ಲೇಖಕ: admin

ಮಡಿಕೇರಿ ಜೂ.26 NEWS DESK :  ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂ.29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ ಆಯೋಜಿತ ದೀಪಾ ಹೆಸರಿನ ಅಭಿನಂದನಾ ಕಾಯ೯ಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ನೆರವೇರಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ, ಜಿಲ್ಲಾಧಿಕಾರಿ ವೆಂಕಟರಾಜಾ, ಹೆಚ್ಚುವರಿ ಜಿಲ್ಲಾದಿಕಾರಿ ಆರ್. ಐಶ್ವಯ೯, ಕೊಡವ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಅರೆಭಾಷಾ ಸಾಹಿತ್ಯ, ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಪಾಲ್ಗೊಳ್ಳಲಿದ್ದಾರೆ ಸಂಸ್ಕೃತಿ ಅನಿಲ್ ಮಾಹಿತಿ…

Read More

ಮಡಿಕೇರಿ ಜೂ.26 NEWS DESK : ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಣ್ಣನ ಹಾಡಿಯ ನೂತನ ಸೇತುವೆಯ ಬಳಿ ಮಣ್ಣು ಕುಸಿಯುತ್ತಿದೆ. ಕಳೆದ ಸಾಲಿನಲ್ಲಿ ಸುರಿದ ಧಾರಾಕಾರ ಮಳೆಗೆ ಇಲ್ಲಿನ ಹಳೆಯ ಸೇತುವೆ ಕೊಚ್ಚಿ ಹೋಗಿತ್ತು. ಸ್ಥಳೀಯರ ಒತ್ತಾಯದ ಹಿನ್ನೆಲೆ ಇತ್ತೀಚೆಗೆ ನೂತನ ಸೇತುವೆಯನ್ನು ನಿರ್ಮಿಸಲಾಯಿತು. ಆದರೆ ಈ ಸೇತುವೆಯ ಬಳಿ ತಡೆಗೋಡೆ ನಿರ್ಮಿಸದೆ ಇರುವುದರಿಂದ ಇದೀಗ ಮಣ್ಣು ಕುಸಿಯುತ್ತಿದೆ. ಇದರಿಂದ ಸೇತುವೆಗೆ ಮತ್ತು ರಸ್ತೆಗೆ ಹಾನಿಯಾಗಬಹುದೆಂದು ಹಾಡಿ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವೈಜ್ಞಾನಿಕ ರೂಪದಲ್ಲಿ ತಡೆಗೋಡೆ ನಿರ್ಮಿಸಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಹಾಡಿ ಮುಖಂಡ ಮಾರ ಅಭಿಪ್ರಾಯಪಟ್ಟಿದ್ದಾರೆ.

Read More

ಸೋಮವಾರಪೇಟೆ NEWS DESK ಜೂ.26 : ಬೆಂಗಳೂರು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಕೆಂಪೇಗೌಡರ 516ನೇ ಜನ್ಮದಿನೋತ್ಸವ ಅಂಗವಾಗಿ ಕೊಡುವ ಸಾಧಕ ಪುರಸ್ಕಾರಕ್ಕೆ ಕೊಡಗು ಜಿಲ್ಲೆಯಿಂದ ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ತಾಕೇರಿ ಗ್ರಾಮದ ಎ.ಆರ್.ಮುತ್ತಣ್ಣ ಆಯ್ಕೆಯಾಗಿದ್ದಾರೆ. ಜೂ.27ರ ಶುಕ್ರವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 4 ಗಂಟೆಗೆ ನಡೆಯುವ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಎ.ಆರ್.ಮುತ್ತಣ್ಣ ಅವರು ಒಕ್ಕಲಿಗರ ಸಂಘದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಅಧ್ಯಕ್ಷರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಸಂಘದ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಎಲ್‌ಕೆಜಿಯಿಂದ ಪಿಯುಸಿ ತನಕ 800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶೇ.99ರಷ್ಟು ಗ್ರಾಮೀಣ ವಿದ್ಯಾರ್ಥಿಗಳು ಕುವೆಂಪು ವಿದ್ಯಾಸಂಸ್ಥೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ  ಕಲಿಯುತ್ತಿದ್ದಾರೆ.

Read More

ಕುಶಾಲನಗರ ಜೂ.26 NEWS DESK : ಕಾವೇರಿ ನದಿ ಹರಿಯುವ ಕಣಿವೆ ತೂಗುಸೇತುವೆಯನ್ನು ಜಿಲ್ಲಾ‌ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಪರಿಶೀಲಿಸಿದರು. ನಂತರ  ರಂಗಸಮುದ್ರ ಬಳಿ ಸೇತುವೆಯ ಪಕ್ಕದಲ್ಲಿ ಮಳೆಯಿಂದ ಕುಸಿತವಾದ ಸ್ಥಳವನ್ನು ಪರಿವೀಕ್ಷಿಸಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಲೋಕೋಪಯೋಗಿ, ನೀರಾವರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Read More

ಸೋಮವಾರಪೇಟೆ NEWS DESK  ಜೂ.26 : ರೋಟರಿ ಹಿಲ್ಸ್ ಸೋಮವಾರಪೇಟೆ ನೂತನ ಅಧ್ಯಕ್ಷರಾಗಿ ವೀಣಾ ಮನೋಹರ್ ಹಾಗೂ ಕಾರ್ಯದರ್ಶಿಯಾಗಿ ಡಿ.ಪಿ.ರಮೇಶ್ ಆಯ್ಕೆಯಾದರು. ರೋಟರಿ ಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ 3181 ರೋಟರಿ ನಿಯೋಜಿತ ಜಿಲ್ಲಾ ರಾಜ್ಯಪಾಲ ಸತೀಶ್ ಬೋಳಾರ್ ನೂತನ ಆಡಳಿತ ಮಂಡಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ಸರ್ಕಾರ ಮಾಡಬೇಕಾದ ಕೆಲಸಗಳನ್ನು ರೋಟರಿ ಸಂಸ್ಥೆ ಮಾಡುತ್ತಿದೆ. ಸಮಾಜಸೇವೆಯಲ್ಲಿ ರೋಟರಿ ಸದಸ್ಯರ ನಿಸ್ವಾರ್ಥ ಸೇವೆ ಶ್ಲಾಘನೀಯವಾದುದು. ಸಮಾಜಸೇವಕರು ಈ ದೇಶದ ಸಂಪತ್ತಾಗಿದ್ದು ಸಮಾಜವೂ ಅವರನ್ನು ಗೌರವಿಸುತ್ತದೆ ಎಂದು ಹೇಳಿದರು. ಪ್ರಮಪಂಚದಲ್ಲಿ ಪೊಲೀಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಕೊಡುಗೆ ಅಪಾರವಾದುದು ಎಂದು ಹೇಳಿದರು. ರೋಟರಿ ಮಾಜಿ ಅಧ್ಯಕ್ಷ ಜೆ.ಕೆ.ಪೊನ್ನಪ್ಪ, ಕಾರ್ಯದರ್ಶಿ ಬಿದ್ದಪ್ಪ, ಸಹಾಯಕ ರಾಜ್ಯಪಾಲರಾದ ಹರಿ ಎ ಶೆಟ್ಟಿ, ಉಲ್ಲಾಸ್ ಕೃಷ್ಣ, ವಲಯ ಸೇನಾನಿಗಳಾದ ಪ್ರಕಾಶ್ ಕುಮಾರ್, ಡಾ.ರಾಕೇಶ್ ಪಟೇಲ್ ಇದ್ದರು.

Read More

ಮಡಿಕೇರಿ ಜೂ.26 NEWS DESK :  ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ  ಕಂದಾಯ ಪರಿವೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರು ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಕಾಳಜಿ ಕೇಂದ್ರಕ್ಕೆ ಬರಲು ಸೂಚಿಸಿದರು.

Read More

ನಾಪೋಕ್ಲು ಜೂ.27 NEWS DESK : ಯವಕಾಪಾಡಿ ಗ್ರಾಮದಲ್ಲಿ ಬಾರಿ ಮಳೆ ಗಾಳಿಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿ ನಷ್ಟ ಸಂಭವಿಸಿದೆ. ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ಯವಕಾಪಾಡಿ ಗ್ರಾಮದ ನಿವಾಸಿ ಚೆಂಗಪ್ಪ ಅವರ ವಾಸದ ಮನೆಯ ಶೀಟ್ ಹಾರಿ ಹೋಗಿ ತೀವ್ರ ಹಾನಿಯಾಗಿದೆ. ಸ್ಥಳಕ್ಕೆ ನಾಪೆÇೀಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ವರದಿ : ದುಗ್ಗಳ ಸದಾನಂದ. 

Read More

*‌ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಚೀನಾದ ನೈಋತ್ಯ ಗುಯಿಝೌ ಪ್ರಾಂತ್ಯದಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತದ ಪರಿಣಾಮ ಹೆದ್ದಾರಿ ಸೇತುವೆ ಕುಸಿದು ಸಂಪರ್ಕ ಕಡಿತಗೊಂಡಿದೆ. ಮುರಿದ ಸೇತುವೆಯಲ್ಲಿ ಸರಕು ಸಾಗಣೆ ಟ್ರಕ್ ನೇತಾಡುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗಿದೆ. ಈ ಘಟನೆ ಜುನಿ ನಗರದ ಕ್ಸಿಯಾಮೆನ್-ಚೆಂಗ್ಡು ಎಕ್ಸ್‌ಪ್ರೆಸ್‌ವೇಯ ಭಾಗವಾಗಿರುವ ಸೇತುವೆಯಲ್ಲಿ ನಡೆದಿದೆ.*

Read More

ಕುಶಾಲನಗರ ಜೂ.26 NEWS DESK : ಕುಶಾಲನಗರದ ಲಯನ್ಸ್ ಕ್ಲಬ್ ನ 2025-26ನೇ ಸಾಲಿನ ಆಡಳಿತ ಮಂಡಳಿಯ ನೂತನ‌ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆಯಿತು. ಹಿಂದಿನ ಸಾಲಿನ ಕ್ಲಬ್ ಅಧ್ಯಕ್ಷ ದೇವರಗುಂಡ ಪ್ರವೀಣ್ ಸೋಮಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಾಲಿನ ಅಧ್ಯಕ್ಷರಾಗಿ ಎನ್.ಟಿ.ನಾರಾಯಣ, ಕಾರ್ಯದರ್ಶಿಯಾಗಿ ಎಂ.ಜಿ.ಕಿರಣ್, ಖಜಾಂಚಿಯಾಗಿ ಡಾ.ಶರತ್ ಕುಮಾರ್ ಮ್ಯಾಥ್ಯು ಅಧಿಕಾರ ವಹಿಸಿಕೊಂಡರು. ಮಾಜಿ ಜಿಲ್ಲಾ ಗವರ್ನರ್ ಎಂ.ಬಿ. ಸದಾಶಿವ ಅವರು ನೂತನ ಪದಾಧಿಕಾರಿಗಳಿಗೆ ಮತ್ತು ನೂತನ ಸಾಲಿನ ಆಡಳಿತ ಮಂಡಳಿ ಸದಸ್ಯರಿಗೆ ಪದಗ್ರಹಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸರಕಾರದ ಯೋಜನೆ ತಲುಪಲಾಗದ ಗ್ರಾಮೀಣ ಸ್ಥಳಗಳಿಗೆ,‌ ಫಲಾನುಭವಿಗಳಿಗೆ ತಲುಪಿಸುವಲ್ಲಿ ಲಯನ್ಸ್ ಮೂಲಕ ನೆರವಾಗುತ್ತದೆ. ಸೇವೆಯೇ ಮುಖ್ಯ ಧ್ಯೇಯವಾಗಿಸಿಕೊಂಡಿರುವ ಲಯನ್ಸ್ ಸಂಸ್ಥೆ ಬಡವರು, ಅಶಕ್ತರ‌ ಪಾಲಿನ ಆಶಾಕಿರಣವಾಗಿದೆ, ಸೇವೆಯ ರಾಯಭಾರಿಗಳಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಕ್ರಿಯ, ಸಮಾಜ ಸೇವೆಯ ಗುಣಗಳನ್ನು ಹೊಂದಿರುವವರು ಹೆಚ್ಚು ಸದಸ್ಯರಾಗಬೇಕಿದೆ ಎಂದು ಕರೆ ನೀಡಿದರು. ಲಯನ್ಸ್…

Read More

ಮಡಿಕೇರಿ ಜೂ.26 NEWS DESK : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 92.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 62.63 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1327.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 644.95 ಮಿ.ಮೀ ಮಳೆಯಾಗಿತ್ತು.  ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 79 ಮಿ.ಮೀ. ಕಳೆದ ವರ್ಷ ಇದೇ ದಿನ 90.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1879.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 923.78 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 130.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 85.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1360.40 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 622.95 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 141.29 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…

Read More