ಮಡಿಕೇರಿ NEWS DESK ಜು.31 : ಹೆಸರುವಾಸಿ ಪ್ರವಾಸಿತಾಣ ಮಡಿಕೇರಿ ನಗರದ ರಾಜಾಸೀಟು ಉದ್ಯಾನವನದಲ್ಲಿ ಗಾಜಿನ ಸೇತುವೆ ನಿರ್ಮಿಸುವ ಯೋಜನೆ ಪರಿಸರಕ್ಕೆ ಮತ್ತು ಜನರ ನೆಮ್ಮದಿಗೆ ಮಾರಕವಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ಅವರು ಪ್ರಕೃತಿದತ್ತವಾದ ರಾಜಾಸೀಟು ಉದ್ಯಾನವನವನ್ನು ಈಗಾಗಲೇ ಕಾಂಕ್ರಿಟೀಕರಣಗೊಳಿಸಿ ನೈಜತೆಗೆ ದಕ್ಕೆ ತರಲಾಗಿದೆ. ಇದೀಗ ಗಾಜಿನ ಸೇತುವೆ ನಿರ್ಮಿಸುವ ಕುರಿತು ಯೋಜನೆ ರೂಪಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದ್ದಾರೆ. ಯೋಜನೆಯ ಕುರಿತು ಯಾರ ಗಮನಕ್ಕೂ ತಾರದೆ ಮತ್ತು ಜನಾಭಿಪ್ರಾಯ ಸಂಗ್ರಹಿಸದೆ ಏಕಾಏಕಿ ಗಾಜಿನ ಸೇತುವೆ ನಿರ್ಮಿಸಲು ಮುಂದಾಗಿರುವುದು ನಿಯಮಬಾಹಿರ ಕ್ರಮವಾಗಿದೆ. ಗಾಜಿನ ಸೇತುವೆ ಪ್ರಕೃತಿ ಸೌಂದರ್ಯದ ರಾಜಾಸೀಟು ಉದ್ಯಾನವನಕ್ಕೆ ಮಾರಕವಾಗಿದೆ. ಪ್ರಸ್ತುತ ಸಾವಿರಾರು ಪ್ರವಾಸಿಗರಿಂದ ತುಂಬಿ ಹೋಗುತ್ತಿರುವ ರಾಜಾಸೀಟು ವ್ಯಾಪ್ತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವ ಪರಿಸ್ಥಿತಿ ಇದೆ. ಗಾಜಿನ ಸೇತುವೆಯಂತಹ ಪ್ರಕೃತಿಗೆ ವಿರುದ್ಧವಾದ…
ಲೇಖಕ: admin
ಮಡಿಕೇರಿ ಜು.31 NEWS DESK : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27 ನೇ ಶೈಕ್ಷಣಿಕ ವರ್ಷಕ್ಕಾಗಿ 9 ನೇ ಮತ್ತು 11ನೇ ತರಗತಿಗಳಿಗೆ (ಖಾಲಿ ಇರುವ ಸೀಟು) ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮತ್ತು ಬೇಕಾದ ಮಾಹಿತಿ ಪಡೆಯಲು Class lx lest 2026: https://cbseitms.nic.in/2025/nvsix9, Class xl lest 2026: hutps://cbseitms.nic.in/2025/nvsixi 11 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಜು.31 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಆ.2 ರಂದು ನಡೆಯುವ “ಕಕ್ಕಡ-18” ಕಾರ್ಯಕ್ರಮದಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಹಾಗೂ ವಿಧಾನ ಪರಿಷತ್ ನ ವಿರೋಧ ಪಕ್ಷದ ಮಾಜಿ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿರಿಯ ಮುತ್ಸದಿ ಬಿ.ಕೆ.ಹರಿಪ್ರಸಾದ್ ಅವರು ಕೊಡವರ ನೈಜ ಆಪತ್ಪಾಂಧವರಾಗಿದ್ದಾರೆ. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಸ್ವಯಂ ಆಡಳಿತಕ್ಕಾಗಿ ಸಿಎನ್ಸಿ ನಡೆಸುತ್ತಿರುವ ಶಾಂತಿಯುತ ಹೋರಾಟಕ್ಕೆ ಸುದೀರ್ಘ ಕಾಲದಿಂದ ಬೆಂಬಲ ನೀಡುತ್ತಾ ಬಂದಿದ್ದಾರೆ. ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸುವುದು, ಕೊಡವರ ಧಾರ್ಮಿಕ ಸಂಸ್ಕಾರ ಬಂದೂಕು/ಗನ್ ಹಕ್ಕುಗಳ ಮಹತ್ವದ ಕುರಿತು ಪಾರ್ಲಿಮೆಂಟ್ ನಲ್ಲಿ ದೇಶದ ಸರಕಾರದ ಗಮನ ಸೆಳೆದಿದ್ದಾರೆ. 2019 ರ ಎಸ್ಸಿ ಎಸ್ಟಿ ಸಂವಿಧಾನ ತಿದ್ದುಪಡಿ ಮಸೂದೆಯ ಸಮಯದಲ್ಲಿ ಕೊಡವ ಬುಡಕಟ್ಟು ವರ್ಗೀಕರಣದ ಕಾಳಜಿಯನ್ನು ಮುನ್ನಲೆಗೆ ತಂದರು.…
ಮಡಿಕೇರಿ ಜು.31 NEWS DESK : ಅಂಚೆ ಅದಾಲತ್ನ ಮುಂದಿನ ಸಭೆಯು ಆ.6 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ ಅಶೋಕ್ ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಆ.5 ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಆ.6 ರಂದು ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಜು.31 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ, ವಿದ್ಯಾರ್ಥಿ ನಿಯರಿಗೆ ಜಾನಪದ ಗಾಯನ ಕಲಿಕಾ ತರಬೇತಿ ಶಿಬಿರವು ಆಗಸ್ಟ್, 01 ರಂದು ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ಮರೂರು ತಿತಿಮತಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ, ತಿತಿಮತಿ ಗ್ರಾ.ಪಂ. ಅಧ್ಯಕ್ಷರಾದ ಪಿ.ಎಸ್.ಪೊನ್ನು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೇಶವಕಾಮತ್, ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರ್ ಕೆ.ಎನ್.ಮೋಹನ್ ಕುಮಾರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಪೊನ್ನಂಪೇಟೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತೇಜರಾಜ ಹಲಸಬಾಳ್, ತಿತಿಮತಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗುರುಶ್ರೀ, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಖ್ಯ ಶಿಕ್ಷಕರಾದ ವಿ.ಎಸ್.ಪ್ರಶಾಂತ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ. ಕುಶಾಲನಗರ ಗಾಯಕರಾದ ಆರ್.ರವಿ ಅವರು ಜಾನಪದ ಸಂಗೀತ ತರಬೇತಿ…
ಮಡಿಕೇರಿ ಜು.31 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ವಿಶೇಷ ಘಟಕ ಯೋಜನೆಯಡಿ ವಿದ್ಯಾರ್ಥಿ ನಿಯರಿಗೆ ಸುಗಮ ಸಂಗೀತ ಕಲಾ ತರಬೇತಿ ಶಿಬಿರವು ಆ.1 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ. ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರಾದ ಎಚ್.ಟಿ.ಅನಿಲ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಾಲಕೃಷ್ಣ ರೈ, ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಡನ್ ಗೀತಾ ಇತರರು ಪಾಲ್ಗೊಳ್ಳಲಿದ್ದಾರೆ. ಸಂಗೀತ ಕಲಾವಿದರಾದ ವೀಣಾ ಹೊಳ್ಳ ಅವರು ಸುಗಮ ಸಂಗೀತ ತರಬೇತಿ ನೀಡಲಿದ್ದಾರೆ.
ಮಡಿಕೇರಿ ಜು.31 NEWS DESK : ಚೇರಂಬಾಣೆ-ಬೇಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಕ-ಕೊಳಗದಾಳು ಗ್ರಾಮದ ಜನರು ಕಳೆದ 10 ದಿನಗಳಿಂದ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ. ಹದಗೆಟ್ಟಿರುವ ರಸ್ತೆಯ ಹೊಂಡಗುಂಡಿಗಳಿಂದ ಬೇಸತ್ತಿರುವ ಗ್ರಾಮಸ್ಥರು ಆಡಳಿತ ವ್ಯವಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯಿತಿ ಸದಸ್ಯರಿಗೆ ಮನವಿ ಪತ್ರ ಸಲ್ಲಿಸಿದ ಗ್ರಾಮಸ್ಥರು ರಸ್ತೆ ಅವ್ಯವಸ್ಥೆ ಮತ್ತು ವಿದ್ಯುತ್ ಕಡಿತದಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಪಾಕ-ಕೊಳಗದಾಳು ಗ್ರಾಮದ ರಸ್ತೆಗಳು ಗುಂಡಿಮಯವಾಗಿದ್ದು, ಮಳೆ ನೀರು ನಿಂತು ವಾಹನಗಳ ಸಂಚಾರ ಹಾಗೂ ಸಾರ್ವಜನಿಕರ ಓಡಾಟ ಅಸಾಧ್ಯವಾಗಿದೆ. ಹೊಂಡಗುಂಡಿಗಳಲ್ಲಿ ರಸ್ತೆಯನ್ನು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕಳೆದ ಹತ್ತು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಗ್ರಾಮಸ್ಥರು ಕತ್ತಲಲ್ಲಿ ಕಾಲ ಕಳೆಯುವಂತ್ತಾಗಿದೆ. ವಯೋವೃದ್ಧರು ಕಷ್ಟ ಪಡುವಂತ್ತಾಗಿದ್ದು, ವಿದ್ಯಾರ್ಥಿಗಳ ವಿದ್ಯಾರ್ಜನೆಗೂ ಅಡಚಣೆಯಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು. ಮನವಿಗೆ ಯಾವುದೇ ಸ್ಪಂದನೆ ದೊರೆಯದೇ…
ಮಡಿಕೇರಿ ಜು.31 NEWS DESK : ಕುಶಾಲನಗರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಆಚರಿಸಲಾಯಿತು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ.ಭರತ್ ಮಾತನಾಡಿ, ಪ್ರತಿಯೊಬ್ಬರೂ ವೈಯಕ್ತಿಕ ಹಾಗೂ ಪರಿಸರ ಶುಚಿತ್ವ, ರಕ್ತ ಹೀನತೆ ಬಗ್ಗೆ ಮಾಹಿತಿ ನೀಡಿದರು. ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ಡೆಂಗ್ಯೂ ಜ್ವರದ ಲಕ್ಷಣಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಅತಿಸಾರ ಭೇದಿ ನಿಯಂತ್ರಣಾ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಡೆಂಗ್ಯೂ, ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆಯನ್ನು ನೀಡುವುದರ ಮೂಲಕ ಗುಣಪಡಿಸಬಹುದು ಎಂದು ತಿಳಿಸಿದ ಅವರು, ಮಲೇರಿಯಾ ಜ್ವರದ ಲಕ್ಷಣಗಳ ಬಗ್ಗೆ ಮತ್ತು ಚಿಕಿತ್ಸೆ ಯ ಬಗ್ಗೆ ಸೊಳ್ಳೆಗಳ ಜೀವನ ಚಕ್ರದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಸಂಚಾರಿ ಗಿರಿಜನ ಆರೋಗ್ಯ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜನಾರ್ಧನ ರಾವ್ ಕದಂ ಮಾತನಾಡಿ…
ನಾಪೋಕ್ಲು ಜು.31 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಚೇರಂಬಾಣೆ ಗೌಡ ಸಮಾಜ ಮತ್ತು ಗೌಡ ಮಹಿಳಾ ಒಕ್ಕೂಟದ ಸಹಯೋಗದಲ್ಲಿ ಅರೆ ಭಾಷೆಲಿ ಕಥೆ ಬರೆಮೋ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಪುಟಾಣಿ ಕೂಡಕಂಡಿ ಅನ್ವಿತ ಸುದೀಪ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಮಾಜದ ಅಧ್ಯಕ್ಷರಾದ ಕೊಡಪಾಲು ಗಣಪತಿ, ಸಮಾಜದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಒಂದು ಅಪರೂಪದ ಸುವರ್ಣ ಅವಕಾಶ. ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ನುಡಿದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಚೇರಂಬಾಣೆ ಗೌಡ ಸಮಾಜ ಕೇವಲ ಮದುವೆ ಸಮಾರಂಭಗಳಿಗೆ ಮೀಸಲಾಗಿರದೆ ಕಲೆ, ಕ್ರೀಡೆ, ಸಾಂಸ್ಕೃತಿಕ ಮತ್ತು ಸಾಹಿತ್ಯ ಕಾರ್ಯಕ್ರಮಗಳಿಗೂ ನೆರಳಾಗಬೇಕು ಎಂಬ ಉದ್ದೇಶದಿಂದ ಮಹಿಳಾ ಒಕ್ಕೂಟವನ್ನು ರಚಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಇದು ಚೊಚ್ಚಲ ಕಾರ್ಯಕ್ರಮವಾಗಿದ್ದು, ಮುಂದೆ ಯುವ ಸಮೂಹಕ್ಕೆ ಹಾಗೂ ಮಹಿಳೆಯರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಇದಕ್ಕಾಗಿ ಎಲ್ಲರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಅಕಾಡಮಿ ಹಮ್ಮಿಕೊಳ್ಳುತ್ತಿರುವ…
ಮಡಿಕೇರಿ NEWS DESK ಜು.31 : ಕಳೆದ ಒಂದು ವಾರ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದ ಬರೆ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನಾಪೋಕ್ಲು ಬ್ಲಾಕ್ ಮೇಕೇರಿ ಗ್ರಾಮದ ಶಕ್ತಿನಗರ ಕಾಲೋನಿ ನಿವಾಸಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಹಾಯಹಸ್ತ ಚಾಚಿದ್ದಾರೆ. ತಮ್ಮ ಸ್ವಂತ ಖರ್ಚಿನಿಂದ ಟಾರ್ಪಲ್ ಗಳನ್ನು ಖರೀದಿಸಿ ನಿವಾಸಿಗಳಿಗೆ ನೀಡಲು ಕ್ರಮ ಕೈಗೊಂಡಿದ್ದಾರೆ. ಕಾರ್ಯನಿಮಿತ್ತ ಬೆಂಗಳೂರಿನಲ್ಲಿರುವ ಶಾಸಕರು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಕೆ.ಎ ಅವರ ಮೂಲಕ ಟಾರ್ಪಲ್ ಗಳನ್ನು ವಿತರಿಸಿದರು. ಈ ಸಂದರ್ಭ ಮೇಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಪೂಜಾರಿರ ಧ್ರುವ, ಹಾಕತ್ತೂರು ವಲಯ ಅಧ್ಯಕ್ಷ ಪಿಯೂಷ್ ಪೆರೇರ, ಮೇಕೇರಿ ಗ್ರಾಮ ಪಂಚಾಯತ್ ಸದಸ್ಯ ಎಂ.ಯು.ಹನೀಫ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಬಶೀರ್, ಸ್ಥಳೀಯ ಪ್ರಮುಖರಾದ ಹ್ಯಾರಿಸ್, ರಫೀಕ್ ಮತ್ತಿತರರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಕೆ.ಎ ಮಾತನಾಡಿ ಶಾಸಕರು ಬೆಂಗಳೂರಿಂದ ಹಿಂತಿರುಗಿದ ತಕ್ಷಣ ಎಲ್ಲರನ್ನು…






