ಲೇಖಕ: admin

ಮಡಿಕೇರಿ NEWS DESK ಆ.12 : ಜನಪ್ರಿಯ ಪ್ರವಾಸಿತಾಣ ರಾಜಾಸೀಟು ಉದ್ಯಾನವನದಲ್ಲಿ ಗಾಜಿನ ಸೇತುವೆ ನಿರ್ಮಾಣ ಕಾನೂನಿಗೆ ವಿರುದ್ಧವಾಗಿದ್ದು, ಈ ಯೋಜನೆಯಲ್ಲಿ ಸಕ್ರಿಯರಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ ಹಾಗೂ ಸುಂಟಿಕೊಪ್ಪದ ಇಬ್ಬರು ರಾಜಕಾರಣಿಗಳು ಜಿಲ್ಲಾಡಳಿತದ ದಾರಿ ತಪ್ಪಿಸಿ, ರಾಜ್ಯ ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಯ ಮೇಲೆ ಪ್ರಭಾವ ಬೀರಿ ಪುರಾತತ್ವ ಇಲಾಖೆ ವ್ಯಾಪ್ತಿಯ ರಾಜಾಸೀಟ್ ನಲ್ಲಿ ಗಾಜಿನ ಸೇತುವೆ ನಿರ್ಮಿಸಲು ಮತ್ತು 50 ಮೀಟರ್ ಪಕ್ಕದಲ್ಲಿ ಹೊಟೇಲ್ ನಿರ್ಮಾಣ ಮಾಡಲು ಮುಂದಾಗಿರುವುದು ನಮ್ಮ ಜನಪ್ರತಿನಿಧಿಗಳ ಆಜ್ಞೆಯ ಮೇರೆಗೆ ನಡೆಯುತ್ತಿರುವ ಅಪಾಯಕಾರಿ ಹಾಗೂ ವಿನಾಶಕಾರಿ ಕೃತ್ಯವಾಗಿದೆ ಎಂದು ಆರೋಪಿಸಿದ್ದಾರೆ. ಜನಪ್ರತಿನಿಧಿಗಳು ತಮ್ಮ ಮತದಾರರ ಘನತೆಯನ್ನು ಹಾಗೂ ನಮ್ಮ ಸಂವಿಧಾನದಲ್ಲಿ ಮೂಲಭೂತವಾಗಿ ಪ್ರತಿಪಾದಿಸಲಾದ ಜಲಸಂಪನ್ಮೂಲಗಳು, ಸಸ್ಯ, ಪ್ರಾಣಿ, ಪರಿಸರ ವಿಜ್ಞಾನ ಮತ್ತು ತಮ್ಮ ಕ್ಷೇತ್ರದ ಸ್ಥಳೀಯರ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಬೇಕು. ವಿಶೇಷವಾಗಿ 11 ಮೂಲಭೂತ ಕರ್ತವ್ಯಗಳಲ್ಲಿ,…

Read More

ಸೋಮವಾರಪೇಟೆ NEWS DESK ಆ.12 : ಸಿ ಆ್ಯಂಡ್ ಡಿ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು, ಆಸ್ತಿ ದುರಸ್ತಿ ವಿಳಂಬವನ್ನು ಖಂಡಿಸಿ ತಾಲ್ಲೂಕು ರೈತ ಹೋರಾಟ ಸಮಿತಿ ಹಾಗು ಕೊಡಗು ರೈತ ಸಂಘ ಮಂಗಳವಾರ ಕರೆ ನೀಡಿದ್ದ ಸೋಮವಾರಪೇಟೆ ತಾಲ್ಲೂಕು ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಗ್ರಾಮೀಣ ಭಾಗದ ರೈತರು ಬೆಳಿಗ್ಗೆಯೇ ಸೋಮವಾರಪೇಟೆ ಪಟ್ಟಣಕ್ಕೆ ಆಗಮಿಸಿ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್, ಸಂಚಾಲಕ ಬಿ.ಜೆ.ದೀಪಕ್, ಪ್ರಮುಖರಾದ ಎಸ್.ಜಿ.ಮೇದಪ್ಪ, ಕೆ.ಎಂ.ಲೋಕೇಶ್ ಕುಮಾರ್, ಬಿ.ಪಿ.ಅನಿಲ್, ಹರಗ ಮಿಥುನ್, ಕೂತಿ ದಿವಾಕರ್, ಕೆ.ಎಂ.ದಿನೇಶ್ ಅವರುಗಳ ನೇತೃತ್ವದಲ್ಲಿ ವಿವೇಕಾನಂದ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿದರು. ಬೀಟಿಕಟ್ಟೆ ಜಂಕ್ಷನ್‌ನಲ್ಲಿ ರೈತ ಹೋರಾಟ ಸಮಿತಿ ಹಾಗು ರೈತ ಸಂಘದ ಎಸ್.ಬಿ.ಭರತ್‌ಕುಮಾರ್, ಜಿ.ಎಂ.ಹೂವಯ್ಯ, ಬಿ.ಪಿ.ಮೊಗಪ್ಪ, ಗೋಪಾಲ್‌ಕೃಷ್ಣ ಅವರ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿದರು ಗೌಡಳ್ಳಿ, ಚೌಡ್ಲು, ತೋಳೂರುಶೆಟ್ಟಳ್ಳಿ, ಕಲ್ಕಂದೂರು-ಕೂಡುರಸ್ತೆ, ಮಾದಾಪುರ, ಕುಂಬೂರು, ಅಬ್ಬೂರುಕಟ್ಟೆ ಜಂಕ್ಷನ್‌ನಲ್ಲಿ ರಸ್ತೆ ತಡೆ ನಡೆಸಿದರು. ಸೋಮವಾರಪೇಟೆ ಪಟ್ಟಣದಲ್ಲಿ ವರ್ತಕರು ಅಂಗಡಿ ಮುಂಗಟ್ಟು ಮುಚ್ಚಿದ್ದರು. ಖಾಸಗಿ ಬಸ್‌ಗಳು, ಆಟೋ,…

Read More

ಮಡಿಕೇರಿ NEWS DESK ಆ.12 : ಕೊಡಗು ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಜಿನೇವಾ ಒಪ್ಪಂದದ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು. ನಗರದ ರೆಡ್ ಕ್ರಾಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿಯ ಜಿಲ್ಲಾ ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಜಿನೇವಾ ಒಪ್ಪಂದದ ಮಹತ್ವವನ್ನು ಸಭೆಗೆ ತಿಳಿಸಿದರು. ಜಿನೇವಾ ಒಪ್ಪಂದಗಳ ದಿನವನ್ನು ಪ್ರತಿ ವರ್ಷ ಆಗಸ್ಟ್ 12 ರಂದು ಆಚರಿಸಲಾಗುತ್ತದೆ. ಇದು ಸಶಸ್ತ್ರ ಸಂಘರ್ಷಗಳ ಸಮಯದಲ್ಲಿ ಮಾನವೀಯ ಕಾನೂನುಗಳನ್ನು ಪಾಲಿಸುವ ಮಹತ್ವವನ್ನು ನೆನಪಿಸುತ್ತದೆ. ಯುದ್ಧದ ಸಮಯದಲ್ಲಿ ಗಾಯಗೊಂಡವರು ಮತ್ತು ಸೆರೆಯಾಳುಗಳನ್ನು ರಕ್ಷಿಸಲು ಅಂತರರಾಷ್ಟ್ರೀಯ ಕಾನೂನು ಮಾನದಂಡಗಳನ್ನು ಜಿನೇವಾ ಒಪ್ಪಂದ ಪ್ರತಿಪಾದಿಸುತ್ತದೆ. ಸಂಘರ್ಷದ ಸಮಯದಲ್ಲಿ ಮಾನವೀಯತೆಯನ್ನು ಕಾಪಾಡುವಲ್ಲಿ ಮತ್ತು ರಕ್ಷಿಸುವಲ್ಲಿ ಈ ಒಪ್ಪಂದಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು. ಜಿಲ್ಲೆಯ ಪ್ರೌಢ ಶಾಲೆಯಲ್ಲಿ ಕಿರಿಯ ರೆಡ್ ಕ್ರಾಸ್ ಮತ್ತು ಯೂತ್ ರೆಡ್ ಕ್ರಾಸ್ ಘಟಕಗಳನ್ನು ಮರು ಸ್ಥಾಪನೆ ಮಾಡಲಾಗುವುದು. ಕೊಡಗು ರೆಡ್ ಕ್ರಾಸ್ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ…

Read More

ಮಡಿಕೇರಿ ಆ.12 NEWS DESK : ಪ್ರಸಕ್ತ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿಯು ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಸಾಯಿ ಹಾಕಿ ಮೈದಾನದಲ್ಲಿ ನಡೆಯಿತು. ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ಸಹಾಯಕ ನಿರ್ದೇಶಕರಾದ ಮಿನಿ ಉಣ್ಣಿರಾಜ್ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿದರು. ಪಂದ್ಯಾವಳಿಯ ಮುಖ್ಯ ಅತಿಥಿಗಳಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ದೈಹಿಕ ಶಿಕ್ಷಕರಾದ ರಾಕಿ ಪೂವಣ್ಣ, ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನಿರ್ದೇಶಕರಾದ ಚಿದಾನಂದ ಎನ್.ಎಸ್., ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಗಿರಿಧರ ಗೌಡ, ಭಾಗಮಂಡಲ ದೈಹಿಕ ಶಿಕ್ಷಣ ಉಪನ್ಯಾಸಕರು, ಮೂರ್ನಾಡು ದೈಹಿಕ ಶಿಕ್ಷಣ ಉಪನ್ಯಾಸಕರಾದ ಬೋಪಣ್ಣ, ಇತರರು ಇದ್ದರು. ಬಾಲಕಿಯರ ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿಯು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸಂತ ಮೈಕಲರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ನಡುವೆ ನಡೆಯಿತು. ಇದರಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು 4-0 ಗೋಲ್‍ಗಳ ಅಂತರದಲ್ಲಿ ವಿಜೇತರಾದರು.…

Read More

ಮಡಿಕೇರಿ ಆ.12 NEWS DESK : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದಲ್ಲಿ ವಿವಿಧ ಕಾರ್ಯಕ್ರಮಗಳು ಆರಂಭಗೊಂಡವು. ಹರ್ ಘರ್ ತಿರಂಗಾ ಅಭಿಯಾನ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ವಿವಿಧ ಇಲಾಖೆ ಮೂಲಕ ನಡೆಯಲಿವೆ. ಹರ್ ಘರ್…

Read More

ಮಡಿಕೇರಿ ಆ.12 NEWS DESK : ಕುಶಾಲನಗರ ಆರ್ಯವೈಶ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ.ಆರ್.ನಾಗೇಂದ್ರ ಪ್ರಸಾದ್ ಆಯ್ಕೆಯಾಗಿದ್ದಾರೆ. ಆರ್ಯವೈಶ್ಯ ಮಂಡಳಿಯ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಿಕಟ ಪೂರ್ವ ಅಧ್ಯಕ್ಷ ಬಿ.ಎಲ್.ಉದಯ್ ಕುಮಾರ್ ಅವರನ್ನೊಳಗೊಂಡ ಮಂಡಳಿಗೆ ಕಾರ್ಯದರ್ಶಿಯಾಗಿ ಕೆ.ಪ್ರವೀಣ್, ಖಜಾಂಚಿಯಾಗಿ ಪಿ.ಎಸ್.ಪ್ರಶಾಂತ್, ಉಪಾಧ್ಯಕ್ಷರಾಗಿ ಬಿ.ಎಲ್.ಅಶೋಕ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಎ.ಎಸ್ ಕುಮಾರ್, ನಿರ್ದೇಶಕರುಗಳಾಗಿ ಬಿ.ಎಲ್.ಸತ್ಯನಾರಾಯಣ, ಎಸ್.ಎನ್.ನಾಗೇಂದ್ರ, ಬಿ.ಆರ್.ನಟರಾಜ್, ಕೆ.ಜೆ.ಸತೀಶ್, ಬಿ.ಪಿ.ಕೃಷ್ಣಮೂರ್ತಿ ಹಾಗೂ ವಿ.ವೈಶಾಖ್ ಆಯ್ಕೆಯಾದರು.

Read More

ಸುಂಟಿಕೊಪ್ಪ ಆ.12 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ವತಿಯಿಂದ ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಒಕ್ಕೂಟ ಹಾಗೂ ಸಂಘಗಳ ಪದಾಧಿಕಾರಿಗಳು ಶಾಲೆಯ ಆವರಣದ ಸುತ್ತ ಬೆಳೆದಿದ್ದ ಕಾಡುಗಿಡಗಳನ್ನು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಅಧ್ಯಕ್ಷೆ ಭವ್ಯ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಕಾರ್ಯಕ್ಷೇತ್ರದ ಮಹಿಳಾ ಸ್ವ ಸಹಾಯ ಸಂಘಗಳಾದ ಜನನಿ, ಮೂಕಾಂಬಿಕ, ಅನ್ನಪೂರ್ಣ, ಶ್ರೀ ಸರಸ್ವತಿ, ನೇತಾಜಿ ಹಾಗೂ ಪರಮೇಶ್ವರ ಸಂಘಗಳ ಪ್ರಬಂಧಕರು ಹಾಗೂ ಸಂಘದ ಸದಸ್ಯರುಗಳು ಆವರಣದಲ್ಲಿ ಬೆಳೆದಿದ ಕಾಡು ಗಿಡ ಗಂಟಿ, ಪ್ಲಾಸ್ಟಿಕ್ ಇನ್ನಿತರರ ತ್ಯಾಜ್ಯಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛಾತ ಕಾರ್ಯವನ್ನು ನೇರವೇರಿಸಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಉಪಾಧ್ಯಕ್ಷೆ ಗೀತಾ, ಒಕ್ಕೂಟ…

Read More

ಮಡಿಕೇರಿ ಆ.12 NEWS DESK : 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ವರ್ತಕರಲ್ಲಿ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್‍ನ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಜಿಲ್ಲಾ ನಿರ್ದೇಶಕ ಧನಂಜಯ ಎಂ. ಅವರು ಸ್ವಚ್ಛ ಪರಿಸರಕ್ಕಾಗಿ 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಸಗಟು ವ್ಯಾಪಾರಸ್ಥರು ಹಾಗೂ ಚಿಲ್ಲರೆ ಮಾರಾಟ ಅಂಗಡಿ ಮಾಲೀಕರಲ್ಲಿ ಕಳೆದ ಜನವರಿಯಿಂದ ಮನವಿ ಮಾಡಿಕೊಳ್ಳಲಾಗಿದೆ. ಇದೇ ಆ.1 ರಿಂದ ಈ ನೀರಿನ ಬಾಟಲಿಗಳ ಮಾರಾಟವನ್ನು ನಗರಸಭೆ ಕಡ್ಡಾಯವಾಗಿ ನಿಷೇಧಿಸಿದೆ ಎಂದು ತಿಳಿಸಿದ್ದಾರೆ. 2024-25ರ ಪ್ರವಾಸೋದ್ಯಮ ಇಲಾಖೆಯ ಅಂಕಿ ಅಂಶದ ಪ್ರಕಾರ 45 ಲಕ್ಷಕ್ಕೂ ಅಧಿಕ ಪ್ರವಾಸಿಗರು ಮಡಿಕೇರಿ ನಗರಕ್ಕೆ ಭೇಟಿ ನೀಡಿದ್ದಾರೆ. ಕನಿಷ್ಠ 25 ರಿಂದ 30 ಲಕ್ಷ ನೀರಿನ ಬಾಟಲ್ ಮಡಿಕೇರಿ ನಗರ ಒಂದರಲ್ಲೇ ಕಂಡು ಬಂದಿದೆ. ಈ ಬಾಟಲ್ ಗಳು…

Read More

ಮಡಿಕೇರಿ ಆ.12 NEWS DESK :  ಭಾರತ ಸ್ವಾತಂತ್ರ್ಯದ 78ನೇ ವರ್ಷಾಚರಣೆಯ ಪ್ರಯುಕ್ತ ಆ.15ರಂದು “ವಾಯ್ಸ್ ಆಫ್ ಕೊಡವ- (ವಿಒಕೆ)” ಮತ್ತು ಯುನೈಟೆಡ್ ಕೊಡವ ಆರ್ಗನೈಜೇಷನ್ (ಯುಕೊ) ಸಹಯೋಗದಲ್ಲಿ ” ನೆಪ್ಪುರ ನಳತ್ ಮಾಂಜತ ಮೊಟ್ಟ್” – ”ever lasting footprints inthe shadow of memories’ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಯುನೈಟೆಡ್ ಕೊಡವ ಆರ್ಗನೈಜೇಷನ್ – ಯುಕೊ, ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ನೀಡಿರುವ ಅವರು, ಈ ದೇಶದ ಸ್ವಾತಂತ್ರ್ಯಕ್ಕಾಗಿ ಈ ನಾಡಿನ ಹಿರಿಯರು ತಮ್ಮ ನಿಸ್ವಾರ್ಥ ಸೇವೆಯನ್ನು ನೀಡಿದ್ದಾರೆ, ಭಾರತ ಸ್ವಾತಂತ್ರ್ಯದ ಇತಿಹಾಸದಲ್ಲಿ ಕೊಡಗು ತನ್ನದೇ ಅಧ್ಯಾಯವನ್ನು ಹೊಂದಿದೆ. ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗಮಾಡಿದ ಹೋರಾಟಗಾರರನ್ನು ಕೊಡಗು ದೇಶಕ್ಕೆ ನೀಡಿದೆ. ಆದರೆ ಅವರಿಗೆ ಸರ್ಕಾರದಿಂದಾಗಲೀ, ಸಾರ್ವಜನಿಕರಿಂದಾಗಲಿ ಸೂಕ್ತವಾದ ಗೌರವ ನೀಡಲಾಗುತ್ತಿಲ್ಲ. ಸರ್ಕಾರದಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಕೆಲವೇ ಕೆಲವು ಹೋರಾಟಗಾರರನ್ನು ಗುರ್ತಿಸಿ ಗೌರವ ನೀಡಲಾಗುತ್ತಿದೆ. ಆದರೆ ಇಲ್ಲಿನ ನೈಜ ಹೋರಾಟಗಾರರಿಗೆ…

Read More

ಮಡಿಕೇರಿ NEWS DESK ಆ.12 : ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದಂತೆ ‘ವೃಂದ ಮತ್ತು ನೇಮಕಾತಿ’ ಆದೇಶದ ತಿದ್ದುಪಡಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಬದಗಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಪ್ರತಿಭಟನೆ ನಡೆಸಿತು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷ ಹೆಚ್.ಎನ್.ಮಂಜುನಾಥ್ ಹಾಗೂ ಜಿಲ್ಲಾಧ್ಯಕ್ಷ ಕೆ.ಎಸ್.ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ನೂರಾರು ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ತಿದ್ದುಪಡಿಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಹೋರಾಟಗಳನ್ನು ನಡೆಸಿದರು ಸರ್ಕಾರ ಅನುಮೋದನೆ ನೀಡಿಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. *ಆ.25 ರ ಗಡುವು* ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್ ಮಾತನಾಡಿ, ಬೇಡಿಕೆಯ ಈಡೇರಿಕೆಗಾಗಿ ಇದೇ ಆ.25 ರ ಗಡುವನ್ನು ರಾಜ್ಯ ಸರಕಾರಕ್ಕೆ ನೀಡಲಾಗುತ್ತಿದೆ. ಈ…

Read More