ವಿರಾಜಪೇಟೆ ಜೂ.28 NEWS DESK : ವಿರಾಜಪೇಟೆ ಪೊಮ್ಮಕ್ಕಡ ಒಕ್ಕೂಟದ 2025-26ನೇ ಸಾಲಿನ ಆಡಳಿತ ಮಂಡಳಿಯ ಮೊದಲ ಸಭೆಯು ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ತಾತಂಡ ಜ್ಯೋತಿ ಪ್ರಕಾಶ್, ಬೈಲಾ ಮತ್ತು ವರ್ಷದ ಕಾರ್ಯಕ್ರಮಗಳ ಬಗ್ಗೆ ಸದಸ್ಯರ ಅಭಿಪ್ರಾಯ ಕೋರಿ ಚರ್ಚಿಸಿದರು. ಹಲವಾರು ವಿಚಾರಗಳನ್ನು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ ಅದರಂತೆ ಮುಂದೆ ನಡೆಸಿಕೊಂಡು ಹೋಗುವಂತೆ ತೀರ್ಮಾನಿಸಲಾಯಿತು. ಕಾರ್ಯದರ್ಶಿ ಕುಞ್ಞೀರ ಚಿತ್ರಾ ಚರ್ಮಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಖಜಾಂಚಿ ತಾತಂಡ ಯಶು ಕಬೀರ್ ಲೆಕ್ಕಪತ್ರ ಮಂಡಿಸಿದರು. ಇದೇ ಸಂದರ್ಭದಲ್ಲಿ ಕಳೆದ ಆಡಳಿತ ಮಂಡಳಿಯ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು. ಮೂಕೊಂಡ ಪ್ರೀತ್ ಈರಪ್ಪ, ಮುರುವಂಡ ಉಷಾ ನೀಲಕಂಠ ಸೇರಿದಂತೆ ಸಭೆಯಲ್ಲಿ ಎಲ್ಲಾ ಸದಸ್ಯರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಜೂ.28 NEWS DESK : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಅವರ 516ನೇ ಜನ್ಮದಿನೋತ್ಸವದಲ್ಲಿ ಸಾಹಿತ್ಯ ಕ್ಷೇತ್ರದ ಸಾಧನೆಗೆ ಬಾರಿಯಂಡ ಜೋಯಪ್ಪ ಅವರನ್ನು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ರಾಜ್ಯಮಟ್ಟದ ‘ಕರುನಾಡ ಪ್ರಭು ಕೆಂಪೇಗೌಡ’ ಪ್ರಶಸ್ತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಸನ್ಮಾನಿಸಿದರು. ಪ್ರಶಸ್ತಿಯು ಸ್ಮರಣಿಕೆಯೊಂದಿಗೆ ಬೆಳ್ಳಿ ಪದಕ ಮತ್ತು 25ಸಾವಿರ ನಗದನ್ನು ಹೊಂದಿಗೆ ಸನ್ಮಾನದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಬಾರಿಯಂಡ ಜೋಯಪ್ಪ ಅವರು, “ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ ನನ್ನನ್ನು ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಿ ಸನ್ಮಾನಿಸಿ ಗೌರವಿಸಿದ್ದು ನನಗೆ ಅತೀವ ಖುಷಿ ಕೊಟ್ಟಿದೆ ” ಎಂದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಸಿ ಎನ್.ಅಶ್ವಥ್ ನಾರಾಯಣ್, ಪ್ರತಿಷ್ಠಾನ ಅಧ್ಯಕ್ಷರಾದ ಪ್ರೊ. ಎಂ.ಕೃಷ್ಣ ಗೌಡ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೇಂದ್ರ ಸಚಿವ ಪ್ರಹಲ್ಲಾದ್ ಜೋಶಿ, ಮಾಜಿ ಸ್ಪೀಕರ್ ಕೆ.ಜಿ.…
ಮಡಿಕೇರಿ ಜೂ.28 NEWS DESK : ಕಳೆದ ನಾಲ್ಕು ದಿನಗಳ ಗಾಳಿ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭೇಟಿ ನೀಡಿದರು. ಪ್ರವಾಹದಿಂದ ಪದೇ ಪದೇ ಸಂಕಷ್ಟಕ್ಕೆ ಒಳಗಾಗುವ ಪ್ರದೇಶಗಳಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಹೆಚ್ಚಿನ ಮಳೆಯಾಗುವ ನಾಪೋಕ್ಲು ವ್ಯಾಪ್ತಿಯ ಚೆರಿಯಪರಂಬು ಭಾಗದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಪ್ರದೇಶಕ್ಕೆ ಸಚಿವರು, ಶಾ¸ಕ ಡಾ.ಮಂತರ್ ಗೌಡ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ ವರ್ಷ ಮುಂಗಾರಿನ ಅವಧಿಯಲ್ಲಿ ಉಕ್ಕಿ ಹರಿಯುವ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಾಗೂ ಸುತ್ತಮುತ್ತಲಿನ ಪರಿಸರದ ವೀಕ್ಷಿಸಿದ ಸಚಿವರು ಮತ್ತು ಶಾಸಕರು, ಅಧಿಕಾರಿಗಳಿಗೆ ಸುರಕ್ಷತೆಯ ಬಗ್ಗೆ ಸಲಹೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಲ್ದಾರೆ ಪಂಚಾಯ್ತಿ ವ್ಯಾಪ್ತಿಯ ಬಾಡಗ ಬಾಣಂಗಾಲದ ಗಿರಿಜನ ಕಾಲೋನಿಯಲ್ಲಿ ಮಳೆಯಿಂದ ಹಾನಿಯಾದ ಅನಿಲ್ ಕುಮಾರ್…
ಸೋಮವಾರಪೇಟೆ ಜೂ.28 NEWS DESK : ಬೆಂಗಳೂರು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಕೆಂಪೇಗೌಡರ 516ನೇ ಜನ್ಮದಿನೋತ್ಸವ ಅಂಗವಾಗಿ ನೀಡುವ ರಾಜ್ಯಮಟ್ಟದ ಕರುನಾಡ ಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ, ತಾಕೇರಿ ಗ್ರಾಮದ ಎ.ಆರ್.ಮುತ್ತಣ್ಣ ಅವರಿಗೆ ಪ್ರದಾನ ಮಾಡಲಾಯಿತು. ಎ.ಆರ್. ಮುತ್ತಣ್ಣ ಅವರ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ, ಬೆಂಗಳೂರಿನ ಅರಮನೆ ಮೈದಾನದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜೀ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ,ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜೀ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ, ಸಂಸದ ಡಾ. ಮಂಜುನಾಥ್, ಮಾಜೀ ಗೃಹ ಸಚಿವ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಂ.ಎಲ್.ಸಿ. ಸಿ.ಟಿ. ರವಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಇತರರು…
ಮಡಿಕೇರಿ ಜೂ.28 NEWS DESK : ಜಿಲ್ಲಾ ಕೇಂದ್ರ ಮಡಿಕೇರಿಯ ಪ್ರತಿಷ್ಠಿತ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಕ್ಯಾಂಪಸ್ಗೆ, ಕೊಡಗಿನ ಗಾಂಧಿ ಎಂದೇ ಪ್ರಖ್ಯಾತರಾಗಿದ್ದ ಹಾಗೂ ಕಾಲೇಜು ಸ್ಥಾಪನೆಯ ಪ್ರಮುಖ ರೂವಾರಿಯೂ ಆಗಿದ್ದ ‘ಪಂದ್ಯಂಡ ಬೆಳ್ಳಿಯಪ್ಪ’ ಹೆಸರನ್ನು ಇಡಬೇಕೆಂದು ಅಲ್ಲಾರಂಡ ರಂಗ ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1949ರಲ್ಲಿ ಆರಂಭಗೊಂಡ ಈಗಿನ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ವೀರ ಸೇನಾನಿಯ ಹೆಸರಿರುವುದಕ್ಕೆ ತಮ್ಮ ಯಾವುದೇ ಆಕ್ಷೇಪಗಳಿಲ್ಲ. ಬದಲಾಗಿ ಕಾಲೇಜು ಕ್ಯಾಂಪಸ್ಗೆ ಪಂದ್ಯಂಡ ಬೆಳ್ಳಿಯಪ್ಪ ಅವರ ಹೆಸರನ್ನಿಸಿರುವುದು ಹೆಚ್ಚು ಅರ್ಥಪೂರ್ಣವೆನಿಸಿಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಡಾ.ಅಶೋಕ ಸಂಗಪ್ಪ ಆಲೂರ ಅವರಿಗೂ ಮನವಿಯನ್ನು ಸಲ್ಲಿಸಿದ್ದು, ಅದಕ್ಕೆ ಅವರು ಪೂರಕ ಸ್ಪಂದನ ನೀಡಿರುವುದಾಗಿ ತಿಳಿಸಿದರು. ಸ್ವಾತಂತ್ರ್ಯ ಚಳುವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಪಂದ್ಯಂಡ ಬೆಳ್ಳಿಯಪ್ಪ ಅವರು, ಕೊಡಗಿನಲ್ಲಿ ಉನ್ನತ ಶಿಕ್ಷಣಕ್ಕೆ ಕಾಲೇಜಿನ ಕೊರತೆ ಇರುವುದನ್ನು ಮನಗಂಡು 1948ರಲ್ಲಿ ಅಂದಿನ ಕೇಂದ್ರ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕವಿರಿಸಿಕೊಂಡು ನಡೆಸಿದ ಪ್ರಯತ್ನಗಳ…
ಮಡಿಕೇರಿ ಜೂ.28 NEWS DESK : ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಯುವ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ವಿನೋದ್ ಪೂಜಾರಿ ಸಿದ್ದಾಪುರ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷ ಲಿಂಗಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸಮಾಜದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಬಿಲ್ಲವ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕರ್ಕೇರ, ಖಜಾಂಚಿ ಮಣಿ ಮುಖೇಶ್, ಉಪಾಧ್ಯಕ್ಷ ಸುಧೀರ್, ಸಂಘಟನಾ ಕಾರ್ಯದರ್ಶಿಗಳಾದ ಶೇಖರ್, ಸುರೇಶ್ ಹಾಗೂ ಬಿಲ್ಲವ ಕುಲಬಾಂಧವರು ಸಭೆಯಲ್ಲಿ ಉಪಸ್ಥಿತರಿದ್ದರು.
ಮಡಿಕೇರಿ ಜೂ.28 NEWS DESK : ಕೊಡವ ಮಕ್ಕಡ ಕೂಟದ 114ನೇ ಪುಸ್ತಕ, ಲೇಖಕಿ ಮಾಳೇಟಿರ ಸೀತಮ್ಮ ವಿವೇಕ್ ರಚಿತ 4ನೇ ಕೃತಿ “ಚೀತೆರ ಕಾಳ ಮುತ್ತ್ ಮಾಲೆ” ಕೊಡವ ಕವನ ಸಂಕಲನ ಬಿಡುಗಡೆಗೊಂಡಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲೇಖಕಿ ಹಾಗೂ ಕೊಡವ ಮಕ್ಕಡ ಕೂಟದ ಸಲಹೆಗಾರರಾದ ಐಚಂಡ ರಶ್ಮಿ ಮೇದಪ್ಪ ಅವರು ಭಾಷೆಯ ಬೆಳವಣಿಗೆಯಲ್ಲಿ ಸಾಹಿತ್ಯ ಮಹತ್ವಪೂರ್ಣ ಪಾತ್ರ ವಹಿಸುತ್ತದೆ ಎಂದರು. ಕಥೆ, ಕಾದಂಬರಿ, ನಾಟಕ, ಕವನ ಸಂಕಲನಗಳು ಸಾಹಿತ್ಯ ಕ್ಷೇತ್ರದ ಸುಂದರ ಮತ್ತು ಶಕ್ತಿಯುತ ಪ್ರಕಾರಗಳಾಗಿವೆ. ಕವನಗಳು ಭಾಷೆಯ ಬಲವನ್ನು ಹೆಚ್ಚಿಸುತ್ತವೆ, ಓದುಗರ ಜೊತೆ ಕವನ ಮಾತನಾಡುತ್ತದೆ, ಮನ ಮುಟ್ಟುತ್ತದೆ ಮತ್ತು ಹೊಸ ಆಯಾಮಗಳಿಗೆ ಕೊಂಡೊಯ್ಯುತ್ತದೆ ಎಂದು ಅಭಿಪ್ರಾಯಪಟ್ಟರು. ಹಲವು ಪುಸ್ತಕಗಳನ್ನು ರಚಿಸಿರುವ ಲೇಖಕಿ ಮಾಳೇಟಿರ ಸೀತಮ್ಮ ಅವರ ಸಾಹಿತ್ಯ ಸೇವೆ ನಿರಂತರವಾಗಿರಲಿ, ಮತ್ತಷ್ಟು ಕೃತಿ ಹೊರ ಬರಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ…
ಸಿದ್ದಾಪುರ ಜೂ.28 NEWS DESK : ಆದರ್ಶ ಪರಿಶುದ್ಧತೆಯ ಶತಮಾನಗಳಿಂದ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ 100ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಕೊಡಗು ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ವತಿಯಿಂದ ಜೂ.29 ರಂದು “ಅಸ್ಸಿರಾತಲ್ ಮುಸ್ತಖೀಂ ” ಎಂಬ ಶೀರ್ಷಿಕೆಯಲ್ಲಿ ಉದಾತ್ತ ದೀನಿನ ನೈಜ ಪಾರಂಪರ್ಯದ ವಿಶ್ಲೇಷಣೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಭಾನುವಾರ ಸಂಜೆ 7 ಘಂಟೆಗೆ ಸಿದ್ದಾಪುರದ ಮುನವ್ವಿರುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ “ಅಸ್ಸಿರಾತಲ್ ಮುಸ್ತಖೀಂ ” ಎಂಬ ಶೀರ್ಷಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮಸ್ತ ಕೇಂದ್ರ ಜಂಇಯ್ಯತುಲ್ ಮುಅಲ್ಲಿಮೀನ್ ಸೆಂಟ್ರಲ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಎಂ.ಅಬ್ದುರ್ರಹ್ಮಾನ್ ಮುಸ್ಲಿಯಾರ್ ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಉಪ ಖಾಝಿಗಳು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಎಂ ಅಬ್ದುಲ್ಲ ಫೈಝಿ ಉಸ್ತಾದ್ ಉದ್ಘಾಟಿಸಲಿದ್ದು, ಮುಖ್ಯ ಭಾಷಣಕಾರರಾಗಿ ಖ್ಯಾತ ವಾಗ್ಮಿ ಸುನ್ನತ್ ಜಮಾಅತಿನ ವೇದಿಕೆಗಳಲ್ಲಿ ಮಿನುಗು ತಾರೆ ಮುಸ್ತಫ್ ಅಶ್ರಫಿ ಕಕ್ಕುಪಡಿ ವಿಷಯ ಮಂಡಿಸಲಿದ್ದಾರೆ.…
ಮಡಿಕೇರಿ ಜೂ.28 NEWS DESK : ಹಿಜ್ರಾ ವರ್ಷ 1447, ಮುಹರ್ರಂ ಒಂದು ಜೂನ್ 27 ರಂದು ಶುಕ್ರವಾರ ಪ್ರಾರಂಭವಾಗಿದೆ ಹಾಗೂ ಮುಹರ್ರಂ 9,10, ತಾಸೂಆ,ಆಶೂರಾ,ದಿನ ಜುಲೈ 5 ಮತ್ತು 6 ಶನಿವಾರ ಮತ್ತು ಭಾನುವಾರ ಆಗಿರುತ್ತದೆ ಎಂದು ಕೊಡಗು ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.28 NEWS DESK : ಕೊಡಗು ಪತ್ರಕರ್ತರ ಸಂಘ(ರಿ) ದಿಂದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು, ಜಿಲ್ಲೆಯ ಹತ್ತು ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜು.1 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಕರ್ತರಾಗಿದ್ದ ದಿ.ಕೆ.ಬಿ. ಮಹಂತೇಶ್ ಸ್ಮರಣಾರ್ಥ ಅವರ ಪತ್ನಿ ಭಾಗೀರಥಿ ಅವರು ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಕುಡೆಕಲ್ ಸಂತೋಷ್ ಅವರ ಇರುವುದೊಂದೇ ಕ್ರೀಡಾಂಗಣ ಅದಕ್ಕೂ ಗ್ರಹಣ ಎಂಬ ವರದಿ ಆಯ್ಕೆಯಾಗಿದೆ. ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಮತ್ತು ಪುತ್ರ ಬಿ.ಎನ್. ಅಂಜನ್ ಅವರು ದಿವಂಗತ ಬಿ.ಆರ್.ಶಶಿರಮ್ಮ ಮತ್ತು ದಿವಂಗತ ಬಿ.ಟಿ. ರಾಮದಾಸ ಶೆಟ್ಟಿ ಅವರ ಜ್ಞಾಪಕಾರ್ಥ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿಗೆ…






