ಲೇಖಕ: admin

ಗೋಣಿಕೊಪ್ಪ ಮಾ.13 NEWS DESK : ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಸ್ಪಂದಿಸಿ ಕರಾಟೆ, ನೃತ್ಯ, ಯೋಗ ತರಬೇತಿಗಳನ್ನು ನೀಡಿದ ಶಿಕ್ಷಕರುಗಳನ್ನು ಮತ್ತು ಶಾಲೆಯ ಕಾರ್ಯಕ್ರಮಗಳಿಗೆ ಬಳಸಲು ಅನುಕೂಲಕರವಾದ ಪೋಡಿಯಂ ವಿತರಿಸಿದ ದಾನಿಯ ವೇಣುಗೋಪಾಲ್‍ಕಣ್ಣನ್ ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಕಾರ್ಯಕ್ರಮಗಳಿಗೆ ಅನುಕೂಲಕ್ಕೆ ಅನುವು ಮಾಡಿಕೊಡುವ ಉದ್ದೇಶದೊಂದಿಗೆ ಕಣ್ಣನ್‍ಟೈರ್ಸ್ ಮಾಲೀಕ ವೇಣುಗೋಪಾಲ್ ಕಣ್ಣನ್ ತಮ್ಮ ತಂದೆ ಕಣ್ಣನ್ ಅವರ ಜ್ಞಾಪಕಾರ್ಥವಾಗಿ ಪೋಡಿಯಂ ಅನ್ನು ಶಾಲೆಗೆ ನೀಡಿದರು. ಕಳೆದ ಒಂದು ವರ್ಷಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಯೋಗ ಶಿಕ್ಷಣವನ್ನ ನೀಡಿದ ಯೋಗ ಶಿಕ್ಷಕಿ ನಾಮೇರ ಶರ್ಲಿ ಬೋಪಣ್ಣ, ಕರಾಟೆ ಶಿಕ್ಷಣವನ್ನು ನೀಡಿದ ಕಿಶೋರ್ ಕೆ.ಎ ಮತ್ತು ನೃತ್ಯ ತರಗತಿಯನ್ನು ನೀಡಿದ ವಿಘ್ನೇಶ್ ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್‍ಜೋಡುಬೀಟಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ.ಕುಮಾರ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಶಾಲಾ ಅಭಿವೃದ್ಧಿ…

Read More

ಗೋಣಿಕೊಪ್ಪ ಮಾ.13 NEWS DESK : ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆ ಪ್ರಸ್ತುತ ವಿವಿಧ ಸಾಧನೆಗಳಿಗೆ ಆರು ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿದೆ. ಬಿ.ಎನ್.ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿನ ತಂಡ ಕಳೆದ ಒಂದು ವರ್ಷ ಮಾಡಿದ ಸಾಮಾಜಿಕ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆ ಬಂಟರ ಸಂಘದ ಸಭಾಂಗಣದಲ್ಲಿ ನಡೆದ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಇದರ 25ನೇ ನ್ಯಾಷನಲ್ ಕಾನ್‌ಕೋರ್ಸ್ ವಿಜಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅತ್ಯುತ್ತಮ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮದ ವಿನ್ನರ್ಸ್ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಬಿ.ಎನ್.ಪ್ರಕಾಶ್ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಲೀಜನ್ ಅಧಿಕಾರಿ ರನ್ನರ್ ಪ್ರಶಸ್ತಿಯನ್ನು ಸೀನಿಯರ್ ಪಿಪಿಎಫ್ ಎಂ.ಎಂ.ನಾಗೇಶ್ ಪಡೆದುಕೊಂಡಿದ್ದಾರೆ. ::ಎನ್‌ಡಿ ಶ್ರೇಷ್ಠತೆ ಪ್ರಶಸ್ತಿ :: ಏರಿಯಾ ಡಿ ಗೋಣಿಕೊಪ್ಪಲು ಲೀಜನ್ ಪಾಲಾಗಿದೆ. ಜತೆಗೆ ಗೋಣಿಕೊಪ್ಪ ಸೀರಿಯಲ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆ, ಗಣನೀಯ ಸಾಧನೆಗಾಗಿ ಅಭಿನಂದನಾ ಪ್ರಶಸ್ತಿ ಮತ್ತು ಸ್ಪರ್ಧೆಯ ನಿಯಮ ಪಾಲನಾ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸೀನಿಯರ್ ಪಿಪಿಎಫ್ ಪೊನ್ನಲತಂಡ ಕಿರಣ್ ಪೊನ್ನಪ್ಪ ಅತ್ಯುತ್ತಮ ಲೀಜನ್ ಸದಸ್ಯರನ್ನರ್…

Read More

ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಅಮಾಯಕ ಮಾನವ ಜೀವಗಳು ಬಲಿಯಾಗುತ್ತಿದ್ದರೂ ರಾಜ್ಯ ಸರಕಾರ ಹಾಗೂ ಅರಣ್ಯ ಇಲಾಖೆ ಯಾವುದೇ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಅರಣ್ಯ ಭವನದ ಎದುರು ಪ್ರತಿಭಟನೆ ನಡೆಸಿತು. ಸಮೀಪದ ಹೆದ್ದಾರಿ ತಡೆದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಳೆದ ಎರಡು ವಾರಗಳಲ್ಲಿ ಸಿದ್ದಾಪುರ ವಿಭಾಗದಲ್ಲಿ ಇಬ್ಬರು ವ್ಯಕ್ತಿಗಳು ಹಾಗೂ ಬೆಟ್ಟತ್ತೂರು ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಸಾಲು ಸಾಲು ಸಾವುಗಳು ಸಂಭವಿಸಿದರೂ ಸರಕಾರ ಸಮಸ್ಯೆಯ ಗಂಭೀರತೆಯನ್ನು ಅರಿತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಪೊಲೀಸರ ಬ್ಯಾರಿಕೇಡ್ ಗಳನ್ನು ನೂಕಿ ಅರಣ್ಯ ಭವನದ ಕಚೇರಿಗೆ ನುಗ್ಗಲೆತ್ನಿಸಿದ ಘಟನೆಯೂ ನಡೆಯಿತು. *ಬಂದ್ ಗೂ ಸಿದ್ಧ* ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ 2 ವಾರದ ಅವಧಿಯಲ್ಲಿ ಮೂವರು ಕಾಡಾನೆ ದಾಳಿಗೆ ಬಲಿಯಾಗಿದ್ದರು, ಅರಣ್ಯ ಇಲಾಖೆ ಸೂಕ್ತ ಕ್ರಮ…

Read More

ಸೋಮವಾರಪೇಟೆ NEWS DESK ಮಾ.13 : ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಸರಕಾರ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹಿಸಿದ್ದಾರೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ನಾಡಿನ ಮೊದಲ ಮಹಿಳಾ ಕವಯತ್ರಿ ಅಕ್ಕಮಹಾದೇವಿಯವರು ಈ ಕನ್ನಡ ನಾಡಿನ ಹೆಮ್ಮೆ. ಇವರುಗಳು 12ನೆ ಶತಮಾನದಲ್ಲಿಯೇ ಸಮಾಜದಲ್ಲಿ ಸುಧಾರಣೆ ತರಲು ಪ್ರಯತ್ನಿಸುವುದರೊಂದಿಗೆ ಈ ರಾಷ್ಟ್ರಕ್ಕೆ ಪ್ರಜಾಪ್ರಭುತ್ವದ ಅಡಿಪಾಯ ಹಾಕಿಕೊಟ್ಟ ಮಹಾನಿಯರು ಅಂತಹವರ ಬಗ್ಗೆ ರಮಾಕಾಂತ್ ಎಂಬ ಕಿಡಿಗೇಡಿಯೊಬ್ಬ ಅಸಹ್ಯ ಹಾಗೂ ಆಕ್ಷೇಪಾರ್ಹ ಪದಗಳನ್ನು ಬಳಸಿ ಪೋಸ್ಟ್ ಹಾಕಿರುವುದು ನಾಗರೀಕ ಸಮಾಜ ಸಹಿಸಲು ಸಾಧ್ಯವಿಲ್ಲಾ ಎಂದು ಮಹೇಶ್ ಕೆಡಿಕಾರಿದ್ದಾರೆ, ಆದ್ದರಿಂದ ಸರ್ಕಾರ ಈ ಕಿಡಿಗೇಡಿಯನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಮಾ.12 NEWS DESK : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಸಾಲು ಸಾಲು ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ರಾಜ್ಯ ಸರಕಾರ ಯಾವುದೇ ತುರ್ತು ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದೆ. ಸರಕಾರದ ಈ ನಿರ್ಲಕ್ಷ್ಯ ಮನೋಭಾವವನ್ನು ಸಹಿಸಲು ಸಾಧ್ಯವಿಲ್ಲವೆಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಮೂರು ಅಮಾಯಕ ಜೀವಗಳು ಕಾಡಾನೆ ದಾಳಿಗೆ ಬಲಿಯಾಗಿವೆ. ಇತ್ತೀಚೆಗಷ್ಟೇ ವಿದ್ಯಾರ್ಥಿನಿ ಹಾಗೂ ಮಹಿಳೆಯೋರ್ವರು ಮೃತಪಟ್ಟಿದ್ದು, ಇದೀಗ ಬೆಳೆಗಾರ ಗಣಪತಿ ಅವರು ಕಾಡಾನೆ ದಾಳಿಗೆ ತುತ್ತಾಗಿದ್ದಾರೆ. ಈ ಬೆಳವಣಿಗೆ ಅತ್ಯಂತ ದು:ಖಕರವಾಗಿದ್ದು, ಸರಕಾರ ಸಮಸ್ಯೆಯ ಗಂಭೀರತೆಯನ್ನು ಅರಿಯದೆ ಕೇವಲ ಪರಿಹಾದ ಚೆಕ್ ನೀಡಿ ಕೈತೊಳೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ. ಅರಣ್ಯ ಸಚಿವರು ಕಾಡಾನೆ ಉಪಟಳ ತಡೆಗೆ ಸಂಬಂಧಿಸಿದಂತೆ ಕೇವಲ ಭರವಸೆಗಳನ್ನು ನೀಡುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಕಾರ್ಯಗತಗೊಳ್ಳುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ವನ್ಯಜೀವಿಗಳ ದಾಳಿ…

Read More

ಕುಶಾಲನಗರ ಮಾ.11 NEWS DESK : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಯಾವುದೇ ರೀತಿಯಲ್ಲಿ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಪತ್ರಕರ್ತೆ ಹಾಗೂ ಕೊಡಗು ಜಿಲ್ಲಾ, ಸೌಂದರ್ಯವರ್ಧಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ನಡೆದ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಕೇವಲ ಪ್ರಮಾಣ ಪತ್ರಕ್ಕೆ ಮಾತ್ರ ಸೀಮಿತವಾಗಬಾರದು. ವಯಸ್ಸಿನ ಅಂತರ ಗಮನಿಸದೇ, ಭ್ರಮೆಗಳನ್ನು ತೊರೆದು ಸ್ವಾವಲಂಬಿ ಬದುಕು ಕಾಣುವುದರೊಂದಿಗೆ ಪ್ರತಿಯೊಬ್ಬರೂ ತಮ್ಮನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭ ಮಾತನಾಡಿದ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ಮಹಿಳೆಯ ಸಾಮರ್ಥ್ಯ ಪ್ರತಿಭೆ ಕೇವಲ ನಾಲ್ಕು ಗೋಡೆಗಳಿಗೆ ಸೀಮಿತಗೊಳ್ಳಬಾರದು. ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಉತ್ತಮವಾಗಿ ಕುಟುಂಬ ನಿರ್ವಹಣೆ ಮಾಡುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ…

Read More

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ ನ್ಯಾಯ ದೊರಕಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ. ಕುಶಾಲನಗರದಲ್ಲಿ ಕುಶಾಲನಗರದ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ನೂತನವಾಗಿ ಸ್ಥಾಪನೆಗೊಂಡಿರುವ ತಾಲೂಕು ಕಾನೂನು ಸೇವಾ ಸಮಿತಿಯ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಕೆಲಸ ಕಾರ್ಯಗಳ ಒತ್ತಡ ಕಡಿಮೆಯಾಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು ಈ ಸಂಬಂಧ ಪ್ರಕರಣಗಳ ಇತ್ಯರ್ಥಕ್ಕೆ ವಕೀಲರುಗಳ ಸಹಾಯ ಪ್ರಮುಖವಾಗಿದೆ ಎಂದರು. ಯಾವುದೇ ವಿಷಯಗಳು ಭಾಷಣಕ್ಕೆ ಮಾತ್ರ ಸೀಮಿತ ಆಗಬಾರದು ಎಂದ ನ್ಯಾಯಾಧೀಶರು, ಅರಿವಿನ ಕೊರತೆಯಿಂದ ನೊಂದವರಿಗೆ ಸೌಲಭ್ಯ ಲಭಿಸಲು ಅಸಾಧ್ಯ ಎಂದು ಹೇಳಿದರು. ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ರಾಜಿ ತೀರ್ಮಾನಕ್ಕೆ ಅಥವಾ…

Read More

ಮಡಿಕೇರಿ ಮಾ.11 NEWS DESK : ಅರ್ಬುದ ಕಾಯಿಲೆಯಿಂದ ಬಳಲುತ್ತಿರುವ ಅರೆಕಾಡಿನ ವಸಂತ ಎಂಬವರ ಚಿಕಿತ್ಸೆಗೆ ಮಾನವೀಯ ಸ್ನೇಹಿತರ ಒಕ್ಕೂಟದಿಂದ ಹತ್ತು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಯಿತು. ಒಕ್ಕೂಟದ ಅಡ್ಮಿನ್ ಹನೀಫ್ ಸೋನಾ ಅವರ ಮುಂದಾಳತ್ವದಲ್ಲಿ ಮಡಿಕೇರಿಯಲ್ಲಿ ನಡೆದ ಕಾರುಣ್ಯ ಕಾರ್ಯಕ್ರಮದಲ್ಲಿ ಒಕ್ಕೂಟದ ಪ್ರತಿನಿಧಿ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ ಅವರು ಫಲಾನುಭವಿಯ ಪತ್ನಿ ಶಿವರಂಜಿನಿ ಅವರಿಗೆ ಒಕ್ಕೂಟದ ವತಿಯಿಂದ ಹತ್ತು ಸಾವಿರ ಮೊತ್ತದ ಚೆಕ್ಕನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅನಿಲ್, ಮಾನವೀಯ ಸ್ನೇಹಿತರ ಒಕ್ಕೂಟವು ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರಲ್ಲದೆ, ಫಲಾನುಭವಿ ವಸಂತ್ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿದರು. ಒಕ್ಕೂಟದ ಪ್ರತಿನಿಧಿಗಳಾದ ಸುರೇಶ್ ಬಿಳಿಗೇರಿ, ಸಂತೋಷ್ ಕೆ. ಟಿ., ಒಕ್ಕೂಟದ ಮಾಜಿ ಪ್ರತಿನಿಧಿ ಪ್ರಭಾಕರ್ ನಾಪೋಕ್ಲು, ಪತ್ರಕರ್ತ ವಿಶ್ವಗುಡ್ಡೆ ಮನೆ ಮುಂತಾದವರು ಹಾಜರಿದ್ದರು.

Read More

ಗೋಣಿಕೊಪ್ಪ ಮಾ.11 NEWS DESK : ಮಹಿಳೆಯರು ಸ್ವಾವಲಂಬಿಗಳಾಗುವ ಮೂಲಕ ಸಮಾಜದಲ್ಲಿ ಆದರ್ಶದ ಬದುಕು ಕಟ್ಟಬೇಕು ಎಂದು ಸಮಾಜ ಸೇವಕಿ ಚಾಂದಿನಿ ಅರುಣ್ ಮಾಚಯ್ಯ ಕರೆ ನೀಡಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕದಳಿ ವೇದಿಕೆ ಹಾಗೂ ಮಾಯಮುಡಿ ಗ್ರಾಮದ ಶ್ರೀ ಗಣೇಶ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸಂಯುಕ್ತಾಶ್ರಯದಲ್ಲಿ ಮಾಯಮುಡಿಯ ಅಂಗನವಾಡಿ ಆವರಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ದೇಶ ಸ್ವಾತಂತ್ರ್ಯ ಗಳಿಸಿ ಎಂಭತ್ತು ವರ್ಷಗಳಾಗುತ್ತಾ ಬಂದರೂ ಕೂಡ ಮಹಿಳೆ ಅಬಲೆಯಲ್ಲ – ಸಬಲಳು. ಸಮಾಜದ ನಾನಾ ಸ್ತರಗಳಲ್ಲಿ ಪುರುಷನಿಗಿಂತಲೂ ಒಂದು ಹೆಜ್ಜೆ ಮುಂದೆ ತನ್ನ ಶಕ್ತಿ, ಸಹನೆ, ಸಾಮರ್ಥ್ಯ ಗಳನ್ನು ಸಾಬೀತು ಪಡಿಸುತ್ತಿರುವ ದಿಟ್ಟ ಮಹಿಳೆ. ತೊಟ್ಟಿಲು ತೂಗುವ ಮಹಿಳೆಯ ಕೈ ಆಕಾಶದಲ್ಲಿ ವಿಮಾನ ಹಾರಿಸುವ, ಗಗನ ಯಾತ್ರೆ ನಡೆಸುವ ಮಹತ್ತರ ಪಾತ್ರಗಳಲ್ಲಿ ಮಂಚೂಣಿಯಲ್ಲಿದ್ದಾಳೆ ಎಂದರು. ಮತ್ತೋರ್ವ ಅತಿಥಿ ಟಾಟು ಮೊಣ್ಣಪ್ಪ ಮಾತನಾಡಿ, ಮಹಿಳೆಯರಿಲ್ಲದ ಕುಟುಂಬಗಳನ್ನು ಊಹಿಸಲು ಅಸಾಧ್ಯ. ಕುಟುಂಬದ ಬೆಳಕು…

Read More

ಮಡಿಕೇರಿ ಮಾ.11 NEWS DESK : ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಸಾಯಿ ಹಾಕಿ ತರಬೇತಿ ಕೇಂದ್ರದ ಸಹಯೋಗದಲ್ಲಿ ಫಿಟ್ ಇಂಡಿಯಾ ಪರಿಕಲ್ಪನೆಯೊಂದಿಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಮಡಿಕೇರಿ ತಾಲೂಕಿನ ಐದು ಕಾಲೇಜುಗಳ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಪಂದ್ಯಾವಳಿಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ತಂಡವು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಯಿ ಹಾಕಿ ತರಬೇತಿ ಕೇಂದ್ರ ಮಡಿಕೇರಿಯ ತರಬೇತಿದಾರರು ಮತ್ತು ಉಸ್ತುವಾರಿಯಾದ ಮಿನಿ ಉನ್ನಿ ರಾಜ್ ಭಾಗವಹಿಸಿದ್ದರು.  ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಮೇಜರ್ ರಾಘವ ಬಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ. ತಿಪ್ಪೇಸ್ವಾಮಿ, ಭಾರತ ಹಾಕಿ ತಂಡದ ಕ್ಯಾಂಪರ್ ಅಕ್ಷತಾ, ಕಿಲೋ ಇಂಡಿಯಾ ಹಾಕಿ ತಂಡದ ಆಟಗಾರ್ತಿಯರಾದ ಸೀಮಾ ಆನಂದ್ ಪವರ್ ಹಾಗೂ ಗಧೇಲಾ ಗಾಯತ್ರಿ ಉಪಸ್ಥಿತರಿದ್ದರು. ವರದಿ : ಅಶೋಕ್ ಮಡಿಕೇರಿ 

Read More