ಲೇಖಕ: admin

ಕುಶಾಲನಗರ ಜು.5 NEWS DESK : ತಾಲ್ಲೂಕು ಕೇಂದ್ರವಾದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದಾನಿ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು – ಈ ಬ್ಯಾಂಕ್ ನ ಹಿರಿಯ ನಿವೃತ್ತ ಅಧಿಕಾರಿ, ಕುಶಾಲನಗರದ ಸೂದನ ರತ್ನಾವತಿ ಪೂಣಚ್ಚ ಉಚಿತ ಬರೆಯುವ ನೋಟ್ ಪುಸ್ತಕಗಳು ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿದರು. ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಸೂದನ ರತ್ನಾವತಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ದೃಢ ಸಂಕಲ್ಪ ತೊಟ್ಟು ಉತ್ತಮ ವ್ಯಕ್ತಿಗಳಾಗಿ ರೂಪುಗೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಉತ್ತಮ ಸಂಸ್ಕಾರ‌ ಹಾಗೂ ಸಂಸ್ಕೃತಿ ಬೆಳೆಸಿಕೊಂಡು ಶಿಕ್ಷಣ ನೀಡಿದ ಗುರುಗಳು ಹಾಗೂ ಜನ್ಮ ನೀಡಿದ ತಂದೆ- ತಾಯಿಗಳಿಗೆ ಗೌರವ ನೀಡಬೇಕು ಎಂದರು. ಶಾಲಾ ಮುಖ್ಯ ಶಿಕ್ಷಕ ಪಿ.ನವೀನ್ ಕುಮಾರ್ ಮಾತನಾಡಿ , ಶಿಕ್ಷಣ ಪ್ರೇಮಿ ಸೂದನ ರತ್ನಾವತಿ ಅವರು ನಮ್ಮ ಸರ್ಕಾರಿ ಶಾಲಾ ಮಕ್ಕಳಿಗೆ ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ವಿತರಿಸುತ್ತಿದ್ದು,…

Read More

ಮಡಿಕೇರಿ ಜು.4 NEWS DESK : ನಗರದಲ್ಲಿ ತಾಲ್ಲೂಕು ಕ್ಷಿಪ್ರ ಕಾರ್ಯಪಡೆ ತಂಡದವರು ವಾರ್ಡ್‍ವಾರು ಮನೆ ಮನೆಗಳಿಗೆ ಭೇಟಿ ನೀಡಿ ನೀರಿನ ತಾಣಗಳಲ್ಲಿ ಲಾರ್ವಾ ಉತ್ಪತ್ತಿಯಾಗಿರುವುದನ್ನು ಪತ್ತೆ ಹಚ್ಚಿ ನಿರ್ಮೂಲನೆ ಮಾಡುವ ಮೂಲಕ ಡೆಂಗ್ಯೂ ನಿಯಂತ್ರಣ ಕುರಿತು ಅರಿವು ಮೂಡಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಶ್ರೀನಿವಾಸ್ ಮಾತನಾಡಿ, ಡೆಂಗ್ಯೂ ಮಾಸಾಚರಣೆ ನಿಮಿತ್ತ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದರು. ನೀರಿನ ತಾಣಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಖಾಲಿ ಮಾಡಿ ಒರೆಸಿ, ಒಣಗಿಸಿ ನೀರು ಶೇಖರಿಸುವುದು ಮತ್ತು ಮುಚ್ಚಳದಿಂದ ಮುಚ್ಚಿಡುವುದು, ಎಲ್ಲರೂ ಸೊಳ್ಳೆಗಳಿಂದ ರಕ್ಷಣಾತ್ಮಕ ಉಡುಪುಗಳನ್ನು ಧರಿಸುವುದು, ಸೊಳ್ಳೆ ಪರದೆಗಳನ್ನು ಉಪಯೋಗಿಸುವಂತೆ, ತ್ಯಾಜ್ಯ ಪರಿಕರಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ಪರಿಸರ ಶುಚಿತ್ವ ಕಾಪಾಡಿಕೊಳ್ಳಲು ಮತ್ತು ಯಾವುದೇ ರೀತಿಯ ಜ್ವರ ಬಂದ ತಕ್ಷಣ ವೈದ್ಯರಲ್ಲಿ ತೋರಿಸಿಕೊಳ್ಳುವಂತೆ ಹೇಳಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚೇತನ್ ಮೇಲ್ವೀಚಾರಣೆ ನಡೆಸಿ, ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜ್ವರ ಮತ್ತು ಗುಣತ್ಮಾಕ ಲಾರ್ವಾ ಸರ್ವೇಕ್ಷಣೆ ನಡೆಸಿ ಜನರಲ್ಲಿ ಆರೋಗ್ಯ ಶಿಕ್ಷಣ ನಿಡುತ್ತಾ ತಂಡದವರು ಕಾರ್ಯನಿರ್ವಹಿಸುತ್ತಿದ್ದು…

Read More

ಮಡಿಕೇರಿ ಜು.4 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಜು.5 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆಎಸ್‍ಆರ್‍ಟಿಸಿ ಬಸ್ ಸ್ಟಾಂಡ್, ಹಳೆ ಪ್ರೈವೇಟ್ ಬಸ್ ಸ್ಟಾಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Read More

ಮಡಿಕೇರಿ ಜು.4 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 8 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 178 ಮನೆಗಳ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಿದರು. ಗಾಳಿಬೀಡು ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣ ಕಾರ್ಯಾದೇಶ ಪತ್ರ ವಿತರಿಸಿ ಮಾತನಾಡಿದ ಶಾಸಕರು, ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಿಸಲಾಗುತ್ತಿದ್ದು, ಮಳೆಗಾಲ ನಂತರ ಮನೆ ನಿರ್ಮಾಣಕ್ಕೆ ಮುಂದಾಗಬಹುದಾಗಿದೆ ಎಂದು ಸಲಹೆ ನೀಡಿದರು. ಸರ್ಕಾರದ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ನಿವೇಶನ ಇರುವವರಿಗೆ ಮನೆ ನಿರ್ಮಿಸಿಕೊಡಲು ಮುಂದಾಗಿದ್ದು, ಈ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದು ಶಾಸಕರು ಕೋರಿದರು. ಸರ್ಕಾರದ ವಿವಿಧ ಯೋಜನೆಗಳ ಜೊತೆಗೆ ಗ್ಯಾರಂಟಿ ಕಾರ್ಯಕ್ರಮಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗುವತ್ತ ಮುಂದಾಗಬೇಕು ಎಂದು ಡಾ.ಮಂತರ್ ಗೌಡ ಅವರು ತಿಳಿಸಿದರು. ಗಾಳಿಬೀಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯವರು…

Read More

ಮಡಿಕೇರಿ ಜು.4 NEWS DESK : ಜಿಲ್ಲಾ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನ ನಿರ್ಮಾಣ ಕಾಮಗಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಪರಿಶೀಲಿಸಿದರು. ಭವನದ ಸಭಾಂಗಣದಲ್ಲಿ ಚೇರ್ ಮತ್ತು ಬೆಳಕು ವ್ಯವಸ್ಥೆ, ವೇದಿಕೆ ನಿರ್ಮಾಣ, ಧ್ವನಿ ನಿಯಂತ್ರಣ ಫಲಕ ಅಳವಡಿಕೆ, ವಿದ್ಯುತ್ ಕಾಮಗಾರಿ, ಮತ್ತಿತರ ಕೆಲಸಗಳು ಆಗಬೇಕಿದ್ದು, ತ್ವರಿತವಾಗಿ ಪೂರ್ಣಗೊಳಿಸುವಂತೆ ಎಂಜಿನಿರ್‌ಗೆ ನಿರ್ದೇಶನ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಸದಸ್ಯರಾದ ಪುತ್ತರೀರ ಪಪ್ಪು ತಿಮ್ಮಯ್ಯ, ಕಂಬೇಯಂಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಂಡ ದಿನು ಬೋಜಪ್ಪ, ಕೊಂಡಿಜಮ್ಮನ ಎಂ.ಬಾಲಕೃಷ್ಣ, ಪಾನಿಕುಟ್ಟಿರ ಕೆ.ಕುಟ್ಟಪ್ಪ, ಪೊನ್ನಿರ ಯು.ಗಗನ್, ನಾಯಕಂಡ ಬೇಬಿ ಚಿನ್ನಪ್ಪ, ಚೊಟ್ಟೆಯಂಡ ಎ.ಸಂಜು ಕಾವೇರಪ್ಪ, ನಾಪಂಡ ಸಿ.ಗಣೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಇದ್ದರು. ಬಳಿಕ ಕುಶಾಲನಗರಕ್ಕೆ ತೆರಳಿ ಕುಶಾಲನಗರ ಕಲಾಭವನ ಕಾಮಗಾರಿ ವೀಕ್ಷಿಸಿ ಮಾಹಿತಿ ಪಡೆದರು.

Read More

ಮಡಿಕೇರಿ ಜು.4 NEWS DESK : ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿರು. ಹಾನಗಲ್ಲು ಗ್ರಾಮದ ಲೋಹಿತ್ ಮನೆ ಹಾನಿಗೊಂಡಿದ್ದು, ಜೋಸೆಫ್ ಮತ್ತು ರೂಪಾ ಅವರ ಮನೆ ಮುಂಭಾಗ ಬರೆ ಕುಸಿದಿರುವ ಸ್ಥಳಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಶಿಥಿಲಗೊಂಡಿದ್ದ ಮನೆಗಳಿಗೆ ಟಾರ್ಪಲ್ ವಿತರಿಸಿ,  ನೋಟಿಸ್ ನೀಡಿದರು. ಈ ಸಂದರ್ಭ ಹಾನಗಲ್ಲು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಯಶಾಂತ್ ಕುಮಾರ್, ಉಪಾಧ್ಯಕ್ಷರಾದ ರೇಣುಕ, ಸದಸ್ಯ ಸುದೀಪ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇದಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಜು.4 NEWS DESK : ಕರ್ನಾಟಕ ಮುಸ್ಲಿಂ ಯುನಿಟಿಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಜಿಲ್ಲಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಕೆ.ಎ.ಯಾಕುಬ್ ಆಯ್ಕೆಯಾಗಿದ್ದಾರೆ. ಕುಶಾಲನಗರದಲ್ಲಿ ನಡೆದ ಮುಸ್ಲಿಂ ಜಾಗೃತಿ ಸಮಾಲೋಚನಾ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ತಿಳಿಸಿದ್ದಾರೆ. ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಆಮೀನ್ ಮೋಹಿಸಿನ್ ಅವರನ್ನು ಆಯ್ಕೆ ಮಾಡಲಾಯಿತು.

Read More

ಮೈಸೂರು ಜು.4 NEWS DESK : ರಾಜ್ಯ ಹಾಗೂ ಹೊರ ರಾಜ್ಯದ ಸಾವಿರಾರು ಭಕ್ತರು ಎರಡನೇ ಆಷಾಡ ಶುಕ್ರವಾರ ನಾಡದೇವತೆ, ಬೆಟ್ಟದ ತಾಯಿ ಶ್ರೀ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಆಷಾಡದ ಪ್ರಯುಕ್ತ ಶ್ರೀಚಾಮುಂಡಿ ದೇವಾಲಯವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಆಕರ್ಷಣೀಯಗೊಳಿಸಲಾಗಿತ್ತು. ಇಂದು ಕರ್ನಾಟಕದ ಅನೇಕ ರಾಜಕಾರಣಿಗಳು ಹಾಗೂ ಚಿತ್ರನಟರು ಬೆಟ್ಟಕ್ಕೆ ಬೇಟಿ ನೀಡಿ ಶ್ರೀ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More

ಕುಶಾಲನಗರ ಜು.4 NEWS DESK : ದೇಹವನ್ನು ಹೆಚ್ಚಾಗಿ ದಂಡಿಸುವ ಮೂಲಕ ಆರೋಗ್ಯಕ್ಕೆ ಒತ್ತು ನೀಡಬೇಕೆಂದು ಕುಶಾಲನಗರ ಸಂಚಾರ ಠಾಣೆ ಠಾಣಾಧಿಕಾರಿ ಗಣೇಶ್ ಕರೆ ನೀಡಿದರು. ಕುಶಾಲನಗರದ ಬಿಎಂ ರಸ್ತೆಯಲ್ಲಿರುವ ಲೈಟ್ ವೈಯ್ಟ್ ಜಿಮ್ಮಿನ ದ್ವೈ ವಾರ್ಷಿಕೋತ್ಸವದ ಅಂಗವಾಗಿ   ನಡೆದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಗರದ ಸಿಟಿಪಾಯಿಂಟ್ ಕಟ್ಟಡದ ಸಭಾಂಗಣದಲ್ಲಿ  ನಡೆದ ಸ್ಪರ್ಧೆಯು ಪ್ರತೀ ಸುತ್ತಿನಲ್ಲಿಯೂ ತನ್ನ ಬಿರುಸು ಹೆಚ್ಚಿಸಿಕೊಂಡು ನೋಡುಗರ ಮೈನವಿರೇಳಿಸಿತು. ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡು, ಅಂತರ್‌ಜಿಲ್ಲಾ ಮಟ್ಟಗಳಲ್ಲಿ ಹೆಸರು ಮಾಡಿರುವ ಮಿಸ್ಟರ್ ಕೊಡಗು  ಪ್ರಕಾಶ್‌  ಕಾರ್ಯಕ್ರಮವನ್ನು ಆಯೋಜಿಸಿದ್ದರು. ತೀರ್ಪುಗಾರರಾಗಿ ನ್ಯೂ ಜೆನ್ ಜಿಮ್ಮಿನ ಮಾಲಿಕ  ಪವನ್ ಕಾರ್ಯನಿರ್ವಹಿಸಿದರು. ಕುಶಾಲನಗರ ಗ್ರಾಮಾಂತರ ಠಾಣೆಯ ಉಪನಿರೀಕ್ಷಕ ರಾಮಚಂದ್ರ, ಸರಿಗಮಪ ಖ್ಯಾತಿಯ ಅನ್ವಿತ್  ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.  ಸುಮಾರು ಇಪ್ಪತ್ತೈದು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಚಾಂಪಿಯನ್ ಪಟ್ಟವನ್ನು ಆತಿಥೇಯ ಜಿಮ್ಮಿನ ಮಂಜು ಅಲಂಕರಿಸಿದರೆ, ಬೆಸ್ಟ್ ಪೋಸರ್ ಪಟ್ಟವನ್ನು ರಜಾಕ್,  ಮೋಸ್ಟ್ ಮಸ್ಕ್ಯುಲರ್ ಬಿರುದನ್ನು ಆನಂದ್ ಪಡೆದುಕೊಂಡರು. ಪ್ರತೀ…

Read More

ಸೋಮವಾರಪೇಟೆ ಜು.4 NEWS DESK : ಮಾಜಿ ಸಚಿವ ಅಪ್ಪಚ್ಚು ರಂಜನ್ ಜನ್ಮದಿನದ ಹಿನ್ನಲೆ ಇಂದು ಹಲವು ಮಠಾಧೀಶರು ಹಾಗೂ ಗಣ್ಯರು ಶುಭಕೋರಿದರು. 66 ಸಂವತ್ಸರ ಪೂರೈಸಿದ ಮಾಜಿ ಕ್ರೀಡಾ ಸಚಿವ ಅಪ್ಪಚ್ಚು ರಂಜನ್ ನಿವಾಸಕ್ಕೆ  ಹಲವು ಗಣ್ಯರು ತೆರಳಿ ಜನ್ಮದಿನದ ಶುಭಹಾರೈಸಿದರು. ಈ ಸಂದರ್ಭ ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಮುಳ್ಳುರು ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಪಟ್ಟಣ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿಗಳು ಆಶೀರ್ವದಿಸಿ ಶುಭಕೋರಿದರು.

Read More