ಮಡಿಕೇರಿ ಜೂ.25 NEWS DESK : ಕೊಡಗು ಪತ್ರಕತ೯ರ ಸಂಘ ವತಿಯಿಂದ ಜು.1 ರಂದು ಮಡಿಕೇರಿಯ ಪತ್ರಿಕಾಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ವಾಷಿ೯ಕ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನ ಟ್ರಸ್ಟ್ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ಪತ್ರಿಕಾ ದಿನಾಚರಣೆ ಸಮಾರಂಭವನ್ನು ಸಮಾಜಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಉದ್ಧಾಟಿಸಲಿದ್ದಾರೆ. ಕೊಡಗು ಜಿಲ್ಲಾ ವಾತಾ೯ ಮತ್ತು ಸಾವ೯ಜನಿಕ ಸಂಪಕ೯ ಇಲಾಖೆಯ ಸಹಾಯಕ ನಿದೇ೯ಶಕ ಚಿನ್ನಸ್ವಾಮಿ, ಹೊಸ ದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ, ಕೊಡಗು ಪತ್ರಕತ೯ರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ. ಮುರಳೀಧರ್, ಸಂಘದ ಕ್ಷೇಮಾಭಿವೖದ್ದಿ ಸಮಿತಿಯ ಅಧ್ಯಕ್ಷ ಜಿ.ವಿ. ರವಿಕುಮಾರ್ ಕಾಯ೯ಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಕಾಯ೯ಕ್ರಮದಲ್ಲಿ ಕೊಡಗು ಪತ್ರಕತ೯ರ ಸಂಘದ 2024 ನೇ ಸಾಲಿನ ವಾಷಿ೯ಕ ದತ್ತಿ ನಿಧಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ. ಅಂತೆಯೇ ಸಂಘದ ಸದಸ್ಯರಿಗೆ ಗುರುತಿನ…
ಲೇಖಕ: admin
ಕುಶಾಲನಗರ ಜೂ.25 NEWS DESK : ಕುಶಾಲನಗರ ರೋಟರಿ ನೂತನ ಅಧ್ಯಕ್ಷರಾಗಿ ಮನು ಪೆಮ್ಮಯ್ಯ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಹೆಚ್.ಪಿ.ಮಂಜುನಾಥ ನೇಮಕಗೊಂಡಿದ್ದಾರೆ. ಕುಶಾಲನಗರ ರೋಟರಿ 50ನೇ ವರ್ಷಕ್ಕೆ ಕಾಲಿಡುತ್ತಿದ್ದು, ಕುಶಾಲನಗರ ರೈತ ಭವನದಲ್ಲಿ ಇಂದು (ಜೂ.25) ರಂದು ನಡೆಯುವ ಸಮಾರಂಭದಲ್ಲಿ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಜಿಲ್ಲಾ ಮಾಜಿ ರಾಜ್ಯಪಾಲರಾದ ರಂಗನಾಥ ಭಟ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ನಾಪೋಕ್ಲು ಜೂ.25 NEWS DESK : ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಬಿರುಸುಗೊಂಡಿದ್ದು ನದಿ, ತೋಡುಗಳು ತುಂಬಿ ಹರಿಯುತ್ತಿವೆ. ಬಿರುಸಿನ ಮಳೆಯೊಂದಿಗೆ ಗಾಳಿಯೂ ಬೀಸಿ ಜನಜೀವನ ಅಸ್ತವ್ಯಸ್ತಗೊಂಡಿತು. ರಭಸದ ಗಾಳಿಯಿಂದ ಹಲವೆಡೆ ಮನೆ, ಶೆಡ್ಗಳಿಗೆ ಹಾನಿಯಾಗಿದೆ. ಮನೆಗೆ ಹಾಸಿದ್ದ ಶೀಟ್ಗಳು ಹಾರಿಹೋಗಿ ನಷ್ಟ ಸಂಭವಿಸಿದೆ. ಕರಡ ಗ್ರಾಮದ ಟಿ.ಡಿ.ಚಿಣ್ಣಪ್ಪ ಎಂಬವರ ವಾಸದ ಮನೆಯ ಪಕ್ಕದಲ್ಲಿದ್ದ ಶೌಚಾಲಯ ಕುಸಿದು ಬಿದ್ದು, ನಷ್ಟ ಸಂಭವಿಸಿದೆ. ಕೊಳಕೇರಿ ಗ್ರಾಮದ ತಟ್ಟಂಡ ವಿಮಲಾ ಅವರ ವಾಸದ ಮನೆಯ ಮೇಲ್ಛಾವಣಿ ಮಳೆಯಿಂದ ಹಾನಿಯಾಗಿದೆ. ಬಾವಲಿ ಗ್ರಾಮದ ಪಾಂಡಾಂಡ ಕುಟುಂಬಸ್ಥರ ಐನ್ ಮನೆಗೆ ಕುಸಿದು ಬಿದ್ದು ಪೂರ್ಣ ಹಾನಿಯಾಗಿರುತ್ತದೆ. ಐನ್ ಮನೆಯಲ್ಲಿ ಯಾರು ವಾಸ ಇಲ್ಲದೇ ಇದ್ದುದರಿಂದ ಸಮಸ್ಯೆ ಉಂಟಾಗಿಲ್ಲ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್ ಹಾಗೂ ಗ್ರಾಮಲೆಕ್ಕಿಗರು, ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದರು. ಎರಡು ದಿನಗಳಿಂದ ಬಿರುಸುಗೊಂಡ ಮಳೆಯಿಂದಾಗಿ ಕಾವೇರಿ ನದಿ, ತೊರೆಗಳು ತುಂಬಿ ಹರಿಯುತ್ತಿದೆ. ಇದರಿಂದಾಗಿ ಹೋಬಳಿ ವ್ಯಾಪ್ತಿಯಲ್ಲಿ ನದಿ ದಡದಲ್ಲಿರುವ ಗದ್ದೆ ತೋಟಗಳು ಮುಳುಗಡೆಯಾಗಿ…
ನಾಪೋಕ್ಲು ಜೂ.25 NEWS DESK : ಪೇರೂರು ಗ್ರಾಮದಲ್ಲಿ ನಿರಂತರ ಕಾಡಾನೆಗಳ ಹಾವಳಿಯಿಂದ ರೈತರು ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಂಧಲೆ ನಡೆಸಿದ್ದು, ಅಡಿಕೆ, ಕಾಫಿ, ಬಾಳೆ ಗಿಡಗಳನ್ನು ನಾಶಪಡಿಸಿವೆ. ಕಾಡಾನೆಗಳ ಹಾವಳಿಯಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬಲ್ಲಮ್ಮವಟ್ಟಿ ಗ್ರಾಮ ಪಂಚಾಯಿತಿಯ ಪೇರೂರು ಗ್ರಾಮದ ನಿವಾಸಿ ಮಣವಟ್ಟೀರ ದಯ ಚಿಣ್ಣಪ್ಪ ಅವರ ತೋಟಗಳಲ್ಲಿ ದಾಳಿ ನಡೆಸಿರುವ ಕಾಡಾನೆಗಳ ಹಿಂಡು ಅಡಿಕೆ, ಕಾಫಿ, ಬಾಳೆ ಗಿಡಗಳನ್ನು ಧ್ವಂಸಗೊಳಿಸಿವೆ. ಅಲ್ಲದೆ ಕೃಷಿ ಪರಿಕರ ಮತ್ತು ಫಸಲುಗಳಿಗೆ ಹಾನಿ ಉಂಟು ಮಾಡಿದೆ. ಪಂದೇಟು ಕಾಲೋನಿ ಸೇರಿದಂತೆ ಗ್ರಾಮದ ಹಲವೆಡೆ ನಾಲ್ಕಾರು ಕಾಡಾನೆಗಳು ಅಡ್ಡಾಡುತ್ತಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ಆತಂಕ ಎದುರಾಗಿದೆ. ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸದಸ್ಯ ಮಚ್ಚುರ ರವೀಂದ್ರ ಸೇರಿದಂತೆ ಇನ್ನಿತರ ತೋಟದಲ್ಲೂ ಕೃಷಿ ಗಿಡಗಳನ್ನು ಕಾಡಾನೆಗಳು ಹಾಳುಗೆಡವಿದೆ. ಗ್ರಾಮದಲ್ಲಿ ಕಾಡಾನೆಗಳ ಉಪಟಳವನ್ನು ತಡೆಗಟ್ಟಲು ಇಲಾಖೆ ಮುಂದಾಗಬೇಕು ಹಾಗೂ ಸೂಕ್ತ ನಷ್ಟ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ದುಗ್ಗಳ…
ಮಡಿಕೇರಿ ಜೂ.24 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್)ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಮುಕ್ತ ವಿವಿ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಜೂನ್, 30 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಮಡಿಕೇರಿ ಜೂ.24 NEWS DESK : ಅನುಸೂಚಿತ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ನಿಯಮ ರೀತಿಯ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಚ್.ಎಸ್.ಮುತ್ತಪ್ಪ ಅವರು ಹೊದ್ದೂರು, ಹೊದವಾಡ ಸೇರಿದಂತೆ ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಶಿಷ್ಟರು ವಾಸ ಮಾಡುತ್ತಿದ್ದು, ಇವರಿಗೆ ಶಾಶ್ವತ ನೆಲೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದರ ಜೊತೆಗೆ ಮನೆ ನಿರ್ಮಿಸಿಕೊಡುವಂತಾಗಬೇಕು ಎಂದು ಮುತ್ತಪ್ಪ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೊದ್ದೂರು-ಹೊದವಾಡ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಮಾಹಿತಿ ನೀಡಿದರು. ಹೆಚ್.ಎಸ್.ಮುತ್ತಪ್ಪ…
ಮಡಿಕೇರಿ ಜೂ.24 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ 31 ದಿನಗಳ ಉಚಿತ ತರಬೇತಿಯು ಜುಲೈ 26 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.ಸಂ. 9740982585, 9241482541, 9113880324…
ಮಡಿಕೇರಿ ಜೂ.24 NEWS DESK : ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಇಂಗಾ ಹೆಲ್ತ್ ಪೌಂಡೇಶನ್, ಬೆಂಗಳೂರು ಇವರ ವತಿಯಿಂದ ಜೂನ್, 28 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್ ಮತ್ತು ಕ್ರೇನಿಯೋಫೇಶಿಯಲ್ ವಿರೂಪ ಗಳ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 18 ವರ್ಷದ ಒಳಗಿನ ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್ ಮತ್ತು ಕ್ರೇನಿಯೊಫೇಶಿಯಲ್ ವಿರೂಪ ಇರುವ ಮಕ್ಕಳನ್ನು ಪರೀಕ್ಷಿಸಿ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.
ನವದೆಹಲಿ ಜೂ.24 NEWS DESK : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಜೇವರ್ಗಿ ಶಾಸಕರು ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಬಾಲ ಭವನ ಸೊಸೈಟಿ ಅಧ್ಯಕ್ಷ ಬಿ.ಆರ್.ನಾಯ್ಡು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ನವದೆಹಲಿ ಜೂ.24 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಅನುಮೋದನೆಗೆ ಬಾಕಿ ಇರುವ ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಮೈಸೂರು ಪೇಟ ಹಾಗೂ ಶ್ರೀಗಂಧದ ಸ್ಮರಣಿಕೆ ನೀಡಿ ಗೌರವಿಸಿದರು. ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿರಜನೀಶ್ ಉಪಸ್ಥಿತರಿದ್ದರು.






