ಲೇಖಕ: admin

ಮಡಿಕೇರಿ NEWS DESK  ಜು.9 : ಕೊಡಗು ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಕರ್ನಾಟಕ ಭೂಕಂದಾಯ ಕಾಯ್ದೆಯನ್ನು ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಿರುವ ರೆಸಾರ್ಟ್‌ ಗಳನ್ನು ತಕ್ಷಣ ನೆಲಸಮಗೊಳಿಸಬೇಕೆಂದು ಎನ್ವಿರಾನ್ಮೆಂಟ್ ಐಂಡ್ ಹೆಲ್ತ್ ಫೌಂಡೇಶನ್ ಸಂಸ್ಥೆ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಕಿರಗಂದೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್ವಿರಾನ್ಮೆಂಟ್ ಐಂಡ್ ಹೆಲ್ತ್ ಫೌಂಡೇಶನ್ ನ ಅಧ್ಯಕ್ಷ ಕರ್ನಲ್ ಚೆಪ್ಪುಡಿರ ಪಿ.ಮುತ್ತಣ್ಣ ಅವರು ಜಿಲ್ಲೆಯ ವಿವಿಧೆಡೆ ಅಕ್ರಮ ರೆಸಾರ್ಟ್‌ ಗಳು ತಲೆ ಎತ್ತಿದ್ದು, ಭೂಕುಸಿತ ಪ್ರದೇಶಗಳಲ್ಲಿ ಅಪಾಯವನ್ನು ಎದುರಿಸುತ್ತಿವೆ. ಒಂದು ವೇಳೆ ಭೂಕುಸಿತ ಉಂಟಾಗಿ ರೆಸಾರ್ಟ್ಗಳು ಹಾನಿಗೀಡಾದರೆ ಇವುಗಳಲ್ಲಿ ತಂಗಿರುವ ಪ್ರವಾಸಿಗರು ಹಾಗೂ ಉದ್ಯೋಗಿಗಳು ಸಾವಿಗೀಡಾಗುವ ಸಾಧ್ಯತೆಗಳಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಅನ್ವಯ ಕೊಡಗಿನಲ್ಲಿ ತೋಟ, ಜಮ್ಮಾ, ಬಾಣೆ ಮತ್ತು ಜೌಗು ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪರಿವರ್ತಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ 2018ರಲ್ಲಿ ಕೊಡಗಿನ ಬೆಟ್ಟ ಪ್ರದೇಶಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತಗಳ ನಂತರ, ಕರ್ನಾಟಕ ಸರ್ಕಾರವು 2020 ಜೂನ್…

Read More

ಮಡಿಕೇರಿ ಜು.9 NEWS DESK : ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮದ ಗ್ರಾಮ ಅಬ್ಬಿ ಜಲಪಾತ ರಸ್ತೆಯಲ್ಲಿರುವ ಕೊಡಗು ಜಿಲ್ಲಾ ಮಟ್ಟದ ಗೋಶಾಲೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ  ಪರಿಶೀಲನೆ ನಡೆಸಿದರು. 8 ಎಕ್ರೆ ಜಾಗದ ಸುತ್ತ ಚೈನ್ ಲಿಂಕ್ ಮೆಶ್ ಅಳವಡಿಸುವುದು ಮತ್ತು ನೂತನ ಶೆಡ್ ನಿರ್ಮಾಣಕ್ಕೆ ಸೂಕ್ತ ಅನುದಾನ ಒದಗಿಸಲುಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರಿಗೆ ದೂರವಣಿ ಕರೆ ಮಾಡಿ ಮನವಿ ಸಲ್ಲಿಸಿದರು.

Read More

ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿಯಾಗಿದ್ದ ವಿನಾಯಕ್ ನರ್ವಾಡೆ ವರ್ಗಾವಣೆಗೊಂಡಿದ್ದಾರೆ. ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

Read More

ಮಡಿಕೇರಿ ಜು.9 NEWS DESK : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಸೋಮವಾರಪೇಟೆ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರವಾಸ ಮಾಡಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿದರು. ಶಾಂತಳ್ಳಿ ಮತ್ತು ಬೆಟ್ಟದಳ್ಳಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದರು, ಕೊಡಗಿನ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಘೋಷಿಸಿದ ಅವರು, ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದ ಅನಿವಾರ್ಯತೆಯಿದ್ದು, ಪಕ್ಷ ಸಂಘಟನೆಗೆ ಶ್ರಮ ವಹಿಸಬೇಕೆಂದು ಕರೆ ನೀಡಿದರು.  ಜಿಲ್ಲಾ ಅಧ್ಯಕ್ಷ ರವಿ ಕಾಳಪ್ಪ, ಮಂಡಲ ಅಧ್ಯಕ್ಷ ಗೌತಮ್ ಗೌಡ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಸ್.ಜಿ.ಮೇದಪ್ಪ, ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷ ಭಾರತೀಶ್, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಚಲನ್ ಕುಮಾರ್, ಮಹೇಶ್ ಜೈನಿ, ವಿ.ಕೆ.ಲೋಕೇಶ್ , ಶಕ್ತಿ ಕೇಂದ್ರ ಅಧ್ಯಕ್ಷರಾದ ಮಧು, ದೇಶರಾಜ್,  ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು, ಮೋರ್ಚಾ ಪ್ರಮುಖರು, ಬೂತ್ ಅಧ್ಯಕ್ಷರು ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಸುಂಟಿಕೊಪ್ಪ ಜು.9 NEWS DESK : ಸುಂಟಿಕೊಪ್ಪದಲ್ಲಿ ಕಳೆದ 16 ವರ್ಷಗಳಿಂದ ಆಶಾ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಎಸ್.ಶಿವಮ್ಮ, ಪಾರ್ವತಿ, ಟಿ.ಆರ್.ವೀಣಾ ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಬಿಳ್ಕೋಡಲಾಯಿತು. ಕಾನ್‍ಬೈಲ್-ನಾಕೂರು ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯಾಗಿದ್ದ ಬಿ.ಎಸ್.ಶಿವಮ್ಮ, ಅತ್ತೂರು ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬಿಬಾಣೆಯಲ್ಲಿ ವೀಣಾ, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಪ್ ಭಾಗದಲ್ಲಿ ಆಶಾ ಕಾರ್ಯಕರ್ತೆಯಾರಾಗಿ ಸೇವೆಲ್ಲಿಸುತ್ತಿದ್ದ ಪಾರ್ವತಿ ಅವರುಗಳಿಗೆ ಸಹದ್ಯೋಗಿಗಳು ಫಲ ತಾಂಬೂಲ ನೀಡಿ ಸನ್ಮಾನಿಸಿ ಬೀಳ್ಕೋಟರು.

Read More

ಸೋಮವಾರಪೇಟೆ ಜು.9 NEWS DESK : ಕರ್ನಾಟಕ ಒಕ್ಕಲಿಗರ ಸಂಘದ ಸದಸ್ಯತ್ವ ಆಂದೋಲನ ಪ್ರಾರಂಭವಾಗಿದೆ. ಆಸಕ್ತಿಯಿರುವ ಒಕ್ಕಲಿಗರು ಸದಸ್ಯತ್ವ ಪಡೆದುಕೊಳ್ಳಬಹುದು ಎಂದು ಸಂಘದ ಕೊಡಗು ಜಿಲ್ಲಾ ನಿರ್ದೇಶಕ ಹೆಚ್.ಎನ್.ರವೀಂದ್ರ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರಪೇಟೆ ಮಾತನಾಡಿದ ಅವರು, ಒಕ್ಕಲಿಗರ ಸೌಹರ್ದ ಸಹಕಾರ ಸಂಘದಲ್ಲಿ ಸದಸ್ಯತ್ವ ನೋಂದಣಿ ಫಾರಂ ದೊರೆಯಲಿದ್ದು, 1650 ರೂ.ಗಳನ್ನು ಪಾವತಿಸಿ, ಅರ್ಜಿ ಸಲ್ಲಿಸಬಹುದು. ಎಸ್‍ಎಸ್‍ಎಲ್‍ಸಿ ಮಾಕ್ರ್ಸ್‍ಕಾರ್ಡ್ ಅಥವಾ ಜಾತಿ ದೃಢೀಕರಣ ಪತ್ರವನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮುಂದಿನ ಎರಡು ತಿಂಗಳ ಕಾಲಾವಕಾಶ ಮಾತ್ರ ಇರುತ್ತದೆ ಎಂದು ಹೇಳಿದರು. ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿಯಲ್ಲಿ ಶೇ.95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ  ಒಕ್ಕಲಿಗ ಗೌಡ ಜನಾಂಗದ ವಿದ್ಯಾರ್ಥಿಗಳಿಗೆ ಒಕ್ಕಲಿಗರ ಸಂಘದಿಂದ 5 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಹೇಳಿದರು. ಅರ್ಜಿ ಫಾರಂನೊಂದಿಗೆ ಮಾಕ್ರ್ಸ್ ಕಾರ್ಡ್ ಪ್ರತಿ ಸಲ್ಲಿಸಬೇಕು ಎಂದು ಹೇಳಿದರು. ನಾಡ ಪ್ರಭು ಕೆಂಪೇಗೌಡ ಜಯಂತಿ ಆಚರಿಸಿದ ನೋಂದಾಯಿತ ಜಿಲ್ಲಾ ಮತ್ತು ತಾಲ್ಲೂಕು ಒಕ್ಕಲಿಗರ ಸಂಘಕ್ಕೆ ಸಹಾಯಧನ ನೀಡಲಾಗುತ್ತದೆ. ನೊಂದಣಿ…

Read More

ಸೋಮವಾರಪೇಟೆ ಜು.9 NEWS DESK : ಉತ್ತರ ಕೊಡಗಿನ ಸೂರ್ಲಬ್ಬಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಭತ್ತದ ಗದ್ದೆಗಳಿಗೆ ದಾಳಿ ನಡೆಸಿ ಸಸಿಮಡಿಯನ್ನು ತುಳಿದು ನಾಶಪಡಿಸಿದೆ. ಮುಟ್ಲು, ಹಮ್ಮಿಯಾಲ ಹಾಗೂ ಸೂರ್ಲಬ್ಬಿ ವ್ಯಾಪ್ತಿಯಲ್ಲಿ ಮೂರರಿಂದ ನಾಲ್ಕು ಕಾಡಾನೆಗಳು ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮಸ್ಥರು ಭತ್ತದ ನಾಟಿ ಕೆಲಸಕ್ಕೆ ತಯಾರಿ ನಡೆಸಿದ್ದರು. ಸೂರ್ಲಬ್ಬಿ ಗ್ರಾಮದ ಅಪ್ಪುಡ ಉತ್ತಪ್ಪ, ಅಪ್ಪುಡ ಗಣಪತಿ ಅವರ ಗದ್ದೆಯಲ್ಲಿ ಬೆಳೆದು ನಿಂತಿದ್ದ ಸಸಿಮಡಿಯನ್ನು ಆನೆಗಳ ಹಿಂಡು ನಾಶ ಪಡಿಸಿವೆ. ಕಳೆದ ಕೆಲವು ದಿನಗಳಿಂದ ಕುಂಬಾರಗಡಿಗೆ, ಮಂಕ್ಯ, ಕಿಕ್ಕರಳ್ಳಿ ಗ್ರಾಮದಲ್ಲೂ ಆನೆಗಳ ದಾಳಿ ಮುಂದುವರೆದಿದ್ದು, ಅರಣ್ಯ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಮಂಕ್ಯ ಗ್ರಾಮದ ಚಾಮೇರ ದಿನೇಶ್ ಬೆಳ್ಯಪ್ಪ ಆರೋಪಿಸಿದ್ದಾರೆ. ಅರಣ್ಯ ಇಲಾಖೆ ಕಾಡಾನೆಗಳನ್ನು ತಕ್ಷಣವೇ ಕಾಡಿಗಟ್ಟಲು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More

ಸೋಮವಾರಪೇಟೆ ಡಿ.9 NEWS DESK : ರೈತ ಹೋರಾಟ ಸಮಿತಿ ವತಿಯಿಂದ ಸಿ ಮತ್ತು ಡಿ ಜಾಗದ ವಿಚಾರದಲ್ಲಿನ ದೋಷ ಸರಿಪಡಿಸುವಂತೆ ಶಾಸಕ ಡಾ.ಮಂತರ್ ಗೌಡ ಸಮ್ಮುಖದಲ್ಲಿ ಕರ್ನಾಟಕ ಅಡ್ವಕೇಟ್ ಜನರಲ್ ಸಿ.ಕೆ.ಶಶಿಕಿರಣ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಂಗಳೂರಿನ ಹೈಕೋರ್ಟ್ ಕಚೇರಿಯಲ್ಲಿ ಮನವಿ ಸಲ್ಲಿಸಿದ ಶಾಸಕರು, ಸಿ ಆ್ಯಂಡ್ ಡಿ ಭೂಮಿಯ ಸಮಸ್ಯೆ ಬಗ್ಗೆ ವಿವರಿಸಿದರು. ಸಿ ಆ್ಯಂಡ್ ಡಿ ಭೂಮಿಯ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ, ಸರ್ಕಾರ ಗಮನಕ್ಕೆ ತರಲಾಗುವುದು ಎಂದು ಶಶಿಕಿರಣ್ ಶೆಟ್ಟಿ ಭರವಸೆ ನೀಡಿದರು. ಕೊಡಗಿನಲ್ಲಿರುವ ರೈತರ ಸಂಖ್ಯೆ ಮತ್ತು ಸಿ ಆ್ಯಂಡ್ ಡಿ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ಕುಟುಂಬಗಳ ವಿವರವನ್ನು ಸೇರಿದಂತೆ ಕೆಲ ದಾಖಲಾತಿಗಳನ್ನು ನೀಡುವಂತೆ ಸಮಿತಿಯ ಪದಾಧಿಕಾರಿಗಳಿಗೆ ತಿಳಿಸಿದರು.  ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ಮಾಹಿತಿ ನೀಡಿ, ಜಿಲ್ಲೆಯಲ್ಲಿರುವ ಸಿ ಆ್ಯಂಡ್ ಡಿ ಭೂಮಿಯನ್ನು ಸರ್ಕಾರ, ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿಸಿ, ರೈತರಿಗೆ ದಾಖಲಾತಿ ಮಾಡಿಸಿಕೊಟ್ಟರೆ ಕೊಡಗಿನಲ್ಲಿ 50…

Read More

ಸೋಮವಾರಪೇಟೆ ಜು.9 NEWS DESK : ರಾತ್ರಿ ಸುರಿದ ಗಾಳಿ-ಮಳೆ ತಾಲ್ಲೂಕಿನ ಹಲವೆಡೆ ಮನೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳು ಭೇಟಿ ನೀಡಿ ಮಾಹಿತಿ ಪಡೆದರು. ಸಮೀಪದ ನೇರುಗಳಲೆ ಗ್ರಾ.ಪಂ ವ್ಯಾಪ್ತಿಯ ತಣ್ಣೀರುಹಳ್ಳ ಗ್ರಾಮದ ಲಕ್ಷ್ಮೀ ಎಂಬವರ ವಾಸದ ಮನೆ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ. ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಬೆಟ್ಟ ಗ್ರಾಮದ ಪ್ರಮೀಳ ಅವರ ಮನೆಯ ಸೋರುತ್ತಿದ್ದು, ತಾತ್ಕಾಲಿಕವಾಗಿ ಪಂಚಾಯಿತಿ ವತಿಯಿಂದ ಟಾರ್ಪಲನ್ನು ಪಂಚಾಯಿತಿ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ನತೀಶ್ ಮಂದಣ್ಣ ವಿತರಿಸಿದರು. ಬೆಟ್ಟದಳ್ಳಿ ಗ್ರಾ ಪಂ. ವ್ಯಾಪ್ತಿಯ ಬೇಕನಳ್ಳಿ ಗ್ರಾಮದ ಮುತ್ತಣ್ಣ ಎಂಬವರ ಮನೆಯ ಗೋಡೆ ಕುಸಿದಿರುವ ಪರಣಾಮ ಪಿಡಿಒ ರವಿ ಅವರು ಟಾರ್ಪಲ್ ವಿತರಿಸಿದರು.

Read More

ಮಡಿಕೇರಿ ಜು.9 NEWS DESK :  ನಾಡಿನ ಜೀವನದಿ, ಕಾವೇರಿ ಉಗಮಸ್ಥಾನ ತಲಕಾವೇರಿ ಹಾಗೂ ಪವಿತ್ರ ಕ್ಷೇತ್ರ ಶ್ರೀಭಗಂಡೇಶ್ವರ ದೇವಾಲಯಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮತ್ತು ಕುಟುಂಬದವರು ಬುಧವಾರ ಭೇಟಿ ನೀಡಿ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಎ.ಎಸ್.ಪೊನ್ನಣ್ಣ ಅವರ 51ನೇ ಜನ್ಮ ದಿನದ ಪ್ರಯುಕ್ತ ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಮಹಾಸಂಕಲ್ಪ ಪ್ರಾರ್ಥನೆ ಸಲ್ಲಿಸಿದರು. ಮೊದಲಿಗೆ ಮಹಾ ಗಣಪತಿಗೆ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ನಾಡಿನ ಎಲ್ಲರಲ್ಲಿ ಸಮೃದ್ಧಿ, ಸಂತಸ ತರುವಂತಾಗಲಿ ಎಂದು ಪ್ರಾರ್ಥಿಸಿದರು, ನಂತರ ಮಹಾವಿಷ್ಣು ಮತ್ತು ಸುಬ್ರಮಣ್ಯ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಲಕಾವೇರಿಗೆ ತೆರಳಿ ಕುಂಕುಮಾರ್ಚನೆ ಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ತಾಯಿ ಕಾವೇರಿ ಮಾತೆ ಶಾಸಕರಿಗೆ ಒಳಿತು ಉಂಟುಮಾಡಲಿ, ಸರ್ಕಾರದಲ್ಲಿ ಮತ್ತಷ್ಟು ಅವಕಾಶ ದೊರೆಯಲಿ ಎಂದು ಪ್ರಾರ್ಥಿಸಿದರು.…

Read More