ಲಿ ಮುನ್ನಡೆಯಬೇಕು. ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಸಂಸ್ಕಾರವನ್ನು ಕೂಡ ಕಲಿಸಿಕೊಡುತ್ತವೆ ಎಂದರು. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಿಂದ ದೂರವಿದ್ದು ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಸಮಯ ಸಿಕ್ಕಾಗ ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಂಡರೆ ಸಾಮಾನ್ಯ ಜ್ಞಾನವೂ ಹೆಚ್ಚುತ್ತದೆ ಎಂದು ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಎದುರಿಸಬೇಕು. ಪರೀಕ್ಷೆ ಜೀವನದ ಮಹತ್ವದ ಹಂತವಾಗಿದ್ದು ಶ್ರಮಪಟ್ಟು ಓದಿ…
ಲೇಖಕ: admin
ಸೋಮವಾರಪೇಟೆ ಮಾ.16 NEWS DESK : ಶ್ರೀ ಆಂಜನೇಯಸ್ವಾಮಿ ದೇವಾಲಯ ಸಮಿತಿ ವತಿಯಿಂದ ಮಾ.27 ರಂದು ಅರ್ಥಪೂರ್ಣವಾಗಿ ಶ್ರೀ ರಾಮನವಮಿ ಉತ್ಸವ ಆಚರಿಸಲಾಗುವುದು ಎಂದು ಶ್ರೀ ಆಂಜನೇಯ ದೇವಾಲಯ ಸಮಿತಿ ಅಧ್ಯಕ್ಷ ಸಿ.ಪಿ.ಗೋಪಾಲ್ ಹೇಳಿದರು. ಮಾ.19 ರಿಂದ 27 ರ ತನಕ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ 6 ಗಂಟೆಯಿಂದ 8 ಗಂಟೆ ತನಕ ವಿಶೇಷ ಪೂಜೆ ನಡೆಯಲಿದೆ. 19 ರಿಂದ ದಿನಕ್ಕೊಂದರಂತೆ ಶ್ರೀಗಂಧ, ವಿಳ್ಯೆದೆಲೆ, ಬೆಣ್ಣೆ, ಕೇಸರಿ, ತುಳಸಿ, ಕುಂಕುಮ, ಹೂವಿನ ಮತ್ತು ಮುತ್ತಿನ ಆಲಂಕಾರರನ್ನು ಶ್ರೀರಾಮನ ಉತ್ಸವ ಮೂರ್ತಿಗೆ ಮಾಡಿ ಪೂಜೆ ಸಲ್ಲಿಸಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 27 ರ ಸಂಜೆ 6 ಗಂಟೆಯಿಂದ ಶ್ರೀ ರಾಮಾಂಜನೇಯೋತ್ಸವ ಮೆರವಣಿಗೆ ಪಟ್ಟಣದ ನಿಗದಿತ ರಸ್ತೆಯಲ್ಲಿ ನಡೆಯಲಿದೆ. ಕಳೆದ 60 ವರ್ಷಗಳಿಂದಲೂ ಅಂಜನೇಯ ದೇವಾಲಯದಲ್ಲಿ ರಾಮನವಮಿ ಆಚರಿಸಿ, ಮೆರವಣಿಗೆ ಮಾಡಲಾಗುತ್ತಿದೆ. 27 ರಂದು ಪಾನಕ ವಿತರಣೆ, ಅನ್ನದಾನ ನಡೆಯಲಿದೆ ಎಂದು ಹೇಳಿದರು. ಅಂದಾಜು 4.50 ಕೋಟಿ ರೂ.ಗಳ ವೆಚ್ಚದಲ್ಲಿ ಆಂಜನೇಯ ದೇವಾಲಯದ…
ಮಡಿಕೇರಿ NEWS DESK ಮಾ.16 : ಜಿಲ್ಲೆಯಲ್ಲಿ ಗೃಹಬಳಕೆ ಎಲ್ಪಿಜಿ ಸಿಲಿಂಡರ್ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಗ್ರಾಹಕರುಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಯಾವುದೇ ಆತಂಕಕ್ಕೆ ಒಳಗಾಗದೇ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಬುಕ್ ಮಾಡಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ. ಅಡುಗೆ ಅನಿಲವನ್ನು ಮಿತ ಬಳಕೆ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿದ್ದು, ಎಂದಿನoತೆ ಎಲ್ಪಿಜಿ ವಿತರಕರು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡಲಿದ್ದಾರೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಎಲ್ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಅಗತ್ಯವಿರುವ ಪ್ರಮಾಣದಲ್ಲಿ ಗ್ಯಾಸ್ ಸಿಲಿಂಡರ್ ಪಡೆಯಬಹುದು. ಗೃಹ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ವಿತರಣೆಯಲ್ಲಿ ಏನಾದರೂ ಕುಂದುಕೊರತೆಗಳು ಕಂಡುಬAದಲ್ಲಿ…
ಮಡಿಕೇರಿ NEWS DESK ಮಾ.16 : ಕೊಡಗು ಜಿಲ್ಲೆಯ 2026-27 ನೇ ಸಾಲಿಗೆ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಆಸಕ್ತಿಯುಳ್ಳ ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಗೆ (ಎನ್.ಜಿ.ಓ) ಆಸಕ್ತ ಅಭಿವ್ಯಕ್ತಿ ಸ್ವ-ಇಚ್ಛೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ “Expression of Interest’’ ಅನ್ನು ಮಾರ್ಚ್, 13 ರಿಂದ 23 ರವರೆಗೆ ಕರೆಯಲಾಗಿದ್ದು, ಹೆಚ್ಚಿನ ಮಾಹಿತಿಗೆ https://kppp.karnataka.gov.in/ ಅಲ್ಲಿ ನೋಡಬಹುದಾಗಿದೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ ವಿಳಾಸ: dbcskodagu@gmail.com ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಅವರು ಕೋರಿದ್ದಾರೆ.
ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸದಸ್ಯ, ಮಡಿಕೇರಿ ಪುರಸಭೆಯ ಮಾಜಿ ಉಪಾಧ್ಯಕ್ಷ ಹಾಗೂ ಗಾಯಕ ನಗರದ ಹಿಲ್ ರೋಡ್ ನಿವಾಸಿ ಲಿಯಾಕತ್ ಆಲಿ (69) ಅವರು ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರ ಸಂಜೆ ನಗರದ ರಾಣಿಪೇಟೆಯಲ್ಲಿರುವ ಖಬರಸ್ಥಾನದಲ್ಲಿ ನಡೆಯಿತು. ಉತ್ತಮ ಗಾಯಕರಾಗಿದ್ದ ಲಿಯಾಕತ್ ಆಲಿ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ, ಹಲವು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಿಸಿಕೊಂಡಿದ್ದರು. ನಗರದ ರಾಜಾಸೀಟು ಮಾರ್ಗದ ಬಳಿಯ ಉದ್ಯಾನವನದಲ್ಲಿ ರಾಷ್ಟ್ರ ಕವಿ ಕುವೆಂಪು ಅವರ ಪುತ್ಥಳಿಯ ಸ್ಥಾಪನೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ಬೆಂಬಲಿಗರಾಗಿದ್ದ ಲಿಯಾಕತ್ ಆಲಿ ಹಲವು ವರ್ಷಗಳ ಕಾಲ ರಾಜಕೀಯವಾಗಿಯೂ ಗುರುತಿಸಿಕೊಂಡಿದ್ದರು. *ಕಸಾಪ ಸಂತಾಪ* ಸ್ನೇಹಜೀವಿ ಲಿಯಾಕತ್ ಆಲಿ ಅವರ ನಿಧನಕ್ಕೆ…
ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವವು ತಾ. 21ರಿಂದ 23 ರವರೆಗೆ ವಿಶೇಷ ಪೂಜೆಗಳು ನಡೆಯಲಿದೆ ಎಂದು ಶ್ರೀ.ಚಾಮುಂಡೇಶ್ವರಿ ಮತ್ತು ಶ್ರೀಮುತ್ತಪ್ಪ ದೇವಸ್ಥಾನ ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶನಿವಾರ ದಂದು ಬೆಳಿಗ್ಗೆ 6.30 ಗಂಟೆಗೆ ಗಣಪತಿ ಹವನ 7.15 ಗಂಟೆಗೆ ಶುದ್ಧಿ ಪುಣ್ಯಾಹ, 7.30 ಗಂಟೆಗೆ ಬಾವುಟವನ್ನು ಏರಿಸುವುದು, ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ರಾತ್ರಿ 6 ಗಂಟೆಗೆ ಚಂಡೆಮೇಳ, 7. ಗಂಟೆಗೆ ಶ್ರೀಮುತ್ತಪ್ಪ ವೆಳ್ಳಾಟಂ ನಡೆಯಲಿದೆ. ತಾ.22 ಭಾನುವಾರ ದಂದು ಬೆಳಿಗ್ಗೆ 7 ಗಂಟೆಗೆ ವಾದ್ಯಮೇಳ, 11 ಗಂಟೆಗೆ ಶ್ರೀ.ಶಾಸ್ತಪ್ಪನ ವೆಳಾಳಟಂ,ಮಧ್ಯಾಹ್ನ 1 ಗಂಟೆಗೆ ಶ್ರೀ ಗುಳಿಗವೆಳ್ಳಾಟಂ, ಸಂಜೆ 4 ಗಂಟೆಗೆ ಅಡಿಯರ ಮೆರವಣಿಗೆ, ರಾತ್ರಿ 7 ಗಂಟೆಗೆ ಶ್ರೀ. ಮುತ್ತಪ್ಪ ವೆಳ್ಳಾಟಂ, 8 ಗಂಟೆಗೆ ಶ್ರೀ. ಚಾಮುಂಡೇಶ್ವರಿ ಮತ್ತು ಶ್ರೀ ರಕ್ತ…
ಮಡಿಕೇರಿ NEWS DESK ಮಾ.15 : ನೂರಾರು ವರ್ಷಗಳ ಇತಿಹಾಸವಿರುವ ಕೊಡಗು ಜಿಲ್ಲೆಯ ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ವಿಶೇಷ ಆಸಕ್ತಿಯಿಂದ ಯೋಜನೆ ರೂಪಿಸಲಾಗಿದೆ. ಸರಕಾರದಿಂದ ರೂ.1.20 ಕೋಟಿ ಅನುದಾನವನ್ನು ಒದಗಿಸುವ ಮೂಲಕ ಐತಿಹಾಸಿಕ ಹಿನ್ನೆಲೆಯ ಸಾಂಸ್ಕೃತಿಕ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದೆ. ಈ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ ಗ್ರಾಮೀಣ ಭಾಗದಲ್ಲಿರುವ ಸುಗ್ಗಿ ಕಟ್ಟೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ಅನುದಾನ ಒದಗಿಸಲಾಗಿದೆ. ನಗರಳ್ಳಿ, ಕೂತಿ, ತೋಳೂರುಶೆಟ್ಟಳ್ಳಿ, ಕುಮಾರಳ್ಳಿ ಬಾಚಳ್ಳಿ, ಶಾಂತಳ್ಳಿ-ತಲ್ತರೆಶೆಟ್ಟಳ್ಳಿ, ಹಾನಗಲ್ಲು ಶೆಟ್ಟಳ್ಳಿ, ಯಡೂರು, ಚೌಡ್ಲು, ಕೊಡ್ಲಿಪೇಟೆ, ದುಂಡಳ್ಳಿ-ಮಾದ್ರೆ, ವಾಲ್ನೂರು-ತ್ಯಾಗತ್ತೂರು, ತಾಕೇರಿ ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ತಲಾ 10 ಲಕ್ಷದಂತೆ ಒಟ್ಟು ರೂ 1.20 ಕೋಟಿ ಅನುದಾನ ಮೀಸಲಿಡಲಾಗಿದೆ. ಯಡೂರು ಸುಗ್ಗಿಕಟ್ಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಕಾಮಗಾರಿಗೆೆ ಭೂಮಿಪೂಜೆ ನೆರವೇರಿಸಿದರು. ಸುಗ್ಗಿ ಕಟ್ಟೆಗಳ ಇತಿಹಾಸವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು. ಸ್ಥಳೀಯ ಜನಪ್ರತಿನಿಧಿಗಳು,…
ಸುಂಟಿಕೊಪ್ಪ NEWS DESK ಮಾ.15: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು ಖಾಸಗಿ ಹೋಟೆಲ್ವೊಂದರ ಸಭಾಂಗಣದಲ್ಲಿ ನಡೆಸಲಾಯಿತು. ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಎಂ.ಕೆ.ವಾಸು ರೈ, ಕುಶಾಲನಗರ ತಾಲೂಕು ಕಸಾಪದ ಸಂಘಟನಾ ಕಾರ್ಯದರ್ಶಿ ಗುಡ್ಡೆಮನೆ ಹರೀಶ್, ನಿರ್ದೇಶಕರಾದ ಬಿ.ಸಿ.ದಿನೇಶ್ ಕಸಾಪದ ಹಿರಿಯ ಸದಸ್ಯರುಗಳಾದ ಲೀಲಾಮೇದಪ್ಪ, ಕೆ.ಪಿ.ಜಗನ್ನಾಥ್,ಸುಂಟಿಕೊಪ್ಪ ಹೋ.ಕಸಾಪ ನಿಕಟಪೂರ್ವ ಅಧ್ಯಕ್ಷ ವಹೀದ್ಜಾನ್ ಮತ್ತಿತರರು ಪಾಲ್ಗೊಂಡಿದ್ದರು. ಸಭೆಯಲ್ಲಿ ಸಮ್ಮೇಳನ ನಡೆಸುವ ಕುರಿತು ವಿಸೃತವಾದ ಚರ್ಚೆ ವಿವಿಧ ಉಪಸಮಿತಿಗಳ ರಚನೆ ಹಾಗೂ ಇನ್ನಿತರ ವಿಷಯ ಕುರಿತು ಚರ್ಚಿಸಲು ಮಾ.24 ರ ಮಂಗಳವಾರದoದು ಪೂರ್ವಬಾವಿ ಸಭೆಯನ್ನು ಸುಂಟಿಕೊಪ್ಪ ಕೊಡವ ಸಮಾಜ ಸಭಾಂಗಣದಲ್ಲಿ ನಡೆಸಲು ತಿರ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಸಾಪದ ಹಿರಿಯ ಸದಸ್ಯ…
ಮಡಿಕೇರಿ NEWS DESK ಮಾ.15 : ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವಾದ ಮಾ.21 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ “ವಿಚಾರ ಸಂಕಿರಣ” ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಆನಿಮಿಸ್ಟಿಕ್ ಕೊಡವರಿಗಾಗಿ ಸಂವಿಧಾನದ ಅಡಿಯಲ್ಲಿ “ಭೂ-ರಾಜಕೀಯ ಸ್ವಾಯತ್ತತೆ” ಮತ್ತು “ವಿಶೇಷ ಸ್ಥಾನಮಾನ”ಕ್ಕಾಗಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಂಡಿರುವ “ಕೊಡವ ಕ್ವೆಸ್ಟ್” ವಿಚಾರ ಸಂಕಿರಣದಲ್ಲಿ ಶಾಸನ ರೂಪಿಸುವವರು, ನ್ಯಾಯವಾದಿಗಳು ಹಾಗೂ ಶಿಕ್ಷಣ ತಜ್ಞರು ಹಕ್ಕೊತ್ತಾಯದ ಕುರಿತು ಚರ್ಚಿಸಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಭಾರತದ ಈಶಾನ್ಯ ರಾಜ್ಯಗಳಿಗೆ 244 ಮತ್ತು 371 ನೇ ವಿಧಿಗಳಡಿಯಲ್ಲಿ ನೀಡಲಾಗಿರುವ ಮಾದರಿಯಲ್ಲೇ, ಅಲ್ಪಸಂಖ್ಯಾತ ಸೂಕ್ಷö್ಮ ಕೊಡವ ಜನಾಂಗದ ಭೂಮಿ, ಎಸ್ಟಿ ಜನಾಂಗೀಯ ವರ್ಗೀಕರಣ, ಕೊಡವರ ಧಾರ್ಮಿಕ ಸಂಸ್ಕಾರವಾದ ಸಾಂಪ್ರದಾಯಿಕ ಬಂದೂಕು ಹಕ್ಕು, ಭಾಷೆ, ಸಾಂಸ್ಕೃತಿಕ ಪರಂಪರೆ, ಸಾಂಪ್ರದಾಯಿಕ ಕಾನೂನು ಹಾಗೂ ಆರ್ಥಿಕ ಮತ್ತು ರಾಜಕೀಯ…
ಮಡಿಕೇರಿ NEWS DESK ಮಾ.15 : ಇದೇ ಮಾಚ್೯ 16 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ವತಿಯಿಂದ ಇದೇ ಮೊದಲ ಬಾರಿಗೆ ಕೊಡಗಿನಲ್ಲಿ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿತವಾಗಿದೆ. ಕ್ರೀಡಾಕೂಟದಲ್ಲಿ 150 ವಿಶೇಷ ಕ್ರೀಡಾಥಿ೯ಗಳು ಪಾಲ್ಗೊಳ್ಳಲಿದ್ದಾರೆ ಎಂದು ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ನಿರ್ದೇಶಕರಾದ ಆರತಿ ಸೋಮಯ್ಯ ತಿಳಿಸಿದ್ದಾರೆ.






