ಲೇಖಕ: admin

ಮಡಿಕೇರಿ NEWS DESK ಆ.15 : ಮಡಿಕೇರಿ ನಗರ ಆಟೋ ಮಾಲೀಕ ಹಾಗೂ ಚಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಅರ್ಥಪೂರ್ಣವಾಗಿ ನಡೆಯಿತು. ಸಂಘದ ಅಧ್ಯಕ್ಷ ಎಂ.ಸಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅತಿಥಿಗಳಾಗಿ ಸಂಚಾರಿ ಠಾಣಾಧಿಕಾರಿ ಶ್ರೀಧರ್ ಎಂ.ವಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಕೊಡಗು ಜಿಲ್ಲಾ ಆಟೋ ಮಾಲೀಕ ಹಾಗೂ ಚಾಲಕರ ಸಂಘದ ಅಧ್ಯಕ್ಷ ಡಿ.ಹೆಚ್.ಮೇದಪ್ಪ, ಕಾರ್ಯದರ್ಶಿ ಟಿ.ಎಂ.ಪ್ರಸನ್ನ ಮತ್ತಿತರ ಪದಾಧಿಕಾರಿಗಳು, ಸದಸ್ಯರು ಹಾಗೂ ಚಾಲಕರು ಪಾಲ್ಗೊಂಡಿದ್ದರು. ನಿವೃತ್ತಿಯ ನಂತರ ಆಟೋ ಚಾಲಕರ ವೃತ್ತಿಯನ್ನು ಆಯ್ದುಕೊಂಡ ಐವರು ಮಾಜಿ ಸೈನಿಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

Read More

ಮಡಿಕೇರಿ NEWS DESK ಆ.15 : ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ನಡೆಯಿತು. ಮಡಿಕೇರಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ನಾಪಂ ರವಿ ಕಾಳಪ್ಪ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನಗರಸಭಾಧ್ಯಕ್ಷೆ ಪಿ.ಕಲಾವತಿ, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ನಿರ್ದೇಶಕರುಗಳು, ಸಿಬ್ಬಂದಿಗಳು ನಗರಸಭಾ ಸದಸ್ಯರು, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕಿನ ಪದಾಧಿಕಾರಿಗಳು, ಬಿಜೆಪಿ ಜಿಲ್ಲಾ ಮತ್ತು ಮಂಡಲ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ಆ.15 : ಕೊಡಗು ಜಿಲ್ಲಾಡಳಿತದ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವವನ್ನು ನಗರದ ಕೋಟೆ ಆವರಣದಲ್ಲಿ ಮಳೆಯ ನಡುವೆ ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇತರರು ಇದ್ದರು. *ಸಚಿವರ ಸಂದೇಶ* ಸ್ವಾತಂತ್ರ‍್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರು ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ನಾವೆಲ್ಲ ಒಂದಾಗಿ ನಡೆಯಬೇಕಿದೆ. ಸ್ವಾತಂತ್ರ‍್ಯದ ಪರಿಕಲ್ಪನೆಯ ಸಮಗ್ರತೆಯನ್ನು ಅರ್ಥೈಸಿಕೊಂಡು ಯಾವುದೇ ತಾರತಮ್ಯ ಇಲ್ಲದೆ ಎಲ್ಲರೂ ಒಟ್ಟುಗೂಡಿ ಪ್ರಗತಿಯತ್ತ ಚಿಂತನೆ ಮಾಡೋಣವೆಂದು ಸಚಿವ ಎನ್.ಎಸ್.ಭೋಸರಾಜು ಕರೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಕಳೆದ ಎರಡು ವರ್ಷಗಳಲ್ಲಿ…

Read More

ಕೆರಾಡಿ ಆ.15 NEWS DESK : ಕೆರಾಡಿಯಲ್ಲಿನ ತಾವು ಓದಿದ ಶಾಲೆಯನ್ನೇ ರಿಷಬ್ ಶೆಟ್ಟಿ ದತ್ತು ಪಡೆದಿದ್ದು, ಇಂದು ಅದೇ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಡಿವೈನ್ ಸ್ಟಾರ್ ಆಚರಿಸಿದ್ದಾರೆ. ಕೆರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಬ್ ಶೆಟ್ಟಿ ಧ್ವಜಾರೋಣ ನೆರವೇರಿಸಿದ್ದಾರೆ.

Read More

ಮಡಿಕೇರಿ, ಆ.15 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್‌ನಿಂದ 79ನೇ ಸ್ವಾತಂತ್ರ್ಯೋತ್ಸವವನ್ನು ಪತ್ರಿಕಾ ಭವನದಲ್ಲಿ ತ್ರ್ರಿವರ್ಣ ಧ್ವಜಾರೋಹಣ ನಡೆಸುವ ಮೂಲಕ ಆಚರಿಸಲಾಯಿತು. ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿಗಳಾದ ಟಿ.ಪಿ.ರಮೇಶ್ ಅವರು ಧ್ವಜಾ ರೋಹಣವನ್ನು ನೆರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಹಿರಿಯ ಟ್ರಸ್ಟಿಗಳಾದ ವಿ.ಪಿ.ಸುರೇಶ್, ಕೊಡಗು ಪತ್ರಕರ್ತರ ಸಂಘದ ಸದಸ್ಯರಾದ ಶಿವಪ್ಪ, ಪತ್ರಿಕಾ ಭವನದ ಸಿಬ್ಬಂದಿಗಳಾದ ರಾಜೇಶ್, ಶೈನಿ ಮೊದಲಾದವರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಆ.15 NEWS DESK : ವೈದ್ಯಕೀಯ ಶಿಕ್ಷಣ ಇಲಾಖೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಹಯೋಗದೊಂದಿಗೆ 450 ಹಾಸಿಗೆ ಸಾಮಥ್ರ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಕಾಮಗಾರಿಯ ಶಿಲಾನ್ಯಾಸವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು ಅವರು ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ನೆರವೇರಿಸಿದರು. ಬಳಿಕ‌ ಮಾತನಾಡಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ತಿಳಿಸಿದರು. ಸರ್ಕಾರಿ ಆಸ್ಪತ್ರೆಗೆ ಬಡವರು ಬರುತ್ತಾರೆ. ಆದ್ದರಿಂದ ಬಡ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವುದು ವೈದ್ಯರ ಜವಾಬ್ದಾರಿ ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ‌ಸಂಸ್ಥೆಯನ್ನು ಮೇಲ್ದರ್ಜೆಗೆರಿಸುವಲ್ಲಿ ಶಾಸಕದ್ವಯರು ಶ್ರಮಿಸಿದ್ದಾರೆ. ಆ ದಿಸೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಲ್ಲಾ ವಿಭಾಗಗಳಲ್ಲಿ ಆರೋಗ್ಯ ಸೇವೆಗಳು ತಲುಪಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನುಡಿದರು. ಜನಸಾಮಾನ್ಯರಿಗೆ ಆರೋಗ್ಯ ಸೇವೆಗಳು ಸಕಾಲದಲ್ಲಿ ತಲುಪಿದಾಗ ಸರ್ಕಾರಕ್ಕೆ ಒಳ್ಳೆಯ…

Read More

ಕೂಡುಮಂಗಳೂರು ಆ.15 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಎನ್.ಎಸ್.ಎಸ್., ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ವಿದ್ಯಾರ್ಥಿ ಸಂಘ ಹಾಗೂ ಎಸ್ ಡಿ ಎಂ ಸಿ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ಕೆ.ಹರೀಶ್ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯದ ಇತಿಹಾಸ ಹಾಗೂ ಸ್ವಾತಂತ್ರ್ಯ ವೀರರ ಹೋರಾಟ, ಅವರ ತ್ಯಾಗ, ಬಲಿದಾನ, ಅವರ ಹೋರಾಟ ಹಾಗೂ ಸೇವೆಯನ್ನು ಸ್ಮರಿಸುವುದರೊಂದಿಗೆ ಅವರ ಆದರ್ಶಗಳನ್ನು ಪರಿಪಾಲಿಸುವ ಮೂಲಕ ದೇಶದ ಐಕ್ಯತೆಯನ್ನು ಸಾರಬೇಕು ಎಂದರು. ನಮ್ಮ ಹೆಮ್ಮೆಯ ತ್ರಿವರ್ಣ ಧ್ವಜ ಸದಾ ಎತ್ತರದಲ್ಲಿ ಹಾರುವಂತೆ ಮಾಡೋಣ. ದೇಶವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟೋಣ. ಸದೃಢ ದೇಶದ ನಿರ್ಮಾಣಕ್ಕೆ ನಾವೆಲ್ಲರೂ ಕಂಕಣಬದ್ಧರಾಗೋಣ ಎಂದರು. ಪ್ರವಾಸೋದ್ಯಮಿಯೂ ಶಿಕ್ಷಕರ ಸಂಘಟನೆಯ ಮುಖಂಡರೂ ಆದ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ದೇಶ ಸದೃಢವಾಗಿದ್ದರೆ…

Read More

ಕಾರ್ಕಳ ಆ.15 NEWS DESK : ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್.ಕಿರಣ್ ಕುಮಾರ್ ಅವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯ ಎಂಬುದು ಇಂದು ವಿಜ್ಞಾನದ ಮಾರ್ಗದಲ್ಲಿ ಸ್ವಾಯತ್ತತೆ, ಪ್ರಗತಿ ಮತ್ತು  ಜನಕೇಂದ್ರಿತ ಸೇವೆಯ ಸಂಕೇತವಾಗಿದೆ. ನಾವು ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಮೂಲಕ ಹೊಸ ಸಾಮರಸ್ಯವನ್ನು ರೂಪಿಸುತ್ತಿದ್ದೇವೆ. ಅಂತರಿಕ್ಷ ಕ್ಷೇತ್ರ, ಅಣುಶಕ್ತಿ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಕೃಷಿ ಕ್ಷೇತ್ರ, ಮಾಹಿತಿ ತಂತ್ರಜ್ಞಾನ ಹೀಗೆ ಸ್ವತಂತ್ರ ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಕಾಶ ಮಟ್ಟದ ಸಾಧನೆಗಳನ್ನು ಕಾಣುತ್ತಿದೆ ಎಂದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ಕಾಲೇಜಿನಲ್ಲಿ ಹೊಸದಾಗಿ ಆರಂಭಗೊಂಡ 6/8 ನೌಕಾ ಉಪವಿಭಾಗ – ಎನ್.ಸಿ.ಸಿ ಉಡುಪಿ ಘಟಕ ಇದರ ಪ್ರಾಯೋಜಕರಾದ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹಾಗೂ ಅಖಿಔ ಮಹೇಶ್ ಆರ್. ಶೆಣೈ. ಕೆ. ಇವರ ನೇತೃತ್ವದಲ್ಲಿ ಎನ್.…

Read More

ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ  79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಕಚೇರಿ ಸಿಬ್ಬಂದಿಗಳು ಮತ್ತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

Read More

ಮಡಿಕೇರಿ ಆ.15 NEWS DESK : ಕಾಟಕೇರಿಯ ಕೂರನಬಾಣೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ನಳಿನಿ ಧ್ವಜಾರೋಹಣ ನೆರವೇರಿ ದಿನದ ಮಹತ್ವ ತಿಳಿಸಿದರು. ಮದೆ ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಪಿ.ಎ.ಚಂದ್ರಾವತಿ, ಶ್ರೀದೇವಿ, ಶ್ರೀ ಲಕ್ಷ್ಮಿ ಸ್ವಸಾಹ ಸಂಘದ ಪದಾಧಿಕಾರಿಗಳು, ಸ್ವಯಂ ಸೇವಾ ಸಂಘ ಮತ್ತು ಗ್ರಾಮಸ್ಥರು, ಪುಟಾಣಿ ಮಕ್ಕಳು ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ಹಂಚಲಾಯಿತು.

Read More