ಮಡಿಕೇರಿ ಜು.2 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ಅವರು ಜುಲೈ, 03 ರಂದು ಮಧ್ಯಾಹ್ನ 12 ಗಂಟೆಗೆ ಮಡಿಕೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ ಗೈಡ್ ಭವನ ಮ್ಯಾನ್ಸ್ ಕಾಂಪೌಂಡ್ ನಲ್ಲಿ ಪದಾಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಲಿದ್ದಾರೆ. ಶಾಸಕರಾದ ಡಾ.ಮಂತರ್ಗೌಡ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಘಟಕರು ತಿಳಿಸಿದ್ದಾರೆ.
ಲೇಖಕ: admin
ಬೆಂಗಳೂರು ಜು.2 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿಬೆಟ್ಟದ ವಿಶೇಷ ಸಂಪುಟ ಸಭೆಗೆ ತೆರಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹದ್ಯೋಗಿಗಳ ಜೊತೆ ಭೇಟಿ ನೀಡಿ ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
ಮಡಿಕೇರಿ ಜು.2 NEWS DESK : ವಿರಾಜಪೇಟೆ ತಾಲ್ಲೂಕಿನ ವಿ ಬಾಡಗದಲ್ಲಿ ಮಹತ್ವಕಾಂಕ್ಷೆಯ ವಿವಿಧ ಕ್ರೀಡಾ ತರಬೇತಿ ಕೇಂದ್ರಕ್ಕೆ ಜಾಗ ಗುರುತಿಸಲಾಗಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿರಾಜಪೇಟೆ ತಾಲ್ಲೂಕಿನ ವಿ ಬಾಡಗದಲ್ಲಿ ಮಹತ್ವಕಾಂಕ್ಷೆಯ ವಿವಿಧ ಕ್ರೀಡಾ ತರಬೇತಿ ಕೇಂದ್ರಕ್ಕೆ ಹನ್ನೊಂದು ಎಕರೆ ಸರ್ಕಾರಿ ಜಾಗವನ್ನು ಕಾಯ್ದಿರಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಅದರಂತೆ ತಹಶೀಲ್ದಾರ್ ರವರ ನೇತೃತ್ವದಲ್ಲಿ ಜಾಗಕ್ಕೆ ತೆರಳಿದ ಕಂದಾಯ ಇಲಾಖೆಯ ಅಧಿಕಾರಿಗಳು 11 ಎಕರೆ ಜಾಗವನ್ನು ಸ್ವಾಧೀನ ಪಡಿಸಿಕೊಂಡರು.
ಮಡಿಕೇರಿ ಜು.2 NEWS DESK : ಮಡಿಕೇರಿಯ ಇನ್ನರ್ ವೀಲ್ ಸಂಸ್ಥೆಯ 50ನೇ ವಷ೯ದ ಸಂದಭ೯ ನೂತನ ಅಧ್ಯಕ್ಷೆಯಾಗಿ ಲಲಿತಾರಾಘವನ್ ಮತ್ತು ಕಾಯ೯ದಶಿ೯ಯಾಗಿ ನಮಿತಾ ರೈ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಇನ್ನರ್ ವೀಲ್ ನಲ್ಲಿ ಸದಸ್ಯೆಯಾಗಿ 50 ವಷ೯ ಪೂರೈಸಿರುವ ಹಿರಿಯ ಸದಸ್ಯೆ ಡಾ.ಜಯಲಕ್ಷ್ಮಿ ಪಾಟ್ಕರ್ ನೂತನ ಆಡಳಿತ ಮಂಡಳಿಗೆ ಪದಗ್ರಹಣ ನೆರವೇರಿಸಿದರು. ಈ ಸಂದಭ೯ ಮಾತನಾಡಿದ ನೂತನ ಅಧ್ಯಕ್ಷೆ ಲಲಿತಾ ರಾಘವನ್, ಮಹಿಳೆಯರ ಸ್ವಾವಲಂಭನೆಗೆ ಪೂರಕವಾದ ಯೋಜನೆಗಳನ್ನು ಇನ್ನರ್ ವೀಲ್ ವತಿಯಿಂದ ಮುಂದಿನ ವಷ೯ದಲ್ಲಿ ಜಾರಿಗೊಳಿಸುವುದಾಗಿ ಭರವಸೆ ನೀಡಿದರಲ್ಲದೇ, ಅಥ೯ಪೂಣ೯ ಯೋಜನೆಗಳ ಮೂಲಕ ಸಮುದಾಯ ಸೇವೆಗೆ ಮುಂದಾದಾಗುವುದಾಗಿ ನುಡಿದರು. ಬೇರೆಯವರಿಗಾಗಿ ದಿನನಿತ್ಯ ಶ್ರಮಿಸುವ , ಬದುಕು ಸವೆಸುವ ಮಹಿಳೆಯರು ತನ್ನನ್ನು ತಾನು ಗಮನಿಸಿಕೊಳ್ಳುವ ದಿನಗಳು ಬಂದಿವೆ ಎಂದೂ ಲಲಿತಾ ರಾಘವನ್ ಹೇಳಿದರು. ಕಾಯ೯ಕ್ರಮದಲ್ಲಿ ಇನ್ನರ್ ವೀಲ್ ಜಿಲ್ಲೆಯ ಮಾಜಿ ಅಧ್ಯಕ್ಷೆ ಪೂಣಿ೯ಮ ರವಿ , ನಿಕಟಪೂವ೯ ಅಧ್ಯಕ್ಷೆ ಅಗ್ನೇಸ್ ಮುತ್ತಣ್ಣ, ನಿಕಟಪೂವ೯ ಕಾಯ೯ದಶಿ೯ ರಶ್ಮಿ…
ಗುಂಡ್ಲುಪೇಟೆ NEWS DESK ಜು.2 : ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 5 ಹುಲಿಗಳನ್ನು ವಿಷವಿಟ್ಟು ಕೊಂದು ಹಾಕಿದ ಘಟನೆಯ ಬೆನ್ನಲ್ಲೇ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ. ಸುಮಾರು 20 ಕೋತಿಗಳು ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ಪ್ರಕರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ವಿಷ ಪ್ರಾಶನದಿಂದ ಕೋತಿಗಳು ಮೃತಪಟ್ಟಿರುವ ಕುರಿತು ಶಂಕೆ ವ್ಯಕ್ತವಾಗಿದೆ. ರಸ್ತೆ ಬದಿ ಎರಡು ಚೀಲಗಳಲ್ಲಿ ಕೋತಿಗಳ ಮೃತದೇಹಗಳು ಕಂಡು ಬಂದಿದ್ದು, ಸಾರ್ವಜನಿಕರು ನೀಡಿದ ಮಾಹಿತಿ ಹಿನ್ನೆಲೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೋತಿಗಳಿಗೆ ವಿಷವಿಟ್ಟು ಕೊಂದು ಹಾಕಿರುವ ಶಂಕೆ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹುಲಿ ಮತ್ತು ಕೋತಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪರಿಸರವಾದಿಗಳು ಹಾಗೂ ವನ್ಯಜೀವಿ ಪ್ರೇಮಿಗಳು ಕಠಿಣ ಶಿಕ್ಷೆಯ ಮೂಲಕ ಮಾನವನ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಮಡಿಕೇರಿ ಜು.2 NEWS DESK : ಚೆಟ್ಟಿಮಾನಿ ಅಂಗನವಾಡಿಯಲ್ಲಿ ಎಲ್ ಕೆ ಜಿ ಪ್ರಾರಂಭೋತ್ಸವ ಹಾಗೂ ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ದಿನೇಶ್ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಕೊಠಡಿಯ ಬೇಡಿಕೆಯನ್ನು ಸಲ್ಲಿಸಿದ್ದು, ಅದನ್ನು ನೆರವೇರಿಸುವುದಾಗಿ ಭರವಸೆ ನೀಡಿದರು. ಮಾದರಿ ಎಲ್ ಕೆ ಜಿ ಕೇಂದ್ರವಾಗಿ ಚೆಟ್ಟಿಮಾನಿ ಕೇಂದ್ರವನ್ನು ಮಾರ್ಪಾಡಲಿಸಲು ಗ್ರಾ.ಪಂ ವತಿಯಿಂದ ಸಹಕಾರ ನೀಡುವುದಾಗಿ ತಿಳಿಸಿದರು. ಗ್ರಾ.ಪಂ ಸದಸ್ಯರಾದ ಹ್ಯಾರಿಸ್ ಮಾತನಾಡಿ, ಯಾವುದೇ ಯೋಜನೆಗಳನ್ನು ಇಲಾಖೆ ತಂದರು ನಮ್ಮ ಗ್ರಾಮ ಪಂಚಾಯತಿಯ ಅಂಗನವಾಡಿ ಕಾರ್ಯಕರ್ತೆಯರು ಬಹಳ ಶಿಸ್ತಿನಿಂದ ಯೋಜನೆಯ ಯಶಸ್ವಿಗೆ ಶ್ರಮಿಸುತಿದ್ದಾರೆಂದು ಹರ್ಷ ವ್ಯಕ್ತಪಡಿಸಿದರು. ಈ ಹೊಸ ಆಲೋಚನೆಗೆ ಗ್ರಾಮ ಪಂಚಾಯತಿಯ ಮತ್ತು ವೈಯಕ್ತಿಕ ಸಹಕಾರ ಸದಾ ಇರುವುದಾಗಿ ತಿಳಿಸಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಎಲ್ ಕೆ ಜಿ ಯನ್ನು ಅಂಗನವಾಡಿಯಲ್ಲಿ ಪ್ರಾರಂಭಿಸುತ್ತಿರುವುದು ಇಲಾಖೆ…
ಮಡಿಕೇರಿ ಜು.2 NEWS DESK : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 19.06 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 27.41 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1437.30 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 876 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.33 ಮಿ.ಮೀ. ಕಳೆದ ವರ್ಷ ಇದೇ ದಿನ 33.23 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2053.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1280.46 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1423.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 921.15 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.46 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ನಾಪೋಕ್ಲು ಜೂ.2 NEWS DESK : ಕೊಳಕೇರಿ ಗ್ರಾಮದ ಬೊಮ್ಮಂಜಕೇರಿ ಸುತ್ತಮುತ್ತಲಿನ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ದಾಂಧಲೆ ಮಾಡಿ ಬಾರಿ ನಷ್ಟ ಉಂಟು ಮಾಡಿದೆ. ಗ್ರಾಮದ ಅಚ್ಚಂಡಿರ, ಪುಳ್ಳೆರ, ಮಲೆಯರ, ತಂಬಂಡ, ಬಿದ್ದಾಟಂಡ, ಅಚ್ಚಪಂಡ ತೋಟಗಳಲ್ಲಿ ದಾಂಧಲೆ ನಡೆಸಿದ್ದು, ತೆಂಗು, ಅಡಿಕೆ, ಕಾಫಿ ಗಿಡಗಳನ್ನು ನಾಶಪಡಿಸಿ ರೈತರು ಅಪಾರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದು ಮರಿಯಾನೆ ಸೇರಿದಂತೆ ಏಳು ಕಾಡಾನೆಗಳು ಅಡ್ಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಬೆಳಿಗ್ಗೆ ಎಂಟು ಆನೆಗಳು ಬೊಳ್ಳನಮಂಡ ಪೊನ್ನಪ್ಪ ಅವರ ತೋಟದಲ್ಲಿ ಪ್ರತ್ಯಕ್ಷವಾಗಿದೆ. ಅರಣ್ಯ ಸಂರಕ್ಷಣಾಧಿಕಾರಿ ಕಾಳೇಗೌಡ, ಅರಣ್ಯ ರಕ್ಷಕ ಸಿಬ್ಬಂದಿ, ಸ್ಥಳಕ್ಕೆ ಆಗಮಿಸಿ ಕಾಡಾನೆಗಳನ್ನು ಕಾಡಿಗಟ್ಟಲು ಪ್ರಯತ್ನಿಸಿದ್ದರೂ ಸಫಲರಾಗಿಲ್ಲ. ಈ ಸಂದರ್ಭ ಗ್ರಾಮಸ್ಥರಾದ ಪುಳ್ಳೆರ ವಿನು, ಸೋಮಯ್ಯ, ಅಚ್ಚಂಡಿರ ಅಪ್ಪಸ್ವಾಮಿ, ಗಣೇಶ, ತಂಬಂಡ ಮುತ್ತಪ್ಪ, ರವಿ, ಮಲೆಯರ ಅಪ್ಪಚ್ಚು, ಅಶೋಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು, ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿರುವ ಕಾಡಾನೆಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ನಷ್ಟ ಸಂಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು…
ನಾಪೋಕ್ಲು ಜು.5 NEWS DESK : ಪೆರಾಜೆ ಶಕ್ತಿ ಕೇಂದ್ರದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಣೆ ಮಾಡಲಾಯಿತು. ಪೆರಾಜೆ ದೇವಸ್ಥಾನದ ಉಳ್ಳಾಕುಲ ಸ್ಥಾನದ ಪರಿಸರದಲ್ಲಿ ಸಾಗುವನಿ, ಮಹಾಗನಿ, ಬಿಲ್ವ ಪತ್ರೆ ಗಿಡ ನೆಟ್ಟು ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಆಡಳಿತ ಮುಖ್ಯಸ್ಥ ಜಿತೇಂದ್ರ ನಿಡ್ಯಮಲೆ, ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪೆರಾಜೆ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಸೋಮವಾರಪೇಟೆ ಜು.2 NEWS DESK : ತಾಯಿಯ ಗರ್ಭದಲ್ಲೇ ಮಕ್ಕಳ ಆರೋಗ್ಯ ಪ್ರಾರಂಭವಾಗಿರುತ್ತದೆ. ಮಕ್ಕಳ ಆರೋಗ್ಯದಲ್ಲಿ ಅವರು ಬೆಳೆಯುವ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುಪರ್ಣ ಕೃಷ್ಣಾನಂದ ಹೇಳಿದರು. ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಚೌಡ್ಲು ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಹದಿಹರೆಯದಲ್ಲಿ ಮಾನಸಿಕ ಆರೋಗ್ಯದ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಬೆಳೆಯುತ್ತಿರುವ ಮಕ್ಕಳು ನೋಡಿ ಕಲಿಯುವುದೇ ಹೆಚ್ಚು. ಮನೆಯಲ್ಲಿ ಪೋಷಕರು, ಶಾಲಾ ಕಾಲೇಜಿನಲ್ಲಿ ಶಿಕ್ಷಕರನ್ನು ನೋಡಿ ಕಲಿಯುತ್ತಾರೆ. ಮಕ್ಕಳ ಬೆಳವಣಿಗೆಯಲ್ಲಿ ಇಬ್ಬರ ಪಾತ್ರ ಪ್ರಮುಖವಾದುದು ಎಂದು ಹೇಳಿದರು. ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳುವುದು, ಹಿರಿಯರು, ಪೋಷಕರು ಮತ್ತು ಶಿಕ್ಷಕರನ್ನು ಗೌರವಿಸುವುದು, ಅವರ ಮಾತು ಕೇಳುವುದು. ತಮ್ಮನ್ನು ತಾವು ಕಾಪಾಡಿಕೊಳ್ಳುವುದು, ಒಳ್ಳೆಯ ಅಲೋೀಚನೆ ಮಾಡುವುದು ಇಂತಹವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ವಿದ್ಯಾರ್ಥಿಗಳು ಮಾನಸಿಕ ಆರೋಗ್ಯವಂತರು ಎಂದು ಗುರುತಿಸಲಾಗುತ್ತದೆ ಎಂದು ಹೇಳಿದರು. ಕಾರಣವಿಲ್ಲದೆ ಚಿಂತೆ, ದು:ಖ…






