ಲೇಖಕ: admin

ಮಡಿಕೇರಿ NEWS DESK ಜೂ.30 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾಗಿ ಬರಹಗಾರ್ತಿ ಹಾಗೂ ಚಿತ್ರನಟಿ ಈರಮಂಡ ಹರಿಣಿ ವಿಜಯ್ ನೇಮಕಗೊಂಡಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರಿಂದ ಹರಿಣಿ ಅವರು ಅಧಿಕಾರ ಸ್ವೀಕರಿಸಿದರು.

Read More

ಮೈಸೂರು, ಜೂ.30 NEWS DESK : ನಮ್ಮ ಮೈಸೂರಿನ ಕೆ.ಆರ್‌.ಎಸ್‌. ರಸ್ತೆಯಲ್ಲಿರುವ ಇಎಸ್‌ಐ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು, ವೈದ್ಯರು, ಆಡಳಿತ ಮಂಡಳಿಯ ಅಧಿಕಾರಿಗಳು ತಾಳ್ಮೆಯಿಂದ ವರ್ತಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸೂಚನೆ ನೀಡಿದ್ದಾರೆ. “ಇಎಸ್‌ಐ ಆಸ್ಪತ್ರೆ ನಿತ್ರಾಣ” ಎಂಬ ಶೀರ್ಷಿಕೆಯಡಿ ಮಾಧ್ಯಮದಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಯದುವೀರ್‌ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಇಎಸ್‌ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರು ಮತ್ತು ಆಡಳಿತ ಮಂಡಳಿಗೆ ತಾಳ್ಮೆಯಿಂದ ಇರುವಂತೆ ಸೂಚನೆ ನೀಡಲಾಯಿತು ಎಂದು ತಿಳಿಸಿದ್ದಾರೆ. ರೋಗಿಗಳಿಗೆ ಸೂಕ್ತ, ಸಮರ್ಪಕ, ಪರಿಣಾಮಕಾರಿ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಕೊಳ್ಳಬೇಕು. ಎಲ್ಲಾ ಸಮಯದಲ್ಲೂ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಸೂಚನೆ ನೀಡಲಾಯಿತು ಎಂದು ಯದುವೀರ್‌ ಸ್ಪಷ್ಟಪಡಿಸಿದ್ದಾರೆ. ವೈದ್ಯಕೀಯ ಯಂತ್ರೋಪಕರಣಗಳು, ತಜ್ಞ ವೈದ್ಯರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು. ಖಾಲಿ ಇರುವ ವೈದ್ಯ-ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಸೂಕ್ತ…

Read More

ಮಡಿಕೇರಿ ಜೂ.30 NEWS DESK : ಹಾಟ್೯ ಲ್ಯಾಂಪ್ ಆಂಗ್ಲ ಅನುವಾದಿತ ಕೃತಿಯ ಮೂಲಕ ‘ಕನ್ನಡ’ ಸಾಹಿತ್ಯಿದ ಅಂತಃಶಕ್ತಿಯನ್ನು ವಿಶ್ವದ ಉದ್ದಗಲಕ್ಕೂ ಪಸರಿಸಿ ಬೂಕರ್ ಪ್ರಶಸ್ತಿಯ ಹಿರಿಮೆಯ ಗರಿಯನ್ನು ತಮ್ಮ ಮಡಿಗೇರಿಸಿಕೊಂಡ ಕೊಡಗಿನ ದೀಪಾಭಾಸ್ತಿ ಅವರಿಗೆ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತ ಅಭಿವಂದನಾ ದೀಪಾ’ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಸಂಘಟನೆಗಳು ಅಭಿಮಾನ ಪೂರ್ವಕವಾದ ಗೌರವವನ್ನು ಅಪಿ೯ಸಿ ಸಂಭ್ರಮಿಸಿದರು. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ ಸಭಾಂಗಣದಲ್ಲಿ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತ ‘ಅಭಿವಂದನಾ ದೀಪ’ ಎಂಬ ವಿಶಿಷ್ಟ ಪೌರ ಸನ್ಮಾನ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಭಾನು ಮುಷ್ತಾಕ್ ಅವರ ಎದೆಯ ಹಣತೆ ಕೃತಿಯನ್ನು ಇಂಗಲೀಷ್‌ಗೆ ‘ಹಾರ್ಟ್ ಲ್ಯಾಂಪ್’ ಆಗಿ ಅನುವಾದಿಸಿ ಬೂಕರ್ ಪ್ರಶಸ್ತಿಯನ್ನು ದೀಪಾ ಭಾಸ್ತಿ ಅವರು ಪಡೆದಿರುವುದು ಜಿಲ್ಲೆಯ ಇತಿಹಾಸದಲ್ಲೇ ಐತಿಹಾಸಿಕ ಸಾಧನೆ. ಇಂತಹ ಸಾಧನೆಯ ಮೂಲಕ ದೀಪಾ ಭಾಸ್ತಿ ಅವರು ಕೊಡಗಿಗೆ ಹೆಮ್ಮೆಯನ್ನು ತಂದಿದ್ದಾರೆಂದು…

Read More

ಮಡಿಕೇರಿ ಜೂ.30 NEWS DESK : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಅಡಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ವಸತಿ ರಹಿತ (ನಿವೇಶನ / ಕಚ್ಚಾ ಮನೆ ಹೊಂದಿರುವ) ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ https/pmay.urban.gov.in ದಲ್ಲಿ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ನಗರಸಭೆ ಮಡಿಕೇರಿ, ಪುರಸಭೆ ಕುಶಾಲನಗರ & ವಿರಾಜಪೇಟೆ ಹಾಗೂ ಪಟ್ಟಣ ಪಂಚಾಯಿತಿ ಸೋಮವಾರಪೇಟೆ & ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡುಗಳಲ್ಲಿ ಇದುವರೆಗೂ ವಸತಿ ಯೋಜನೆಗಳ ಸೌಲಭ್ಯ ಪಡೆಯದ ಎಲ್ಲಾ ವಸತಿ ರಹಿತ ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ (ವಿಶೇಷವಾಗಿ ಸಪಾಯಿ ಕರ್ಮಚಾರಿಗಳು, ಬೀದಿ ಬದಿ ವ್ಯಾಪಾರಿಗಳು, ಪಿ.ಎಂ. ವಿಶ್ವಕರ್ಮ ಯೋಜನೆಯ ಫಲಾನುಭವಿಗಳು, ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕೊಳಚೆ ಪ್ರದೇಶದ ನಿವಾಸಿಗಳು ಸೇರಿದಂತೆ) ವಸತಿ ಸೌಲಭ್ಯ ಪಡೆಯಲು ಜುಲೈ, 15 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.…

Read More

ಮಡಿಕೇರಿ ಜೂ.30 NEWS DESK : ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ರಾಜ್ಯ ಮುಜಾರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಲು ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ಹಾಗೂ ಪದಾಧಿಕಾರಿಗಳು ಮುಜಾರಾಯಿ ಸಚಿವರ ಬಳಿಗೆ ನಿಯೋಗ ತೆರಳುವ ಇಂಗಿತವನ್ನು ವ್ಯಕ್ತಪಡಿಸಿದರು. ಇದಕ್ಕೆ ಬೆಂಬಲ ಸೂಚಿಸಿದ ಶಾಸಕರು, ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಅನುದಾನ ಪಡೆಯಲು ತಮ್ಮ ಸಂಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದರು. ದೇವಾಲಯಕ್ಕೆ ಬರುವ ಭಕ್ತರಿಗೆ ದೇವಾಲಯ ವ್ಯವಸ್ಥಾಪನಾ ಸಮಿತಿಯಿಂದ ಅನುಕೂಲಕರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ದೇವಾಲಯದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ದೇವಾಲಯದ ಸಾಂಪ್ರದಾಯಿಕ ಉತ್ಸಾವಾದಿಗಳನ್ನು ಕಾಲಕಾಲಕ್ಕೆ ತಕ್ಕಂತೆ ನಡೆಸಿಕೊಂಡು ಹೋಗಬೇಕು ಎಂದು…

Read More

ಮಡಿಕೇರಿ ಜೂ.30 NEWS DESK : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ಮಾದಿಗ, ಸಮಗಾರ, ಡೋರ, ಮೋಚಿ, ಮೋಚಿಗಾರ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳ ಕುಟುಂಬದ ನಿರುದ್ಯೋಗಿ ವಿದ್ಯಾವಂತ ಯುವಕ-ಯುವತಿಯರಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಪಡೆದಿರುವವರಿಗೆ ಚರ್ಮೋದ್ಯೋಮದಲ್ಲಿ ಹೊಸ ತಂತ್ರಜ್ಞಾನ, ವಿನ್ಯಾಶ ಮತ್ತು ಮಾರುಕಟ್ಟೆ ಕುರಿತು ತರಬೇತಿಗೆ ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರಪ್ರದೇಶ, ಪಶ್ಚಿಮ ಬಂಗಾಳಕ್ಕೆ ನಿಗಮದ ವತಿಯಿಂದಿ ತರಬೇತಿಗೆ ನಿಯೋಜನೆ ಮಾಡಲಾಗುತ್ತದೆ. ನಿಯೋಜನೆಗೊಂಡ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ವಸತಿ ಹಾಗೂ ಶಿಷ್ಯವೇತನ ನೀಡಲಾಗುವುದು.  ಆಸಕ್ತರು ಜುಲೈ 5 ರೊಳಗೆ ನಗರದ ಲಿಡ್ಕರ್ ಕಚೇರಿಗೆ ಭೇಟಿ ನೀಡಿ ಸೂಕ್ತ ದಾಖಲಾತಿಗಳನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಂಯೋಜಕರು ಲಿಡ್ಕರ್ ಕೂಡಗು ಜಿಲ್ಲೆ ಮೊಬೈಲ್ ಸಂಖ್ಯೆ: 9741833307, 7795603247 ನ್ನು ಸಂಪರ್ಕಿಸಬಹುದು ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.30 NEWS DESK :  ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕ ಪ್ರಕಟಿಸಲು ಉದ್ದೇಶಿಸಲಾಗಿದೆ. ಆದ್ದರಿಂದ ಲೇಖಕರು ಅರೆಭಾಷೆ ಕಥೆ, ಅರೆಭಾಷೆ ಅಜ್ಜಿ ಕಥೆ, ಅರೆಭಾಷೆ ಜನಪದ, ಅರೆಭಾಷೆ ಕವನ, ಅರೆಭಾಷೆ ಲೇಖನ, ಅರೆಭಾಷೆ ವಿಚಾರ ಸಾಹಿತ್ಯ, ಅರೆಭಾಷೆ ಲಲಿತ ಪ್ರಬಂಧ, ಅರೆಭಾಷೆ ಸಂಶೋಧನ ಕೃತಿಗಳು ಇನ್ನಿತರೆ ಬರಹಗಳಿದ್ದಲ್ಲಿ ಡಿಟಿಪಿ ಪ್ರತಿಗಳನ್ನು ಅಕಾಡೆಮಿಗೆ ಸಲ್ಲಿಸುವಂತೆ ಹಾಗೂ ಇ-ಮೇಲ್ ಮೂಲಕ arebaseacademy@gmail.com ಕಳುಹಿಸುವಂತೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಅವರು ಕೋರಿದ್ದಾರೆ. ಆದ್ದರಿಂದ ತಮ್ಮ ಡಿಟಿಪಿ ಪ್ರತಿಗಳನ್ನು ಸಲ್ಲಿಸಲು 2025 ಜುಲೈ 31 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರು, ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ, ರಾಜಸೀಟ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ. ಮೊ ನಂ 6362522677 ಸಂಪರ್ಕಿಸಬಹುದು. arebaseacademy@gmail.com ಪುಸ್ತಕಗಳ ಆಯ್ಕೆಯ ಹಕ್ಕು ಅಕಾಡೆಮಿಯದಾಗಿರುತ್ತದೆ ಹಾಗೂ ಬರಹ ಕನಿಷ್ಟ 70 ರಿಂದ…

Read More

ಮಡಿಕೇರಿ ಜೂ.30 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಆಚಾರ ವಿಚಾರ, ಜಾನಪದ ಹಾಗೂ ಕಲೆಗೆ ಸಂಬಂಧಿಸಿದ ಸಂಶೋಧನಾ ಪ್ರಬಂಧಕ್ಕೆ ಫೆಲೋಶಿಫ್ ನೀಡಿ ರಚಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪದವೀಧರರು ಫೆಲೋಶಿಫ್‍ಗಾಗಿ ಅರ್ಜಿ ಸಲ್ಲಿಸಲು ಜುಲೈ, 21 ಕೊನೆಯ ದಿನವಾಗಿದೆ. ಬಂದಿರುವ ಅರ್ಜಿಗಳನ್ನು ಆಯ್ಕೆ ಸಮಿತಿಯಲ್ಲಿ ಪರಿಶೀಲಿಸಿ ನಾಲ್ಕು ಸೂಕ್ತ ಸಂಶೋಧಕರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ತಲಾ ರೂ 75,000 ದಂತೆ ಫೆಲೋಶಿಫ್ ನೀಡಲಾಗುವುದು. ಈ ಹಿಂದೆ ಸಂಶೋಧನಾ ಪ್ರಬಂಧಗಳನ್ನು ಸಲ್ಲಿಸಿದವರಿಗೆ ಅವಕಾಶ ಇರುವುದಿಲ್ಲ. ಫೆಲೋಶಿಫ್‍ಗೆ ಆಯ್ಕೆಯಾದವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೀತಿ ನಿಯಮಾವಳಿಗಳಿಗೆ ಬದ್ದರಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ದೂ.ಸಂ.08272- 223055, 6362522677 ಇಲ್ಲಿಂದ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್  ತಿಳಿಸಿದ್ದಾರೆ.…

Read More

ಹೈದರಾಬಾದ್  NEWS DESK ಜೂ.30 : ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ 8 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೈದರಾಬಾದ್ ನ ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್ ನಲ್ಲಿ ನಡೆದಿದೆ. ರಿಯಾಕ್ಟರ್ ನಲ್ಲಿನ ಸ್ಫೋಟದಿಂದ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ 25ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಸಂಶಯ ವ್ಯಕ್ತವಾಗಿದೆ. ಘಟನೆ ಕುರಿತು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಸೂಕ್ತ ರಕ್ಷಣಾ ಕಾರ್ಯಕ್ಕೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

Read More

ಜಮ್ಮು NEWS DESK ಜೂ.30 : ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ಭಯೋತ್ಪಾದಕರ ಮಾರ್ಗದರ್ಶಿಯನ್ನು ಭಾರತೀಯ ಸೇನಾಪಡೆ ಗಡಿಯಲ್ಲಿ ಬಂಧಿಸಿದೆ. ಪೂಂಚ್ ಮತ್ತು ರಜೌರಿ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ಮೊಹಮ್ಮದ್ ಆರಿಫ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಭಾರೀ ಶಸಾಸ್ತ್ರಗಳೊಂದಿಗೆ ನಾಲ್ವರು ಜೈಶ್-ಎ- ಮೊಹಮ್ಮದ್ (ಎಇಒ)ಉಗ್ರರು ಭಾರತದೊಳಗೆ ನುಸುಳಲು ಪ್ರಯತ್ನಿಸುತ್ತಿದ್ದರು. ಇವರೊಂದಿಗೆ ಮೊಹಮ್ಮದ್ ಆರಿಫ್ ಕೂಡ ಇದ್ದ. ಉಳಿದ ಭಯೋತ್ಪಾದಕರು ಗಾಯಗೊಂಡು ಪಾಕಿಸ್ತಾನದ ಕಡೆಗೆ ಓಡಿ ಹೋಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿದೆ.

Read More