ಲೇಖಕ: admin

ಮಡಿಕೇರಿ NEWS DESK ಏ.12 : ಚಲನಚಿತ್ರ ಮತ್ತು ಕಿರುತೆರೆಯ ನಟ ಕೊಡಗಿನ 7ನೇ ಹೊಸಕೋಟೆಯ ಕಲ್ಲೂರು ನಿವಾಸಿ ಹರೀಶ್(42) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಕುಶಾಲನಗರ ಮಾರ್ಗವಾಗಿ ಕಲ್ಲೂರಿಗೆ ತೆರಳುತ್ತಿದ್ದ ಸಂದರ್ಭ ಆನೆಕಾಡಿನ 275 ರಾಷ್ಟ್ರೀಯ ಹೆದ್ದಾರಿಯಲ್ಲಿ ಹರೀಶ್ ಸಂಚರಿಸುತ್ತಿದ್ದ ಕಾರು ನಿಂತಿದ್ದ ಗೊಬ್ಬರ ತುಂಬಿದ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊoಡಿದ್ದು, ಗಂಭೀರವಾಗಿ ಗಾಯಗೊಂಡ ಹರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ ಏ.11 NEWS DESK :  ಚೇರಂಬಾಣೆ ವ್ಯಾಪ್ತಿಯ ಬೇಂಗೂರು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಪುನರ್ ಪ್ರತಿಷ್ಟಾ ಹಾಗೂ ಬ್ರಹ್ಮಕಲಶೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಚೇರಂಬಾಣೆಯಲ್ಲಿನ ಪಟ್ಟಮಾಡ ಕುಟುಂಬದ ಬೇಂಗೂರು ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪುನರ್ ನಿಮಾ೯ಣವಾದ ನೂತನ ಪ್ರಾಸಾದದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಪಂಚಲೋಹ ಬಿಂಬ ಪುನರ್ ಪ್ರತಿಷ್ಟೆ ಹಾಗೂ ಬ್ರಹ್ಮ ಕಲಶಾಭಿಷೇಕವು ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೖತ್ವದಲ್ಲಿ ಪಟ್ಟಮಾಡ ಕುಟುಂಬದ ಮುಂದಾಳತ್ವದಲ್ಲಿ ಆಯೋಜಿತವಾಗಿತ್ತು. ಶ್ರೀ ಸುಬ್ರಹ್ಮಣ್ಯ ದೇವರ ಬಿಂಬ ಪ್ರತಿಷ್ಟೆ, ಜೀವಕಲಶಾಭಿಷೇಕ, ಪ್ರಾಣ ಪ್ರತಿಷ್ಟೆ, ಹೋಮಕಲಶಾಭಷೇಕ, ತತ್ವ ಕಲಶಾಭಿಷೇಕ ,ಬ್ರಹ್ಮ ಕಲಶಾಭಿಷೇಕ, ಮಹಾಪೂಜೆಗಳು ನೆರವೇರಿದವು. ಕಾಯ೯ಕ್ರಮಕ್ಕೆ ಆಗಮಿಸಿದ್ದ ನೂರಾರು ಭಕ್ದಾಧಿಗಳಿಗೆ ಮಂತ್ರಾಕ್ಷತೆ, ಪ್ರಸಾದ ವಿತರಣೆ ಜರುಗಿತು. ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಮಡಿಕೇರಿಯ ಶ್ರೀ ಕುಂದುರುಮೊಟ್ಟೆ ದೇವಾಲಯದ ಟ್ರಸ್ಟಿ ಟಿ.ಪಿ. ರಮೇಶ್, ಮನು ಮೇದಪ್ಪ, ಮಡಿಕೇರಿಯ ಶ್ರೀ ವಿಜಯವಿನಾಯಕ ದೇವಾಲಯದ ಟ್ರಸ್ಟಿ ಜಿ.ಚಿದ್ವಿಲಾಸ್…

Read More

ಮಡಿಕೇರಿ ಏ.11 NEWS DESK : ಕಂದೀಲು ಕನ್ನಡ  ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಕೊಡಗಿನ  ಸಿನಿಮಾ ನಿಮಾ೯ಪಕಿ, ನಿದೇ೯ಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರ ನೂತನ ಮಕ್ಕಳ ಚಿತ್ರ ಕೋಟೆಬೆಟ್ಟದ ಚಿತ್ರೀಕರಣಕ್ಕೆ ನಗರದ ಶ್ರೀ ಆಂಜನೇಯ ದೇವಾಲಯದಲ್ಲಿ ಮುಹೂತ೯ ಪೂಜೆ ನೆರವೇರಿತು. ಕೊಡವ  ಭಾಷೆಯ ಚಿತ್ರ  ಕೋಟೆ ಬೆಟ್ಟಕ್ಕೆ ಕ್ಲಾಪ್ ನೆರವೇರಿಸಿ ಮಾತನಾಡಿದ ವಿಧಾನಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಕೊಡಗಿನಲ್ಲಿ ಈಶ್ವರನ ಸನ್ನಿಧಿಯಾಗಿ ಪೌರಾಣಿಕ ಮಹತ್ವ ಹೊಂದಿರುವ ಕೋಟೆ ಬೆಟ್ಟದ ಹಿನ್ನಲೆ ಹೊಂದಿ ಮಕ್ಕಳ ಚಿತ್ರ ನಿಮಾ೯ಣ ಮಾಡುತ್ತಿರುವುದು ಉತ್ತಮ ಪ್ರಯತ್ನ ಎಂದರು. ಮಕ್ಕಳಿಗೆ ತಿಳವಳಿಕೆ ನೀಡುವ ನಿಟ್ಟಿನಲ್ಲಿ ಇಂಥ ಸಿನಿಮಾ ನಿಮಾ೯ಣ ಶ್ಲಾಘನೀಯ. ಕೋಟೆ ಬೆಟ್ಟ ಈಶ್ವರನ ಮಹತ್ವದ ಬಗ್ಗೆಯೂ ಚಿತ್ರ ಬಿಂಬಿಸಲಿ ಎಂದರು. ಹಿರಿಯ  ಪತ್ರಕತ೯ ಅನಿಲ್ ಹೆಚ್.ಟಿ. ಮಾತನಾಡಿ, ಕಂದೀಲು  ಕನ್ನಡ ಚಿತ್ರದ ಮೂಲಕ ಸಿನಿಮಾಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಕೊಡಗಿನ ಪ್ರಥಮ ಮತ್ತು ಕನಾ೯ಟಕದ ನಾಲ್ಕನೇ ಮಹಿಳೆ ಎಂಬ ಹಿರಿಮೆಯಿರುವ ಯಶೋಧ ಪ್ರಕಾಶ್ ಈಗ…

Read More

ಮಡಿಕೇರಿ ಏ.11 NEWS DESK : ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಮೇ 7 ರಿಂದ 10 ರವರೆಗೆ ಸೋಮವಾರಪೇಟೆಯ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟದ ಲೋಗೋ ಹಾಗೂ ಟ್ರೋಫಿಗಳ ಅನಾವರಣ ಕಾರ್ಯಕ್ರಮ ಮಡಿಕೇರಿಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಲೋಗೋವನ್ನು ಅನಾವರಣ ಮಾಡಿ ಮಾತನಾಡಿದ ಜಿಲ್ಲಾ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು, ಕೊಡಗು ಜಿಲ್ಲೆ ಕ್ರೀಡೆಯ ತವರು. ಇಂತಹ ನೆಲದಲ್ಲಿ ಪ್ರತಿಷ್ಠಿತ ತಂಡಗಳ ನಡುವೆ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯನ್ನು ಆಯೋಜಿಸಿರುವುದು ಶ್ಲಾಘನೀಯ. ರಾಜ್ಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಜಿಲ್ಲಾಡಳಿತದಿಂದ ಬೇಕಾಗುವ ಅಗತ್ಯ ನೆರವು ಒದಗಿಸಲಾಗುವುದು ಎಂದರು. ಟ್ರೋಫಿಗಳನ್ನು ಅನಾವರಣ ಮಾಡಿದ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಚಕ್ರವರ್ತಿ ಅವರು, ಇಲಾಖೆಯಿಂದ ಹಾಕಿ ಪಂದ್ಯಾವಳಿಗೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು. ಸೋಮವಾರಪೇಟೆಯ ಹಾಕಿ ಟರ್ಫ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸ್ಥಳೀಯ ಪ್ರತಿಭೆಗಳಿಗೆ…

Read More

ಮಡಿಕೇರಿ ಏ.11 NEWS DESK : ಕೊಡಗು ಜಿಲ್ಲಾ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2025-26ನೇ ಸಾಲಿನಲ್ಲಿ ನಡೆದಿದ್ದ 9 ಕಳವು ಪ್ರಕರಣಗಳನ್ನು ಬೇಧಿಸಿ ಒಟ್ಟು 20 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದು, ಅದನ್ನು ಮಾಲೀಕರಿಗೆ ಹಸ್ತಾಂತರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಪಿ ವಿವಿಧ ಕಳವು ಪ್ರಕರಣಗಳಲ್ಲಿ ಒಟ್ಟು 228.19 ಗ್ರಾಂ ಚಿನ್ನಾಭರಣ, 2 ಕೆ.ಜಿ. 422 ಗ್ರಾಂ ಬೆಳ್ಳಿ ಆಭರಣ, 6.97 ಲಕ್ಷ ರೂ. ನಗದು, 6495 ಕೆ.ಜಿ ಕಾಫಿ, 75 ಕೆ.ಜಿ ಕರಿಮೆಣಸು, 5 ಚೀಲ ಪಾರ್ಚ್‍ಮೆಂಟ್ ಕಾಫಿ, 2 ಕಾರು, 1 ದ್ವಿಚಕ್ರ ವಾಹನ, 5 ಮೊಬೈಲ್ ಫೋನ್ ಗಳನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಮೊಬೈಲ್ ಕಳೆದು ಹೋದ ಪ್ರಕರಣದಡಿ ಒಟ್ಟು 54 ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಲಾಗಿದೆ. ವಿವಿಧ ಕಳವು ಪ್ರಕರಣಗಳಲ್ಲಿ ಸ್ವತ್ತುಗಳನ್ನು ಕಳೆದುಕೊಂಡ ಮಾಲೀಕರಿಗೆ ಕಾನೂನಾತ್ಮಕವಾಗಿ ಹಸ್ತಾಂತರ…

Read More

ಮಡಿಕೇರಿ ಏ.11 NEWS DESK : ತಿಂಗಳ ಒಳಗಾಗಿ ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಸಂಬಂಧಿಸಿದಂತೆ ಸರ್ಕಾರ ಅಗತ್ಯ ತೀರ್ಮಾನಗಳನ್ನು ಕೈಗೊಂಡು ನೆಲೆ ಇಲ್ಲದವರಿಗೆ ನೆಲೆಯೊದಗಿಸದಿದ್ದಲ್ಲಿ “ಮಾಡು ಇಲ್ಲವೆ ಮಡಿ” ಚಳವಳಿಯನ್ನು ರಾಜ್ಯ ವ್ಯಾಪಿ ಹಮ್ಮಿಕೊಳ್ಳುವುದು ಮಾತ್ರವಲ್ಲ, ಮೇ1 ರಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅನಿರ್ದಿಷ್ಟಾವಧಿ ಹೋರಾಟವನ್ನು ಆರಂಭಿಸುವುದಾಗಿ ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ಸ್ಪಷ್ಟಪಡಿಸಿದೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು, ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯ ಬಗರ್ ಹುಕುಂ ಸಾಗುವಳಿದಾರರು, ಅರಣ್ಯ ಭೂಮಿ ಹಕ್ಕು ಪ್ರದಿಪಾದಿಸುತ್ತಿರುವವರು ಹಲ ದಶಕಗಳಿಂದ ಭೂಮಿಯ ಹಕ್ಕಿಗಾಗಿ ಕಾಯುತ್ತಲೆ ಇದ್ದಾರೆ. ಇಲ್ಲಿಯವರೆಗು ಅಧಿಕಾರಕ್ಕೆ ಬಂದ ಎಲ್ಲಾ ಸರ್ಕಾರಗಳು ಹುಸಿ ಭರವಸೆಗಳನ್ನು ನೀಡಿವೆಯೇ ಹೊರತು ತಮ್ಮ ಮೂಲಬೇಡಿಕೆಗಳ ಈಡೇರಿಕೆಯತ್ತ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು. ಅರಣ್ಯದ ಅಂಚಿನ ಭಾಗಗಳು, ಗೋಮಾಳ, ಸರ್ಕಾರಿ ಜಾಗಗಳಲ್ಲಿ ಹಲವಾರು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಭೂ ಹೀನರು, ತಾವಿರುವ ಜಾಗದ ಹಕ್ಕು ಪತ್ರಕ್ಕಾಗಿ ಫಾರಂ ನಂ.50,53,57…

Read More

ಮಡಿಕೇರಿ ಏ.11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡಮಾಡಲಾಗುವ ಪ್ರತಿಷ್ಠಿತ “ವಿಜಯಾ ವಿಷ್ಣು ಭಟ್ ದತ್ತಿ ಪ್ರಶಸ್ತಿ”ಯನ್ನು ಈ ಬಾರಿ ಉಪನ್ಯಾಸಕರು ಹಾಗೂ ಲೇಖಕರಾದ ಪ್ರತಿಮಾ ಹರೀಶ್ ರೈರವರಿಗೆ ಶನಿವಾರ ಪ್ರದಾನ ಮಾಡಲಾಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಆಯೋಜಿತ ಪ್ರಶಸ್ತಿ ಪ್ರದಾನ ಮತ್ತು ಜಲಜಾ ಶೇಖರ್ ಹಾಗೂ ಜೆ.ಸಿ.ಶೇಖರ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ, ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಸ್ಥರು ಹಾಗೂ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕøತೆ ಪ್ರೊ.ನಯನ ಕಶ್ಯಪ್ ಅವರು, “ಅಂತರಗಂಗೆ” ಅಂಕಣ ಬರಹಗಳ ಪುಸ್ತಕವನ್ನು ರಚಿಸಿರುವ ಪ್ರತಿಮಾ ಹರೀಶ್ ರೈ ಅವರಿಗೆ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಮನೆ ಮನಗಳಲ್ಲಿ ಕನ್ನಡಕ್ಕಿರಲಿ ಆದ್ಯತೆ- ಕಾರ್ಯಕ್ರಮವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿದ ಪೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೇಜರ್ ಡಾ. ರಾಘವ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ…

Read More

ಮಡಿಕೇರಿ NEWS DESK ಏ.11 : ವಿರಾಜಪೇಟೆ ಸಮೀಪದ ಬೇತ್ರಿ ಗ್ರಾಮದ ಕಾಫಿ ತೋಟವೊಂದರಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಕಾಫಿ ತೋಟದಲ್ಲಿ ಪತ್ತೆಯಾದ ನವಜಾತ ಹೆಣ್ಣು ಶಿಶುವನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಕ್ಷಿಸಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಶಿಶುಗಳ ತುರ್ತು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಶುವಿನ ಪೋಷಕರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

Read More

ಮಡಿಕೇರಿ ಏ.11 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.12ರಂದು ನಡೆಯುವ ಪಂದ್ಯಗಳು. *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಬೊಳಂದಂಡ ಮತ್ತು ಮುಂಡಂಡ, 10ಕ್ಕೆ ಪಡೆಯೆಟ್ಟಿರ ಮತ್ತು ಮಂದತಂಡ, 11ಕ್ಕೆ ಕಲ್ಲೇಂಗಡ (ಬೇಳೂರು) ಮತ್ತು ಮಾದೆಯಂಡ (ಎಂ.ಬಾಡಗ), ಮಧ್ಯಾಹ್ನ 1ಕ್ಕೆ ಕೊಚ್ಚೆರ ಮತ್ತು ಕೈಪಟ್ಟಿರ, 2ಕ್ಕೆ ಅಜ್ಜಿಕುಟ್ಟಿರ ಮತ್ತು ಚೆನ್ನಪಂಡ, 3ಕ್ಕೆ ಬೊಳ್ಳೇರ ಮತ್ತು ಪಟ್ಟಡ (ಬೇಟೋಳಿ) ಹಾಗೂ ಸಂಜೆ 4 ಗಂಟೆಗೆ ಪೆಬ್ಬಟ್ಟಿರ ಮತ್ತು ಕೀತಿಯಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಮೂಕೊಂಡ ಮತ್ತು ಮೇದುರ, 10ಕ್ಕೆ ಕರವಟ್ಟಿರ ಮತ್ತು ಮಾಚೆಟ್ಟಿರ (ಬಾಳುಗೋಡು), 11ಕ್ಕೆ ಬೊಳ್ಳಚೆಟ್ಟಿರ ಮತ್ತು ಕೊಕ್ಕೆಂಗಡ, ಮಧ್ಯಾಹ್ನ 12ಕ್ಕೆ ಪುಟ್ಟಿಚಂಡ (ಬೊಳ್ಳರಿಮಾಡ) ಮತ್ತು ಬಾಚಿರ, 1ಕ್ಕೆ ಕೊಳುವಂಡ ಮತ್ತು ಆಟ್ರಂಗಡ, 2ಕ್ಕೆ ಮೋಟನಾಳಿರ ಮತ್ತು ಗಾಂಡಂಗಡ ಹಾಗೂ 3 ಗಂಟೆಗೆ ಕೈಬಿಲಿರ ಮತ್ತು ಕುಟ್ಟಂಡ (ಅಮ್ಮತಿ)

Read More

ಮಡಿಕೇರಿ NEWS DESK ಏ.11 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.11ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಕಟ್ಟೇರ (ಅರಮೇರಿ) ಮತ್ತು ಅಮ್ಮಾಟಂಡ ತಂಡಗಳ ನಡುವಿನ ಹಣಾಹಣಿಯಲ್ಲಿ ಅಮ್ಮಾಟಂಡ 7 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಟ್ಟೇರ 6 ಓವರ್ ಗಳಲ್ಲಿ 5 ವಕೆಟ್ 73 ರನ್ ಗಳನ್ನು ಸೇರಿಸಿತು. ಅಮ್ಮಾಟಂಡ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 77 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು. ಪಾಲಂದಿರ ಮತ್ತು ಹೊಟ್ಟೆಂಗಡ ನಡುವಿನ ಪಂದ್ಯದಲ್ಲಿ ಪಾಲಂದಿರ 58 ರನ್‌ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಲಂದಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 140 ರನ್ ಗಳನ್ನು ಗಳಿಸಿತು. ಹೊಟ್ಟೆಂಗಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 82 ರನ್…

Read More