ಲೇಖಕ: admin

ಮಡಿಕೇರಿ ಜು.11 NEWS DESK : ಸೋಮವಾರಪೇಟೆ ತಾಲ್ಲೂಕು ಹೋಂಸ್ಟೇ ಅಂಡ್ ಟೂರಿಸಂ ಅಸೋಸಿಯೇಷನ್ ನ ತ್ರೈಮಾಸಿಕ ಸಭೆಯು ದಿ ಬ್ಲಾಸಂ ಕೂರ್ಗ್ ರೆಸಾರ್ಟ್ ಕೋರ್ ಕೊಲ್ಲಿಯಲ್ಲಿ ನಡೆಯಿತು. ಸಿ.ಕೆ.ರೋಹಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪ್ರವಾಸೋದ್ಯಮ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಬಗ್ಗೆ ಚರ್ಚಿಸಲಾಯಿತು. ಪ್ರವಾಸೋದ್ಯಮದವರಿಗೆ ಅನುಕೂಲವಾಗುವಂತಹ ಪ್ರವಾಸೋದ್ಯಮ ಸ್ಥಳಗಳ ಮಾರ್ಗಸೂಚಿ ಫಲಕಗಳು ಅಳವಡಿಸುವುದು, ಪ್ರವಾಸೋದ್ಯಮ ಸ್ಥಳಗಳ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಮತ್ತು ಸಂಘದ ವತಿಯಿಂದ ಕಾರೆಕೊಪ್ಪ ಜಂಕ್ಷನ್ ಬಳಿ ಬಸ್ ತಂಗುದಾಣನ್ನು ನಿರ್ಮಿಸುವಂತಹ ಕೆಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಆರ್ಟ್ ಆಫ್ ಲಿವಿಂಗ್ ಶಿಕ್ಷಕಿ ರಾಗಿಣಿ ಅವರು ಯೋಗದ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು. ಅಲ್ಲದೆ ಸೋಮವಾರಪೇಟೆ ತಾಲೂಕಿನಲ್ಲಿ ನೂತನವಾಗಿ ಆರ್ಟ್ ಆಫ್ ಲಿವಿಂಗ್ ಕೇಂದ್ರ  ತೆರೆದಿರುವ ಬಗ್ಗೆ ಮತ್ತು ಯೋಗ ಶಿಬಿರವನ್ನು ಸದುಉಪಯೋಗ ಪಡೆಸಿಕೊಳ್ಳುವಂತೆ ತಿಳಿಸಿದರು. ಸಭೆಯಲ್ಲಿ ದಿ ಬ್ಲಾಸಂ ಕೂರ್ಗ್ ರೆಸಾರ್ಟ್ ಮಾಲೀಕರಾದ ಓಂ ಪ್ರಕಾಶ್ ಚೌದ್ರಿ,…

Read More

ಸೋಮವಾರಪೇಟೆ ಜು.11 NEWS DESK : ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ನವರ ನಿಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಕಂಬನಿ ಮಿಡಿದಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ತಿಪ್ಪಣ್ಣ ನವರು ತೊಂಬತ್ತರ ದಶಕದಲ್ಲಿ ಭೀಮಣ್ಣ ಖಂಡ್ರೆಯವರೊಂದಿಗೆ ರಾಜ್ಯವ್ಯಾಪಿ ಪ್ರವಾಸಮಾಡಿ ಸಮುದಾಯವನ್ನು ಒಗ್ಗೂಡಿಸುವ ಹಾಗೂ ಮಹಾಸಭಾವನ್ನು ಬಲಿಷ್ಠ ಗೊಳಿಸಿದರು. ಈ ಸಂದರ್ಭ ಸೋಮವಾರಪೇಟೆಗೂ ಆಗಮಿಸಿ ಸಭೆ ನಡೆಸಿದ ಬಗ್ಗೆ ಮಹೇಶ್ ಸ್ಮರಿಸಿಕೊಂಡರು. ತಮ್ಮ ಇಳಿ ವಯಸ್ಸಿನಲ್ಲಿಯು ಮಹಾಸಭಾದ ರಾಜ್ಯಾಧ್ಯಕ್ಷರಾಗಿ ಹಲವು ವರ್ಷ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದಿದ್ದಾರೆ.

Read More

ಕುಶಾಲನಗರ ಜು.11 NEWS DESK : ಹನ್ನೆರಡನೇ ಶತಮಾನದಲ್ಲಿ ಬೇರು ಬಿಟ್ಟಿದ್ದ ಮೇಲು ಕೀಳು, ವರ್ಣ ಬೇಧ, ವರ್ಗ ಬೇಧ, ಅಸಮಾನತೆ, ಬಡವ – ಬಲ್ಲಿದ, ಜಾತಿ ಪದ್ಧತಿಯ ನಿವಾರಣೆಯ ಭಾಗವಾಗಿ ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಹಡಪದ ಅಪ್ಪಣ್ಣ ಅವರನ್ನು ನೇಮಿಸುವ ಮೂಲಕ ಬಸವಣ್ಣನವರ ಬಳಿ ಬರುವ ಎಲ್ಲರೂ ಹಡಪದ ಅಪ್ಪಣ್ಣ ನವರ ಮೂಲಕವೇ ಭೇಟಿಯಾಗಬೇಕೆಂಬ ಆಶಯಕ್ಕೆ ಅನುಗುಣವಾಗಿ ಸತ್ಯ ಶುದ್ದ ಕಾಯಕ ಪ್ರಜ್ಞೆಯ ಹಡಪದ ಅಪ್ಪಣ್ಣ 114 ಕ್ಕೂ ಹೆಚ್ಚು ವಚನಗಳನ್ನು ರಚಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು ಎಂದು ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೇಂದ್ರಕುಮಾರ್ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಳ ಜಾತಿಯವರನ್ನು ಕೀಳಾಗಿ ಕಾಣುತ್ತಾ ಮೂಢನಂಬಿಕೆ ಹಾಗೂ ಶೋಷಣೆಯನ್ನು ಬಿತ್ತುವ…

Read More

ಭಾಗಮಂಡಲ ಜು.11 NEWS DESK : ಮಡಿಕೇರಿಯಿಂದ ತಲಕಾವೇರಿ ಸಂಚಾರಕ್ಕೆ ಉತ್ತಮ ರಸ್ತೆಗಳ ನಿರ್ಮಾಣವಾಗಬೇಕಾಗಿದೆ. ಕುಂದಚೇರಿ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ  ಶರತ್ ಪದಕಲ್ಲು ಮನವಿ ಸಲ್ಲಿಸಿದರು. ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ವಿಧಾನ ಸಭಾ ಅಧ್ಯಕ್ಷ ಕೆ.ಜಿ ಬೋಪಯ್ಯ, ಮಾಜಿ ಸಚಿವ ಅಪ್ಪಚ್ಚು ರಂಜನ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಾಲ್ಪಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಅಶ್ವಿನ್ ಕಾಂಗಿರ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಮನುಮುತ್ತಪ್ಪ, ವಿ.ಎಸ್.ಎಸ್.ಎನ್ ಅಧ್ಯಕ್ಷ  ಶ್ರೀಧರ್, ನಿರ್ದೇಶಕರುಗಳು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು,  ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು. ಈ ಸಂದರ್ಭ ಸಿಂಗತೂರು ಗ್ರಾಮದ ಬಹು ವರ್ಷಗಳ ಬೇಡಿಕೆಯ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರದ ವ್ಯವಸ್ಥೆಯನ್ನುವ ವೀಕ್ಷಿಸಿದ ಸಂಸದರು, ಜೀರ್ಣೋದ್ಧಾರ…

Read More

ಮಡಿಕೇರಿ ಜು.11 NEWS DESK : ಭಾರತ ಸರ್ಕಾರದ ಕೇಂದ್ರೀಯ ರೇಷ್ಮೆ ಮಂಡಳಿಗೆ 2024-25ನೇ ಸಾಲಿನ ನೇಮಕಾತಿ ಅಧಿಸೂಚನೆಗನ್ವಯ ಮಗ್ಗುಲ ಗ್ರಾಮದ ಕೆ.ಬಿ.ಭರತ್ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ರೇಷ್ಮೆ ಕೃಷಿಯಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕಗಳನ್ನು ಪಡೆದು, ಆಂಧ್ರ ಪ್ರದೇಶದ ರಾಜ ಮಂಡ್ರಿಯ ಐ ಟಿ ಸಿ ಲಿಮಿಟೆಡ್ ಅಗ್ರಿ ಬಿಸಿನೆಸ್ ಡಿವಿಷನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಭರತ್ ಮಗ್ಗುಲ ಗ್ರಾಮದ ದಿ. ಕುಪ್ಪಚ್ಚಿರ ಭೀಮಯ್ಯ ಮತ್ತು ಕವಿತಾ ದಂಪತಿಯ ಪುತ್ರ.

Read More

ಮಡಿಕೇರಿ ಜು.11 NEWS DESK : ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು, ಮನುಷ್ಯನಿಗಿರುವಷ್ಟೇ ಸ್ವಾತಂತ್ರ್ಯ ಮತ್ತು ಸಮಾನ ಹಕ್ಕುಗಳು ಈ ಭೂಮಿಯಲ್ಲಿ ಜೀವಿಸುತ್ತಿರುವ ಪ್ರಾಣಿ ಸಂಕುಲಕ್ಕೂ ಇದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್, ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ಕೊಡಗು ಹಾಗೂ ಕೊಡಗು ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕೇಂದ್ರ ಆವರಣದಲ್ಲಿ “ವಿಶ್ವ ಪ್ರಾಣಿ-ಜನ್ಯರೋಗಗಳ” ದಿನದ ಅಂಗವಾಗಿ “ವನ್ಯಜೀವಿ: ಪ್ರಾಣಿಜನ್ಯರೋಗಗಳು” ವಿಷಯದ ಕುರಿತು ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಹರಡುವ ಪ್ರಾಣಿಜನ್ಯ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತೀ ವರ್ಷ ಜು.6 ರಂದು ಪ್ರಾಣಿಜನ್ಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಪಶುವೈದ್ಯಕೀಯ ವೃತ್ತಿಯು ಪ್ರಾಣಿಗಳ ಆರೋಗ್ಯ ಮತ್ತು ಯೋಗಕ್ಷೇಮ ಹಾಗೂ ಸಾರ್ವಜನಿಕ ಆರೋಗ್ಯದ ರಕ್ಷಣೆಗೆ ಮೀಸಲಾಗಿರುವ ಒಂದು ಉದಾತ್ತ…

Read More

ಮಡಿಕೇರಿ ಜು.11 NEWS DESK : ಕುಶಾಲನಗರದ ಅತ್ತೂರು ಜ್ಞಾನಗಂಗಾ ವಸತಿಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಗುರು ಪೂರ್ಣಿಮಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಶಾಲಾ ಚುನಾವಣೆಯ ಮೂಲಕ ಆಯ್ಕೆಯಾದ ಶಾಲಾ ನಾಯಕಿ 10ನೇ ತರಗತಿಯ ಟಿ.ಎಸ್.ಶ್ರೀನಿಧಿ ಹಾಗೂ ಉಪನಾಯಕ 9ನೇ ತರಗತಿಯ ಎಂ.ಶಶಾಂಕ್ ಸೇರಿದಂತೆ ಮಂತ್ರಿಮಂಡಲದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಎಸ್.ಎಂ.ಸತ್ಯಸುಲೋಚನ ಪ್ರಮಾಣ ವಚನ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ.ಸುಧೀರ್ ಅವರು ನಾಯಕರಾಗಿ ಆಯ್ಕೆಯಾದವರಿಗೆ ಜವಾಬ್ದಾರಿಗಳು ಹೆಚ್ಚುತ್ತದೆ, ಪ್ರತಿಯೊಬ್ಬರು ತಮ್ಮ ಕರ್ತವ್ಯವನ್ನು ಶಿಸ್ತಿನಿಂದ ಪಾಲಿಸಬೇಕು. ಅಲ್ಲದೆ ನಾಯಕರಿಗೆ ಇರಬೇಕಾದ ಜವಾಬ್ದಾರಿಗಳೇನು ಎಂದು ತಿಳಿದುಕೊಂಡು ಅದನ್ನು ಪಾಲಿಸಬೇಕು ಎಂದು ಕರೆ ನೀಡಿದರು. ಪರಿಶ್ರಮ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆಯನ್ನು ಅಳವಡಿಸಿಕೊಂಡರೆ ಉತ್ತಮ ನಾಯಕನಾಗಲು ಸಾಧ್ಯವೆಂದು ಅಭಿಪ್ರಾಯಪಟ್ಟ ಅವರು, ಆಯ್ಕೆಯಾದವರೆಲ್ಲರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಎಂದು ಶುಭ ಕೋರಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ ಅವರು ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕ್ತಿ…

Read More

ಮಡಿಕೇರಿ ಜು.11 NEWS DESK : ಭಾಗಮಂಡಲ ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-25ನೇ ಸಾಲಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸುಳ್ಯ ಕೆವಿಜಿ ಐಟಿಐ ನಿವೃತ್ತ ಪ್ರಾಂಶುಪಾಲ ಚಿದಾನಂದ ಗೌಡ ಬಾಳಿಲ, ವಿದ್ಯಾರ್ಥಿಗಳಿಗೆ ಸಂಸ್ಥೆ ಬೆಳೆದು ಬಂದ ಬಗ್ಗೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳು ಗೌರವಯುತವಾಗಿ ಬಾಳಲು ಅನುಸರಿಸಬೇಕಾಗಿರುವ ಯಶಸ್ಸಿನ ಸೂತ್ರದ ಬಗ್ಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಕೆ.ವಿ.ಶ್ರೀಕಾಂತ್, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಈ ಸಂದರ್ಭ ಪ್ರತಿಯೊಂದು ವಿಭಾಗದ ಒಬ್ಬ ಅತ್ಯುತ್ತಮ ವಿದ್ಯಾರ್ಥಿಯನ್ನು ಗೌರವಿಸಲಾಯಿತು. ಕಚೇರಿ ಅಧೀಕ್ಷಕ ಸಿ.ಕೆ.ವಿನೋದ್  ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ತರಬೇತಿ ಅಧಿಕಾರಿ ಕೃಷ್ಣಮೂರ್ತಿ ಜೆ.ಸ್ವಾಗತಿಸಿದರು ಮತ್ತು ಕೆ.ಜಿ.ಜಯಪ್ರಕಾಶ್ ವಂದಿಸಿದರು.

Read More

ಮಡಿಕೇರಿ ಜು.11 NEWS DESK : ಕೊಡಗಿನ ಕಾಫಿ ಬೆಳೆಗಾರರಿಗೆ ಹಾಗೂ ರೈತರಿಗೆ ಬೆಳೆಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲು ಶಾಸಕದ್ವಯರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಫಿ ಮಂಡಳಿಯ ಸದಸ್ಯ ತಳೂರು ಎ.ಕಿಶೋರ್ ಕುಮಾರ್ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಬೆಳೆಗಾರರ ನಿಯೋಗದೊಂದಿಗೆ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಅವರನ್ನು ಭೇಟಿಯಾಗಿ ಬೆಳೆಗಾರರು ಅನುಭವಿಸುತ್ತಿರುವ ಕಷ್ಟನಷ್ಟದ ಬಗ್ಗೆ ಮನವಿ ಸಲ್ಲಿಸಿರುವುದು ಹಾಸ್ಯಾಸ್ಪದವಾಗಿದೆ. ಶಾಸಕರು ಮನವಿ ಸಲ್ಲಿಸುವುದನ್ನು ಬಿಟ್ಟು ಸರಕಾರದ ಮೇಲೆ ಒತ್ತಡ ಹೇರಿ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ. ಇದೇ ಜು.3ರಂದು ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಅವರು ಚಿಕ್ಕಮಗಳೂರು, ಉಡುಪಿ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ, ಕಾಫಿ ಮಂಡಳಿಯ ಸದಸ್ಯರು ಹಾಗೂ ಮಂಡಳಿಯ ಸಿ.ಇ.ಒ ಕುರ್ಮರಾವ್ ಅವರೊಂದಿಗೆ ದೆಹಲಿಗೆ ತೆರಳಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ…

Read More

ಮಡಿಕೇರಿ ಜು.11 NEWS DESK  : ಕೊಡಗು ಜಿಲ್ಲಾ ಮೀನುಗಾರಿಕೆ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು. ಇಂದಿರಾ ಬಡಾವಣೆಯಲ್ಲಿರುವ ಕೇರಳ ಸಮಾಜ ಕಟ್ಟಡದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ಉದ್ಘಾಟಿಸಿದರು. ಮೀನು ವಿಜ್ಞಾನಿ ಹೀರಾಲಾಲ್ ಚೌಧರಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿ ನಮಿಸಿದರು. ಮೀನು ತೊಟ್ಟಿಗೆ ಅಲಂಕಾರಿಕ ಮೀನುಗಳನ್ನು ಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅತಿಥಿಯಾಗಿ ಪಾಲ್ಗೊಂಡಿದ್ದ ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿದರು. ಬದುಕನ್ನು‌ ಕಟ್ಟಿಕೊಡುವ ಉದ್ಯಮವಾಗಿ ಮೀನು ಕೃಷಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದುನಿಂತಿದೆ. ಬದಕನ್ನು ಹಸನಗೊಳಿಸುವುದರೊಂದಿಗೆ ರಾಜ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ‌ ಕೂಡ ತನ್ನದೇ ಆದ ಕೊಡುಗೆ ನೀಡುತ್ತಿದೆ. ಮನೆಯಂಗಳ, ಕೃಷಿ ಭೂಮಿಯಲ್ಲಿ ಮೀನು ಉತ್ಪಾದನೆ ಉದ್ದಿಮೆ ಸಾಹಸದೊಂದಿಗೆ ಲಾಭದಾಯಕ ಕೂಡ ಎಂದ ಅವರು, ಮೀನು ಕೃಷಿಯಲ್ಲಿ ತೊಡಗುವವರೊಂದಿಗೆ ಇಲಾಖೆ ಹಾಗೂ ಸರಕಾರ ಒತ್ತಾಸೆಯಾಗಿ ಸದಾ ಇರಬೇಕಿದೆ…

Read More