ಮಡಿಕೇರಿ ಜು.2 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭಿಸಲಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿ.ಎ, ಬಿಕಾಂ, ಬಿಲಿಬ್ ಐಎಸ್ಸಿ, ಬಿಬಿಎ, ಬಿಸಿಎ, ಬಿಎಸ್ಸಿ, ಬಿಎಸ್ಡಬ್ಲ್ಯೂ) ಹಾಗು ಸ್ನಾತಕೋತ್ತರ ಪಿಜಿ. ಕೋರ್ಸ್ಗಳಾದ (ಎಂಎ, ಎಂಎ-ಪತ್ರಿಕೋದ್ಯಮ, ಎಂಕಾಂ, ಎಂಬಿಎ, ಎಂಲಿಬ್ಐಎಸ್ಸಿ, ಎಂಎಸ್ಸಿ, ಎಂಸಿಎ, ಎಂಎಸ್ಡಬ್ಲೂ) (ಪಿಜಿ ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.…
ಲೇಖಕ: admin
ಮಡಿಕೇರಿ ಜು.3 NEWS DESK : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 49.44 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1486.74 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 893.60 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 60.30 ಮಿ.ಮೀ. ಕಳೆದ ವರ್ಷ ಇದೇ ದಿನ 18.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2114.19 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1278.54 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 52.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1476.15 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 931.95 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.07 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಮಡಿಕೇರಿ ಜು.3 NEWS DESK : ಯೂರೋಪ್ನಲ್ಲಿ ಜು.8 ರಿಂದ 20ರ ವರೆಗೆ ನಡೆಯಲಿರುವ ಹಾಕಿ ಪಂದ್ಯಾವಳಿಯಲ್ಲಿ ಭಾರತ ಎ ಹಾಕಿ ತಂಡವೂ ಪಾಲ್ಗೊಳ್ಳುತ್ತಿದ್ದು, ತಂಡದಲ್ಲಿ ಕೊಡಗಿನವರಾದ ಯುವ ಆಟಗಾರ ಚಂದೂರ ಬಿ.ಪೂವಣ್ಣ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ಪೂವಣ್ಣ ಅವರೊಂದಿಗೆ ರಾಜ್ಯದ ಇಬ್ಬರು ಆಟಗಾರರಾದ ಹೆಚ್.ಎಸ್.ಮೋಹಿತ್ ಹಾಗೂ ಮೊಹಮದ್ ರಹೀಲ್ ಸ್ಥಾನ ಪಡೆದಿದ್ದಾರೆ. ಪೂವಣ್ಣ ಕಂಡಂಗಾಲದ ನಿವಾಸಿ ಚಂದೂರ ಎಸ್.ಪ್ರಭು (ಬಾಬಿ) ಹಾಗೂ ಅನಿಲ (ತಾಮನೆ ಮಲ್ಲೇಂಗಡ) ದಂಪತಿಯ ಪುತ್ರ. 20 ಆಟಗಾರರನ್ನು ಒಳಗೊಂಡ ಭಾರತ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದ್ದು, ಹರಿಯಾಣದ ಸಂಜಯ್ ತಂಡವನ್ನು ಮುನ್ನಡೆಸಲಿದ್ದಾರೆ. ಉದಯೋನ್ಮುಖ ಆಟಗಾರರ ತಮಡ ಇದಾಗಿದ್ದು, ಭಾರತ ಪ್ರಾನ್ಸ್, ಐರ್ಲೆಂಡ್, ನೆದರ್ಲೇಂಡ್ ವಿರುದ್ಧ ತಲಾ 2 ಮತ್ತು ಇಂಗ್ಲೆಂಡ್ ಹಾಗೂ ಬೆಲ್ಜಿಯಂನೊಂದಿಗೆ ತಲಾ 1 ಪಂದ್ಯವನ್ನಾಡಲಿದೆ. ಭಾರತ ರಾಷ್ಟ್ರೀಯ ತಂಡದ ಸಹಾಯಕ ಕೋಚ್ ಶಿವೇಂದ್ರ ಸಿಂಗ್ ಈ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ತಂಡ ಜು.5 ರಂದು ತೆರಳಲಿದೆ. ಆರು ರಾಷ್ಟ್ರಗಳು ಭಾಗವಹಿಸಲಿದೆ.
ಸೋಮವಾರಪೇಟೆ ಜು.3 NEWS DESK : ಕಾಡಾನೆ ಭತ್ತದ ಗದ್ದೆಗೆ ನುಗ್ಗಿ ಕೃಷಿ ಫಸಲು ನಾಶಗೊಳಿಸಿರುವ ಘಟನೆ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುಟ್ಟಪ್ಪ ಎಂಬುವರರ ಭತ್ತ ಸಸಿಮಡಿಯನ್ನು ಕಾಡಾನೆಗಳು ತಿಂದು ತುಳಿದು ನಾಶಪಡಿಸಿವೆ. ಭತ್ತ ನಾಟಿಗೆ ಗದ್ದೆಭೂಮಿಯನ್ನು ಉತ್ತು ಹದಪಡಿಸಲಾಗಿತ್ತು. ಅಂದೇ ಕಾಡಾನೆಗಳು ಸಸಿಯನ್ನು ತಿಂದು ನಷ್ಟ ಪಡಿಸಿದೆ.
ಸೋಮವಾರಪೇಟೆ ಜು.3 NEWSDESK : ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯಲ್ಲಿ ಕಳೆದ 36 ವರ್ಷಗಳ ಕಾಲ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಬಿ.ಕೆ.ಗೋಪಾಲ್ ಅವರನ್ನು ತಾಲ್ಲೂಕು ಪಂಚಾಯಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಇಒ ಪರಮೇಶ್ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ಶ್ರೀನಿವಾಸ್, ರಾಕೇಶ್ ಸೇರಿದಂತೆ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಜು.3 NEWS DESK : ಕರ್ನಾಟಕ ವಿಕಾಸ ರಂಗದ ಜಿಲ್ಲಾಧ್ಯಕ್ಷರಾಗಿ ಪಿ.ಎಸ್.ವೈಲೇಶ ನೇಮಕಗೊಂಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಸಂವರ್ಧನೆಗಾಗಿ, ನೆಲ-ಜಲದ ರಕ್ಷಣೆಗಾಗಿ ಶ್ರಮಿಸುವ ಧ್ಯೇಯೋದ್ಧೇಶಗಳೊಂದಿಗೆ ಕರ್ನಾಟಕ “ವಿಕಾಸರಂಗ” ರಾಜ್ಯಮಟ್ಟದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಕೊಡಗು ಜಿಲ್ಲಾಧ್ಯಕ್ಷರಾಗಿ ಪಿ.ಎಸ್.ವೈಲೇಶ ಅವರನ್ನು ನೇಮಕ ಮಾಡಲಾಗಿದೆಯೆಂದು ಕರ್ನಾಟಕ ವಿಕಾಸ ರಂಗದ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರಾದ ವ.ಚ.ಚನ್ನೇಗೌಡರು ತಿಳಿಸಿದ್ದಾರೆ.
ಮಡಿಕೇರಿ ಜು.10 NEWS DESK : ಗುರು ಪೂರ್ಣಿಮೆ (ಪೂರ್ಣಿಮೆ), ಶಿಷ್ಯನ ಜೀವನದಲ್ಲಿ ಅತ್ಯಂತ ಮುಖ್ಯವಾದ ದಿನವಾಗಿದ್ದು, ಗುರು ಮತ್ತು ಗುರು ತತ್ವವನ್ನು (ತತ್ವ) ಆಚರಿಸುವ ದಿನವಾಗಿದೆ. ಮೋಕ್ಷ (ವಿಮೋಚನೆ) ಯ ಮಾರ್ಗವನ್ನು ತೋರಿಸುವ ಜೊತೆಗೆ ನಮ್ಮ ಕೈ ಹಿಡಿದು ಅದರತ್ತ ನಮ್ಮನ್ನು ಕರೆದೊಯ್ಯುವ ಗುರುವಿಗೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುವ ದಿನ ಇದು. ಗುರು-ಶಿಷ್ಯ ವಂಶದ ಸ್ಥಾಪಕ ಆದಿ ಗುರು ಋಷಿ ವ್ಯಾಸರನ್ನು ಈ ದಿನದಂದು ಪೂಜಿಸಲಾಗುತ್ತದೆ. ಆದ್ದರಿಂದ, ಇದನ್ನು ವ್ಯಾಸ ಪೂರ್ಣಿಮೆ ಎಂದೂ ಕರೆಯಲಾಗುತ್ತದೆ. ಈ ವರ್ಷ, ಗುರು ಪೂರ್ಣಿಮೆಯನ್ನು ಜುಲೈ 10, 2025 ರ ಗುರುವಾರದಂದು ಆಚರಿಸಲಾಗುತ್ತದೆ. ಗುರು ದೇವರ ಭೌತಿಕ ಅಭಿವ್ಯಕ್ತಿ. ಹಿಂದೂ ಸಂಸ್ಕೃತಿಯು ಗುರುವನ್ನು ದೇವರಿಗಿಂತ ಉನ್ನತ ಪೀಠದಲ್ಲಿ ಇರಿಸಿದೆ; ಏಕೆಂದರೆ ಗುರುವು ಅನ್ವೇಷಕನಿಗೆ ದೇವರ ಸಾಕ್ಷಾತ್ಕಾರಕ್ಕಾಗಿ ಆಧ್ಯಾತ್ಮಿಕ ಅಭ್ಯಾಸವನ್ನು ಕಲಿಸುತ್ತಾನೆ, ಅದನ್ನು ಅವನಿಂದ ಮಾಡಿಸುತ್ತಾನೆ ಮತ್ತು ದೇವರನ್ನು ಅರಿತುಕೊಳ್ಳಲು ಅವನಿಗೆ ಸಹಾಯ ಮಾಡುತ್ತಾನೆ. ಗುರುವು ಜೀವಿತಾವಧಿಯಲ್ಲಿ ನಿರಂತರವಾಗಿ ಶಿಷ್ಯರಿಗೆ ವಿವಿಧ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಾನೆ…
ಮಡಿಕೇರಿ ಜು.3 NEWS DESK : ನಾಪೋಕ್ಲು ಚೋನಕೆರೆ ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಂಬಂಡ ಕೆ.ಗಣೇಶ್(78) ಇಂದು ನಿಧನರಾದರು. ಅಂತ್ಯಕ್ರಿಯೆ ನಾಳೆ (ಜು.4) ರಂದು ಮೃತರ ಸ್ವಗೃಹದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮಡಿಕೇರಿ NEWS DESK ಜು.2 : ಐತಿಹಾಸಿಕ ಮಡಿಕೇರಿ ದಸರಾದ ಆಕರ್ಷಣೆಗಳಲ್ಲಿ ಒಂದಾದ ದಶಮಂಟಪಗಳ ಸಮಿತಿಯ ನೇತೃತ್ವವನ್ನು 2025ರಲ್ಲಿ ಶ್ರೀ ಕೋಟೆ ಮಹಾಗಣಪತಿ ದೇವಾಲಯದ ದಸರಾ ಸಮಿತಿ ವಹಿಸಿಕೊಳ್ಳುತ್ತಿದ್ದು, ಅಧ್ಯಕ್ಷರಾಗಿ ಬಿ.ಎಂ.ಹರೀಶ್ ಅಣ್ವೇಕರ್ ಆಯ್ಕೆಯಾಗಿದ್ದಾರೆ. ನಗರದ ಲಯನ್ಸ್ ಸಭಾಂಗಣದಲ್ಲಿ ನಡೆದ ಶ್ರೀ ಕೋಟೆ ಮಹಾಗಣಪತಿ ಸಮಿತಿಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕೋಟೆ ಶ್ರೀ ಮಹಾಗಣಪತಿ ದಸರಾ ಮಂಟಪ ಸಮಿತಿಯ ಅಧ್ಯಕ್ಷರಾಗಿ ವಿಘ್ನೇಶ್ ಸಿ.ಯು ಆಯ್ಕೆಗೊಂಡರು. ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಅದ್ದೂರಿ ದಸರಾ ಆಚರಣೆಯ ಕುರಿತು ಚರ್ಚಿಸಿದರು. ಇದೇ ಸಂದರ್ಭ ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣೆಯಿಂದ ಕುಶಾನಗರಕ್ಕೆ ವರ್ಗಾವಣೆಗೊಂಡ ಎಎಸ್ಐ ನಂದ ಐ.ಪಿ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. *ಪುಸ್ತಕ ಬಿಡುಗಡೆ* 49ನೇ ವರ್ಷದ ದಸರಾ ಆಚರಣೆಯ ಸಂಭ್ರಮದಲ್ಲಿರುವ ಶ್ರೀ ಕೋಟೆ ಮಹಾಗಣಪತಿ ದಸರಾ ಸಮಿತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದಸರಾ ವಂತಿಗೆ ಸಂಗ್ರಹದ ಪುಸ್ತಕವನ್ನು ಬಿಡುಗಡೆಗೊಳಿಸಿತು.
ಮಡಿಕೇರಿ ಜು.2 NEWS DESK : ನೆಲ್ಲಿಹುದಿಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ 7ನೇ ವಾರ್ಡ್ನ ಸರ್ವೇ ನಂಬರ್ 177/1 ರಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಜಾಗವನ್ನು ಮಂಜೂರು ಮಾಡಲು ತಾಲ್ಲೂಕು ಆಡಳಿತ ಉದ್ದೇಶಿಸಿದ್ದು, ಇದನ್ನು ವಿರೋಧಿಸಿ ನೆಲ್ಲಿಹುದಿಕೇರಿ ಮುಸ್ಲಿಂ ಜಮಾಅತ್ ಸಮಿತಿ ವತಿಯಿಂದ ಜು.4 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಒ.ಎಂ.ಅಬ್ದುಲ್ಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ಸಾರ್ವಜನಿಕ ಸ್ಮಶಾನಕ್ಕಾಗಿ ಗುರುತಿಸಿರುವ ಜಾಗವು 60 ಪ್ರವಾಹ ಪೀಡಿತ ಕುಟುಂಬಗಳು ವಾಸಿಸುತ್ತಿರುವ ಜನವಸತಿ ಪ್ರದೇಶದ ಸಮೀಪದಲ್ಲಿದೆ. ಇಲ್ಲಿ ಸ್ಮಶಾನ ನಿರ್ಮಾಣವಾದರೆ ಆರೋಗ್ಯ ಮತ್ತು ಪರಿಸರ ಮಾಲಿನ್ಯದ ಸಮಸ್ಯೆಗಳು ಎದುರಾಗಿ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದ್ದರಿಂದ ಆಡಳಿತ ವ್ಯವಸ್ಥೆ ಸ್ಮಶಾನಕ್ಕೆ ಪರ್ಯಾಯ ಜಾಗವನ್ನು ಗುರುತಿಸಲಿ ಎಂದು ಒತ್ತಾಯಿಸಿದ್ದಾರೆ. ಅಧಿಕಾರಿಗಳು ಸ್ಮಶಾನದ ಜಾಗವನ್ನು ಗುರುತಿಸುವ ಸಂದರ್ಭ ವೈಜ್ಞಾನಿಕ ಚಿಂತನೆ ಮಾಡಬೇಕು, ಪರಿಸರದ ಬಗ್ಗೆ ಕಾಳಜಿ ವಹಿಸಬೇಕು ಮತ್ತು ಸ್ಥಳೀಯ ನಿವಾಸಿಗಳ ಅಭಿಪ್ರಾಯವನ್ನು ಸಂಗ್ರಹಿಸಬೇಕು. ಆದರೆ ಇದು ಯಾವುದನ್ನೂ ಮಾಡದೆ…






