ಸುಂಟಿಕೊಪ್ಪ ಜು.2 NEWS DESK : ಗುಂಡುಗುಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಲಾಯಿತು. ಸ್ಥಳೀಯ ಮುತ್ತಿನ ತೋಟದ ಮಾಲೀಕರಾದ ರಾಜೇಂದ್ರ ಹಾಗೂ ಸಾಧನ ಅವರು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ ಟ್ರ್ಯಾಕ್ ಶೂಟ್ಅನ್ನು ವಿತರಿಸಿದರು. ಇದೇ ವೇಳೆ ಮುತ್ತಿನ ತೋಟದ ವ್ಯವಸ್ಥಾಪಕ ಪ್ರದೀಪ್ ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಿದರು. ತೋಟದ ಮಾಲೀಕರಾದ ರಾಜೇಂದ್ರ ಮಾತನಾಡಿ ಈ ಭಾಗದಲ್ಲಿ ಹೆಚ್ಚಾಗಿ ಕೂಲಿಕಾರ್ಮಿಕರ ಮಕ್ಕಳೇ ವಿದ್ಯಾಭ್ಯಾಸಕ್ಕೆ ಬರುತ್ತಿದ್ದಾರೆ ಅವರ ಭವಿಷ್ಯದ ದೃಷ್ಟಿಯಿಂದ ಮಕ್ಕಳಲ್ಲಿ ಇನ್ನಷ್ಟು ಓದಿನಲ್ಲಿ ಆಸಕ್ತಿ ಮೂಡುವ ದೃಷ್ಟಿಯಿಂದ ನಮ್ಮಿಂದಾದ ಸಣ್ಣ ಸಹಾಯ ಮಾಡುತ್ತಿದ್ದೇವೆ ಎಂದರು. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಗೌರಮಣಿ ಮತ್ತು ಶಿಕ್ಷಕಿ ಪೂರ್ಣಿಮಾ ಇದ್ದರು.
ಲೇಖಕ: admin
ಮಡಿಕೇರಿ NEWS DESK ಜು.1 : ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲಘಟ್ಟಗಳಲ್ಲಿ ಎದುರಾದ ಸಂಕಷ್ಟಗಳ ಸಂದರ್ಭಗಳಲ್ಲಿ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯನಿರ್ವಹಿಸುವ ಮೂಲಕ ‘ಪ್ರಜಾಪ್ರಭುತ್ವ’ ವ್ಯವಸ್ಥೆಯ ಸಂರಕ್ಷಣೆಗೆ ಶ್ರಮಿಸಿರುವುದಾಗಿ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ‘ಪತ್ರಿಕಾ ದಿನಾಚರಣೆ’ ಹಾಗೂ ವಾರ್ಷಿಕ ಪ್ರಶಸ್ತಿ ಪದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಪತ್ರಕರ್ತರ ಸಂಘದ ‘ಸ್ವಾಸ್ಥ್ಯ, ಸುಂದರ, ಸಮಾಜ’ ಎನ್ನುವ ಘೋಷವಾಕ್ಯದಂತೆ ಪತ್ರಿಕಾ ಕ್ಷೇತ್ರವು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಸದಾ ಶ್ರಮಿಸುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬಲ ತುಂಬುವ ಮತ್ತು ಬೆಂಬಲವನ್ನು ನೀಡುವ ಕಾರ್ಯದ ಮೂಲಕ ಸುಂದರ ಸಮಾಜ ನಿರ್ಮಾಣ ಸಾಧ್ಯವಿದೆ ಎಂದರು. ಪ್ರಸ್ತುತ ವ್ಯವಸ್ಥೆಯಲ್ಲಿ ಬಂಡವಾಳಶಾಹಿಗಳು, ಅಧಿಕಾರಸ್ಥರಿಂದ ನಿರಂತರವಾಗಿ ಅಧಿಕಾರದ ದುರ್ಬಳಕೆ ನಡೆಯುತ್ತಿದೆ. ಸ್ವಾತಂತ್ರ್ಯವನ್ನು ಪಡೆದು ಎಪ್ಪತ್ತೈದು ವರ್ಷಗಳು ಕಳೆದಿರುವ ಈ ದಿನಗಳಲ್ಲಿ ಸಮಬಾಳು, ಸಮಪಾಲು ಎನ್ನುವುದು…
ಮಡಿಕೇರಿ ಜು.1 NEWS DESK : ಮನೆ ಹಾಗೂ ಕಟ್ಟಡ ನಿರ್ಮಾಣ ಮಾಡಬೇಕಾದರೆ ಪ್ರಾರಂಭಿಕ ಪ್ರಮಾಣಪತ್ರ (ಸಿಸಿ) ಮತ್ತು ಸ್ವಾಧಿನಾನುಭವ ಅಥವಾ ವಾಸ ಯೋಗ್ಯ ಪ್ರಮಾಣ ಪತ್ರ (ಒಸಿ) ಪಡೆದುಕೊಳ್ಳುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಈ ನಿಯಮ ಗ್ರಾ.ಪಂ ವ್ಯಾಪ್ತಿಗೂ ಅನ್ವಯಿಸಲಿದೆ ಎಂದು ಸರ್ಕಾರ ಹೇಳಿದ್ದು, ಇದನ್ನು ತೀವ್ರವಾಗಿ ವಿರೋಧಿಸುವುದಾಗಿ ನಂಜರಾಯಪಟ್ಟಣ ಗ್ರಾ.ಪಂ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರದ ಹೊಸ ನಿಯಮದಿಂದ ಗ್ರಾಮೀಣ ಭಾಗದ ಕಡು ಬಡವರು, ಬಡವರು, ಕೂಲಿ ಕಾರ್ಮಿಕರು, ದುರ್ಬಲರು ಹಾಗೂ ವಸತಿ ರಹಿತ ಜನಸಾಮಾನ್ಯರು ಮನೆ ನಿರ್ಮಿಸಿಕೊಳ್ಳುವ ಸಂದರ್ಭ ಹಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಸ್ವಂತ ಸೂರು ಹೊಂದಬೇಕೆನ್ನುವ ಬಡವರ ಕನಸು ಕನಸಾಗಿಯೇ ಉಳಿಯಲಿದೆ. ಆದ್ದರಿಂದ ಸರ್ಕಾರ ಗ್ರಾಮೀಣ ಜನರ ಹಿತದೃಷ್ಟಿಯಿಂದ ನಿಯಮಕ್ಕೆ ತಿದ್ದುಪಡಿ ತಂದು ಗ್ರಾ.ಪಂ ವ್ಯಾಪ್ತಿಗೆ ಸರಳ ನಿಯಮಗಳನ್ನು ರೂಪಿಸಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಸರ್ಕಾರ ನಿಯಮಗಳನ್ನು ಸಡಿಲಿಸದಿದ್ದರೆ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ…
ಮಡಿಕೇರಿ ಜು.1 NEWS DESK : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಭವನ ಕೊಡಗು ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಜು.6 ರಂದು ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಮತ್ತು ಕೊಡಗು ಮಳೆಗಾಲ ಕವಿಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಅಂದು ಅಪರಾಹ್ನ 2 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇಂದ್ರ ಸಮಿತಿ ಸ್ಥಾಪಕ ಸಂಚಾಲಕರಾದ ಡಾ.ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ಟೀಚರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಕನ್ನಡ ಭವನ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ವಹಿಸಲಿದ್ದಾರೆ. ಮುಖ್ಯತಿಥಿಗಳಾಗಿ ಲೇಖಕರು ಹಾಗೂ ಕವಯತ್ರಿ ಸ್ಮಿತಾ ಅಮೃತರಾಜ್, ಹಿಯರಿಂಗ್ ಸ್ವೀಚ್ ಹಾಗೂ ಇಂಪ್ಲಾಂಟ್ ಕ್ಲಿನಿಕ್ ಇಂಡಿಯಾ ಹಾಗೂ ಮರ್ಕರಾ ಪೋಸ್ಟ್ ಎಂ.ಡಿ ಹಾಗೂ ಪಿ.ಆರ್.ಮ್ಯಾನೇಜರ್ ಜೈರಸ್ ಥಾಮಸ್ ಅಲೆಗ್ಸಾಂಡರ್ ಕೊಡಗು ಕನ್ನಡ ಭವನ ಕೋಶಾಧಿಕಾರಿ ವಿನೋದ್ ಕುಡ್ತೇಕರ್, ಕಾರ್ಯದರ್ಶಿಗಳಾದ ವಸಂತ್ ಕೆರೆಮನೆ ಪಾಲ್ಗೊಳ್ಳಲಿದ್ದು, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೊಡಗು…
ಮಡಿಕೇರಿ ಜು.1 NEWS DESK : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2025-26ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುತ್ತದೆ. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ ಕಂಪನಿಯನ್ನು…
ಮಡಿಕೇರಿ ಜು.1 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 10 ಗ್ರಾಮ ಪಂಚಾಯತ್ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು ಕಿರುಗೂರು, ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಮತ್ತು ಕರಿಕೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್ನ ಮೂಲಕ ಅರ್ಜಿ ಸಲ್ಲಿಸಲು ಜುಲೈ, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net ಈ-ಮೇಲ್ ಐಡಿಯನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.
ಪುತ್ತೂರು ಜು.1 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2024-25ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಗಳನ್ನು ಪಡೆದು ದಾಖಲೆಯನ್ನು ನಿರ್ಮಿಸಿದ್ದಾರೆ. ಕಾಲೇಜಿನ ಡಾಟಾ ಸೈನ್ಸ್ ವಿಭಾಗಕ್ಕೆ 4, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗಕ್ಕೆ 2 ಮತ್ತು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗಕ್ಕೆ ಒಂದು ಇಂಜಿನಿಯರಿಂಗ್ ಪರೀಕ್ಷೆ ಫಲಿತಾಂಶ ಪ್ರಕಟ : ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ 7 ರ್ಯಾಂಕ್ ಲಭಿಸಿರುತ್ತದೆ. 4 ವರ್ಷಗಳ ಕೆಳಗೆ ನೂತನವಾಗಿ ಆರಂಭವಾದ ಡಾಟಾ ಸೈನ್ಸ್ ವಿಭಾಗದ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳು ಅಪೂರ್ವ ಸಾಧನೆಯನ್ನು ಮಾಡಿದ್ದು ಒಂದು ಚಿನ್ನದ ಪದಕದ ಜೆತೆಗೆ ಒಟ್ಟು 4 ರ್ಯಾಂಕ್ ಗಳನ್ನು ಗಳಿಸಿಕೊಂಡಿದ್ದಾರೆ. ಸುಚಿತಾ ಇವರು 9.60 ಸಿಜಿಪಿಎ ಅಂಕಗಳೊಂದಿಗೆ ಪ್ರಥಮ ರ್ಯಾಂಕ್ ಹಾಗೂ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಅದೇ ವಿಭಾಗದ ಪ್ರಜ್ಞಾಶಂಕರಿ 9.52 ಸಿಜಿಪಿಎ…
ಮಡಿಕೇರಿ ಜು.1 NEWS DESK : ಮಡಿಕೇರಿ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದ ನಿವಾಸಿ ಮುದ್ದಂಡ ಕಾವೇರಮ್ಮ ಪಿ. (98) (ತಾಮನೆ ತಂಬುಕುತ್ತೀರ) ಅವರು ಇಂದು ಮೈಸೂರಿನಲ್ಲಿ ನಿಧನರಾದರು. ಇವರ ಅಂತ್ಯಕ್ರಿಯೆ ಜು.2 ರಂದು ಬೆಳಿಗ್ಗೆ 11 ಗಂಟೆಗೆ ಸೂರ್ಲಬ್ಬಿಯ ಮುದ್ದಂಡ ಐನ್ ಮನೆಯಲ್ಲಿ ನಡೆಯಲಿದೆ. ಕಾವೇರಮ್ಮ ಅವರ ನಿಧನಕ್ಕೆ ಮುದ್ದಂಡ ಕುಟುಂಬಸ್ಥರು ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ ಜು.1 NEWS DESK : ಶ್ರೀ ಕಂಚಿಕಾಮಾಕ್ಷಿ ಬಾಲಕ ಮಂಡಳಿ 62ನೇ ವರ್ಷದ ದಸರಾ ಮಂಟಪ ಸಮಿತಿಯ ಅಧ್ಯಕ್ಷರಾಗಿ ಲೋಹಿತ್ ಆಯ್ಕೆಯಾಗಿದ್ದಾರೆ.
ಮಡಿಕೇರಿ ಜು NEWS DESK.1 : ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ 2025ನೇ ಸಾಲಿನ ದಸರಾ ಮಂಟಪ ಸಮಿತಿ ಅಧ್ಯಕ್ಷರಾಗಿ ಆಪಾಡಂಡ ವಿನೋದ್ ಕಾರ್ಯಪ್ಪ ಆಯ್ಕೆಯಾಗಿದ್ದಾರೆ.






