ಕುಶಾಲನಗರ, ಮಾ.19 NEWS DESK : ತೊರೆನೂರಿನಲ್ಲಿ ಯುಗಾದಿಯ ಅಂಗವಾಗಿ ಕೃಷಿಕರಿಂದ ಹೊನ್ನಾರು ಉತ್ಸವ ಸಂಭ್ರಮದಿಂದ ನಡೆಯಿತು. ಗ್ರಾಮದ ಬಸವೇಶ್ವರ ದೇವಾಲಯದ ಬಳಿ ಆಕಳುಗಳೊಂದಿಗೆ ಆಗಮಿಸಿದ ಅನ್ನದಾತರು ಗ್ರಾಮದ ದೈವ ಬಸವೇಶ್ವರ ಸನ್ನಿಧಿಯಲ್ಲಿ ಸಾಮೂಹಿಕವಾಗಿ ಪೂಜೆ ನೆರವೇರಿಸಿದರು. ಬಳಿಕ ಗ್ರಾಮದ ದೇವರ ಭೂಮಿಗೆ ತೆರಳಿ ಎತ್ತು ಹಾಗೂ ನೇಗಿಲು ಗಳಿಗೆ ಪೂಜೆ ಸಲ್ಲಿಸಿದ ನಂತರ ವರ್ಷದ ಮೊದಲ ಉಳುಮೆಯನ್ನು ಆರಂಭಿಸಿದರು. ಬಳಿಕ ಗ್ರಾಮದ ಮುಖ್ಯ ಬೀದಿಗಳಲ್ಲಿ ಹೊನ್ನಾರಿನೊಂದಿಗೆ ಮೆರವಣಿಗೆಯಲ್ಲಿ ಧಾವಿಸಿ ಗ್ರಾಮದ ಹೊರಬದಿಯ ಮುಖ್ಯ ರಸ್ತೆಯ ಬಸವೇಶ್ವರ ದೇವಾಲಯದಿಂದ ತಮ್ಮ ಮನೆಗಳಿಗೆ ಮರಳಿದರು. ಅಲಂಕೃತ ಉಳುಮೆಯ ಎತ್ತುಗಳ ಹೊನ್ನಾರು ಉತ್ಸವ ಕಣ್ತುಂಬಿಕೊಳ್ಳಲು ಗ್ರಾಮದ ಮಹಿಳೆಯರು ಮಕ್ಕಳಾದಿಯಾಗಿ ಇಡೀ ಗ್ರಾಮಸ್ಥರು ಒಂದೆಡೆ ಸೇರಿ ಸಂಭ್ರಮಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ಟಿ.ಬಿ.ಜಗದೀಶ್, ಕಾರ್ಯದರ್ಶಿ ಟಿ.ಎಲ್.ಮಹೇಶ್, ಕಾರ್ಯಾಧ್ಯಕ್ಷ ಟಿ.ಜಿ.ಶಿವಣ್ಣ, ಗೌರವ ಅಧ್ಯಕ್ಷ ಟಿ.ಡಿ.ಈಶ್ವರ್, ಪ್ರಮುಖರಾದ ಟಿ.ಜಿ.ಪ್ರೇಮಕುಮಾರ್, ಚಿದಾನಂದ, ಗ್ರಾಪಂ ಮಾಜಿ ಸದಸ್ಯ ಟಿ.ಸಿ.ಶಿವಕುಮಾರ್, ಶಿಕ್ಷಕ ರಮೇಶ್, ಸಣ್ಣಪ್ಪ, ಸೋಮಣ್ಣ, ತ್ರಿಣೇಶ್, ಸುನಿಲ್, ಮೊದಲಾದವರಿದ್ದರು. ವರದಿ : ಕೆ.ಎಸ್.ಮೂರ್ತಿ
ಲೇಖಕ: admin
ಮಡಿಕೇರಿ NEWS DESK ಮಾ.20 : ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರವನ್ನು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆಯೆಂದು ಕ್ಲಬ್ ಅಧ್ಯಕ್ಷ ಕೋಟೇರ ಎನ್.ಮುದ್ದಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಹಾಕಿ ಅಥ್ಲೆಟಿಕ್ಸ್ ಮತ್ತು ಯೋಗವನ್ನು ಒಳಗೊಂಡoತೆ ಶಿಬಿರ ನಡೆಯಲಿದೆ. ಶಿಬಿರ ಇದೇ ಮಾ.29ರಂದು ಆರಂಭಗೊoಡರು, ಹಿರಿಯ ಕ್ರೀಡಾ ಮಾರ್ಗದರ್ಶಕರಾಗಿದ್ದ ದಿ.ಸಿ.ವಿ.ಶಂಕರ್ ಅವರ ಜನ್ಮದಿನವಾದ ಏ.1 ರಂದು ಶಿಬಿರಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತದೆ. ಸಮಾರೋಪ ಮೇ3 ರಂದು ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ಕ್ಲಬ್ನ ಪ್ರಮುಖರಾದ ಬೊಪ್ಪಂಡ ಶ್ಯಾಂ ಮಾತನಾಡಿ, 1934ರಲ್ಲಿ ಆರಂಭಗೊAಡ ವಾಂಡರ್ಸ್ ಸ್ಪೋರ್ಟ್ಸ್ ಕ್ಲಬ್ ಮೂಲಕ ಕಳೆದ 31 ವರ್ಷಗಳಿಂದ ಬೇಸಿಗೆ ಕ್ರೀಡಾ ಶಿಬಿರವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಕ್ರೀಡಾ ಮರ್ಗದರ್ಶಕರಾಗಿದ್ದ ದಿ.ಸಿ.ವಿ.ಶಂಕರ್ ಅವರ ಗರಡಿಯಲ್ಲಿ ಪಳಗಿದ್ದ ಎಂ.ಪಿ.ಗಣೇಶ್, ಬಿ.ಪಿ.ಗೋವಿಂದ ಅವರು ಒಲಂಪಿಯನ್ಗಳಾಗಿದ್ದು, ಹಾಕಿ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಇಲ್ಲಿಯವರೆಗಿನ 11 ಮಂದಿ…
ಪರಸ್ಪರ ಕಾರುಣ್ಯ ಸಹನೆ, ಮತ್ತು ಪ್ರೀತಿಯ ಸಂಕೇತವಾದ ಈದುಲ್ ಫಿತರ್ ಹಬ್ಬವು ವಿಶ್ವಾಸಿಗಳು ಸಂಭ್ರಮಿಸುವ ಕ್ಷಣವಾಗಿದೆ ..ಕಳೆದ ಮೂವತ್ತು ದಿನಗಳಿಂದ ಹಸಿವು, ದಾಹದೊಂದಿಗೆ ವಿಶ್ವಾಸಿಗಳು ನಿರ್ವಹಿಸಿದ ಉಪವಾಸದಿಂದ ನಮ್ಮಲ್ಲಿರುವ ಎಲ್ಲಾ ರೀತಿಯ ಕೆಡುಕುಗಳನ್ನು ದೂರಿಕರಿಸುವುದರೊಂದಿಗೆ ನಮ್ಮನ್ನು ಒಳಿತಿನಡೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಇಸ್ಲಾಮಿನ ಅತ್ಯುತ್ತಮ ಸಂದೇಶವನ್ನು ಸರ್ವರಿಗೂ ತಲುಪಿಸುವ ಹೊಣೆಗಾರಿಕೆಯು ಮುಸ್ಲಿಮರಿಗಿದೆ..ಇಂದು ಲೋಕಾದ್ಯಂತ ಜನಸಾಮಾನ್ಯರು ಯುಧ್ದದ ಪರಿಣಾಮದಿಂದ ನಲುತ್ತಿರುವುದು ದುಃಖಕರ ಸಂಗತಿ .ಯಾರದ್ದೋ ಸ್ವಾರ್ಥಕ್ಕಾಗಿ ಇನ್ಯಾರದ್ದೋ ಅಧಿಕಾರಕ್ಕಾಗಿ ಬಾಂಬುಗಳು ಮಿಸೈಲುಗಳಿಂದ ಮಕ್ಕಳು ಮಹಿಳೆಯರು ನಿರಪರಾಧಿಗಳ ಜೀವ ಬಲಿ ಪಡೆಯುತ್ತಿರುವುದು ಬಹು ದೊಡ್ಡ ದುರಂತ ನೀವು ಭೂಮಿಯಲ್ಲಿರವವರ ಮೇಲೆ ಕರುಣೆ ತೋರಿದರೆ ಆಕಾಶದಲದಲ್ಲಿರುವವನು ನಿಮ್ಮ ಮೇಲೆ ಕರುಣೆ ತೋರುತ್ತಾನೆ ಎಂದು ತಿಳಿಸಿದ ಪ್ರವಾದಿ (ಸ)ರವರ ಅನುಯಾಯಿಗಳು ಎಂದಿಗೂ ಹಿಂಸಾತ್ಮಕ ಕೃತ್ಯವನ್ನು ಮಾಡಲಾರರು. ಪರಸ್ಪರ ಬಿಕ್ಕಟ್ಟು ಬಿನ್ನಾಭಿಪ್ರಾಯ, ಅನಕ್ಯತೆ ಹಾಗೂ ಒಗ್ಗಟ್ಟಿನ ಕೊರತೆಯಿಂದ ಮುಸ್ಲಿಮರು ಬಳಲುತ್ತಿದ್ದಾರೆ , ಆದ್ದರಿಂದ ಪರಸ್ಪರ ,ಸಮಾಲೋಚನೆ , ಸಹಕಾರ ಮತ್ತು ಒಗ್ಗಟ್ಟಿಂನಿಂದ ಮುಂದೆ ಸಾಗಬೇಕಾಗಿದೆ ಎಂದು ಮಸ್ಜಿದ್ ಉರ್ ರಹ್ಮಾ…
ಕುಶಾಲನಗರ, NEWS DESK ಮಾ೨೦: ಮುಸಲ್ಮಾನರ ಪವಿತ್ರ ಧರ್ಮಗಳಲ್ಲಿ ಒಂದಾದ ಈದುಲ್ ಫಿತರ್ ಹಬ್ಬವನ್ನು ಕುಶಾಲನಗರದ ಹಿಲಾಲ್ ಮಸೀದಿಯಲ್ಲಿ ಆಚರಿಸಲಾಯಿತು. ನಿರಂತರ ೨೯ ದಿನಗಳ ವ್ರತಾಚರಣೆಯ ನಂತರ ಶಾಫಿ ಬಾಂಧವರು ಈದುಲ್ ಫಿತರ್ ಹಬ್ಬವನ್ನು ಆಚರಿಸಿದರು. ಹಬ್ಬದ ದಿನದಂದು ಬೆಳಿಗ್ಗೆ ವಿಶೇಷವಾದ ಪ್ರಾರ್ಥನೆ ನೆರವೇರಿಸಲಾಯಿತು. ಶಾಂತಿ, ಸೌಹಾರ್ದತೆ, ಕರುಣೆ, ಸಹನೆ ಬಗ್ಗೆ ಧರ್ಮಗುರುಗಳಾದ ಶಾಫಿ ಫೈಜ಼ಿ ಇರ್ಪಾನಿಯವರು ಪ್ರಭಾಷಣ ನೀಡಿದರು. ಜೊತೆಗೆ ಈದುಲ್ ಫಿತರ್ ನ ಪ್ರಾಮುಖ್ಯತೆ ಬಗ್ಗೆ, ಪ್ರತಿಯೊಬ್ಬರೂ ಖಡ್ಡಾಯವಾಗಿ ನೀಡಬೇಕಾದ ದಾನದ ಬಗ್ಗೆ ಅವರು ಭೋದನೆ ನೀಡಿದರು. ನಮಾಜ಼್ ನ ನಂತರ ಪರಸ್ಪರ ಈದ್ ನ ಶುಭಾಶಯ ಹಂಚಿಕೊಂಡಿದರು. ಈ ಸಂದರ್ಭ ಮಾತನಾಡಿದ ಹಿಲಾಲ್ ಮಸೀದಿ ಅಧ್ಯಕ್ಷರಾದ ರಫೀಕ್ ಹಾಗೂ ಕಾರ್ಯದರ್ಶಿ ಕರೀಂ, ಹಸಿದವನ ನೋವನ್ನು ಅರಿಯುವ ಉದ್ದೇಶದಿಂದ ನಾವು ಮೂವತ್ತು ದಿನಗಳ ಕಾಲ ವ್ರತಾಚರಣೆ ಮಾಡುತ್ತೇವೆ. ಎಲ್ಲರಿಗೂ ಈದುಲ್ ಫಿತರ್ ಹಬ್ಬದ ಶುಭಾಶಯಗಳು ಎಂದರು. ಈ ಸಂದರ್ಭ ಹಿಲಾಲ್ ಮಸೀದಿ ಕಮಿಟಿ ಪ್ರಮುಖರು, ಸದಸ್ಯರು, ನುಸ್ರತುಲ್ ಇಸ್ಲಾಂ…
ಮಡಿಕೇರಿ ಮಾ.20 NEWS DESK : ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಂಪರ್ಕ ಹೊಂದಿರುವ ಪ್ರತಿ ಮನೆಗೂ ಅಡುಗೆ ಅನಿಲ ಸಿಲಿಂಡರ್ ಅನ್ನು ಪೂರೈಕೆ ಮತ್ತು ಬೇಡಿಕೆಗೆ ತಕ್ಕಂತೆ ಸರ್ಕಾರದ ನಿಯಮಾನುಸಾರ ಸರಬರಾಜು ಮಾಡುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಅಡುಗೆ ಅನಿಲ ವಿತರಕರ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ದ ಸಾರಿರುವ ಸಮರ ತೀವ್ರಗೊಂಡಿರುವ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆ ಬಗ್ಗೆ ಸಾರ್ವಜನಿಕರಲ್ಲಿ ಒಂದು ರೀತಿಯ ಆತಂಕ ಉಂಟಾಗಿದ್ದು, ಇದನ್ನು ನಿವಾರಿಸಬೇಕು. ಆ ನಿಟ್ಟಿನಲ್ಲಿ ಯಾರೂ ಸಹ ಆತಂಕಕ್ಕೆ ಒಳಗಾಗದಂತೆ ಗೃಹ ಬಳಕೆ ಅಡುಗೆ ಅನಿಲವನ್ನು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಒಟ್ಟಾರೆ…
ಮಡಿಕೇರಿ NEWS DESK ಮಾ.20 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಅರುವತೊಕ್ಲು ಗ್ರಾಮಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಇಂದು ಭೇಟಿ ನೀಡಿದರು. ತಮ್ಮ ಅನುದಾನದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಅರುವತ್ತೊಕ್ಲು ಗ್ರಾಮದ ಮೈಸೂರಮ್ಮ ನಗರಕ್ಕೆ, ಗೋಣಿಕೊಪ್ಪ ಬೈಪಾಸ್ ನಿಂದ ತೆರಳುವ ರಸ್ತೆಗೆ ರೂ.18 ಲಕ್ಷಗಳಲ್ಲಿ ಕೈಗೊಂಡ ಕಾಮಗಾರಿಯ ಲೋಕಾರ್ಪಣೆ ಮಾಡಿದ ಬಳಿಕ, ರೂ.15 ಲಕ್ಷಗಳಲ್ಲಿ ನಿರ್ಮಾಣಗೊಂಡ ಕಾಡ್ಲ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳುವ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿದರು. ಬಳಿಕ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳಿದ ಶಾಸಕರು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಶಾಸಕರ ಅನುದಾನ ರೂ.3.50 ಲಕ್ಷದಲ್ಲಿ, ಕಾಡ್ಯಮಾಡ ಐನ್ ಮನೆಗೆ ತೆರಳುವ ಓಣಿಗೆ ಮೆಟ್ಟಲುಗಳನ್ನು ನಿರ್ಮಿಸಲಾಗಿದೆ. ಐನ್ ಮನೆ ಪ್ರಮುಖರು ನೀಡಿದ ಆತಿಥ್ಯವನ್ನು ಶಾಸಕರು ಸ್ವೀಕರಿಸಿದರು. ಈ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಿದೇರಿರ…
ಮಡಿಕೇರಿ NEWS DESK ಮಾ.20 : ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಂಪರ್ಕ ಹೊಂದಿರುವ ಪ್ರತಿ ಮನೆಗೂ ಅಡುಗೆ ಅನಿಲ ಸಿಲಿಂಡರ್ ಅನ್ನು ಪೂರೈಕೆ ಮತ್ತು ಬೇಡಿಕೆಗೆ ತಕ್ಕಂತೆ ಸರ್ಕಾರದ ನಿಯಮಾನುಸಾರ ಸರಬರಾಜು ಮಾಡುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಡುಗೆ ಅನಿಲ ವಿತರಕರ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಸಾರಿರುವ ಸಮರ ತೀವ್ರಗೊಂಡಿರುವ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆ ಬಗ್ಗೆ ಸಾರ್ವಜನಿಕರಲ್ಲಿ ಒಂದು ರೀತಿಯ ಆತಂಕ ಉಂಟಾಗಿದ್ದು, ಇದನ್ನು ನಿವಾರಿಸಬೇಕು. ಆ ನಿಟ್ಟಿನಲ್ಲಿ ಯಾರೂ ಸಹ ಆತಂಕಕ್ಕೆ ಒಳಗಾಗದಂತೆ ಗೃಹ ಬಳಕೆ ಅಡುಗೆ ಅನಿಲವನ್ನು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ.…
ಮಡಿಕೇರಿ NEWS DESK ಮಾ.20 : ಯುದ್ಧದ ಪರಿಸ್ಥಿತಿಯಿಂದ ವಿಶ್ವದ ಹಲವು ದೇಶಗಳು ನಾನಾ ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ಬಗ್ಗೆ ಕನಿಷ್ಠ ಅರಿವಿಲ್ಲದ ಕಾಂಗ್ರೆಸ್ ಪಕ್ಷ ಅಡುಗೆ ಅನಿಲದ ಬೆಲೆ ಏರಿಕೆಯ ನೆಪವೊಡ್ಡಿ ಕುಶಾಲನಗರದಲ್ಲಿ ನಡೆಸಿರುವ ಪ್ರತಿಭಟನೆ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿಯ ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯುದ್ಧ ಕಾಲದಲ್ಲಿ ಆಡಳಿತ ಪಕ್ಷದೊಂದಿಗೆ ಕೈಜೋಡಿಸಿ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಲು ಸಹಕಾರ ನೀಡುವ ಬದಲು ಕಾಂಗ್ರೆಸ್ ಪಕ್ಷ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ವಿಶ್ವದ ಎರಡನೇ ಅತಿದೊಡ್ಡ ಎಲ್ಪಿಜಿ ಆಮದುದಾರ ರಾಷ್ಟ್ರವಾಗಿರುವ ಭಾರತ ಯುದ್ಧದಿಂದಾಗಿ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಬೆಲೆ ಹೆಚ್ಚಳವಾಗಲು ಕಾರಣವಾಗಿದೆ. ಅಡುಗೆ ಅನಿಲದ ಸಿಲಿಂಡರ್ ಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯನ್ನು ಕೇಂದ್ರದ ಎನ್ಡಿಎ ನೇತೃತ್ವದ ಸರಕಾರ ಬೇಕಂತಲೇ ಸೃಷ್ಟಿ ಮಾಡಿಲ್ಲ ಅಥವಾ ಪ್ರಧಾನಮಂತ್ರಿಗಳು ಉದ್ದೇಶಪೂರ್ವಕವಾಗಿ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿಲ್ಲ. ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯಾಗಿದೆ,…
ಮಡಿಕೇರಿ NEWS DESK ಮಾ.19 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಜನಸ್ಪಂದನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ಮನವಿ ಮಾಡಿದ್ದಾರೆ. ಶಾಸಕರ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ 2.30 ಗಂಟೆಗೆ ಪ್ರಾರಂಭವಾಗುವ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ 39 ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಸಾರ್ವಜನಿಕರು, ವಿಶೇಷವಾಗಿ ಭಾಗಮಂಡಲ ಪಂಚಾಯತ್ ನ ತಾವೂರು, ತಣ್ಣೀಮಾನಿ, ಚೆರಂಗಾಲ, ಕೊರಂಗಾಲ, ಭಾಗಮಂಡಲ ಗ್ರಾಮಗಳ ಸಾರ್ವಜನಿಕರು ತಮ್ಮ ದೀರ್ಘ ಕಾಲದ ಮತ್ತು ಅಲ್ಪ ಕಾಲದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋಳಿಬೈಲು ವೆಂಕಟೇಶ್ ಕೋರಿದ್ದಾರೆ.
ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಈ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಹೊಸಪೇಟೆ ಹಾಗೂ ಗೋವಾ (ಮಡಗಾಂವ್) ಮಾರ್ಗಗಳಿಗೆ ವಿಶೇಷ ರೈಲುಗಳನ್ನು ಕಾರ್ಯಾಚರಿಸುತ್ತಿದೆ. ವಿಶೇಷ ರೈಲುಗಳ ವೇಳಾಪಟ್ಟಿ ಮತ್ತು ನಿಲುಗಡೆ ವಿವರ: 1. ಬೆಂಗಳೂರು – ಬೆಳಗಾವಿ ವಿಶೇಷ ರೈಲು (06503/06504): ಬೆಳಗಾವಿಗೆ: ರೈಲು ಸಂಖ್ಯೆ 06503 ಬೆಂಗಳೂರಿನ SMVT ನಿಲ್ದಾಣದಿಂದ ಹೊರಟು ಇಂದು ಬೆಳಿಗ್ಗೆ ಬೆಳಗಾವಿ ತಲುಪಿದೆ. ರಿಟರ್ನ್: ರೈಲು ಸಂಖ್ಯೆ 06504 ಮಾರ್ಚ್ 22ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮಾರ್ಚ್ 23ರ ಬೆಳಿಗ್ಗೆ 5ಕ್ಕೆ ಬೆಂಗಳೂರು ತಲುಪಲಿದೆ. ನಿಲುಗಡೆ: ತುಮಕೂರು, ಅರಸೀಕೆರೆ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಲೊಂಡಾ ಸೇರಿದಂತೆ ಪ್ರಮುಖ ನಿಲ್ದಾಣಗಳು. 2. ಬೆಂಗಳೂರು – ವಿಜಯಪುರ ವಿಶೇಷ ರೈಲು (06277/06278): ವಿಜಯಪುರಕ್ಕೆ: ರೈಲು ಸಂಖ್ಯೆ 06277 ಯಶವಂತಪುರದಿಂದ ಹೊರಟು ಇಂದು…






