ಲೇಖಕ: admin

ಸೋಮವಾರಪೇಟೆ ಜು.11 NEWS DESK : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಸೋಮವಾರಪೇಟೆ ತಾಲೂಕಿನ ಸರಕಾರಿ ಶಾಲೆಗಳಿಗೆ ನಿಯೋಜಿಸಲಾದ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರವನ್ನು ಯೋಜನಾ ಕಛೇರಿಯಲ್ಲಿ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಹಾಗೂ ತಾಲೂಕಿನ ಯೋಜನಾಧಿಕಾರಿಗಳಾದ  ಹನುಮಂತಪ್ಪ ಅಂಗಡಿ ಅವರು ವಿತರಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ನಿರ್ದೇಶಕಿ ಲೀಲಾವತಿ, ಕ್ಷೇತ್ರದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು, ಶಾಲೆಗಳಿಗೆ ಪೀಠೋಪಕರಣ ಒದಗಿಸಲಾಗಿದೆ, ಜ್ಞಾನದೀಪ ಶಿಕ್ಷಕರ ನೇಮಕ ಮಾಡುವುದು, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯ ವೇತನ ಪಾವತಿ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗಿದೆ ಹಾಗೂ ಕೇತ್ರದ ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳ ಕೊಡುಗೆಯ ಬಗ್ಗೆ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 1 ಶಾಲೆಗೆ, ವಿರಾಜಪೇಟೆ ತಾಲೂಕಿನ 8 ಶಾಲೆಗಳಿಗೆ ಹಾಗೂ ಸೋಮವಾರಪೇಟೆ ತಾಲೂಕಿನ 6 ಶಾಲೆಗಗಳಿಗೆ ಒಟ್ಟು 15 ಶಾಲೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಜ್ಞಾನದೀಪ ಶಿಕ್ಷಕರ ನೇಮಕಾತಿಯಾಗಿದೆ ಎಂದು…

Read More

ಸೋಮವಾರಪೇಟೆ ಜು.11 NEWS DESK : ಕೊಡ್ಲಿಪೇಟೆಯ ಎಸ್.ಕೆ.ಎಸ್ ಕಲ್ಲುಮಠ ಶಾಲೆಯಲ್ಲಿ ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ  ಶ್ರೀ ಶ್ರೀ ಮಹಾಂತ ಸ್ವಾಮೀಜಿ ಅವರ ನೇತೃತ್ವದಲ್ಲಿ ಶಾರದಾಂಬೆಗೆ ಪೂಜೆ ಸಲ್ಲಿಸಿ, ಶಾಲೆಗೆ ನೂತನವಾಗಿ ದಾಖಲಾದ ಎಲ್.ಕೆ.ಜಿ ಮಕ್ಕಳಿಗೆ ಅಕ್ಷರಾಭ್ಯಾಸ ನೆರವೇರಿತು. ನಂತರ ಮಾತನಾಡಿದ ಶ್ರೀ ಮಹಾಂತ ಸ್ವಾಮೀಜಿ ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಆಶೀರ್ವದಿಸಿದರು. ಸಂಸ್ಥೆಯ ಮುಖ್ಯೋಪಾಧ್ಯರಾದ ಹೆಚ್.ಎಂ.ಅಭಿಲಾಶ್ ಮಾತನಾಡಿದರು. ಶಾಲೆಯ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 7ನೇ ತರಗತಿ ವಿದ್ಯಾರ್ಥಿನಿ  ಅಮೃತ ಪ್ರಾರ್ಥನೆ ಮಾಡಿದರು. ಶಿಕ್ಷಕಿ ಕೆ.ಜೆ.ಶೀಲಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸೌಭಾಗ್ಯ ಸ್ವಾಗತಿಸಿ, ವಂದಿಸಿದರು.

Read More

ಮಡಿಕೇರಿ ಜು.11 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರಿಗೆ ವಸತಿ ಕಲ್ಪಿಸುವ ವಿಶೇಷ ಯೋಜನೆಯ ಕುರಿತಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ವಿರಾಜಪೇಟೆ ತಾಲ್ಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ವಿರಾಜಪೇಟೆ ಜು.11 NEWS DESK : ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ವತಿಯಿಂದ 17ನೇ ವರ್ಷದ ಸ್ಥಾಪನ ದಿನದ ಅಂಗವಾಗಿ ವಿರಾಜಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳಿಗೆ ಹಾಗೂ ಕೆದಮುಳ್ಳೂರು ವಿನ ಕಥರಿನ ಚಿತ್ತದಿನಿ ಮಕ್ಕಳ ಮನೆಯ 16 ಶಾಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಸುಮೇಶ್ ಅವರ ನೇತೃತ್ವದಲ್ಲಿ ಉಚಿತ ಬ್ಯಾಗ್ ಮತ್ತು ಕೊಡೆಗಳನ್ನು ವಿತರಿಸಲಾಯಿತು. ಈ ಸಂದರ್ಭ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಬಿಂದು ಮಾತನಾಡಿ, ಮುತ್ತಪ್ಪನ್ ಮಲಯಾಳಿ ಸಮಾಜ ಕಳೆದ 16 ವರ್ಷಗಳಿಂದ ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಬರುತಿದೆ.ಯಾರು ಒಳ್ಳೆಯ ಮನಸ್ಸಿನಿಂದ ಅಲ್ಪವಾದರೂ ದಾನ ಮಾಡುತ್ತಾರೋ ಅವರಲ್ಲಿ ಐಶ್ವರ್ಯ ತುಂಬುತ್ತಾ ಬರುತ್ತದೆ. ನಾವು ಹೋದ ನಂತರವೂ ನಾವು ಮಾಡಿದ ಒಳ್ಳೆಯತನವನ್ನು ಸಮಾಜ ನೆನಪಿಸಿಕೊಳ್ಳುತ್ತದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದ್ದರಿಂದ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು.  ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷ ಸುಮೇಶ್ ಮಾತನಾಡಿ, ನಮ್ಮ ಸಮಾಜ ಇಂದಿಗೆ…

Read More

ಮಡಿಕೇರಿ ಜು.11 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಗೌರವಿಸಲಾಯಿತು. ಶಾಸಕರ 51ನೇ ಹುಟ್ಟುಹಬ್ಬದ ಹಿನ್ನೆಲೆ ವೈದ್ಯಾಧಿಕಾರಿ ಹಾಗೂ ಸಮಾಜ ಸೇವಕರಾದಹೆಚ್.ವಿ.ದೇವರಾಸ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಶಾಲು ಹೊದಿಸಿ, ಬೆಳ್ಳಿ ಕಿರೀಟ ನೀಡಿ ಗೌರವಿಸಿದರು.

Read More

ಮಡಿಕೇರಿ ಜು.11 NEWS DESK : ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿಶೇಷ ಸಭೆ ನಡೆಸಿದರು. ವಿರಾಜಪೇಟೆಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ  ಕ್ಷೇತ್ರದಲ್ಲಿ ಇರುವ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕ್ಷೇತ್ರದ್ಯಂತ ನಿರಂತರವಾಗಿ ಸಂಭವಿಸುತ್ತಿರುವ ಪ್ರಾಣಿ-ಮಾನವ ಸಂಘರ್ಷ, ಅರಣ್ಯ ಅಂಚಿನಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಅಧಿಕಾರಿಗಳಿಂದ ಮಾಹಿತಿ ಪಡೆದು ಹಲವು ಸೂಚನೆಗಳನ್ನು ನೀಡಿದರು. ಈ ಸಂದರ್ಭ ರಾಜ್ಯ ವನ್ಯ ಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಹಿರಿಯ ಅರಣ್ಯ ಅಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಶಾಲನಗರ ಜು.11 NEWS DESK : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಅನಾಹತ ಯುನೈಟೆಡ್ ಎಫರ್ಟ್ ಫೌಂಡೇಶನ್ ಸಹ ಯೋಗದೊಂದಿಗೆ ಕೂಡಿಗೆ ಮೊರಾರ್ಜಿ ದೇಸಾತತ್ವಯಿ ವಸತಿ ಶಾಲೆಯಲ್ಲಿ ಎರಡು ದಿನಗಳ ವೃತ್ತಿ ಯೋಜನೆಯ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸಮನ್ವಯ ಅಧಿಕಾರಿ ಭಾರತಿ ವೃತ್ತಿ ಯೋಜನೆ ಕಾರ್ಯಕ್ರಮ ಹಿಂದಿನ ವರ್ಷದಿಂದಲೂ ನಡೆಯುತ್ತಿದ್ದು, ಇದರ ಉಪಯೋಗ ಮಕ್ಕಳಿಗೆ ತಲುಪುತಿದ್ದು 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವೃತ್ತಿ ವಲಯಗಳು “ವಿದ್ಯಾರ್ಥಿಗಳನ್ನ ವೃತ್ತಿಯೆಡೆಗೆ (ಸ್ಟೂಡೆಂಟ್ಸ್ ಟು ಪ್ರೋಫೇಶನಲ್‌) ಎಂಬ ಅಂಶವನ್ನು ಆಧರಿಸಿ ವಿದ್ಯಾರ್ಥಿಗಳಲ್ಲಿ ಕೆಲಸದ ಆಸಕ್ತಿಗಳನ್ನು ಗುರುತಿಸುವುದು, ವೃತ್ತಿ ಆಯ್ಕೆಗಳನ್ನು ತಿಳಿದುಕೊಳ್ಳುವುದು ಅದಕ್ಕೆ ಸಂಬಂದಿಸಿದ ಶೈಕ್ಷಣಿಕ ಆಯ್ಕೆಗಳನ್ನು ಅಧ್ಯಯನ ಮಾಡುವಂತೆ ಹಾಗೂ ವೃತ್ತಿ ಯೋಜನೆಯನ್ನು ವಿದ್ಯಾರ್ಥಿಗಳು ತಾವೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಪ್ರಾಸ್ತವಿಕವಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ,ಮಾತನಾಡಿ ಮಕ್ಕಳಿಗೆ…

Read More

ಕುಶಾಲನಗರ ಜು.10 NEWS DESK : ಕುಶಾಲನಗರ ಸಾಯಿ ಬಡಾವಣೆಯ ಶ್ರೀ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಗುರು ಪೂರ್ಣಿಮಾ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಮುಂಜಾನೆ ದೇವರಿಗೆ ವಿಶೇಷ ಆರತಿ ಕಾರ್ಯಕ್ರಮಗಳು ಜರುಗಿದವು. ಕುಶಾಲನಗರ ದೇವಾಲಯಗಳ ಒಕ್ಕೂಟದ ಸಮಿತಿಯ ಪ್ರತಿನಿಧಿಗಳು ಫಲತಾಂಬೂಲಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ಸಾಮೂಹಿಕ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಾಲಯದಲ್ಲಿ ಗಣಪತಿ ಹೋಮ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಸಾಯಿ ಬಾಬಾ ಮೂರ್ತಿ ಗೆ ಪೂಜೆ ಸಲ್ಲಿಸುವ ಮೂಲಕ ಅಷ್ಟ ಅಭಿಷೇಕ ಕಾರ್ಯಕ್ರಮ ಜರುಗಿತು. ದೇವಾಲಯ ಅರ್ಚಕರಾದ ನವೀನ್ ಕುಮಾರ್ ಶುಕ್ಲ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ದೇವಾಲಯ ಟ್ರಸ್ಟ್ ಅಧ್ಯಕ್ಷರಾದ ಧರೇಶ್ ಬಾಬು ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಕುಶಾಲನಗರದ ವಿವಿಧ ದೇವಾಲಯಗಳ ಪ್ರತಿನಿಧಿಗಳು ಭಕ್ತಾದಿಗಳು ಇದ್ದರು.

Read More

ಮಡಿಕೇರಿ ಜು.10 NEWS DESK :  ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಡಿಕೇರಿ ತಾಲ್ಲೂಕು ಬಾಲಭವನ ಸಮಿತಿ ಸಹಯೋಗದಲ್ಲಿ 2025-26ನೇ ಸಾಲಿನ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮವು ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಅವರು, ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಪೋನ್‍ಗಳು ಸರ್ವವ್ಯಾಪಿಯಾಗಿದ್ದು, ಸಂವಹನ, ಮನರಂಜನೆ ಮತ್ತು ಮಾಹಿತಿ ಪ್ರವೇಶಕ್ಕೆ ಅನಿವಾರ್ಯ ಸಾಧನಗಳಾಗಿ ಕಾರ್ಯನಿರ್ವಹಿಸುತ್ತಿವೆ. ಈ ಸಾಧನಗಳು ಹಲವಾರು ಪ್ರಯೋಜನಗಳನ್ನು ನೀಡುತ್ತವೆಯಾದರೂ, ಅವುಗಳ ಸಂಭಾವ್ಯ ಋಣಾತ್ಮಕ ಪರಿಣಾಮ ಗುರುತಿಸುವುದು ಅತ್ಯಗತ್ಯ ಎಂದರು. ವಿಶೇಷವಾಗಿ ವಿದ್ಯಾರ್ಥಿಗಳ ಮೇಲೆ, ಶೈಕ್ಷಣಿಕ ಕಾರ್ಯಕ್ಷಮತೆಯಿಂದ ಹಿಡಿದು ಮಾನಸಿಕ ಮತ್ತು ದೈಹಿಕ ಆರೋಗ್ಯದವರೆಗೆ ಮೊಬೈಲ್ ಫೋನ್ ಗಳು ಪರಿಣಾಮ ಬೀರುತ್ತದೆ. ಮಕ್ಕಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಓದಿನಲ್ಲಿ ಹೆಚ್ಚಾಗಿ ಆಸಕ್ತಿ…

Read More

ಮಡಿಕೇರಿ ಜು.10 NEWS DESK : ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರ ಅನುಕೂಲಕ್ಕಾಗಿ ಜುಲೈ, 07 ರಿಂದ ಆಗಸ್ಟ್, 07 ರವರೆಗೆ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ. 2024-25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಯುವನಿಧಿ ಯೋಜನೆಯ ಫಲಾನುಭವಿಗಳು ತ್ರೈಮಾಸಿಕ ಆನ್‍ಲೈನ್‍ನಲ್ಲಿ ಲಾಗಿನ್ ಆಗಿ ಸ್ವ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005997154 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ  ತಿಳಿಸಿದ್ದಾರೆ.

Read More