ಲೇಖಕ: admin

ಮಡಿಕೇರಿ ಜು.28 NEWS DESK : ಅಯ್ಯಂಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ 1ನೇ ತರಗತಿಯ ಪ್ರಾರಂಭೋತ್ಸವ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಎಂ.ಎಂ.ರಾಶಿದ್, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ಆಲಿ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎನ್.ಶಾಂತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆಂಗ್ಲ ಮಾಧ್ಯಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ದಾಖಲಿಸುವಂತೆ ಕೋರಿದರು. ಈ ಸಂದಭ೯ ಎಸ್.ಡಿ.ಎ೦. ಸಿ ಸದಸ್ಯರು, ಶಿಕ್ಷಕ ವೃಂದದವರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.28 NEWS DESK : ಭಾರೀ ಗಾಳಿ ಮಳೆಯಿಂದ ಮನೆಯ ಗೋಡೆ ಕುಸಿದು ಹಾನಿಯಾದ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ. ನಾಪೋಕ್ಲು ಗ್ರಾಮದ ಕುಲ್ಲೆಟ್ಟಿರ ಚಂಗಪ್ಪ ಎಂಬವರ ಮನೆಯ ಗೋಡೆ ಕುಸಿದು ತೀವ್ರ ಹಾನಿಯಾಗಿದೆ.

Read More

ಮಡಿಕೇರಿ ಜು.28 NEWS DESK : ಭಾಗಮಂಡಲ ಕೆವಿಜಿ ಅನುದಾನಿತ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ 2025- 27ನೇ ಸಾಲಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಎಲೆಕ್ಟ್ರಾನಿಕ್ ಮೆಕಾನಿಕ್ ಮತ್ತು ಎಲೆಕ್ಟ್ರಿಕಲ್ ಕೋರ್ಸು ಗಳಲ್ಲಿ ಕೆಲವೇ ಕೆಲವು ಸೀಟುಗಳು ಖಾಲಿ ಇದೆ. ಕಳೆದ ಹಲವು ವರ್ಷಗಳಿಂದ ಉತ್ತಮ ಫಲಿತಾಂಶವನ್ನು ನೀಡುತ್ತಿರುವ ಈ ಸಂಸ್ಥೆಯಲ್ಲಿ ಸರಕಾರದ ನಿಯಮಾನುಸಾರ ಪ್ರವೇಶಾತಿ, ತಾಂತ್ರಿಕ ತರಬೇತಿ, ಉಚಿತ B.C.M ಹಾಸ್ಟೆಲ್ ವ್ಯವಸ್ಥೆ ಮತ್ತು ಕ್ಯಾಂಪಸ್ ಸಂದರ್ಶನದ ಮೂಲಕ ಶೇ.100 ರಷ್ಟು ಉದ್ಯೋಗದ ಅವಕಾಶ ಇದೆ. ಹೆಚ್ಚಿನ ಮಾಹಿತಿಗಾಗಿ 9900902141 ಸಂಪರ್ಕಿಸಬಹುದಾಗಿದೆ.

Read More

ಬೆಂಗಳೂರು ಜು.28 NEWS DESK  : ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿ, ಪೂರ್ಣಗೊಂಡ ಕಾಮಗಾರಿಯನ್ನು ಉದ್ಘಾಟಿಸಿದರು. ಶಾಸಕ‌ ಉದಯ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್  ಉಪಸ್ಥಿತರಿದ್ದರು.

Read More

ಮಡಿಕೇರಿ ಜು.28 NEWS DESK : ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಶೈಕ್ಷಣಿಕ ಸಾಧಕ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಭಾಷಣಗಾರರಾಗಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ. ಸಮಾಜದ ಮೂರನೇ ಕಣ್ಣು ಆಗಿರುವ ಪತ್ರಕರ್ತರು ಯಾವುದೇ ಕಾರಣಕ್ಕೂ ದೃಷ್ಟಿ ಕಳೆದುಕೊಳ್ಳಬಾರದು. ಪ್ರಸ್ತುತ ಸನ್ನಿವೇಶದಲ್ಲಿ ಪತ್ರಕರ್ತರ ದೃಷ್ಟಿಕೋನ ಬದಲಾಗಿದೆ. ಊಹ ಪತ್ರಿಕೋದ್ಯಮ ಭರಾಟೆಯಿಂದ ಟೀಕೆ-ಟಿಪ್ಪಣಿ ಎದುರಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಪತ್ರಕರ್ತರು ತಮ್ಮ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸಮಾಜ ಹಾಗೂ ಸರಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುವುದರೊಂದಿಗೆ ವೃತ್ತಿಧರ್ಮ ಪಾಲಿಸಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ ಹೆಸರಿನಲ್ಲಿ ಬೇರೆಯವರ ಸ್ವಾತಂತ್ರ್ಯ ಕಸಿಯಬಾರದು. ಎಂದಿಂಗೂ ಅರ್ಧ…

Read More

ಮಡಿಕೇರಿ ಜು.28 NEWS DESK : ಮತದಾರರ ಸಾಕ್ಷರತಾ ಸಂಘದ ವತಿಯಿಂದ ಮಕ್ಕಂದೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಆಡಳಿತ ಮಂಡಳಿಯ ಚುನಾವಣೆ ನಡೆಯಿತು.  ಪರಿಷ್ಕೃತ ಮತದಾರರ ಪಟ್ಟಿ, ಮತದಾರರ ಗುರುತಿನ ಚೀಟಿ, ಮತಯಂತ್ರ, ಚುನಾವಣಾ ಅಧಿಕಾರಿಗಳ ನೇಮಕ ಮಾಡಲಾಗಿತ್ತು. ಇವುಗಳೆಲ್ಲವನ್ನೂ ಸಿದ್ಧ ಮಾಡಿಕೊಳ್ಳಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಮತಪೆಟ್ಟಿಗೆ, ಮತ ಚೀಟಿಗಳ ಬದಲು ಮೊಬೈಲ್ ನಲ್ಲಿ ಮತಯಂತ್ರಗಳನ್ನು ಬಳಸಿ ಮಕ್ಕಳು ಮತ ಚಲಾವಣೆ ಮಾಡಿದ್ದು ವಿಶೇಷವಾಗಿತ್ತು. ಒಂದು ಮೊಬೈಲ್ ನ್ನು ಇವಿಎಂ ಓಟಿಂಗ್ ಮೆಷಿನ್ ಬ್ಯಾಲೆಟ್ ಯೂನಿಟ್ ಆಗಿ ಮತ್ತೊಂದು ಮೊಬೈಲ್ ನ್ನು ಕಂಟ್ರೋಲ್ ಯುನಿಟ್ ಆಗಿ ಬಳಸಲಾಯಿತು. ಮತ ಎಣಿಕೆ ಓಟಿಂಗ್ ಮೆಷಿನ್ ನಲ್ಲಿ ನಡೆಯಿತು. ಮತ ಎಣಿಕೆಯ ನಂತರ ಶಾಲಾ‌ ನಾಯಕರಾಗಿ ಅಕ್ಷಯ್ ಕುಮಾರ್ ಹಾಗೂ ಶಾಲಾ‌ ನಾಯಕಿಯಾಗಿ ಜ್ಯೋತಿ ತಮ್ಮ ಆಡಳಿತ ಮಂಡಳಿಯ ಸಚಿವರನ್ನು ಆಯ್ಕೆ ಮಾಡಿದರು. ಚುನಾವಣಾ ಆಯುಕ್ತರಾಗಿ ಶಾಲಾ ಮುಖ್ಯ ಶಿಕ್ಷಕರಾದ ಹರಿಣಾಕ್ಷಿ ಕಾರ್ಯ ನಿರ್ವಹಿಸಿದರು. ಸಂಚಾಲಕರಾಗಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿ…

Read More

ಕುಶಾಲನಗರ ಜು.28 NEWS DESK : ಮೈಸೂರಿನ ಸೇವಾ ಭಾರತಿ ಟ್ರಸ್ಟ್‌ ವತಿಯಿಂದ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸೀಗೆಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲಾಭಿವೃದ್ಧಿ ಸಮಿತಿಯ ಸಹಕಾರದೊಂದಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಮಕ್ಕಳಿಗೆ ಪುಸ್ತಕ ವಿತರಿಸಿ ಮಾತನಾಡಿದ ಸೇವಾ ಭಾರತಿ ಟ್ರಸ್ಟ್‌ ನ ಸಂಯೋಜಕ ಡಾ‌.ಅಚ್ಯುತರಾವ್, ತಮ್ಮ ಸಂಸ್ಥೆಯ ವತಿಯಿಂದ ಕಳೆದ ಹಲವಾರು ವರ್ಷಗಳಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಸಾಧನೆಯ ಸಲಕರಣೆಗಳನ್ನು ನೀಡುತ್ತಾ ಅವರ ಕಲಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಮಕ್ಕಳಿಗೆ ನೋಟ್ ಪುಸ್ತಕಗಳು ಸೇರಿದಂತೆ ಲೇಖನ ಸಾಮಾಗ್ರಿಗಳು ಹಾಗೂ ಮಕ್ಕಳ ಕಲಿಕೆಗೆ ಬೇಕಾದ ಪೂರಕ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಿಕೊಂಡು ಬರಲಾಗುತ್ತಿದೆ ಎಂದರು. ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಗುರುಗಳು ಕಲಿಸುವ ಪಾಠ- ಪ್ರವಚನಗಳನ್ನು ಉತ್ತಮವಾಗಿ ಅಧ್ಯಯನ ಮಾಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ‌ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸೇವಾ ಭಾರತಿ ಟ್ರಸ್ಟ್ ಸರ್ಕಾರಿ ಶಾಲಾ ಮಕ್ಕಳಿಗೆ ನೆರವು ನೀಡುತ್ತಿರುವುದು ಶ್ಲಾಘನೀಯವಾದುದು…

Read More

ಸುಂಟಿಕೊಪ್ಪ ಜು.28 NEWS DESK : ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ವತಿಯಿಂದ ಕುಶಾಲನಗರದ ಜೀವ ಸ್ಕಿನ್ ಮತ್ತು ಹೇರ್ ಕ್ಲಿನಿಕ್ ಸಹಯೋಗದಲ್ಲಿ ಸುಂಟಿಕೊಪ್ಪದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂದಿರದಲ್ಲಿ ಉಚಿತ ಚರ್ಮರೋಗ ಮತ್ತು ಕೂದಲು ಚಿಕಿತ್ಸಾ ಶಿಬಿರ ನಡೆಯಿತು. ಶಿಬಿರದಲ್ಲಿ ಕುಶಾಲನಗರದ ವೈದ್ಯೆ ಡಾ. ಎಸ್.ಪಿ.ವರ್ಷ ಕರುಣ್, ಶಿಬಿರಾರ್ಥಿಗಳಿಗೆ ಚರ್ಮರೋಗ ಮತ್ತು ಕೂದಲು ಆರೋಗ್ಯಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು. ಸೋರಿಯಾಸಿಸ್, ಗಜಕರ್ಣ, ಅಲರ್ಜಿ, ಬಂಗು, ತೊನ್ನು, ಮುಖದ ಕಲೆ, ಉಗುರಿನ ಸಮಸ್ಯೆ, ಮೊಡವೆ ಚಿಕಿತ್ಸೆ, ಮಚ್ಚೆ, ಕೂದಲು ಉದುರುವಿಕೆ ಇತ್ಯಾದಿ ಚರ್ಮ ಹಾಗೂ ಕೂದಲಿಗೆ ಸಂಬಂಧಿಸಿದಂತೆ ವೈದ್ಯರು ತಪಾಸಣೆ ನಡೆಸಿದರು. ಶಿಬಿರದಲ್ಲಿ 78 ಮಂದಿ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಂಡರು. ಆರೋಗ್ಯ ತಪಾಸಣೆ ನಡೆಸಿ ಮಾತನಾಡಿದ ವೈದ್ಯರಾದ ಡಾ.ವರ್ಷ ಕರುಣ್, ಜನರು ತಮ್ಮ ಆರೋಗ್ಯ ರಕ್ಷಣೆ ಜೊತೆಗೆ ಚರ್ಮ ಮತ್ತು ಕೂದಲು ರಕ್ಷಣೆಗೆ ಗಮನಹರಿಸಬೇಕು ಎಂದರು. ಆರೋಗ್ಯಕರ ಚರ್ಮ, ಕೂದಲು ಮತ್ತು ಉಗುರುಗಳಿಗೆ ಉತ್ತಮ ಪೆÇ್ರೀಟಿನ್ ಯುಕ್ತ ಆಹಾರ…

Read More

ಕುಶಾಲನಗರ ಜು.28 NEWS DESK : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕುಶಾಲನಗರ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಹೆಚ್.ಜಿ.ಕುಮಾರ್, ಕಾರ್ಯದರ್ಶಿ ಎಸ್.ಎಂ.ಮಹೇಂದ್ರ ಅವರನ್ನು ತಾಲ್ಲೂಕು ಸಂಘದಿಂದ ಸನ್ಮಾನಿಸಲಾಯಿತು. ನೂತನವಾಗಿ ಪದಾಧಿಕಾರಿಗಳಾಗಿ ದಿನೇಶ್ ಗೌಡಳ್ಳಿ, ಹೂಬಟ್೯ ಡಯಾಸ್, ಸಿ.ಡಿ.ಲೋಕೇಶ್, ವಿಕ್ರಾಂತ್ ಕೇಳ್ಕರ್, ವಿಜಯ್ ಕುಮಾರ್, ಅರುಣ್ ಕುಮಾರ್‌ ಅವರನ್ನು ಆಯ್ಕೆಮಾಡಿಕೊಳ್ಳಲಾಯಿತು. ಅನುದಾನಿತ ಶಾಲಾ ಶಿಕ್ಷಕರು ಅನುಭವಿಸುತ್ತಿರುವ ವೇತನದ ಸಮಸ್ಯೆ, ಇನ್ಕ್ರಮೆಂಟ್, ಟೈಂ ಬಾಂಡ್,ಇನ್ನಿತರ ವಿಷಯಗಳ ಬಗೆ ಚರ್ಚಿಸಿ, ಕ್ಷೇತ್ರಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕರನ್ನು ಭೇಟಿ ಮಾಡಿ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ತಾಲ್ಲೂಕಿನ ಎಲ್ಲಾ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಸಹಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಪರಿಹಾರ ಮಾಡುವ ಬಗ್ಗೆ ಚರ್ಚಿಸಲಾಯಿತು. ತಾಲ್ಲೂಕಿನ ಪದಾಧಿಕಾರಿಗಳು ತಾಲ್ಲೂಕಿನ ಕಾರ್ಯಕಾರಿಣಿ‌ ಸಭೆಯನ್ನು ಶನಿವಾರಸಂತೆ, ಕುಶಾಲನಗರ ಹಾಗೂ ಸೋಮವಾರಪೇಟೆಯಲ್ಲಿ ನಡೆಸಲು ತೀರ್ಮಾನ ಮಾಡಲಾಯಿತು. ಜೂಮ್ ಮೀಟಿಂಗ್ ಮುಖಾಂತರ…

Read More

ನಾಪೋಕ್ಲು ಜು.28 NEWS DESK : ಹೋಬಳಿ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಬಿರುಸಿನ ಮಳೆಯಾಗಿದ್ದು ಭಾನುವಾರ ಕೊಂಚ ಕಡಿಮೆಯಾಗಿದೆ. ಗಾಳಿ ಮಳೆಯಿಂದ ಅಲ್ಲಲ್ಲಿ ವಾಸದ ಮನಗಳಿಗೆ ಹಾನಿ ಉಂಟಾಗಿದ್ದು, ಕೆಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ನಾಪೋಕ್ಲು, ಮೂರ್ನಾಡು ಸಂಪರ್ಕ ರಸ್ತೆಯ ಬೋಳಿಬಾಣೆ ಎಂಬಲ್ಲಿ ಕಾವೇರಿ ಪ್ರವಾಹ ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ಸಂಪರ್ಕ ಸ್ಥಗಿತಗೊಂಡಿದೆ, ಕೊಟ್ಟಮುಡಿ ಜಂಕ್ಷನ್ ಸಮೀಪ ಮೂರ್ನಾಡು ರಸ್ತೆಯಲ್ಲಿ ಕಾವೇರಿ ನದಿ ದಡದಲ್ಲಿರುವ  ಶೆಡ್ ಜಲಾವೃತವಾಗಿ ಮುಳುಗಡೆಯಾಗಿದೆ. ನಾಪೋಕ್ಲು, ಕಲ್ಲುಮೊಟ್ಟೆ ಸಂಪರ್ಕ ರಸ್ತೆಯಲ್ಲಿರುವ   ಚೆರಿಯಪರಂಬು ಎಂಬಲ್ಲಿ ರಸ್ತೆಯೂ ಕಾವೇರಿ ಪ್ರವಾಹದಿಂದ  ಜಲಾವೃತವಾಗಿ ಸಂಪರ್ಕ ಕಡಿತಗೊಂಡು  ಇಲ್ಲಿಯ ನಿವಾಸಿಗಳು  ಕೊಡವ ಸಮಾಜ ರಸ್ತೆಯನ್ನು ಅವಲಂಬಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.  ಕಕ್ಕಬೆ ಗ್ರಾಮ ಪಂಚಾಯಿತಿಯ ಕುಂಜಿಲ ಗ್ರಾಮದ ವೈಕೋಲ್ ನಿವಾಸಿ ಅಶ್ರಫ್ ಎಂಬವರ ವಾಸದ ಮನೆಯ ಸಮೀಪ ಬರೆ ಕುಸಿದು ಸಂಕಷ್ಟ ಎದುರಾಗಿದೆ. ಇದೇ ಕುಂಜಿಲ  ಗ್ರಾಮದ ನಿವಾಸಿ ಉಮ್ಮರ್ ಎಂಬವರ ಮನೆಯ ಒಂದು ಭಾಗದ ಗೋಡೆ ಮಳೆ ಗಾಳಿಯಿಂದಾಗಿ ರಾತ್ರಿ…

Read More