ಲೇಖಕ: admin

ಕಾರ್ಕಳ ಜೂ.28  NEWS DESK : “ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ ಎಂದು ಕೆ.ರಾಜೇಂದ್ರ ಭಟ್ ತಿಳಿಸಿದರು. ಕ್ರಿಯೇಟಿವ್ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜರುಗಿತು. ರಾಷ್ಟ್ರೀಯ ಮಟ್ಟದ ಜೆಸಿಐ ತರಬೇತುದಾರರು ಹಾಗೂ ಖ್ಯಾತ ವಾಗ್ಮಿಗಳಾದ ಕೆ.ರಾಜೇಂದ್ರ ಭಟ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶರೀರದ ಒಳಗಿನಿಂದ ಎನರ್ಜಿ ಸೃಷ್ಟಿಸಿಕೊಂಡಾಗ ದೊರೆಯುವುದೇ ಸ್ಫೂರ್ತಿ, ವಿದ್ಯಾರ್ಥಿಗಳು ಪ್ರಯೋಗ ಮಾಡಬಹುದಾದ 10 ಸ್ಪೂರ್ತಿಗಳ ಬಗ್ಗೆ ಉದಾಹರಣೆಗಳನ್ನು ನೀಡುತ್ತಾ ತಿಳಿಸಿದರು. ಎಲ್ಲ ಮಕ್ಕಳು ಅದ್ಭುತವನ್ನು ಸೃಷ್ಟಿಸುವ ಸಾಮಥ್ರ್ಯವನ್ನು ಹೊಂದಿದ್ದಾರೆ. ಓದುವಿಕೆಯಲ್ಲಿ ಮೌನ ಓದುವಿನಿಂದಾಗುವ ಅನೇಕ ಲಾಭಗಳನ್ನು ತಿಳಿಸುತ್ತಾ, ಸ್ಮಾರ್ಟ್ ವರ್ಕ್ ಮಾಡಿದರೆ ಯಾವುದೇ ವಿಷಯಗಳು ಕಠಿಣವೆನಿಸುವುದಿಲ್ಲ ಕಡಿಮೆ ಪರಿಶ್ರಮ ಹಾಕಿ, ಆಸಕ್ತಿಯಿಂದ…

Read More

ಸೋಮವಾರಪೇಟೆ ಜೂ.28 NEWS DESK : ಚೌಡ್ಲು ಪಂಚಾಯಿತಿ ವ್ಯಾಪ್ತಿಯ ಅಂಜನೇಯ ದೇವಾಲಯದಿಂದ ಒಎಲ್‍ವಿ ಕಾನ್ವೆಂಟ್ ರಸ್ತೆ ಗುಂಡಿಮಯವಾಗಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏರಿಳಿಕೆಯ ರಸ್ತೆಯಾಗಿದ್ದು. ಮದ್ಯದಲ್ಲಿ ಮಾತ್ರ ರಸ್ತೆ ಸಮತಟ್ಟಾಗಿ ಗುಂಡಿಗಳಿಂದ ಕೂಡಿದೆ. ಮಳೆಗಾಲದಲ್ಲಿ ಹೊಂಡಮಯವಾಗುವುದರಿಂದ ವಿದ್ಯಾರ್ಥಿಗಳು ನಡೆದಾಡಲು ಕಷ್ಟಪಡಬೇಕಾಗಿದೆ. ಶಾಲಾ ವಾಹನಗಳ ಸಂಚಾರಕ್ಕೂ ಸಮಸ್ಯೆಯಾಗಿದೆ. ರಸ್ತೆ ಸರಿಪಡಿಸಲು ಸಾಕಷ್ಟು ಭಾರಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರಾದ ಮೋಹನ್, ಮುರುಳೀಧರ್, ಕುಶಾಲಪ್ಪ ಆರೋಪಿಸಿದ್ದಾರೆ. ಆಡಳಿತ ಪಕ್ಷದ ಪ್ರಮುಖರು ಈ ರಸ್ತೆಯನ್ನೂ ಅವಲಂಭಿಸಿದ್ದಾರೆ. ಆದರೂ ರಸ್ತೆ ದುರಸ್ತಿ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ತಕ್ಷಣವೇ ರಸ್ತೆ ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.

Read More

ಮಡಿಕೇರಿ NEWS DESK ಜೂ.28 : ಕೊಡಗು ಮೂಲದ ಲೇಖಕ ಹಾಗೂ ಎಂಜಿನಿಯರ್ ಮೂಕೊಂಡ ಪಿ.ನಿತಿನ್ ಕುಶಾಲಪ್ಪ ಅವರ ‘ದಕ್ಷಿಣ್ : ಸೌತ್ ಇಂಡಿಯನ್ ಮಿಥ್ಸ್ ಅಂಡ್ ಫೇಬಲ್ಸ್ ರಿಟೋಲ್ಡ್’, ಕೃತಿಗಾಗಿ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ದೊರೆತ್ತಿದೆ. ‘ದಕ್ಷಿಣ್ : ಸೌತ್ ಇಂಡಿಯನ್ ಮಿಥ್ಸ್ ಅಂಡ್ ಫೇಬಲ್ಸ್ ರಿಟೋಲ್ಡ್’, ಕೃತಿ ಕಥೆ ಹೇಳುವ ವಿಶಿಷ್ಟ ಶೈಲಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ರೂ.50 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ನಿತಿನ್, ಕೊಡಗಿನ ಸ್ಥಳೀಯ ಇತಿಹಾಸ, ಜಾನಪದ ಮತ್ತು ಕಾದಂಬರಿಯಲ್ಲಿ ಆಳವಾದ ಆಸಕ್ತಿ ಹೊಂದಿದ್ದಾರೆ. ಅವರ ಗಮನಾರ್ಹ ಪ್ರಕಟಣೆಗಳಲ್ಲಿ ‘ದಿ ಅರ್ಲಿ ಕೂರ್ಗ್ಸ್’, ‘ಲಾಂಗ್ ಎಗೋ ಇನ್ ಕೂರ್ಗ್’, ‘1785 ಕೂರ್ಗ್’, ‘ಕೊಡಗು ಪ್ರಿನ್ಸಿಪಾಲಿಟಿ ವರ್ಸಸ್ ಬ್ರಿಟಿಷ್ ಎಂಪೈರ್’, ‘ದಿ ಮೇಜರ್ ಹೂ ಕೆಪ್ಟ್ ಹಿಸ್ ಕೂಲ್’, ‘ದಿ ಹೌಸ್ ಆಫ್ ಅವಧ್’ ಮತ್ತು ‘ದಿ…

Read More

ನಾಪೋಕ್ಲು ಜೂ.28 NEWS DESK : ಅತಿವೃಷ್ಟಿಯಿಂದ ಜಲಾವೃತವಾಗುವ ಪ್ರದೇಶಗಳಲ್ಲಿ ವಾಸಿಸುವ ಮಂದಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಕೊಡಗು ಉಸ್ತುವಾರಿ ಸಚಿವ ಬೋಸರಾಜ್ ಹೇಳಿದರು. ನಾಪೋಕ್ಲು ಪ್ರವಾಹ ಪೀಡಿತ ಪ್ರದೇಶ ಚೇರಿಯಪರಂಬುವಿನಗೆ ಭೇಟಿ ನೀಡಿ ಪ್ರವಾಹದಲ್ಲಿ ಮುಳುಗಡೆಯಾಗುವ ನಾಪೋಕ್ಲು-ಕಲ್ಲುಮೊಟ್ಟೆ ರಸ್ತೆ ಸಂಪರ್ಕಕ್ಕೆ ನೂತನವಾಗಿ 1.89 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮೇಲ್ ಸೇತುವೆ ಸ್ಥಳವನ್ನು ಪರಿಶೀಲನೆ ನಡೆಸಿ ಮಾತನಾಡಿದರು. ಶಾಸಕರಾದ ಎ.ಎಸ್. ಪೊನ್ನಣ್ಣ ಬಂದ ಮೇಲೆ ಇದನ್ನು ಮನಗಂಡು ಅವರ ಪ್ರಯತ್ನದ ಫಲವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಮಳೆಗಾಲ ಮುಗಿದ ನಂತರ ರಸ್ತೆ ಎತ್ತರಿಸುವ ಕಾಮಗಾರಿ ಮುಂದುವರಿಸಲಾಗುವುದು. ಮುಂದಿನ ವರ್ಷ ರಸ್ತೆ ಸಂಪರ್ಕಕ್ಕೆ ಯಾವುದೇ ಸಮಸ್ಯೆ ಉದ್ಭವಿಸದು. ಕಳಪೆ ಕಾಮಗಾರಿ ಬಗ್ಗೆ ದೂರುಗಳು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ತಜ್ಞರ ಮಾರ್ಗದರ್ಶನದಲ್ಲಿ ಇಂಜಿನಿಯರ್‍ಗಳು ಪರಿಶೀಲನೆ ನಡೆಸಿ ಉತ್ತಮ…

Read More

ಕುಶಾಲನಗರ NEWS DESK ಜೂ.28 : ಕುಶಾಲನಗರದ ಸೋಮೇಶ್ವರ ಬಡಾವಣೆ ನಿವಾಸಿ ಬಿ.ಎ.ನಾಗೇಗೌಡ (47) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತ ನಾಗೇಗೌಡರು ಕರ್ನಾಟಕ ರಕ್ಷಣಾ ವೇದಿಕೆಯ ಗೌರವಾಧ್ಯಕ್ಷರಾಗಿದ್ದರು. ಜೇಸೀ ಕುಶಾಲನಗರ ಕಾವೇರಿಯ ಅಧ್ಯಕ್ಷರಾಗಿ, ಜೇಸೀ ಅಲ್ಯೂಮಿನಿ ಸಂಸ್ಥೆಯ ವಲಯ 14ರ ಉಪಾಧ್ಯಕ್ಷರಾಗಿ ಸಕ್ರಿಯರಾಗಿದ್ದರು. ಕುಶಾಲನಗರದ ನಾಢಪ್ರಭು ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕರು ಹಾಗೂ ತಾಲ್ಲೂಕು ಒಕ್ಕಲಿಗ ಸಂಘದ ಕಾರ್ಯದರ್ಶಿಯೂ ಆಗಿದ್ದರು. ಮೃತರ ನಿಧನಕ್ಕೆ ಕುಶಾಲನಗರದ ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Read More

ಕುಶಾಲನಗರ ಜೂ.28 NEWS DESK : ಅತ್ಯಾಧುನಿಕ ತಂತ್ರಜ್ಞಾನಗಳ ಅರಿವು, ತರಬೇತಿ ಹೊಂದುವ ಮೂಲಕ ಸೌಂದರ್ಯ ತಜ್ಞರು ಗ್ರಾಹಕರ ಅಗತ್ಯಗಳಿಗೆ ತಕ್ಕಂತೆ  ಉತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುವಂತಾಗಬೇಕೆಂದು ಸೋಮು ಹಾಸನ್ ಹೇರ್ ಅಂಡ್ ಮೇಕಪ್ ಅಕಾಡೆಮಿ ಮಾಲೀಕರು ಹಾಗೂ ಅಂತರಾಷ್ಟ್ರೀಯ ಮಟ್ಟದ ಮೇಕಪ್ ತರಬೇತುದಾರರಾದ ಸೋಮಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಕುಶಾಲನಗರ ಸಮೀಪ ಕೊಪ್ಪ ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಮೇಕ್ ಓವರ್ ಸ್ಟುಡಿಯೋ ಉದ್ಘಾಟಿಸಿ ಮಾತನಾಡಿದರು.  ನಿರಂತರ ಅನುಭವದೊಂದಿಗೆ ಸೌಂದರ್ಯ ತಜ್ಞರು ತಮ್ಮ ಗ್ರಾಹಕರಿಗೆ  ಅತ್ಯುತ್ತಮ  ಗುಣಮಟ್ಟದ ಸೇವೆಗಳನ್ನು ನೀಡುವ ಮೂಲಕ ಖ್ಯಾತಿಗಳಿಸಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ಮಾತನಾಡಿ, ಯುವತಿಯರು ಹಾಗೂ ಮಹಿಳೆಯರು ಸೌಂದರ್ಯ ತಜ್ಞರಾಗಿ ತಮ್ಮ ಗ್ರಾಹಕರ ಬಾಹ್ಯ ಸೌಂದರ್ಯವನ್ನು ಹೆಚ್ಚಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳುವುದು ನಿಜಕ್ಕೂ ಮೆಚ್ಚುಗೆಯ ವಿಚಾರವಾಗಿದೆ.  ಆಧುನಿಕ ತಂತ್ರಜ್ಞಾನದ ತರಬೇತಿ  ಹೊಂದುವ  ಮೂಲಕ ಆರಂಭಗೊಂಡಿರುವ ನೂತನ ಸಂಸ್ಥೆಗೆ ಅವರು ಶುಭ ಕೋರಿದರು.  ಈ ಸಂದರ್ಭ…

Read More

ಗೋಣಿಕೊಪ್ಪಲು ಜೂ.28 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿರಾಜಪೇಟೆ ನಾಟ್ಯಮಯೂರಿ ನೃತ್ಯ ಟ್ರಸ್ಟ್ ನೀಡುವ ಕರುನಾಡ ಕಲ್ಪವೃಕ್ಷ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಗೋಣಿಕೊಪ್ಪಲು ಭರತನಾಟ್ಯ ಕಲಾವಿದೆ ಪಿ.ಎಂ.ಲಿದಿನಾ ಪಡೆದುಕೊಂಡರು. ಬೆಂಗಳೂರಿನ ಕನ್ನಡ ಭವನದ ರವೀಂದ್ರ ಕಲಾಕ್ಷೇತ್ರದ ನಯನಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಕಲಾವಿದ ಶಶಿಧರ್ ಕೋಟೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ನಾಟ್ಯ ಮಯೂರಿ ನೃತ್ಯ ಸಂಸ್ಥೆಯ ಪ್ರೇಮಾಂಜಲಿ ಸಾಹಿತಿ ಡಾ. ಕೆಂಚನೂರು ಶಂಕರ ಇದ್ದರು.

Read More

ಕುಶಾಲನಗರ ಜೂ.28 NEWS DESK :  ಕುಶಾಲನಗರ ರೋಟರಿ ಸಂಸ್ಥೆ  ರೈತ ಭವನದಲ್ಲಿ ಏರ್ಪಡಿಸಿದ್ದ ಪದಗ್ರಹಣ ಸಮಾರಂಭ ಹಾಗೂ ರೋಟರಿ ಸಂಸ್ಥೆಗೆ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಸಿದವರಿಗೆ ಅನ್ನ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕುಶಾಲನಗರ ರೋಟರಿ ಸಂಸ್ಥೆ ಹಾಗೂ ಸ್ಥಳೀಯ ನಿಸರ್ಗ ಹೊಟೇಲ್ ಸಹಯೋಗದೊಂದಿಗೆ ಹಸಿದವರಿಗೆ ಅನ್ನ ಎಂಬ ವಿನೂತನ ಯೋಜನೆಯ ಅನುಷ್ಠಾನಕ್ಕೆ ಹಿರಿಯ ರೋಟರಿ ಸದಸ್ಯ ಎಸ್.ಕೆ.ಸತೀಶ್ ಚಾಲನೆ ನೀಡಿದರು. ಜಿಲ್ಲಾ ರೋಟರಿ ಮಾಜಿ ರಾಜ್ಯಪಾಲರು ಆದ ಪದಗ್ರಹಣ ಅಧಿಕಾರಿ ಎಂ.ರಂಗನಾಥ್ ಭಟ್ ಅವರು 2025-26ನೇ ಸಾಲಿನ‌ ಕುಶಾಲನಗರ ರೋಟರಿ ಸಂಸ್ಥೆಯ ನೂತನ ಅಧ್ಯಕ್ಷ ಮನು ಪೆಮ್ಮಯ್ಯ ಹಾಗೂ ಕಾರ್ಯದರ್ಶಿ ಎಚ್.ಪಿ.ಮಂಜುನಾಥ್ ಹಾಗೂ ಪದಾಧಿಕಾರಿಗಳಿಗೆ ಪ್ರತಿಜ್ಞೆ ವಿಧಿ ಬೋಧಿಸಿದರು.  ಈ ಸಂದರ್ಭ ಮಾತನಾಡಿದ ಅವರು, ಪ್ರತಿಯೊಬ್ಬ ರೋಟರಿ ಸದಸ್ಯರು ಸಾಮಾಜಿಕ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ನಾನು, ನನ್ನ ಏಳಿಗೆ ಆದರೆ ಸಾಲದು. ಸಮುದಾಯದ ಅಭಿವೃದ್ಧಿ ಕೂಡ ಆಗಬೇಕು ಎಂಬುದೇ…

Read More

ಭಾಗಮಂಡಲ NEWS DESK ಜೂ.27 : ಯಡತೊರೆ ಶ್ರೀ ಯೋಗಾನಂದೇಶ್ವರ ಮಠದ  ಶ್ರೀ ಶ್ರೀ ಶಂಕರ ಭಾರತಿ ಮಹಾಸ್ವಾಮಿಗಳು ಇಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಹಾಗೂ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದರು. ಕಾವೇರಿ ನದಿಗೆ ಪೂಜೆ ಸಲ್ಲಿಸಿ ದೇಶದಲ್ಲಿ ಶಾಂತಿ ನೆಲೆಗೊಂಡು ಸುಭಿಕ್ಷವಾಗಲಿ ಎಂದು  ಪ್ರಾರ್ಥಿಸಿದರು. ಪ್ರಮುಖರಾದ ಈಶ್ವರ್ ಭಟ್, ರಮೇಶ್ ಹೊಳ್ಳ, ಸಂಪತ್ ಕುಮಾರ್,  ಸುಬ್ರಮಣ್ಯ ಹೊಳ್ಳ, ನಾಗರಾಜ್ ಭಟ್ ಪಿ. ಎ, ಶ್ರೀಧರ್ ರೈ, ದೇವಾಲಯದ ಅರ್ಚಕರು ಮತ್ತಿತರರು ಸ್ವಾಮೀಜಿಯನ್ನು ಸ್ವಾಗತಿದರು.

Read More

ಮಡಿಕೇರಿ NEWS DESK ಜೂ.27 : ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಂಘದ ಪದಾಧಿಕಾರಿಗಳು ಶುಕ್ರವಾರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರನ್ನು ಭೇಟಿ ಮಾಡಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಕುರಿತು ಮನವಿ ಸಲ್ಲಿಸಿದರು.

Read More