ಸೋಮವಾರಪೇಟೆ ಸೆ.4 NEWS DESK : ಕೃಷಿ ಭೂಮಿಯನ್ನು ಮೀಸಲು ಅರಣ್ಯವನ್ನಾಗಿ ಪರಿವರ್ತನೆ ಮಾಡಿದರೆ ಮನುಷ್ಯ ತಿನ್ನಬೇಕಾದ ಆಹಾರ ಬೆಳೆಗಳನ್ನು ಎಲ್ಲಿ ಬೆಳೆಯುವುದು ಎಂದು ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ಪ್ರಶ್ನಿಸಿದರು. ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಗ್ರಾಮೀಣ ಭಾಗದ ಕೆಲ ರೈತರ ಪೈಸಾರಿ ಕೃಷಿ ಭೂಮಿಯ ಮ್ಯೂಟೆಷನ್ ಕಾಫಿ(ಎಂ.ಸಿ.)ಯಲ್ಲಿ ಸಿ ಆ್ಯಂಡ್ ಡಿ ಎಂದು ದಾಖಲಾಗುತ್ತಿತ್ತು ಕೃಷಿಕರು ಆತಂಕಗೊಂಡಿದ್ದಾರೆ. ಮ್ಯೂಟೆಷನ್ ಕಾಫಿಯಲ್ಲಿ ಪೈಸಾರಿ ಜಾಗ, ಸಿ ಆ್ಯಂಡ್ ಡಿ ಎಂದು ಪರಿವರ್ತನೆಯಾದರೆ, ಕೃಷಿಕರು ಯಾವುದೇ ಭೂಮಿ ದಾಖಲಾತಿಯನ್ನು ಪಡೆಯಲು ಸಾಧ್ಯವಿಲ್ಲ. ಇದರಿಂದ ಕೃಷಿಕರು ಆತಂಕಗೊಂಡಿದ್ದಾರೆ ಎಂದು ಹೇಳಿದರು. ಸೋಮವಾರಪೇಟೆ ತಾಲ್ಲೂಕಿನ ನೇಗಳ್ಳೆ ಗ್ರಾಮದಲ್ಲಿ ಜಾಗವನ್ನು ಸಿ ಆ್ಯಂಡ್ ಡಿ ಎಂದು ಅರಣ್ಯ ಇಲಾಖೆಯವರು ಮೇಲಾಧಿಕಾರಿಗಳಿಗೆ ವರದಿ ನೀಡಿರುವ ಬಗ್ಗೆ ಮಾಹಿತಿ ಇದ್ದು, ಕೃಷಿಕರಿಗೆ ಯಾವುದೇ ಮಾಹಿತಿ ನೀಡದೆ, ಕೃಷಿಕರ ಆಹವಾಲು ಸ್ವೀಕರಿಸದೆ, ಏಕಾಏಕಿ ಸಿ ಆ್ಯಂಡ್ ಡಿ ಭೂಮಿ ಎಂದು ಗುರುತು ಮಾಡಿರುವುದು ನಿಯಮ…
ಲೇಖಕ: admin
ಮಡಿಕೇರಿ ಸೆ.4 NEWS DESK : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 24.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.89 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2656.81 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2642.19 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.95 ಮಿ.ಮೀ. ಕಳೆದ ವರ್ಷ ಇದೇ ದಿನ 1.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4006.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3799.21 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2384.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2380.40 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಬೆಂಗಳೂರು ಸೆ.4 NEWS DESK : ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಮತ್ತು ಏರೋಡ್ರೋಮ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಬುಧವಾರ ಚರ್ಚೆ ನಡೆಸಿದರು. ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಸರ್ಕಾರದ ಮುಂದೆ ಎರಡು ಯೋಜನೆಗಳಿವೆ. ಇಲ್ಲಿ ಮೇಲ್ಸೇತುವೆ ಬಂದಿರುವುದರಿಂದ ಸ್ವಲ್ಪ ಅಡಚಣೆಯಾಗುತ್ತಿದೆ. ಮೇಲ್ಸೇತುವೆ ಬರುವ ಬಗ್ಗೆ ಮೊದಲೇ ತಿಳಿದಿರಲಿಲ್ಲ. ಇಲ್ಲಿ 200 ಎಕರೆಗಿಂತಲೂ ಹೆಚ್ಚಿನ ಸ್ಥಳವಿದ್ದು, ಜಕ್ಕೂರು ವೈಮಾನಿಕ ತರಬೇತಿ ಶಾಲೆ ನಡೆಯುತ್ತಿದೆ. ರನ್ ವೇ ವಿಸ್ತರಣೆಗೆ ಪಕ್ಕದಲ್ಲಿಯೇ ಜಮೀನನ್ನು ಪಡೆಯಬೇಕು. ಇದಕ್ಕೆ ಮೂರು ಎಕರೆಗಿಂತ…
ನಾಪೋಕ್ಲು ಸೆ.4 NEWS DESK : ಬೇತು ಗ್ರಾಮದ ಸೇಕ್ರೆಡ್ ಆರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿ ಜನರಲ್ ತಿಮ್ಮಯ್ಯ ಶಾಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 17 ವರ್ಷದ ಒಳಗಿನ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಜಯಗಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ರಯಾನ್, ರೋಹನ್ ರೈ, ಮನ್ಸೂರ್ ಮತ್ತು ಶಾಮಿಲ್ ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು NEWS DESK ಸೆ.3 : ನಾಪೋಕ್ಲು ಕೊಡವ ಸಮಾಜದ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ ಅವರ ತಂದೆ ನಾಪೋಕ್ಲುವಿನ ನಿವೃತ್ತ ಮುಖ್ಯ ಶಿಕ್ಷಕ ಕುಲ್ಲೇಟಿರ ಗುರುವಪ್ಪ (87) ಅವರು ಇಂದು ಸಂಜೆ ನಿಧನರಾದರು. ಮೃತರ ಅಂತ್ಯಕ್ರಿಯೆ ಸೆ.4ರಂದು ನಾಪೋಕ್ಲುವಿನ ಕುಲ್ಲೇಟಿರ ಐನ್ ಮನೆಯಲ್ಲಿ ನಡೆಯಲಿದೆ. ಕುಲ್ಲೇಟಿರ ಗುರುವಪ್ಪ ಅವರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮಡಿಕೇರಿ NEWS DESK ಸೆ.3 : ಕಾರು ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಕಲ್ಲುಗುಂಡಿ ಬಳಿ ನಡೆದಿದೆ. ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಅಪಘಾತವಾಗಿದೆ. ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದ ಶೋಭಾ(45) ಮೃತ ದುರ್ದೈವಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶೋಭಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ದೇವಯ್ಯ(54) ಹಾಗೂ ಪ್ರಯಾಣಿಕರಾದ ವನಜಾಕ್ಷಿ(44) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ನಡುವೆ ತಿರುವು ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಶಾಲನಗರ ಸೆ.3 NEWS DESK : ಸ್ಥಳೀಯ ಸಹಕಾರ ಸಂಘಗಳ ಮೂಲಕ ಪ್ರತಿಯೊಬ್ಬ ಸದಸ್ಯರ ಏಳಿಗೆಯ ಜೊತೆಗೆ ಸಮಾಜದ ನಿರಂತರ ಅಭಿವೃದ್ಧಿ ಸಾಧ್ಯ ಎಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದಲ್ಲಿ ನಾಡಪ್ರಭು ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದರು. ವ್ಯಕ್ತಿ ಅಭಿವೃದ್ಧಿ ಮೂಲಕ ಕುಟುಂಬಗಳ ಆರ್ಥಿಕ ಸಮೃದ್ಧಿ ಸಾಧ್ಯ ಎಂದ ಶ್ರೀಗಳು, ಪ್ರತಿಯೊಬ್ಬರೂ ಸೋಮಾರಿತನ ಬಿಟ್ಟು ಕೌಶಲ್ಯಾಧಾರಿತರಾಗಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ಮುಂದಿನ ದಿನಗಳಲ್ಲಿ ಎಲ್ಲೆಡೆ ನಡೆಯಲಿರುವ ಜನಗಣತಿ ಕಾರ್ಯ ಸಂದರ್ಭ ಪ್ರತಿಯೊಬ್ಬರೂ ಪ್ರಜ್ಞಾವಂತರಾಗಿ ಗಣತಿ ಕಾರ್ಯದಲ್ಲಿ ಪಾಲ್ಗೊಂಡು ಮಾಹಿತಿ ನೀಡಬೇಕು. ಆ ಮೂಲಕ ಸಮಾಜದ ಶೈಕ್ಷಣಿಕ ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಅವಕಾಶ ಕಲ್ಪಿಸಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ವಾಸ್ತವ ವಿಚಾರವನ್ನು ನೀಡಬೇಕಾಗಿದೆ ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ…
ಮಡಿಕೇರಿ ಸೆ.3 NEWS DESK : ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ರನ್ನರ್ಸ್ ಟ್ರೋಪಿಯನ್ನು ತಮ್ಮದಾಗಿಸಿಕೊಂಡರು. ತಂಡದಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಸಣ್ಣುವಂಡ ರಶ್ಮಿ ಪೊನ್ನಮ್ಮ, ಬೊಳ್ಳೆಪಂಡ ದೀಪ್ತಿ ತಂಗಮ್ಮ, ಪಳೆಯಂಡ ಸಿ.ಕಾಜಲ್, ಬಿ.ಎಸ್.ಸೃಷ್ಟಿ, ನಿಲ್ಮಾಡ್ ತನ್ಯಾ ರೈ, ಕುಟ್ಟನ ಎಂ.ಯಶ್ಮಿತ, ಪುಚ್ಚಿ ಮಂಡ ಯು ತನಿಶಾ ಭಾಗವಹಿಸಿದ್ದರು. ಇವರಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಬಿ.ಎಸ್.ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನವನ್ನು ನೀಡಿದರು. ಈ ಸಂದರ್ಭ ಕಾವೇರಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್, ಕಾರ್ಯದರ್ಶಿ ಪಿ.ಎನ್.ವಿನೋದ್, ದೈಹಿಕ ಶಿಕ್ಷಕಿಯಾದ ಮೋನಿಕಾ ಉಪಸ್ಥಿತರಾಗಿದ್ದು, ತಂಡಕ್ಕೆ ಉತ್ತಮ ರೀತಿಯಲ್ಲಿ ಉತ್ತೇಜನವನ್ನು ನೀಡಿರುತ್ತಾರೆ. ತಂಡದ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಿಕಿ ಹಾಗೂ ಬೋಧಕ ಬೋಧಕೇತರ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಸೆ.3 NEWS DESK : ಅಮ್ಮತಿಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ಖೋ ಖೋ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ತಂಡ ರನ್ನರ್ಸ್ ಟ್ರೋಫಿ ತಮ್ಮದಾಗಿಸಿಕೊಂಡಿದೆ. ತಂಡದಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಪಿ.ಜಿ.ಹಿತಾರ್ಥ್, ಟಿ.ಎಫ್.ಮಹಮ್ಮದ್ ಡಿಯಾನ್, ಕೆ.ಎನ್.ನಜ್ವಾನ್ ಇಸ್ಮಾಯಿಲ್, ಬಿ.ಎಲ್.ಯಶ್ವಿನ್ ಸುಬ್ಬಯ್ಯ, ಅಮ್ಮಂಡ ತನಿಷ್ ನಾಣಯ್ಯ, ಬಿ.ಜಿ.ರೋಷನ್, ಯು. ಐಚಂಡ ತಲೀ ಶ್ ತಿಮ್ಮಣ್ಣ, ದಿಲನ್ ಗೌಡ, ಎ.ಹೆಚ್.ಅಚ್ಚಪಂಡ ಜಗತ್, ಪಿ.ಪುಗ್ಗೇರ ಗದಿನ್ ಬೋಪ್ಪಣ್ಣ, ಕೆ.ಎನ್.ಮೊಹಮ್ಮದ್ ಜಿಧಾನ್, ಪಿ.ಜೆ.ಹೃದಯ್ ಭಾಗವಹಿಸಿದ್ದರು. ತಂಡಕ್ಕೆ ದೈಹಿಕ ಶಿಕ್ಷಕರುಗಳಾದ ಮೋನಿಕ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿರಾಜಪೇಟೆ ಸೆ.3 NEWS DESK : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಗಣಪತಿ ಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗೌರಿ ಗಣೇಶ ಮೂರ್ತಿಯನ್ನು ಶ್ರದ್ದಾ ಭಕ್ತಿಯಿಂದ ವಿಸರ್ಜಿಸಲಾಯಿತು. ಶ್ರೀ ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗೆ ಏಳು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಸಲ್ಲಿಸಿಲಾಯಿತು. ವಿಸರ್ಜನೋತ್ಸವದಂದು ಮಧ್ಯಾಹ್ನ ಮಹಾಪೂಜೆಯನ್ನು ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ನಂತರ ವಿಶೇಷ ಪ್ರಾರ್ಥನೆ, ಪೂಜೆಯನ್ನು ಸಲ್ಲಿಸುವುದರ ಮೂಲಕ ಹೂವಿನ ಅಲಂಕೃತ ಮಂಟಪದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭ ಭಕ್ತಾದಿಗಳು ಹಾಗೂ ಗ್ರಾಮಸ್ಥರು ವಿಶೇಷ ಪೂಜೆಯನ್ನು ಮಹಾಗಣಪತಿಗೆ ಸಲ್ಲಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಕುಣಿತ ಭಜನೆಯ ತಂಡ ಹಾಗೂ ಸ್ಥಳೀಯ ಮಕ್ಕಳಿಂದ ಕುಣಿತ ಭಜನೆಯು ಮೆರವಣಿಗೆಯ ಉದ್ದಕ್ಕೂ ಸಾಗಿ ಆಕರ್ಷಣೆಯನ್ನು ಹೆಚ್ಚಿಸಿತು. ಕಲಾ ತಂಡದವರು ಗೊಂಬೆ ವೇಷವನ್ನು ಧರಿಸಿ ನೃತ್ಯವನ್ನು ಮಾಡಿದರು. ರುದ್ರಮ್ ಚಂಡೆ ಬಳಗದವರಿಂದ ಚಂಡೆ ಸೇವೆಯು…






