ಲೇಖಕ: admin

ಮಡಿಕೇರಿ ಜು.3 NEWS DESK : ಕೊಡಗು ಜಿಲ್ಲೆಯ ವಿವಿಧ ಗ್ರಾ.ಪಂ ವ್ಯಾಪ್ತಿಯ ಸಂತೆಗಳಲ್ಲಿ ಅಸ್ಸಾಂ ನವರು ಹಾಗೂ ಅಸ್ಸಾಂ ಜನರೆಂದು ಹೇಳಿಕೊಳ್ಳುತ್ತಿರುವ ಅಪರಿಚಿತರು ವ್ಯಾಪಾರ ಮಾಡುತ್ತಿದ್ದು, ಈ ಬೆಳವಣಿಗೆ ವಿರುದ್ಧ ಗ್ರಾ.ಪಂ ಗಳು ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರಂಭದಲ್ಲಿ ಕಾರ್ಮಿಕರ ಹೆಸರಿನಲ್ಲಿ ಕೊಡಗು ಜಿಲ್ಲೆಯನ್ನು ಪ್ರವೇಶಿಸಿದ ಅಸ್ಸಾಂ ನವರು ಎಂದು ಹೇಳಿಕೊಳ್ಳುತ್ತಿರುವ ಜನರು ಇಂದು ವ್ಯಾಪಾರಿಗಳಾಗಿ ಪರಿವರ್ತನೆಯಾಗುತ್ತಿದ್ದಾರೆ. ಮನೆಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಸಂತೆಗಳಲ್ಲಿ ಮಾರಾಟ ಮಾಡುತ್ತಿರುವ ಅಪರಿಚಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದು ಕೊಡಗಿನ ವ್ಯಾಪಾರ ಕ್ಷೇತ್ರದಲ್ಲಿ ಆತಂಕವನ್ನು ಮೂಡಿಸಿದ್ದು, ಗ್ರಾಹಕರು ಕೂಡ ಎಚ್ಚೆತ್ತುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಕಾರ್ಮಿಕರಾಗಿ ಬಂದವರು ವ್ಯಾಪಾರಿಗಳಾಗಿ ಪರಿವರ್ತನೆಯಾದ ಹಿಂದಿನ ಮರ್ಮವೇನು ಮತ್ತು ಇವರಿಗೆ ಹಣ ಹಾಗೂ ಸಾಮಾಗ್ರಿಗಳನ್ನು ನೀಡುತ್ತಿರುವವರು ಯಾರು ಎನ್ನುವ ವಿಚಾರ ಬಹಿರಂಗಗೊಳ್ಳಬೇಕಾಗಿದೆ. ಗ್ರಾ.ಪಂ, ಪೊಲೀಸ್ ಇಲಾಖೆ ಹಾಗೂ ಆಹಾರ ಇಲಾಖೆ ಈ…

Read More

ಮಡಿಕೇರಿ ಜು.3 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ)ವತಿಯಿಂದ 2025-26ನೇ ಸಾಲಿಗೆ ಅನ್ವಯವಾಗುವಂತೆ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಲಾಗಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಶಿಕ್ಷಣಕ್ಕಾಗಿ ನೀಡಲಾಗುವ ಆರ್ಥಿಕ ನೆರವನ್ನು ಪ್ರಾಥಮಿಕ ಶಾಲೆಯಿಂದ ಪದವಿ ತರಗತಿಗಳವರಗೆ ವಿದ್ಯಾಭ್ಯಾಸ ಮಾಡುತ್ತಿರುವ ಪತ್ರಕರ್ತರ ಮಕ್ಕಳು ಪಡೆಯಲು ಅರ್ಹರಾಗಿರುತ್ತಾರೆ. ನೆರವು ಪಡೆಯಲು ಇಚ್ಛಿಸುವವರು ಅಂಕಪಟ್ಟಿ, ಶಾಲೆಗೆ ಪಾವತಿಸಿದ ಶುಲ್ಕದ ನಕಲು ಪ್ರತಿಯೊಂದಿಗೆ ಅರ್ಜಿಯನ್ನು ದಿನಾಂಕ 12-07-2025ರ ಒಳಗಾಗಿ ಸಲ್ಲಿಸಲು ಕೋರಲಾಗಿದೆ. ಅರ್ಜಿಗಳನ್ನು ‘ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ), ಪತ್ರಿಕಾ ಭವನ, ಕೈಗಾರಿಕಾ ಬಡಾವಣೆ, ಮಡಿಕೇರಿ-571201’ ಈ ವಿಳಾಸಕ್ಕೆ ಕಳುಹಿಸಿಕೊಡಬೇಕೆಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ತಿಳಿಸಿದ್ದಾರೆ.

Read More

ಪುತ್ತೂರು ಜು.3 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಥಾಪಕ ಪ್ರಾಂಶುಪಾಲರಾಗಿ ಕಾಲೇಜಿಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಪ್ರೊ.ಜಿ.ಆರ್.ರೈ ಅವರು ಇಂದು ವಿಧಿವಶರಾಗಿದ್ದು, ಅವರಿಗೆ ಭಾವ ಪೂರ್ಣ ಶ್ರದ್ದಾಂಜಲಿಯನ್ನು ಅರ್ಪಿಸಲಾಯಿತು. ನುಡಿ ನಮನವನ್ನು ಸಲ್ಲಿಸಿದ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ, ಸಿವಿಲ್ ಇಂಜಿನಿಯರ್ ಆಗಿದ್ದ ಪ್ರೊ.ಜಿ.ಆರ್.ರೈ ಅವರು ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆಯಲ್ಲಿ ಸಲ್ಲಿಸಿ, ಅದರ ಅಭಿವೃದ್ಧಿಗೆ ಶ್ರಮಿಸಿದವರು. ದಿ.ಉರಿಮಜಲು ರಾಮ ಭಟ್ ಅವರ ಬಾಲ್ಯ ಸ್ನೇಹಿತನಾಗಿದ್ದು, ಅವರ ಒತ್ತಾಸೆಯ ಮೇರೆಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾರಂಭಕ್ಕೆ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿ ಅದರ ಸ್ಥಾಪಕ ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಅಗಲಿದ ಮಹಾನ್ ಚೇತನಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲಿ ಎಂದರು. ಈ ಸಂದರ್ಭದಲ್ಲಿ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು. ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಹಾಜರಿದ್ದು  ಪುಷ್ಪ ನಮನ ಸಲ್ಲಿಸಿದರು.

Read More

ಮಡಿಕೇರಿ ಜು.3 NEWS DESK : ಯು.ಎ.ಇ. ಯ ಅರಬ್ ಸಂಯುಕ್ತ ಸಂಸ್ಥಾನ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ನಗರದ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರಿಗೆ ‘ಕಲಾ ಮಾಧ್ಯಮ’ ಗೌರವ ಪುರಸ್ಕಾರ ನೀಡಿ ಗೌರವಿಸಲಾಯಿತು. ಶಿಲ್ಪಕಲೆ, ಚಿತ್ರಕಲೆ, ಲೇಖಕ ಹಾಗೂ ಬರಹಗಾರರಾಗಿ ಕಳೆದ ನಾಲ್ಕು ದಶಕಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದನ್ನು ಗುರುತಿಸಿ ಗಣೇಶ್ ರೈ ಅವರಿಗೆ ‘ಕಲಾಮಾಧ್ಯಮ’ ಗೌರವ ಪುರಸ್ಕಾರ ನೀಡಲಾಗಿದೆ. ದುಬಾಯಿಯ ಇಂಡಿಯನ್ ಹೈಸ್ಕೂಲ್ ಶೇಖ್ ರಾಶೀದ್ ಆಡಿಟೋರಿಯಂ ನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಯಕ್ಷಧ್ರುವ ಫೌಂಡೇಷನ್ ನ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಯು.ಎ.ಇ. ಯ ಯಕ್ಷಗಾನ ಅಭ್ಯಾಸ ಕೇಂದ್ರದ ಅಧ್ಯಕ್ಷ ಕೊಟ್ಟಿಂಜ ದಿನೇಶ್ ಶೆಟ್ಟಿ, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಇಂಡಿಯಾ ಸೋಶಿಯಲ್ ಐಂಡ್ ಕಲ್ಚರಲ್ ಸೆಂಟರ್ ಅಬುಧಾಬಿಯ 2024- 25ನೇ ಸಾಲಿನ ಅಧ್ಯಕ್ಷ ಜಯರಾಮ್ ರೈ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಯಕ್ಷಗಾನ ಪೂಜೆ ಮತ್ತು…

Read More

ಮಡಿಕೇರಿ ಜು.3 NEWS DESK :  ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು.  ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ ಯದುವೀರ್ ಖುದ್ದು ಪರಿಶೀಲನೆ ನಡೆಸಿದರು. ಈ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ರೂಪ ದರ್ಶನದ ವ್ಯವಸ್ಥೆಗಳ ಬಗ್ಗೆ  ಮಾಹಿತಿ ನೀಡಿದರು.

Read More

ವಿರಾಜಪೇಟೆ ಜು.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆ ತಾಲೂಕು, ಕೃಷಿ ಕಾರ್ಯಕ್ರಮದಡಿಯಲ್ಲಿ ಅಮ್ಮತಿ ವಲಯದ ಚೆಂಬೆಬೆಳ್ಳೂರು ಕಾರ್ಯಕ್ಷೇತ್ರದ ವತಿಯಿಂದ ಸರಕಾರಿ ಪ್ರೌಢಶಾಲೆ ದೇವಣಗೇರಿ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ವಲಯ ಅರಣ್ಯ ಅಧಿಕಾರಿ ರಾಘವ ಮಾತನಾಡಿ, ಪರಿಸರ ಸಂರಕ್ಷಣೆ ಹೇಗೆ ಮಾಡಬೇಕು ಎಂದು ಮಾಹಿತಿ ನೀಡಿದರು. ಪರಿಸರ ಉಳಿವಿಗಾಗಿ ನಾವು ಸದಾ ಪ್ರಯತ್ನ ಪಡಬೇಕು ಮತ್ತು ಅಳಿವಿನಂಚಿನಲ್ಲಿರುವ ವಿವಿಧ ತಳಿಯ ಗಿಡಗಳನ್ನು ಹೇಗೆ ಉಳಿಸಬೇಕು ಎಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಯೋಜನಾಧಿಕಾರಿ ಪಿ.ಹರೀಶ್ ಮಾತನಾಡಿ, ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಒಂದಾಗಿದೆ. ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಹಣ್ಣಿನ ಗಿಡಗಳನ್ನು ನಾಟಿ ಮಾಡುವುದರಿಂದ ಶುದ್ಧವಾದ ಗಾಳಿ ಮತ್ತು ಹಣ್ಣು ಸಿಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರಕಾರಿ…

Read More

ಮಡಿಕೇರಿ ಜು.3 NEWS DESK : ಮಡಿಕೇರಿ ನಗರದ 3ನೇ ವಾರ್ಡ್‍ನ ತ್ಯಾಗರಾಜ ಕಾಲೋನಿಗೆ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಹಾಗೂ ಉಪಾಧ್ಯಕ್ಷ ಮಹೇಶ್ ಜೈನಿ ಅವರು ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿದರು. ತ್ಯಾಗರಾಜ ಕಾಲೋನಿಯ ಸಾರ್ವಜನಿಕರ ಸಮಸ್ಯೆಗಳು ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯ ಬಗ್ಗೆ ನಗರಸಭೆಯ ಮಾಸಿಕ ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯ ಎಂ.ಎಂ.ಮೊಹಮ್ಮದ್ ಯಾಕುಬ್ ಅವರು ಗಮನ ಸೆಳೆದು ಸ್ಥಳಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭ ಮಾತನಾಡಿದ ಮೊಹಮ್ಮದ್ ಯಾಕುಬ್, ತ್ಯಾಗರಾಜ ಕಾಲೋನಿಯಲ್ಲಿ ಆಶ್ರಯ ಮನೆ ನಿರ್ಮಾಣಗೊಂಡು ಸುಮಾರು 30 ವರ್ಷ ಕಳೆದಿದ್ದರು ಸಮರ್ಪಕವಾದ ರಸ್ತೆ ವ್ಯವಸ್ಥೆ ಇಲ್ಲದಾಗಿದೆ. ಬರೆ ಕುಸಿಯುವ ಹಂತದಲ್ಲಿದ್ದು, ನಿವಾಸಿಗಳು ಭಯದಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂದರು. ಮತ್ತೊಂದು ಭಾಗದಲ್ಲಿ ಮಳೆಯಿಂದ ಬರೆ ಕುಸಿದಿದ್ದು, ರಸ್ತೆಯಲ್ಲಿ ನಡೆದಾಡಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ 2023ರಲ್ಲಿ ಸಾರ್ವಜನಿಕರು ಅರ್ಜಿಯ ಮೂಲಕ ನಗರಸಭೆಗೆ ಮನವಿ…

Read More

ಮಡಿಕೇರಿ ಜು.3 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ:ಅರ್ಧ ಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಷ್ಟಂಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 50 ವರ್ಷ ವಯಸ್ಸುಳ್ಳ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ, 20 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ https://sahithyaacademy.karnataka.gov.in ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜು.2 NEWS DESK :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಜು.6 ರಂದು ಬೆಳಗ್ಗೆ 10.30 ಗಂಟೆಗೆ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಂ ಅವರ 39ನೇ ಪುಣ್ಯಸ್ಮರಣೆ ಕಾರ್ಯಕ್ರಮವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಇರುವ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜು.3 NEWS DESK : ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ವತ್ತೆಕರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಯತ್ನಿಸಿದ ಸಂದರ್ಭ ಬಿದ್ದು ಗಾಯಗೊಂಡ ಕಾರ್ಮಿಕ ಮಹಿಳೆ ಕವಿತಾ (40) ಅವರ ಮನೆಗೆ ಶಾಸಕರ ಡಾ.ಮಂತರ್ ಗೌಡ ಭೇಟಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕರು, ಮಹಿಳೆಯ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಅಲ್ಲದೆ ವೈಯಕ್ತಿಕವಾಗಿ ಧನ ಸಹಾಯ ನೀಡಿದರು. ಈ ಸಂದರ್ಭ ಸ್ಥಳೀಯ ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Read More