ಮಡಿಕೇರಿ ಜು.30 NEWS DESK : ಕೊಡಗು ಜಿಲ್ಲೆಯಲ್ಲಿ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು 800 ರಷ್ಟು ವಿದ್ಯುತ್ ಕಂಬಗಳು, ಮರಗಳು ಹಾಗೂ ಮರದ ರೆಂಬೆಕೊಂಬೆಗಳು ಮುರಿದು ಬಿದ್ದು ಹಾನಿಯಾಗಿದೆ. ಅಪಾರ ಪ್ರಮಾಣದಲ್ಲಿ ವಿದ್ಯುತ್ ಮಾರ್ಗಗಳಿಗೆ ಹಾನಿ ಉಂಟಾಗಿ ಬಹುತೇಕ ಎಲ್ಲಾ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿರುತ್ತದೆ. ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನ ಬಹುತೇಕ ಕಡೆ ಬೀಸುತ್ತಿರುವ ವಿಪರೀತ ಗಾಳಿಯಿಂದ ಸೆಸ್ಕ್ ಇಲಾಖೆಯ ಸಿಬ್ಬಂದಿಯವರಿಗೆ ದುರಸ್ತಿ ಕೆಲಸ ನಿರ್ವಹಿಸಲು ತೀರಾ ಹಿನ್ನಡೆ ಉಂಟಾಗಿದೆ. ಕೆಲವೊಂದು ಪ್ರದೇಶಗಳಲ್ಲಿ ಐದಾರು ದಿವಸಗಳಿಂದ ವಿದ್ಯುತ್ ಮರುಜೋಡಣೆ ಬಾಕಿ ಇದ್ದು, ಚೆಸ್ಕಾಂ ವತಿಯಿಂದ ದುರಸ್ತಿ ಕಾರ್ಯ ನಡೆಯುತ್ತಿದೆ. ಆದಷ್ಟು ಬೇಗ ವಿದ್ಯುತ್ ಮರುಜೋಡಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ಸೆಸ್ಕ್ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಜು.30 NEWS DESK : ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ರಾಜ್ಯ ಶಾಖೆ, ಕನ್ನಡ ವೈದ್ಯ ಬರಹಗಾರರ ಸಮಿತಿ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಪ್ರಶಸ್ತಿಗೆ ಕೊಡಗಿನ ಹಿರಿಯ ವೈದ್ಯ, ಸಾಹಿತಿ ಡಾ. ಕೆ.ಬಿ.ಸೂರ್ಯಕುಮಾರ್ ಭಾಜನರಾಗಿದ್ದಾರೆ. ಸೂರ್ಯಕುಮಾರ್ ಅವರು ಬರೆದ ಮಂಗಳಿ ಕೃತಿಗೆ ಡಾ. ಕೆ.ಎಸ್.ಶ್ಯಾಮ್ಪ್ರಸಾದ್ ಶ್ರೇಷ್ಠ ವೈದ್ಯೇತರ ಕೃತಿ ಪ್ರಶಸ್ತಿ ಲಭಿಸಿದೆ.
ವಿರಾಜಪೇಟೆ ಜು.30 NEWS DESK : ಹೆಗ್ಗಳ ಗ್ರಾಮದ ಪಾಲ್ಟ್ ಮಕ್ಕಿಯಲ್ಲಿರುವ ಶ್ರೀ ನಾಗ ಬನದಲ್ಲಿ ನಾಗರ ಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.ಅರ್ಚಕರಾದ ವೇಣುಗೋಪಾಲ್ ಭಟ್ ಅವರು ಸಂಕಲ್ಪ ಪೂಜೆ, ಅಲಂಕಾರ, ಶ್ರೀ ನಾಗ ದೇವರಿಗೆ ಸೀಯಾಳ ಅಭಿಷೇಕ, ಕ್ಷೀರಾಭಿಷೇಕ, ಕುಂಕುಮಾರ್ಚನೆ, ಪುಷ್ಪರ್ಚನೆ ಸೇರಿದಂತೆ ವಿವಿಧ ಪೂಜಾ ವಿಧಾನಗಳನ್ನು ನಡೆಸಿದರು. ನಂತರ ನಾಗ ತಂಬಿಲ ನಡೆಯಿತು. ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಸಮೀಪವಿರುವ ಹುತ್ತಕ್ಕೆ ಗ್ರಾಮದ ಮಹಿಳೆಯರು ಹಾಲನ್ನು ಎರೆಯುವುದರ ಮೂಲಕ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ವಿರಾಜಪೇಟೆ ಜು.30 NEWS DESK : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ನಾಗ ದೇವರ ಗುಡಿಯಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೆ ಪೂಜಾ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ನಡೆಯಿತು. ಅರ್ಚಕರು ಸಂಕಲ್ಪ ಪೂಜೆ ಹಾಗೂ ಪ್ರಾರ್ಥನೆ ಮಾಡಿದರು. ನಂತರ ಅಲಂಕಾರ ಪೂಜೆ, ಕ್ಷೀರಾಭಿಷೇಕ, ಪಂಚಾಂಬ್ರುತ ಅಭಿಷೇಕ, ಕುಂಕುಮಾರ್ಚನೆ, ಸೀಯಾಳ ಅಭಿಷೇಕ, ನಾಗತಂಬಿಲ, ಮಹಾಪೂಜೆ ನಡೆಯಿತು. ಬಳಿಕ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ವಿವಿಧ ಕಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ, ಪ್ರಾರ್ಥನೆ, ಹಾಲಿನ ಅಭಿಶೇಷ ನೆರವೇರಿಸಿದರು. ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ಮಡಿಕೇರಿ ಜು.30 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಟಿ.ಪಿ.ರಮೇಶ್ ಅವರು ಆಯ್ಕೆಯಾಗಿದ್ದಾರೆ. ಇವರಿಗೆ ಕೊಡಗು ಪತ್ರಕರ್ತರ ಸಂಘ ಅಭಿನಂದನೆ ಸಲ್ಲಿಸಿದೆ.
ಮಡಿಕೇರಿ ಜು.30 NEWS DESK : ಕಳೆದ ಒಂದು ವಾರದಿಂದ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದ ಕೊಡಗು ಜಿಲ್ಲೆಯಲ್ಲಿ ಇಂದು ಸಾಧಾರಣ ಮಳೆಯೊಂದಿಗೆ ಕೊಂಚ ಬಿಸಿಲಿನ ವಾತಾವರಣವಿತ್ತು. ಆದರೆ ಗಾಳಿಯ ರಭಸ ಮುಂದುವರಿದಿರುವುದರಿಂದ ಕೆಲವು ಭಾಗಗಳಲ್ಲಿ ಮರ ಬಿದ್ದು ನಷ್ಟ ಉಂಟಾಗಿದೆ. ಮಡಿಕೇರಿ ತಾಲ್ಲೂಕಿನ ದೇವಸ್ತೂರು ಗ್ರಾಮದ ಕುಕ್ಕೇರ ಚಿಮ್ಮ ಎಂಬುವವರಿಗೆ ಸೇರಿದ ಮನೆ ಮತ್ತು ಕಾರಿನ ಮೇಲೆ ಬೃಹತ್ ಮರ ಬಿದ್ದು ಅಪಾರ ನಷ್ಟ ಸಂಭವಿಸಿದೆ. ಆದರೆ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮಡಿಕೇರಿ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮರ ಬಿದ್ದ ಪರಿಣಾಮ ವಿದ್ಯುತ್ ಮಾರ್ಗಕ್ಕೆ ಹಾನಿ ಉಂಟಾಗಿದೆ. ನೂರಾರು ಮನೆಗಳು ವಿದ್ಯುತ್ ಸಂಪರ್ಕ ಕಳೆದುಕೊಂಡು ನಾಲ್ಕು ದಿನಗಳೇ ಕಳೆದಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಆರು ದಿನಗಳ ಕಾಲ ಸುರಿದ ಬಿರುಗಾಳಿ ಸಹಿತ ಮಳೆಗೆ 800 ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಚೆಸ್ಕಾಂಗೆ ಅಪಾರ ನಷ್ಟ ಉಂಟಾಗಿದೆ. ಮರ ಮತ್ತು…
ವಿರಾಜಪೇಟೆ ಜು.29 NEWS DESK : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಯನ್ನು ವಿರಾಜಪೇಟೆ ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ಬೇಗೂರು ಕೇಚೆಟ್ಟಿರ.ಎಸ್. ತಮ್ಮಯ್ಯ ಅವರಿಗೆ ಪ್ರದಾನ ಮಾಡಲಾಯಿತು. ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ ವಿಭಾಗದಲ್ಲಿ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಮಾಡಿದ ಸಾಧನೆಯ ಹಿನ್ನಲೆ ಅತ್ಯುತ್ತಮ ದೈಹಿಕ ನಿರ್ದೇಶಕ ಎಂಬ ಪ್ರಶಸ್ತಿಗೆ ಭಾಜನರಾಗಿದ್ದರು. ಈ ಹಿಂದೆ ಮೈಸೂರಿನ ಸೆಂಟ್ ಜೋಸೆಪ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಕೇಚೆಟ್ಟಿರ.ಎಸ್. ತಮ್ಮಯ್ಯ ಮಾರ್ಗದರ್ಶನದ ಎ ಹಾಗೂ ಬಿ ತಂಡಗಳು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಪೈನಲ್ ಹಂತಕ್ಕೆ ತಲುಪಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದಿತ್ತು. ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಹಾಗೂ ಐ.ಕ್ಯೂ.ಎ.ಸಿ ಸಂಚಾಲಕಿ ಪ್ರಿಯ ಮುದ್ದಪ್ಪ ಕಾಲೇಜಿನ ಪರವಾಗಿ…
ಮಡಿಕೇರಿ ಜು.29 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 30ನೇ ವರ್ಷದ “ಕಕ್ಕಡ-18” ಆಚರಣೆ ಆ.2 ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದ ಆರಂಭದಲ್ಲಿ ಕೊಡವ ಗುರುಕಾರೋಣರನ್ನು ಸ್ಮರಿಸಿ ಪ್ರಾರ್ಥಿಸಲಾಗುವುದು ಮತ್ತು “ಕಕ್ಕಡ-18” ರ ವಿಶೇಷ ಖಾದ್ಯಗಳನ್ನು ಅರ್ಪಿಸಲಾಗುವುದು. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಆದಿಮಸಂಜಾತ ಕೊಡವರು ಆರಾಧಿಸುವ ಪ್ರಕೃತಿ ಸಿರಿಯ ಕೊಡವ ಮಾತೃಭೂಮಿಯನ್ನು ಉಳಿಸಿಕೊಳ್ಳುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಗುವುದು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಸ್ವಯಂ ಆಡಳಿತ ನೀಡಬೇಕು, ಆದಿಮಸಂಜಾತ ಕೊಡವರಿಗೆ ಎಸ್ಟಿ ಟ್ಯಾಗ್ ಘೋಷಿಸಬೇಕು, ಆರ್ಟಿಕಲ್371, 244ನೇ ವಿಧಿ ಮತ್ತು 6 ಮತ್ತು 8ನೇ ಶೆಡ್ಯೂಲ್ ಪ್ರಕಾರ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕು ಒದಗಿಸಬೇಕು, ಆದಿಮಸಂಜಾತ ಏಕ ಜನಾಂಗೀಯ ಕೊಡವರ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ…
ಮಡಿಕೇರಿ ಜು.29 NEWS DESK : ಕೊಡಗು ಜಿಲ್ಲೆಯ ರಸಗೊಬ್ಬರ ದಾಸ್ತಾನು ಕೇಂದ್ರಗಳಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ ಜು.29 NEWS DESK : ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿದ್ಧವಾಗಿರುವ ಕೊಡಗಿನ ಪರಿಸರದಲ್ಲಿ ಚಿತ್ರೀಕರಣಗೊಂಡಿರುವ ‘ಎಲ್ಟು ಮುತ್ತಾ’ ಕನ್ನಡ ಚಲನಚಿತ್ರ ಇದೇ ಆ.1ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರ ನಿರ್ಮಾಪಕ ಸತ್ಯ ಶ್ರೀನಿವಾಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಚಲನಚಿತ್ರದ ‘ಟೀಸರ್’ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೊಡಗಿನ ನೆಲಜಿ ಗ್ರಾಮದ ಬಾಳಿಯಡ ಮಣಿ ಅಯ್ಯಪ್ಪ ಅವರ ಪುತ್ರ ರಾ.ಸೂರ್ಯ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸುಮಾರು 75 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಚಲನಚಿತ್ರ ಬಿಡುಗಡೆಯಾಗಲಿದೆ. ಕೊಡಗಿನ ಸಿದ್ದಾಪುರ, ಶನಿವಾರಸಂತೆ, ಸುಂಟಿಕೊಪ್ಪ ಚಿತ್ರಮಂದಿರಗಳಲ್ಲು ಚಿತ್ರ ಪ್ರದರ್ಶನ ಅದೇ ದಿನ ನಡೆಯಲಿದೆ ಎಂದರು. ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಚಲನಚಿತ್ರದ ಆಡಿಯೋ ಲಾಂಚ್ ಮಾಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿದೆ. ಚಲನಚಿತ್ರದಲ್ಲಿ 5 ಹಾಡುಗಳು ಮತ್ತು 2 ಫೈಟ್ ಗಳಿದ್ದು, ಜನರ ಮನರಂಜನೆಗೆ ಪೂರಕವಾದ ಎಲ್ಲಾ ಅಂಶಗಳು ಇರುವುದಾಗಿ ತಿಳಿಸಿದರು. ಚಲನಚಿತ್ರದ ಪ್ರಮುಖ ಪಾತ್ರಗಳಲ್ಲಿ ಶೌರ್ಯ ಪ್ರತಾಪ್, ಪ್ರಿಯಾಂಕ ಮಳಲಿ ಅವರು ನಟಿಸಿದ್ದಾರೆ.…






