ಲೇಖಕ: admin

ಕುಶಾಲನಗರ ಜು.4 NEWS DESK : ದೇಹವನ್ನು ಹೆಚ್ಚಾಗಿ ದಂಡಿಸುವ ಮೂಲಕ ಆರೋಗ್ಯಕ್ಕೆ ಒತ್ತು ನೀಡಬೇಕೆಂದು ಕುಶಾಲನಗರ ಸಂಚಾರ ಠಾಣೆ ಠಾಣಾಧಿಕಾರಿ ಗಣೇಶ್ ಕರೆ ನೀಡಿದರು. ಕುಶಾಲನಗರದ ಬಿಎಂ ರಸ್ತೆಯಲ್ಲಿರುವ ಲೈಟ್ ವೈಯ್ಟ್ ಜಿಮ್ಮಿನ ದ್ವೈ ವಾರ್ಷಿಕೋತ್ಸವದ ಅಂಗವಾಗಿ   ನಡೆದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಗರದ ಸಿಟಿಪಾಯಿಂಟ್ ಕಟ್ಟಡದ ಸಭಾಂಗಣದಲ್ಲಿ  ನಡೆದ ಸ್ಪರ್ಧೆಯು ಪ್ರತೀ ಸುತ್ತಿನಲ್ಲಿಯೂ ತನ್ನ ಬಿರುಸು ಹೆಚ್ಚಿಸಿಕೊಂಡು ನೋಡುಗರ ಮೈನವಿರೇಳಿಸಿತು. ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡು, ಅಂತರ್‌ಜಿಲ್ಲಾ ಮಟ್ಟಗಳಲ್ಲಿ ಹೆಸರು ಮಾಡಿರುವ ಮಿಸ್ಟರ್ ಕೊಡಗು  ಪ್ರಕಾಶ್‌  ಕಾರ್ಯಕ್ರಮವನ್ನು ಆಯೋಜಿಸಿದ್ದರು. ತೀರ್ಪುಗಾರರಾಗಿ ನ್ಯೂ ಜೆನ್ ಜಿಮ್ಮಿನ ಮಾಲಿಕ  ಪವನ್ ಕಾರ್ಯನಿರ್ವಹಿಸಿದರು. ಕುಶಾಲನಗರ ಗ್ರಾಮಾಂತರ ಠಾಣೆಯ ಉಪನಿರೀಕ್ಷಕ ರಾಮಚಂದ್ರ, ಸರಿಗಮಪ ಖ್ಯಾತಿಯ ಅನ್ವಿತ್  ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.  ಸುಮಾರು ಇಪ್ಪತ್ತೈದು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಚಾಂಪಿಯನ್ ಪಟ್ಟವನ್ನು ಆತಿಥೇಯ ಜಿಮ್ಮಿನ ಮಂಜು ಅಲಂಕರಿಸಿದರೆ, ಬೆಸ್ಟ್ ಪೋಸರ್ ಪಟ್ಟವನ್ನು ರಜಾಕ್,  ಮೋಸ್ಟ್ ಮಸ್ಕ್ಯುಲರ್ ಬಿರುದನ್ನು ಆನಂದ್ ಪಡೆದುಕೊಂಡರು. ಪ್ರತೀ…

Read More

ಸೋಮವಾರಪೇಟೆ ಜು.4 NEWS DESK : ಮಾಜಿ ಸಚಿವ ಅಪ್ಪಚ್ಚು ರಂಜನ್ ಜನ್ಮದಿನದ ಹಿನ್ನಲೆ ಇಂದು ಹಲವು ಮಠಾಧೀಶರು ಹಾಗೂ ಗಣ್ಯರು ಶುಭಕೋರಿದರು. 66 ಸಂವತ್ಸರ ಪೂರೈಸಿದ ಮಾಜಿ ಕ್ರೀಡಾ ಸಚಿವ ಅಪ್ಪಚ್ಚು ರಂಜನ್ ನಿವಾಸಕ್ಕೆ  ಹಲವು ಗಣ್ಯರು ತೆರಳಿ ಜನ್ಮದಿನದ ಶುಭಹಾರೈಸಿದರು. ಈ ಸಂದರ್ಭ ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಮುಳ್ಳುರು ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಪಟ್ಟಣ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿಗಳು ಆಶೀರ್ವದಿಸಿ ಶುಭಕೋರಿದರು.

Read More

ಮಡಿಕೇರಿ ಜು.4 NEWS DESK : ಕರ್ನಾಟಕ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ವತಿಯಿಂದ ಕುಶಾಲನಗರದಲ್ಲಿ ಕೋಮುವಾದದ ವಿರುದ್ಧ ಸೌಹಾರ್ದ ನಡಿಗೆ ಕಾರ್ಯಕ್ರಮ ನಡೆಯಿತು. ಎಸ್‍ಎಸ್‍ಎಫ್ ಕೊಡಗು ಜಿಲ್ಲಾಧ್ಯಕ್ಷ  ಖಮರುದ್ದೀನ್ ಅನ್ವಾರಿ ಸಖಾಫಿ ನೇತೃತ್ವದಲ್ಲಿ ಕೂರ್ಗ್ ಜಂಇಯ್ಯತುಲ್ ಉಲಮಾ ಹಾಗೂ ಪ್ರಧಾನ ಕಾರ್ಯದರ್ಶಿ ಶೈಖುನಾ ಅಶ್ರಫ್ ಅಹ್ಸನಿ ಉಸ್ತಾದರ ಪ್ರಾರ್ಥನೆಯೊಂದಿಗೆ ತಾವರೆಕೆರೆಯಿಂದ ಸೌಹಾರ್ದ ನಡಿಗೆ ಪ್ರಾರಂಭಗೊಂಡು ಪಟ್ಟಣದ ಕಾರು ನಿಲ್ದಾಣದಲ್ಲಿ ಸಮಾಪ್ತಿಗೊಂಡಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಸಮಿತಿ ರಾಜ್ಯಾಧ್ಯಕ್ಷ ಮೌಲಾನಾ ಹಾಫಿಝ್ ಸುಫ್ಯಾನ್ ಸಖಾಫಿ ಸಂದೇಶ ಭಾಷಣ ಮಾಡಿ, ಭಾರತ ದೇಶವು ಹಲವು ಧರ್ಮಗಳ ಬೀಡಾಗಿದ್ದು, ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶವಾಗಿದೆ. ಧರ್ಮಗಳಿಗೆ ಬೆಲೆ ಕೊಟ್ಟು ಧರ್ಮಾಂಧತೆಯನ್ನು ದೂರಗೊಳಿಸಲು ಕರೆ ನೀಡಿದರು. ರಾಜಕಾರಣಿಗಳು ಸಮಾಜದ ಅಭಿವೃದ್ಧಿಯತ್ತ ಚಿಂತೆ ಮಾಡಬೇಕು, ಧರ್ಮ ಗುರುಗಳು ಧಾರ್ಮಿಕ ನೆಲೆ ಕಾಪಾಡಬೇಕು ಎಂದರು. ದೇಶದ ಎಲ್ಲೆಡೆ ಕೋಮು ದ್ವೇಷ ಹರಡುವ ಕೆಲಸವನ್ನು ಸ್ಥಗಿತಗೊಳಿಸುವ ಪ್ರಯತ್ನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೊಡ್ಲಿಪೇಟೆ ಕಿರಿ…

Read More

ಮಡಿಕೇರಿ NEWS DESK ಜು.4 : ಸೋಮವಾರಪೇಟೆ ಪಟ್ಟಣದ ನಿವಾಸಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅಹಲ್ಯ ಅಪ್ಪಚ್ಚು ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಕಲಾಕೃತಿಯನ್ನು ರೇಖಾಚಿತ್ರದ ಮೂಲಕ ಆಕರ್ಷಕವಾಗಿ ರಚಿಸಿದ್ದಾರೆ. ಅಹಲ್ಯ ಅಪ್ಪಚ್ಚು ಅವರ ಪ್ರತಿಭೆಯ ಕುರಿತು ಶಾಸಕರು ಹೀಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ >>> *ಸೋಮವಾರಪೇಟೆ ಪಟ್ಟಣದ ನಿವಾಸಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅಹಲ್ಯ ಅಪ್ಪಚ್ಚು ರವರು ನನ್ನ ಕಲಾಕೃತಿಯನ್ನು ಬಹಳ ಅತ್ಯುತ್ತಮವಾಗಿ ರಚನೆ ಮಾಡಿದ್ದಾರೆ.ಈ ಕಲಾಕೃತಿಯು ನನ್ನನ್ನು ಆಕರ್ಷಿಸಿದ್ದು ಪ್ರತಿಭಾವಂತೆ ಅಹಲ್ಯ ಅಪ್ಪಚ್ಚು ರವರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ ಈ ಸಂದರ್ಭದಲ್ಲಿ ಶುಭ ಹಾರೈಸುತ್ತೇನೆ. (ಶಾಸಕ ಡಾ.ಮಂತರ್ ಗೌಡ )*

Read More

ನಾಪೋಕ್ಲು ಜು.4 NEWS DESK : ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡಿದರೆ ಅದು ನಿಜವಾದ ಸಮಾಜ ಸೇವೆ ಎನಿಸಿಕೊಳ್ಳುತ್ತದೆ ಎಂದು ಲಯನ್ಸ್ ಜಿಲ್ಲಾ ರಾಜ್ಯಪಾಲ ಹೆಚ್.ಎಂ.ತಾರಾನಾಥ ಹೇಳಿದರು. ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕ್ಲಬ್ಬಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ನೆರವೇರಿಸಿ ಅವರು ಮಾತನಾಡಿದರು. ನಾಪೋಕ್ಲು ವಲಯದ ಲಯನ್ಸ್ ಕ್ಲಬ್ ಉತ್ತಮವಾಗಿ ಕಾರ್ಯನಿರ್ವಹಿಸಿ ಉತ್ತಮ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೆಲವೊಮ್ಮೆ ಕೆಲವೊಂದು ಕಾರ್ಯ ಚಟುವಟಿಕೆಗಳಲ್ಲಿ ಮನಸ್ಸಿಗೆ ಬೇಸರ ಉಂಟಾಗಬಹುದು. ಕಾರ್ಯ ಚಟುವಟಿಕೆಗಳಲ್ಲಿ ಅನುಮಾನ, ಬೇಸರಕ್ಕೆ ಆಸ್ಪದ ಕೊಡದೆ ಯಾವುದೇ ಸಂದರ್ಭದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು. ಏನಾದರೂ ಸಾಧಿಸಲು ಆತ್ಮವಿಶ್ವಾಸ ಮುಖ್ಯ ಎಂದ ಅವರು ಅಹಂಕಾರ, ಗರ್ವ ಪಡಬಾರದು ಎಂದರು. ಕೊಡಗು ಜಿಲ್ಲೆಯಿಂದ ಹೆಚ್ಚಿನ ಯುವಕರು ಸೈನ್ಯದಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದಾರೆ. ಧೈರ್ಯ, ಸಾಹಸಕ್ಕೆ ಕೊಡಗು ಹೆಸರುವಾಸಿಯಾಗಿದೆ. ಇಂತಹ ಜಿಲ್ಲೆಯಲ್ಲಿ ಸಮಾಜ ಸೇವೆಯನ್ನು ಮಾಡುವುದರ ಮೂಲಕ ಕ್ಲಬ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕು, ನಮ್ಮ ದಿನನಿತ್ಯದ…

Read More

ಮಡಿಕೇರಿ ಜು.4 NEWS DESK : ಕೊಡಗು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಕೌಶಲ್ಯಾಧಾರಿತ ಶಿಕ್ಷಣ ಸಾಮಥ್ರ್ಯ ಹೊಂದಿರುವಂತೆ ರೂಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ.ಅಶೋಕ ಸಂಗಪ್ಪ ಆಲೂರ ಅವರು ಅಭಿಪ್ರಾಯಿಸಿದರು. ಕೊಡಗು ವಿಶ್ವವಿದ್ಯಾಲಯದ ಮುಖ್ಯ ಕೇಂದ್ರ, ಘಟಕ ಮಹಾವಿದ್ಯಾಲಯ ಹಾಗೂ ಸಂಯೋಜಿತ ಮಹಾವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ “ವೃತ್ತಿ ಮಾರ್ಗದರ್ಶನ ಮತ್ತು ವ್ಯಕ್ತಿತ್ವ ಅಭಿವೃದ್ಧಿ ಒಂದು ದಿನದ ವಿಶೇಷ ಕಾರ್ಯಾಗಾರ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿರುವ ಶೋಷಿತ ಸಮುದಾಯಗಳ, ಬುಡಕಟ್ಟು ಜನಾಂಗದ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದ ಹಿನ್ನೆಲೆಯಿಂದ ಬಂದಂತ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಕೊಡಗು ವಿಶ್ವವಿದ್ಯಾಲಯವು ವಿಶೇಷ ಕಾರ್ಯಾಗಾರವನ್ನು ಆಯೋಜಿಸಿದ್ದು, ಈ ಮೂಲಕ ಕೊಡಗು ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬರಿಗೂ ಉದ್ಯೋಗಾವಕಾಶಗಳನ್ನು ಒದಗಿಸಿಕೊಡುವುದು, ಮೂಲ ಕೋರ್ಸ್‍ಗಳ ಜೊತೆಗೆ ಹೆಚ್ಚುವರಿ ಸರ್ಟಿಫಿಕೇಟ್ ಕೋರ್ಸ್‍ಗಳನ್ನು ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಒಡಂಬಡಿಕೆಯೊಂದಿಗೆ ಉಚಿತವಾಗಿ ದೊರಕಿಸಿಕೊಡುವ ಉದ್ದೇಶ ಹೊಂದಿದೆ ಎಂದರು.…

Read More

ಮಡಿಕೇರಿ NEWS DESK ಜು.4 : ಬೆಂಗಳೂರಿನ ಮೀನುಗಾರಿಕೆ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿ ಕೊಡಗು ಜಿಲ್ಲೆಯ ನಾಪೋಕ್ಲು ಮೂಲದ ಬಬಿನ್ ಬೋಪಣ್ಣ ಕಲ್ಲೇಂಗಡ ಅವರು ಇಂದು ಅಧಿಕಾರ ವಹಿಸಿಕೊಂಡರು. ಇವರು ಈ ಹಿಂದೆ ಕಾರಾವಾರದಲ್ಲಿ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಬೆಂಗಳೂರಿನ ಪ್ರಧಾನ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಬಬಿನ್ ಅವರು ನಾಪೋಕ್ಲುವಿನ ಕಲ್ಲೇಂಗಡ ಬೋಪಣ್ಣ (ಬೋಪ್ಣಿ) ಹಾಗೂ ಕಾಮಿನಿ ದಂಪತಿಯ ಪುತ್ರ.

Read More

ಬೆಂಗಳೂರು ಜು.4 NEWS DESK : ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರುಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಚರ್ಚೆ ನಡೆಸಿದರು.  ನಗರಾಭಿವೃದ್ಧಿ ಹಾಗೂ ನಗರಾ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸಭೆಯಲ್ಲಿ ಉಪಸ್ಥಿತರಿದ್ದರು.

Read More

ಮಡಿಕೇರಿ ಜು.4 NEWS DESK : ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಶಾಕಿರಣ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ 393 ಆರೋಗ್ಯ ಸಂಸ್ಥೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಬಿಬಿಎಂಪಿ ವಲಯದ ಬೆಂಗಳೂರಿನ ಹೊಸಹಳ್ಳಿ ಆಸ್ಪತ್ರೆಯಲ್ಲಿ ಇಂದು ಉದ್ಘಾಟಿಸಿದರು. ಅದರಂತೆ ಕೊಡಗಿನಲ್ಲೂ ವೈದ್ಯಕೀಯ ಕಾಲೇಜು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಟ್ಟು ಎಂಟು ಕಡೆ ಏಕಕಾಲದಲ್ಲಿ ಉದ್ಘಾಟಿಸಲಾಯಿತು.  ಕೊಡಗಿನಲ್ಲಿ ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ 4,750 ಫಲಾನುಭವಿಗಳಿಗೆ ದೃಷ್ಟಿ ಪರೀಕ್ಷೆ ಮಾಡಲಾಗಿದೆ. 851 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಗಿದೆ. 114 ಫಲಾನುಭವಿಗಳಿಗೆ ಉಚಿತ ವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ ಎಂದು ಡಾ.ಆನಂದ್ ಮಾಹಿತಿ ನೀಡಿದರು. ಆಶಾ ಕಿರಣ ಕಾರ್ಯಕ್ರಮದ ಮೂಲ ಉದ್ದೇಶಗಳು ರಾಜ್ಯವನ್ನು ಮತ್ತು ಜಿಲ್ಲೆಯನ್ನು ಅಂದತ್ವ ಮುಕ್ತ ರಾಜ್ಯ ಹಾಗೂ ಜಿಲ್ಲೆಯನ್ನಾಗಿಸುವ ಸದುದ್ದೇಶವಾಗಿದೆ. ಆಶಾಕಿರಣ ಯೋಜನೆಯನ್ನು ಶಾಶ್ವತವಾಗಿ ಮತ್ತು ಉಚಿತವಾಗಿ ಸಾರ್ವಜನಿಕರಿಗೆ ಸದುಪಯೋಗವಾಗುವಂತೆ ವ್ಯವಸ್ಥೆ ಮಾಡಲು ಈ…

Read More

ನಾಪೋಕ್ಲು ಜು.4 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಚೆಂಬು ಬಿಜೆಪಿ ಶಕ್ತಿ ಕೇಂದ್ರ ಹಾಗೂ ರೈತ ಮೋರ್ಚಾದ ಸಹಯೋಗದಲ್ಲಿ ವಿಶ್ವ ಪರಿಸರ ದಿವಸ್ ಆಚರಿಸಲಾಯಿತು. ಬಾಲಂಬಿಯಲ್ಲಿ ವಿವಿಧ ತಳಿಯ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಶಕ್ತಿಕೇಂದ್ರ ಅಧ್ಯಕ್ಷ  ಸುಬ್ರಮಣ್ಯ ಉಪಾದ್ಯಾಯ, ಗ್ರಾ.ಪಂ ಅಧ್ಯಕ್ಷ  ತೀರ್ಥಾರಾಮ ಪೂಜಾರಿಗದ್ದೆ,  ರೈತಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ನಿಡಿಂಜಿ, ಗ್ರಾ.ಪಂ ಸದಸ್ಯರಾದ  ರಮೇಶ್ ಹುಲ್ಲುಬೆಂಕಿ, ವಸಂತ ಊರುಬೈಲು, ಸೊಸೈಟಿ ನಿರ್ದೇಶಕರಾದ  ದಿನೇಶ್ ಸಣ್ಣಮನೆ, ರಾಮಮೂರ್ತಿ ಉಂಬಳೆ, ವಸಂತ ಕುದ್ರೆಪಾಯ, ಮಾಜಿ ಉಪಾಧ್ಯಕ್ಷ  ವಾಸುದೇವ ನಿಡಿಂಜಿ ಕಾರ್ಯಕ್ರಮದ ಉಸ್ತುವಾರಿ  ಅನಂತ್ ಊರುಬೈಲು  ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು ವರದಿ : ದುಗ್ಗಳ ಸದಾನಂದ.   

Read More