ನಾಪೋಕ್ಲು ಆ.8 NEWS DESK : ಕೊಡವ ಸಮಾಜ ರಸ್ತೆಯ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಅತ್ಯಂತ ಜನಸಂಚಾರ ಹಾಗೂ ವಾಹನ ದಟ್ಟಣೆ ಇರುವ ಈ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಶಾಸಕರು 20 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆಯ ಉನ್ನತೀಕರಣ ಮಾಡಲು ಅನುದಾನ ನೀಡಿದ್ದರು. ಕಾಮಗಾರಿ ಆರಂಭಿಸಲು ಭೂಮಿ ಪೂಜೆ ನೆರವೇರಿಸಿದ ಶಾಸಕರು ಅತ್ಯಂತ ಶೀಘ್ರದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ಇದೇ ಸಂದರ್ಭ ನಾಪೋಕ್ಲು ಗ್ರಾಮ ಪಂಚಾಯಿತಿ ನೀಡಲಾದ ಮಲ ತ್ಯಾಜ್ಯ ನಿರ್ವಹಣಾ ಸಂಚಾರಿ ಘಟಕವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಗೆ ವಾಹನದ ಕೀಯನ್ನು ಶಾಸಕರು ಹಸ್ತಾಂತರ ಮಾಡಿ ಸೂಕ್ತವಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಾಚೇಟಿರ ಕುಸು ಕುಶಾಲಪ್ಪ, ಅರುಣ್ ಬೇಬ, ಹೇಮಾವತಿ ಅರುಣ್, ಬಿ.ಎಂ.ಪ್ರತೀಪ, ಟಿ.ಎ.ಅಹಮದ್, ಸಾಬಾ ತಿಮ್ಮಯ್ಯ, ಕೆ.ಎ.ಇಸ್ಮಾಯಿಲ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚೊಂದಕ್ಕಿ, ಸಿಬ್ಬಂದಿಗಳು, ಕೊಡವ…
ಲೇಖಕ: admin
ನಾಪೋಕ್ಲು ಆ.18 NEWS DESK : ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಕರ್ನಲ್ ನಾಯಡ ಬಿ.ಚಿನ್ನಪ್ಪ ವಿದ್ಯಾರ್ಥಿಗಳು ನಾಯಕತ್ವ ಮತ್ತು ಸಂಘ ಆಯೋಜಿಸುವ ವಿವಿಧ ಚಟುವಟಿಕೆಯಲ್ಲಿ ಭಾಗಿಯಾಗುವ ಮೂಲಕ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿ, ಶುಭ ಹಾರೈಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚೌರಿರ ಡಾ.ಜಗತ್ ತಿಮ್ಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ವೇಣು ಅಪ್ಪಣ್ಣ, ನಿರ್ದೇಶಕರಾದ ಹರೀಶ್ ದೇವಯ್ಯ, ಪ್ರಾಂಶುಪಾಲರಾದ ದೇವಕಿ, ಬೋಧಕರು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಆ.18 NEWS DESK : ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢ ಶಾಲೆಯ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮಡಿಕೇರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಲ್ಲಮಾವಟಿ ಮತ್ತು ನೇತಾಜಿ ಪ್ರೌಢ ಶಾಲೆ ಸಂಯುಕ್ತ ಆಶ್ರಯದಲ್ಲಿ ಸಮೀಪದ ನೇತಾಜಿ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ “ದುಶ್ಚಟಗಳಿಂದ ದೂರವಿರಿ” ವಿಷಯ ಕುರಿತ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾರ್ಜನೆ ಮಾಡಬೇಕು. ಬಾಹ್ಯ ಪರಿಸರದ ಒತ್ತಡಕ್ಕೆ ಒಳಗಾಗಿ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳುಮಾಡಬಾರದು ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿಯ ಶಿಬಿರಾಧಿಕಾರಿ ಪಿ.ಪಿ.ನಂದಕುಮಾರ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದ ಮಹನೀಯರನ್ನು…
ಮಡಿಕೇರಿ ಆ.18 NEWS DESK : ಕೆಎಸ್ಆರ್ಟಿಸಿ ಬಸ್ಸೊಂದು ಬರೆಗೆ ಡಿಕ್ಕಿಹೊಡೆದ ಘಟನೆ ಮುಟ್ಲು ಗ್ರಾಮದ ಸುಬ್ರಮಣ್ಯ ದೇವಸ್ಥಾನದ ಸಮೀಪ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ಚಲಿಸುವ ಕೆಎಸ್ಆರ್ಟಿಸಿ ಬಸ್ ಮುಟ್ಲು ಗ್ರಾಮದ ಸುಬ್ರಮಣ್ಯ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಬರಗೆ ಡಿಕ್ಕಿ ಹೊಡೆದಿದೆ.
ಕುಶಾಲನಗರ ಆ.18 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್, ಎನ್.ಎಸ್.ಎಸ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಜಿಲ್ಲಾ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆ ಶಾಲಾ ಘಟಕ, ಎಸ್. ಡಿ.ಎಂ.ಸಿ. ವಿದ್ಯಾರ್ಥಿ ಸಂಘ, ಕೂಡ್ಲೂರು ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆ,ಕುಶಾಲನಗರ ಕಾವೇರಿ ಜೆಸಿಐ ಸಂಸ್ಥೆ ಹಾಗೂ ಲಯನ್ಸ್ ಕ್ಲಬ್ ನ ಸಹಯೋಗದೊಂದಿಗೆ 79ನೇ ಸ್ವಾತಂತ್ರ್ಯೋತ್ಸವ ಹಾಗೂ ಗೋ ಗ್ರೀನ್ ಅಭಿಯಾನ:2025 ದ ಅಂಗವಾಗಿ “ವಿದ್ಯಾರ್ಥಿಗಳ ನಡಿಗೆ ಕೃಷಿಯೆಡೆಗೆ”ಎಂಬ ಘೋಷ ವಾಕ್ಯದೊಂದಿಗೆ ಕೂಡ್ಲೂರು ಗ್ರಾಮದಲ್ಲಿ ಕಾವೇರಿ ನದಿದಂಡೆಯ ಮೇಲಿನ ಹಸಿರು ಪರಿಸರದ ಮಧ್ಯೆ ಗ್ರಾಮದ ಪ್ರಗತಿಪರ ಕೃಷಿಕರಾದ ಕೆ.ಎಸ್.ರಾಜಾಚಾರಿ ಅವರ ಗದ್ದೆಯಲ್ಲಿ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಜನಪದ ಸಂಸ್ಕೃತಿಯ ಪ್ರತೀಕವಾದ 4ನೇ ವರ್ಷದ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟ ಗಮನ ಸೆಳೆಯಿತು. ಮಳೆಯ ಸಿಂಚನದೊಂದಿಗೆ ಆಗಾಗ್ಗೆ ಬಿಸಿಲಿನ ವಾತಾವರಣದಲ್ಲಿ ವಿದ್ಯಾರ್ಥಿಗಳು ಗದ್ದೆಯ ಕೆಸರಿನಲ್ಲಿ ಮಿಂದು ಎದ್ದು ಕೆಸರು…
ಸುಂಟಿಕೊಪ್ಪ ಆ.18 NEWS DESK : 7ನೇ ಹೊಸಕೋಟೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ದೇವಾಲಯದ ಆವರಣದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಮತ್ತು 5 ವರ್ಷ ಮೇಲ್ಪಟ್ಟ ಮಕ್ಕಳಿಗೆ 2ನೇ ವರ್ಷದ ಕೃಷ್ಣ ರಾಧೆ ಛದ್ಮವೇಷ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಮಹಾಗಣಪತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ದಾಸಂಡ ರಮೇಶ್ ಚಂಗಪ್ಪ ಉದ್ಘಾಟಿಸಿ, ಮಕ್ಕಳಲ್ಲಿ ಆಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ವೇದಿಕೆ ಕಲ್ಪಿಸಿದ ಸಮಿತಿ ಸದಸ್ಯರನ್ನು ಅಭಿನಂಧಿಸಿದರಲ್ಲದೆ, ಇಂದಿನ ಮಕ್ಕಳು ಮೊಬೈಲ್, ಅಂತರ್ಜಾಲಗಳಲ್ಲಿ ತೊಡಗಿಕೊಳ್ಳುತ್ತಿದ್ದು, ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ರೀತಿಯ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಿರುವುದು, ಜೊತೆಗೆ ಮಕ್ಕಳು ಪ್ರತಿಭೆಗಳನ್ನು ಅನಾವರಣಗೊಳಿಸಲು ಪೋಷಕರೊಂದಿಗೆ ಪಾಲ್ಗೊಂಡಿರುವುದು ಆಶಾದಾಯಕ ವಿಚಾರವಾಗಿದೆ ಎಂದು ಹೇಳಿದರು. ಪೋಷಕರು ಮತ್ತು ಮಕ್ಕಳಲ್ಲಿ ಓದುವ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಸಮಿತಿಯ ಸದಸ್ಯರು ಬಹುಮಾನವಾಗಿ ಪುಸ್ತಕಗಳನ್ನು ನೀಡುತ್ತಿರುವುದು ಅತ್ಯಂತ…
ವಿರಾಜಪೇಟೆ ಆ.18 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಕಾನೂರು ವಲಯದ ಬ್ರಹ್ಮಗಿರಿ ಕಾರ್ಯಕ್ಷೇತ್ರದ ಕೋತೂರು-ಬೊಮ್ಮಾಡು ಸರಕಾರಿ ವಾಲ್ಮೀಕಿ ಆಶ್ರಮ ಶಾಲೆ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ನಾಲ್ಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೋಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ ನೀರು ಸಿಗುತ್ತದೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು ಎಂದರು. ಶಾಲಾ ಮುಖ್ಯ ಶಿಕ್ಷಕರಾದ ವಿ.ಎಸ್.ಪ್ರಶಾಂತ ಕುಮಾರ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ನಮ್ಮ ಕರ್ತವ್ಯದ ಬಗ್ಗೆ ಮತ್ತು ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕ ವಸಂತ್, ಶಾಲಾ ಶಿಕ್ಷಕರಾದ ದಿವ್ಯ ಪಿ.ಎಂ, ಲಕ್ಷ್ಮಿ ಪಿ.ಕೆ ಪ್ರವೀಣ್, ಎಚ್.ಎನ್, ಲಕ್ಷ್ಮಿ ಪಿ.ಎಸ್, ತೀರ್ಥಂಜಲಿ…
ಮಡಿಕೇರಿ NEWS DESK ಆ.17 : ವಿಶ್ವಛಾಯಾಗ್ರಾಹಣ ದಿನಾಚರಣೆ ಅಂಗವಾಗಿ ಕೊಡಗು ಪತ್ರಕತ೯ರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಸ್ಪಧೆ೯ಗಳಲ್ಲಿ ವಿಜೇತರ ವಿವರ ಹೀಗಿದೆ >>> ಅತ್ಯುತ್ತಮ ಮಾನವೀಯ ಛಾಯಾಚಿತ್ರಕ್ಕಾಗಿ ಸಂಘದ ಗೌರವ ಸಲಹಗಾರ ಬಿ.ಜಿ.ಅನಂತಶಯನ ಅವರು ನೀಡಿರುವ ದತ್ತಿ ಪ್ರಶಸ್ತಿಗೆ ಪತ್ರಕರ್ತ ವಿಘ್ನೇಶ್ ಭೂತನಕಾಡು ಅವರು ತೆಗೆದ ಛಾಯಾಚಿತ್ರ ಆಯ್ಕೆಯಾಗಿದೆ. ಅತ್ಯುತ್ತಮ ಸುದ್ದಿ ಚಿತ್ರಕ್ಕಾಗಿ ಸುಂಟಿಕೊಪ್ಪದ ಪತ್ರಕತ೯ ಕೆ.ಎಸ್.ಅನಿಲ್ ಕುಮಾರ್ (ಪ್ರಥಮ) ಹಾಗೂ ವಿಶ್ವಕುಮಾರ್ ಗುಡ್ಡೆಹೊಸೂರು ದ್ವಿತೀಯ ಬಹುಮಾನ ಗಳಿಸಿದ್ದಾರೆ. ಜಲಜಲಜಲಧಾರೆ ವಿಷಯದ ಅತ್ಯುತ್ತಮ ವಿಡಿಯೋ ಸ್ಪಧೆ೯ಯಲ್ಲಿ ಮಡಿಕೇರಿಯ ಮಹಮ್ಮದ್ ಹನೀಫ್ (ಪ್ರಥಮ), ವಿರಾಜಪೇಟೆಯ ಉಷಾಪ್ರೀತಂ (ದ್ವಿತೀಯ) ಆಯ್ಕೆಯಾಗಿದ್ದಾರೆ. ಮಳೆಗಾಲದ ಸಂಕಷ್ಟಗಳು ವಿಷಯದ ಕುರಿತ ಸಾವ೯ಜನಿಕರಿಗಾಗಿನ ರೀಲ್ಸ್ ಸ್ಪಧೆ೯ಯಲ್ಲಿ ಭಾಗೀರಥಿ ಹುಲಿತಾಳ (ಪ್ರಥಮ) ಹಾಗೂ ಕುಶಾಲನಗರದ ರಮ್ಯ ಮಾಚಯ್ಯ (ದ್ವಿತೀಯ) ಆಯ್ಕೆಯಾಗಿದ್ದಾರೆ. ವಿಜೇತರಿಗೆ ಇದೇ ಮಂಗಳವಾರ ವಿಶ್ವಛಾಯಾಗ್ರಹಣ ದಿನದಂದು ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಬಹುಮಾನ ವಿತರಿಸಲಾಗುತ್ತದೆ. ವಿಶ್ವಛಾಯಾಗ್ರಹಣ ದಿನದ ಸಂದಭ೯ ಕೊಡಗಿನ ಹಿರಿಯ ಛಾಯಾಗ್ರಾಹಕರಾದ ಮಹಮ್ಮದ್ ಹನೀಫ್…
ಮಡಿಕೇರಿ NEWS DESK ಆ.17 : ಕೊಡಗು ಜಿಲ್ಲೆಯಲ್ಲಿ ಮತ್ತೆ ಗಾಳಿ ಸಹಿತ ಮಳೆ ಬಿರುಸುಗೊಂಡಿದ್ದು, ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜ್ ಗೆ ಆ.18 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಕಳೆದ ಎರಡು ತಿಂಗಳುಗಳ ವ್ಯಾಪಕ ಮಳೆಯಿಂದ ತೀವ್ರ ಹಾನಿ ಅನುಭವಿಸಿದ್ದ ಕೊಡಗಿನಲ್ಲಿ ಒಂದೆರಡು ದಿನ ಮಳೆ ಬಿಡುವು ನೀಡಿತ್ತು. ಆದರೆ ಭಾನುವಾರದಿಂದ ಮತ್ತೆ ಗಾಳಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗುತ್ತಿದೆ. ಗಾಳಿ ಸಹಿತ ಮಳೆ ಸುರಿಯುತ್ತಿರುವುದರಿಂದ ಕೆಲವು ಭಾಗಗಳಲ್ಲಿ ಮರ, ಬರೆ, ವಿದ್ಯುತ್ ಕಂಬ ಬಿದ್ದ ಘಟನೆಗಳು ನಡೆದಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಲೇ ಇದ್ದು, ಎತ್ತರ ಮತ್ತು ತಗ್ಗು ಪ್ರದೇಶ ಹಾಗೂ ನದಿ ಭಾಗದ ಜನರಲ್ಲಿ ಆತಂಕ ಮನೆ ಮಾಡಿದೆ. ರಜೆಯ ಕಾರಣ ಜಿಲ್ಲೆಗೆ ಆಗಮಿಸಿದ್ದ ಸಾವಿರಾರು ಪ್ರವಾಸಿಗರು ನಿರಂತರ ಮಳೆಯಿಂದ…
ಸುಂಟಿಕೊಪ್ಪ NEWS DESK ಆ.17: ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ ಬಾಳೆಕಾಡು ರಸ್ತೆ ತಿರುವಿನಲ್ಲಿ ನಡೆದಿದೆ. ಕುಶಾಲನಗರದಿಂದ ಮಡಿಕೇರಿಗೆ ಬರುತ್ತಿದ್ದ ಬಸ್ ಮತ್ತು ಕುಶಾಲನಗರ ಕಡೆಗೆ ಸಾಗುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಕಾರು ಚಾಲಕ ರಂಜಿತ್ ಹಾಗೂ ಪ್ರಯಾಣಿಕ ಕುಮಾರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.






