ಲೇಖಕ: admin

ಮಡಿಕೇರಿ, ಜು.4 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ಎನ್.ಐ.ಎಂ.ಎ), ಕೊಡಗು ಸಂಘದ ಬೆಳ್ಳಿ ಹಬ್ಬ ಆಚರಣೆ ಅಂಗವಾಗಿ ಕೊಡಗು ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ವೆರಿಕೋಸ್ ವೆಯ್ನ್ಸ್ ನ ಬಗ್ಗೆ ಅರಿವು ಮತ್ತು ಉಚಿತ ತಪಾಸಣಾ ಶಿಬಿರವನ್ನು ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪೊಲೀಸ್ ನಿರೀಕ್ಷಕ ಪಿ.ಕೆ.ರಾಜು “ಸಾಮಾನ್ಯವಾಗಿ ಪೊಲೀಸರಲ್ಲಿ ಹೆಚ್ಚಾಗಿ ಕಾಣಿಸುವ ವೆರಿಕೋಸ್ ವೆಯ್ನ್ಸ್ ಬಗ್ಗೆ ಇನ್ನು ಹೆಚ್ಚು ಅರಿವು ಮೂಡಬೇಕು. ಪೊಲೀಸರಿಗೆ ವೖತ್ತಿಯಿಂದ ಈ ಸಮಸ್ಯೆ ಭಾದಿಸಬಹುದಾದ್ದರಿಂದ ಇದರ ಪ್ರಾರಂಭದಿಂದಲೇ ಮುನ್ನೆಚ್ಚರಿಕೆ ಕ್ರಮವಾಗಿ ಬಾರದಂತೆ ತಡೆಯಬೇಕು” ಎಂದು ಕಿವಿಮಾತು ಹೇಳಿದರು. ಎನ್.ಐ.ಎಂ.ಎ ಕೊಡಗು ಜಿಲ್ಲಾ ಅಧ್ಯಕ್ಷ ಡಾ.ರಾಜಾರಾಮ್ ರ ಮಾತನಾಡಿ ” ಜನಸಾಮಾನ್ಯರ ರಕ್ಷಣೆಗೆ ಸದಾ ನಿಲ್ಲುವ ಪೊಲೀಸ್ ಸಿಬ್ಬಂದಿಗಳಿಗೆ ಎನ್.ಐ.ಎಂ.ಎ ವೈದ್ಯರಿಂದ ಅವರ ಕ್ಲಿನಿಕ್ಗಳಲ್ಲಿ ಉಚಿತ ಸಮಾಲೋಚನೆ ನೀಡಲಾಗುವುದೆಂದು” ಪ್ರಕಟಿಸಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಡಾ.ಶ್ಯಾಮಪ್ರಸಾದ ಪಿ.ಎಸ್ ವೆರಿಕೋಸ್ ವೆಯ್ನ್ಸ್ ಸಮಸ್ಯೆಯ ಕಾರಣ, ತಡೆಗಟ್ಟುವಿಕೆ, ಆಹಾರ-ವಿಹಾರದ ಮಹತ್ವ,…

Read More

ಮಡಿಕೇರಿ NEWS DESK ಜು.4 : ಇತ್ತೀಚೆಗೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಲ್ಲುಗುಂಡಿಯ ಯುವ ವೈದ್ಯ ಡಾ.ಶಮಂತ್ ಭಟ್ (25) ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ವೈದ್ಯ ವೃತ್ತಿ ನಡೆಸುತ್ತಿದ್ದ ಡಾ.ಶಮಂತ್ ಭಟ್ ಅವರು ಕೆಲವು ದಿನಗಳ ಹಿಂದೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಸುಳ್ಯ- ಬೆಳ್ಳಾರೆ ನಡುವಿನ ಸೋಣಂಗೇರಿ ಎಂಬಲ್ಲಿ ಅಪಘಾತ ಸಂಭವಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಶಮಂತ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚೇತರಿಸಿಕೊಳ್ಳದೆ ಇಂದು ನಿಧನ ಹೊಂದಿದ್ದಾರೆ. ವೈದ್ಯ ವೃತ್ತಿಯಲ್ಲಿ ತೊಡಗಿರುವ ಡಾ.ಶಮಂತ್ ಭಟ್ ಅವರು ಕಲ್ಲುಗುಂಡಿಯ ಖ್ಯಾತ ವೈದ್ಯ ಡಾ.ಶ್ಯಾಂ ಪ್ರಸಾದ್ ಭಟ್ ಅವರ ಪುತ್ರ. ಯುವ ವೈದ್ಯನ ನಿಧನಕ್ಕೆ ಕಲ್ಲುಗುಂಡಿ, ಸಂಪಾಜೆ ಹಾಗೂ ಸುಳ್ಯ ಭಾಗದ ಜನ ಸಂತಾಪ ಸೂಚಿಸಿದ್ದಾರೆ.

Read More

ಮಡಿಕೇರಿ ಜು.3 NEWS DESK :  ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಇಲಾಖಾ ವೆಬ್‍ಸೈಟ್: www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 03 ಅಥವಾ 05 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯ ವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು.…

Read More

ಕುಶಾಲನಗರ ಜು.4 NEWS DESK : ವಚನ ಸಾಹಿತ್ಯವನ್ನು ಶೋಧಿಸಿ, ಸಂರಕ್ಷಿಸಿ, ಅಚ್ಚುಹಾಕಿಸಿ ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಕನ್ನಡ ನಾಡನ್ನು ಕೈಲಾಸ ಮಾಡಿದ ಕೀರ್ತಿ ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ್ ಹೇಳಿದರು.  ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ವಿವಿ ವತಿಯಿಂದ ಚಿಕ್ಕ ಅಳುವಾರದ ವಿವಿಯ ಕಾವೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಪಿತಾಮಹ, ಸಚೇತನ ವಿಶ್ವವಿದ್ಯಾಲಯ, ವಚನ ಗುಮ್ಮಟ ಫ.ಗು.ಹಳಕಟ್ಟಿ ಅವರ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ಯುಜನಾಂಗ ಹಾಗೂ ಎಲ್ಲರೂ ವಚನ ಸಾಹಿತ್ಯವನ್ನು ಅಧ್ಯಯನ ಮಾಡುವ ಮೂಲಕ ಮಾನವೀಯತೆಯನ್ನು ಮೈಗೂಡಿಸಿಕೊಳ್ಳಬೇಕು. ಅಂತಹ ವಚನ ಸಾಹಿತ್ಯವನ್ನು ಸಂರಕ್ಷಿಸಿದವರು ಫ.ಗು. ಹಳಕಟ್ಟಿ. ತಾಳೆ ಗರಿಯಲ್ಲಿದ್ದ ವಚನದ ಕಟ್ಟುಗಳನ್ನು ಸಂಗ್ರಹಿಸಲು ಅಪಾರ ಶ್ರಮಿಸಿದ ಇವರು, ಶಾಲೆಗಳು ಹಾಗೂ ಸಹಕಾರಿ ಸಂಘಗಳನ್ನು ತೆರೆದು ಅಪಾರ ಮಂದಿ ಕನ್ನಡಿಗರಿಗೆ ಹೊಸ ಬದುಕು ಕೊಟ್ಟ ಅಪ್ಪಟ…

Read More

ಕುಶಾಲನಗರ ಜು.4 NEWS DESK : ಕುಶಾಲನಗರ ರಥ ಬೀದಿಯಲ್ಲಿ ಲಾರಿ ಸಂಚಾರದಿಂದ ಹಲವು ಬಾರಿ ಟ್ರಾಫಿಕ್ ಜಾಮ್ ಆಗಿರುವುದರಿಂದ ಆ ರಸ್ತೆಯಲ್ಲಿ ಎಲ್ಲ ಮಾದರಿಯ ಲಾರಿ ಸಂಚಾರದಿಂದ ಮುಕ್ತಗೊಳಿಸಲು ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕುಶಾಲನಗರದ ಡಿವೈಎಸ್ಪಿ ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಿದೆ. ಕುಶಾಲನಗರ ಚೇಂಬರ್ ನ ಅಧ್ಯಕ್ಷ ಕೆ.ಎಸ್.ನಾಗೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಸಂಚಾರ ನಿಯಮಗಳನ್ನು ತಿಳಿಸುವ ನಾಮ ಫಲಕವನ್ನು ಅವಶ್ಯವಿರುವ ಕಡೆಗಳಲ್ಲಿ ಅಳವಡಿಸಲು ಮನವಿ ಮಾಡಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಡಿವೈಎಸ್ಪಿ ಚಂದ್ರಶೇಖರ್, ವರ್ತಕರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ನಾಮಫಲಕ ಅಳವಡಿಸಲು ನಮ್ಮದೇ ಆದ ನಿಯಮಗಳು ಇವೆ. ಅದರಂತೆ ಬೋರ್ಡ್ ಗಳನ್ನು ಮಾಡಿಸಲು ದಾನಿಗಳು ಮುಂದಾದರೆ ಖಂಡಿತ ಮಾಡೋಣ ಎಂದು ತಿಳಿಸಿದರು.  ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಕುಶಾಲನಗರ ಸ್ಥಾನೀಯ ಸಮಿತಿಯ ಉಪಾಧ್ಯಕ್ಷ ಎಂ.ಡಿ.ರಂಗಸ್ವಾಮಿ, ನಿಕಟ ಪೂರ್ವ ಅಧ್ಯಕ್ಷ ರವೀಂದ್ರ.ವಿ.ರೈ, ಕಾರ್ಯದರ್ಶಿ ಚಿತ್ರ ರಮೇಶ್, ಖಜಾಂಚಿ ಎನ್.ವಿ.ಬಾಬು, ನಿರ್ದೇಶಕರಾದ ಕೆ.ಜೆ.ಸತೀಶ್, ಅಬ್ದುಲ್ ರಶೀದ್, ಬಿ.ಎನ್.ಅಂಜನ್, ಜನಾರ್ಧನ…

Read More

ವಿರಾಜಪೇಟೆ ಜು.4 NEWS DESK : ಕಕ್ಕಬ್ಬೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮೂವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತರಾದ ಪಿ.ಯು.ಗೋಪಾಲ ಅವರನ್ನು ಯೂನಿಯನ್ ಬ್ಯಾಂಕ್ ಶಾಖೆಯ ವತಿಯಿಂದ ಬೋಳ್ಕೊಡಲಾಯಿತು. ಬ್ಯಾಂಕ್‍ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಖೆಯ ಬ್ಯಾಂಕ್ ವ್ಯವಸ್ಥಾಪಕರಾದ ಅಂತೋನಿ  ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಕೊಡಗು ವಲಯದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನೌಕರರ ಸಂಘದ ಕಾರ್ಯದರ್ಶಿ ಜೇಮ್ಸ್ ಮೆನೇಜಸ್, ಸಿಬ್ಬಂದಿಗಳಾದ ಸಜಿತ್, ಹೇಮಾವತಿ, ದೇಚಮ್ಮ ಹಾಜರಿದ್ದರು.

Read More

ಸೋಮವಾರಪೇಟೆ ಜು.4 NEWS DESK : ತಾಲ್ಲೂಕು ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆಯ ವಾರ್ಷಿಕ ಮಹಾಸಭೆಯು ಅಧ್ಯಕ್ಷೆ ಪೂರ್ಣಿಮಾ ಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.99.68 ರಷ್ಟು ಅಂಕ ಪಡೆದು ಜಿಲ್ಲೆಯಲ್ಲಿ ಟಾಫರ್ ಆಗಿದ್ದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಿ.ಎಸ್.ಆದ್ವಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.95 ರಷ್ಟು ಅಂಕ ಪಡೆದ ಕೆ.ಎಂ.ಸೃಷ್ಟಿ ಅವರುಗಳನ್ನು ಸನ್ಮಾನಿಸಲಾಯಿತು. ಅಲ್ಲದೆ ಬೆಂಗಳೂರು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ಕರುನಾಡ ಪ್ರಭು ಕೆಂಪೆಗೌಡ ಪ್ರಶಸ್ತಿ ಪುರಸ್ಕøತ ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಕರ್ನಾಟಕ ಒಕ್ಕಲಿಗರ ವಿಕಾಸ ವೇದಿಕೆಯವರು ನೀಡುವ ಶ್ರೀಮತಿ ಯಶೋಧರಮ್ಮ ದಾಸಪ್ಪ ಪ್ರಶಸ್ತಿ ಪುರಸ್ಕøತ ಹಾನಗಲ್ಲು ಗ್ರಾಮದ ಸಾಹಿತಿ ಜಲಕಾಳಪ್ಪ, ಕೃಷಿ ಕ್ಷೇತ್ರದ ಸಾಧನೆಗಾಗಿ ಪ್ರಶಸ್ತಿ ಗಳಿಸಿದ ನಿರ್ಮಲ ಪ್ರಕಾಶ್ ಹಾಗೂ ಕಾಫಿ ರುಚಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದ ತಲ್ತಾರೆಶೆಟ್ಟಳ್ಳಿ ಗ್ರಾಮದ ಸಂಧ್ಯಾ ಕೃಷ್ಣಪ್ಪ ಅವರುಗಳನ್ನು ಸಭೆಯಲ್ಲಿ ಗೌರವಿಸಲಾಯಿತು. ಸಭೆಯಲ್ಲಿ ಕಾರ್ಯದರ್ಶಿ…

Read More

ಗೋಣಿಕೊಪ್ಪ ಜು.4 NEWS DESK : ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಮಳೆಯಿಂದ ಉಂಟಾಗಬಹುದಾದ ಅನಾಹುತವನ್ನು ಎದುರಿಸಲು ಪೊಲೀಸರೊಂದಿಗೆ ಸ್ವಯಂಸೇವಕರು ಸಹ ಕೈಜೋಡಿಸಬೇಕು ಎಂದು ವಿರಾಜಪೇಟೆ ತಾಲ್ಲೂಕು ಡಿವೈಎಸ್‍ಪಿ ಮಹೇಶ್‍ಕುಮಾರ್ ಕರೆ ನೀಡಿದರು. ಗೋಣಿಕೊಪ್ಪ ಕೂರ್ಗ್ ಇಂಟರ್‍ನ್ಯಾಷನ್ ಸಭಾಂಗಣದಲ್ಲಿ ನಡೆದ ಪೊಲೀಸ್ ಠಾಣೆ ಮತ್ತು ಗ್ರಾಮ ಬೀಟ್ ವ್ಯಾಪ್ತಿಯ ಸ್ವಯಂಸೇವಕರ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಮೇ ತಿಂಗಳಲ್ಲಿ ಮಳೆ ಪ್ರಾರಂಭವಾಗಿ ಆಂತಕ್ಕವನ್ನು ಸೃಷ್ಟಿಸಿದೆ, ಮುಂದುವರೆದ ಭಾಗವಾಗಿ ಜುಲೈ ತಿಂಗಳಲ್ಲಿಯೂ ಮಳೆಯ ಪ್ರಮಾಣ ಅಧಿಕವಾಗಬಹುದು, ಈ ಹಿನ್ನೆಲೆ ಹೆಚ್ಚು ಅನಾಹುತಗಳು ಸಂಭವಿಸಬಹುದಾದ ಸಾಧ್ಯತೆಗಳಿದ್ದು, ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಮುನ್ನೆಚ್ಚರಿಕೆಯ ಕ್ರಮ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಪೊಲೀಸರ ಈ ಕಾರ್ಯಕ್ಕೆ ಸಹಕಾರವಾಗಿ ಪೊಲೀಸ್ ಠಾಣಾ ವ್ಯಾಪ್ತಿಯ ಸ್ವಯಂಸೇವಕರು ಸಹಕಾರದ ಮನೋಭಾವವನ್ನು ವ್ಯಕ್ತಪಡಿಸಿ ಧೈರ್ಯ ಸೌರ್ಯದಿಂದ ಮೆರೆಯಬೇಕು ಎಂದು ಮನವಿ ಮಾಡಿದರು. ಗೋಣಿಕೊಪ್ಪ ವ್ಯಾಪ್ತಿಯಲ್ಲಿ, ಸಾಕಷ್ಟು ಹಳೆಯ ಕಟ್ಟಡಗಳು ಇವೆ ಅವುಗಳು ಶಿಥಿಲಗೊಂಡು ಆತಂಕಕಾರಿ ಬೆಳವಣಿಗೆಯಲ್ಲಿದೆ. ಈ ವಿಚಾರವಾಗಿ ಸ್ವಯಂಸೇವಕರು ಮುಂಜಾಗೃತರಾಗಬೇಕು ಎಂದು ಕರೆ ನೀಡಿದರು. ಪ್ರಾಕೃತಿ…

Read More

ಗೋಣಿಕೊಪ್ಪ ಜು.4 NEWS DESK  :  ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆಯ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ಲಯನ್ಸ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷ ಪಿ.ಎನ್.ಪೆಮ್ಮಯ್ಯ ಮತ್ತು ಉಪಾಧ್ಯಕ್ಷ ಪಿ.ಧನು ಉತ್ತಯ್ಯ ಉಪಸ್ಥಿತಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕರಿಗೆ ಬ್ಯಾಡ್ಜ್‍ಗಳನ್ನು ಲಯನ್ಸ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ವಿತರಿಸಿದರು. ಲಯನ್ಸ್ ಕಾಲೇಜಿನ ಪ್ರಾಂಶುಪಾಲರು ಸಿ.ಬಿ.ಲತಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. “ಶಿಸ್ತು ಮತ್ತು ಆತ್ಮವಿಶ್ವಾಸ ಉಳ್ಳವರಾಗಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಂಡು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು” ಎಂದು  ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಾನ ಸಿ.ಎಸ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ ತಂಗಮ್ಮ ಮತ್ತು ವಿದ್ಯಾ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.  ಪ್ರಾರ್ಥನೆಯನ್ನು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ನಿರೂಪಣೆಯನ್ನು ಪ್ರೌಢಶಾಲೆಯ ಆರಾಧನಾ ಮತ್ತು ಅತಿಥಿಗಳ ಸ್ವಾಗತ ಮತ್ತು ವಂದನಾರ್ಪಣೆಯನ್ನು ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ದಾನಿಕ ದೇಚಮ್ಮ ಮತ್ತು ಭುವನ ಪೂವಯ್ಯ ನೆರವೇರಿಸಿದರು.

Read More

ಗೋಣಿಕೊಪ್ಪ ಜು.4 NEWS DESK  :  ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆಯ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ಲಯನ್ಸ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷ ಪಿ.ಎನ್.ಪೆಮ್ಮಯ್ಯ ಮತ್ತು ಉಪಾಧ್ಯಕ್ಷ ಪಿ.ಧನು ಉತ್ತಯ್ಯ ಉಪಸ್ಥಿತಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕರಿಗೆ ಬ್ಯಾಡ್ಜ್‍ಗಳನ್ನು ಲಯನ್ಸ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ವಿತರಿಸಿದರು. ಲಯನ್ಸ್ ಕಾಲೇಜಿನ ಪ್ರಾಂಶುಪಾಲರು ಸಿ.ಬಿ.ಲತಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. “ಶಿಸ್ತು ಮತ್ತು ಆತ್ಮವಿಶ್ವಾಸ ಉಳ್ಳವರಾಗಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಂಡು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು” ಎಂದು  ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಾನ ಸಿ.ಎಸ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ ತಂಗಮ್ಮ ಮತ್ತು ವಿದ್ಯಾ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.  ಪ್ರಾರ್ಥನೆಯನ್ನು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ನಿರೂಪಣೆಯನ್ನು ಪ್ರೌಢಶಾಲೆಯ ಆರಾಧನಾ ಮತ್ತು ಅತಿಥಿಗಳ ಸ್ವಾಗತ ಮತ್ತು ವಂದನಾರ್ಪಣೆಯನ್ನು ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ದಾನಿಕ ದೇಚಮ್ಮ ಮತ್ತು ಭುವನ ಪೂವಯ್ಯ ನೆರವೇರಿಸಿದರು.

Read More