ಲೇಖಕ: admin

ಮಡಿಕೇರಿ NEWS DESK ಜೂ.27 : ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಂಘದ ಪದಾಧಿಕಾರಿಗಳು ಶುಕ್ರವಾರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರನ್ನು ಭೇಟಿ ಮಾಡಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಕುರಿತು ಮನವಿ ಸಲ್ಲಿಸಿದರು.

Read More

ಮಡಿಕೇರಿ NEWS DESK ಜೂ.27 : ಕೊಡಗು ಜಿಲ್ಲೆಯಲ್ಲಿ ತೀವ್ರಗೊಂಡಿರುವ ವನ್ಯಜೀವಿ ಹಾಗೂ ಮಾನವ ಸಂಘರ್ಷ ತಡೆಗೆ ಅರಣ್ಯ ಅಧಿಕಾರಿಗಳು ಅಗತ್ಯ ಕಾರ್ಯಯೋಜನೆ ರೂಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಇದ್ದು, ಇವುಗಳನ್ನು ತಡೆಯಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮ ರೂಪಿಸಬೇಕು ಎಂದು ಸೂಚಿಸಿದರು. ಇದೇ ಸಂದರ್ಭದಲ್ಲಿ ಅರಣ್ಯ ಸಚಿವರ ಜೊತೆ ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಅರಣ್ಯಕ್ಕೆ ಸಂಬ0ಧಿಸಿದ0ತೆ ಸಾಕಷ್ಟು ಸಮಸ್ಯೆಗಳಿದ್ದು, ಬೆಂಗಳೂರಿನಲ್ಲಿ ಅರಣ್ಯ ಸಚಿವರು, ಕೊಡಗು ಜಿಲ್ಲೆಯ ಶಾಸಕರು, ಅರಣ್ಯ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಸಭೆ ನಡೆಸುವ ಬಗ್ಗೆ ಚರ್ಚಿಸಿದರು. ಕೊಡಗು ವೃತ್ತ ಮುಖ್ಯ ಅರಣ್ಯ…

Read More

ಮಡಿಕೇರಿ ಜೂ.27 NEWS DESK : ಇಡೀ ದಕ್ಷಿಣ ಭಾರತದಲ್ಲಿ ಉತ್ತಮ ನಗರ ನಿರ್ಮಾಣ ಮಾಡುವಲ್ಲಿ ಆದರ್ಶ ಆಡಳಿತಗಾರ ಕೆಂಪೇಗೌಡರ ನಿಷ್ಠೆ ಮತ್ತು ಪರಿಶ್ರಮವನ್ನು ಸದಾ ಸ್ಮರಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಂಗಳೂರು ನಿರ್ಮಾಣದಲ್ಲಿ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಅವರ ಬದ್ಧತೆಯನ್ನು ಸ್ಮರಿಸುವಂತಾಗಬೇಕು ಎಂದು ಸಚಿವರು ತಿಳಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಮಾತನಾಡಿ, ಕೆಂಪೇಗೌಡರು ನಾಡುಕಂಡಂತಹ ಆದರ್ಶ ಆಡಳಿತಗಾರರಾಗಿ ಬೆಂಗಳೂರು ನಿರ್ಮಾಣಕ್ಕೆ ಅಗಾಧ ಪ್ರಮಾಣದಲ್ಲಿ ಕೊಡುಗೆ ನೀಡಿದ್ದಾರೆ. ಅವರ ದೂರದೃಷ್ಟಿ ಮತ್ತು ಪರಿಕಲ್ಪನೆಯನ್ನು ಪ್ರತಿಯೊಬ್ಬರೂ ಸ್ಮರಿಸಬೇಕಿದೆ ಎಂದರು. ಕೆಂಪೇಗೌಡರ ಆಡಳಿತ ಅವಧಿಯಲ್ಲಿ 13 ರಿಂದ 14 ಸಾವಿರ ಕೆರೆಗಳನ್ನು ನಿರ್ಮಿಸಿ ಸಮೃದ್ಧ ನಗರ ನಿರ್ಮಾಣಕ್ಕೆ ಶ್ರಮಿಸಿದ್ದರು. ಈಗ…

Read More

ಮಡಿಕೇರಿ ಜೂ.27 NEWS DESK : ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯ ಕೆಲವು ಸಾಲುಗಳನ್ನು ಕತ್ತರಿಸಿ ಕೊಡಗು ಜಿಲ್ಲಾ ಕೆಡಿಪಿ ಸಭೆಯಲ್ಲಿ ಧ್ವನಿ ಮುದ್ರಣವನ್ನು ಬಿತ್ತರಿಸಿದ ಕಾರಣಕ್ಕಾಗಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿ.ಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆಡಿಪಿ ಸಭೆಯ ಆರಂಭದಲ್ಲಿ ನಾಡಗೀತೆಯನ್ನು ಹಾಕಲಾಯಿತು. ಧ್ವನಿ ಮುದ್ರಣದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ….’ ಸಾಲುಗಳು ಇಲ್ಲದೆ ಇರುವುದನ್ನು ಗಮನಿಸಿದ ಎಸ್.ಎಲ್.ಭೋಜೇಗೌಡ ಅವರು ಇದಕ್ಕೆ ಕಾರಣಕರ್ತರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು. ಈ ರೀತಿ ನಾಡಗೀತೆಯನ್ನು ಧ್ವನಿ ಮುದ್ರಣದ ಮೂಲಕ ಹಾಕುವ ಮತ್ತು ಕೆಲವು ಸಾಲುಗಳನ್ನು ಕತ್ತರಿಸುವ ಅಗತ್ಯವೇನಿತ್ತು. ಧ್ವನಿ ಮುದ್ರಣದ ಬದಲು ಶಾಲಾ ಮಕ್ಕಳಿಂದ ಹಾಡಿಸಬಹುದಿತ್ತಲ್ಲ, ನಾಡಗೀತೆಗೆ ತನ್ನದೇ ಆದ ಗೌರವವಿದೆ, ಸಂಪೂರ್ಣ ನಾಡಗೀತೆಯನ್ನು ಪ್ರಸಾರ ಮಾಡಬೇಕಾಗಿತ್ತು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ…

Read More

ಮಡಿಕೇರಿ ಜೂ.27 NEWS DESK : ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ 14 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ನೀಡುವ ಪುರಸ್ಕಾರಕ್ಕೆ ಗೋಣಿಕೊಪ್ಪಲಿನ ಕಾಪ್ಸ್ ಶಾಲೆಯ ಶಿಕ್ಷಕಿ ಹಾಗೂ ಸಾಹಿತಿ ಜಯಲಕ್ಷ್ಮಿ ಎಂ.ಬಿ ಆಯ್ಕೆಯಾಗಿದ್ದಾರೆ. ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಇವರಿಗೆ ಸೇವಾ ಭೂಷಣ ಪ್ರಶಸ್ತಿ ನೀಡಲಾಗುತ್ತಿದೆ. ಜೂ.28 ರಂದು ಮೈಸೂರು ಕಲಾಮಂದಿರದ ಆವರಣದ ಕಿರು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Read More

ಮಡಿಕೇರಿ ಜೂ.27 NEWS DESK : ಮಡಿಕೇರಿಯ ಸುದರ್ಶನ ವೃತ್ತದ ಬಳಿ ಇರುವ ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡುವಂತೆ ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು, ಜಿಲ್ಲೆಯ ಎಲ್ಲಾ ದಲಿತ ಸಮುದಾಯದ ಪ್ರಗತಿಗೆ ಉಪಯೋಗ ಆಗಬೇಕಾದ ಅಂಬೇಡ್ಕರ್ ಭವನವನ್ನು ಒಬ್ಬ ವ್ಯಕ್ತಿ ಕೆಲವು ಸದಸ್ಯರನ್ನು ಇಟ್ಟುಕೊಂಡು ತನಗೆ ಇಷ್ಟ ಬಂದಂತೆ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ಕೊಡಗಿನ ಎಲ್ಲಾ ದಲಿತ ಸಂಘರ್ಷ ಸಮಿತಿಯ ಮುಖಂಡರು ಒಟ್ಟು ಸೇರಿ ಸಭೆ ನಡೆಸಿ ಅಂಬೇಡ್ಕರ್ ಭವನದ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಿ ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯನ್ನು ಹುಟ್ಟು ಹಾಕಿ ಕೊಡಗಿನ ದಲಿತ ಸಮುದಾಯದ ಉಪಯೋಗಕ್ಕಾಗಿ ಹೋರಾಟ ಆರಂಭಿಸಿದ್ದು, ಇದೀಗ ತನಿಖಾ ಹಂತದಲ್ಲಿದೆ. ಆದರೆ 22 ವರ್ಷಗಳ ಆಡಿಟ್ ಮತ್ತಿತರ ಸುಳ್ಳು ದಾಖಲೆಗಳನ್ನು ಹಾಜರು ಪಡಿಸಿ ತನ್ನ ತಪ್ಪನ್ನು ಮರೆಮಾಚಲು ಪ್ರಯತ್ನಗಳು ನಡೆಯುತ್ತಿದ್ದು, ದಲಿತ ಸಮುದಾಯದ ದಾರಿ…

Read More

ಮಡಿಕೇರಿ ಜೂ.27 NEWS DESK :  ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ರಸ್ತೆಯು ಮಳೆಯಿಂದಾಗಿ ಜಲಾವೃತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬ್ಯಾರಿಕೇಡ್ ಅಳವಡಿಸಲಾಗಿದೆ. ಗ್ರಾಮಕ್ಕೆ ತೆರಳಲು ಬದಲಿ ಸಂಪರ್ಕ ರಸ್ತೆ ಇದೆ.

Read More

ಮಡಿಕೇರಿ ಜೂ.27 NEWS DESK : ನಗರದ ಪೇಟೆ ಶ್ರೀ ರಾಮ ಮಂದಿರ ದಸರಾ ಸಮಿತಿಯ  2025ನೇ ಸಾಲಿನ ಅಧ್ಯಕ್ಷರಾಗಿ ಶಿವಮೂರ್ತಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಿತೇಶ್ ಭೋಜಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಅಡ್ವೋಕೇಟ್ ಸಚಿತ್,  ಸಂಘಟನಾ ಕಾರ್ಯದರ್ಶಿಯಾಗಿ ಗಣೇಶ್, ಖಜಾಂಚಿಯಾಗಿ ತೀರ್ಥ ಕುಮಾರ್ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಹೋಟೆಲ್ ಗೌರಿ ಸಭಾಂಗಣದಲ್ಲಿ ಸಮಿತಿ ಮಾಜಿ ಅಧ್ಯಕ್ಷ ಚೇತನ್ ಅಧ್ಯಕ್ಷತೆಯಲ್ಲಿ ಹಾಗೂ ಸದಸ್ಯರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Read More

ಮಡಿಕೇರಿ ಜೂ.27 NEWS DESK : ಮಡಿಕೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತಾಲ್ಲೂಕು ಆಡಳಿತ ಸೌಧ ಕಟ್ಟಡವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ  ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ  ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಸತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ತಾಲ್ಲೂಕು ದಂಡಾಧಿಕಾರಿ ಪ್ರವೀಣ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಕ ಅಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಪ್ರಮುಖ ಉಪಸಿತರಿದ್ದರು.

Read More

ಮಡಿಕೇರಿ ಜೂ.27 NEWS DESK : ನಗರದ ಸುದರ್ಶನ ವೃತ್ತದ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ತಾಲ್ಲೂಕು ಪಂಚಾಯಿತಿ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜ್ ಉದ್ಘಾಟಿಸಿದರು. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೇಖರ್ ಅತಿಥಿಗಳಿಗೆ ನೂತನ ಕಟ್ಟಡದಲ್ಲಿರುವ ಕಚೇರಿಗಳ ಬಗ್ಗೆ ಮಾಹಿತಿ ಒದಗಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಆನಂದ್ ಪ್ರಕಾಶ್ ಮೀನಾ, ಇಲಾಖೆಯ ಅಧಿಕಾರಿಗಳು, ಸರಕಾರಿ ನಾಮ ನಿರ್ದೇಶಿತ ಅಧ್ಯಕ್ಷರುಗಳು,ಸದಸ್ಯರುಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Read More