ಮಡಿಕೇರಿ ಜು.4 NEWS DESK : ಕರ್ನಾಟಕ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ವತಿಯಿಂದ ಕುಶಾಲನಗರದಲ್ಲಿ ಕೋಮುವಾದದ ವಿರುದ್ಧ ಸೌಹಾರ್ದ ನಡಿಗೆ ಕಾರ್ಯಕ್ರಮ ನಡೆಯಿತು. ಎಸ್ಎಸ್ಎಫ್ ಕೊಡಗು ಜಿಲ್ಲಾಧ್ಯಕ್ಷ ಖಮರುದ್ದೀನ್ ಅನ್ವಾರಿ ಸಖಾಫಿ ನೇತೃತ್ವದಲ್ಲಿ ಕೂರ್ಗ್ ಜಂಇಯ್ಯತುಲ್ ಉಲಮಾ ಹಾಗೂ ಪ್ರಧಾನ ಕಾರ್ಯದರ್ಶಿ ಶೈಖುನಾ ಅಶ್ರಫ್ ಅಹ್ಸನಿ ಉಸ್ತಾದರ ಪ್ರಾರ್ಥನೆಯೊಂದಿಗೆ ತಾವರೆಕೆರೆಯಿಂದ ಸೌಹಾರ್ದ ನಡಿಗೆ ಪ್ರಾರಂಭಗೊಂಡು ಪಟ್ಟಣದ ಕಾರು ನಿಲ್ದಾಣದಲ್ಲಿ ಸಮಾಪ್ತಿಗೊಂಡಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಸಮಿತಿ ರಾಜ್ಯಾಧ್ಯಕ್ಷ ಮೌಲಾನಾ ಹಾಫಿಝ್ ಸುಫ್ಯಾನ್ ಸಖಾಫಿ ಸಂದೇಶ ಭಾಷಣ ಮಾಡಿ, ಭಾರತ ದೇಶವು ಹಲವು ಧರ್ಮಗಳ ಬೀಡಾಗಿದ್ದು, ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶವಾಗಿದೆ. ಧರ್ಮಗಳಿಗೆ ಬೆಲೆ ಕೊಟ್ಟು ಧರ್ಮಾಂಧತೆಯನ್ನು ದೂರಗೊಳಿಸಲು ಕರೆ ನೀಡಿದರು. ರಾಜಕಾರಣಿಗಳು ಸಮಾಜದ ಅಭಿವೃದ್ಧಿಯತ್ತ ಚಿಂತೆ ಮಾಡಬೇಕು, ಧರ್ಮ ಗುರುಗಳು ಧಾರ್ಮಿಕ ನೆಲೆ ಕಾಪಾಡಬೇಕು ಎಂದರು. ದೇಶದ ಎಲ್ಲೆಡೆ ಕೋಮು ದ್ವೇಷ ಹರಡುವ ಕೆಲಸವನ್ನು ಸ್ಥಗಿತಗೊಳಿಸುವ ಪ್ರಯತ್ನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೊಡ್ಲಿಪೇಟೆ ಕಿರಿ…
ಲೇಖಕ: admin
ಮಡಿಕೇರಿ NEWS DESK ಜು.4 : ಸೋಮವಾರಪೇಟೆ ಪಟ್ಟಣದ ನಿವಾಸಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅಹಲ್ಯ ಅಪ್ಪಚ್ಚು ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಕಲಾಕೃತಿಯನ್ನು ರೇಖಾಚಿತ್ರದ ಮೂಲಕ ಆಕರ್ಷಕವಾಗಿ ರಚಿಸಿದ್ದಾರೆ. ಅಹಲ್ಯ ಅಪ್ಪಚ್ಚು ಅವರ ಪ್ರತಿಭೆಯ ಕುರಿತು ಶಾಸಕರು ಹೀಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ >>> *ಸೋಮವಾರಪೇಟೆ ಪಟ್ಟಣದ ನಿವಾಸಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅಹಲ್ಯ ಅಪ್ಪಚ್ಚು ರವರು ನನ್ನ ಕಲಾಕೃತಿಯನ್ನು ಬಹಳ ಅತ್ಯುತ್ತಮವಾಗಿ ರಚನೆ ಮಾಡಿದ್ದಾರೆ.ಈ ಕಲಾಕೃತಿಯು ನನ್ನನ್ನು ಆಕರ್ಷಿಸಿದ್ದು ಪ್ರತಿಭಾವಂತೆ ಅಹಲ್ಯ ಅಪ್ಪಚ್ಚು ರವರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ ಈ ಸಂದರ್ಭದಲ್ಲಿ ಶುಭ ಹಾರೈಸುತ್ತೇನೆ. (ಶಾಸಕ ಡಾ.ಮಂತರ್ ಗೌಡ )*
ನಾಪೋಕ್ಲು ಜು.4 NEWS DESK : ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡಿದರೆ ಅದು ನಿಜವಾದ ಸಮಾಜ ಸೇವೆ ಎನಿಸಿಕೊಳ್ಳುತ್ತದೆ ಎಂದು ಲಯನ್ಸ್ ಜಿಲ್ಲಾ ರಾಜ್ಯಪಾಲ ಹೆಚ್.ಎಂ.ತಾರಾನಾಥ ಹೇಳಿದರು. ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕ್ಲಬ್ಬಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ನೆರವೇರಿಸಿ ಅವರು ಮಾತನಾಡಿದರು. ನಾಪೋಕ್ಲು ವಲಯದ ಲಯನ್ಸ್ ಕ್ಲಬ್ ಉತ್ತಮವಾಗಿ ಕಾರ್ಯನಿರ್ವಹಿಸಿ ಉತ್ತಮ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೆಲವೊಮ್ಮೆ ಕೆಲವೊಂದು ಕಾರ್ಯ ಚಟುವಟಿಕೆಗಳಲ್ಲಿ ಮನಸ್ಸಿಗೆ ಬೇಸರ ಉಂಟಾಗಬಹುದು. ಕಾರ್ಯ ಚಟುವಟಿಕೆಗಳಲ್ಲಿ ಅನುಮಾನ, ಬೇಸರಕ್ಕೆ ಆಸ್ಪದ ಕೊಡದೆ ಯಾವುದೇ ಸಂದರ್ಭದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು. ಏನಾದರೂ ಸಾಧಿಸಲು ಆತ್ಮವಿಶ್ವಾಸ ಮುಖ್ಯ ಎಂದ ಅವರು ಅಹಂಕಾರ, ಗರ್ವ ಪಡಬಾರದು ಎಂದರು. ಕೊಡಗು ಜಿಲ್ಲೆಯಿಂದ ಹೆಚ್ಚಿನ ಯುವಕರು ಸೈನ್ಯದಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದಾರೆ. ಧೈರ್ಯ, ಸಾಹಸಕ್ಕೆ ಕೊಡಗು ಹೆಸರುವಾಸಿಯಾಗಿದೆ. ಇಂತಹ ಜಿಲ್ಲೆಯಲ್ಲಿ ಸಮಾಜ ಸೇವೆಯನ್ನು ಮಾಡುವುದರ ಮೂಲಕ ಕ್ಲಬ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕು, ನಮ್ಮ ದಿನನಿತ್ಯದ…
ಮಡಿಕೇರಿ ಜು.4 NEWS DESK : ಕೊಡಗು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಕೌಶಲ್ಯಾಧಾರಿತ ಶಿಕ್ಷಣ ಸಾಮಥ್ರ್ಯ ಹೊಂದಿರುವಂತೆ ರೂಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ.ಅಶೋಕ ಸಂಗಪ್ಪ ಆಲೂರ ಅವರು ಅಭಿಪ್ರಾಯಿಸಿದರು. ಕೊಡಗು ವಿಶ್ವವಿದ್ಯಾಲಯದ ಮುಖ್ಯ ಕೇಂದ್ರ, ಘಟಕ ಮಹಾವಿದ್ಯಾಲಯ ಹಾಗೂ ಸಂಯೋಜಿತ ಮಹಾವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ “ವೃತ್ತಿ ಮಾರ್ಗದರ್ಶನ ಮತ್ತು ವ್ಯಕ್ತಿತ್ವ ಅಭಿವೃದ್ಧಿ ಒಂದು ದಿನದ ವಿಶೇಷ ಕಾರ್ಯಾಗಾರ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿರುವ ಶೋಷಿತ ಸಮುದಾಯಗಳ, ಬುಡಕಟ್ಟು ಜನಾಂಗದ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದ ಹಿನ್ನೆಲೆಯಿಂದ ಬಂದಂತ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಕೊಡಗು ವಿಶ್ವವಿದ್ಯಾಲಯವು ವಿಶೇಷ ಕಾರ್ಯಾಗಾರವನ್ನು ಆಯೋಜಿಸಿದ್ದು, ಈ ಮೂಲಕ ಕೊಡಗು ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬರಿಗೂ ಉದ್ಯೋಗಾವಕಾಶಗಳನ್ನು ಒದಗಿಸಿಕೊಡುವುದು, ಮೂಲ ಕೋರ್ಸ್ಗಳ ಜೊತೆಗೆ ಹೆಚ್ಚುವರಿ ಸರ್ಟಿಫಿಕೇಟ್ ಕೋರ್ಸ್ಗಳನ್ನು ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಒಡಂಬಡಿಕೆಯೊಂದಿಗೆ ಉಚಿತವಾಗಿ ದೊರಕಿಸಿಕೊಡುವ ಉದ್ದೇಶ ಹೊಂದಿದೆ ಎಂದರು.…
ಮಡಿಕೇರಿ NEWS DESK ಜು.4 : ಬೆಂಗಳೂರಿನ ಮೀನುಗಾರಿಕೆ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿ ಕೊಡಗು ಜಿಲ್ಲೆಯ ನಾಪೋಕ್ಲು ಮೂಲದ ಬಬಿನ್ ಬೋಪಣ್ಣ ಕಲ್ಲೇಂಗಡ ಅವರು ಇಂದು ಅಧಿಕಾರ ವಹಿಸಿಕೊಂಡರು. ಇವರು ಈ ಹಿಂದೆ ಕಾರಾವಾರದಲ್ಲಿ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಬೆಂಗಳೂರಿನ ಪ್ರಧಾನ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಬಬಿನ್ ಅವರು ನಾಪೋಕ್ಲುವಿನ ಕಲ್ಲೇಂಗಡ ಬೋಪಣ್ಣ (ಬೋಪ್ಣಿ) ಹಾಗೂ ಕಾಮಿನಿ ದಂಪತಿಯ ಪುತ್ರ.
ಬೆಂಗಳೂರು ಜು.4 NEWS DESK : ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರುಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಚರ್ಚೆ ನಡೆಸಿದರು. ನಗರಾಭಿವೃದ್ಧಿ ಹಾಗೂ ನಗರಾ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸಭೆಯಲ್ಲಿ ಉಪಸ್ಥಿತರಿದ್ದರು.
ಮಡಿಕೇರಿ ಜು.4 NEWS DESK : ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಶಾಕಿರಣ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ 393 ಆರೋಗ್ಯ ಸಂಸ್ಥೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಬಿಬಿಎಂಪಿ ವಲಯದ ಬೆಂಗಳೂರಿನ ಹೊಸಹಳ್ಳಿ ಆಸ್ಪತ್ರೆಯಲ್ಲಿ ಇಂದು ಉದ್ಘಾಟಿಸಿದರು. ಅದರಂತೆ ಕೊಡಗಿನಲ್ಲೂ ವೈದ್ಯಕೀಯ ಕಾಲೇಜು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಟ್ಟು ಎಂಟು ಕಡೆ ಏಕಕಾಲದಲ್ಲಿ ಉದ್ಘಾಟಿಸಲಾಯಿತು. ಕೊಡಗಿನಲ್ಲಿ ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ 4,750 ಫಲಾನುಭವಿಗಳಿಗೆ ದೃಷ್ಟಿ ಪರೀಕ್ಷೆ ಮಾಡಲಾಗಿದೆ. 851 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಗಿದೆ. 114 ಫಲಾನುಭವಿಗಳಿಗೆ ಉಚಿತ ವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ ಎಂದು ಡಾ.ಆನಂದ್ ಮಾಹಿತಿ ನೀಡಿದರು. ಆಶಾ ಕಿರಣ ಕಾರ್ಯಕ್ರಮದ ಮೂಲ ಉದ್ದೇಶಗಳು ರಾಜ್ಯವನ್ನು ಮತ್ತು ಜಿಲ್ಲೆಯನ್ನು ಅಂದತ್ವ ಮುಕ್ತ ರಾಜ್ಯ ಹಾಗೂ ಜಿಲ್ಲೆಯನ್ನಾಗಿಸುವ ಸದುದ್ದೇಶವಾಗಿದೆ. ಆಶಾಕಿರಣ ಯೋಜನೆಯನ್ನು ಶಾಶ್ವತವಾಗಿ ಮತ್ತು ಉಚಿತವಾಗಿ ಸಾರ್ವಜನಿಕರಿಗೆ ಸದುಪಯೋಗವಾಗುವಂತೆ ವ್ಯವಸ್ಥೆ ಮಾಡಲು ಈ…
ನಾಪೋಕ್ಲು ಜು.4 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಚೆಂಬು ಬಿಜೆಪಿ ಶಕ್ತಿ ಕೇಂದ್ರ ಹಾಗೂ ರೈತ ಮೋರ್ಚಾದ ಸಹಯೋಗದಲ್ಲಿ ವಿಶ್ವ ಪರಿಸರ ದಿವಸ್ ಆಚರಿಸಲಾಯಿತು. ಬಾಲಂಬಿಯಲ್ಲಿ ವಿವಿಧ ತಳಿಯ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಶಕ್ತಿಕೇಂದ್ರ ಅಧ್ಯಕ್ಷ ಸುಬ್ರಮಣ್ಯ ಉಪಾದ್ಯಾಯ, ಗ್ರಾ.ಪಂ ಅಧ್ಯಕ್ಷ ತೀರ್ಥಾರಾಮ ಪೂಜಾರಿಗದ್ದೆ, ರೈತಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ನಿಡಿಂಜಿ, ಗ್ರಾ.ಪಂ ಸದಸ್ಯರಾದ ರಮೇಶ್ ಹುಲ್ಲುಬೆಂಕಿ, ವಸಂತ ಊರುಬೈಲು, ಸೊಸೈಟಿ ನಿರ್ದೇಶಕರಾದ ದಿನೇಶ್ ಸಣ್ಣಮನೆ, ರಾಮಮೂರ್ತಿ ಉಂಬಳೆ, ವಸಂತ ಕುದ್ರೆಪಾಯ, ಮಾಜಿ ಉಪಾಧ್ಯಕ್ಷ ವಾಸುದೇವ ನಿಡಿಂಜಿ ಕಾರ್ಯಕ್ರಮದ ಉಸ್ತುವಾರಿ ಅನಂತ್ ಊರುಬೈಲು ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜು.4 NEWS DESK : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜು.7 ರಂದು ನಾಪೋಕ್ ನಲ್ಲಿ ಏಳನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ನಾಪೋಕ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಸಂವಿಧಾನಿ ಹಕ್ಕೊತ್ತಾಯಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ…
ನಾಪೋಕ್ಲು ಜು.4 NEWS DESK : ಬಲ್ಲಮಾವಟಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ತೋಟಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿ ಅಪಾರ ಕೃಷಿ ಗಿಡಗಳನ್ನು ನಾಶ ಪಡಿಸಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ಹದಿನೈದು ದಿನಗಳಿಂದ ಪೇರೂರು, ಪುಲಿಕೋಟು, ನೆಲಜಿ, ಪಂದೇಟು ಭಾಗದ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಂಧಲೆ ನಡೆಸಿದ್ದು, ರೈತರು ಅಪಾರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಾಡಾನೆಗಳ ಉಪಟಳದಿಂದ ಕಾಫಿ, ಬಾಳೆ, ಅಡಿಕೆ ಸೇರಿದಂತೆ ಕೃಷಿ ಗಿಡಗಳು ಹಾನಿಗೊಳಗಾಗಿವೆ. ಕಾಡಾನೆಗಳನ್ನು ಒಂದು ಭಾಗದಿಂದ ಕಾಡಿಗೆ ಅಟ್ಟಿದರೆ ಮತ್ತೊಂದು ಭಾಗದಿಂದ ನುಸುಳುತ್ತವೆ. ಗ್ರಾಮದ ಜನರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಗ್ರಾಮದಲ್ಲಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕೆಲಸಮಾಡುತ್ತಿದ್ದಾರೆ. ಆದರೆ ಮತ್ತೆ ಹಿಂತಿರುಗುವ ಕಾಡಾನೆಗಳು ಗಿಡಗಳನ್ನು ಧ್ವಂಸ ಮಾಡುತ್ತಿವೆ ಎಂದು ಮಣವಟ್ಟೀರ ದಯಾ ಚಿಣ್ಣಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳನ್ನು ಸೆರೆ ಹಿಡಿಯುವ ಮೂಲಕ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು, ನಷ್ಟ ಸಂಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕೆಂದು ಗ್ರಾಮಸ್ಥರು…






