ಮಡಿಕೇರಿ ಸೆ.20 NEWS DESK : ಕುಶಾಲನಗರದ ಮಾದಪಟ್ಟಣದಲ್ಲಿ ಕೊಡಗಿನ ಮೊದಲ ಕಾರ್ಡಿಯಾಕ್ ಕ್ಯಾಥ್ ಲ್ಯಾಬ್ ಸೇವೆ ಒಳಗೊಂಡ ನೂತನ ಸೈರಸ್ ಆಸ್ಪತ್ರೆಯು ಸೆ.23 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಮತ್ತು ಸೆನೆಟ್ ಸದಸ್ಯ ಡಾ.ಭರತ್ ಹಂಚೆ ತಿಳಿಸಿದರು. ನಗರದಲ್ಲಿ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ ಎಂದರು. ಸಮಾರಂಭದಲ್ಲಿ ಸಣ್ಣ ನೀರಾವರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜು, ಸಂಸದ ಯದುವೀರ್ ಒಡೆಯರ್, ಶಾಸಕರಾದ ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸತೀಶ್, ಕೆ.ಐ.ಓ.ಎಂ.ಎಸ್ ಡೀನ್ ಹಾಗೂ ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕುಶಾಲನಗರ ಪಟ್ಟಣ ಪಾಲಿಕೆ ಅಧ್ಯಕ್ಷರಾದ ಜಯಲಕ್ಷ್ಮೀ ಚಂದ್ರು ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ತುರ್ತು…
ಲೇಖಕ: admin
ಕುಶಾಲನಗರ, ಸೆ.20 NEWS DESK : ಮಕ್ಕಳು ಉತ್ತಮ ಶಿಕ್ಷಣ ಪಡೆದು ವಿದ್ಯಾವಂತರಾದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಪ್ರತಿನಿತ್ಯ ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಪಾಠ ಪ್ರವಚನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನಿವೃತ್ತ ಹಿರಿಯ ಅಧಿಕಾರಿಯೂ ಆದ ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯೆ ಸೂದನ ರತ್ನಾವತಿ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಡಿ ಎಂ ಸಿ ಸಹಯೋಗದೊಂದಿಗೆ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ನೋಟ್ಬುಕ್, ಲೇಖನ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ವತಃ ಲೇಖನ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು. ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಉತ್ತಮ ಗುಣಮಟ್ಟದ ಶಿಕ್ಷಣದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಾಗಿದೆ. ಸಾರ್ವಜನಿಕವಾಗಿಯೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಕೊಡುಗೆ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಮನವಿ…
ವಿರಾಜಪೇಟೆ ಸೆ.20 NEWS DESK : ಸರಕಾರದ ಪಂಚ ಯೋಜನೆಯನ್ನು ಸರ್ವರಿಗೂ ಕೊಡಿಸುವ ಉದ್ದೇಶದ ಅಂಗವಾಗಿ ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಯಿತು. ವಿರಾಜಪೇಟೆ ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ.ಜಾನ್ಸನ್, ವಿರಾಜಪೇಟೆಯ ಕೆಲವು ನ್ಯಾಯಬೆಲೆ ಅಂಗಡಿಯಲ್ಲಿ ಸರಕಾರದ ವತಿಯಿಂದ ಉಚಿತವಾಗಿ ನೀಡುವ ಅಕ್ಕಿಗೆ ಹಣ ಪಡೆಯುತ್ತಿರುವ ಅಂಗಡಿಗಳ ಮೇಲೆ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಆಹಾರ ನಿರೀಕ್ಷರು ತಕ್ಷಣ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು. ಕಾಕೋಟುಪರಂಬವಿನ ನ್ಯಾಯಬೆಲೆ ಅಂಗಡಿಯಲ್ಲಿ ಒಂದು ಕೆಜಿ ಅಕ್ಕಿಗೆ ಎರಡು ರೂಪಾಯಿ ಹೆಚ್ಚಿಗೆ ಪಡೆಯುತ್ತಿರುವ ಅಂಗಡಿ ಮೇಲೆ ಕ್ರಮವನ್ನು ಕೈಗೊಳ್ಳಬೇಕು. ಇದೇ ರೀತಿ ಬಡವರಿಂದ ಉಚಿತವಾಗಿ ನೀಡುವ ಅಕ್ಕಿಗೆ ಹಣ ಪಡೆಯುವುದು ಮುಂದುವರಿದರೆ ಅಂತಹ ನ್ಯಾಯಬೆಲೆ ಅಂಗಡಿಯನ್ನು ಮುಚ್ಚಿಸಿ ಉತ್ತಮ ರೀತಿಯಲ್ಲಿ ನಡೆಸಲು ಬೇರೆಯವರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಅದ್ಯಕ್ಷ ಜಾನ್ಸನ್…
ಮಡಿಕೇರಿ ಸೆ.20 NEWS DESK : ರಾಜ್ಯ ಸರಕಾರ ಕೈಗೊಂಡಿರುವ ಜಾತಿ ಜನಗಣತಿಯಲ್ಲಿ ಕೊಡವರು ಯಾವುದೇ ಗೊಂದಲಕ್ಕೆ ಒಳಗಾಗದೆ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಕೊಡವ ಮತ್ತು ಭಾಷೆ ಕಾಲಂನಲ್ಲಿ ಕೊಡವ ಭಾಷೆ ಎಂದು ನಮೂದಿಸುವಂತೆ ಕೊಡಗು ಜಿಲ್ಲಾ ಬಿಜೆಪಿ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಕೊಡಗು ಜಿಲ್ಲೆಯಲ್ಲಿ ಕೆಲವು ಸಂಘಟಣೆಗಳು ಜಾತಿ ಜನಗಣತಿಯ ಧರ್ಮದ ಕಾಲಂನಲ್ಲ್ಲಿ ಕೊಡವರು “ಕೊಡವ ಧರ್ಮ” ಎಂದು ನಮೂದಿಸಬೇಕೆಂದು ಕರೆ ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅನಾದಿ ಕಾಲದಿಂದಲು ಕೊಡವರು ಹಾಗೂ ಕೊಡವ ಭಾಷಿಕರು ಪ್ರಕೃತಿ ಮತ್ತು ಗುರುಕಾರೋಣರನ್ನು ಆರಾದಿಸಿಕೊಂಡು ಬರುತ್ತಿದ್ದು, ಹಿಂದೂ ಧರ್ಮದ ಭಾಗವಾಗಿ ಗುರುತಿಸಿಕೊಂಡಿದ್ದಾರೆ. ಕೊಡವರ ಆಚಾರ, ವಿಚಾರ, ಪದ್ಧತಿ ಪರಂಪರೆ, ಉಡುಗೆ, ತೊಡುಗೆ ಮತ್ತು ಆಹಾರ ಪದ್ಧತಿ ವಿಶಿಷ್ಟವಾಗಿದೆ. ಕೊಡಗಿನ ಬಹುತೇಕ ದೇವಾಲಯಗಳ ತಕ್ಕ ಮುಖ್ಯಸ್ಥರು ಕೊಡವರೇ ಆಗಿದ್ದು, ಎಲ್ಲಾ ಹಿಂದೂ ದೇವರುಗಳನ್ನು ಪೂಜಿಸಿಕೊಂಡು…
ಮಡಿಕೇರಿ ಸೆ.20 NEWS DESK : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಮಡಿಕೇರಿ ದಸರಾ ಅಲಂಕಾರ ಸಮಿತಿ ವತಿಯಿಂದ ಕರಗ ಉತ್ಸವ ಆರಂಭದ ದಿನದಂದು, ಆಯುಧಪೂಜೆ ಮತ್ತು ವಿಜಯದಶಮಿಯಂದು ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿ ಅಧ್ಯಕ್ಷರಾದ ಎಂ.ಎ.ಮುನೀರ್ ಮಾಚಾರ್, ಸೆ.22ರಂದು ಸಂಜೆ ನಗರದ ಬನ್ನಿಮಂಟಪದಿಂದ ಕರಗ ಉತ್ಸವ ಆರಂಭಗೊಳ್ಳಲಿದೆ. ಈ ಸಂದರ್ಭ ಕರಗ ಸಾಗುವ ಮಹದೇವಪೇಟೆ ರಸ್ತೆಯ ಮನೆಗಳ ಮುಂದೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆ ಚುಕ್ಕಿ, ಎಳೆ, ಬಣ್ಣ ಮತ್ತು ಹೂವಿನ ರಂಗೋಲಿ ಎಂಬ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ಕರಗ ಸಾಗುವ ಸಂಜೆ 6 ಗಂಟೆಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಮನೆಯ ಮುಂದೆ ರಂಗೋಲಿ ರಚಿಸಿರುವಂತೆ ವಿನಂತಿಸಿದರು. :: ದೀಪದ ಅಲಂಕಾರ ಸ್ಪರ್ಧೆ :: ಕರಗೋತ್ಸವ ಆರಂಭಗೊಳ್ಳುವ ಸಂಜೆ ಮನೆ ಮತ್ತು ಅಂಗಡಿಗಳನ್ನು ಹಣತೆ, ಕಾಲುದೀಪ, ತೂಗುದೀಪಗಳಿಂದ ಅಲಂಕರಿಸುವ ಸ್ಪರ್ಧೆಯನ್ನು ದಶಪಂಟಪ ಸಮಿತಿ ಆಯೋಜಿಸಿದೆಯೆಂದು…
ಮಡಿಕೇರಿ ಸೆ.20 NEWS DESK : ಕೊಡವ ಹಾಕಿ ಅಕಾಡೆಮಿಯ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ ನಡೆಯಬೇಕೆನ್ನುವ ಕೂಗು ಸರಿಯಲ್ಲ. ಯಾವುದೇ ಸಂಸ್ಥೆಯಲ್ಲಿ ಕಾರಣವಿಲ್ಲದೆ ಬದಲಾವಣೆಯ ಕೂಗು ಬರುವುದಿಲ್ಲ, ಚುನಾವಣೆ ನಡೆಯುವುದು ಸೂಕ್ತ ಎಂದು ಅಕಾಡೆಮಿಯ ವಿವಿಧ ಸ್ಥಾನಾಕಾಂಕ್ಷಿಗಳು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿರುವ ಮಚ್ಚಾರಂಡ ಪ್ರವೀಣ್ ತಿಮ್ಮಯ್ಯ ಅವರು ಕೊಡವ ಹಾಕಿ ಅಕಾಡೆಮಿಯನ್ನು ಸ್ಥಾಪಿಸಿದ ದಿ.ಪಾಂಡಂಡ ಕುಟ್ಟಪ್ಪ ಅವರು, ಮಹಾಸಭೆಯ ಒಪ್ಪಿಗೆ ಮೇರೆ ಬೈಲಾ ರಚಿಸಿ, ಅನುಮೋದನೆ ಪಡೆದು ಸಹಕಾರ ಕಾಯ್ದೆ ಅನ್ವಯ ನೋಂದಣಿ ಮಾಡಿರುತ್ತಾರೆ. ಈ ಬೈಲಾ ಅನುಸಾರ ಅಕಾಡೆಮಿಯ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ ಮೂರು ವರ್ಷಗಳಿಗೊಮ್ಮೆ ನಡೆಸಬೇಕಾಗುತ್ತದೆ. ಅದರಂತೆ ಇದೀಗ ಚುನಾವಣೆಯನ್ನು ಘೋಷಿಸಲಾಗಿದ್ದು, ಚುನಾವಣೆ ನಡೆಯಲೇಬೇಕೆಂದು ಹೇಳಿದರು. ಚುನಾವಣೆ ಘೋಷಣೆಯಾದ ನಂತರ ಮೇಕೇರಿರ ರವಿ ಪೆಮ್ಮಯ್ಯ ಹಾಗೂ ಪಾಂಡಂಡ ಕುಟ್ಟಪ್ಪ ಅವರ ಪುತ್ರ ಬೋಪಣ್ಣ ಅವರ ತಂಡ ಕಣಕ್ಕಿಳಿದಿದೆ. ಈ ಹಂತದಲ್ಲಿ ಜಿಲ್ಲೆಯ ಕೆಲವು ಕೊಡವ ಮುಖಂಡರು ಚುನಾವಣೆ ಇಲ್ಲದೆ…
ಮಡಿಕೇರಿ ಸೆ.20 NEWS DESK : ರಾಜ್ಯ ಸರಕಾರದ ಮೂಲಕ ನಡೆಯಲಿರುವ ಜಾತಿ ಜನಗಣತಿ ಸಂದರ್ಭ ಸರ್ವ ಕೊಡವರು ಧರ್ಮವನ್ನು ಹಿಂದೂ ಮತ್ತು ಜಾತಿಯನ್ನು ಕೊಡವ ಎಂದು ಯಾವುದೇ ಗೊಂದಲವಿಲ್ಲದೆ ನಮೂದಿಸುವಂತೆ ವಿವಿಧ ಕೊಡವ ಸಮಾಜಗಳ ಪ್ರಮುಖರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ನಾಪೋಕ್ಲು ಕೊಡವ ಸಮಾಜದ ಮಾಜಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅವರು, ಜಾತಿ ಹಾಗೂ ಧರ್ಮ ಎರಡನ್ನೂ ಕೊಡವ ಎಂದು ನಮೂದಿಸುವಂತೆ ಕೆಲವರು ಕರೆ ನೀಡಿರುವುದು ವಿಷಾದನೀಯ ಮತ್ತು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಡವರು ಸಾಮರಸ್ಯದಿಂದ ಬದುಕು ಸಾಗಿಸುತ್ತಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕೊಡವ ಜನಾಂಗ ವಿಶಿಷ್ಟವಾದ ಭವ್ಯ ಸಂಸ್ಕೃತಿಯನ್ನು ಹೊಂದಿದೆ. ಕೊಡವ ಸಂಸ್ಕೃತಿ ಹಿಂದೂ ಧರ್ಮದೊಂದಿಗೆ ಹೊಂದಿಕೊಂಡಿದೆ. ಕೊಡವರು ನಾಗನಸ್ಥಾನ, ಅಯ್ಯಪ್ಪ ಬನ ಮತ್ತು ಊರಿನಲ್ಲಿ ಭಗವತಿಯನ್ನು ಹಿಂದೂ ಸಂಪ್ರದಾಯದ ಪ್ರಕಾರವೇ ಪೂಜಿಸುತ್ತಾರೆ. ಪ್ರತಿವರ್ಷ ಭಗವತಿ ಉತ್ಸವ ಹಿಂದು ಸಂಪ್ರದಾಯದಂತೆಯೇ ನಡೆಯುತ್ತದೆ. ಭಗವತಿ ದೇವಾಲಯಗಳಲ್ಲಿ ಕೊಡವರೇ ತಕ್ಕ ಮುಖ್ಯಸ್ಥರಾಗಿರುತ್ತಾರೆ. ತಲಕಾವೇರಿಯಲ್ಲಿ ಕುಲದೇವತೆ…
ಮಡಿಕೇರಿ ಸೆ.20 NEWS DESK : ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ಆಡಳಿತದ ವೇಗವನ್ನು ಕಂಡು ಗಲಿಬಿಲಿಗೊಂಡಿರುವ ಕಾಂಗ್ರೆಸ್ಸಿಗರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ನಗರದ ರಸ್ತೆಗಳ ಗುಂಡಿಮುಚ್ಚುವ ಕಾರ್ಯ ಟೆಂಡರ್ ಪ್ರಕ್ರಿಯೆಯ ಮೂಲಕವೇ ನಡೆಯಬೇಕು ಎಂಬ ಉದ್ದೇಶದಿಂದ ನಿಯಮ ಬಾಹಿರವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡದೆ ಮತ್ತು ಟೆಂಡರ್ ಪ್ರಕ್ರಿಯೆ ನಡೆಸದೆ ಎನ್ಡಿಆರ್ಎಫ್ ಹಣದಲ್ಲಿ ಏಕಾಏಕಿ ಗುಂಡಿಮುಚ್ಚುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದನ್ನು ಪ್ರಶ್ನಿಸಿದ ನಮ್ಮ ವಿರುದ್ಧ ಕಾಂಗ್ರೆಸ್ ವಕ್ತಾರರು ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ ಎನ್ನುವ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುಮಾರು 43 ಲಕ್ಷ ರೂ.ಗಳ ಕಾಮಗಾರಿಯನ್ನು ಒಬ್ಬನೇ ಗುತ್ತಿಗೆದಾರ ನಿರ್ವಹಿಸುತ್ತಿದ್ದಾರೆ. ಇದನ್ನು ಗಮನಿಸಿದ ನಗರದ ಇತರ ಗುತ್ತಿಗೆದಾರರು ಆಕ್ಷೇಪ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆ ಅಧ್ಯಕ್ಷರು ಟೆಂಡರ್ ನಡೆಸದೆ ನಡೆಯುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ. ಎಲ್ಲಾ…
ನಾಪೋಕ್ಲು ಸೆ.19 NEWS DESK : ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ “ಬದುಕಿಗೊಂದು ಆಸರೆಯಾಗೋಣ” ಕಾರ್ಯಕ್ರಮದ ಅಡಿಯಲ್ಲಿ ಸಂಗ್ರಹಿಸಿದ ಸಹಾಯಧನವನ್ನು ಸಮುದಾಯದ ನೊಂದ ಕುಟುಂಬಕ್ಕೆ ನೀಡಿ ಸಾಂತ್ವನ ಹೇಳಿದರು. ಅನಾರೋಗ್ಯದಿಂದ ಬಳಲುತ್ತಿರುವ ಚೇರಂಬಾಣೆಯ ಶಿವಣ್ಣ ಅವರ ಪತ್ನಿ ಗೀತಾ ಅವರ ಚಿಕಿತ್ಸೆಗೆ ಜಿಲ್ಲೆಯ ಕುಲಬಾಂಧವರಿಂದ ಸಂಗ್ರಹಗೊಂಡ 40,700 ರೂ. ಸಹಾಯಧವನ್ನು ಜಿಲ್ಲಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅವರ ಮನೆಗೆ ತೆರಳಿ, ಯೋಗಕ್ಷೇಮ ವಿಚಾರಿಸಿ ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಜಿಲ್ಲಾಧ್ಯಕ್ಷ ಕೆ.ಕುಶಾಲಪ್ಪ ಮೂಲ್ಯ, ಜಿಲ್ಲೆಯ ಮತ್ತು ಹೊರ ಜಿಲ್ಲೆಯ ಕುಲಬಾಂಧವರು ನೀಡಿದ ದೇಣಿಗೆಯನ್ನು ಶಿವಣ್ಣ ದಂಪತಿಗಳಿಗೆ ನೀಡಲಾಗಿದೆ. ಸರ್ವ ರೀತಿಯ ಸಹಕಾರ ನೀಡಿದ ಜಿಲ್ಲೆಯ ಮತ್ತು ಹೊರ ಜಿಲ್ಲೆಯ ಕುಲಬಾಂಧವರಿಗೆ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದರು. ಮುಂದೆಯೂ ಇದೇ ರೀತಿಯ ಸಹಕಾರ ದೊರಕಲಿ ಎಂದು ವಿನಂತಿಸಿದರು. ಕೊಡಗು ಜಿಲ್ಲಾ ಕುಲಾಲ ಕುಂಬಾರ…
ನಾಪೋಕ್ಲು ಸೆ.20 NEWS DESK : ಜೀವನದಲ್ಲಿ ಹೋರಾಡುವ ಶಕ್ತಿ ಕ್ರೀಡಾಂಗಣದಲ್ಲಿ ಸಿಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಲ್.ಚಿದಾನಂದ ಕುಮಾರ್ ಹೇಳಿದರು. ಕೊಡಗು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನಾಪೋಕ್ಲುವಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಚೆರಿಯಪರಂಬುವಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಮಡಿಕೇರಿ ತಾಲ್ಲುಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ, ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆ ಒಂದು ಗುರುವಿನ ಹಾಗೆ. ಸೋಲು ಗೆಲುವೆಂಬ ಸಮಬಾಳ್ವೆಯ ಪಾಠವನ್ನು ಕಲಿಸುತ್ತದೆ ಎಂದರು. ಕ್ರೀಡಾಕೂಟದ ಧ್ವಜಾರೋಹಣವನ್ನು ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ನೆರವೇರಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಎಸ್ಡಿಎಂಸಿ ಉಪಾಧ್ಯಕ್ಷರಾದ ಎನ್.ಎಸ್.ಉದಯಶಂಕರ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭ ವೇದಿಕೆಯಲ್ಲಿದ್ದ ಗಣ್ಯರು ತಮ್ಮ ಅನಿಸಿಕೆ ವ್ಯಕ್ತಪಡಿಸಿರು. ಕ್ರೀಡಾಕೂಟದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿಶಾಲ ಕುಶಾಲಪ್ಪ, ಮಡಿಕೇರಿ ತಾಲೂಕುವಿನ ವಿವಿಧ ಪದವಿ ಪೂರ್ವ ಕಾಲೇಜುಗಳ ಬೋಧಕರು…






