ಮಡಿಕೇರಿ ಆ.14 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.
ಲೇಖಕ: admin
ಮಡಿಕೇರಿ ಆ.14 NEWS DESK : ಕೊಡಗು ಜಿಲ್ಲೆ ಕ್ರೀಡಾ ಚಟುವಟಿಕೆಗಳಿಗೆ ಹೆಸರು ವಾಸಿಯಾಗಿದೆ. ಈ ಹಿನ್ನೆಲೆ ಭಾರತೀಯ ಕ್ರೀಡಾ ಪ್ರಾಧಿಕಾರದ ಸಹಕಾರೊಂದಿಗೆ ಕೊಡಗು ವಿವಿಯಲ್ಲಿ ‘ಸೆಂಟರ್ ಆಫ್ ಸ್ಪೋಟ್ಸ್ ಎಕ್ಸಲೆನ್ಸ್’ ಕೇಂದ್ರವನ್ನು ತೆರೆಯುವ ಚಿಂತನೆ ಇರುವುದಾಗಿ ವಿವಿ ಕುಲಪತಿಗಳಾದ ಪ್ರೊ.ಅಶೋಕ ಸಂಗಪ್ಪ ಆಲೂರ ತಿಳಿಸಿದರು. ಇತ್ತೀಚೆಗೆ ನವದೆಹಲಿಯಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಈ ನಿಟ್ಟಿನಲ್ಲಿ ಮಾತುಕತೆಗಳನ್ನು ನಡೆಸಲಾಗಿದೆಯೆಂದು ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಡಿಕೇರಿ ಆ.14 NEWS DESK : ಕೊಡಗಿನಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ರಾಜ್ಯದ ಶೇಕಡವಾರು ಪ್ರಮಾಣಕ್ಕಿಂತ ಅತ್ಯಂತ ಕಡಿಮೆ ಇದ್ದು, ಜಿಲ್ಲೆಯ ಪ್ರತಿ ವಿದ್ಯಾರ್ಥಿಯು ಉನ್ನತ ಶಿಕ್ಷಣವನ್ನು ಪಡೆಯಬೇಕೆನ್ನುವ ಉದ್ದೇಶ ಕೊಡಗು ವಿಶ್ವವಿದ್ಯಾನಿಲಯದ್ದಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿರುವುದಾಗಿ ಕೊಡಗು ವಿವಿ ಕಲಪತಿಗಳಾದ ಪ್ರೊ.ಅಶೋಕ ಸಂಗಪ್ಪ ಆಲೂರ ತಿಳಿಸಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಕರ್ನಾಟಕದಲ್ಲಿ ಶೇ.33 ಇದ್ದರೆ, ಕೊಡಗಿನಲ್ಲಿ ಇದರ ಪ್ರಮಾಣ ಕೇವಲ ಶೇ.18. ಈ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೊಡಗು ವಿವಿ ಶ್ರಮಿಸುತ್ತಿದ್ದು, ವಿವಿಯ ಸ್ನಾತಕೋತ್ತರ ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶವನ್ನು ಪಡೆಯಬೇಕೆಂದು ವಿನಂತಿಸಿಕೊಂಡರು. :: ಮೂರು ಹೊಸ ವಿಷಯಗಳ ಪಿಜಿ ಆರಂಭ :: ಚಿಕ್ಕಅಳುವಾರದ ಕೊಡಗು ವಿವಿಯಲ್ಲಿ ಪ್ರಸಕ್ತ ಸಾಲಿನಿಂದ ವಿಜ್ಞಾನ ವಿಭಾಗದಲ್ಲಿ ‘ಸಸ್ಯ ಶಾಸ್ತ್ರ’, ‘ಪರಿಸರ ವಿಜ್ಞಾನ’ ಹಾಗೂ ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ’ ಹೊಸ ವಿಷಯಗಳ ಸ್ನಾತಕೋತ್ತರ ಪದವಿಗೆ ಅವಕಾಶವನ್ನು ಒದಗಿಸಲಾಗಿದೆಯೆಂದು…
ಮಡಿಕೇರಿ ಆ.14 NEWS DESK : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಆಗಸ್ಟ್, 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯುವ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ, ಕೊಡಗು ಜಿಲ್ಲೆ ಇವರ ವತಿಯಿಂದ ಆಯೋಜಿಸಿರುವ 450 ಹಾಸಿಗೆ ಸಾಮಥ್ರ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಲಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ ಕಾಮಗಾರಿಯ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ವರುಣ್ ಕುಮಾರ್ ಬಿ. ಅವರು ತಿಳಿಸಿದ್ದಾರೆ.
ಮಡಿಕೇರಿ ಆ.14 NEWS DESK : ಭಾರತದ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ ಜನ್ಮ ದಿನದ ಪ್ರಯುಕ್ತ ಕೊಡಗಿನ ವಿವಿಧ ಗ್ರಂಥಾಲಯಗಳಲ್ಲಿ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ಕಚೇರಿ ಹಾಗೂ ಇದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಶಾಖಾ ಗ್ರಂಥಾಲಯಗಳು, ಮೇಲ್ಜರ್ಜೆಗೇರಿದ ಮುಳ್ಳುಸೋಗೆ ಗ್ರಂಥಾಲಯ, ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯ, ಅಲೆಮಾರಿ ಸಮುದಾಯ ಗ್ರಂಥಾಲಯ, ಜಿಲ್ಲಾ ಕಾರಾಗೃಹ ವಾಚನಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಪುಸ್ತಕ ಪ್ರದರ್ಶನ ಏರ್ಪಡಿಸುವ ಮೂಲಕ ಆಚರಿಸಲಾಯಿತು. ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ ಮಡಿಕೇರಿ ಕಚೇರಿಯಲ್ಲಿ ಪುಸ್ತಕ ಪ್ರದರ್ಶನವನ್ನು ವಿಶ್ರಾಂತ ಆಕಾಶವಾಣಿ ಉದ್ಘೋಷಕರು ಹಾಗೂ ಸಾಹಿತಿ ಸುಬ್ರಾಯ ಸಂಪಾಜೆ ಅವರು ಉದ್ಘಾಟಿಸಿ ಮಾತನಾಡಿ, ಡಾ.ಎಸ್.ಆರ್.ರಂಗನಾಥನ್ ಅವರ ಜನ್ಮ ದಿನಾಚರಣೆಯ ಈ ಸುಸಂದರ್ಭದಲ್ಲಿ ಗ್ರಂಥಪಾಲಕರ ದಿನಾಚರಣೆ ಆಚರಿಸುವುದು ಅರ್ಥಪೂರ್ಣವಾಗಿದೆ ಎಂದರು. ‘ಗ್ರಂಥಾಲಯವು ಅಕ್ಷರದ ಮೂಲಕ ತಿಳುವಳಿಕೆಯನ್ನು ಜ್ಞಾನ ಸಂಪತ್ತನ್ನು ಲೋಕದ ಮನಸ್ಸು ಮನಸ್ಸುಗಳಿಗೆ ಪಸರಿಸುವಂತಹ ಕೆಲಸ ಮಾಡುತ್ತಿದೆ. ಅಕ್ಷರ ಎನ್ನುವುದೇ ಒಂದು…
ಮಡಿಕೇರಿ ಆ.14 NEWS DESK : ಕೊಡಗು ಜಿಲ್ಲಾ ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಜಂಟಿ ಆಶ್ರಯದಲ್ಲಿ ಆ.20 ರಂದು ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ್ ಅರಸು ಅವರ 110ನೇ ಜನ್ಮದಿನಾಚರಣೆ ನಡೆಯಲಿದೆ ಎಂದು ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಟಿ.ಪಿ.ರಮೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯರು ಹಾಗೂ ಅರಗು ಮತ್ತು ಬಣ್ಣದ ಕಾರ್ಖಾನೆ ನಿಗಮದ ಮಾಜಿ ಅಧ್ಯಕ್ಷ ಹೆಚ್.ಎ.ವೆಂಕಟೇಶ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಟಿ.ಪಿ.ರಮೇಶ್ ವಹಿಸಲಿದ್ದಾರೆ ಎಂದರು. ಸಾಹಿತಿ ಡಾ.ಬೆಸೂರು ಮೋಹನ್ ಪಾಳೇಗಾರ್ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ.ಮುದ್ದಯ್ಯ, ಮೂರ್ನಾಡು ಕೊಡವ ಭಾಷಿಕ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಡಾ.ಸುಭಾಷ್ ನಾಣಯ್ಯ, ರಾಜ್ಯ ಅಹಿಂದ…
ಮಡಿಕೇರಿ ಆ.14 NEWS DESK : ನಗರದ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುವುದು. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆ.16 ರಂದು ರಾತ್ರಿ 10 ಗಂಟೆಗೆ ದೇವಾಲಯದಲ್ಲಿ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನೆ ಹಾಗೂ ಕೀರ್ತನೆಗಳು ನಡೆಯಲಿದ್ದು, ಮಧ್ಯರಾತ್ರಿ ಮಹಾಪೂಜೆ ಜರುಗಲಿದೆ. ಭಕ್ತಾಧಿಗಳು ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ. :: ಮೊಸರು ಕುಡಿಕೆ ಒಡೆಯುವುದು, ಛದ್ಮವೇಷ ಸ್ಪರ್ಧೆ :: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆ.23 ರಂದು ಅಪರಾಹ್ನ 4 ಗಂಟೆಗೆ ದೇವಾಲಯದಲ್ಲಿ ಮೊಸರು ಕುಡಿಕೆ ಒಡೆಯುವುದು ಮತ್ತು ಮಕ್ಕಳಿಗೆ ಶ್ರೀ ಕೃಷ್ಣ, ರಾಧೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿದೆ. ಭಾಗವಹಿಸುವ ಮಕ್ಕಳು ತಮ್ಮ ಹೆಸರನ್ನು 9482192248, 9731411523, 8095858864 ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು.
ವಿರಾಜಪೇಟೆ ಆ.14 NEWS DESK : ಕೊಡಗು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ ಸಿಐಟಿಯುನ ನೂತನ ಕೊಡಗು ಜಿಲ್ಲಾ ಸಮಿತಿ ಸದಸ್ಯರಾಗಿ ಜಿಲ್ಲೆಯ ಐದು ತಾಲ್ಲೂಕಿನ ಸದಸ್ಯರನ್ನು ಒಳಗೊಂಡು 31 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಂಘದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದು ನೂತನ ಅಧ್ಯಕ್ಷರಾಗಿ ಎ.ಸಿ ಸಾಬು ಮರು ಆಯ್ಕೆಗೊಂಡಿದ್ದಾರೆ. ಗೌರವ ಅಧ್ಯಕ್ಷರಾಗಿ ವಕೀಲರಾದ ಪ್ರಮೋದ್, ಉಪಾಧ್ಯಕ್ಷರುಗಳಾಗಿ ಬೈಜು, ಹಮೀದ್, ಉಷಾ, ಮಂಗಳ, ಕೆ.ಯು.ಲಲಿತ ಕುಮಾರಿ, ಕಾರ್ಯದರ್ಶಿಗಳಾಗಿ ಕೆ.ಎಸ್ ರಮೇಶ್(ಶಾಜಿ), ಸಹ ಕಾರ್ಯದರ್ಶಿಗಳಾಗಿ ಕೆ.ಕೆ.ಹರಿದಾಸ್, ಮೊಣ್ಣಪ್ಪ, ಮಹೇಶ್, ಸುದರ್ಶನ್ ನೇಮಕಗೊಂಡಿದ್ದಾರೆ. ಖಜಾಂಚಿಯಾಗಿ ಕೆ.ಎ.ಖಾಶಿಂ ಅವರನ್ನು ಒಳಗೊಂಡು 13 ಸದಸ್ಯರನ್ನು ಪದಾಧಿಕಾರಿಗಳಾಗಿ ಮತ್ತು 18 ಸದಸ್ಯರ ನೂತನ ಜಿಲ್ಲಾ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ ಆ.14 NEWS DESK : ರಾಷ್ಟ್ರೀಯ ಹೆದ್ದಾರಿ ಜೋಡುಪಾಲ ಬಳಿ ರಸ್ತೆ ಬದಿ ಮಣ್ಣು ಜರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭೇಟಿ ನೀಡಿ ಪರಿಶೀಲಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿಗಳಾದ ಎಂ.ಎಸ್.ರಾಹುಲ್, ರೋಜಾ, ಲಾಯಲ್ ಮೀರಾಂಡ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ್ ಇತರರು ಇದ್ದರು.
ಮಡಿಕೇರಿ ಆ.14 NEWS DESK : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವಂತೆ ಗೌರಿ- ಗಣೇಶೋತ್ಸವ ಸಂದರ್ಭ ‘ಡಿಜೆ’ ಬಳಸಕೂಡದು. ಸಮುದಾಯದ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಗಣೇಶೋತ್ಸವ ಸಮಿತಿಗಳು ಶಬ್ದ ಮಿತಿಯ ಮೇಲೆ ನಿಗಾ ಇರಿಸಬೇಕು. ಇಲ್ಲವಾದಲ್ಲಿ ಅಗತ್ಯ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದರು. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ‘ಗೌರಿ-ಗಣೇಶೋತ್ಸವ ಆಯೋಜಕರ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿಜೆಯ ಅತೀ ಹೆಚ್ಚಿನ ಶಬ್ದ ಮಟ್ಟದಿಂದ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಜವಾಬ್ದಾರಿ. ಇದನ್ನು ಉತ್ಸವ ಆಯೋಜಕರು ಗಮನದಲ್ಲಿರಿಸಿಕೊಳ್ಳಬೇಕು ಮತ್ತು ಶಬ್ದ ಮಿತಿಯ ಮೇಲೆ ನಿಗಾ ಇರಿಸಬೇಕು. ಇಲ್ಲವಾದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲೆ ಬೇಕಾಗುವುದರಿಂದ ನಮ್ಮ ನಿಮ್ಮಗಳ ಸಂಬಂಧ ಹಾಳಾಗಬಹುದೆಂದು ಸೂಕ್ಷ್ಮವಾಗಿ ನುಡಿದರು. ಪ್ರೆಶರ್ ಮಿಡ್ ಬಳಕೆ ಅಪಾಯಕಾರಿ- ಉತ್ಸವಗಳ ಸಂದರ್ಭ ಬಳಸುವ ಸ್ಪೀಕರ್ಗಳಲ್ಲಿ ‘ಪ್ರ್ರೆಶರ್ ಮಿಡ್’ಗಳನ್ನು ಬಳಸುವುದು ಅತ್ಯಂತ ಅಪಾಯಕಾರಿ. ಒಂದು ಪ್ರ್ರೆಶರ್ ಮಿಡ್ನಿಂದ 110 ಡೆಸಿಬಲ್ ಪ್ರಮಾಣದ…






