ಮಡಿಕೇರಿ ಮೇ 23 NEWS DESK : ಕೊಡಗಿನ ಪತ್ರಕರ್ತ ಪ್ರಶಾಂತ್ ವಿರಚಿತ “ಹೊನ್ನಮ್ಮನ ಕನಸು” ಕಾದಂಬರಿ ವಿಶ್ವ ಕನ್ನಡ ಸಮ್ಮೇಳನದ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಭಾಜನವಾಗಿದೆ. ಚೇತನ ಪ್ರತಿಷ್ಠಾನ ಹಾಗೂ ಗೋವಾ ಕನ್ನಡಿಗರ ಒಕ್ಕೂಟ ಆಯೋಜಿಸುತ್ತಿರುವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಭಾನುವಾರ ಗೋವಾದ ಪಣಜಿಯ ಕಡಲ ತೀರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಅದ್ದೂರಿಯಾಗಿ ನಡೆಯಲಿದೆ. ಖ್ಯಾತ ಚಿತ್ರ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ಡಾ.ರಾಜಶೇಖರ್ ಮಠಪತಿ, ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರು, ಸೇರಿದಂತೆ ಹಲವು ಗಣ್ಯರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪರ್ತಕರ್ತ ಪ್ರಶಾಂತ್ ವಿಶ್ವವಾಣಿ ಪತ್ರಿಕೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊನ್ನಮ್ಮನ ಕನಸು ಕಾದಂಬರಿ ದೃಷ್ಟಿ ಕಳೆದುಕೊಂಡು ವೃದ್ದೆಯೊಬ್ಬರ ಮೂಕರೋಧನೆಯನ್ನು ಒಳಗೊಂಡಿದೆ. ಬಾಳ ಹಾದಿಯಲಿ…
ಲೇಖಕ: admin
ಮಡಿಕೇರಿ ಮೇ 23 NEWS DESK : ಮಹಿಳೆಯರು ವಿಜ್ಞಾನ, ತಂತ್ರಜ್ಞಾನ, ಸಾಹಿತ್ಯ, ಸಂಗೀತ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ತಂದೆ ತಾಯಿಯರನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುವ ಹೆಣ್ಣು ಮಕ್ಕಳು, ಅತ್ತೆ ಮಾವಂದಿರನ್ನು ಅದೇ ರೀತಿ ಅಷ್ಟೇ ಚೆನ್ನಾಗಿ ನೋಡಿಕೊಳ್ಳಬೇಕು, ಆಗ ಸಂಸಾರ ಮತ್ತು ಸಂಬಂಧಕ್ಕೆ ಒಂದು ಅರ್ಥ ಬರುತ್ತದೆಂದು ಸೆಸ್ಕ್ ನಿರ್ದೇಶಕ(ತಾಂತ್ರಿಕ)ರಾಗಿರುವ ಶರಣಮ್ಮ ಎಸ್.ಜಂಗಿನರವರು ಕಿವಿಮಾತು ಹೇಳಿದರು. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ನಗರದ ಗಾಂಧಿ ಭವನದಲ್ಲಿ ಆಯೋಜಿತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಣ್ಣು ಮಕ್ಕಳು ಮನೆ ಹಾಗೂ ಕಚೇರಿ ಕೆಲಸಗಳೆರಡಕ್ಕೂ ಅಗತ್ಯ ಜಾಗವನ್ನು ನೀಡಿ ನಿಭಾಯಿಸುತ್ತಾರೆ. ಮಹಿಳೆ ತನ್ನ ಸಹನೆ ಮತ್ತು ಪ್ರೀತಿಯಿಂದಲೇ ಎಲ್ಲವನ್ನೂ ನಿಬಾಯಿಸುತ್ತಾಳೆÉಂದು ಹೆಣ್ಣು ಮಕ್ಕಳ ಬಗ್ಗೆ ಹೆಮ್ಮೆಯಿಂದ ಹೇಳಿದರು. ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಡಳಿತಾಧಿಕಾರಿ ಪ್ರಭಾವತಿ ಕೆ.ಎಚ್. ಮಾತನಾಡಿ, ಮಹಿಳೆಯರು ಅಬಲೆಯಲ್ಲ, ಸಬಲೆ. ಏನೇ ಸಮಸ್ಯೆ ಇದ್ದರೂ…
ಮಡಿಕೇರಿ ಮೇ 23 NEWS DESK : ಆಡಳಿತ ಪಕ್ಷದೊಳಗಿನ ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಉತ್ತಮ ಆಡಳಿತದ ನಿರೀಕ್ಷೆಯಲ್ಲಿ ಬಹುಮತ ನೀಡಿದ ಜನರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎ.ಎಸ್.ಪ್ರಕಾಶ್ ಆಚಾರ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಳೆಗಾಲ ಸಮೀಪಿಸಿದರೂ ನಗರಸಭೆಯಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಮಡಿಕೇರಿ ಶಾಸಕರು 6.50 ಕೋಟಿ ರೂ. ವಿಶೇಷ ಅನುದಾನವನ್ನು ತಂದಿದ್ದು, ಈ ಹಣದಿಂದ ಕಾಮಗಾರಿ ನಡೆಯುತ್ತಿದೆ. ನಗರೋತ್ಥಾನದ ಕಾಮಗಾರಿಗಳು ಕೂಡ ಈಗಿನ ಶಾಸಕರ ಆಸಕ್ತಿಯಿಂದ ನಡೆಯುತ್ತಿದೆ. ಶಾಸಕರು ನಗರದ ಅಭಿವೃದ್ಧಿಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಈ ಹಿಂದೆ ಇದ್ದ ಶಾಸಕರು ನಗರಸಭೆಗೆ ಯಾವುದೇ ವಿಶೇಷ ಅನುದಾನವನ್ನು ತಂದಿಲ್ಲವೆಂದು ಟೀಕಿಸಿದರು. ಮಳೆಗಾಲ ಸಮೀಪಿಸಿದರೂ ನಗರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ತಡೆಗೋಡೆ ಮತ್ತು ರಸ್ತೆಗಳ ಕಾಮಗಾರಿ ಆರಂಭಗೊಂಡಿಲ್ಲ. ತೋಡು ಮತ್ತು ಚರಂಡಿಗಳ ಸ್ವಚ್ಛತಾ ಕಾರ್ಯ ನಡೆದಿಲ್ಲ.…
ಮಡಿಕೇರಿ ಮೇ 23 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಮೊದಲ ಬಾರಿಗೆ ಮೃತ ದಾನಿಯಿಂದ ಅಂಗಾಂಗ ಸಂಗ್ರಹಣೆ ಯಶಸ್ವಿಯಾಗಿ ನೆರವೇರಿದ್ದು, ಕೊಡಗು ಜಿಲ್ಲೆಯ ವೈದ್ಯಕೀಯ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿದೆ. ಗೋಣಿಕೊಪ್ಪ ಸಮೀಪದ ಅರವತ್ತೋಕ್ಲು ಗ್ರಾಮದ 46 ವರ್ಷದ ಡಾಲು ಅವರು ಅಪಘಾತದಲ್ಲಿ ತೀವ್ರ ತಲೆಗೆ ಗಾಯಗೊಂಡು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ವೈದ್ಯರು ಬ್ರೇನ್ಸ್ಟೆಮ್ ಡೆತ್ ಶಂಕೆ ವ್ಯಕ್ತಪಡಿಸಿದರು. ಭಾರತೀಯ ಕಾನೂನು ಪ್ರಕಾರ ಎರಡು ಹಂತಗಳಲ್ಲಿ ವೈದ್ಯಕೀಯ ಸಮಿತಿಯಿಂದ ಪರೀಕ್ಷೆ ನಡೆಸಿ, 48 ಗಂಟೆಗಳ ವೀಕ್ಷಣೆಯ ಬಳಿಕ ಬ್ರೇನ್ಸ್ಟೆಮ್ ಡೆತ್ ದೃಢಪಡಿಸಲಾಯಿತು. ಈ ಸಂದರ್ಭದಲ್ಲಿ ಡಾಲು ಅವರ ಪತ್ನಿ ರಾಜೇಶ್ವರಿ ಹಾಗೂ ಕುಟುಂಬ ಸದಸ್ಯರು ಮಹತ್ವದ ಮಾನವೀಯ ನಿರ್ಧಾರ ಕೈಗೊಂಡು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಈಗಾಗಲೇ SOTTO ಹಾಗೂ NOTTO ಮಾನ್ಯತೆ ಪಡೆದಿರುವ ಹಿನ್ನೆಲೆ, ಪ್ರಕರಣವನ್ನು ರಾಜ್ಯ ಅಂಗಾಂಗ ಮತ್ತು SOTTO ಗೆ…
ಮಡಿಕೇರಿ ಮೇ 23 NEWS DESK : ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ಆದಿವಾಸಿಗಳು ವಾಸವಿರುವ ಪ್ರದೇಶದಲ್ಲಿ ಚರ್ಚ್ ನಡೆಸಲೆಂದು ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ಸಮಾಜ ಕಲ್ಯಾಣ ಇಲಾಖೆ ವಶಕ್ಕೆ ಪಡೆದು, ಸರಕಾರಿ ಕಾರ್ಯಚಟುವಟಿಕೆಗಳಿಗೆ ಬಳಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದನ್ನು ಸ್ವಾಗತಿಸುವುದಾಗಿ ಹೇರೂರು ಗ್ರಾಮಸ್ಥರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಯುವ ಮೋರ್ಚಾದ ಪ್ರಮುಖ ಹಾಗೂ ಗ್ರಾಮಸ್ಥ ಚಂದ್ರಶೇಖರ್ ಹೇರೂರು ಅವರು ಅನಾರೋಗ್ಯಪೀಡಿತರಾಗುವ ಆದಿವಾಸಿಗಳನ್ನು ಗುಣಮುಖರನ್ನಾಗಿ ಮಾಡುವ ನೆಪದಲ್ಲಿ ಮನಪರಿವರ್ತಿಸಿ ಮತಾಂತರ ಮಾಡಲಾಗುತ್ತಿದೆ. ಆದಿವಾಸಿಗಳು ಹೆಚ್ಚು ಅನಾರೋಗ್ಯಕ್ಕೆ ತುತ್ತಾಗುತ್ತಿರುವುದರಿಂದ ಈ ಭಾಗದಲ್ಲಿರುವ ಹಾಡಿ ಜನರಿಗೆ ಆರೋಗ್ಯ ಸೇವೆಯನ್ನು ಕಲ್ಪಿಸಲು ಆಸ್ಪತ್ರೆಯನ್ನು ಆರಂಭಿಸಬೇಕು ಎಂದು ಮನವಿ ಮಾಡಿದರು. ಹೇರೂರು ಹಾಡಿಯಲ್ಲಿ 380ಕ್ಕೂ ಹೆಚ್ಚಿನ ಆದಿವಾಸಿಗಳು ನೆಲೆಸಿದ್ದಾರೆ. ಇಲ್ಲಿಗೆ ನಾಕೂರು ಶಿರಂಗಾಲ ಗ್ರಾಮ ಪಂಚಾಯ್ತಿಯಿಂದ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೌಲಭ್ಯ, ಶೌಚಾಲಯಗಳನ್ನು ಒದಗಿಸಲಾಗಿದೆ. ಇವರುಗಳು ವಾಸಿಸುತ್ತಿರುವ ಪ್ರದೇಶ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ್ದಾಗಿದೆ. ಮುಗ್ಧ ಆದಿವಾಸಿಗಳನ್ನು ಹಣಕಾಸಿನ ನೆರವನ್ನು ನೀಡುವ ಆಮಿಷಗಳನ್ನೊಡ್ಡಿ…
ವಿರಾಜಪೇಟೆ ಮೇ 22 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ರಾಮನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗಿನ ಪ್ರತಿಷ್ಟಿತ ನಾಟ್ಯಂಜಲಿ ನೃತ್ಯ ಸಂಸ್ಥೆಯ ಗುರು ಕಾವ್ಯಶ್ರೀ ಕಾಂತ್ರಾಜ್ ಹಾಗೂ ಅವರ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ “ಕರ್ನಾಟಕ ಕನ್ನಡ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾವ್ಯಶ್ರೀ ಪ್ರಸ್ತುತ ಮಡಿಕೇರಿಯ ಸಂತ ಜೋಸೆಫರ ಪ್ರೌಢ ಶಾಲೆಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾವ್ಯಶ್ರೀ ಅಮ್ಮತ್ತಿ ಬಿಳುಗುಂದ ಗ್ರಾಮದ ಶಿಕ್ಷಕಿ ಹೇಮಾವತಿ ಹಾಗೂ ಕಾಂತ್ರಾಜ್ ದಂಪತಿಯ ಪುತ್ರಿ. ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ನೃತ್ಯ ಸಂಸ್ಥೆಯ ಮಾಲೀಕರಾದ ಮಹೇಶ್ ಅವರ ಪತ್ನಿ.
ವಿರಾಜಪೇಟೆ ಮೇ 22 NEWS DESK : ಕೊಡಗು ವಿಶ್ವವಿದ್ಯಾನಿಲಯದ ಚಿಕ್ಕ ಅಳುವಾರದಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಯುವ ವೈಭವ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ 88 ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನವನ್ನು ತೋರುವ ಮೂಲಕ ಸಮಗ್ರ ವಿನ್ನರ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ರಂಗೋಲಿಯಲ್ಲಿ ದ್ವಿತೀಯ ಸ್ಥಾನ, ಸೆಲ್ಫಿ ಪಾಯಿಂಟ್ ನಲ್ಲಿ ದ್ವಿತೀಯ , ಕ್ಲಿಕ್ ಕ್ಯಾಂಡಿಡ್ ನಲ್ಲಿ ಪ್ರಥಮ, ಬೆಸ್ಟ್ ಮ್ಯಾನೇಜರ್ ನಲ್ಲಿ ಪ್ರಥಮ, ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಫ್ಯೂಷನ್ ಡ್ಯಾನ್ಸ್ ನಲ್ಲಿ ದ್ವಿತೀಯ, ವಿಜ್ಞಾನ ಮಾದರಿ ರಚನೆಯಲ್ಲಿ ಪ್ರಥಮ, ಪೋಸ್ಟರ್ ನಿರ್ಮಾಣ ಹಾಗೂ ವಿವರಣೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಸಾಧನೆ ಮಾಡಿದ್ದಾರೆ. ಕಾಲೇಜಿನಲ್ಲಿ ಜರುಗಿದ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ. ಫಾ. ಮದಲೈ ಮುತ್ತು ಅವರು, ವಿದ್ಯಾರ್ಥಿಗಳ ಈ ಸಾಧನೆಯು ಅಭಿನಂದನಾರ್ಹವಾಗಿದ್ದು, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಯೂ ಉತ್ತಮವಾದ ಸಾಧನೆಯನ್ನು…
ಸಿದ್ದಾಪುರ ಮೇ.22 NEWS DESK : ಚುನಾವಣೆ ಸಂದರ್ಭ ನೀಡಿದ ಭರವಸೆಯಂತೆ ಅಂದಾಜು 7 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಯೋಜನೆಗಳನ್ನು ಗ್ರಾಮಕ್ಕೆ ನೀಡಿ ನುಡಿದಂತೆ ನಡೆದುಕೊಂಡ ಶಾಸಕ ಡಾ.ಮಂತರ್ ಗೌಡ ಅವರ ಜನಪರ ಕಾಳಜಿಗೆ ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಾಸಕರನ್ನ ಅದ್ದೂರಿಯಾಗಿ ಬರಮಾಡಿಕೊಂಡು ಸನ್ಮಾನಿಸಿ ಗೌರವಿಸಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲು ನೆಲ್ಲಿಹುದಿಕೇರಿ ವಿವಿಧ ವಾರ್ಡುಗಳಿಗೆ ಆಗಮಿಸಿದ ಶಾಸಕರಿಗೆ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರೆ, ಪುರುಷರು, ಯುವಕರು ಸನ್ಮಾನಿಸಿ ಗೌರವಿಸಿ ಸಿಹಿ ಹಂಚಿ ಬರಮಾಡಿಕೊಂಡರು. ಇದೇ ಸಂದರ್ಭ ಮಾತನಾಡಿದ ಶಾಸಕರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆಗಳಿಗೆ ತಲುಪುವಂತೆ ಮಾಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡಿ ಅಭಿವೃದ್ಧಿಯೊಂದಿಗೆ ಸ್ವಾವಲಂಬಿ ಜೀವನ ನಡೆಸಲು ಎಲ್ಲ ರೀತಿಯ ಯೋಜನೆಗಳನ್ನು ನೀಡುತ್ತಿದೆ. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ ನಮ್ಮ ರಾಜ್ಯ…
ಮಡಿಕೇರಿ ಮೇ 22 NEWS DESK : ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ಮಳೆ ಹಾನಿಯಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿ.ನಿ.ಯ ಈ ಕೆಳಗಿನ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್ಅಪ್ ಮೂಲಕ ಪೋಟೋ ಸಂದೇಶವನ್ನು ನೀಡಬಹುದಾಗಿದೆ. ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 18005990061. ಮಡಿಕೇರಿ ತಾಲ್ಲೂಕಿನ ಮಡಿಕೇರಿ, ತಾಳತ್ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598602, ಸಹಾಯಕ/ ಜೂನಿಯರ್ ಎಂಜಿನಿಯರ್ಗಳು ಮಡಿಕೇರಿಗೆ ತೇಜ 9449598603,…
ಮಡಿಕೇರಿ ಮೇ 22 NEWS DESK : ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ, ತೆಂಗಿನ ಚಿಪ್ಪು, ಟೈರು, ಹೂಕುಂಡದಲ್ಲಿ ನೀರು ನಿಲ್ಲದಂತೆ ಗಮನ ಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾರ್ಚ್ 2026ರ ವರೆಗೆ ಜಿಲ್ಲೆಯಲ್ಲಿ ಒಂದು ಪ್ರಕರಣ ಕಂಡು ಬಂದಿದ್ದು, ಸೋಮವಾರಪೇಟೆ ತಾಲ್ಲೂಕಿನ 16,860 ಮಂದಿಯ ರಕ್ತ ಪರೀಕ್ಷೆಯಲ್ಲಿ 1 ಪ್ರಕರಣ ಕಂಡುಬಂದಿದ್ದು, ಗುಣಮುಖರಾಗಿದ್ದಾರೆ ಎಂದರು. ಮಲೇರಿಯ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಶೀಘ್ರ ಪತ್ತೆಗಾಗಿ ರಕ್ತ ಲೇಪನಗಳ ಪರೀಕ್ಷೆ, ಜಿಲ್ಲೆಯ ವಲಸಿಗರ ಮತ್ತು ಹೊರ ರಾಜ್ಯದ ವಲಸಿಗರ ಸಮೀಕ್ಷೆ, ವಿವಿಧ ಕಾರ್ಯಕ್ರಮ ಮೂಲಕ ಜಾಗೃತಿ ಮೂಡಿಸುವುದು, ಮಲೇರಿಯ ಪತ್ತೆಯಾದ…






