ಲೇಖಕ: admin

ಮಡಿಕೇರಿ, NEWS DESK ಜು. 5: ಕೊಡಗು ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿಯನ್ನು ಎದುರಿಸಲು ಸಜ್ಜಾಗುವಂತೆ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಭಾನುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಸದ್ಯ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆ ಇದೆ. ಆದ್ದರಿಂದ ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಬೇಕು. ಜೊತೆಗೆ ‘ಎಲ್ ನಿನೊ’ ಪರಿಣಾಮದಿಂದ ಕಡಿಮೆ ಮಳೆಯಾದಲ್ಲಿ ಅನಾವೃಷ್ಠಿಯನ್ನೂ ಸಹ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದರು. ಪ್ರಾಕೃತಿಕ ವಿಕೋಪಗಳು ಯಾರನ್ನು ಕೇಳಿ ಬರುವುದಿಲ್ಲ. ಆದರೆ, ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ಸ್ಪಂದಿಸುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ನಿರ್ವಹಿಸಬೇಕೆಂದು ಯು.ಟಿ.…

Read More

ಮಡಿಕೇರಿ NEWS DESK ಜು.05 : ಪಾಲಿಬೆಟ್ಟ ಲಯನ್ಸ್ ಕ್ಲಬ್ ನ 2006- 27 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಲಯನ್ಸ್ ಸೇವಾ ಭವನದ ಅನುಗೃಹ ಸಭಾಂಗಣದಲ್ಲಿ ನಡೆಯಿತು. ಲಯನ್ಸ್ ಜಿಲ್ಲಾ ಚೀಫ್ ಕೋರ್ಡಿನೇಟರ್ ಗೀತಾ ಆರ್ ರಾವ್ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಬಳಿಕ ಮಾತನಾಡಿದ ಅವರು, ಕಾಲಕ್ಕೆ ತಕ್ಕಂತೆ ಸ್ಥಳೀಯ ಸಾರ್ವಜನಿಕರ ಅವಶ್ಯಕತೆಗಳನ್ನು ಆಧರಿಸಿ ಸೇವಾ ಚಟುವಟಿಕೆಗಳನ್ನು ಕೈಗೊಳ್ಳುವಂತೆ ನೂತನ ಆಡಳಿತ ಮಂಡಳಿಗೆ ಸೂಚಿಸಿದರು. ಪಾಲಿಬೆಟ್ಟ ಲಯನ್ಸ್ ಕ್ಲಬ್ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿದ್ದು ಸೇವಾ ಮನೋಭಾವ ದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದ ಅವರು 2025-26ನೇ ಸಾಲಿನಲ್ಲಿ ಪಾಲಿಬೆಟ್ಟ ಲಯನ್ಸ್ ಕ್ಲಬ್ ನವರು ಅನುಷ್ಠಾನಗೊಳಿಸಿದ ಸೇವಾ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಪಾಲಿಬೆಟ್ಟ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಸದಾ ಕುಶಾಲಪ್ಪ, ಕಾರ್ಯದರ್ಶಿಯಾಗಿ ಡಾ. ಭವಿಷ್ಯ ಕುಮಾರ್, ಖಜಾಂಚಿಯಾಗಿ ರತ್ನ ಸುಬ್ಬಯ್ಯ, ಉಪಾಧ್ಯಕ್ಷರುಗಳಾಗಿ. ಡೊಮ್ಮಿ ಪಿ. ರೊಜಾರಿಯೊ, ರಾಣಾ…

Read More

ಸೋಮವಾರಪೇಟೆ, NEWS DESK ಜು.೦5: ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ರೈತರ ಮಕ್ಕಳಿಗೆ ಗುಣಮಟ್ಟದ ಇಂಗ್ಲಿಷ್ ಮಾಧ್ಯಮ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಈ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಇಂದಿಗೂ ನಮ್ಮ ಸಂಸ್ಥೆಯಲ್ಲಿ ಶೇ.90ರಷ್ಟು ರೈತರ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯ ಟಾಪರ್‌ಗಳನ್ನು ನೀಡಿರುವುದು ಸಂಸ್ಥೆಯ ಹೆಮ್ಮೆ. ವಿದ್ಯೆಯೇ ನಿಮ್ಮ ಕನಸುಗಳನ್ನು ನನಸಾಗಿಸುವ ಶಕ್ತಿ. ಉತ್ತಮ ಶಿಕ್ಷಣದ ಮೂಲಕ ಆದರ್ಶ ಪ್ರಜೆಗಳಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೋನ್ಸಾಲ್ವೆಸ್ ಮಾತನಾಡಿ, ವಿದ್ಯಾರ್ಥಿಗಳು…

Read More

ಕುಶಾಲನಗರ NEWS DESK ಜು.5: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದ ಬಸವೇಶ್ವರ ಬಡಾವಣೆಯಲ್ಲಿ ನೂತನವಾಗಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಸಲಾಯಿತು. ಪಂಚಾಯಿತಿ ನಿಧಿ ಹಾಗೂ 16ನೇ ಹಣಕಾಸಿನ ಅನುದಾನವನ್ನು ಬಳಸಿ 2.3 ಲಕ್ಷ ರೂ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದೆ.‌ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ತ್ತಿಗೆದಾರರಿಗೆ ನಿಯಮಾನುಸಾರವಾಗಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳುವಂತೆ ತಿಳಿಸಿದರು. ಸ್ಥಳೀಯರಾದ ನವೀನ್ ಮಾತನಾಡಿ, ಬಸವೇಶ್ವರ ಬಡಾವಣೆಯಲ್ಲಿ ಬಹಳಷ್ಟು ವರ್ಷಗಳಿಂದ ರಸ್ತೆಯಿಲ್ಲದೇ  ತೊಂದರೆಯಾಗುತ್ತಿತ್ತು. ಮಳೆಗಾಲದಲ್ಲಿ ಮಳೆಯಿಂದ ರಸ್ತೆ ಹದಗೆಟ್ಟು ವಾಹನಗಳಲ್ಲಿ ಸಂಚರಿಸಲು ಸಾಧ್ಯವಾಗುತ್ತಿರಲಿಲ್ಲ. ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಸಾಧ್ಯವಾಗುತ್ತಿರಲಿಲ್ಲ. ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಜನರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ, ಪಂಚಾಯಿತಿ ಅನುದಾನವನ್ನು ಹಾಕಿ ರಸ್ತೆ ನಿರ್ಮಾಣ‌ ಮಾಡಿಕೊಟ್ಟಿದ್ದಾರೆ.‌ ಗ್ರಾಮಸ್ಥರ ಪರವಾಗಿ ಅವರಿಗೆ ಧನ್ಯವಾದಗಳು ಎಂದರು. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್, 16 ನೇ ಹಣಕಾಸಿ ಹಾಗೂ ಪಂಚಾಯಿತಿ ನಿಧಿ…

Read More

ಮಡಿಕೇರಿ, NEWS DESK ಜು. 05- ರೋಟರಿ ಸೇರಿದಂತೆ ಯಾವುದೇ ಸಾಮಾಜಿಕ ಸೇವಾ ಸಂಸ್ಥೆಗಳ ಭದ್ರ ಬುನಾದಿಯೇ ಆ ಸಂಸ್ಥೆಯ ಉತ್ಸಾಹಿ ಸದಸ್ಯರಾಗಿದ್ದು, ಈ ನಿಟ್ಟಿನಲ್ಲಿ ಸಮಾನಮನಸ್ಕ, ಸಮಾಜಮುಖಿ  ಸದಸ್ಯರ ಸೇಪ೯ಡೆ ಅತ್ಯಗತ್ಯ ಎಂದು  ಬೆಂಗಳೂರಿನ ರೋಟರಿ ಜಿಲ್ಲೆ 3191  ರ ಮಾಜಿ ಸಹಾಯಕ ಗವನ೯ರ್ ಪ್ರಕಾಶ್ ಬೆಳವಾಡಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷ ಪೂಳಕಂಡ ರಾಜೇಶ್ ಮತ್ತು ಕಾಯ೯ದಶಿ೯ ಡಾ. ಜಿ.ಡಿ.  ಚೇತನ್ ಮತ್ತು ಆಡಳಿತ ಮಂಡಳಿ ಪದಗ್ರಹಣ ಸಮಾರಂಭದಲ್ಲಿ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು. ರೋಟರಿ ಸಂಸ್ಥೆಗಳು ಸಮಾಜದಲ್ಲಿ ಅಸಾಧ್ಯವಾಗಿದೆ ಎಂಬಂಥ ಯೋಜನೆಗಳನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ರೋಟರಿಯಂಥ ಸಂಸ್ಥೆಗಳು ಕಾಯ೯ಪ್ರವೖತ್ತವಾಗಬೇಕು. ಅಂಥ ಸವಾಲನ್ನು ರೋಟರಿ ಸದಸ್ಯರು ಸ್ವೀಕರಿಸುವ ಮೂಲಕ ಬದ್ದತೆ ತೋರಬೇಕೆಂದು ಪ್ರಕಾಶ್ ಬೆಳವಾಡಿ ಕರೆ ನೀಡಿದರು. ಯಾವುದೇ ರೋಟರಿ ಸಂಸ್ಥೆಯು ಯಶಸ್ವಿ ಕಾಯ೯ಚಟುವಟಿಕೆಗಳ ಮೂಲಕ ಸಮಾಜಕ್ಕೆ ಉತ್ತಮ ಯೋಜನೆ  ನೀಡಬೇಕೆಂದಾದಲ್ಲಿ ಅದಕ್ಕೆ ಸದಸ್ಯರ ಬಲ,…

Read More

ಮಡಿಕೇರಿ NEWS DESK ಜು.5 : ಮಡಿಕೇರಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಟಿ.ಆರ್.ಅರ್ಜುನ್ ಸೂರ್ಯ ಆಯ್ಕೆಯಾಗಿದ್ದಾರೆ. ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ ಮತ್ತಿತರ ಪ್ರಮುಖರು ಆದೇಶ ಪತ್ರ ನೀಡಿದರು. ಸಭೆಯಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಕುಶಾಲನಗರ ಜು.4 NEWS DESK : ಕುಶಾಲನಗರ ಸಮೀಪದ ಗುಮ್ಮನಕೊಲ್ಲಿ ಗ್ರಾಮದ ಮುಖ್ಯ ವೃತ್ತಕ್ಕೆ ಅರೆಸೇನಾಪಡೆ ಯೋಧರ ವೃತ್ತ ಎಂದು ನಾಮಕರಣಕ್ಕೆ ಆಗ್ರಹಿಸಿ ಅರೆಸೇನಾಪಡೆ ಯೋಧರ ಒಕ್ಕೂಟದ ಪದಾಧಿಕಾರಿಯಾಗಿ ಕುಶಾಲನಗರದ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿತು. ದೇಶದ ಗಡಿಗಳಲ್ಲಿ ಸೇವೆ ಮಾಡಿ ನಿವೃತ್ತರಾಗಿರುವ ಹಾಗೂ ಸೇವೆಯಲ್ಲಿ ಇರುವ ಅರೆಸೇನಾಪಡೆ ಯೋಧರು ಕೊಡಗು ಜಿಲ್ಲೆಯಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ ಇದೂವರೆಗೂ ಕೊಡಗು ಜಿಲ್ಲಾಡಳಿತವಾಗಲೀ ರಾಜ್ಯ ಸರ್ಕಾರವಾಗಲೀ ಅರೆ ಸೇನಾಪಡೆ ಯೋಧರ ಬಗ್ಗೆ ಕನಿಷ್ಠ ಸೌಜನ್ಯವನ್ನೂ ತೋರಿಲ್ಲ. ಮಾಜಿ ಯೋಧರಿಗೆ ಸಿಗಬೇಕಾದ ಮೂಲ ಸೌಲಭ್ಯಗಳು ದೊರಕುತ್ತಿಲ್ಲ. ಹಾಗಾಗಿ ಯೋಧರ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕುಶಾಲನಗರ ಭಾಗದ ಗುಮ್ಮನಕೊಲ್ಲಿ ವೃತ್ತಕ್ಕೆ ಅರೆಸೇನಾಪಡೆ ಯೋಧರ ವೃತ್ತ ನಾಮಕರಣ ಮಾಡುವ ಮೂಲಕ ಯೋಧರ ಸೇವೆ ಹಾಗೂ ತ್ಯಾಗವನ್ನು ಜಿಲ್ಲಾಡಳಿತ ಗೌರವಿಸಬೇಕು ಎಂದು ಯೋಧರ ಒಕ್ಕೂಟದ ಸಂಚಾಲಕರಾದ ಎಂ.ಎನ್.ಭೀಮಯ್ಯ, ಕಾರ್ಯದರ್ಶಿ ಬಿ.ಎಂ.ರವೀಂದ್ರ, ನಿರ್ದೇಶಕರಾದ ಜಿ.ಕೆ.ದಿನೇಶ್ ಕುಮಾರ್, ಎಂ.ಎನ್.ಗೋಪಾಲಕೃಷ್ಣ, ಟಿ.ಆರ್.ಮಂಜುನಾಥ್, ಲೀಲವೇಣಿ, ಹರೀಶ್ ಕುಮಾರ್…

Read More

ಮಡಿಕೇರಿ ಜು.4 NEWS DESK : ಕಾವೇರಿ ತಾಯಿಯ ಪವಿತ್ರ ನೆಲವಾದ ಕೊಡಗು ಜಿಲ್ಲೆಯಾದ್ಯಂತ ಕನ್ನಡ ನಾಡು-ನುಡಿ ಹಾಗೂ ಕನ್ನಡಿಗರ ಸಾರ್ವಭೌಮತ್ವದ ರಕ್ಷಣೆಗಾಗಿ ಮತ್ತು ಸರ್ಕಾರದ ಅಧಿಕೃತ ಕಾಯ್ದೆಯನ್ನು ತಳಮಟ್ಟದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಮನವಿ ಮಾಡಿದೆ. ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮನವಿ ಸಲ್ಲಿಸಿದ ಬಣದ ಪ್ರಮುಖರು, ಕನ್ನಡ ನಾಮಫಲಕ ಇಲ್ಲದ ಸಂಸ್ಥೆಗಳಿಗೆ ಯಾವುದೇ ಕಾರಣಕ್ಕೂ ಲೈಸೆನ್ಸ್ ನೀಡಬಾರದು” ಎಂದು ಮನವಿ ಮಾಡಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ಕುರಿತು ತಕ್ಷಣವೇ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು, ತಮ್ಮ ವ್ಯಾಪ್ತಿಯಲ್ಲಿ ಸರ್ಕಾರದ ಆದೇಶ ಉಲ್ಲಂಘನೆಯಾಗುತ್ತಿದ್ದರೆ, ಆಯಾ ಪಂಚಾಯಿತಿಯ ಪಿಡಿಒ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಬೇಕು, ಕೊಡಗು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಣಿಜ್ಯ ಸಂಸ್ಥೆಗಳು, ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗಳು, ಪ್ರವಾಸೋದ್ಯಮ ಉದ್ಯಮಗಳು, ರೆಸಾರ್ಟ್‌ಗಳು, ಹೋಂ ಸ್ಟೇಗಳು ಹಾಗೂ ರಸ್ತೆ ಬದಿಯ…

Read More

ಮಡಿಕೇರಿ ಜು.4 NEWS DESK : ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶನಿವಾರ ನಗರದ ಮತ್ತು ನಗರದ ಹೊರವಲಯದ ಸರ್ಕಾರಿ ಕಚೇರಿಗಳು ಮತ್ತು ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಗರದ ಪ್ರಸಿದ್ಧ ಓಂಕಾರೇಶ್ವರ ದೇವಾಲಯ ಹಾಗೂ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಮತ್ತು ಸಿವಿಲ್ ನ್ಯಾಯಾಧೀಶರಾದ ಕಿರಣ್ ಪಾಟೀಲ, ಲೋಕಾಯುಕ್ತ ಎಸ್ಪಿ ಉದೇಶ್, ಕೊಡಗು ಲೋಕಾಯುಕ್ತ ಡಿವೈಎಸ್‍ಪಿ ದಿನಕರ್ ಶೆಟ್ಟಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ದೇವರಾಜು ಇತರರು ಇದ್ದರು. ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಶೌಚಾಲಯ, ಸ್ವಚ್ಛತೆ, ಔಷದಿ, ಊಟೋಪಚಾರ ನೀಡುವುದು ಸೇರಿದಂತೆ ಮತ್ತಿತರ ಬಗ್ಗೆ ಹೊರ ಹಾಗೂ ಒಳರೋಗಿಗಳಿಂದ ಮಾಹಿತಿ ಪಡೆದರು. ಆಸ್ಪತ್ರೆಯಿಂದಲೇ ಔಷಧಿ ನೀಡುತ್ತಾರೆಯೇ…

Read More

ಸುಂಟಿಕೊಪ್ಪ ಜು.4 NEWS DESK : ಪತ್ರಿಕೆಗಳು ಸಮಾಜದ ಕೈಗನ್ನಡಿಯಾಗಿದ್ದು ಪತ್ರಕರ್ತರ ಮೇಲೆ ಸಾಮಾಜಿಕ ಜವಾಬ್ದಾರಿ ಹೆಚ್ಚಿದೆ ಎಂದು ಐಶ್ವರ್ಯ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಅಮ್ಮಾಟಂಡ ಎ.ಜೋಯಪ್ಪ ಅಭಿಪ್ರಾಯ ಪಟ್ಟರು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಗುಡ್ಡೆಹೊಸೂರಿನ ಐಶ್ವರ್ಯ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮತ್ತು ಜ್ಞಾನ ಗಂಗಾ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಇಂದು ಪತ್ರಿಕಾರಂಗ ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗಾಗಿ ಗೌರವಿಸಲ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಕಾಲಘಟ್ಟದಲ್ಲಿ ವಿವಿಧ ಮಾಧ್ಯಮಗಳು ನೀಡುವ ಸುದ್ದಿಗಳೆಲ್ಲಾ ವಾಸ್ತವ ಎಂದು ನಂಬುವ ಪರಿಸ್ಥಿತಿಯಿದೆ ಆದರೆ ಮುದ್ರಣ ಮಾಧ್ಯಮ ಈ ಪೈಕಿ ಹೆಚ್ಚು ವಿಶ್ವಾಸ ಅರ್ಹತೆಯನ್ನು ಉಳಿಸಿಕೊಂಡಿದೆ ಎಂದು ಶ್ಲಾಘಿಸಿದರು. ದಿನದ ಮಹತ್ವದ ಕುರಿತು ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ಎಸ್.ಜಿ.ಉಮೇಶ್ ಮಾತನಾಡಿ, ರಾಷ್ಟ್ರ ಮತ್ತು ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಂಪನ್ಮೂಲ ಆಕರಗಳಾಗಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸುತ್ತ್ತಿವೆ. ಪತ್ರಿಕೆಗೆಗಳು ಕೇವಲ ರಾಜಕೀಯ ಅಥವಾ ವ್ಯಕ್ತಿಗತ ವಿಷಯಾಧಾರಿತವಾಗಿರದೆ ಜೀವನದ ಎಲ್ಲಾ…

Read More