ಮಡಿಕೇರಿ ಆ.19 NEWS DESK : ಕಾಡಾನೆ ದಾಳಿಯಿಂದ ಮಹಿಳೆ ಪಾರಾದ ಘಟನೆ ಬಾಣವಾರ ಸಮೀಪದ ಭುವಂಗಾಲ ಗ್ರಾಮದಲ್ಲಿ ನಡೆದಿದೆ. ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಲು ಮುಂದಾಗಿದ್ದು, ಮಹಿಳೆ ಕಿರುಚುತ ಸಮೀಪದ ಮನೆಗೆ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭುವಂಗಾಲ ಗ್ರಾಮದಲ್ಲಿ ಕಳೆದ 15ದಿನಗಳಿಂದ ಬಾಣವಾರ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಬರುವ ಕಾಡಾನೆಗಳು ಸಿದ್ದಲಿಂಗಪುರ, ಬಾಣವಾರ, ಭುವಂಗಾಲ ವ್ಯಾಪ್ತಿಯ ಪೋಲಿಸ್ ಪೆದೆ ವಿವೇಕ್ ಸೇರಿದಂತೆ ರೈತರ ಜಮೀನಿಗೆ ದಾಳಿ ಮಾಡಿ ತೆಂಗು, ಸಿಹಿ ಗೆಣಸು, ಮರ ಗೆಣಸು ಸೇರಿದಂತೆ ಇತರೆ ಬೆಳೆಗಳನ್ನು ತಿಂದು ತುಳಿದು ಅಪಾರ ಪ್ರಮಾಣದಲ್ಲಿ ಬೆಳೆಗಳನ್ನು ನಷ್ಟ ಪಡಿಸಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಕಾಡಾನೆ ಹಗಲು ವೇಳೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಸಾರ್ವಜನಿಕರು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಕಾಡಾನೆಯನ್ನು ತಕ್ಷಣವೆ ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.
ಲೇಖಕ: admin
ಮಡಿಕೇರಿ ಆ.19 NEWS DESK : ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುಂಚಿತವಾಗಿ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮೊದಲು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸುವಂತೆ ನಗರಸಭೆ ಪೌರಾಯುಕ್ತರಾದ ಹೆಚ್.ಆರ್.ರಮೇಶ್ ಅವರು ಕೋರಿದ್ದಾರೆ. ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ಹಾಗೂ ಬಣ್ಣ ಲೇಪಿತವಲ್ಲದ ವಿಗ್ರಹಗಳನ್ನು ಬಳಸುವುದು. ಗಣಪತಿ ವಿಗ್ರಹಗಳ ವಿಸರ್ಜನೆಗೆ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಗೌರಿ ಕೆರೆಯನ್ನು ಗುರುತಿಸಿ, ಅವಶ್ಯ ವ್ಯವಸ್ಥೆಗಳನ್ನು ಮಾಡಿದ್ದು, ಈ ಸ್ಥಳದಲ್ಲೆ ವಿಗ್ರಹಗಳನ್ನು ಹೂವು ಹಣ್ಣುಗಳನ್ನು ಪ್ರತ್ಯೇಕಿಸಿ ವಿಸರ್ಜಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ವಿಗ್ರಹ ಪ್ರ್ರತಿಷ್ಠಾಪಿಸಿ ಪೂಜೆ ನಡೆಸಲು ಇಚ್ಚಿಸುವವರು…
ಮಡಿಕೇರಿ ಆ.19 NEWS DESK : ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಅರಿವು ಕಾರ್ಯಕ್ರಮವು ನೆರವೇರಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಮಾತನಾಡಿ, ಇಲಾಖೆಯ ಯೋಜನೆಗಳ ಬಗ್ಗೆ, ಬಾಲ್ಯ ವಿವಾಹದ ಕುರಿತು, ಸ್ತನ್ಯಪಾನ ಸಪ್ತಾಹ, ಪೋಷಣ್ ಟ್ರ್ಯಾಕರ್, ಪೋಷಣ್ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯವರೊಂದಿಗೆ ಸೇರಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಲಹೆ ಮಾರ್ಗದರ್ಶನ ನೀಡುವುದಲ್ಲದೆ, ಕಾಲಕಾಲಕ್ಕೆ ನೀಡಿದ ಸಲಹೆಗಳನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದರು. ಭಾಗ್ಯಲಕ್ಷ್ಮಿ ಮತ್ತು ಮಾತೃವಂದನ ಫಲಾನುಭವಿಗಳನ್ನು ಭೇಟಿ ಮಾಡಿ ಹಣ ಪಾವತಿ ಯಾಗಿರುವ ಬಗ್ಗೆ ಮಾಹಿತಿ ಪಡೆದರು. ಸಮುದಾಯ ಆರೋಗ್ಯ ಅಧಿಕಾರಿ ಕಲ್ಮೇಶ್ ಅವರು ಮಾತನಾಡಿ, ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. “ಹೊಸ ಹೆಜ್ಜೆ “ಕಾರ್ಯಕ್ರಮದಡಿ ವಿವಾಹಿತರು ತಾವು ಯಾವಾಗ ಪೋಷಕರಾಗಬೇಕು ಎಂಬುದನ್ನು ಅರಿತು ಮಾನಸಿಕವಾಗಿ ಸದೃಢರಾದಾಗ…
ಮೈಸೂರು ಆ.19 NEWS DESK : ದಶಕಗಳ ಕಾಲದಿಂದಲೂ ಕಾರ್ಯ ನಿರ್ವಹಿಸುತ್ತಿರುವ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ನಿಯಮಿತದ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಕಲ್ಪ ತೊಟ್ಟಿದ್ದಾರೆ. ಕೊಡಗು ಕಾಫಿ ಸಹಕಾರ ಸಂಘ ಈಗ ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಮಧ್ಯ ಪ್ರವೇಶಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಯದುವೀರ್ ಒಡೆಯರ್ ಮನವಿ ಮಾಡಿದ್ದಾರೆ. ಈ ಸಂಬಂಧ ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ ಸಂಸದ ಯದುವೀರ್, ಮನವಿ ಸಲ್ಲಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ. ಈ ಕುರಿತು ಸಂಸದರು ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ದಶಕಗಳ ಹಿಂದೆ ಸ್ಥಾಪನೆಯಾದ ಸಂಸ್ಥೆ 1956 ರಲ್ಲಿ ಸ್ಥಾಪನೆಯಾದ ಕಾಫಿ ಸಹಕಾರ ಸಂಘವು, ಕೊಡಗು, ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 10,000–12,000 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕಾಫಿ…
ಮಡಿಕೇರಿ ಆ.19 NEWS DESK : ಅಂಗನವಾಡಿ, ಶಾಲೆ ಹಾಗೂ ಕಾಲೇಜು ವ್ಯಾಪ್ತಿಯಲ್ಲಿ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ವಿಡಿಯೊ ಸಂವಾದ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ಇನ್ನೂ 10-12 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬಿರುಗಾಳಿ ಸಹ ಇರಲಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ನಿರ್ದೇಶನ ನೀಡಿದರು. ಹಳೆ ಮರಗಳನ್ನು ತೆರವುಗೊಳಿಸಲು ಜಿ.ಪಂ.ಸಿಇಒ ಅವರ ಮೂಲಕ ಅರಣ್ಯ ಇಲಾಖೆಗೆ ಪತ್ರ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಗುಂಡಿಮಯವಾಗಿದ್ದು, ಮಳೆ ಮುಗಿದ ನಂತರ ರಾಜ್ಯ, ಜಿಲ್ಲಾ ಹಾಗೂ ಗ್ರಾಮೀಣ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯವಾಗಬೇಕಿದೆ. ಆ ನಿಟ್ಟಿನಲ್ಲಿ ಎಂಜಿನಿಯರ್ಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ನಗರ, ಪಟ್ಟಣ ಪ್ರದೇಶದಲ್ಲಿಯೂ ರಸ್ತೆಗಳು…
ಕುಶಾಲನಗರ ಆ.19 NEWS DESK : ಮೊಬೈಲ್ ಫೋಟೋಗ್ರ್ರಾಫಿ ಪರಿಣಾಮ ವೃತ್ತಿ ಪರ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಗಳ ಜೀವನ ದುಸ್ತರವಾಗಿದ್ದು, ಭವಿಷ್ಯದ ದಿನಗಳ ಚಿಂತೆ ಇವರನ್ನು ಕಾಡುತ್ತಿದೆ ಎಂದು ಕೊಡಗು ಜಿಲ್ಲಾ ಛಾಯಾಗ್ರಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕುಶಾಲನಗರದ ಗೌಡ ಸಮಾಜದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಛಾಯಾಗ್ರಾಹಕರು ಒಂದೇ ನಾಣ್ಯದ ಎರಡು ಮುಖ ವೆಂದು ಬಣ್ಣಿಸಿದ ಅವರು, ಈ ಇಬ್ಬರ ಸಂಬಂಧ ಬಿಡಿಸಲಾಗದ ಅನುಬಂಧ ಎಂದು ಆವರು ಬಣ್ಣಿಸಿದರು. ತಮ್ಮ ಛಾಯಾಗ್ರಾಹಕ ವೃತ್ತಿ ಜೀವನದ ಅನುಭವವನ್ನು ವಿವರಿಸಿದ ಅವರು ನಮ್ಮ ಜೀವನದಲ್ಲಿ ಮಾನವೀಯತೆ ಗುಣಗಳನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಿಕೊಡಬೇಕೆಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ ಪತ್ರಕರ್ತರಷ್ಟೇ ಜವಾಬ್ದಾರಿ ಛಾಯಾಚಿತ್ರ ಗಾಹಕರಿಗಿದೆ.…
ಮಡಿಕೇರಿ ಆ.19 NEWS DESK : “ವಾಯ್ಸ್ ಆಫ್ ಕೊಡವ- (ವಿಒಕೆ)” ಮತ್ತು ಯುನೈಟೆಡ್ ಕೊಡವ ಆರ್ಗನೈಜೇಷನ್ (ಯುಕೊ) ಸಹಯೋಗದಲ್ಲಿ ” ನೆಪ್ಪುರ ನಳತ್ ಮಾಂಜತ ಮೊಟ್ಟ್” ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ದಕ್ಷಿಣ ಕೊಡಗಿನ ಪೊನ್ನಂಪೇಟೆ ಸಮೀಪದ ಕೇವ್ ಇನ್ ಸಭಾಂಗಣದಲ್ಲಿ ಆಯೋಜಿತ ಕಾರ್ಯಕ್ರಮವನ್ನು ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ ಹಾಗೂ ಸ್ವಾತಂತ್ರ್ಯ ಹೋರಾಟಗಾರ್ತಿ ಪಂದ್ಯಂಡ ಸೀತಮ್ಮ ಬೆಳ್ಯಪ್ಪ ಅವರ ಪುತ್ರಿ ಬುಟ್ಟಿಯಂಡ ಕುಸುಮ್ ಅಯ್ಯಪ್ಪ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ನಾಡಿನ ಹಿರಿಯರ ತ್ಯಾಗ ಬಲಿದಾನಗಳನ್ನು ನೆನಪಿಸುವ, ಇತಿಹಾಸದ ಮಹತ್ವವನ್ನು ಸಾರುವ ಅದ್ಭುತ ಕಾರ್ಯಕ್ರಮ ಇದಾಗಿದೆ. ‘ಇತಿಹಾಸವನ್ನು ಅರಿಯದವರು ಇತಿಹಾಸವನ್ನು ಸೃಷ್ಟಿಸಲಾರ’ ಈ ನಿಟ್ಟಿನಲ್ಲಿ ಇಂತಹಾ ಅರ್ಥಪೂರ್ಣ ಹಾಗೂ ಭಾವನಾತ್ಮಕ ಕಾರ್ಯಕ್ರಮ ಆಯೋಜಿಸಿದ ‘ಯುಕೊ’ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದರು, ಯುಕೊ ತನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಹೇಳಿದರು.ಅಖಿಲ…
ಮಡಿಕೇರಿ ಆ.19 NEWS DESK : ಕೊಡಗು ಜಿಲ್ಲೆಯ ಪ್ರಥಮ ‘ಕಾನೂನು ಕಾಲೇಜು’ ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಸೆಪ್ಟೆಂಬರ್ನಿಂದ ಆರಂಭಗೊಳ್ಳಲಿದ್ದು, ಈಗಾಗಲೆ ಪ್ರವೇಶಾತಿ ಪ್ರಕ್ರಿಯೆಗಳು ಆರಂಭಗೊಂಡಿದೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಮಂಡೇಪಂಡ ಸುಗುಣ ಮುತ್ತಣ್ಣ ಅವರು, ಎಜುಕೇಷನ್ ಸೊಸೈಟಿಯ ವತಿಯಿಂದ ಬೆಂಗಳೂರಿನ ಕೆವಿವಿ ಎಜುಕೇಷನಲ್ ಟ್ರಸ್ಟ್ ನ ಸಹಕಾರದೊಂದಿಗೆ ಮೂರು ವರ್ಷಗಳ ‘ಕಾನೂನು ಕಾಲೇಜು’ ಆರಂಭಗೊಳ್ಳಲಿದೆ. ಯಾವುದೇ ಪದವಿ ಪಡೆದ ವಿದ್ಯಾರ್ಥಿಗಳು ಕಾನೂನು ವ್ಯಾಸಂಗಕ್ಕೆ ದಾಖಲಾಗಲು ಅವಕಾಶವನ್ನು ಕಲ್ಪಿಸಲಾಗಿದೆಯೆಂದು ಸ್ಪಷ್ಟಪಡಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಜ್ಯ ಕಾನೂನು ಮಹಾ ವಿದ್ಯಾನಿಲಯದ ನಿರ್ದೇಶನ ಮತ್ತು ಷರತ್ತುಗಳಂತೆ ಪ್ರವೇಶಾತಿಗಳನ್ನು ನೀಡಲಾಗುತ್ತದೆ. ಹೀಗಿದ್ದೂ ಜಿಲ್ಲೆಯ ವಿದ್ಯಾರ್ಥಿಗಳಿಗೆ ಕಾನೂನು ವ್ಯಾಸಂಗಕ್ಕೆ ಆದ್ಯತೆಯನ್ನು ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿ, ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ‘ಕಾನೂನು ಕಾಲೇಜು’ ಆರಂಭಕ್ಕೆ ಪೂರಕವಾಗಿ ಪ್ರತ್ಯೇಕ ಬ್ಲಾಕ್ನ್ನೆ ವ್ಯವಸ್ಥೆ ಮಾಡಲಾಗಿದೆಯೆಂದು ಹೇಳಿದರು. ಎಜುಕೇಷನ್ ಸೊಸೈಟಿಯ ಗೌರವ ಕಾರ್ಯದರ್ಶಿ ಕುಲ್ಲಚಂಡ ಪಿ.ಬೋಪಣ್ಣ ಮಾತನಾಡಿ, ಪ್ರಥಮ ವರ್ಷದ ಕಾನೂನು…
ವಿರಾಜಪೇಟೆ ಆ.19 NEWS DESK : ತುಳುವೆರೆ ಜನಪದ ಕೂಟದ ತಾಲ್ಲೂಕು ಘಟಕದ ವತಿಯಿಂದ ಕೂಟದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಆ.24 ಪಟ್ಟಣದ ಪುರಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಕೂಟದ ತಾಲೂಕು ಅಧ್ಯಕ್ಷ ಶಬರೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿರಾಜಪೇಟೆಯ ಪುರಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಘಟನೆಯ ಪ್ರಮುಖರು ಭಾಗವಹಿಸಲಿದ್ದಾರೆ. ವಿರಾಜಪೇಟೆ ಭಾಗದ ತುಳುವೆರೆ ಜನಪದ ಕೂಟದ ಸದಸ್ಯರು ಹಾಗೂ ಭಾಷಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9483840707 ಅನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಮಡಿಕೇರಿ ಆ.19 NEWS DESK : ಮತಗಳ್ಳತನ ಪ್ರಕರಣದ ಕುರಿತು ಇತ್ತೀಚೆಗೆ ಕೇಳಿ ಬರುತ್ತಿರುವ ಆರೋಪವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸುವ ಮೂಲಕ ಸರ್ವೋಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ಆಯೋಗ ರಚಿಸಿ ತನಿಖೆಗೆ ಆದೇಶಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚಿನ ವರ್ಷಗಳಲ್ಲಿ ಮತಗಳ್ಳತನ ನಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ಚುನಾವಣಾ ಆಯೋಗವು ರಾಷ್ಟ್ರದ ಜನತೆಗೆ ನಿರಾಧಾರ ಎಂದು ನಿರೂಪಿಸುವ ಕ್ರಮಗಳನ್ನು ತೆಗೆದುಕೊಳ್ಳಬೇಕೆ ಹೊರತು ಅಸಂವಿಧಾನಿಕವಾಗಿ ಆರೋಪ, ಪ್ರತ್ಯಾರೋಪದಲ್ಲಿ ತೊಡಗುವುದು ಸರಿಯಲ್ಲವೆಂದು ತಿಳಿಸಿದ್ದಾರೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಚುನಾವಣೆಗಳು ನ್ಯಾಯ ಸಮ್ಮತವಾಗಿ ನಡೆಯುತ್ತಿವೆಯೇ ಎನ್ನುವ ಕುರಿತು ಸತ್ಯಾಂಶ ಬಹಿರಂಗಪಡಿಸಲು ಸರ್ವೋಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರುಗಳ ಆಯೋಗವನ್ನು ರಚಿಸಿ ಸಮಗ್ರ ತನಿಖೆ ನಡೆಸುವ ಅಗತ್ಯವಿದೆ. ಯುವ ಪೀಳಿಗೆ ರಾಷ್ಟ್ರದ ಸಂವಿಧಾನ ಮತ್ತು ಮತದಾನ ಪ್ರಕ್ರಿಯೆಗಳಲ್ಲಿ ನಂಬಿಕೆಯನ್ನು…






