ಲೇಖಕ: admin

ಬೆಂಗಳೂರು ಸೆ.3 NEWS DESK : ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ್  ವಿಷ್ಣುವರ್ಧನ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿದರು. ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಮೀಸಲಿಡಬೇಕು, ವಿಷ್ಣು ಹುಟ್ಟು ಹಬ್ಬದ ಒಳಗೆ ಸರ್ಕಾರ ಭೂಮಿಗೆ ಅನುಮತಿಸಬೇಕು. ವಿಷ್ಣುವರ್ಧನ್ ಅವರಿಗೆ ʼಕರ್ನಾಟಕ ರತ್ನʼ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಸೆ.3 NEWS DESK : ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಮಡಿಕೇರಿ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಚೇರಂಬಾಣೆ ಶ್ರೀ ರಾಜರಾಜೇಶ್ವರಿ ವಿದ್ಯಾರ್ಥಿಗಳಾದ ಪಿ.ಎಂ.ವರುಣಿಕ, ಕೆ.ಜೆ.ಮೋಕ್ಷಿ , ಕೆ.ಡಿ.ದಿಶಾ ಹಾಗೂ ಬಿ.ಜಿ.ಅಹನಾ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರೊಂದಿಗೆ  ಶಿಕ್ಷಕಿ ಪಿ.ಸಿ.ರಾಧಿಕಾ ಇದ್ದರು.

Read More

ಸಿದ್ದಾಪುರ ಸೆ.3 NEWS DESK : ಎಸ್.ಎನ್.ಡಿ.ಪಿ ಕೊಡಗು ಯೂನಿಯನ್ ವತಿಯಿಂದ ಸೆ.7 ರಂದು ಸಿದ್ದಾಪುರದಲ್ಲಿ ಶ್ರೀ ನಾರಾಯಣ ಗುರುವಿನ 171ನೇ ಜಯಂತಿ ಆಚರಣೆ ನಡೆಯಲಿದೆ ಎಂದು ಯೂನಿಯನ್ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ತಿಳಿಸಿದ್ದಾರೆ. ಸಿದ್ದಾಪುರದ ಎಸ್.ಎನ್.ಡಿ.ಪಿ‌ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಎನ್.ಡಿ.ಪಿ ಕೊಡಗು ಯೂನಿಯನ್, ಗುರು ಜಯಂತಿ ಆಚರಣಾ ಸಮಿತಿ ಹಾಗೂ ಜಿಲ್ಲೆಯ ಎಸ್.ಎನ್. ಡಿ.ಪಿ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೆ.7 ರಂದು ನಾರಾಯಣ ಗುರು ಜಯಂತಿ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಯೂನಿಯನ್ ಮಾಜಿ‌ ಕಾರ್ಯದರ್ಶಿ ಎಂ.ಪಿ.ಶಿವಪ್ರಸಾದ್ ಧ್ವಜಾರೋಹಣ ನೆರವೇರಿಸಲಿದ್ದು, ಬೆಳಗ್ಗೆ 10.30 ಗಂಟೆಗೆ ನಡೆಯುವ ಮೆರವಣಿಗೆಯನ್ನು ಪ್ರಮುಖರಾದ ಎ.ವಿ.ಸಜೀವನ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಶ್ರೀ ನಾರಾಯಣ ಗುರುಗಳ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ವಾದ್ಯ ಮೇಳಗಳೊಂದಿಗೆ ಶ್ರೀ ಅಯ್ಯಪ್ಪ ದೇವಸ್ಥಾನದ ಮುಂಭಾಗದಿಂದ ಪ್ರಾರಂಭಿಸಿ ಸಿದ್ದಾಪುರ ಸ್ವರ್ಣಮಾಲ ಸಭಾಂಗಣದವರೆಗೆ ಮೆರವಣಿಗೆ ನಡೆಯಲಿದೆ. ಬಳಿಕ ವಿ.ಕೆ ಲೋಕೇಶ್ ಅಧ್ಯಕ್ಷತೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀ ಶಾಂತ…

Read More

ಮಡಿಕೇರಿ ಸೆ.3 NEWS DESK : ಸರ್ವ ದೈವತ ಶಾಲೆಯಲ್ಲಿ ನಡೆದ ಪ್ರೌಢ ಹಾಗೂ ಪ್ರಾಥಮಿಕ ವಿಭಾಗದ ತಾಲ್ಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಢಶಾಲಾ ವಿಭಾಗದ ಪಂದ್ಯಾಟದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಬಿ.ಎಸ್.ಸೃಷ್ಟಿ ಪ್ರಥಮ, ಯು.ಜಿ.ಶ್ರೀವತ್ಸ ದ್ವಿತೀಯ ಹಾಗೂ ಎನ್.ಎಂ.ತರುಣ್ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಪ್ರಾಥಮಿಕ ವಿಭಾಗದ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾಥಿರ್üಗಳಾದ ಮಾಲೆಟ್ಟಿರ ಚಾಲ್ಸಿ ತೃತೀಯ, ಎಂ.ಎ.ಅಜಾನ್ ಪ್ರಥಮ, ಸಚಿನ್ ಎಸ್ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಚೆಸ್ ಮಾಸ್ಟರ್ ಶ್ರೀಮಾನ್ ಮಣಿ ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೆÇೀಷಕರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ.

Read More

ಮಡಿಕೇರಿ ಸೆ.3 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 11 ಗ್ರಾಮ ಪಂಚಾಯತ್‍ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಗರ್ವಾಲೆ, ತೋಳೂರು ಶೆಟ್ಟಳ್ಳಿ, ವಿರಾಜಪೇಟೆ ತಾಲ್ಲೂಕಿನ ಕಾಕೋಟು ಪರಂಬು ಮತ್ತು ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಸೆ.15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇ-ಮೇಲ್ ಐಡಿ : care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.3 NEWS DESK : ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಸೆಪ್ಟೆಂಬರ್, 11 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಸೆ.11 ರಂದು ಮಧ್ಯಾಹ್ನ 2.30 ಗಂಟೆಯಿಂದ 03.30 ಗಂಟೆವರೆಗೆ ವಿರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್, ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸಲು ಸಭೆಯು ಸೆ.12 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು…

Read More

ಮಡಿಕೇರಿ ಸೆ.3 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಖಾಸಗಿ ಕಂಪನಿಯಾದ ಸಂಭವ್ ಫೌಂಡೇಷನ್, ಮಡಿಕೇರಿ, ಇವರು ಉಚಿತ ತರಬೇತಿಯೊಂದಿಗೆ ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದಾರೆ. ನೇರ ಸಂದರ್ಶನವು ಸೆ.11 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು 01 ಸೆಟ್ ಸ್ವವಿವರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಕಚೇರಿಗೆ ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

Read More

ವಿರಾಜಪೇಟೆ ಸೆ.3 NEWS DESK : ಪ್ರತಿಯೊಬ್ಬ ಮಗುವಿಗೆ ಸಂಗೀತ ಸ್ಪರ್ಶವಾದಲ್ಲಿ ಒರಟುತನ ದೂರವಾಗಿ ಮೃದುವಂತಿಕೆ ದೊರೆಯಲಿದೆ ಎಂದು ಕರ್ನಾಟಕ ವನ್ಯಜೀವಿ ಸಂರಕ್ಷಣಾ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು. ವಿರಾಜಪೇಟೆಯ ಬಸವೇಶ್ವರ ದೇವಾಲಯದ ಆವರಣದಲ್ಲಿ ಬಸವೇಶ್ವರ ದೇವಾಲಯದ ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ದಿ. ಎಂ.ವೆಂಕಟೇಶ ಕಾಮತ್ ಟ್ರಸ್ಟ್ ವತಿಯಿಂದ ವಾಯ್ಸ್ ಆಫ್ ವಿರಾಜಪೇಟೆ ಸಂಗೀತ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಲ್ಯದಲ್ಲಿ ಮಕ್ಕಳಿಗೆ ಒಳ್ಳೆಯ ಹಾಡು, ಸಂಸ್ಕøತಿ ಕಲಿಸುವುದರಿಂದ ಮನಸ್ಸು ಪರಿವರ್ತನೆಗೊಳ್ಳುತ್ತದೆ. ದಿ.ವೆಂಕಟೇಶ್ ಕಾಮತ್ ಅವರ ಕುರಿತು ಮಾತನಾಡಿ ವೆಂಕಟೇಶ್ ಕಾಮತ್ 1934ರಲ್ಲಿ ಜನಿಸಿ 2000 ದಲ್ಲಿ ಕಾಲವಾದರೂ 66 ವರ್ಷಗಳ ಕಾಲ ಅರ್ಥಪೂರ್ಣ ಬದುಕು ಸಾಗಿಸಿದ್ದರು. ಅವರು ರಾಜ್ಯದಲ್ಲಿಯೇ ಅತ್ಯುನ್ನತ ದಸ್ತಾವೇಜು ಬರಹಗಾರರಾಗಿ ಖ್ಯಾತಿ ಪಡೆದಿದ್ದರು. ಅವರು ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಪ್ರಮಾಣದ ಆಸಕ್ತಿ ಮತ್ತು ಒಲವನ್ನು ಹೊಂದಿದ್ದರು. ರಾಮಾಯಣ ಮತ್ತು ಮಹಾಭಾರತವನ್ನು ತಮ್ಮ ಮಾತಿನಲ್ಲಿ ವಿವರಿಸುತ್ತಿದ್ದ ಅವರಿಗೆ ಅಪಾರ ಪಾಂಡಿತ್ಯವನ್ನು ಹೊಂದಿದ್ದರು.…

Read More

ಮಡಿಕೇರಿ ಸೆ.3 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ಗಣೇಶನ ಪೂಜೆಯನ್ನು  ಸಂಭ್ರಮದಿಂದ ಆಚರಿಸಲಾಯಿತು. 6ನೇ ತರಗತಿಯ ವಿದ್ಯಾರ್ಥಿಗಳು ತಯಾರಿಸಿದ್ದ  ವಿವಿಧ ಗಾತ್ರಗಳಲ್ಲಿನ ಗಣೇಶ ಮೂತಿ೯ಗಳು  ಹೂವು ಮತ್ತು ದೀಪಾಲಂಕಾರದ ಮಧ್ಯೆ ವೇದಿಕೆಯ ಮುಂಭಾಗದಲ್ಲಿ  ಕಂಗೊಳಿಸಿದ್ದವು.  ಶಾಲಾ ಪ್ರಾಂಶುಪಾಲರಾದ   ಸುಮಿತ್ರ ಕೆ.ಎಸ್., ಆಡಳಿತಾಧಿಕಾರಿ   ರವಿ ಪಿ., ಸಂಯೋಜಕ ಕೆ.ಎಸ್.ಸುಮಂತ್ ಹಾಗೂ ತರಗತಿ ಶಿಕ್ಷಕಿಯರಾದ  ಸಂಶ್ರುತಿ ಮತ್ತು   ಪೊನ್ನಮ್ಮ  ದೀಪ ಪ್ರಜ್ವಲನೆ  ಮಾಡಿದರು. ಗಣೇಶನು ಹೇಗೆ ಆನೆಯ ತಲೆಯೊಂದಿಗೆ ಪ್ರಸಿದ್ಧನಾದನೆಂಬ ಕಥೆಯನ್ನು ವಿದ್ಯಾರ್ಥಿಗಳು ನೃತ್ಯ-ನಾಟಕದ ಮೂಲಕ ಮನೋಜ್ಞವಾಗಿ ಪ್ರದರ್ಶಿಸಿದರು.   ಭಕ್ತಿ ಗೀತೆಗಳಿಗೆ ಆಧಾರಿತ ನೃತ್ಯ ಮತ್ತು ಭಜನೆಗಳು ಎಲ್ಲರ ಮನಸ್ಸನ್ನು ಸೆಳೆದವು. ಶಿಕ್ಷಕ ವೖಂದದವರೂ   “ಗಣೇಶ ನಾಮಾವಳಿ ”  ಪ್ರಸ್ತುತಪಡಿಸಿದರು. ಮನೀಷ್ ರೈ ಮತ್ತು ಆನ್ಯಾ ನಂಜಪ್ಪ ಕಾರ್ಯಕ್ರಮ   ನಿರೂಪಿಸಿದರು. ಮೊಹಮದ್ ಶಾಜ್ ಸ್ವಾಗತಿಸಿ,   ವಿರಾಟ್ ಮುತ್ತಪ್ಪ ಗಣೇಶ ಚತುರ್ಥಿಯ ಮಹತ್ವದ ಬಗ್ಗೆ ತಿಳಿಸಿದರು. ಹೃಧಾನ್ ಮುತ್ತಣ್ಣ  ವಂದಿಸಿದ ಕಾರ್ಯಕ್ರಮದ ಅಂತ್ಯದಲ್ಲಿ ಶಾಲಾ ಪ್ರಾಂಶುಪಾಲರಾದ ಕೆ.ಎಸ್ ಸುಮಿತ್ರಾ,  ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ…

Read More

ಮಡಿಕೇರಿ ಸೆ.3 NEWS DESK : ವಿರಾಜಪೇಟೆ ನಗರದಲ್ಲಿ ಈಗಾಗಲೆ ಪ್ರತಿಷ್ಟಾಪಿಸಲಾಗಿರುವ ಗಣಪತಿ ಮೂರ್ತಿಗಳ ವಿಸರ್ಜನೆ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಸೆ.6 ರ ಮಧ್ಯಾಹ್ನ 2 ಗಂಟೆಯಿಂದ ಸೆ.7 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಪೆರುಂಬಾಡಿ ಕಡೆಯಿಂದ ವಿರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನಗಳನ್ನು ಕೀರ್ತಿ ರೆಸ್ಟೋರೆಂಟ್ ಮುಂಭಾಗದಿಂದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ಬದಿಯಲ್ಲಿ ಮಾತ್ರ ನಿಲ್ಲಿಸುವುದು. ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೂಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್ ಪೋಸ್ಟ್, ಬಾಳುಗೋಡು, ಬಿಟ್ಟಂಗಾಲ ಜಂಕ್ಷನ್, ಕೈಕೇರಿ ಜಂಕ್ಷನ್, ಗದ್ದೆ ಮನೆಯ ರಸ್ತೆ ಜಂಕ್ಷನ್ ಮಾರ್ಗವಾಗಿ…

Read More