ಮಡಿಕೇರಿ ಆ.26 NEWS DESK : ಸಾರ್ವಜನಿಕ ವಲಯದ ‘ಬ್ಯಾಂಕ್ ಆಫ್ ಮಹಾರಾಷ್ಟ್ರ’ ದಲ್ಲಿ ಖಾಲಿ ಇರುವ 500 ಸ್ಪೆಷಲಿಸ್ಟ್ ಸ್ಕೇಲ್ -2 ರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.ಒಟ್ಟು ಹುದ್ದೆಗಳ ಪೈಕಿ ಎಸ್ಸಿ ಅಭ್ಯರ್ಥಿಗಳು -75.ಎಸ್ ಟಿ ವರ್ಗದವರಿಗೆ 37, ಒಬಿಸಿ ಅಭ್ಯರ್ಥಿಗಳಿಗೆ 135, ಆರ್ಥಿಕ ದುರ್ಬಲ ವರ್ಗದವರಿಗೆ 50 ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 203 ಹುದ್ದೆಗಳನ್ನು ಮೀಸಲಿಡಲಾಗಿದೆ. ಒಟ್ಟು ಹುದ್ದೆಗಳ ಸಂಖ್ಯೆ : 500, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 30, 2025 ವಿದ್ಯಾರ್ಹತೆಗಳೇನು ? : ಅಭ್ಯರ್ಥಿಗಳು ಪದವೀಧರ ರಾಗಿದ್ದು,ಇಂಟಿಗ್ರೇಟೆಡ್ ಡ್ಯುಯಲ್ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ. 60 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದವರೂ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎಸ್ ಸಿ/ಎಸ್ಟಿ/ ಒಬಿಸಿ, ಮತ್ತು ವಿಶೇಷಚೇತನ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇ.55 ಅಂಕಗಳೊಂದಿಗೆ ತೇರ್ಗಡೆಯಾಗಿರುವುದು ಕಡ್ಡಾಯವಾಗಿದೆ, ಯಾವುದೇ ಬ್ಯಾಂಕ್ನಲ್ಲಿ ಕನಿಷ್ಠ 3 ವರ್ಷಗಳ ಸೇವಾನುಭವ ಇದ್ದಲ್ಲಿ ನೇಮಕಾತಿಗೆ ಮೊದಲ…
ಲೇಖಕ: admin
ಕಾರ್ಕಳ ಆ.26 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟರು. ತಂದೆ ತಾಯಿ ಮತ್ತುಗುರುಗಳಿಗೆ ಗೌರವ ನೀಡಿ ಓದಿನಲ್ಲಿ ಕಠಿಣಶ್ರಮವನ್ನು ಹಾಕಿದ್ದಲ್ಲಿ ಖಂಡಿತ ಉತ್ತುಂಗ ಮಟ್ಟಕ್ಕೆ ಏರಬಹುದು. ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಪ್ರತಿಕ್ಷಣವೂ ಕೂಡ ಅಮೂಲ್ಯವಾದದ್ದು, ಋಣಾತ್ಮಕ ಚಿಂತನೆಯನ್ನು ಬಿಟ್ಟು ಧನಾತ್ಮಕವಾಗಿ ಆಲೋಚಿಸಿದಾಗ ನಮ್ಮ ಪ್ರಗತಿ ಸಾಧ್ಯ ಎಂದು ವಿದ್ಯಾರ್ಥಿಗಳೊಂದಿಗೆ ಗಾದೆ, ಮನೋರಂಜನೆಯ ಆಟಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸಹ ಸಂಸ್ಥಾಪಕರಲ್ಲಿ ಓರ್ವರಾದ ಶ್ರೀ ಆದರ್ಶ…
ಸೋಮವಾರಪೇಟೆ ಆ.26 NEWS DESK : ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿ ಭಾರಿ ಪ್ರಮಾಣದ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಬಡಜನರ ಅನುಕೂಲಕ್ಕಾಗಿ ಸರ್ಕಾರ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಕಡಿಮೆಬೆಲೆಯಲ್ಲಿ ಬೇರೆಡೆ ಸಾಗಿಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಮೇರೆಗೆ ಆಹಾರ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಪಟ್ಟಣದ ತೋಟಗಾರಿಕೆ ಇಲಾಖೆ ಸಮೀಪ ದಾಳಿ ನಡೆಸಿ ಲಾರಿ ಸಹಿತ 142970 ರೂಮೌಲ್ಯದ 4200ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡು, ಆರೋಪಿ ಕೊಣನೂರಿನ ಇದ್ರೀಸ್ ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಆಹಾರ ನಿರೀಕ್ಷಕಿ ಯಶಸ್ವಿನಿ, ಸಿಬ್ಬಂದಿಗಳಾದ ವಿನೋದ್, ಗ್ರಾಮಆಡಳಿತಾದಿಕಾರಿ ನಾಗೇಂದ್ರ ಹಾಗೂ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಆ.23 NEWS DESK : ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಹಾಗೂ ಪರಿವರ್ತನಾ ಸಹಕಾರ ಸಂಘದ ವಾಣಿಜ್ಯ ಸಂಕೀರ್ಣ ವನ್ನು ಸಂಸದ ಯದುವೀರ್ ಒಡೆಯರ್ ಅವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಅಧ್ಯಕ್ಷ ಅರಮಣಮಾಡ ಸುಗುಣ ಗಣಪತಿ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.
ಮಡಿಕೇರಿ ಆ.25 NEWS DESK : ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆ.27 ರಂದು ಬೆಳಗ್ಗೆ 7 ಗಂಟೆಯಿಂದ ಭಕ್ತಾಧಿಗಳಿಗೆ ಗಣಪತಿ ಪೂಜೆ ಹಾಗೂ ಬೆಳಗ್ಗೆ 10 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ರಾತ್ರಿ 7.30 ಗಂಟೆಗೆ ಮಹಾಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.
ಮಡಿಕೇರಿ ಆ.25 NEWS DESK : ಮಡಿಕೇರಿ ತಾಲ್ಲೂಕು ಪಂಚಾಯತ್ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಮಂಜುನಾಥ್ ಸಿ.ಬಿ ಅವರು ಮಾತಾನಾಡಿ 2023, 2024 ಮತ್ತು 25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಈ ಯೋಜನೆಯಡಿ ಭತ್ಯೆ ಪಡೆಯಲು ಮುಂದುವರಿಸಬೇಕಾಗಿದ್ದಲ್ಲಿ ಪ್ರತಿ ತ್ರೈಮಾಸಿಕದಂತೆ ತಾನು ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮಾಡುತ್ತಿಲ್ಲವೆಂದು ಮತ್ತು ಸ್ವಯಂ ಉದ್ಯೋಗ ಮಾಡುತ್ತಿಲ್ಲವೆಂದು, ಉನ್ನತ ವ್ಯಾಸಂಗವನ್ನು ಮುಂದುವರಿಸುತ್ತಿಲ್ಲವೆಂದು ಸ್ವಯಂ ಘೋಷಣೆಯನ್ನು ನೀಡಬೇಕಿದೆ. ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಬಹುದಾಗಿದ್ದು ವೆಬ್ಸೈಟ್ ವಿಳಾಸ https://www.kaushalkar.com/app/registration_verify ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 1800- 599-7154 …
ಮಡಿಕೇರಿ ಆ.25 NEWS DESK : ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆಯು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೂಡಿಗೆ ಸರ್ಕಲ್ ನಲ್ಲಿ ಶಾಶ್ವತವಾಗಿ ನೂತನ ತಂತ್ರಜ್ಞಾನದ ಮೂಲಕ ಹೈಟೆಕ್ ಶೌಚಾಲಯ ನಿರ್ಮಾಣ ಮಾಡುವ ಬಗ್ಗೆ ಜಾಗವನ್ನು ಗುರುತಿಸಿ ಅದರ ಮೂಲಕ ನಿರ್ಮಾಣ ಕಾಮಗಾರಿಯ ಕೈಗೊಳ್ಳುವ ಬಗ್ಗೆ ಸಭೆಯು ಒಕ್ಕೊರಲಿನ ತೀರ್ಮಾನ ಕೈಗೊಂಡಿತು. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಮಾಡುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಎಲ್ಲಾ ವಾರ್ಡ್ ಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚೆಗಳು ನಡೆದವು. ಬೀದಿ ನಾಯಿಗಳ ಹಾವಾಳಿಗಳ ಬಗ್ಗೆ ಸಾರ್ವಜನಿಕರಿಂದ ಬಂದ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಅಧ್ಯಕ್ಷ ಕೆ.ಟಿ.ಗಿರೀಶ್ ಮಾತಾನಾಡಿ, ಸಭೆಯಲ್ಲಿ ಚರ್ಚೆಗೊಂಡ…
ಮಡಿಕೇರಿ ಆ.25 NEWS DESK : ಮಡಿಕೇರಿ ನಗರ ಯುವ ದಸರಾ ಸಮಿತಿ ವತಿಯಿಂದ ಆಯೋಜಿಸುವ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗೆ ಸೆ.6 ರಂದು ತಂಡಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಯುವ ದಸರಾ ಸಮಿತಿಯ ಅಧ್ಯಕ್ಷ ಕವನ್ ಕೊತ್ತೋಳಿ ತಿಳಿಸಿದ್ದಾರೆ. ನಗರದ ಹೊಟೇಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದ ತಂಡಗಳ ನಡುವೆ ಸೆ.27 ರಂದು ನಗರದ ಗಾಂಧಿ ಮೈದಾನದ ವೇದಿಕೆಯಲ್ಲಿ ಸ್ಪರ್ಧೆಯನ್ನು ಆಯೋಜಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಇದು ರಾಜ್ಯ ಮಟ್ಟದ ಸ್ಪರ್ಧೆಯಾಗಿದ್ದು, ಸ್ಪರ್ಧಿಗಳು ಶಾಸ್ತ್ರೀಯ ಪ್ರಕಾರ ಹಾಗೂ ದೇವರಿಗೆ ಸಂಬಂಧಪಟ್ಟ ಪ್ರಕಾರವನ್ನು ಹೊರತುಪಡಿಸಿ ಇತರೆ ಯಾವುದೇ ಪ್ರಕಾರವನ್ನು ಆಯ್ದುಕೊಳ್ಳಬಹುದು. ಸ್ಪರ್ಧೆಗೆ ವಯೋಮಿತಿಯ ನಿರ್ಬಂಧವಿಲ್ಲ, ತಂಡವು ಕನಿಷ್ಠ 12 ಹಾಗೂ ಗರಿಷ್ಟ 30 ಮಂದಿ ಕಲಾವಿದರನ್ನು ಹೊಂದಿರಬೇಕು. ನೃತ್ಯಗಳು ಸಾಮಾಜಿಕ ಪರಿಕಲ್ಪನೆ ಹಾಗೂ ಸಂದೇಶಗಳನ್ನು ಹೊಂದಿರಬೇಕು. ಹಾಡಿನ ಭಾಷೆ ಹಾಗೂ ಉಡುಗೆ ತೊಡುಗೆಗಳು ಸಭ್ಯವಾಗಿರಬೇಕು, ಯಾರ ನಂಬಿಕೆ ಹಾಗೂ ಭಾವನೆಗೆ ನೋವುಂಟು ಮಾಡಬಾರದು. 10+2…
ಮಡಿಕೇರಿ ಆ.25 NEWS DESK : ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ಆಯೋಜನೆಗೊಂಡಿರುವ ವಿರಾಜಪೇಟೆ ತಾಲ್ಲೂಕು ಮಟ್ಟದ ಕ್ರೀಡಾ ಕೂಟವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಬಳಿಕ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ಮಾನಸಿಕ ಸಮತೋಲನ ವೃದ್ಧಿಸಿಕೊಂಡು ವಿದ್ಯಾಭ್ಯಾಸವನ್ನು ಉತ್ತಮ ರೀತಿಯಲ್ಲಿ ಮಾಡಲು ಸಹಕಾರಿಯಾಗಿದೆ. ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆಯು ಬಹುಮುಖ್ಯವಾಗಿದೆ. ಪ್ರತಿಯೊಂದು ಕ್ರೀಡೆಯಲ್ಲಿಯೂ ಸೋಲು ಗೆಲುವಿನೊಂದಿಗೆ ಭಾಗವಹಿಸುವಿಕೆಯೂ ಅತಿ ಮುಖ್ಯವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉನ್ನತ ಪ್ರದರ್ಶನವನ್ನು ನೀಡಿ ಜೀವನದಲ್ಲಿ ಯಶಸ್ಸು ಕಾಣುವಂತಾಗಬೇಕೆಂದು ಶುಭ ಹಾರೈಸಿದರು. ಈ ಸಂದರ್ಭ ಪ್ರಗತಿ ಶಾಲೆಯ ಸಂಸ್ಥಾಪಕರು, ಮಾದಂಡ ಎಸ್.ಪೂವಯ್ಯ, ಮಾದಂಡ ತಿಮ್ಮಯ್ಯ ಆಡಳಿತ ಅಧಿಕಾರಿ, ಸುಷ್ಮ ತಿಮ್ಮಯ್ಯ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ,ಪುರಸಭೆ ಸಾಯಿ ಸಮಿತಿ ಅಧ್ಯಕ್ಷ ಅಬುದುಲ್ ಜಲಿಲ್, ಬಿ.ಇ.ಆನಂದ್, ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪುರಸಭೆ ಸದಸ್ಯರಾದ ರಾಜೇಶ್,…
ಸಿದ್ದಾಪುರ ಆ.25 NEWS DESK : ಪಾಲಿಬೆಟ್ಟ ವರ್ತಕರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಯು.ಮುನೀರ್ ಅವಿರೋಧವಾಗಿ ಆಯ್ಕೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಟಿ.ಜಿ.ವಿಜೇಶ್, ಮೈಕಲ್, ಪ್ರಧಾನ ಕಾರ್ಯದರ್ಶಿ ಎಂ.ಹೆಚ್.ಸಮೀರ್, ಕಾರ್ಯದರ್ಶಿಗಳಾಗಿ ಸಿ.ಎ.ಫೈಝಲ್ ಹಾಗೂ ಅಯ್ಯಪ್ಪ, ಖಜಾಂಚಿಯಾಗಿ ಕೆ.ಹೆಚ್ ಅಬೂಬಕ್ಕರ್, ಸಲಹೆಗಾರರಾಗಿ ಪುತ್ತಂ ಪ್ರದೀಪ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಎ.ಎಲ್.ರವಿಕುಮಾರ್ ಅನಿಲ್, ಜಕ್ರಿಯ, ಹರೀಶ್, ರಶೀದ್, ಫೈಝಲ್ ರೆಹಮಾನ್, ಶೈಲಾ, ಮುಬಾರಕ್, ನಳಿನಿ, ನಸೀಫ್, ಲೋಕೇಶ್, ಮೂರ್ತಿ ಸೇರಿದಂತೆ ಮತ್ತಿತರರು ಆಯ್ಕೆಯಾದರು. ಸಭೆಯಲ್ಲಿ ನೂತನ ಅಧ್ಯಕ್ಷ ಮುನೀರ್ ಮಾತನಾಡಿ ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಪಾಲಿಬೆಟ್ಟ ಗ್ರಾಮದಲ್ಲಿ ಎಲ್ಲಾ ವರ್ತಕರು ಒಗ್ಗೂಡಿ ನೂತನ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಎಲ್ಲಾ ವರ್ತಕರು ಸಂಘದೊಂದಿಗೆ ಕೈಜೋಡಿಸುವ ಮೂಲಕ ಸಂಘದ ಸದಸ್ಯರುಗಳ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ, ಆರೋಗ್ಯ, ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಸಹಾಯ ಸೇರಿದಂತೆ ಹಲವಾರು ಕಾರ್ಯ ಯೋಜನೆಗಳನ್ನು ರೂಪಿಸಲಾಗಿದ್ದು, ಎಲ್ಲಾ ವರ್ತಕರು ಸಂಘದೊಂದಿಗೆ ಕೈಜೋಡಿಸುವುದರ ಮೂಲಕ ಸಹಕಾರ ನೀಡಬೇಕೆಂದರು. ಈ ಸಂದರ್ಭ ಹಿರಿಯ ವರ್ತಕರು ಸಭೆಯಲ್ಲಿ ಹಾಜರಿದ್ದರು.






