ಲೇಖಕ: admin

ಮಡಿಕೇರಿ NEWS DESK ಆ.19 : ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಕೇವಲ ಪ್ರಚಾರಕ್ಕಾಗಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಘಟಕದ ರಾಜ್ಯ ಕಾರ್ಯದರ್ಶಿ ಎಂ.ಈ.ಅಶ್ರಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಿಂದ ಹತಾಶಗೊಂಡಿರುವ ಜೆಡಿಎಸ್ ಪಕ್ಷದ ಮುಖಂಡರೆನಿಸಿಕೊಂಡಿರುವ ಕೆಲವರು ರಾಜಕೀಯ ನಿರುದ್ಯೋಗದಿಂದ ಹೊರ ಬರಲು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರ ಕಾರ್ಯವೈಖರಿಯನ್ನು ಮೆಚ್ಚಿ ಜೆಡಿಎಸ್ ನ ಅನೇಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಮತ್ತು ಶಾಸಕರುಗಳಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಮತ್ತಷ್ಟು ಮಂದಿ ಕಾಂಗ್ರೆಸ್ ಗೆ ಬರಲು ಕಾಯುತ್ತಿದ್ದಾರೆ. ಇದನ್ನು ಸಹಿಸದ ಜೆಡಿಎಸ್ ನ ಅಲ್ಪಸಂಖ್ಯಾತರ ಘಟಕ ಜನರ ಹಾದಿ ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದೆ. ಅಲ್ಪಸಂಖ್ಯಾತರ ಹಿತ ಕಾಯುವಲ್ಲಿ ಕಾಂಗ್ರೆಸ್ ಪಕ್ಷ ಮುಂಚೂಣಿಯಲ್ಲಿದೆ. ಜಿಲ್ಲೆಯ…

Read More

ಮಡಿಕೇರಿ ಆ.19 NEWS DESK : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಒಳಚರಂಡಿ ಅಭಿವೃದ್ಧಿ ನಿಗಮ ಹಾಗೂ ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಉದ್ಘಾಟಿಸಿ ಮಾತನಾಡಿ, ಸ್ಪರ್ಧಾತ್ಮಕ ಪ್ರಪಂಚದಲ್ಲಿ ದಿನನಿತ್ಯ ಹಲವರು ಪ್ರತಿಭೆಗಳು ಹೊರ ಹೊಮ್ಮುತ್ತಿದ್ದಾರೆ, ಈ ಕಲೆಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ಡಾ.ಹೆಚ್.ಎಂ.ರಘು ಕೋಟಿ ವಹಿಸಿ ಮಾತನಾಡಿ, ತಮ್ಮ ಪ್ರತಿಭೆ ಹೊರ ಹೊಮ್ಮಲು ಯಾವುದೇ ಪದವಿಗಳ ಅವಶ್ಯಕತೆ ಇಲ್ಲ ಅದು ಸುಪ್ತ ಮನಸ್ಸಿನಿಂದ ಹೊರ ಹೊಮ್ಮಿ ಜಗತ್ತಿಗೆ ಅನಾವರಣಗೊಳ್ಳುತ್ತದೆ. ತಮಗೊಲಿದ ಕಲೆಯನ್ನು ನಿಷ್ಠೆಯಿಂದ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಘು ಕೋಟಿ ಹೇಳಿದರು. ಹಿರಿಯ ಸಾಹಿತಿ ಭಾರದ್ವಾಜ್.ಕೆ. ಅನಂತ ತೀರ್ಥ ಅವರು ಸಾಹಿತ್ಯದ ನುಡಿಗಳನ್ನು ನುಡಿದರು, ಕಾವ್ಯ ಕವಿತೆಯಲ್ಲಿ ಆಸಕ್ತಿ ಇರುವವರು…

Read More

ವಿರಾಜಪೇಟೆ ಆ.19 NEWS DESK : ಶ್ರೀ ಕೃಷ್ಣ ಜನ್ಮಾಷ್ಠಮಿಯು ನಮ್ಮ ಇತಿಹಾಸ ಮತ್ತು ಸಂಸ್ಕøತಿಯಲ್ಲಿ ಬಹಳ ಮಹತ್ವತೆಯನ್ನು ಪಡೆದಿದೆ ಎಂದು ಶಿಕ್ಷಕರಾದ ವಿ.ಟಿ. ವೆಂಕಟೇಶ್ ಹೇಳಿದರು. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬಾಲಾಂಜನೇಯ ದೇವಾಸ್ಥಾನದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿ ವರ್ಷ ಇಡೀ ಜಗತ್ತು ಕೃಷ್ಟ ಜನ್ಮಾಷ್ಟಮಿ ಆಚರಿಸುತ್ತದೆ. ಮನೆ ಹಿರಿಯರನ್ನೂ ಮಕ್ಕಳೊಂದಿಗೆ ಮಕ್ಕಳಂತೆ ಸಂತೋಷ ಪಟ್ಟುಕ್ಕೊಳ್ಳಲು ಉತ್ತಮ ಅವಕಾಶವಾಗಿದೆ. ಮಕ್ಕಳಿಗೆ ಶಾಲೆಯ ವಿಷಯಗಳಿಂದ ಭಿನ್ನವಾಗಿ ತಮ್ಮನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವ ಕಾರ್ಯಕ್ರಮ ಎಂದರು. ಸಾಹಿತಿಗಳು, ವಿರಾಜಪೇಟೆ ತಾಲೂಕು ಕದಳಿ ವೇದಿಕೆ ಅಧ್ಯಕ್ಷೆ ರಜಿತ ಕಾರ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ರಾಮಾಯಣ ಮಹಾಭಾರತದಂತಹ ಕಾವ್ಯಗಳನ್ನು ಹೆಚ್ಚು ಹೆಚ್ಚಾಗಿ ಓದಿ ಅದರಲ್ಲಿರುವ ತತ್ವಸಾರವನ್ನು ತಿಳಿದು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ವಿಚಾರಗಳು ಪ್ರಸ್ತುತ ಕೃಷ್ಣನ ಬದುಕಿನ ಕಥೆಗಳು ನಮ್ಮ ಜೀವನಕ್ಕೂ ಪ್ರೇರಣೆಯಾಗಲಿದೆ. ಇದರ ಸಾರವನ್ನು…

Read More

ನಾಪೋಕ್ಲು ಆ.19 NEWS DESK : ಗ್ರಾಮೀಣ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಿಗುವ ಶಿಕ್ಷಣ ಪ್ರಮುಖವಾದದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭಗೊಂಡ ಎಲ್. ಕೆ. ಜಿ ಹಾಗೂ ಯು. ಕೆ. ಜಿ. ತರಗತಿ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಣದ ಭಧ್ರ ಅಡಿಪಾಯವನ್ನು ಹಾಕಬೇಕಿದೆ.ಅದು ಅಂಗನವಾಡಿ ಕೇಂದ್ರಗಳ ಮುಖಾಂತರ ಆಗಬೇಕಿದ್ದು, ಎಳೆಯ ವಯಸ್ಸಿನಿಂದಲೇ ಮಕ್ಕಳು ಶಿಸ್ತನ್ನು ಕಲಿಯಬೇಕು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ತರಬೇತಿ ನೀಡಬೇಕು. ಆ ಮೂಲಕ ಶಿಸ್ತುಬದ್ಧ ಬದುಕನ್ನು ರೂಪಿಸುವಂತಾಗಬೇಕು ಎಂದರು. ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವುದು, ಸರ್ಕಾರದ ಆಶಯ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ,ಯುಕೆಜಿ ಅನ್ನು ಪ್ರಾರಂಭಿಸಲಾಗುವುದು .ವಿರಾಜಪೇಟೆ ತಾಲೂಕಿನ ಕೆಲವೆಡೆ ಎಲ್ ಕೆಜಿ,ಯುಕೆಜಿ ಅನ್ನು ಈಗಾಗಲೇ ಆರಂಭಿಸಲಾಗಿದೆ ಮಡಿಕೇರಿ ತಾಲೂಕಿನ ನಾಪೋಕ್ಲುವಿನಲ್ಲಿ ಇದೀಗ…

Read More

ಮಡಿಕೇರಿ NEWS DESK ಆ.18 : ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ, ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆ.19 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಮಡಿಕೇರಿ ತಾಲ್ಲೂಕು ಮತ್ತು ದಕ್ಷಿಣ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲಾ ವ್ಯಾಪಿ ಮೈಕೊರೆಯುವ ಚಳಿ ಇದೆ. ಮಂಜು ಕವಿದ ವಾತಾವರಣದಿಂದ ತಿರುವಿನ ರಸ್ತೆಗಳಲ್ಲಿ ವಾಹನ ಚಾಲನೆ ಕಷ್ಟವಾಗುತ್ತಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಕೆಎಸ್‌ಆರ್‌ಟಿಸಿ ಬಸ್ ವೊಂದು ಬರೆಗೆ ಗುದ್ದಿದ ಘಟನೆ ಮುಟ್ಲು ಗ್ರಾಮದಲ್ಲಿ ನಡೆದಿದೆ. ಮರಳು ತುಂಬಿದ ಲಾರಿಯೊಂದು ಮಗುಚಿದ ಘಟನೆ ಮಡಿಕೇರಿ ಸಮೀಪ ಕೂಟುಹೊಳೆ ರಸ್ತೆಯಲ್ಲಿ ನಡೆದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಕತ್ತಲೆಕಾಡು ಗ್ರಾಮದಲ್ಲಿ ಮತ್ತು ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ತ್ಯಾಗತ್ತೂರು ಚೆಟ್ಟಳ್ಳಿ ರಸ್ತೆಯಲ್ಲಿ ಬೃಹತ್ ಮರಗಳು ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.…

Read More

ಮಡಿಕೇರಿ NEWS DESK ಆ.18 : ನಗರದ ತಾಳತ್ತಮನೆ ನಿವಾಸಿಯಾದ ರಾಬಿನ್ ಕೆ. ಜೆ ಅವರು ಸಂತ ಫಿಲೋಮಿನಾ ಕಾಲೇಜು (ಸ್ವಾಯುತ್ತ) ಮೈಸೂರಿನ ಸಹ ಪ್ರಾಧ್ಯಾಪಕರಾದ ಡಾ. ನೂರ್ ಮುಬಾಶಿರ್ ಅವರ ಮಾರ್ಗದರ್ಶನದಲ್ಲಿ “A Study on Suicide Ideation Among Adolescent Students of Kodagu District” (ಕೊಡಗು ಜಿಲ್ಲೆಯ ಹದಿಹರೆಯದ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆಯ ಆಲೋಚನೆಗಳ ಕುರಿತು ಅಧ್ಯಯನ) ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಆಂಗ್ಲ ಭಾಷೆಯಲ್ಲಿ ಮಹಾಪ್ರಬಂಧವನ್ನು ಸಮಾಜ ಕಾರ್ಯ ವಿಷಯದಲ್ಲಿ ಪಿಹೆಚ್.ಡಿ ಪದವಿಗಾಗಿ ಮೈಸೂರು ವಿಶ್ವವಿದ್ಯಾನಿಲಯದ ಪಿಹೆಚ್.ಡಿ ನಿಯಮಾವಳಿಯಡಿಯಲ್ಲಿ ಅಂಗಿಕರಿಸಲಾಗಿದೆ. ಇವರು ಸಂತ ಫಿಲೋಮಿನಾ ಕಾಲೇಜು (ಸ್ವಾಯುತ್ತ), ಮೈಸೂರು ಇಲ್ಲಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ, ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ದಿವಂಗತ. ಕೆ. ಎಂ. ಜೇಮ್ಸ್ (ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ) ಮತ್ತು ದಿವಂಗತ ಫಿಲೋಮಿನಾ ಜೇಮ್ಸ್ ಅವರ ಪುತ್ರ. ಇವರ ಅಣ್ಣ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಪತ್ನಿ…

Read More

ಬೆಂಗಳೂರು NEWS DESK ಆ.18 : ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ಪ್ರಶಸ್ತಿಗೆ ಪಾತ್ರರಾದ ಹಿರಿಯ ಪತ್ರಕರ್ತರು ಮತ್ತು ಪ್ರಗತಿಪರ ಚಿಂತಕರಾದ ಕಲ್ಲೆ ಶಿವೋತ್ತಮ ರಾವ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಮುಖ್ಯಮಂತ್ರಿಗಳಾಗಿದ್ದ ದೇವರಾಜ್ ಅರಸ್ ಅವರ ಚಿಂತಕರ ಚಾವಡಿಯಲ್ಲಿದ್ದ ಕಲ್ಲೆ ಅವರು    ಅರಸು ಅವರ ಅನೇಕ ಕ್ರಾಂತಿಕಾರಿ ಕಾರ್ಯಕ್ರಮಗಳ ಹಿಂದಿನ ಪ್ರೇರಕಶಕ್ತಿಯಾಗಿದ್ದರು. ಕಲ್ಲೆ ಅವರು ಸಂಪಾದಕರಾಗಿದ್ದ ಆಗಿನ ಜನಪ್ರಿಯ ವಾರಪತ್ರಿಕೆ ‘ಜನಪ್ರಗತಿ’ ನಾಡಿನ ರಾಜಕೀಯ, ಸಾಹಿತ್ಯ ಮತ್ತು ಸಾಂಸ್ಕೃತಿಕ ವಿದ್ಯಮಾನಗಳ ಮುಖವಾಣಿಯಾಗಿತ್ತು. ನಾಡಿನ ಅನೇಕ ಪ್ರಮುಖ ಸಾಹಿತಿಗಳ ಪ್ರಾರಂಭದ ದಿನಗಳ ಕತೆ-ಕವನ-ಲೇಖನಗಳು ಈ ಪತ್ರಿಕೆಯಲ್ಲಿಯೇ ಪ್ರಕಟವಾಗಿತ್ತಿತ್ತು. ಪ್ರಜಾವಾಣಿ ಪತ್ರಿಕೆಯಲ್ಲಿಯೂ ಕಲ್ಲೆ ಅವರು ಸ್ವಲ್ಪ‌ಕಾಲ ಕೆಲಸ ಮಾಡಿದ್ದರು. ಹಿಂದುಳಿದ ಸಮುದಾಯಕ್ಕೆ ಸೇರಿರುವ ಕಲ್ಲೆ ಶಿವೋತ್ತಮ್ ರಾವ್ ಅವರು ನನ್ನ ರಾಜಕೀಯ ಜೀವನದ ಪ್ರಾರಂಭದ ದಿನಗಳಲ್ಲಿ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದರು. ಪ್ರಶಸ್ತಿ ಪುರಸ್ಕೃತರಾದ ಕಲ್ಲೆ ಅವರಿಗೆ ಆರೋಗ್ಯ ಮತ್ತು ಆಯುಷ್ಯ ಸದಾ ಒದಗಿ ಬರಲಿ ಎಂದು ಹಾರೈಸುತ್ತೇನೆ. (ಮುಖ್ಯಮಂತ್ರಿ ಸಿದ್ದರಾಮಯ್ಯ)

Read More

ಬೆಂಗಳೂರು NEWS DESK ಆ.18 :  ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ. ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ, ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ…

Read More

ಮೈಸೂರು ಆ.18 NEWS DESK : ಜಾಗತಿಕ ಮಟ್ಟದಲ್ಲಿ ಭಾರತ ವೈದ್ಯಕೀಯ ಸೇವೆ ನೀಡುವುದರಲ್ಲಿ ಮುಂಚೂಣಿಯಲ್ಲಿದೆ. “ಹೀಲ್ ಇನ್ ಇಂಡಿಯಾ” ಎಂಬ ಯೋಜನೆಯಡಿ ಇದುವರೆಗೆ ಭಾರತಕ್ಕೆ ಬಂದಿರುವ ವಿದೇಶಿ ಪ್ರವಾಸಿಗರ ಸಂಖ್ಯೆ ಕುರಿತು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದು, ಅದಕ್ಕೆ ಕೇಂದ್ರ ಸಚಿವರು ವಿವರ ನೀಡಿದ್ದಾರೆ. ಸಂಸತ್ತಿನ ಅಧಿವೇಶನದ ಲೋಕಸಭಾ ಕಲಾಪದಲ್ಲಿ ಸಂಸದ ಯದುವೀರ್ ಅವರ ಚುಕ್ಕಿ ರಹಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ಶೇಖಾವತ್, ಜಾಗತಿಕ ಸ್ವಾಸ್ಥ್ಯ ಪ್ರವಾಸೋದ್ಯಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಯದುವೀರ್, ಕಳೆದ ಐದು ವರ್ಷದಲ್ಲಿ ಭಾರತಕ್ಕೆ ಹಲವಾರು ದೇಶಗಳ ಪ್ರವಾಸಿಗರು ಬಂದು ಚಿಕಿತ್ಸೆ ಪಡೆದು ಕೊಂಡಿದ್ದಾರೆ. ವೈದ್ಯಕೀಯ ಪ್ರವಾಸೋದ್ಯಮಕ್ಕೆ ಹೆಚ್ಚು ಸ್ಪಂದನೆ ದೊರಕಿದೆ ಎಂದಿದ್ದಾರೆ. ನಮ್ಮ ಕೇಂದ್ರ ಸರ್ಕಾರ ಆರಂಭಿಸಿರುವ “ಹೀಲ್‍ಇನ್‍ಇಂಡಿಯಾ”ಯೋಜನೆಯಡಿ ಚಿಕಿತ್ಸೆಗೆ ಬರುವ ವಿದೇಶಿಗರು ಹಾಗೂ ಅವರ ಜೊತೆಗಿರುವ ವೀಸಾ ಸೌಲಭ್ಯವನ್ನು ಸರಳೀಕರಣಗೊಳಿಸಿ…

Read More

ಮಡಿಕೇರಿ ಆ.18 NEWS DESK  : 220/66/11 ಕೆ.ವಿ ಕುಶಾಲನಗರ, 66/11 ಕೆ.ವಿ ಸುಂಟಿಕೊಪ್ಪ, 33/11 ಕೆವಿ ಸೋಮವಾರಪೇಟೆ ಹಾಗೂ 66/11 ಕೆವಿ ಮಾದಾಪುರ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಳ್ಳಲಾಗಿದೆ.  ಈ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ  ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಆಗಸ್ಟ್, 20 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ಸರಬರಾಜಾಗುವ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕಾನ್‍ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಸುಂಟಿಕೊಪ್ಪ, ಮಾದಾಪುರ, ಚೆಟ್ಟಳ್ಳಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ 66/11 ಕೆ.ವಿ ಆಲೂರು ಸಿದ್ದಾಪುರ ವಿದ್ಯುತ್ ವಿತರಣಾ ಉಪ ಕೇಂದ್ರ ಹಾಗೂ 66/33/11 ಕೆವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಮಾರ್ಗದಿಂದ ವಿದ್ಯುತ್…

Read More