ಲೇಖಕ: admin

ಮಡಿಕೇರಿ NEWS DESK ಜೂ.30 : ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ವಿರಾಜಪೇಟೆ ಕ್ಷೇತ್ರ ಸಂಚಾರ ಮಾಡಿ ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲಿಸಿದರು. ವಿರಾಜಪೇಟೆ ತಾಲ್ಲೂಕು ವಿ.ಬಾಡಗದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಹಾಕಿ ಕ್ರೀಡಾ ತರಬೇತಿ ಕೇಂದ್ರದ ಯೋಜನೆಗಾಗಿ ಲಭ್ಯ ಇರುವ ಸ್ಥಳ ಪರಿಶೀಲನೆ ನಡೆಸಿದರು. ಸುಮಾರು 11 ಏಕರೆಯಷ್ಟು ಸರಕಾರಿ ಜಾಗವನ್ನು ತಕ್ಷಣ ಪರಿಗಣಿಸಿ ಒಂದು ವಾರದೊಳಗೆ ಸರ್ವೆ ನಕ್ಷೆ ನೀಡುವಂತೆ ಸರ್ವೆ ಇಲಾಖೆಗೆ ಸೂಚನೆ ನೀಡಿದರು. ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಸರಬರಾಜು ಕಾರ್ಯಕ್ರಮದ ಭಾಗವಾಗಿ ಪೊನ್ನಂಪೇಟೆ ತಾಲ್ಲೂಕಿನ ಹರಿಹರ, ಬೆಳ್ಳೂರು ಹಾಗೂ ಹುದಿಕೇರಿ ಭಾಗದಲ್ಲಿ ಮೂರು 25 ಕೆವಿ ವಿದ್ಯುತ್ ಪರಿವರ್ತಕಗಳನ್ನು ಶಾಸಕರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತಾನು ಈ ಹಿಂದೆ ಚುನಾವಣೆಗೆ ಮೊದಲು ಆಶ್ವಾಸನೆ ನೀಡಿದಂತೆ ಕ್ಷೇತ್ರದಾದ್ಯಂತ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಸರಬರಾಜಿಗೆ ಹೆಚ್ಚುವರಿ ಅನುದಾನ ತಂದು ಈ ಯೋಜನೆ ರೂಪಿಸಿರುವುದಾಗಿ ಹೇಳಿದರು. ಈ ಮಹತ್ವಾಕಾಂಕ್ಷೆಯ…

Read More

ಕುಶಾಲನಗರ ಜೂ.30 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ಹಾಗೂ ಚಿಕ್ಕ ಅಳುವಾರದ ಕೊಡಗು ವಿವಿ ವತಿಯಿಂದ ಜು.3 ರಂದು  ವಚನ ಸಾಹಿತ್ಯ ಪಿತಾಮಹ ಫ.ಗು.ಹಳಕಟ್ಟಿ ಅವರ ಜನ್ಮದಿನಾಚರಣೆ ಅಂಗವಾಗಿ ” ಶರಣ ಸ್ಮರಣೆ ” ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷ ಸದಾಶಿವ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ನಿವೃತ್ತ ಜಿಲ್ಲಾಧಿಕಾರಿ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಹಾಸನ ವಿಶ್ವ ವಿದ್ಯಾಲಯದ ಕುಲಪತಿ ಡಾ.ತಾರನಾಥ್ ಆಗಮಿಸಲಿದ್ದಾರೆ. ಶಸಾಪ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಗಾಂಜಿ, ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಹುಣಸೂರು ಜ್ಞಾನಧಾರಾ ಪದವಿ ಕಾಲೇಜು ಅಧ್ಯಕ್ಷ ಡಾ.ಜೆ.ಸಿ.ನಾಗೇಂದ್ರ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ…

Read More

ಮಡಿಕೇರಿ ಜೂ.30 NEWS DESK : ಮೈಸೂರು ಕೊಡವ ಸಮಾಜದ ಯುವ ಘಟಕದ ವತಿಯಿಂದ ಆಯೋಜನೆಗೊಂಡ ಕೊಡವ ಹಾಕಿ ಪ್ರೀಮಿಯರ್ ಲೀಗ್ 2025 ಪಂದ್ಯಾವಳಿಯ ಫೈನಲ್ ಪಂದ್ಯಾಟವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಹಾಕಿಯಲ್ಲಿ ಕೊಡಗಿನ ಪ್ರತಿಭೆಗಳು ಅದರಲ್ಲೂ ವಿಶೇಷವಾಗಿ ಕೊಡವರು ಉತ್ತಮ ಪ್ರದರ್ಶನ ತೋರಿ ರಾಷ್ಟ್ರವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ವಿಷಯ. ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಹಲವು ಉನ್ನತ ಹಾಕಿ ಪಟುಗಳು ದೇಶವನ್ನು ಪ್ರತಿನಿಧಿಸುವಂಥಾಗಲಿ ಎಂದು ಶುಭ ಕೋರಿದರು. ಪಂದ್ಯಾವಳಿಯನ್ನು  ಆಯೋಜಿಸಿದ ಯುವ ಘಟಕದ ಪ್ರಯತ್ನವನ್ನು ಶ್ಲಾಘಿಸಿದ ಶಾಸಕರು, ಇಂತಹ ಪಂದ್ಯಾವಳಿಗಳು ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವಂತಾಗಿದೆ ಎಂದರು. ಕಾರ್ಯಕ್ರಮ ಆಯೋಜಕರು, ಕ್ರೀಡಾ ಪ್ರೇಮಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.29 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ”ಒಂದೇ ಊರು ಮೂರು ಚೆಕ್ ಡ್ಯಾಂ” ವರದಿಗೆ ಅಣ್ಣೀರ ಹರೀಶ್ ಮಾದಪ್ಪ ಪಡೆದುಕೊಂಡಿದ್ದಾರೆ. ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾದ” ಕೊಡಗಿನ ಕ್ರೀಡಾಕಲಿಗಳಿಗೆ ಕಾಡುತ್ತಿರುವ ದೈಹಿಕ ಶಕ್ತಿ ಕೊರತೆ” ವರದಿಗೆ ಇಸ್ಮಾಯಿಲ್ ಕಂಡಕೆರೆ ಪಡೆದುಕೊಂಡಿದ್ದಾರೆ. ಸಂಘದ ಮಾಜಿ ಉಪಾಧ್ಯಕ್ಷರಾದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿಯನ್ನು ಇಬ್ಬರು ಪಡೆದುಕೊಂಡಿದ್ದಾರೆ. ವಿಸ್ತಾರ ಚಾನಲ್ ನಲ್ಲಿ ಪ್ರಸಾರವಾಗಿರುವ” ಹಸಿರ ಮನಸಿರಿಗೆ ಚಂದದ ಹೊದಿಕೆ” ಸುದ್ದಿಯ ವೀಡಿಯೋಗ್ರಫಿಗೆ ಮನೋಜ್ ಆರ್.ಆರ್. ಪಡೆದುಕೊಂಡಿದ್ದಾರೆ. ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ದಟ್ಟ ಅರಣ್ಯದೊಳಗೆ ಜಲಲ ಜಲಲ ಜಲಧಾರೆ ವರದಿಯ ವೀಡಿಯೋಗ್ರಫಿಗೆ…

Read More

ಕುಶಾಲನಗರ NEWS DESK ಜೂ.29 : ಕುಶಾಲನಗರ ತಾಲ್ಲೂಕಿನ ಮಳೆಹಾನಿ ಪ್ರದೇಶಗಳಿಗೆ ಮಡಿಕೇರಿ ಕ್ಷೇತ್ರದ ಶಾಶಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು. ನೆಲ್ಲಿಹುದಿಕೇರಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಪ್ರವಾಹ ಪರಿಸ್ಥಿತಿಯ ಕುರಿತು ಅವಲೋಕಿಸಿ ಸ್ಥಳೀಯ ಜನಪ್ರತಿನಿಧಿಗಳಿಂದ ಮಾಹಿತಿ ಪಡೆದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಧನಲಕ್ಷ್ಮೀ, ಸದಸ್ಯರಾದ ಹಕೀಮ್, ಸಾಬು ವರ್ಗಿಸ್, ಅಶೋಕ್,  ಅನಿಫಾ, ಮುಸ್ತಫ, ಶಫಿಯ, ಡಿಸಿಸಿ ಸದಸ್ಯರಾದ ಕೆ.ಎಂ.ಬಶೀರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಭಾವ, ಕಾಂಗ್ರೆಸ್ ಮುಖಂಡರಾದ ಸಂಶು, ಅಬ್ದುಲ್ಲ, ಹಂಸ ಸಿ.ಎಂ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ NEWS DESK ಜೂ.29 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರಿನಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿದರು. ಜಿಲ್ಲಾಡಳಿತದ ಸೂಚನೆಯಂತೆ, ಈ ಹಿಂದೆ ಬಲ್ಯಮುಂಡೂರು ಭಾಗದ ಹಲವು ನಿವಾಸಿಗಳನ್ನು ಸುರಕ್ಷತೆಗಾಗಿ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದೆ. ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು ಜನರ ಯೋಗಕ್ಷೇಮವನ್ನು ವಿಚಾರಿಸಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಇದೇ ಸಂದರ್ಭ ನಿವಾಸಿಗಳಿಗೆ ಶಾಸಕರು ಭರವಸೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ರಾಜ ಕಾರ್ಯಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ಪೊನ್ನಪ್ಪ, ತಹಶೀಲ್ದಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ನವದೆಹಲಿ NEWS DESK ಜೂ.29 : ಪ್ರಾಕೃತಿಕ ವಿಕೋಪಗಳಿಂದ ನಲುಗಿ ಹೋಗಿರುವ ಪಾಕಿಸ್ತಾನದಲ್ಲಿ ಒಂದೇ ದಿನ ಮೂರು ಬಾರಿ ಭೂಕಂಪನವಾಗಿದೆ. ಭೂಕಂಪದ ಕೇಂದ್ರಬಿಂದುವು ಪಾಕಿಸ್ತಾನದ ಮುಲ್ತಾನ್ ನಗರದಿಂದ ಪಶ್ಚಿಮಕ್ಕೆ 149 ಕಿಲೋಮೀಟರ್ ದೂರದಲ್ಲಿ, 30.25 ಉತ್ತರ ಅಕ್ಷಾಂಶ ಮತ್ತು 69.82 ಪೂರ್ವ ರೇಖಾಂಶದಲ್ಲಿ ಇದೆ ಎಂದು ಯುರೋ-ಮೆಡಿಟರೇನಿಯನ್ ಭೂಕಂಪನ ಕೇಂದ್ರವನ್ನು ಉಲ್ಲೇಖಿಸಿ ವರದಿ ಮಾಡಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.8 ಮತ್ತು 5.2ರಷ್ಟು ದಾಖಲಾಗಿದೆ. ಪಾಕಿಸ್ತಾನದಲ್ಲಿ 3 ಭಾರಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Read More

ಮಡಿಕೇರಿ NEWS DESK ಜೂ.29 : ಮಡಿಕೇರಿ ನಗರದ 4 ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ 95ನೇ ವರ್ಷದ ದಸರಾ ಉತ್ಸವದ ನೂತನ ಸಮಿತಿಯ ಜಂಟಿ ಅಧ್ಯಕ್ಷರಾಗಿ ನಾಗರಾಜ್ ಹಾಗೂ ಕಿಶೋರ್ ಬಾಬು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಎಂ.ಎಲ್,  ಉಪಾಧ್ಯಕ್ಷರಾಗಿ ಚೇತನ್(ದಿನು), ರಂಜಿತ್ ಕೃಷ್ಣಮೂರ್ತಿ(ರಂಜು, ಮೈಸೂರು), ಮೋಹನ್ ಸಂಪತ್, ಅನಿಲ್ ಕೆ.ಎ, ಮಧು ಎಮ್ ಪಿ, ಬಾಲಸುಬ್ರಮಣ್ಯ ಕಾರ್ಯದರ್ಶಿಗಳಾಗಿ ಸದಾಶಿವಶೆಟ್ಟಿ, ಹರೀಶ್, ಸಹ ಕಾರ್ಯದರ್ಶಿಗಳಾಗಿ  ಸಂತೋಷ್, ಪುರುಷೋತ್ತಮ್, ಖಜಾಂಚಿಯಾಗಿ ಪವನ್, ಸಹ ಖಜಾಂಚಿಯಾಗಿ ಅಭಿಜಿತ್, ಶೇಖರ್ ಬಿ.ಡಿ, ದೇವಿ ಅಲಂಕಾರ ಸಮಿತಿ ಅಧ್ಯಕ್ಷರಾಗಿ ದೇಜುಶೆಟ್ಟಿ, ದಸರಾ ಸಮಿತಿಯ ಶತಮಾನೋತ್ಸವದ ಕಾರ್ಯಾಧ್ಯಕ್ಷರಾಗಿ ರಂಜಿತ್ ಸಿ.ಎಸ್, ಅಮನ್, ಗೌರವ ಅಧ್ಯಕ್ಷರುಗಳಾಗಿ  ನವೀನ್ ಅಂಬೇಕಲ್, ಬಿ.ಎಮ್.ರಮೇಶ್, ಮಹಾಪೋಷಕರಾಗಿ ರಾಜು ಎಂ.ಬಿ, ಎ.ಎ.ಗಣೇಶ್, ಉಮೇಶ್, ಜೇಮ್ಸ್, ದಯಾನಂದ್ ಶೆಟ್ಟಿ ಟಿ.ಎಸ್, ಕೆ.ವಿ.ಸುಬ್ರಮಣಿ, ಎಸ್.ಸಿ.ಹರೀಶ್ ನೇಮಕಗೊಂಡಿದ್ದಾರೆ. *ಕರಗ ಸಮಿತಿ* ರಾಕೇಶ್, ಕುಮಾರೇಶ್, ರತೀಶ್, ನಿಶ್ಚಲ್ ಸೋಮಣ್ಣ. ಕಥಾಸಾರಾಂಶ ರಂಜಿತ್ ಎಚ್.ಎಮ್, ಚಲನವಲನ ಸಮಿತಿ ದಿನೇಶ್ ನಾಯರ್ ಹಾಗೂ ತಂಡ, ಮಂಟಪ ಅಲಂಕಾರ ಸಮಿತಿ ವಿಘ್ನೇಶ್, ರಕ್ಷಿತ್,…

Read More

ಮಡಿಕೇರಿ NEWS DESK ಜೂ.28 : ಕೊಡಗಿನ ಮೂಲನಿವಾಸಿ ‘ಕೆಂಬಟ್ಟಿ’ ಸಮುದಾಯವನ್ನು ಪರಿಶಿಷ್ಟ ಜಾತಿಯ ಆದಿಕರ್ನಾಟಕ ಜಾತಿ ಪಟ್ಟಿಯಲ್ಲಿ ಸೇರಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೊಡವ ಭಾಷಿಕ ಸಮುದಾಯಗಳ ಕೂಟದ ನಿಯೋಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿತು. ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರ ನೇತೃತ್ವದಲ್ಲಿ ಎ.ಎಸ್.ಪೊನ್ನಣ್ಣ ಅವರನ್ನು ಇಂದು ಭೇಟಿಯಾದ ‘ಕೆಂಬಟ್ಟಿ’ ಸಮುದಾಯದ ಪ್ರಮುಖರು ರಾಜ್ಯದ ಬೇರೆಲ್ಲೂ ಕಾಣದ ಕೊಡಗಿನ ಪ್ರಾಚೀನ “ಕೆಂಬಟ್ಟಿ” ಸಮುದಾಯವನ್ನು ಪರಿಶಿಷ್ಟ ಜಾತಿಯ ಆದಿಕರ್ನಾಟಕ ಜಾತಿ ಪಟ್ಟಿಯಲ್ಲಿ ನಮೂದಿಸಬೇಕು ಎಂದು ಕೋರಿದರು. ಪೂರ್ವಿಕರ ಮಾಹಿತಿಯಂತೆ ಹಾಗೂ ಬ್ರಿಟಿಷರ The Manual of coorg written by G.Richter and published in 1870ರ ಸಮೀಕ್ಷೆಯ ವರದಿಯನ್ವಯ ‘ಕೆಂಬಟ್ಟಿ’ ಸಮುದಾಯ ಅನಾದಿ ಕಾಲದಿಂದಲೂ ಕೊಡಗಿನಲ್ಲಿ ಜೀವಿಸಿಕೊಂಡು, ಕೊಡವ ಭಾಷಾ ಜನಪದ ಪದ್ಧತಿ ಪರಂಪರೆ ಮೈಗೂಡಿಸಿಕೊಂಡು ಬಂದಿರುವ ಮೂಲನಿವಾಸಿಗಳಾಗಿದ್ದಾರೆ. ಇವರನ್ನು ಪರಿಶಿಷ್ಟ ಜಾತಿಯ…

Read More

ಮಡಿಕೇರಿ ಜೂ.28 NEWS DESK : ಮಡಿಕೇರಿ ನಗರಸಭೆ ಸದಸ್ಯರಾದ ನೀಮಾ ಹರ್ಷದ್ ಮನೆಯ ಗೋಡೆ ತೀವ್ರ ಮಳೆಯಿಂದ ಕುಸಿದ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Read More