ಸೋಮವಾರಪೇಟೆ ಜೂ.30 NEWS DESK : ಪಟ್ಟಣದ ಮಳೆಹಾನಿ ಪ್ರದೇಶಗಳಿಗೆ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ ಆವರಣದಲ್ಲಿ ತಡೆಗೋಡೆ ಕುಸಿದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅಪ್ಪಚ್ಚು ರಂಜನ್, ಸಂಸ್ಥೆಯ ಅಧ್ಯಕ್ಷರಾದ ಎ.ಆರ್.ಮುತ್ತಣ್ಣ ಅವರಿಂದ ವಿವರ ಪಡೆದು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸೂಚಿಸಿದರು. ನಂತರ ಕುಸಿಯುವ ಹಂತದಲ್ಲಿರುವ ಟರ್ಫ್ ಗ್ರೌಂಡ್ ನ ತಡೆಗೋಡೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು. ಗುತ್ತಿಗೆದಾರರಿಗೆ ಪುನರನಿರ್ಮಾಣ ಮಾಡುವಂತೆ ಸೂಚಿಸಿದರು.
ಲೇಖಕ: admin
ಹೈದರಾಬಾದ್ NEWS DESK ಜೂ.30 : ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ 8 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೈದರಾಬಾದ್ ನ ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್ ನಲ್ಲಿ ನಡೆದಿದೆ. ರಿಯಾಕ್ಟರ್ ನಲ್ಲಿನ ಸ್ಫೋಟದಿಂದ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ 25ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಸಂಶಯ ವ್ಯಕ್ತವಾಗಿದೆ. ಘಟನೆ ಕುರಿತು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಸೂಕ್ತ ರಕ್ಷಣಾ ಕಾರ್ಯಕ್ಕೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಮಡಿಕೇರಿ ಜೂ.30 NEWS DESK : ಜೀವನದಿ ಕಾವೇರಿಯ ಉಗಮಸ್ಥಾನ ಕೊಡಗು ಸೇರಿದಂತೆ ರಾಜ್ಯವ್ಯಾಪಿ ಉತ್ತಮ ಮಳೆಯಾದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲೇ ಭರ್ತಿಯಾಗುವ ಮೂಲಕ ಕೆಆರ್ಎಸ್ ಜಲಾಶಯ ಹೊಸ ದಾಖಲೆ ಸೃಷ್ಟಿಸಿದೆ. ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯಕ್ಕೆ 4ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿದರು. ಈಗಾಗಲೇ 2013, 2014, 2024 ಈ ಮೂರು ವರ್ಷ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದು.
ಮಡಿಕೇರಿ ಜೂ.30 NEWS DESK : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಘಟಕದ ಸಭಾಪತಿಯಾಗಿ ಬಿ.ಕೆ.ರವೀಂದ್ರ ರೈ ಮೂರನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ. ನಗರದ ರೆಡ್ ಕ್ರಾಸ್ ಭವನದಲ್ಲಿ ಜರುಗಿದ ವಾಷಿ೯ಕ ಮಹಾಸಭೆ ಸಂದಭ೯ ಮುಂದಿನ ಮೂರು ವಷ೯ಗಳ ಅವಧಿಗೆ ಆಡಳಿತ ಮಂಡಳಿಯ ಆಯ್ಕೆ ಜರುಗಿತು. ಈ ಸಂದಭ೯ ಸಭಾಪತಿಯಾಗಿ ಬಿ.ಕೆ.ರವೀಂದ್ರರೈ, ಉಪಸಭಾಪತಿಯಾಗಿ ಅನಿಲ್ ಹೆಚ್.ಟಿ., ಕಾಯ೯ದಶಿ೯ಯಾಗಿ ಎಂ.ಧನಂಜಯ, ಖಜಾಂಚಿಯಾಗಿ ಪ್ರಸಾದ್ ಗೌಡ, ಸಹಕಾಯ೯ದಶಿ೯ಯಾಗಿ ಕೆ.ಮಧುಕರ್ ಆಯ್ಕೆಯಾಗಿದ್ದಾರೆ. ರೆಡ್ ಕ್ರಾಸ್ ನಿದೇ೯ಶಕರಾಗಿ ಧೀಘ೯ಕೇಶಿ ಶಿವಣ್ಣ, ಡಾ.ಸಿ.ಆರ್.ಪ್ರಶಾಂತ್, ಹೆಚ್.ಆರ್.ಮುರಳೀಧರ್, ಪಿ.ಆರ್.ರಾಜೇಶ್, ಕೆ.ಎಂ.ವೆಂಕಟೇಶ್, ಬಿ.ಎನ್. ಪ್ರಕಾಶ್, ಎಸ್.ಸಿ.ಸತೀಶ್, ಜೊಸೇಫ್ ಸ್ಯಾಮ್, ಎ.ಕೆ.ಜೀವನ್, ಬಿ.ಕೆ.ಸತೀಶ್ ರೈ, ಬಿ.ಎನ್.ಧನಂಜಯ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ, ವಸಂತಕುಮಾರ್, ತೆನ್ನಿರಾ ಮೈನಾ, ಕೆ.ಸಿ.ವಸಂತ, ಕೆ.ಟಿ.ಉತ್ತಯ್ಯ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಧಾರವಾಡದಿಂದ ಆಗಮಿಸಿದ್ದ ಕನಾ೯ಟಕ ರಾಜ್ಯ ರೆಡ್ ಕ್ರಾಸ್ ನಿದೇ೯ಶಕ ಮಹಂತೇಶ್ ಕಾಯ೯ನಿವ೯ಹಿಸಿದ್ದರು.
ಮಡಿಕೇರಿ ಜೂ.30 NEWS DESK : ನಗರದ ಹೊಸ ಬಡಾವಣೆಯಲ್ಲಿ ಶಾಸಕರ ಅನುದಾನ ರೂ.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಹೊಸ ಬಡಾವಣೆಯ ನವ ಗ್ರಾಮದ ಅಧ್ಯಕ್ಷ ರವಿ ಹಾಗೂ ಉಪಾಧ್ಯಕ್ಷ ಸ್ಟೀವನ್ ಡಿಸೋಜ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಂಘದ ಪದಾಧಿಕಾರಿಗಳಾದ ಉಮೇಶ್, ಸುಮಿತ್ರ, ಅಮ್ಮಿ, ಗುರುವಣ ಹಾಗೂ ಬಡಾವಣೆಯ ಎಲ್ಲಾ ಸದಸ್ಯರು ಹಾಜರಿದ್ದು, ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ಜೂ.30 NEWS DESK : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 4.72 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1408.49 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 787.55 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.98 ಮಿ.ಮೀ. ಕಳೆದ ವರ್ಷ ಇದೇ ದಿನ 20.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2021.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1160.68 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 15.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1410.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 782.60 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.41 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ನಾಪೋಕ್ಲು ಜೂ.30 NEWS DESK : ಕಿರುಂದಾಡು ಗ್ರಾಮದ ತೋಟಗಳಲ್ಲಿ ಕಾಡಾನೆಗಳು ದಾಳಿ ಮಾಡಿ ಬೆಳೆ ನಾಶಪಡಿಸಿದೆ. ಗ್ರಾಮದಲ್ಲಿ ಕಾಡಾನೆಗಳ ಹಿಂಡು ತೋಟಗಳಲ್ಲಿ ದಾಂಧಲೆ ನಡೆಸಿದ್ದು, ಬೆಳೆಗಾರರು ತೋಟದಲ್ಲಿದ್ದ ತೆಂಗು, ಅಡಿಕೆ, ಕಾಫಿ, ಬಾಲೆ ಗಿಡಗಳನ್ನು ನಾಶಪಡಿಸಿ ನಷ್ಟ ಉಂಟು ಮಾಡಿದೆ. ಪಾರಾಣೆ ಗ್ರಾಮ ಪಂಚಾಯಿತಿಯ ಕಿರುಂದಾಡು ಗ್ರಾಮದ ಕಲಿಯಂಡ ಪೂವಣ್ಣ ಅವರ ತೋಟಗಳಲ್ಲಿ ದಾಳಿ ನಡೆಸಿರುವ ಕಾಡಾನೆಗಳ ಹಿಂಡು 3 ತೆಂಗು, 60 ಅಡಿಕೆ ಗಿಡ, ಕಾಫಿ, ಬಾಲೆ ಸೇರಿದಂತೆ ಅಪಾರ ಕೃಷಿ ಗಿಡಗಳನ್ನು ಧ್ವಂಸಗೊಳಿಸಿ ಫಸಲುಗಳಿಗೆ ಹಾನಿ ಉಂಟು ಮಾಡಿದೆ. ಕಿರುಂದಾಡು, ಕೈಕಾಡು ಗ್ರಾಮದ ಕೆ.ಡಿ.ಮೋಹನ್, ಹಂಸ, ಅಬ್ದುಲ್ಲಾ ಸೇರಿದಂತೆ ಇನ್ನಿತರ ತೋಟದಲ್ಲೂ ಕೃಷಿ ಗಿಡಗಳನ್ನು ಕಾಡಾನೆಗಳು ನಾಶಪಡಿಸಿದ್ದು, ಸಬಂಧಸಿದ ಇಲಾಖೆ ಹಾಗೂ ಸರ್ಕಾರ ನಷ್ಟಕ್ಕೆ ಒಳಗಾದ ರೈತರಿಗೆ ಸೂಕ್ತ ನಷ್ಟ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಡಿಕೇರಿ ಜೂ.30 NEWS DESK : ಜಾರ್ಖಂಡ್ನ ರಾಂಚಿಯಲ್ಲಿ ಜುಲೈ 3 ರಿಂದ 14ರ ತನಕ ಹಾಕಿ ಇಂಡಿಯಾ ವತಿಯಿಂದ ಜರುಗುತ್ತಿರುವ 15ನೇ ಹಾಕಿ ಇಂಡಿಯಾ ಸಬ್ ಜೂನಿಯರ್ ಮಹಿಳಾ ಹಾಕಿ ಪಂದ್ಯಾವಳಿ 2025ರಲ್ಲಿ ಹಾಕಿ ಕರ್ನಾಟಕ ತಂಡವನ್ನು ಕೊಡಗಿನ 11 ಮಂದಿ ಪ್ರತಿನಿಧಿಸುತ್ತಿದ್ದಾರೆ. ರಾಜ್ಯ ತಂಡವನ್ನು ಹಾಕಿ ಕರ್ನಾಟಕ ಪ್ರಕಟಿಸಿದ್ದು, ಒಟ್ಟು 20 ಮಂದಿಯ ತಂಡದಲ್ಲಿ 10 ಆಟಗಾರ್ತಿಯರು ಹಾಗೂ ತಂಡದ ವ್ಯವಸ್ಥಾಪಕರು ಕೊಡಗಿನವರಾಗಿರುವುದು ಜಿಲ್ಲೆಗೆ ಹೆಮ್ಮೆಯಾಗಿದೆ. ತಂಡದ ನಾಯಕಿಯಾಗಿ ಅಚ್ಚಪಂಡ ಪರ್ಲಿನ್ ಪೊನ್ನಮ್ಮ ತಂಡವನ್ನು ಮುನ್ನಡೆಸಲಿದ್ದಾರೆ. ಆಟಗಾರ್ತಿಯರಾಗಿ ಚೆಯ್ಯಂಡ ತ್ವಿಷಾ ದೇಚಮ್ಮ, ಬಾರಿಯಂಡ ಬೊಳ್ಳಮ್ಮ, ಚೇರಂಡ ನೀಲಮ್ಮ, ಕೀತಿಯಂಡ ಪೂರ್ವಿ ಪೂವಮ್ಮ, ಮಚ್ಚಾಮಾಡ ವಿದ್ಯಾ ಪೊನ್ನಮ್ಮ, ಪೊರ್ಕೋಂಡ ಗೀಷ್ಮ ಪೊನ್ನಮ್ಮ, ಚೌರೀರ ಧನ್ಯ ಕಾವೇಮ್ಮ, ಎಂ.ಎಲ್.ಕೃತಿಕಾ, ಹೆಚ್.ಎನ್.ಜೀವಿತಾ ಸ್ಥಾನ ಪಡೆದಿದ್ದಾರೆ. ತಂಡದ ವ್ಯವಸ್ಥಾಪಕರಾಗಿ ಕಂಬೀರಂಡ ರಾಖಿ ಪೂವಣ್ಣ ಕಾರ್ಯನಿರ್ವಹಿಸಲಿದ್ದಾರೆ.
ನಾಪೋಕ್ಲು ಜೂ.30 NEWS DESK : ಎಮ್ಮೆಮಾಡು ಗ್ರಾಮ ಪಂಚಾಯಿತಿಯ ಸುಧಾರಿತ ಆಡಳಿತ ಮತ್ತು ಅಂಗನವಾಡಿ ಪೋಷಣ ಅಭಿಯಾನದಲ್ಲಿ ಉತ್ತಮ ಪ್ರಗತಿಯನ್ನು ಗುರುತಿಸಿ ಅಸ್ಸಾಂ ರಾಜ್ಯದಿಂದ ಪ್ರತಿನಿದಿಗಳು ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮ ಪಂಚಾಂಯಿತಿಗೆ ಭೇಟಿ ನೀಡಿದರು. ಅಸ್ಸಾಂ ರಾಜ್ಯ ಸರಕಾರದ ಪ್ರತಿನಿದಿಗಳಾಗಿ ಸಬೀತಾ ರಾಥೋಡ್, ಮಲ್ಲಿಕಾ, ಪದ್ಮಜಾ (ಸಿ.ಡಿ.ಪಿ.ಓ) ಎಮ್ಮೆಮಾಡು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿಯ ಆಡಳಿತ ಸುಧಾರಣೆ ಮತ್ತು ಬಾಪೂಜಿ ಸೇವಾ ಕೇಂದ್ರದಿಂದ ಸಾರ್ವಜನಿಕರಿಗೆ ಸಿಗುವ ಸೌಲಭ್ಯಗಳ ವಿವರ ಮತ್ತು ಗ್ರಾಮ ಪಂಚಾಯಿತಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪೋಷಣ ಅಭಿಯಾನದ ಸಂಬಂಧಪಟ್ಟವರಿಂದ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಇದಕ್ಕೂ ಮೊದಲು ಅಸ್ಸಾಂ ರಾಜ್ಯದಿಂದ ಪ್ರತಿನಿದಿಗಳನ್ನು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಸದಸ್ಯ ರುಗಳು ಹಾಗೂ ಸಿಬ್ಬಂದಿ ವರ್ಗ ಆತ್ಮೀಯವಾಗಿ ಹೂಗೂಚ್ಚ ನೀಡಿ ಬರ ಮಾಡಿಕೊಳ್ಳಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಐಸಮ್ಮ, ನ್ಯಾಯ ಸಮಿತಿ ಅಧ್ಯಕ್ಷ ಗಫೂರ್, ಸದಸ್ಯರಾದ ಚೆಕ್ಕೇರ ಇಸ್ಮಾಯಿಲ್, ಟಿ.ಕೆ.ಯೂಸುಫ್, ಮಾಹಿನ್…
ವಿರಾಜಪೇಟೆ ಜೂ.30 NEWS DESK : ವಿರಾಜಪೇಟೆ ವಿವೇಕ ಜಾಗೃತ ಬಳಗ ಹಾಗೂ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಜು.2 ರಂದು ಸಾರ್ವಜನಿಕರಿಗಾಗಿ ರಕ್ತದಾನ ಶಿಬಿರ ನಡೆಯಲಿದೆ. ಪಂಜರಪೇಟೆ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷರಾದ ರಾಜಶೇಖರ್ ತಿಳಿಸಿದ್ದಾರೆ.






