ಮಡಿಕೇರಿ ಸೆ.2 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2024-25 ನೇ ಸಾಲಿನ 100ನೇ ವಾರ್ಷಿಕ ಮಹಾಸಭೆಯು ನಗರದ ಕೇಂದ್ರ ಕಚೇರಿಯ “ಉನ್ನತಿ ಭವನ”ದ ದಿ:ಪಂದ್ಯಂಡ.ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಲಾಭದಲ್ಲಿ ಮುಂದುವರೆಯುತ್ತಿರುವ ಬ್ಯಾಂಕ್: ಮಾರ್ಚ್ 31 ರ ಅಂತ್ಯಕ್ಕೆ ರೂ.16.70 ಕೋಟಿ ಲಾಭ ಗಳಿಸಿರುವುದಾಗಿ ತಿಳಿಸಿದರು. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿ ಮಡಿಕೇರಿ, ಇದು ಸನ್ 1921 ರ ಜೂನ್ 28 ರಂದು ರೂ.4000 ಪಾಲು ಬಂಡವಾಳ, ರೂ.10,000 ಠೇವಣಿ, 48 ಸಹಕಾರ ಸಂಘಗಳು ಮತ್ತು 16 ಬಿಡಿ ಸದಸ್ಯರಿಂದ ಸ್ಥಾಪನೆಗೊಂಡು, ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಸಾರ್ಥಕತೆಯ 104 ವರ್ಷಗಳನ್ನು ಪೂರ್ಣಗೊಳಿಸಿ, ಇದೀಗ 105ರ ಸಂವತ್ಸರದಲ್ಲಿ ಪಾರದರ್ಶಕ ಆಡಳಿತವನ್ನು ನಡೆಸುತ್ತಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ಮಡಿಕೇರಿ,, ಆರ್.ಬಿ.ಐ. ನಬಾರ್ಡ್ ಹಾಗೂ ಅಪೆಕ್ಸ್ ಬ್ಯಾಂಕಿನಿಂದ ನೀಡಲ್ಪಡುವ ಆರ್ಥಿಕ ಮತ್ತು ತಾಂತ್ರಿಕ ಸೌಲಭ್ಯಗಳನ್ನು ಬಳಸಿಕೊಂಡು…
ಲೇಖಕ: admin
ಮಡಿಕೇರಿ ಸೆ.3 NEWS DESK : ಅಮ್ಮತಿಯಲ್ಲಿ ನಡೆದ ವಲಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿವಿಧ ಆಟೋಟಗಳಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧಿಸಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 400 ಮೀ ಓಟದ ಸ್ಪರ್ಧೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿ ನಡುಮನೆ ಮೋಕ್ಷಿತ ಚಿನ್ನದ ಪದಕ, 200 ಮೀ ಓಟದ ಸ್ಪರ್ಧೆಯಲ್ಲಿ ಪಾಲೆಯಂಡ ಶಾನ್ವಿ ಪೊನ್ನಮ್ಮ ಚಿನ್ನದ ಪದಕ, 600 ಮೀ ಓಟದ ಸ್ಪರ್ಧೆಯಲ್ಲಿ 7ನೇ ತರಗತಿ ಹಿತಾರ್ಥ ಬೆಳ್ಳಿಪದಕ, 400 ಮೀ ಓಟದ ಸ್ಪರ್ಧೆಯಲ್ಲಿ ಪುಗ್ಗೆರ ಗದಿನ್ ಬೋಪಣ್ಣ ಕಂಚಿನ ಪದಕ, 100 ಮೀಟರ್ ಹಾಗೂ 200 ಮೀ ಓಟದ ಸ್ಪರ್ಧೆಯಲ್ಲಿ 7ನೇ ತರಗತಿಯ ಮಾಲೆಟ್ಟಿರ ಚಾಲ್ಸಿ ಬೆಳ್ಳಿ ಪದಕ, 4100ಮೀ ರಿಲೇ ಪಂದ್ಯಾಟದಲ್ಲಿ ಮಾಲೆಟ್ಟಿರ ಚಾಲ್ಸಿ, ನಡುಮನೆ ಮೋಕ್ಷಿತ, ಪಾಲೆಯಂಡ ಶಾನ್ವಿ, ಹರ್ಷಿನಿ ವಿ ಯಾದವ್ ಒಳಗೊಂಡ ತಂಡ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನವನ್ನು ನೀಡಿರುತ್ತಾರೆ. ಇವರ ಈ ಸಾಧನೆಗೆ…
ಮಡಿಕೇರಿ NEWS DESK ಸೆ.2 : ಕೊಡಗು ಜಿಲೆಯ ಯಾವುದೇ ಕಾಫಿ ಟ್ರೇಡರ್ಸ್ ನವರು ಕಾಫಿ ಖರೀದಿ ಸಂದರ್ಭ ರಶೀದಿ ಅಥವಾ ಬಿಲ್ನ್ನು ನೀಡದೆ ಹಾಗೂ ಮಾರಾಟ ಮಾಡುವವರ ಸಂಪೂರ್ಣ ವಿವರವನ್ನು ಇಟ್ಟುಕೊಳ್ಳದೆ ವ್ಯವಹಾರ ನಡೆಸಿದಲ್ಲಿ ಮತ್ತು ಕಳ್ಳತನ ಮಾಡಿರುವ ಕಾಫಿಯನ್ನು ಖರೀದಿ ಮಾಡಿರುವುದು ಕಂಡು ಬಂದಲ್ಲಿ ಕಾಫಿ ಟ್ರೇಡರ್ಸ್ ಮಾಲೀಕರನ್ನು ನೇರ ಹೊಣೆಗಾರನ್ನಾಗಿ ಮಾಡಲಾಗುವುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿ NEWS DESK ಸೆ.2 : ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಾಟ ಮತ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವನ್ನು ಭೇದಿಸಿರುವ ಕೊಡಗು ಜಿಲ್ಲಾ ಪೊಲೀಸರು, ಇಬ್ಬರು ಆರೋಪಿಗಳ ಸಹಿತ 2ಕೆ.ಜಿ 288 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ನಾಪೋಕ್ಲುವಿನ ಮರಂದೋಡ ಗ್ರಾಮದಲ್ಲಿ ಪ್ರಕರಣ ಪತ್ತೆಯಾಗಿದ್ದು, ಮೂಲತಃ ಅಸ್ಸಾಂ ರಾಜ್ಯದ ಧರೋಂಗ್ ಜಿಲ್ಲೆಯವರಾದ, ಪ್ರಸ್ತುತ ಕಬ್ಬಿನ ಕಾಡು-ಮರಂದೋಡ ಗ್ರಾಮದಲ್ಲಿರುವ ಅಮೀರ್ ಹುಸೈನ್(34) ಹಾಗೂ ಮುನಾವರ್ ಹುಸೈನ್(34) ಎಂಬುವವರೆ ಬಂಧಿತ ಆರೋಪಿಗಳು. ಖಚಿತ ಮಾಹಿತಿ ದೊರೆತ ಹಿನ್ನೆಲೆ ಜಿಲ್ಲಾ ಪೊಲೀಸರು ಮರಂದೋಡ ಗ್ರಾಮದ ಬಿದ್ದಂಡತಟ್ಟುವಿನಲ್ಲಿನ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿ ಮಾಲು ಸಹಿತ ಆರೋಪಿಗಳನ್ನು ಬಂಧಿಸಿದರು. ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಸೂರಜ್ ಪಿ.ಎ., ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾ ಪಿಎಸ್ಐ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಮಡಿಕೇರಿ NEWS DESK ಸೆ.2 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಫಿ ವರ್ಕ್ಸ್ ಒಂದರಲ್ಲಿ ಸುಮಾರು 7 ಸಾವಿರ ಕೆ.ಜಿ. ಕಾಫಿ ಕಳವು ಮಾಡಿದ ಪ್ರಕರಣವನ್ನು ಭೇದಿಸಿರುವ ಕುಶಾಲನಗರ ಗ್ರಾಮಾಂತರ ಪೊಲೀಸರು, ಮಾಲು ಸಹಿತ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೈಲುಕುಪ್ಪೆ ಗ್ರಾಮದ ಸುನಿಲ್ ಆರ್.(34), ರಾಜು ಆರ್.(24), ಶರತ್ ಆರ್ (24), ಬಿಹಾರ ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ದಿನೇಶ್ ರಾವತ್(44) ಹಾಗೂ ಪೂರ್ವ ಚಂಪಾರಣ್ ಜಿಲ್ಲೆಯ ಜಿತೇಂದ್ರ ಕುಮಾರ್ ರಾಮ್(38) ಬಂಧಿತ ಆರೋಪಿಗಳು. ಬಂಧಿತರಿಂದ 6495 ಕೆ.ಜಿ. ಕಾಫಿ, 1 ಕಾರು, 2 ದ್ವಿಚಕ್ರ ವಾಹನ, ಹಾಗೂ ಒಂದು ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಶಾಲನಗರ ಕೂಡ್ಲೂರು ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಕಾಫಿ ವರ್ಕ್ಸ್ ನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಸಾವಿರ ಕೆ.ಜಿ. ಕಾಫಿ ಕಳ್ಳತನವಾಗಿರುವ ಬಗ್ಗೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಚಂದ್ರಶೇಖರ್, ಕುಶಾಲನಗರ ವೃತ್ತದ ಸಿಪಿಐ…
ಮಡಿಕೇರಿ ಸೆ.2 NEWS DESK : ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ದೀಪ್ ಮಾಲಾ ನೇತೃತ್ವದ ತಂಡವು ಕೊಡಗು ಜಿಲ್ಲೆಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಮತ್ತು ಚುನಾವಣಾ ಪ್ರಕ್ರಿಯೆ ಬಗ್ಗೆ ಮಾಹಿತಿ ಹಂಚಿಕೊಂಡರು. ತಂಡವು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಸಿದರು. ತಂಡದಲ್ಲಿ ದೀಪ್ ಮಾಲಾ (ಅಧೀನ ಕಾರ್ಯದರ್ಶಿ), ಸಹಾಯಕ ವಿಭಾಗಾಧಿಕಾರಿಗಳಾದ ಜ್ಯೋತ್ಸಾನಾ ಮಿಗ್ಲಾನಿ, ಶುಭಮ್ ಮಿಶ್ರಾ (ಎಸ್ಒ) ಪ್ರಿನ್ಸ್ ರೈ (ಪಿಎಸ್), ಶ್ರೀ ಜಾವೇದ್ ಖಾನ್ (ಎಎಸ್ಒ), ಅಂಕುರ್ ಮಲಿಕ್(ಎಎಸ್ಒ), ಪ್ರದೀಪ್ ಕೌರ್ (ಎಸ್ಎಸ್ಒ), ಆಯುಷಿ ನಾಯಕ್(ಎಎಸ್ಒ) ಮತ್ತು ಮೊಹಮ್ಮದ್ ಅರ್ಷದ್(ಜೆಎಸ್ಎ) ಎಂಬ 9 ಸದಸ್ಯರ ತಂಡವನ್ನು ನಿಯೋಜಿಸಲಾಗಿದೆ. ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು.”ಭಾರತದ ವಿಶಿಷ್ಟ/ ದೂರಸ್ಥ ಮತಗಟ್ಟೆಗಳಿಗೆ ಭೇಟಿ ನೀಡುವುದು” ಎಂಬ ಈ ಉಪಕ್ರಮವು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡುವುದರೊಂದಿಗೆ ಸವಾಲಿನ ಭೌಗೋಳಿಕ ಪ್ರದೇಶಗಳಲ್ಲಿ ಪ್ರಜಾಪ್ರಭುತ್ವ ಭಾಗವಹಿಸುವಿಕೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ಅವರು…
ಮಡಿಕೇರಿ ಸೆ.2 NEWS DESK : ಕೆಪಿಸಿಸಿ ಸೇವಾದಳ ಪ್ರಧಾನ ಕಾರ್ಯದರ್ಶಿ ತೆರೇಸಾ ವಿಕ್ಟರ್ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಮಡಿಕೇರಿ ಸೆ.2 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಆಯೋಜಿಸಿದ್ದು, ಈ ಹಿನ್ನೆಲೆ ಪ್ರೌಢಶಾಲೆ, ಪದವಿ ಪೂರ್ವ, ಪದವಿ-ಸ್ನಾತಕೋತ್ತರ ಪದವಿ ಈ ಮೂರು ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಸೆ.9 ರಂದು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸೆ.10 ರಂದು ಸಂಜೆಯೊಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ತಮ್ಮ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸೆ.9 ರಂದು ಆಯಾಯ ಪ್ರೌಢಶಾಲೆ, ಕಾಲೇಜುಗಳಲ್ಲಿ ಅಥವಾ ತಾಲ್ಲೂಕು ಮಟ್ಟದಲ್ಲಿ ಪ್ರಬಂಧ ಬರೆಸಿ ಪ್ರಬಂಧವನ್ನು ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರ ಮೂಲಕ ಕಳುಹಿಸಬೇಕು ಎಂದು ತಿಳಿಸಿದರು. ತಜ್ಞರ ಸಮಿತಿಯು ಸೆ.12 ರಂದು ಮೂರು ವಿಭಾಗದಲ್ಲಿ (ಪ್ರೌಢಶಾಲೆ, ಪದವಿ ಪೂರ್ವ, ಪದವಿ-ಸ್ನಾತಕೋತ್ತರ ಪದವಿ) ಆಯಾಯ ಹಂತದಲ್ಲಿ ಮೌಲ್ಯಮಾಪನ ನಡೆಯಲಿದೆ…
ಮಡಿಕೇರಿ ಸೆ.2 NEWS DESK : ‘ಕೈಲ್ ಪೊವ್ದ್’ ಹಬ್ಬದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವರ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಹಿರಿಯರಿಗೆ ಮೀದಿ ಇಟ್ಟು ‘ತೋಕ್ ಪೂವ್’ ಸಮರ್ಪಿಸಿದ ಸದಸ್ಯರು ಗೌರವ ಸಲ್ಲಿಸಿ ಮುಂದಿನ ಹೋರಾಟಕ್ಕೆ ಬೆಂಬಲ ಕೋರಿದರು. ಹಬ್ಬದ ಸಂಕೇತವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಎನ್.ಯು.ನಾಚಪ್ಪ ಅವರು ‘ಕೈಲ್ ಪೊವ್ದ್’ ಮತ್ತು ಕೊಡವರ ಧಾರ್ಮಿಕ ಸಂಸ್ಕಾರ ಕೋವಿ ಹಕ್ಕಿನ ಕುರಿತು ಪ್ರತಿಪಾದಿಸಿದರು. ಆದಿಮ ಸಂಜಾತ ಕೊಡವರ ಸಮಗ್ರ ಸಬಲೀಕರಣಕ್ಕಾಗಿ ಏಕ-ಜನಾಂಗೀಯ ಅನಿಮಿಸ್ಟಿಕ್ ಕೊಡವ ಸಮುದಾಯಕ್ಕೆ ಕೊಡವ ಜನಾಂಗೀಯತೆಯ ಧಾರ್ಮಿಕ ಸಂಸ್ಕಾರ ಗನ್ ಗೆ ಸಾಂವಿಧಾನಿಕ ಖಾತರಿ ನೀಡಬೇಕು. ಭಾರತೀಯ ಸಂವಿಧಾನದ 25 ಮತ್ತು 26 ವಿಧಿಗಳಡಿಯಲ್ಲಿ ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕು. ಸೂಕ್ಷ್ಮವಾದ ಪ್ರಾಚೀನ ಕೊಡವ ಬುಡಕಟ್ಟು ಜನಾಂಗವನ್ನು ವಿಶ್ವ ರಾಷ್ಟ್ರ ಸಂಸ್ಥೆಯ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ರಕ್ಷಿಸಬೇಕು. 1964…
ಮಡಿಕೇರಿ ಸೆ.2 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ. ಆ ದಿಸೆಯಲ್ಲಿ ಈ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕಿದೆ ಎಂದರು. ಯಾವುದೇ ಕುಟುಂಬವು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರವಹಿಸಬೇಕು. ಆ ದಿಸೆಯಲ್ಲಿ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದರಿಂದ ವಾಸದ ಮನೆಗಳ ವಿದ್ಯುತ್ ಬಿಲ್ಲಿನ ಆರ್ಆರ್ ಸಂಖ್ಯೆ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಾಮಾಜಿಕ ಮತ್ತು ಶೈಕ್ಷಣಿಕ…






