ಮಡಿಕೇರಿ ಜೂ.25 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ಜಯಂತಿಯು ಜೂನ್, 27 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಕೊಡಗು ಜಿಲ್ಲಾ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ್ ಕರಂದ್ಲಾಜೆ, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಅಂಬೆಕಲ್ ನವೀನ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ…
ಲೇಖಕ: admin
ಮಡಿಕೇರಿ ಜೂ.25 NEWS DESK : ಹಿಂದುಳಿದ ವರ್ಗಗಳ ಕಲ್ಯಾಣ, ಪೊಲೀಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತರ ರಾಷ್ಟ್ರೀಯ ದಿನ ಕುರಿತು ಜಾಗೃತಿ ಅಭಿಯಾನ ನಡೆಯಿತು. ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಡೈರಿ ಫಾರಂನಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀನಾಥ್, ಹಿಂದೆ ಹಲವು ರೀತಿಯ ವೈರಸ್ ಮತ್ತು ಬ್ಯಾಕ್ಟೀರಿಯಾ ರೋಗಗಳಿಗೆ ತುತ್ತಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮಾನಸಿಕ ಸ್ಥಿತಿ, ಒತ್ತಡ ಹಾಗೂ ಉದಾಸೀನತೆಯಿಂದ ಹಲವು ರೋಗಗಳನ್ನು ಕಾಣುತ್ತೇವೆ. ಆದ್ದರಿಂದ ಬದುಕಿನ ಜೀವನ ಶೈಲಿಯನ್ನು ಬದಲಿಸಿಕೊಂಡು, ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು. ಹಿಂದೆ ಮನುಷ್ಯನ ಆಯಸ್ಸು 80 ರಿಂದ 100 ವರ್ಷಗಳ ಕಾಲ ಬದುಕುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ಆಯಸ್ಸು ಕಡಿಮೆಯಾಗುತ್ತಿದೆ. ಆದ್ದರಿಂದ ಯಾವುದೇ ರೀತಿಯ ಮದ್ಯ ಹಾಗೂ ಮಾದಕ…
ಮಡಿಕೇರಿ ಜೂ.25 NEWS DESK : ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರೌಢಶಾಲೆ ಹಾಗೂ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು. ‘ನಮ್ಮ ಬೆಂಗಳೂರು ಹೇಗೆ ಇದ್ದರೆ ಚೆನ್ನ’ ಹಾಗೂ ‘ನಾಡಪ್ರಭು ಕೆಂಪೇಗೌಡರ ಕೊಡುಗೆ’ ಕುರಿತು ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ, ಬೆಂಗಳೂರು ನಿರ್ಮಾತೃ ಕೆಂಪೇಗೌಡರನ್ನು ಸದಾ ಸ್ಮರಿಸುವಂತಾಗಬೇಕು. ಅವರ ದೂರ ದೃಷ್ಟಿಯಿಂದ ಹಿಂದೆಯೇ ಬೆಂಗಳೂರು ಅಭಿವೃದ್ಧಿಯತ್ತ ಸಾಗಿತ್ತು. ಕೆರೆ ಕಟ್ಟೆಗಳ ನಿರ್ಮಾಣ, ಮರಗಿಡಗಳನ್ನು ಬೆಳೆಸಿ ಪರಿಸರ ಶುಚಿತ್ವಕ್ಕೆ ಒತ್ತು ನೀಡಿದ್ದರು ಎಂದು ಅವರು ಹೇಳಿದರು. ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದರಿಂದ ಆತ್ಮವಿಶ್ವಾಸ ಮತ್ತು ಜ್ಞಾಪಕಶಕ್ತಿ ಹೆಚ್ಚಾಗುತ್ತದೆ. ಪಠ್ಯದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದರು. ಕನ್ನಡ ಮತ್ತು ಸಂಸ್ಕøತಿ…
ಮಡಿಕೇರಿ ಜೂ.25 NEWS DESK : ರಾಜ್ಯ ಕಾಂಗ್ರೆಸ್ ಸರ್ಕಾರ ಸಂಘ ಪರಿವಾರದ ನಿಯಂತ್ರಣದಲ್ಲಿದ್ದು, ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ವಿಫಲವಾಗಿದೆ. ಮೃದು ಹಿಂದುತ್ವದ ಧೋರಣೆಯ ಮೂಲಕ ಅಲ್ಪಸಂಖ್ಯಾತರಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಘಟಕ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವುದು ಸೂಕ್ತವೆಂದು ಲೇವಡಿ ಮಾಡಿದರು. ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ಎ.ಬಿ.ರಮೇಶ್ ಬಂಡಿ ಸಿದ್ದೇಗೌಡನ ಅವರು ನೀಡಿರುವ ಮುಸ್ಲಿಂ ವಿರೋಧಿ ಹೇಳಿಕೆಯನ್ನು ಎಸ್ಡಿಪಿಐ ತೀವ್ರವಾಗಿ ಖಂಡಿಸುತ್ತದೆ ಹಾಗೂ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸುತ್ತದೆ. ಕರ್ನಾಟಕದ 2023ರ ವಿಧಾನಸಭಾ ಚುಣಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಅತ್ಯಂತ ಹೆಚ್ಚಿನ ಅಂತರದಿಂದ ಗೆಲ್ಲಿಸಿದ್ದಾರೆ. 135 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವುದರ ಮೂಲಕ ಪೂರ್ಣ ಬಹುಮತದ ಸರಕಾರ ರಚಿಸುವ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಮುಂದೆ ನಡೆದ ಉಪ ಚುಣಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ತನ್ನ ಶಾಸಕ…
ನಾಸಾ ಜೂ.25 NEWS DESK : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್ (Axiom-4) ಕೊನೆಗೂ ಇಂದು ಬುಧವಾರ ಭಾರತೀಯ ಕಾಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ. ಇಂದು ಮಧ್ಯಾಹ್ನದಿಂದ 28 ಗಂಟೆಗಳ ಪ್ರಯಾಣದ ನಂತರ, ಬಾಹ್ಯಾಕಾಶ ನೌಕೆ ನಾಳೆ (ಜೂ.26) ಗುರುವಾರ ಸಂಜೆ 4:30 (IST) ಸುಮಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ನೊಂದಿಗೆ ಡಾಕ್ ಆಗುವ ನಿರೀಕ್ಷೆಯಿದೆ. ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ. ನಾಸಾದ ಮಾಜಿ ಗಗನಯಾತ್ರಿ ಮತ್ತು ಆಕ್ಸಿಯಮ್ ಸ್ಪೇಸ್ನಲ್ಲಿ ಮಾನವ ಬಾಹ್ಯಾಕಾಶ ಹಾರಾಟದ ನಿರ್ದೇಶಕಿ ಪೆಗ್ಗಿ ವಿಟ್ಸನ್ ಈ ವಾಣಿಜ್ಯ ಕಾರ್ಯಾಚರಣೆಯನ್ನು ಮುನ್ನಡೆಸಿದ್ದಾರೆ. ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಗಗನಯಾತ್ರಿ ಶುಭಾನ್ಶು ಶುಕ್ಲಾ ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇಬ್ಬರು ಮಿಷನ್ ತಜ್ಞರು ಪೋಲೆಂಡ್ನ ಇಎಸ್ಎ (ಯುರೋಪಿಯನ್ ಬಾಹ್ಯಾಕಾಶ…
ಸುಂಟಿಕೊಪ್ಪ ಜೂ.25 NEWS DESK : ಹಿಂದಿನ ಕಾಲದಲ್ಲಿ ನಾವುಗಳು ವನ್ಯಪ್ರಾಣಿಗಳನ್ನು ಪ್ರಾಣಿ ಸಂಗ್ರಹಾಲಯ, ಸರ್ಕಸ್, ಸಿನಿಮಾ ಅಥವಾ ಅರಣ್ಯಕ್ಕೆ ತೆರಳಿ ನೋಡಬೇಕಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ವನ್ಯಪ್ರಾಣಿಗಳು ನಾಡಿನಲ್ಲೇ ಕಾಣುವಂತಾಗಿದೆ ಎಂದು ಯೋಜನಾಧಿಕಾರಿ ಪುರೋಷತ್ತಮ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಕಾನ್ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಪರಿಸರ ದಿನಚಾರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಅವರು ಮಾತನಾಡಿದರು. ಪರಿಸರವನ್ನು ಉಳಿಸಿ ಬೆಳೆಸಬೇಕಾದ ನಾವುಗಳು ಆಧುನಿಕತೆಯ ಭರಾಟೆಯಲ್ಲಿ ನಿತ್ಯ ಪರಿಸರವನ್ನು ನಾಶಗೊಳಿಸಲಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹವಾಮಾನ ವೈಪರೀತ್ಯ ಸೇರಿದಂತೆ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿನತ್ತ ಮುಖ ಮಾಡುತ್ತಿರುವುದು ಸರ್ವೆ ಸಾಮಾನ್ಯವಾಗಿದೆ. ಆದುದ್ದರಿಂದ ನಮ್ಮ ಸುತ್ತ ಮುತ್ತಲಿನಲ್ಲಿರುವ ಪಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಪ್ರತಿಯೊಬ್ಬರು ಮುಂದಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನ್ನಾಥ್, ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿ…
ನವದೆಹಲಿ ಜೂ.25 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಹಲವು ಸಂಗತಿಗಳ ಕುರಿತು ಚರ್ಚಿಸಿದರು. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಯವನ್ನು 16ನೇ ಹಣಕಾಸು ಆಯೋಗದಲ್ಲಿ ಸರಿದೂಗಿಸುವ ಜೊತೆಗೆ ರಾಜ್ಯದ ಪಾಲನ್ನು ಒದಗಿಸುವುದೂ ಸೇರಿದಂತೆ ಹಲವು ಸಂಗತಿಗಳ ಕುರಿತು ಚರ್ಚಿಸಿ ರಾಜ್ಯದ ಪರವಾಗಿ ಮನವಿ ಸಲ್ಲಿಸಿದರು.
ಮಡಿಕೇರಿ ಜೂ.25 NEWS DESK : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 60.92 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.50 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1234.91 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 582.32 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 57.18 ಮಿ.ಮೀ. ಕಳೆದ ವರ್ಷ ಇದೇ ದಿನ 22.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1800.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 833.65 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 49.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 44.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1230.30 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 537.75 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 73.52 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಮಡಿಕೇರಿ ಜೂ.25 NEWS DESK : ಕೊಡಗಿನಲ್ಲಿ ಕೊಡಗಿನಲ್ಲಿ ಗಾಳಿ ಸಹಿತ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ಜೂ.26 ರ ಬೆಳಿಗ್ಗೆ 8.30 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.
ನವದೆಹಲಿ ಜೂ.25 NEWS DESK : ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಲುಗಳನ್ನು ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16 ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14 ನೇ ಹಣಕಾಸು ಆಯೋಗದಲ್ಲಿ 4.7% ಅಡ್ಡವಾಗಿ ತೆರಿಗೆ ಹಂಚಿಕೆಯಾಗಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು 80000 ಕೋಟಿ ಕಡಿಮೆಯಾಗಿದೆ ಎಂದರು. :: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ :: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ …






