ಮಡಿಕೇರಿ ಆ.2 NEWS DESK : ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷ ಕಳೆದರೂ ಇಂದಿಗೂ ನಿರುದ್ಯೋಗ ಸಮಸ್ಯೆಯಿಂದ ಯುವ ಸಮೂಹ ಅತಂತ್ರ ಸ್ಥಿತಿಯಲ್ಲಿ ದಿನಕಳೆಯಬೇಕಾದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಉದ್ಯೋಗ ಸೃಷ್ಟಿಸಬೇಕಾದ ಸರ್ಕಾರಗಳು ಮೌನವಾಗಿರುವ ಹಿನ್ನೆಲೆ ಯುವ ಸಮೂಹವನ್ನು ನಂಬಿರುವ ಕುಟುಂಬಗಳು ಸಂಕಷ್ಟದ ಜೀವನ ನಡೆಸುವಂತಾಗಿದೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ( ಡಿ ವೈ ಎಫ್ ಐ) ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಪೂಜಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೆಲ್ಲಿಹುದಿಕೇರಿ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ನಡೆದ ಡಿವೈಎಫ್ ಐ ಜಿಲ್ಲಾ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ವಿವಿಧ ಇಲಾಖೆಗಳಲ್ಲಿ ಸಾವಿರಾರು ಉದ್ಯೋಗಗಳು ಖಾಲಿ ಇದ್ದರೂ ಉದ್ಯೋಗ ಭರ್ತಿ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಕೊಡಗು ಜಿಲ್ಲೆಯ ಬಹುತೇಕ ಇಲಾಖೆಗಳಲ್ಲಿ ಉದ್ಯೋಗ ಬರ್ತಿಯಾಗದೆ ಖಾಲಿ ಇದ್ದು ಸಾರ್ವಜನಿಕ ಸೇವೆಗಳು ನಿಭಾಯಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿಗಳು ಅಧಿಕಾರಿಗಳು ಉದ್ಯೋಗ ಬರ್ತಿಗೆ ಮುಂದಾಗದೆ ಇರುವುದರಿಂದ ಉನ್ನತ ಶಿಕ್ಷಣ ಪಡೆದ ಯುವ ಸಮೂಹ ಕಾಫಿ…
ಲೇಖಕ: admin
ಮಡಿಕೇರಿ ಆ.2 NEWS DESK : ಕೊಡಗಿನ ಪರಿಸರ, ಸಂಸ್ಕೃತಿಗಳ ಸಂರಕ್ಷಣೆಗೆ ಪೂರಕವಾದ ರೀತಿಯ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರದ ಮೂಲಕ ಸಾಧ್ಯವಾಗುವ ಎಲ್ಲ ಸಹಕಾರಗಳನ್ನು ನೀಡಲಾಗುತ್ತದೆ. ಕೇವಲ ಅಭಿವೃದ್ಧಿಗೋಸ್ಕರ ಅಭಿವೃದ್ಧಿ ಎನ್ನುವುದಕ್ಕೆ ತನ್ನ ವಿರೋಧವಿದೆ. ಕೊಡಗು ಕೊಡಗಾಗಿಯೇ ಉಳಿಯಬೇಕೆನ್ನುವುದು ತನ್ನ ಆಶಯವಾಗಿದ್ದು, ಇದರಂತೆ ಕೇಂದ್ರದ ಅನುದಾನದೊಂದಿಗೆ ಜಿಲ್ಲೆಯ ಪ್ರಗತಿಗೆ ಬದ್ದನಿರುವುದಾಗಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ರೆಡ್ ಬಿಕ್ಸ್ ನ ಸತ್ಕಾರ್ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳೊಂದಿಗೆ ಆಯೋಜಿತವಾಗಿದ್ದ ‘ಕೊಡಗು ವಿಷನ್’ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಮಸ್ಯೆಗಳನ್ನು ಆಲಿಸಿ, ಬೇಡಿಕೆಗಳ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ಕೊಡಗಿನ ವಿಶಿಷ್ಟ ಆತಿಥ್ಯ ಸಂಸ್ಕೃತಿಗಂಳನ್ನು ತಿಳಿಯಲು ಅವಕಾಶ ಒದಗಿಸುವ ‘ಹೋಂ ಸ್ಟೇ’ಗಳು ಸ್ಥಳೀಯ ಆರ್ಥಿಕತೆಗೂ ಸಹಕಾರಿಯಾಗಿದೆ. ಜಿಲ್ಲೆಯಲ್ಲಿ ಮಾತ್ರ ಕಂಡು ಬರುವ ‘ಐನ್ ಮನೆ’ ಸಂಸ್ಕೃತಿಯನ್ನು ಜತನದಿಂದ ಕಾಯ್ದುಕೊಳ್ಳುವ ಪ್ರಯತ್ನಗಳ ಮೂಲಕ ಕೊಡಗನ್ನು ಮೂಲ ಸ್ವರೂಪದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನ ಕಾಳಜಿಯನ್ನು…
ಮಡಿಕೇರಿ ಆ.2 NEWS DESK : ಕಂದೀಲು ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಮಡಿಕೇರಿಯ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಕೊಡಗು ಪತ್ರಕತ೯ರ ಸಂಘದ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಸನ್ಮಾನಿಸಿ ಗೌರವಿಸಿದರು. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಕೊಡಗು ಪತ್ರಕತ೯ರ ಸಂಘದ ವಿಷನ್ ಕೊಡಗು ಕಾಯ೯ಕ್ರಮದಲ್ಲಿ, ಕಂದೀಲು ಕನ್ನಡ ಚಿತ್ರಕ್ಕಾಗಿ ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ ಎಂಬ ರಾಷ್ಟ್ರಪ್ರಶಸ್ತಿ ಪಡೆದ ಚಿತ್ರದ ನಿಮಾ೯ಪಕಿ ನಿದೇ೯ಶಕಿ ಯಶೋಧ ಪ್ರಕಾಶ್ ಅವರನ್ನು ಸಂಸದರಾದ ಯದುವೀರ್ ಒಡೆಯರ್ ಸನ್ಮಾನಿಸಿ ಗೌರವಿಸಿದರು. ಈ ಸಂದಭ೯ ಮಾತನಾಡಿದ ಸಂಸದರು, ಕನಾ೯ಟಕದಲ್ಲಿ ರಾಷ್ಟ್ರಪ್ರಶಸ್ತಿ ಪಡೆದ ಮೂರನೇ ಮಹಿಳಾ ನಿದೇ೯ಶಕಿ ಎಂಬ ಹಿರಿಮೆಗೆ ಕಾರಣರಾದ ಯಶೋಧ ಪ್ರಕಾಶ್ ಅವರ ಚಿತ್ರ ರಂಗದ ಸಾಧನೆ ನಿಜಕ್ಕೂ ಶ್ಲಾಘನೀಯ ಎಂದರಲ್ಲದೇ, ರಾಷ್ಟ್ರಪ್ರಶಸ್ತಿ ಇವರಲ್ಲಿ ಮತ್ತಷ್ಟು ಉತ್ತಮ ಚಿತ್ರಗಳ ನಿಮಾ೯ಣ, ನಿದೇ೯ಶನಕ್ಕೆ ಸ್ಪೂತಿ೯ಯಾಗಲಿ ಎಂದು ಆಶಿಸಿದರು. ರಾಷ್ಟ್ರಪ್ರಶಸ್ತಿ ಪಡೆದ ನಿಮಾ೯ಪಕಿ, ನಿದೇ೯ಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಮಾತನಾಡಿ,…
ಮಡಿಕೇರಿ ಆ.2 NEWS DESK : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶನಿವಾರ ಭೇಟಿ ನೀಡಿ ವೀಕ್ಷಿಸಿದರು. ಹೆದ್ದಾರಿ ಸುರಕ್ಷತೆ ಸಂಬಂಧ ಜಿಲ್ಲಾಡಳಿತ ಕ್ರಮ ವಹಿಸಿದ್ದು, ಎಂಜಿನಿಯರ್ ಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು. ಹೆದ್ದಾರಿ ಸುರಕ್ಷತೆಗೆ ಒತ್ತು ನೀಡಬೇಕು. ಅಗತ್ಯ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದರು. ಸಾರ್ವಜನಿಕರ ಓಡಾಟ ಮತ್ತು ಸುರಕ್ಷತೆ ಅತೀ ಮುಖ್ಯವಾಗಿದೆ. ಇಲ್ಲಿನ 5 ಕುಟುಂಬಗಳ ಸುರಕ್ಷತೆಯೂ ಸಹ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕರು ರಾಷ್ಟ್ರೀಯ ಹೆದ್ದಾರಿ ವಿಭಾಗದಿಂದ ತಡೆಗೋಡೆ ನಿರ್ಮಿಸಲಾಗಿದೆ. ತಡೆಗೋಡೆ ಸಮೀಪದಲ್ಲಿ 5 ಕುಟುಂಬಗಳಿದ್ದು, ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಹೆದ್ದಾರಿ ಸುರಕ್ಷತೆ ಸಂಬಂಧಿಸಿದಂತೆ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯರಾದ ಸುನೀಲ್…
ಮಡಿಕೇರಿ ಆ.2 NEWS DESK : ನ್ಯಾಷನಲ್ ಕಾನ್ಫರೆನ್ಸ್ ಆಫ್ ಸ್ಟೇಟ್ ಲೆಜಿಸ್ಲೇಟರ್ಸ್ (ಎನ್ಸಿಎಸ್ಎಲ್) ಮತ್ತು ರಾಷ್ಟ್ರೀಯ ಲೆಜಿಸ್ಲೇಟರ್ಸ್ ಕಾನ್ಫರೆನ್ಸ್ ಭಾರತ್ (ಎನ್ಎಲ್ಸಿ) ವತಿಯಿಂದ ಅಮೇರಿಕಾದ ಬೋಸ್ಟನ್ನಲ್ಲಿ ಆ.4 ರಿಂದ 6ರ ವರೆಗೆ ವಿವಿಧ ರಾಜ್ಯ ಶಾಸಕಾಂಗ ಸದಸ್ಯರ ರಾಷ್ಟ್ರೀಯ ಶೃಂಗಸಭೆ ಏರ್ಪಟ್ಟಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ಶಾಸಕಾಂಗ ನಾಯಕರು, ಸಿಬ್ಬಂದಿ ಪರಿಣಿತರು ಹಾಗೂ ಪಾಲಿಸಿ ಮೇಕರ್ಸ್ ಪರಿಣಿತರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಕೊಡಗಿನ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಪಿ.ಸುಜಾ ಕುಶಾಲಪ್ಪ ಅವರು ಭಾಗವಹಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ನೇತೃತ್ವದಲ್ಲಿ ಸುಜಾ ಕುಶಾಲಪ್ಪ ಸೇರಿದಂತೆ ಕೆಲವು ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಆ.2 NEWS DESK : ನಾಪೋಕ್ಲುವಿನ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ “ವ್ಯಸನ ಮುಕ್ತ ಭಾರತ” ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ನಡೆಯಿತು. ನಾಪೋಕ್ಲು ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳು ಮತ್ತು ಸೇವನೆ ಹಾಗೂ ದುಷ್ಪರಿಣಾಮಗಳು, ಪೋಕ್ಸೊ ಕಾಯ್ದೆ, ಸೈಬರ್ ಸುರಕ್ಷತೆ, ಸೋಶಿಯಲ್ ಮೀಡಿಯಾ, ಆನ್ಲೈನ್ ಗೇಮ್, ಮೈನರ್ ಡ್ರೈವಿಂಗ್ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.
ನಾಪೋಕ್ಲು ಆ.2 NEWS DESK : ಕೊಳಕೇರಿ ಗ್ರಾಮದ ಕಾಫಿ ತೋಟದಲ್ಲಿದ್ದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪ್ರಜ್ವಲ್ ಕುಮಾರ್ ರಕ್ಷಿಸಿದ್ದಾರೆ. ನಾಪೋಕ್ಲು ಗ್ರಾಮ ಪಂಚಾಯಿತಿಯ ಕೊಳಕೇರಿ ಗ್ರಾಮದ ಕನ್ನಂಬೀರ ಪವನ್ ಪೂವಯ್ಯ ಎಂಬವರ ಕಾಫಿ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವ ಸಂದರ್ಭ ಸುಮಾರು 14 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಬಳಿಕ ಮೂರ್ನಾಡು ಕೋಡಂಬೂರು ವಿನ ಉರಗ ತಜ್ಞ ಪ್ರಜ್ವಲ್ ಕುಮಾರ್ ಅವರನ್ನು ಸಂಪರ್ಕಿಸಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪ್ರಜ್ವಲ್ ಕುಮಾರ್ ಹಾವನ್ನು ಹಿಡಿದು ಮಾಕುಟ ರಕ್ಷಿತಾ ಅರಣ್ಯಕ್ಕೆ ಬಿಟ್ಟಿದ್ದಾರೆ. ಈ ಸಂದರ್ಭ ಕೊಳಕೇರಿ ಗ್ರಾಮ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಕುಂಡಿಯೋಳಂಡ ವಿಶು ಪೂವಯ್ಯ, ಕೇಟೋಳಿರ ಶಮ್ಮಿ ಸುಬ್ಬಯ್ಯ ಗ್ರಾಮದ ಹಿರಿಯರಾದ ಕನ್ನಂಬೀರ ಎನ್.ಚಂಗಪ್ಪ, ಕಾಂಡಂಡ ಚೋಂದವ್ವ, ಕುಂಡಿಯೋಳಂಡ ಜತ್ತಿ ಸುಬ್ಬಯ್ಯ ಸೇರಿದಂತೆ ಗ್ರಾಮಸ್ಥರು ಇದ್ದರು. ಹಾವುಗಳು ಕಂಡಬಂದಲ್ಲಿ ಅದನ್ನು ಕೊಲ್ಲದೆ ಮಾಹಿತಿ ನೀಡಿದರೆ ಅವುಗಳನ್ನು ರಕ್ಷಿಸಲಾಗುವುದು ಎಂದು ಉರಗ ತಜ್ಞ ಪ್ರಜ್ವಲ್ ಕುಮಾರ್ ತಿಳಿಸಿದರು.…
ನಾಪೋಕ್ಲು ಆ.2 NEWS DESK : ರಾಷ್ಟ್ರೀಯ ಮಹಿಳಾ ಜೂನಿಯರ್ ಹಾಕಿ ಕರ್ನಾಟಕ ತಂಡದ ಗೋಲ್ ಕೀಪರ್ ಆಗಿ ಕೊಡಗಿನ ಕುಂಜಿಲ ಗ್ರಾಮದ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾಳೆ. ಆಂಧ್ರ ಪ್ರದೇಶದ ಕಾಕಿನಾಡಲ್ಲಿ ಆ.12ರವರೆಗೆ ನಡೆಯಲಿರುವ ಪಂದ್ಯಾವಳಿಗೆ ಶ್ರಾವ್ಯ ದೇವಯ್ಯ ಆಯ್ಕೆ ಆಗಿರುವುದು ಕೊಡಗಿಗೆ ಹೆಮ್ಮೆಯ ವಿಷಯವಾಗಿದೆ. ತಮಿಳುನಾಡಿನ ತಿರುಪೂರ್ ಜಿ.ವಿ.ಜಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಶ್ರಾವ್ಯ ಮುಂಬೈಯ ಎನ್.ಸಿ.ಓ.ಇ ತಂಡದಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಇವಳು ಕುಂಜಿಲ ಗ್ರಾಮದ ವಾಟೆಕಾಡು ನಿವಾಸಿ ದೇವಯ್ಯ ಹಾಗೂ ಚಿತ್ರ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.
ಕುಶಾಲನಗರ ಆ.2 NEWS DESK : ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಎ.ಎ.ಲಕ್ಷ್ಮಣ್ ಅವರಿಗೆ ಶಾಲೆಯ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷೆ ಲಿಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತಿಗೊಂಡ ಶಿಕ್ಷಕ ಲಕ್ಷ್ಮಣ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಕೆ.ಎಂ.ಅಯ್ಯಚ್ಚು, ಶಿಕ್ಷಕರಾದ ಲಕ್ಷ್ಮಣ್ ಅವರು ಶಾಲಾ ಮಕ್ಕಳಲ್ಲಿ ಎನ್ನೆಸ್ಸೆಸ್ ಮೂಲಕ ಉತ್ತಮ ನಾಯಕತ್ವ ಗುಣ ಮತ್ತು ಸೇವಾ ಮನೋಭಾವದೊಂದಿಗೆ ಅವರಲ್ಲಿ ಕ್ರೀಡಾ ಚಟುವಟಿಕೆಗಳ ಅಭಿರುಚಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶ್ಲಾಘಿಸಿದರು. ಶಾಲೆಯ ಅಭಿವೃದ್ಧಿ ಮತ್ತು ಶಾಲಾ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಉತ್ತಮ ಸೇವೆ ಸಲ್ಲಿಸಿರುವುದನ್ನು ಪ್ರಶಂಸಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ಶಿಕ್ಷಕ ಲಕ್ಷ್ಮಣ್ ಅವರು ಶಾಲೆಯ ಅಭಿವೃದ್ಧಿ ಮತ್ತು ಶಾಲಾ ಮಕ್ಕಳ ಕ್ರೀಡಾ ಚಟುವಟಿಕೆಗಳ ಜತೆಗೆ…
ಮಡಿಕೇರಿ ಆ.2 NEWS DESK : ನವದೆಹಲಿಯ ಐಟಿಸಿ ಮೌರ್ಯ ಹೊಟೇಲ್ನಲ್ಲಿ ಬ್ರಿಡ್ಜ್ ಟು ಬೆಂಗಳೂರು ಎಂಬ ತಾಂತ್ರಿಕ ಶೃಂಗಸಭೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಮಾಹಿತಿ ತಂತ್ರಜ್ಞಾನದ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಯ ದೃಷ್ಟಿಕೋನದಿಂದ ಹಾಗೂ ಹೂಡಿಕೆ ಸಂಬಂಧ, ಅತ್ಯಂತ ಮಹತ್ವದ ಶೃಂಗಸಭೆ ಇದಾಗಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಲಕ್ಷ್ಮಿ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಟಿ.ಬಿ.ಜಯಚಂದ್ರ, ದೇಶ ವಿದೇಶಗಳ ಪ್ರಮುಖರು ಮಾಹಿತಿ-ತಂತ್ರಜ್ಞಾನ ಕಂಪನಿಗಳ ಮುಖ್ಯಸ್ಥರು, ವಿವಿಧ ದೇಶದ ರಾಯಭಾರಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಶೃಂಗಸಭೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಕಡೆಗಳಲ್ಲಿ ಬಂಡವಾಳ ಹೂಡಿಕೆಗಳ ಬಗ್ಗೆ ಹಾಗೂ ಕರ್ನಾಟಕವು ಮಾಹಿತಿ ತಂತ್ರಜ್ಞಾನಕ್ಕೆ ನೀಡುತ್ತಿರುವ ಅವಕಾಶಗಳ ಹಾಗೂ ಮಹತ್ವದ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಮಾಹಿತಿ ನೀಡಲಾಯಿತು. ರಾಜ್ಯದಲ್ಲಿ ತಂತ್ರಜ್ಞಾನ ಅಭಿವೃದ್ಧಿಗೆ ಇರುವ ವಿಪುಲ ಅವಕಾಶಗಳನ್ನು ಶೃಂಗಸಭೆಯಲ್ಲಿ ತೆರೆದಿಡಲಾಯಿತು.






