ವಿರಾಜಪೇಟೆ, NEWS DESK ಸೆ.10: ಶ್ರೇಷ್ಠ ಶಿಕ್ಷಣತಜ್ಞ ಹಾಗೂ ತತ್ವಜ್ಞಾನಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಹುಟ್ಟುಹಬ್ಬದ ಸ್ಮರಣಾರ್ಥ ಶಿಕ್ಷಕರ ದಿನಾಚರಣೆಯನ್ನು ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳ ವತಿಯಿಂದ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಪ್ರತಿಯೊಬ್ಬ ಶಿಕ್ಷಕರ ವ್ಯಕ್ತಿತ್ವ ಹಾಗೂ ವಿಶೇಷ ಗುಣಗಳಿಗೆ ಹೊಂದುವಂತಹ ವಿಶೇಷ ಬಿರುದುಗಳನ್ನು ನೀಡಿ, ಉಡುಗೊರೆಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಿ ಆಸೀನರಾಗಲು ಕರೆ ನೀಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಬಿ.ಎಸ್., ಕಾರ್ಯದರ್ಶಿ ವಿನೋದ್ ಪಿ.ಎನ್., ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು. ಹಾಗೂ ಸಂಯೋಜಕಿ ಅಮೃತ ಅರ್ಜುನ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 10ನೇ ತರಗತಿಯ ವಿದ್ಯಾರ್ಥಿನಿಯರಾದ ಹನಿಯಾ ಎ. ಹಾಗೂ ಆಯಿಷಾ ಅವರು ಸ್ವಾಗತ ಭಾಷಣ ನೆರವೇರಿಸಿದರು. ಶಿಕ್ಷಕರಿಗಾಗಿ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಕಿಯರ ನೇತೃತ್ವದಲ್ಲಿ ನಾಲ್ಕು ಗುಂಪುಗಳನ್ನು ರಚಿಸಿ ಥ್ರೋಬಾಲ್, ನಿಧಿ ಬೇಟೆ ಸೇರಿದಂತೆ…
ಲೇಖಕ: admin
ಮಡಿಕೇರಿ, NEWS DESK ಸೆ.10: “ರಕ್ತದಾನ – ಜೀವದಾನ” ಎಂಬ ಸಂದೇಶದೊಂದಿಗೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯ NCC, NSS ಹಾಗೂ ಯುವ ರೆಡ್ ಕ್ರಾಸ್ (YRC) ಘಟಕಗಳ ಸಂಯುಕ್ತ ಆಶ್ರಯದಲ್ಲಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಗುರುವಾರ ಬೃಹತ್ ರಕ್ತದಾನ ಶಿಬಿರ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ಒಟ್ಟು 65 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ. ಮಾತನಾಡಿ, “ನಿಮ್ಮ ಒಂದು ರಕ್ತದ ಹನಿ ಮತ್ತೊಬ್ಬರ ಬದುಕಿನ ಹೊಸ ಅಧ್ಯಾಯಕ್ಕೆ ನಾಂದಿಯಾಗುತ್ತದೆ” ಎಂದು ಹೇಳಿದರು. ರಕ್ತದಾನವು ಜಾತಿ, ಧರ್ಮ, ಭಾಷೆಯ ಭೇದವಿಲ್ಲದೆ ಮತ್ತೊಂದು ಜೀವಕ್ಕೆ ಜೀವದಾನ ಮಾಡುವ ಶ್ರೇಷ್ಠ ಮಾನವೀಯ ಸೇವೆಯಾಗಿದೆ. ಯುವಶಕ್ತಿ ಸಮಾಜದಲ್ಲಿ ಬದಲಾವಣೆ ತರುವ ಸಾಮರ್ಥ್ಯ ಹೊಂದಿದ್ದು, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಳೇ ವಿದ್ಯಾರ್ಥಿ…
ಭಾಗಮಂಡಲ, NEWS DESK ಸೆ.10: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ನಾಪೋಕ್ಲುವಿನಲ್ಲಿ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದ ಬಾಲಕರ ತಂಡ ದ್ವಿತೀಯ ಸ್ಥಾನ, ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಪ್ರಾಥಮಿಕ ವಿಭಾಗದಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದೆ. ಈ ಮೂಲಕ ಶಾಲೆಯ ವಿದ್ಯಾರ್ಥಿಗಳು ಮಂಡ್ಯದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ನಿಲಯ ಪಾಲಕರಾದ ದೀಪಕ್ ಕೆ.ಕೆ. ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪವನ್ ಸಾಗರ್ ಸಂತಸ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಡಿಕೇರಿ, NEWS DESK ಸೆ. 10 – ಶಿಕ್ಷಕರ ವೖತ್ತಿಯು ಸಮಾಜದಲ್ಲಿ ಪುಣ್ಯದ ಕೆಲಸವಾಗಿದ್ದು, ಈ ವೖತ್ತಿಯಲ್ಲಿ ತೊಡಗಿಸಿಕೊಂಡವರನ್ನು ಸಮಾಜ ಗೌರವಿಸಬೇಕೆಂದು ನಿವೖತ್ತ ಮುಖ್ಯೋಪಾಧ್ಯಾಯ ಮತ್ತು ಸಾಹಿತಿ ಬಾರಿಯಂಡ ಜೋಯಪ್ಪ ಕರೆ ನೀಡಿದ್ದಾರೆ. ನಗರದಲ್ಲಿ ರೋಟರಿ ವುಡ್ಸ್ ವತಿಯಿಂದ ಆಯೋಜಿತ ಶಿಕ್ಷಕರ ದಿನಾಚರಣೆ ಅಂಗವಾಗಿನ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ನೆರವೇರಿಸಿ ಮಾತನಾಡಿದ ಬಿ. ಆರ್. ಜೋಯಪ್ಪ, ಶಿಕ್ಷಕರಿಗೆ ದಿನನಿತ್ಯ ಸಮಾಜದ ಜನರಿಂದ ಮತ್ತು ವಿದ್ಯಾಥಿ೯ಗಳಿಂದ ದೊರಕುವ ಗೌರವಪೂವ೯ಕವಾಗಿನ ನಮಸ್ಕಾರ ಸಮಾಜದ ಇತರ ವೖತ್ತಿಯಲ್ಲಿ ಇರುವವರಿಗೆ ದೊರಕುವುದಿಲ್ಲ. ಶಿಕ್ಷಕರನ್ನು ಜನತೆ ಸದಾ ಗೌರವ ಭಾವದಿಂದಲೇ ಕಾಣುತ್ತಾರೆ. ಹೀಗಿರುವಾಗ ಶಿಕ್ಷಕರು ಕೂಡ ತಮ್ಮ ವೖತ್ತಿ ಗೌರವವನ್ನು ಉಳಿಸಿಕೊಳ್ಳುವಂತೆ ಕರೆ ನೀಡಿದರು. ಪಾಠದಂತೆ ಪಠ್ಯೇತರ ಚಟುವಟಿಕೆಗಳಿಗೂ ಶಾಲೆಗಳಲ್ಲಿ ಪ್ರಾಮುಖ್ಯತೆ ನೀಡಿ ಎಂದು ಸಲಹೆ ನೀಡಿದ ಜೋಯಪ್ಪ, ಶಾಲೆಗಳಲ್ಲಿ ಸಾಹಿತ್ಯಿಕ ಕಾಯ೯ಕ್ರಮಗಳನ್ನು ಹೆಚ್ಚು ಆಯೋಜಿಸುವ ಮೂಲಕ ವಿದ್ಯಾಥಿ೯ಗಳಲ್ಲಿನ ಸೖಜನಶೀಲತೆಗೆ ಪ್ರೋತ್ಸಾಹ ನೀಡಬೇಕೆಂದು ಹೇಳಿದರು. ಹಿಂದಿನ ಕಾಲದಲ್ಲಿ ಗುರುಗಳಿಗೆ ದೊರಕುತ್ತಿದ್ದ ಗೌರವ ಮಯಾ೯ದೆ ಈಗಿನ ಕಾಲದಲ್ಲಿ ವಿದ್ಯಾಥಿ೯ಗಳಿಂದ…
ಸುoಟಿಕೊಪ್ಪ NEWS DESK ಸೆ.10 : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಮತ್ತು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿüವೃದ್ಧಿ ಸಂಘ ಕೊಡಗು ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.12 ರಂದು ಕುಶಾಲನಗರದ ಕೇರಳ ಸಮಾಜಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶಕ್ತಿ ದಿನಪತ್ರಿಕೆ ಸಂಪಾದಕ ಜಿ.ಚಿದ್ವಿಲಾಸ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ., ಕೊಡಗು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಟಿ.ಜಿ.ಸತೀಶ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ವೇವ್ ಸಂಘಟನೆಯ ಸಂಚಾಲಕ ಕೆ.ಎ.ಲತೀಫ್, ಕೇರಳ ಸಮಾಜದ ಅಧ್ಯಕ್ಷ ಪಿ.ರವೀಂದ್ರನ್, ಕೊಡಗು ಪತ್ರಕರ್ತರ ಸಂಘದ ಖಜಾಂಚಿ ಹಾಗೂ ಕಾರ್ಯಕ್ರಮದ ಸಂಚಾಲಕ ಟಿ.ಕೆ.ಸಂತೋಷ್, ದತ್ತಿ ಪ್ರಶಸ್ತಿ ದಾನಿಗಳಾದ ಕೊರವಂಡ ವಸಂತಿ ಪೊನ್ನಪ್ಪ, ಕೊರವಂಡ ಪೊನ್ನಪ್ಪ ಪಾಲ್ಗೊಳ್ಳಲಿದ್ದಾರೆ. ಕುಶಾಲನಗರ ತಾಲೂಕು ಮಟ್ಟದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿಯಲ್ಲಿ…
ಮಡಿಕೇರಿ NEWS DESK ಸೆ.10 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ನ.26 ರಂದು ಭಾರತೀಯ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಯನ್ನು ಆಚರಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್ನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಬುಡಕಟ್ಟು ಸ್ಥಾನಮಾನ ಸೇರಿದಂತೆ ಕೊಡವರ 10 ಪ್ರಮುಖ ಸಂವಿಧಾನಿಕ ಬೇಡಿಕೆಗಳ ಹೋರಾಟವನ್ನು ಹೊಸ ಹುರುಪಿನಿಂದ ಪುನರುಜ್ಜೀವನಗೊಳಿಸುವ ಕುರಿತು ಐತಿಹಾಸಿಕ ಘೋಷಣೆ ಮತ್ತು ನಿರ್ಣಯ ಅಂಗೀಕರಿಸಲಾಗುವುದು. ಕಾರ್ಯಕ್ರಮದಲ್ಲಿ ಖ್ಯಾತ ಮಾನವಶಾಸ್ತçಜ್ಞರು, ನ್ಯಾಯಶಾಸ್ತçಜ್ಞರು ಹಾಗೂ ಸಂವಿಧಾನ ತಜ್ಞರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಿಎನ್ಸಿ ಕಳೆದ 36 ವರ್ಷಗಳಿಂದ ಕೊಡವರ ಹಕ್ಕುಗಳು ಮತ್ತು ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದು, ಸಂವಿಧಾನದ 244 ಮತ್ತು 371ನೇ ವಿಧಿಗಳು ಹಾಗೂ 5, 6 ಮತ್ತು 8ನೇ ಪರಿಚ್ಛೇದಗಳ ಅಡಿಯಲ್ಲಿ ಕೊಡವಲ್ಯಾಂಡ್ಗೆ ವಿಶೇಷ ಸ್ಥಾನಮಾನ, ಸ್ವ-ಆಡಳಿತ ಮತ್ತು ಆಂತರಿಕ ಸ್ವ-ನಿರ್ಣಯದ ಹಕ್ಕುಗಳನ್ನು…
ಮಡಿಕೇರಿ NEWS DESK ಸೆ.10 : ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದರ ಜೊತೆಗೆ ತುಳು ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸುವ ಕುರಿತು ಸರ್ಕಾರ ತಕ್ಷಣ ನಿರ್ಧಾರ ಕೈಗೊಳ್ಳಬೇಕು ಎಂದು ವಿಶ್ವ ತುಳುವ ಮಹಾಸಭಾ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಚುನಾವಣಾ ಪೂರ್ವದಲ್ಲಿ ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ನೀಡುವುದಾಗಿ ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ನೀಡಿರುವ ಮಹತ್ವದ ಆಶ್ವಾಸನೆಯನ್ನು ಈಡೇರಿಸಬೇಕು ಎಂದು ಕೊಡಗು ಜಿಲ್ಲಾ ತುಳು ಮಹಾಸಭಾ ಘಟಕದ ಅಧ್ಯಕ್ಷ ಬಿ.ಬಿ.ಐತಪ್ಪ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೀವ ಲೋಚನ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ಪಿ.ಎಂ.ರವಿ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ತುಳು ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಸ್ವಂತ ಲಿಪಿ ಮತ್ತು ಕ್ಯಾಲೆಂಡರ್ ಹೊಂದಿರುವ ಶ್ರೀಮಂತ ಭಾಷೆಯಾಗಿದೆ. ಜಗತ್ತಿನಾದ್ಯಂತ ಎರಡು ಕೋಟಿಗೂ ಅಧಿಕ ತುಳು ಭಾಷಿಕರಿದ್ದು, ತುಳು…
ಮಡಿಕೇರಿ NEWS DESK ಸೆ.10 : ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದರ ಜೊತೆಗೆ ತುಳು ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸುವ ಕುರಿತು ಸರ್ಕಾರ ತಕ್ಷಣ ನಿರ್ಧಾರ ಕೈಗೊಳ್ಳಬೇಕು ಎಂದು ವಿಶ್ವ ತುಳುವ ಮಹಾಸಭಾ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಚುನಾವಣಾ ಪೂರ್ವದಲ್ಲಿ ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ನೀಡುವುದಾಗಿ ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ನೀಡಿರುವ ಮಹತ್ವದ ಆಶ್ವಾಸನೆಯನ್ನು ಈಡೇರಿಸಬೇಕು ಎಂದು ಕೊಡಗು ಜಿಲ್ಲಾ ತುಳು ಮಹಾಸಭಾ ಘಟಕದ ಅಧ್ಯಕ್ಷ ಬಿ.ಬಿ.ಐತಪ್ಪ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೀವ ಲೋಚನ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ಪಿ.ಎಂ.ರವಿ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ತುಳು ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಸ್ವಂತ ಲಿಪಿ ಮತ್ತು ಕ್ಯಾಲೆಂಡರ್ ಹೊಂದಿರುವ ಶ್ರೀಮಂತ ಭಾಷೆಯಾಗಿದೆ. ಜಗತ್ತಿನಾದ್ಯಂತ ಎರಡು ಕೋಟಿಗೂ ಅಧಿಕ ತುಳು ಭಾಷಿಕರಿದ್ದು, ತುಳು…
ಗೋಣಿಕೊಪ್ಪ NEWS DESK ಸೆ.10 : ಶಿಕ್ಷಕರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ವತಿಯಿಂದ ಶಾಲೆಯ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಶಿಕ್ಷಕರಿಗೆ ವಿಶೇಷ ಗೌರವ ಸಲ್ಲಿಸುವ ಉದ್ದೇಶದಿಂದ ಶಾಲೆಯ ದ್ವಾರದಿಂದಲೇ ಭವ್ಯ ಸ್ವಾಗತ ಮೆರವಣಿಗೆ ಆಯೋಜಿಸಲಾಗಿತ್ತು. ಎಸ್ಡಿಎಂಸಿ ಸದಸ್ಯರು ಆರತಿ ತಟ್ಟೆ ಹಿಡಿದು ಮೆರವಣಿಗೆಯ ಮುಂಭಾಗದಲ್ಲಿ ಸಾಗಿದರು. ಶಾಲೆಯ ಲೀಡರ್ಸ್ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿ, ಶಿಕ್ಷಕರಿಗೆ ಪುಷ್ಪವೃಷ್ಟಿ ಸುರಿಸುತ್ತಾ ವೇದಿಕೆಯತ್ತ ಕರೆತಂದರು. ವೇದಿಕೆಯ ಮುಂಭಾಗದಲ್ಲಿ ಶಿಕ್ಷಕರಿಗೆ ಆರತಿ ಬೆಳಗಿ, ತಿಲಕ ಹಚ್ಚುವ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಅಧ್ಯಕ್ಷತೆಯಲ್ಲಿ ಡಮರುಗ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಶಿಕ್ಷಕ ಹೆಚ್.ಕೆ. ಕುಮಾರ್ ಸೇರಿದಂತೆ ಶಿಕ್ಷಕರಾದ ಜೋಸ್ಲಿಯ, ಇಂದಿರಾ, ದಮಯಂತಿ, ಅನಿತಾಕುಮಾರಿ, ಯಸ್ವಿನಿ, ಅರ್ಷಿಯ, ಕ್ಲೆಮೆಂಟಿನ್, ಸಹನಾ, ಶಾರದಾ, ನಾಗರಾಜು, ಸ್ನೇಹ ಕಾವೇರಮ್ಮ, ಮಂಜುಳಾ, ಸಿದ್ದರಾಜು, ಪೂಜಾ ಹಾಗೂ ಪಾರ್ವತಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಜಗದೀಶ್ ಜೋಡುಬೀಟಿ,…
ಗೋಣಿಕೊಪ್ಪ NEWS DESK ಸೆ.10: ಅರುವತೋಕ್ಲುವಿನ ಸರ್ವದೈವತ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪೊನ್ನಂಪೇಟೆ ತಾಲೂಕು ಮಟ್ಟದ ಥ್ರೋಬಾಲ್ ಕ್ರೀಡಾಕೂಟದಲ್ಲಿ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿರುತ್ತಾರೆ.






