ಮಡಿಕೇರಿ ಜು.2 NEWS DESK : ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೃಹತ್ ಕೊಡುಗೆಯಾದ ‘ವಚನ’ಗಳನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಡಾ.ಫ.ಗು.ಹಳಕಟ್ಟಿ ಅವರ ದೂರದೃಷ್ಟಿ ಮತ್ತು ಮೌಲ್ಯಗಳು ಪ್ರತಿಯೊಬ್ಬರಿಗೂ ಮಾದರಿ ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಉಪನ್ಯಾಸಕ ಮಾರುತಿ ದಾಸಣ್ಣವರ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನದ ಪ್ರಯುಕ್ತ ನಡೆದ ವಚನ ಸಾಹಿತ್ಯ ಸಂರಕ್ಷಣೆ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಚನ ಸಂಶೋಧನೆ, ಸಂಗ್ರಹಣೆ, ಪರಿಷ್ಕರಣೆ, ಮುದ್ರಣ, ಪ್ರಕಾಶನ, ಪ್ರಚಾರ, ಪ್ರಸಾರ ಹಾಗೂ ಇಂಗ್ಲೀಷ್ ಭಾಷೆಗೆ ವಚನಗಳ ಅನುವಾದ ಇವುಗಳಲ್ಲಿ ತೊಡಗಿಸಿಕೊಂಡು ವಚನಗಳನ್ನು ಮುಂದಿನ ಪೀಳಿಗೆಗೆ ಕಟ್ಟಿಕೊಟ್ಟರು ಎಂದು ಮಾರುತಿ ದಾಸಣ್ಣವರ್ ವಿವರಿಸಿದರು. ವಚನ ಸಾಹಿತ್ಯ, ಅಂಕಣ ಬರಹಗಳು ಇಂತಹ ಅಮೂಲ್ಯ ಗ್ರಂಥಗಳನ್ನು ಸಂಗ್ರಹಿಸಿ ಪ್ರಕಟಿಸಿ, ನಾಡಿಗೆ ನೀಡಿದ ಡಾ.ಫ.ಗು.ಹಳಕಟ್ಟಿ ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು. ಶಿಕ್ಷಣ ನಂತರ ಆರಂಭದಲ್ಲಿ ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಫ.ಗು.ಹಳಕಟ್ಟಿ …
ಲೇಖಕ: admin
ಸೋಮವಾರಪೇಟೆ ಜು.2 NEWS DESK : ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮ ಪಂಚಾಯಿತಿಯ ಜೇನಿಗರಕೊಪ್ಪ ಗ್ರಾಮ ಸಂಪರ್ಕ ರಸ್ತೆ ಮಳೆಯಿಂದ ಕುಸಿಯುತ್ತಿದ್ದು, ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಹಾಗೂ ಪಿಡಿಒ ಸ್ಮಿತಾ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ಇಲಾಖೆಯ ಸಿಬ್ಬಂದಿಗಳು ಇದ್ದರು.
ಮಡಿಕೇರಿ ಜು.2 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ನ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.9 ರಂದು ನಡೆಯಲಿದೆ. ನಗರದ ಕೊಡವ ಸಮಾಜದಲ್ಲಿ ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿಂದಿನ ಜಿಲ್ಲಾ ಗವರ್ನರ್ ರೋಟರಿಯನ್ ಹೆಚ್.ಆರ್.ಕೇಶವ್, ಅತಿಥಿಗಳಾಗಿ ವಲಯ 6ರ ಸಹಾಯಕ ಗವರ್ನರ್ ಧಿಲ್ಲನ್ ಚೆಂಗಪ್ಪ ಹಾಗೂ ಝೋನಲ್ ಲೆಫ್ಟಿನೆಂಟ್ ರೋಟರಿಯನ್ ಕೆ.ಸಿ.ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ. 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಟರಿಯನ್ ಬಿ.ಎನ್.ರತ್ನಾಕರ್ ರೈ ಹಾಗೂ ಕಾರ್ಯದರ್ಶಿಯಾಗಿ ರೋಟರಿಯನ್ ಬಿ.ಕೆ.ಕಾರ್ಯಪ್ಪ ಅಧಿಕಾರ ಸ್ವೀಕರಿಸಲಿದ್ದಾರೆ.
ಮಡಿಕೇರಿ ಜು.2 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವಿಭಾಗದ ಪ್ರಥಮ ಬ್ಯಾಚ್ನ ವಿದ್ಯಾರ್ಥಿನಿ ಶೈಲಜಾ 9.55 ಸಿಜಿಪಿಎ ಅಂಕಗಳೊಂದಿಗೆ 2021-25ನೇ ಶೈಕ್ಷಣಿಕ ಸಾಲಿನ ವಿಟಿಯು ಇಂಜಿನಿಯರಿಂಗ್ ಪದವಿಯಲ್ಲಿ ರಾಜ್ಯ ಮಟ್ಟದಲ್ಲಿ 3ನೇ ರ್ಯಾಂಕ್ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಬಸವರಾಜ್ ಅವರ ಮುಂದಾಳತ್ವದಲ್ಲಿ ವಿಭಾಗದ ಮುಖ್ಯಸ್ಥರಾದ ಡಾ.ರಾಮಕೃಷ್ಣ ಬಿ.ಬಿ ಹಾಗೂ ಅಧ್ಯಾಪಕರ ಸಮರ್ಥ ಮಾರ್ಗದರ್ಶನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ವಿದ್ಯಾರ್ಥಿನಿ ಶೈಲಜಾ ಅವರ ಈ ಸಾಧನೆಗೆ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ, ಉಪಾಧ್ಯಕ್ಷ ಕೆ.ಎಂ.ಚಿಣ್ಣಪ್ಪ, ಕಾರ್ಯದರ್ಶಿ ರಾಕೇಶ್ ಪೂವಯ್ಯ, ನಿರ್ದೇಶಕರುಗಳು, ಕಾಲೇಜಿನ ಪ್ರಾಂಶುಪಾಲರು, ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಕಾಲೇಜು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಮಡಿಕೇರಿ ಜು.2 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾ.ಪಂ ನೌಕರರ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ವತಿಯಿಂದ ಜು.9 ರಂದು ವಿರಾಜಪೇಟೆ ಮತ್ತು ಕುಶಾಲನಗರ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾರ್ಪೋರೇಟ್ ಸಂಸ್ಥೆಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿ ಮತ್ತು ಕೆಲಸದ ಅವಧಿಯನ್ನು 12 ಗಂಟೆಗೆ ವಿಸ್ತರಣೆ ಮಾಡಿರುವ ಕ್ರಮವನ್ನು ವಿರೋಧಿಸಿ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಕಾರ್ಮಿಕ ಸಂಘಟನೆಯಲ್ಲಿ ಸಂಯೋಜನೆಗೊಂಡಿರುವ ಎಲ್ಲಾ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಲೊಳ್ಳಲಿವೆ ಎಂದು ಹೇಳಿದ್ದಾರೆ. ದೇಶದಲ್ಲಿ ಸುಮಾರು 50 ಕೋಟಿಯಷ್ಟು ದುಡಿಯುವ ವರ್ಗವಿದೆ. ಕಾರ್ಮಿಕರ ಹೋರಾಟದ ಫಲವಾಗಿ ಕೆಲಸದ ಸಮಯ 8 ಗಂಟೆ ಎಂದು ನಿಗಧಿಯಾಗಿತ್ತು. ಆದರೆ ಕೇಂದ್ರ…
ಮಡಿಕೇರಿ ಜು.2 NEWS DESK : ಪ್ರಸಕ್ತ 2025-26ನೇ ಸಾಲಿನಲ್ಲಿ ಜಿಲ್ಲೆಯ ಕೃಷಿಕರಿಗೆ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಪತ್ತಿನ ಸಹಕಾರ ಸಂಘಗಳ ಮೂಲಕ ಕೃಷಿ ಸಾಲ ವಿತರಣೆಗೆ ಯಾವುದೇ ಸಮಸ್ಯೆಗಳು ಇಲ್ಲವೆಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಬಿ.ಬಾಂಡ್ ಗಣಪತಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020-21ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದ ಕೃಷಿ ಸಾಲದ ವಿತರಣೆಗಾಗಿ ರೈತರು ‘ಫ್ರ್ರೂಟ್ ತಂತ್ರಾಂಶ’ದ ಐಡಿಯನ್ನು ಪಡೆಯವುದನ್ನು ಕಡ್ಡಾಯಗೊಳಿಸಲಾಗಿತ್ತು. ಈ ಸಂದರ್ಭ ಕೊಡಗಿನ ಜಮೀನುಗಳಲ್ಲಿನ ಜಂಟಿ, ಪೌತಿ ಖಾತೆ ಸೇರಿದಂತೆ ವಿವಿಧ ಭೂ ಹಿಡುವಳಿಗಳ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಬೆಳೆಗಾರರಿಗೆ ಸಾಲ ಸೌಲಭ್ಯವನ್ನು ಒದಗಿಸಿಕೊಂಡು ಬರಲಾಗುತ್ತಿದೆ ಎಂದರು. ಕಳೆದ 2024-25ನೇ ಸಾಲಿನಲ್ಲಿ ಕೆಡಿಸಿಸಿ ಬ್ಯಾಂಕ್ ಮೂಲಕ 39,390 ರೈತರಿಗೆ 1066.47 ಕೋಟಿ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಇದರಲ್ಲಿ ಜಿಲ್ಲೆಯ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 36,756 ರೈತರಿಗೆ 830.32…
ಮಡಿಕೇರಿ ಜು.2 NEWS DESK : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ನ ಕೊಡಗು ಘಟಕದ ವತಿಯಿಂದ ಜು.3ರಂದು ಕುಶಾಲನಗರದಲ್ಲಿ ‘ಸೌಹಾರ್ದ ನಡಿಗೆ’ ಕಾರ್ಯಕ್ರಮ ನಡೆಯಲಿದೆ ಎಂದು ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್(ಎಸ್ಎಸ್ಎಫ್)ನ ಕೊಡಗು ಪ್ರಧಾನ ಕಾರ್ಯದರ್ಶಿ ಜುನೈದ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ನಿಂದ ರಾಜ್ಯದ ಇಪ್ಪತ್ತು ಪ್ರಮುಖ ಪಟ್ಟಣಗಳಲ್ಲಿ ಸೌಹಾರ್ದ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರಲಾಗುತ್ತಿದ್ದು, 18ನೇ ಕಾರ್ಯಕ್ರಮವಾಗಿ ಜು.3 ರಂದು ಸೌಹಾರ್ದ ನಡಿಗೆ ಕಾರ್ಯಕ್ರಮ ಕುಶಾಲನಗರದ ತಾವರೆ ಕೆರೆಯಿಂದ ಸಂಜೆ 4 ಗಂಟೆಗೆ ಆರಂಭಗೊಂಡು ಕಾರು ನಿಲ್ದಾಣದಲ್ಲಿ ಸಮಾರೋಪಗೊಳ್ಳಲಿದೆ ಎಂದು ಹೇಳಿದರು. ದೇಶದೆಲ್ಲೆಡೆ ಕೋಮುದ್ವೇಷ ಹರಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಇತ್ತೀಚಿಗೆ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಇದು ಮಿತಿಮೀರಿ ಹೋಗಿದ್ದು, ನಾಡಿನ ಭಾವೈಕ್ಯತೆಯ ಪರಂಪರೆಯನ್ನು ಎತ್ತಿ ಹಿಡಿದು ಸೌಹಾರ್ದತೆಯ ಸಂದೇಶವನ್ನು ಸಾರುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ‘ಮನುಷ್ಯ ಮನಸ್ಸುಗಳನ್ನು…
ಮಡಿಕೇರಿ ಜು.2 NEWS DESK : ಕೊಡ್ಲಿಪೇಟೆ ಎಸ್.ಕೆ.ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಸಂಸತ್ತು ಚುನಾವಣೆ ನಡೆಯಿತು. ಕೇಂದ್ರ ಮತ್ತು ರಾಜ್ಯಗಳಿಗೆ ನಡೆಯುವ ಸಾರ್ವಜನಿಕ ಮಾದರಿಯ ಚುನಾವಣಾ ನಿಯಮಾನುಸಾರ ಶಾಲಾ ವಿದ್ಯಾರ್ಥಿಗಳಿಗೆ ಮತದಾನದ ಹಕ್ಕನ್ನು ಚಲಾಯಿಸುವ ಬಗ್ಗೆ ತಿಳುವಳಿಕೆ ಬರುವ ರೀತಿಯಲ್ಲಿ ಶಾಲಾ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತು ಎಲೆಕ್ಟ್ರಾನಿಕ್ ಯಂತ್ರವಾಗಿ ಮೊಬೈಲ್ನಲ್ಲಿ ಇ.ವಿ.ಎಂ ಆ್ಯಪ್ ಮೂಲಕ ಗೌಪ್ಯವಾಗಿ ಮತ ಚಲಾವಣೆ ಮಾಡಿದರು. ಚುನಾವಣಾ ಅಧಿಕಾರಿಯಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಹೆಚ್.ಎಂ.ಅಭಿಲಾಷ್, ಸಹಾಯಕ ಅಧಿಕಾರಿಯಾಗಿ ಕೆ.ಎಸ್.ಧನಲಕ್ಷ್ಮಿ, ಪೊಲೀಸ್ ಅಧಿಕಾರಿಗಳಾಗಿ 10ನೇ ತರಗತಿಯ ವಂಶಿತ್, ಸುಜನ್ ಮತ್ತು ಯಶಸ್ ಗೌಡ ಸೇರಿದಂತೆ ಸಹಾಯಕ ಚುನಾವಣಾ ಸಿಬ್ಬಂದಿಗಳಾಗಿ ಶಿಕ್ಷಕರು ಕರ್ತವ್ಯ ನಿರ್ವಹಿಸಿದರು. ಮುಖ್ಯಮಂತ್ರಿಯಾಗಿ ಕೆ.ಎ.ವಿಕಾಸ್, ಉಪ ಮುಖ್ಯಮಂತ್ರಿಯಾಗಿ ಎಂ.ಎಂ.ತನ್ಮಯ್, ಕಾರ್ಯದರ್ಶಿಯಾಗಿ ಎ.ವೈ.ತನ್ಮಯಿ, ಕ್ರೀಡಾ ಸಚಿವರಾಗಿ ಕೆ.ಕೆ.ಸಾನ್ವಿ, ಉಪ ಕ್ರೀಡಾ ಸಚಿವರಾಗಿ ಮಿಥುನ್, ಆಹಾರ ಸಚಿವರಾಗಿ ಕೆ.ಎಂ.ಪ್ರೀತಮ್ ಗೌಡ, ಉಪ ಆಹಾರ ಸಚಿವರಾಗಿ ಹೆಚ್.ವಿ.ದುಶ್ಯಂತ್ ಗೌಡ, ಆರೋಗ್ಯ ಸಚಿವರಾಗಿ ಹೆಚ್.ಸಿ.ಕುಲ್ದೀಪ್ ಗೌಡ, ಉಪ ಆರೋಗ್ಯ…
ಮಡಿಕೇರಿ ಜು.2 NEWS DESK : ರೈತರು ಕೃಷಿ ಸಾಲದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸಹಕಾರ ಸಂಘಗಳು ಸಾಲ ನೀಡುವ ಸಂದರ್ಭ ಎರಡು ತಿಂಗಳುಗಳ ಒಳಗಾಗಿ ಪಹಣಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಾಗಿ ರೈತರಿಂದ ಮುಚ್ಚಳಿಕೆ ಬರೆಸಿಕೊಳ್ಳುತ್ತಿವೆ. ಇದು ಬೀಸುವ ದೊಣ್ಣೆಯಿಂದ ತಪ್ಪಿಸುವ ಪ್ರಯತ್ನವಾಗಿದೆಯೇ ಹೊರತು ಇದರಿಂದ ರೈತರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗುವುದಿಲ್ಲ ಎಂದು ಮಾಲ್ದಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚೇರಂಡ ನಂದಾ ಸುಬ್ಬಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಕೆಲವು ಸಂಘಟನೆಗಳು ಮಾಡಿರುವ ಆರೋಪದಂತೆ ಸಹಕಾರ ಸಂಘಗಳಿಂದ ರೈತರಿಗೆ ಸಾಲ ನೀಡುವ ಸಂದರ್ಭ ಅನ್ಯಾಯವಾಗುತ್ತಿಲ್ಲ. ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಮುಚ್ಚಳಿಕೆ ಪಡೆದು ಸಾಲ ನೀಡಲಾಗುತ್ತಿದೆ. ತನ್ನದೇ ಆದ ಇತಿಹಾಸವನ್ನು ಹೊಂದಿರುವ ಕೊಡಗಿನ ಸಹಕಾರ ಕ್ಷೇತ್ರದ ಕುರಿತು ಯಾರೂ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಬಾರದು ಎಂದರು. ಕೊಡಗು ಜಿಲ್ಲೆಗೆ ಸಂಬಂಧಪಟ್ಟಂತೆ ಕರ್ನಾಟಕ ಭೂಕಂದಾಯ ಕಾಯ್ದೆ 2013 ರಲ್ಲಿ ತಿದ್ದುಪಡಿಗೊಂಡು ರಾಷ್ಟ್ರಪತಿಯವರಿಂದ ಮಸೂದೆ ಅನುಮೋದನೆಗೊಂಡು ಜಾರಿಯಲ್ಲಿದ್ದರೂ ಕಂದಾಯ…
ಮಡಿಕೇರಿ ಜು.2 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಿಷನ್ ಶಕ್ತಿ ಯೋಜನೆಯಡಿ ಸಮಗ್ರ ಮಹಿಳಾ ಸಬಲೀಕರಣ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ. ಮಿಷನ್ ಶಕ್ತಿ ಯೋಜನೆಯಡಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಮಧ್ಯಸ್ಥಿಕೆ ಕ್ರಮ ಬಲಪಡಿಸುವ ಗುರಿ ಹೊಂದಿದೆ. ಅದರಲ್ಲಿ ಮಿಷನ್ ಶಕ್ತಿಯು ಒನ್ ಸ್ಟಾಪ್ ಸೆಂಟರ್ ಮಹಿಳಾ ಸಹಾಯವಾಣಿ, ಬೇಟಿ ಬಚಾವೋ, ಬೇಟಿ ಪಡಾವೋ ಜೊತೆಗೆ ಮಹಿಳಾ ಸಬಲೀಕರಣ, ಮಾತೃವಂದನಾ ಯೋಜನೆ, ಸಖೀ ನಿವಾಸ್(ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ), ಶಿಶು ಪಾಲನಾ ಕೇಂದ್ರ ಒಳಗೊಂಡಿದೆ. ಜಿಲ್ಲೆಯಲ್ಲಿ ಸಖೀ ಒನ್ ಸ್ಟಾಪ್ ಸೆಂಟರ್ನಡಿ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ದೌರ್ಜನ್ಯಕ್ಕೆ ಒಳಗಾದ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಮತ್ತು ಪೊಲೀಸ್ ನೆರವು, ಆಪ್ತ ಸಮಾಲೋಚನೆ, ಕಾನೂನು ಸಲಹೆ, ತಾತ್ಕಾಲಿಕ ವಸತಿ ಕಲ್ಪಿಸುವುದು, ತುರ್ತು ಸೇವೆ…






