ಮಡಿಕೇರಿ ಜು.10 NEWS DESK : ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರಿಗೆ ಶಿವಶರಣ ಹಡಪದ ಅಪ್ಪಣ್ಣ ಅವರು ಆತ್ಮೀಯರಾಗಿ, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಎ.ಸೌಮ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶರಣರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಆ ನಿಟ್ಟಿನಲ್ಲಿ ಬಸವಣ್ಣನವರ ಜೊತೆಗೂಡಿ ಹಡಪದ ಅಪ್ಪಣ್ಣ ಅವರು ಸಮಾಜ ಸುಧಾರಣೆಗೆ ಪ್ರಯತ್ನಿಸಿದ್ದಾರೆ ಎಂದು ನುಡಿದರು. ಹಡಪದ ಅಪ್ಪಣ್ಣ ಅವರು 12ನೇ ಶತಮಾನದಲ್ಲಿ ಧಾರ್ಮಿಕ, ಸಾಮಾಜಿಕವಾಗಿ ಎಲ್ಲರನ್ನು ಮೇಲೆತ್ತುವಲ್ಲಿ ಶ್ರಮಿಸಿದ್ದಾರೆ. ಎಲ್ಲರಿಗೂ ಸಮಾನತೆ ಕಲ್ಪಿಸಲು ಶ್ರಮಿಸಿದ್ದಾರೆ. ಕಂದಾಚಾರವನ್ನು ಗಟ್ಟಿಯಾಗಿ ಪ್ರಶ್ನಿಸುವ ಮೂಲಕ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು. ಹಡಪದ ಅಪ್ಪಣ್ಣ ಅವರ ಕಾಲ ಕ್ರಿ.ಶ.1160 ಎಂದು…
ಲೇಖಕ: admin
ಸುಂಟಿಕೊಪ್ಪ ಜು.10 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಂಟಿಕೊಪ್ಪ ವಲಯದ ವತಿಯಿಂದ ಜ್ಞಾನದೀಪ ಯೋಜನೆಯಡಿಯಲ್ಲಿ ಕಾನ್ಬೈಲ್ ಸರಕಾರಿ ಪ್ರಾಥಮಿಕ ಶಾಲೆಗೆ ಓರ್ವ ಶಿಕ್ಷಕರ ನಿಯೋಜನೆ ಮಾಡಲಾಯಿತು. ಕಾನ್ಬೈಲ್ ಶಾಲೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 52 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಪೂರ್ಣಕಾಲಿಕವಾಗಿ ಇರ್ವರು ಶಿಕ್ಷಕರು ಮತ್ತು ಅರೆಕಾಲಿಕವಾಗಿ ಓರ್ವ ಶಿಕ್ಷಕಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದರಿಂದ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯನ್ನು ಮನಗಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರು ಜ್ಞಾನದೀಪ ಯೋಜನೆಯಡಿಯಲ್ಲಿ ಶಾಲೆಗೆ ಓರ್ವ ಶಿಕ್ಷಕರನ್ನು ನೇಮಕಾತಿಗೊಳಿಸಲಾಯಿತು. ಈ ಸಂದರ್ಭ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯ ದಿಸೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ.ಯೋ. ವತಿಯಿಂದ ಶಾಲೆಗೆ ಶಿಕ್ಷಕರನ್ನು ನೇಮಕಗೊಳಿಸುವಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕರು, ತಾಲೂಕು ಯೋಜನಾಧಿಕಾರಿ ಮತ್ತು ಕಾನ್ಬೈಲ್ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಯಶೋಧ ಅವರಿಗೆ ಶಾಲೆಯ ಮುಖ್ಯೋಪಾದ್ಯಾಯನಿ ಶಾಂತಿ, ಸಹಶಿಕ್ಷಕರು, ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರು ಸಂಸ್ಥೆಯ ಸೇವೆಯನ್ನು ಶ್ಲಾಘಿಸಿದ್ದಾರೆ.
ಮಡಿಕೇರಿ ಜು.10 NEWS DESK : ಕುತಂತ್ರದಿಂದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು. ವಿಶ್ವಾಸಘಾತುಕ “ಕೆಳದಿ/ಪಾಲೇರಿ ರಾಜ ಪರಿವಾರದ ಅಧೀನದಲ್ಲಿದ್ದ ಕೊಡಗು ರಾಜ್ಯವನ್ನು ಪರಾಕ್ರಮಿ ಕೊಡವರು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 32ಕ್ಕೂ ಹೆಚ್ಚು ಬಾರಿ ಕಾಪಾಡಿದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶಮಾಡಲು ಸಂಚು ಹೂಡಿದನು. ಟಿಪ್ಪು ಸಂಚಿನಿಂದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವರ ನರಮೇಧವನ್ನು ವಿಶ್ವ ರಾಷ್ಟ್ರಸಂಸ್ಥೆ ಯುಎನ್ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ ಏಕ-ಜನಾಂಗೀಯ ಕೊಡವ…
ವಿರಾಜಪೇಟೆ ಜು.10 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಭಾರತೀಯ ವೈದ್ಯಕೀಯ ಸಂಘ ಮತ್ತು ಕೊಡಗು ವೈದ್ಯಕೀಯ ಕಾಲೇಜು ವತಿಯಿಂದ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಕಂಜಿತಂಡ ಸುನಿಲ್ ಮುದ್ದಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ 30 ವರ್ಷಗಳಲ್ಲಿ ಆರೋಗ್ಯ ಮತ್ತು ಸಾಮಾಜಿಕ ಸೇವೆಗೆ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಡಿಕೇರಿಯ ಕಾಲೇಜು ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಡಾ.ಸುನಿಲ್ ಮುದ್ದಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಡಿಕೇರಿಯ ಕೋಯಿಮ್ಸ್ನ ನಿರ್ದೇಶಕ ಮತ್ತು ಡೀನ್ ಡಾ. ಎ.ಕೆ.ಲೋಕೇಶ್ ಮತ್ತು ಐಎಂಎ ಅಧ್ಯಕ್ಷ ಡಾ.ಶ್ಯಾಮ್ ಮತ್ತು ಅನೇಕ ಪ್ರಖ್ಯಾತ ವೈದ್ಯರು, ಶಿಕ್ಷಣ ತಜ್ಞರು ಮತ್ತು ಆರೋಗ್ಯ ಕ್ಷೇತ್ರದ ತಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮಡಿಕೇರಿ ಜು.10 NEWS DESK : ಮಡಿಕೇರಿ ನಗರದ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾನ್ವೆಂಟ್ ಜಂಕ್ಷನ್ ನಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣವನ್ನು ಜು.11 ರಂದು ಉದ್ಘಾಟಿಸಲಾಗುವುದು ಎಂದು 17ನೇ ವಾರ್ಡ್ ನ ನಗರಸಭಾ ಸದಸ್ಯ ಅರುಣ್ ಶೆಟ್ಟಿ ಅವರು ತಿಳಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಲಿದ್ದಾರೆ. ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪೌರಾಯುಕ್ತ ಹೆಚ್.ಆರ್.ರಮೇಶ್, ಸದಸ್ಯ ಮುಸ್ತಫ, ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಬಿಜೆಪಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಟೌನ್ ಬ್ಯಾಂಕ್ ನಿರ್ದೇಶಕರು ಹಾಗೂ ನಗರಸಭಾ ಸ್ಥಾಯಿ ಸಮಿತಿಯ ಮಾಜಿ ಸದಸ್ಯರಾದ ಪ್ರತಿಭಾ ಶೆಟ್ಟಿ, ಜಿಲ್ಲಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಜು.10 NEWS DESK : ಮಾಯಮುಡಿ ಗ್ರಾಮ ವ್ಯಾಪ್ತಿಯಲ್ಲಿ ಸರಕಾರ ಅನುಮೋದಿಸಿದ ಶಾಲೆಗೆ, ಕೊಠಡಿಗಳನ್ನು ನಿರ್ಮಿಸುವ ಉದ್ದೇಶದಿಂದ ರೂ.79 ಲಕ್ಷದ ಕಾಮಗಾರಿಗೆ ಚಾಲನೆ ದೊರೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಈ ಶಾಲೆಯ ಹಳೆ ವಿದ್ಯಾರ್ಥಿ. ಹಾಗಾಗಿ ಸಚಿವರು ಈ ಶಾಲೆಯ ಅಭಿವೃದ್ಧಿಗೆ ತಮ್ಮ ವಿಶೇಷ ಅನುದಾನದ ಮೂಲಕ ರೂ.79 ಲಕ್ಷ ನೀಡಿರುವುದನ್ನು ನೀಡಿರುವುದಾಗಿ ತಿಳಿಸಿದರು. ಕ್ಷೇತ್ರದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ, ತಾನು ಹಾಗೂ ಸರಕಾರ ಮಕ್ಕಳ ವಿದ್ಯಾರ್ಜನೆ ಕಡೆಗೆ ಹೆಚ್ಚಿನ ಗಮನವನ್ನು ನೀಡುತ್ತಿದ್ದು, ಪೋಷಕರು ಹಾಗೂ ಶಿಕ್ಷಕರು ಮಕ್ಕಳ ವಿದ್ಯಾಭ್ಯಾಸ ಉನ್ನತಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು. ಸಾಲು ಕೊಠಡಿಯಲ್ಲಿ ಮಕ್ಕಳಿಗೆ ಬೇಕಾದ ಎಲ್ಲಾ ಆಧುನಿಕ ಸೌಲತ್ತುಗಳನ್ನು ಒದಗಿಸಲು ಸರಕಾರ ಬದ್ಧವಾಗಿದೆ ಎಂದು ಇದೇ ಸಂದರ್ಭ ಶಾಸಕರು ಹೇಳಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್…
ಮಡಿಕೇರಿ ಜು.10 NEWS DESK : ಮಾಯಮುಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯ ನೂತನ ಕೊಠಡಿಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಇಂದಿನ ಯುಗದಲ್ಲಿ ಸ್ಥಳೀಯ ಭಾಷೆಯೊಂದಿಗೆ ಆಂಗ್ಲ ಭಾಷೆಯು ಅತ್ಯಂತ ಮಹತ್ವ ಪಡೆದಿದ್ದು, ಮಕ್ಕಳು ಚಿಕ್ಕದರಿಂದಲೇ ಆಂಗ್ಲ ಭಾಷೆ ಕಲಿತುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದರು. ಮಕ್ಕಳು ಮಾತೃಭಾಷೆಯೊಂದಿಗೆ ಆಂಗ್ಲವನ್ನು ಕಲಿತುಕೊಂಡು ತಮ್ಮ ಮುಂದಿನ ಭವಿಷ್ಯದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪ್ರತ್ಯು, ವಲಯ ಕಾಂಗ್ರೆಸ್ ಅಧ್ಯಕ್ಷ ಟಾಟು ಮೊಣ್ಣಪ್ಪ, ಸ್ಥಳೀಯ ಪ್ರಮುಖರು, ಪಕ್ಷದ ಪ್ರಮುಖರು ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಸ್ಥಳೀಯ…
ವಿರಾಜಪೇಟೆ ಜು.10 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನ ಕೃಷಿ ಕಾರ್ಯಕ್ರಮದಡಿಯಲ್ಲಿ ವಿರಾಜಪೇಟೆ ವಲಯದ ಬಿಟ್ಟಂಗಾಲ ಕಾರ್ಯಕ್ಷೇತ್ರದ ಬಿ.ಶೆಟ್ಟಿಗೇರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಸುಜಾತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪವಲಯ ಅರಣ್ಯಾಧಿಕಾರಿ ಶ್ರೀಧರ್ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪರಿಸರ ಸಂರಕ್ಷಣೆ ಸಲುವಾಗಿ ಉತ್ತಮವಾದ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ ಎಂದರು. ಜನಸಂಖ್ಯೆ ಹೆಚ್ಚಾದಂತೆ ಅರಣ್ಯ ಸಂಖ್ಯೆ ಕೂಡ ಕಡಿಮೆಯಾಗುತ್ತದೆ. ಗಿಡ ನೆಡುವಿಕೆಯಿಂದ ಅರಣ್ಯ ಸಂರಕ್ಷಿಸಬಹುದು, ಪರಿಸರವು ನಮಗೆ ಆಹಾರ, ನೀರು, ಗಾಳಿ ಮತ್ತು ಇತರ ಅಗತ್ಯ ಸಂಪನ್ಮೂಲಗಳನ್ನು ಒದಗಿಸುತ್ತದೆ ಎಂದರು. ಬಿಟ್ಟಂಗಾಲ ಒಕ್ಕೂಟದ ಅಧ್ಯಕ್ಷ ರಂಜನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಎಲೆಗಳನ್ನು ಗುರುತಿಸುವ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರಾದ ವಸಂತ್,…
ಮಡಿಕೇರಿ ಜು.10 NEWS DESK : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 19.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7.54 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1652.92 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1017.09 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.25 ಮಿ.ಮೀ. ಕಳೆದ ವರ್ಷ ಇದೇ ದಿನ 11.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2375.59 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1496.53 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 11.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1567.15 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1047.55 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.98 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಸೋಮವಾರಪೇಟೆ ಜು.10 NEWS DESK : ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿಯನ್ನು ವಿಜ್ರಂಭಿಸಲಾಗುತ್ತಿದೆ ಎಂದು ಸ್ವತಂತ್ರ ಬಸವಲಿಂಗ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು. ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಲಾಗಿದ್ದ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಇರುವ ಬೃಹತ್ ರಾಷ್ಟ್ರದ ಭಾರತ ಮಾತೆ ಎಲ್ಲಾ ಜಾತಿ, ಜನಾಂಗದವರನ್ನು ತನ್ನೊಡಲಲ್ಲಿ ಇಟ್ಟುಕೊಂಡು ಸಲಹುತ್ತಿದ್ದಾಳೆ, 12ನೇ ಶತಮಾನದಲ್ಲೂ ಬಸವಣ್ಣಾರಾದಿಯಾಗಿ ಎಲ್ಲಾ ಶಿವಶರಣರು ಜಾತಿಯ ವಿರುದ್ಧ ಹೋರಾಡಿ ಎಲ್ಲಾರು ಒಂದೇ ಎಂದು ಪ್ರತಿಪಾದಿಸಿದರು. ಆದರೆ ಇಂದು ಏನಾಗಿದೆ ಎಲ್ಲೆಲ್ಲೂ ಜಾತಿ ಮೇಳೈಸಿದೆ ಎಲ್ಲಾ ರಂಗಗಳಲ್ಲೂ ಜಾತಿ, ಜಾತಿ ಎಂದು ವಿಷಾದಿಸಿದರು. ಸಮಾಜವನ್ನು ತಿದ್ದಿ, ತೀಡಬೇಕಾದ ಧಾರ್ಮಿಕ ಕ್ಷೇತ್ರವು ಇದಕ್ಕೆ ಹೊರತಾಗಿಲ್ಲ ಎಂದರು. ಈ ದೇಶದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಪಾಲಿಸುತ್ತಿರುವುದು, ಉಳಿಸುತ್ತಿರುವುದು, ಮಾತೆ ಭಾರತಾಂಬೆಗೆ ಗೌರವ ಸಲ್ಲಿಸುತ್ತಿರುವುದು ಭಾರತೀಯ ಜನತಾ ಪಕ್ಷ. ಆದ್ದರಿಂದ ನಾನು ಅಭಿಮಾನಿಯಾಗಿದ್ದೇನೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಇಂದು ಸಮಾಜದ ಯಾವುದೇ ಕ್ಷೇತ್ರದಲ್ಲಿಯಾದರೂ ತನ್ನದೇ ಗುರುವನ್ನು ಹೊಂದಿದೆ ಅವರ…






