ಲೇಖಕ: admin

ಮಡಿಕೇರಿ ಜು.8 NEWS DESK : ಮಡಿಕೇರಿ ನಗರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಕಾಶ್ ಆಚಾರ್ಯ ಅವರು ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಿದರು. ಈ ಸಂದರ್ಭ ಶಾಸಕರು ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಮಡಿಕೇರಿ ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರುಗಳಾದ ಮುದ್ದುರಾಜು, ಸದಾ ಮುತ್ತಪ್ಪ, ಜಗದೀಶ್ ಹಾಗೂ ಹೆಚ್.ಎಲ್.ಯೋಗೇಶ್ ಉಪಸ್ಥಿತರಿದ್ದರು.

Read More

ಮಡಿಕೇರಿ ಜು.8 NEWS DESK :  ಶ್ರೀ ಕೋದಂಡ ರಾಮ ದೇವಾಲಯದ 51ನೇ ವರ್ಷದ ದಸರಾ ಉತ್ಸವದ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಆನಂದ್ ಸುಬ್ರಮಣಿ, ಕಾರ್ಯಧ್ಯಕ್ಷರಾಗಿ ಮಿಥುನ್ ಶೆಟ್ಟಿ ನೇಮಕಗೊಂಡಿದ್ದಾರೆ. ಗೌರವಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಗಿರೀಶ್ ಸುಬ್ರಮಣಿ, ಜೈಕುಮಾರ್, ಸಿದ್ದಿಕ್, ಪ್ರದಾನ ಕಾರ್ಯದರ್ಶಿಯಾಗಿ ವಿಜು ಖಜಾಂಚಿಯಾಗಿ ಶೇಖರ್, ಕಾರ್ಯದರ್ಶಿಯಾಗಿ ವಿಶ್ವ, ಪವನ್, ಸಹ ಕಾರ್ಯದರ್ಶಿಯಾಗಿ ತೇಜ, ಹರ್ಷ, ಸಂಘಟನಾ ಕಾರ್ಯದರ್ಶಿಯಾಗಿ ವಿಗ್ನೇಶ್, ನವೀನ್, ಅಲಂಕಾರ ಸಮಿತಿಗೆ ಹರೀಶ್, ಜೀವನ್, ಉತ್ಸವ ಸಮಿತಿಗೆ ಅಜಿತ್ ಮತ್ತು ತಂಡ ಆಯ್ಕೆಗೊಂಡರು. ಸಮಿತಿಯ ರಚನೆ ಬಳಿಕ ಮಾತನಾಡಿದ ಅಧ್ಯಕ್ಷರಾದ ಆನಂದ್  ಮಡಿಕೇರಿ ದಸರಾದಲ್ಲಿ ಪ್ರತಿ ವರ್ಷ ವಿನೂತನ ರೀತಿಯಲ್ಲಿ ಮಂಟಪ ತಯಾರಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಶ್ರೀ ಕೋದಂಡ ರಾಮ ದೇವಾಲಯವು ಈ ಬಾರಿಯೂ ಕೂಡ ಅದ್ದೂರಿ ದಸರಾ ಆಚರಿಸುವ ಮುಖಾಂತರ ಉತ್ತಮ ಮಂಟಪ ಹೊರತರುವಲ್ಲಿ ದೇವಾಲಯದ ಸರ್ವ ಸದಸ್ಯರು ಶ್ರಮಿಸಳಿದ್ದೇವೆ ಎಂದು ಅಭಿಪ್ರಾಯ ಹಂಚಿಕೊಂಡರು.

Read More

ಮಡಿಕೇರಿ ಜು.8 NEWS DESK : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯ ಹಕ್ಕು ಮತ್ತು ಎಸ್‍ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನಾಪೋಕ್ಲುವಿನಲ್ಲಿ ಏಳನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ವಿವರಿಸಿದರು. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು.…

Read More

ಮಡಿಕೇರಿ NEWS DESK ಜು.7 : ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಸ್ವಚ್ಛತಾ ಮತ್ತು ಇತರೆ ಕಾರ್ಮಿಕರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು.9 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್ ಹಾಗೂ ಕಾರ್ಯದರ್ಶಿ ಹೆಚ್.ಕೆ.ಜಾನಕಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬುಧವಾರ ಬೆಳಿಗ್ಗೆ 10.30 ಗಂಟೆಗೆ ವಿರಾಜಪೇಟೆ ಮತ್ತು ಕುಶಾಲನಗರ ತಹಶೀಲ್ದಾರರ ಕಚೇರಿ ಎದುರು ಆಸ್ಪತ್ರೆಗಳ ಸ್ವಚ್ಛತಾ ಕಾರ್ಮಿಕರು ಪ್ರತಿಭಟನೆ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಸ್ವಚ್ಛತಾ ಮತ್ತು ಡಿ ಗ್ರೂಪ್ ನೌಕರರಿಗೆ ಮಾಸಿಕ ಕನಿಷ್ಟ ವೇತನ 31 ಸಾವಿರ ನೀಡಬೇಕು, ನೌಕರರನ್ನು ಗುತ್ತಿಗೆ, ಕಾಂಟ್ರೆಕ್ಟ್ ಪದ್ಧತಿಯಿಂದ ವಿಮೋಚನೆಗೊಳಿಸಿ ಆಸ್ಪತ್ರೆಗಳಲ್ಲೇ ವೇತನ ನೀಡುವಂತಾಗಬೇಕು, ಪ್ರತಿ 5ನೇ ತಾರೀಖಿನ ಒಳಗೆ ಕಾರ್ಮಿಕರ ವೇತನ ನೀಡಬೇಕು, ಹೆರಿಗೆ ಭತ್ಯೆ, ಇಎಸ್‌ಐ ಸೌಲಭ್ಯ, ಪಿ.ಎಫ್ ಹಣವನ್ನು ಸರಿಯಾದ…

Read More

ಮಡಿಕೇರಿ ಜು.7 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು.9 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್, ಮಡಿಕೇರಿ, ಆರೇಂಜ್ ಕೌಂಟಿ ರೆಸಾರ್ಟ್, ಸಿದ್ದಾಪುರ, ಪೆಂಟಾಟೆಕ್, ಮಡಿಕೇರಿ, ಡಾಬರ್ ಮ್ಯಾನ್, ಮಂಗಳೂರು ಹಾಗೂ ಪಿಆರ್ ಕನ್‍ಸ್ಟ್ರಕ್ಷನ್ಸ್ ಕುಶಾಲನಗರ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.…

Read More

ಮಡಿಕೇರಿ ಜು.7 NEWS DESK : ಇತ್ತೀಚೆಗೆ ಬೆನ್ನು ಮೂಳೆಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲ್ಲೂಕಿನ ಶೌರ್ಯ ವಿಪತ್ತು ಘಟಕದ ಸ್ವಯಂಸೇವಕರು, ತ್ಯಾಗರಾಜನಗರ ಒಕ್ಕೂಟದ ಅಧ್ಯಕ್ಷರು, ಪ್ರಸ್ತುತಿ ಸಂಘದ ಸದಸ್ಯರೂ ಆಗಿರುವ ಲೀಲಾ ಶೇಷಮ್ಮ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರೂ.30 ಸಾವಿರ ಆರ್ಥಿಕ ನೆರವನ್ನು ನೀಡಿದ್ದಾರೆ. ತಾಲ್ಲೂಕು ಯೋಜನಾಧಿಕಾರಿಗಳು ಮಂಜೂರಾತಿ ಪತ್ರವನ್ನು ಲೀಲಾ ಶೇಷಮ್ಮ ಅವರಿಗೆ ಸಲ್ಲಿಸಿದರು. ಈ ಸಂದರ್ಭ ಸಂಘದ ಸದಸ್ಯರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.7 NEWS DESK : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್‍ವೈ) (ಪ್ರತಿ ಹನಿ ನೀರಿಗೆ ಹೆಚ್ಚು ಉತ್ಪಾದನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ/ ಸೂಕ್ಷ್ಮ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ನೀಡುವ ಯೋಜನೆ ಇದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್ ಅವರು ಮಾಹಿತಿ ನೀಡಿದ್ದಾರೆ. ಅಡಿಕೆ, ತೆಂಗು, ಶುಂಠಿ, ಬಾಳೆ, ತಾಳೆ, ಕಾಳುಮೆಣಸು, ಬೆಣ್ಣೆಹಣ್ಣು, ಸಪೋಟ, ತರಕಾರಿ ಬೆಳೆಗಳು ಹಾಗೂ ಇತರೆ ತೋಟದ ಬೆಳೆಗಳಿಗೆ ಹನಿ ನೀರಾವರಿ/ ಸೂಕ್ಷ್ಮ ನೀರಾವರಿ ಪದ್ದತಿಗಳಿಗೆ ಸಹಾಯಧನ. ಪರಿಶಿಷ್ಟ ಜಾತಿ/ ಪಂಗಡ /ಇತರೆ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡುವ ಯೋಜನೆ ಇದೆ ಎಂದರು. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಬಾಳೆ, ತರಕಾರಿ, ಬೆಣ್ಣೆ ಹಣ್ಣುಗಳ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳಲು ಶೇ.40ರ ಸಹಾಯಧನ ನೀಡಲಾಗುತ್ತದೆ. ಪುನಶ್ಚೇತನ ಕಾರ್ಯಕ್ರಮದಡಿ ರೈತರಿಗೆ ಉಚಿತವಾಗಿ ಕಿತ್ತಳೆ, ಕಾಳುಮೆಣಸು ಸಸಿಗಳು ಹಾಗೂ ಜೈವಿಕ ಗೊಬ್ಬರ ವಿತರಿಸಲಾಗುತ್ತದೆ. ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಹಸಿರು…

Read More

ಮಡಿಕೇರಿ ಜು.7 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು.9 ರಂದು ಹಮಾಲಿ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕೊಡಗು ಜಿಲ್ಲಾ ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ಪಿ.ಆರ್.ಭರತ್ ಹಾಗೂ ಕಾರ್ಯದರ್ಶಿ ಕೆ.ಎಸ್.ಶಾಜಿ ರಮೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇದನ್ನು ವಿರೋಧಿಸಿ ಬುಧವಾರ ಬೆಳಿಗ್ಗೆ 10.30 ಗಂಟೆಗೆ ವಿರಾಜಪೇಟೆ ಮತ್ತು ಕುಶಾಲನಗರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗವುದೆಂದು ಹೇಳಿದ್ದಾರೆ. *ಬೇಡಿಕೆಗಳು* ಎಲ್ಲಾ ಹಮಾಲಿ ಕಾರ್ಮಿಕರಿಗೆ ಭವಿಷ್ಯ ನಿಧಿ, ಪಿಂಚಣಿ ಸೇರಿದಂತೆ ಸಮಗ್ರ ಕಲ್ಯಾಣ ಸೌಲಭ್ಯಗಳನ್ನು ಜಾರಿ ಮಾಡಬೇಕು, ಕೇರಳ, ಮಹಾರಾಷ್ಟ್ರ ರಾಜ್ಯಗಳ ಮಾದರಿಯಲ್ಲಿ ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸಲು ಕರ್ನಾಟಕ ರಾಜ್ಯದ ಹಮಾಲಿ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ರೂಪಿಸಬೇಕು, ಎ.ಪಿ.ಎಂ.ಸಿ ಕಾಯಕ ನಿಧಿಯಿಂದ ನಿವೃತ್ತಿ ಪರಿಹಾರ ಮತ್ತು…

Read More

ಮಡಿಕೇರಿ ಜು.7 NEWS DESK :  ಮಡಿಕೇರಿ ತಾಲ್ಲೂಕು ಬಂಟರ ಸಂಘದ ವತಿಯಿಂದ 2023-24 ಮತ್ತು 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕ ಪಡೆದ ಬಂಟ ಸಮೂಹದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದೆಂದು ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ರೈ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೊಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೊಡಗು ಜಿಲ್ಲಾ ಬಂಟರ ಸಂಘದಿಂದ ನಡೆಸಲಾಗುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರವನ್ನು ಈ ಸಾಲಿನಿಂದ ಮಡಿಕೇರಿ ತಾಲ್ಲೂಕು ಬಂಟರ ಸಂಘ ನಡೆಸಲಿದೆ. ಈ ಪ್ರತಿಭಾ ಪುರಸ್ಕಾರಕ್ಕೆ ಜಿಲ್ಲಾ ವ್ಯಾಪ್ತಿಯಲ್ಲಿನ ಬಂಟ ಸಮೂಹದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದೆಂದು ಸ್ಪಷ್ಟ ಪಡಿಸಿದರು. ಆಸಕ್ತ ಅರ್ಹ ವಿದ್ಯಾರ್ಥಿಗಳು ತಮ್ಮ ಭಾವಚಿತ್ರ, ಅಂಕ ಪಟ್ಟಿಯ ನಕಲು, ದೂರವಾಣಿ ಸಂಖ್ಯೆ, ಪೋಷಕರ ಆಧಾರ್ ಕಾರ್ಡ್ನೊಂದಿಗೆ ಜು.30ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ವಿದ್ಯಾರ್ಥಿ ಪುರಸ್ಕಾರ ಸಮಾರಂಭದ ದಿನಾಂಕವನ್ನು ಮುಂಬರುವ ದಿನಗಳಲ್ಲಿ ತಿಳಿಸಲಾಗುತ್ತದೆಂದು ಹೇಳಿದರು. ಅರ್ಜಿಗಳನ್ನು ಸದಾಶಿವ…

Read More

ಕುಶಾಲನಗರ ಜೂ.7 NEWS DESK : ಕೂಡುಮಂಗಳೂರು ಗ್ರಾಮ‌ ಪಂಚಾಯಿತಿಯ ಸುಂದರನಗರ ವಾರ್ಡ್ ನ ಬಸವೇಶ್ವರ ಬಡಾವಣೆಯಲ್ಲಿ ಮಳೆಯಿಂದಾಗಿ ಕೊಟ್ಟಿಗೆ ಹಾಗೂ ಮನೆಗೆ ಹಾನಿಯಾದ ಘಟನೆ ನಡೆದಿದ್ದು, ಸ್ಥಳಕ್ಕೆ ಸ್ಥಳೀಯ ಪಂಚಾಯಿತಿ ಸದಸ್ಯ ಕೆ.ಬಿ.ಶಂಶುದ್ಧೀನ್  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವೇಶ್ವರ ಬಡಾವಣೆ ನಿವಾಸಿ ಲೋಕೇಶ್ ಅವರ ಮನೆಯ ಕೊಟ್ಟಿಗೆ ಹಾಗೂ ಮನೆ ಮಳೆಯಿಂದಾಗಿ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್, ನಿರಂತರ ಮಳೆಯಿಂದ ದನದ ಕೊಟ್ಟಿಗೆ ಹಾನಿಯಾಗಿರುವುದರ ಜೊತೆಗೆ ಮನೆಯ ಗೋಡೆ ದೊಡ್ಡದಾಗಿ ಬಿರುಕು ಬಿಟ್ಡಿದೆ. ತುಂಬಾ ಹಳೆಯ ಗೋಡೆಯಾದ್ದರಿಂದ ಮನೆಯಲ್ಲಿ ವಾಸಿಸದಂತೆ ಪಂಚಾಯಿತಿಂದ ಸೂಚನೆ‌ ನೀಡಲಾಗಿದೆ. ಕೊಟ್ಟಿಗೆ ಹಾಗೂ ಮನೆಯ ಗೋಡೆಗೆ ಹಾನಿಯಾಗಿರುವುದರಿಂದ ಕಂದಾಯ ಇಲಾಖೆ ಸೂಕ್ತ ಪರಿಹಾರವನ್ನು ಒದಗಿಸಿಕೊಡಬೇಕು ಎಂದು ಕೆ.ಬಿ.ಶಂಶುದ್ಧೀನ್ ಒತ್ತಾಯಿಸಿದರು. ಈ ಸಂದರ್ಭ ಸ್ಥಳೀಯರು ಇದ್ದರು.

Read More